
ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಭದ್ರಾವತಿ ಗ್ರಾಮಾಂತರ ಮತ್ತು ನಗರ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಭದ್ರಾವತಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಗ್ರಾಮಾಂತರ ಮತ್ತು ನಗರ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ರಾಜ್ಯ ಕಾರ್ಯದರ್ಶಿ ಸುರೇಖಾ ಪಾಲಾಕ್ಷಪ್ಪ, ಜಿಲ್ಲಾ ಉಪಾಧ್ಯಕ್ಷೆ ಅಶ್ವಿನಿ ಗೌಡ, ತಾಲೂಕು ನಗರ ಅಧ್ಯಕ್ಷೆ ರೂಪ ನಾಗರಾಜ್, ಗ್ರಾಮಾಂತರ ಅಧ್ಯಕ್ಷೆ ಶಕುಂತಲಾ ಪ್ರದೀಪ್ ಅರಳಿಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಡ್ರೈವರ್, ಕ್ಲೀನರ್, ಹೆಲ್ಪರ್, ಮೆಕ್ಯಾನಿಕ್, ಬ್ಯೂಟಿಷಿಯನ್, ಪೈಂಟರ್, ಹಮಾಲಿ, ಹೋಟೆಲ್ ಕೂಲಿ ಕಾರ್ಮಿಕರುಗಳು, ದಿನಗೂಲಿ ಕಾರ್ಮಿಕರು ಸೇರಿದಂತೆ ಎಲ್ಲಾ ತರಹದ ಅಸಂಘಟಿತ ಕಾರ್ಮಿಕರಿಗೆ ಇಲಾಖೆಯಿಂದ ಲಭ್ಯವಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು
ತಾಲೂಕು ಗ್ರಾಮಾಂತರ ಸಮಿತಿ ನೂತನ ಪದಾಧಿಕಾರಿಗಳು :
ಅಧ್ಯಕ್ಷೆ ಶಕುಂತಲಾ ಪ್ರದೀಪ್ ಅರಳಿಹಳ್ಳಿ, ಪ್ರಧಾನ ಕಾರ್ಯದರ್ಶಿ ಶಶಿಕಲಾ ಕುಮಾರ್, ಉಪಾಧ್ಯಕ್ಷರು ಟಿ. ಶಿವಮೂರ್ತಿ ತಳ್ಳಿಕಟ್ಟೆ. ಸೈಯದ್ ಜಬಿವುಲ್ಲಾ ಗೌಡರಹಳ್ಳಿ. ಸರಸ್ವತಿ ವಿಜಯಕುಮಾರ್ ಗುಡ್ಡದನೇರಳೆಕೆರೆ. ಚನ್ನಪ್ಪ ನಾಗತಿಬೆಳಗಲು, ಕಾರ್ಯದರ್ಶಿ ಜಯಶೀಲ ಅತ್ತಿಗುಂದ, ಧನಿಕ್ ಕುಮಾರ್ ತಳ್ಳಿಕಟ್ಟೆ, ಪಾರ್ವತಿ ಸೀಗೆಬಾಗಿ, ಪದ್ಮಪ್ರಿಯ ಸೀತಾರಾಮಪುರ, ಅಫ್ರೋಜ್ ಗುಡ್ಡದನೇರಳೆಕೆರೆ. ಸಂಘಟನಾ ಕಾರ್ಯದರ್ಶಿ ನೇತ್ರಾವತಿ ಎಡೇಹಳ್ಳಿ.