ಬಿಜೆಪಿ ಓಬಿಸಿ ಮೋರ್ಚಾ ಪದಗ್ರಹಣ, ಕಾರ್ಯಕಾರಿಣಿ ಸಭೆ : ಪಕ್ಷ ಬಲವರ್ಧನೆಗೆ ಶ್ರಮಿಸಿ
ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಮನವಿ ಭದ್ರಾವತಿಯಲ್ಲಿ ನಗರ ಹಾಗೂ ಗ್ರಾಮಾಂತರ ಬಿಜೆಪಿ ಮಂಡಲಗಳ ಓಬಿಸಿ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕಾರಿಣಿ ಸಭೆ ಶುಕ್ರವಾರ ನಡೆಯಿತು. ಭದ್ರಾವತಿ: ನಗರ ಮತ್ತು ಗ್ರಾಮಾಂತರ ಓಬಿಸಿ ಮೋರ್ಚಾಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಮನವಿ ಮಾಡಿದರು. ಅವರು ಶುಕ್ರವಾರ ನಗರ ಹಾಗೂ ಗ್ರಾಮಾಂತರ ಮಂಡಲಗಳ ಓಬಿಸಿ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಪಕ್ಷ ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿದ್ದು, ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ವಿಶೇಷವಾಗಿ ದಲಿತ ಹಾಗು ಹಿಂದುಳಿದ ವರ್ಗಗಳಿಗಾಗಿ ಜಾರಿಗೊಳಿಸಿದೆ. ಇವುಗಳ ಸದ್ಬಳಕೆ ಕುರಿತು ಜನರಿಗೆ ಅರಿವು ಮೂಡಿಸುವ ಜೊತೆಗೆ ಪಕ್ಷ ಸಂಘಟನೆಗೆ ಕೈಜೋಡಿಸಬೇಕೆಂದರು. ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿ, ಬಿಜೆಪಿ ಪಕ್ಷ "ಸರ್ವವ್ಯಾಪಿ-ಸರ್ವಸ್ಪರ್ಶಿ" ತತ್ವದಡಿ ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಯನ್ನು ಬಲಪಡಿಸುತ್ತಿದೆ. ಜಿಲ್ಲೆಯಿಂದ ದೊರೆಯುವ ಮ...