ಏ.30ರಂದು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ ಉದ್ಘಾಟನೆ
ಶ್ರೀ ಮಹಾವಿಷ್ಣು ಮೃತ್ಯುಂಜಯ, ಅಭಯಹಸ್ತ ಶ್ರೀ ವೀರಾಂಜನೇಯಸ್ವಾಮಿ ಮೂರ್ತಿಗಳ ಪ್ರತಿಷ್ಠಾಪನೆ ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ ವಾರ್ಡ್ ನಂ. 10ರ ವಿಜಯನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ. ಭದ್ರಾವತಿ: ನಗರಸಭೆ ವ್ಯಾಪ್ತಿಯ ಹೊಸಮನೆ ವಾರ್ಡ್ ನಂ. 10ರ ವಿಜಯನಗರದಲ್ಲಿ ನೂತನವಾಗಿ ತಾಲೂಕು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ ನಿರ್ಮಾಣಗೊಂಡಿದ್ದು, ಏ.30ರ ಗುರುವಾರ ದೇವಸ್ಥಾನ ಲೋಕಾರ್ಪಣೆಗೊಳ್ಳಲಿದೆ. ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ದೇವಸ್ಥಾನದ ಪ್ರಧಾನ ಅರ್ಚಕ ಎನ್. ಗೋವಿಂದರಾಜುರವರ ಕುಟುಂಬಸ್ಥರು ಈ ದೇವಸ್ಥಾನ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ವಿಐಎಸ್ಎಲ್ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಗೋವಿಂದರಾಜುರವರು ತಮಗೆ ಸೇರಿರುವ ಸ್ವಂತ ಜಾಗದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಸ್ವಲ್ಪ ಜಾಗವನ್ನು ದಾನವಾಗಿ ನೀಡಿದ್ದಾರೆ. ಅಲ್ಲದೆ ತಮ್ಮ ನಿವೃತ್ತಿ ಹಣದಲ್ಲಿ ಬಹುತೇಕ ಪಾಲು ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಸಮರ್ಪಿಸಿದ್ದಾರೆ. ಈ ನಡುವೆಯೂ ಆರ್ಥಿಕ ಸಂಕಷ್ಟ ಎದುರಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳು, ದಾನಿಗಳು ಹಾಗು ಭಕ್ತರಿಂದ ಹಣ ಸಂಗ್ರಹಿಸಿ ಇದೀಗ ಪೂರ್ಣಗೊಳಿಸಿದ್ದಾರೆ. ಗೋವಿಂದರಾಜುರವರ ತಂದೆ ದಿವಂಗತ ನರಸಿಂಹಯ್ಯರವರು ದೇವಸ್ಥಾನ ನಿರ್ಮಾಣಕ್ಕೆ ಮು...