ಫೆ.೧೯ರಂದು ಪತ್ರಿಕಾ ದಿನಾಚರಣೆ, ಬೃಹತ್ ರಕ್ತದಾನ ಶಿಬಿರ ಯಶಸ್ವಿಗೊಳಿಸಿ : ಗಂಗಾನಾಯ್ಕ ಗೊಂದಿ
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಗುರುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಹಾಗು ಬೃಹತ್ ರಕ್ತದಾನ ಕುರಿತು ಮಾಹಿತಿ ನೀಡಲಾಯಿತು. ಭದ್ರಾವತಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.೧೯ರ ಭಾನುವಾರ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷ ಗಂಗಾನಾಯ್ಕ ಗೊಂದಿರವರು ಮನವಿ ಮಾಡಿದರು. ಅವರು ಗುರುವಾರ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಪತ್ರಿಕಾ ದಿನಾಚರಣೆ ವಿಶೇಷವಾಗಿ ಆಚರಿಸಲಾಗುತ್ತಿದೆ. ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳು ಬೃಹತ್ ರಕ್ತದಾನ ಶಿಬಿರಕ್ಕೆ ಹೆಚ್ಚಿನ ಸಹಕಾರ ನೀಡುತ್ತಿವೆ. ಶಿಬಿರ ಯಶಸ್ವಿಗೆ ವಿವಿಧ ಸಮಿತಿಗಳು ಹೆಚ್ಚಿನ ಶ್ರಮವಹಿಸಿವೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡುವ ಮೂಲಕ ಶಿಬಿರ ಯಶಸ್ವಿಗೊಳಿಸಬೇಕೆಂದರು. ನ್ಯೂಟೌನ್ ಲಯನ್ಸ್ ಕ್ಲಬ್ನಲ್ಲಿ ಬೆಳಿಗ್ಗೆ ೮.೩೦ರಿಂದ ಶಿಬಿರ ಆರಂಭವಾಗಲಿದ್ದು, ವಿವಿಧ ಧರ್ಮ ಗುರುಗಳು ರಕ್ತದಾನ ನೆರವೇರಿಸುವ ಮೂಲಕ ಶಿಬಿರಕ್ಕೆ...