ಜಾನಪದ ಕಲೆಗಳನ್ನು ಮೈಗೊಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಿ : ಡಿ. ಮಂಜುನಾಥ್
ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ಭದ್ರಾವತಿ ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಉದ್ಯಮಿ ಬಿ.ಕೆ ಜಗನ್ನಾಥ್, ಡಿ. ಮಂಜುನಾಥ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. ಭದ್ರಾವತಿ: ಜಾನಪದ ಕಲೆಗಳನ್ನು ಮೈಗೂಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಕಲೆ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಾನಪದ ಪರಿಷತ್ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಶನಿವಾರ ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಾನಪದ ಕಲೆಗಳು ತಮ್ಮದೇ ಆದ ವಿಶಿಷ್ಟತೆಯನ್ನು ಹೊಂದಿವೆ. ಪ್ರತಿಯೊಂದು ಕಲೆಗೂ ಅದರದೇ ಆದ ಮಹತ್ವವಿದೆ. ಇವುಗಳ ಕುರಿತು ಪ್ರತಿಯೊಬ್ಬರು ಸಮಗ್ರವಾಗಿ ಅಧ್ಯಯನ ನಡೆಸಿ ತಿಳಿದುಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆಗಳ ಸಮಗ್ರ ಮಾಹಿತಿಯನ್ನು ಕರ್ನಾಟಕ ಜಾನಪದ ಪರಿಷತ್ ಸಂಗ್ರಹಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಜಿಲ್ಲಾ ಮತ್ತು ತಾಲೂಕು ಶ...