ಮಕ್ಕಳಿಗೆ ವಿದ್ಯೆ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಿ : ಬಿ.ಕೆ ಸಂಗಮೇಶ್ವರ್
ಭದ್ರಾವತಿ ಹೊಸ ಸೇತುವೆ ರಸ್ತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಾಲಾ ವಾರ್ಷಿಕೋತ್ಸವ ವಿಇಎಸ್ ಸಾಂಸ್ಕೃತಿಕ ಸಂಭ್ರಮ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. ಭದ್ರಾವತಿ: ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ತಡೆಯಲು ಅವರನ್ನು ವಿದ್ಯೆ ಜೊತೆಗೆ ಕ್ರೀಡೆ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ಅವರು ಶನಿವಾರ ಹೊಸ ಸೇತುವೆ ರಸ್ತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಾಲಾ ವಾರ್ಷಿಕೋತ್ಸವ ವಿಇಎಸ್ ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಕ್ಕಳಿಗೆ ವಿದ್ಯೆ ಮತ್ತು ಜ್ಞಾನ ಅತ್ಯಂತ ಅವಶ್ಯಕವಾಗಿದೆ. ಮಕ್ಕಳು ಈ ಮೂಲಕ ತಮ್ಮ ಮುಂದಿನ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಪ್ರಪಂಚದಲ್ಲಿ ಎಲ್ಲಿ ಬೇಕಾದರೂ ಸ್ವತಂತ್ರ್ಯವಾಗಿ ಬದುಕಬಹುದು. ಈ ಹಿನ್ನಲೆಯಲ್ಲಿ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದರು. ದೇಶದ ಇತರೆ ಯಾವ ರಾಜ್ಯದಲ್ಲೂ ಸಹ ಸರ್ಕಾರಿ ನೌಕರರು...