ಜೂ.೨೬ರಂದು ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ, ಪ್ರಶಸ್ತಿ ಪ್ರದಾನ ಸಮಾರಂಭ
ಭದ್ರಾವತಿ : ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಜೂ.೨೬ರ ಶುಕ್ರವಾರ ಬೆಳಿಗ್ಗೆ ೧೦.೩೦ಕ್ಕೆ ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ ಕಾರ್ಯಕ್ರಮ, ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ೨೦೨೪ ಹಾಗು ೨೦೨೫ನೇ ಸಾಲಿನ ಕನ್ನಡ ಕುವರ-ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ ೧೦.೩೦ರಿಂದ ವಿಷ್ಣು ಸಂಗೀತ ನೃತ್ಯ ಸಂಭ್ರಮ ನಡೆಯಲಿದ್ದು, ಗಾಯಕರಾದ ನಗರದ ಆರ್. ಹರೀಶ್, ಧನ್ಪಾಲ್ ಸಿಂಗ್ ರಜಪೂತ್, ಸಂಗೀತ, ಅಪೇಕ್ಷ ಮಂಜುನಾಥ್, ಪುಷ್ಪಲತಾ ಹರೀಶ್, ಶಿವಮೊಗ್ಗ ಪರಶುರಾಮ ಮತ್ತು ನೀಲಪ್ಪ ಹಾಗು ಎನ್.ಆರ್ ಪುರ ವಿಶ್ರೇಯ ಜೆ. ಆಜಾರ್ಯ ಅವರಿಂದ ಸಂಗೀತ ಗಾಯನ ನಡೆಯಲಿದೆ. ಶಿವಮೊಗ್ಗ ಅಭಿನವ ನೃತ್ಯ ತಂಡದಿಂದ ನೃತ್ಯ ಹಾಗು ಜ್ಯೂನಿಯರ್ ವಿಷ್ಣುವರ್ಧನ್ ಅವರಿಂದ ಅಭಿನಯ ಮತ್ತು ಬೇಲೂರು ವಸಂತಕುಮಾರ್ ಜಾದುಗಾರ್ ಅವರಿಂದ ಜಾದು ಪ್ರದರ್ಶನ ನಡೆಯಲಿದೆ. ಸಂಜೆ ೪ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಅಪೇಕ್ಷ ನೃತ್ಯ ಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆವಹಿಸಲಿದ್ದಾರೆ. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಡಾ. ...