ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ
ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭದ್ರಾವತಿ : ನಗರದ ಚನ್ನಗಿರಿ ರಸ್ತೆಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ಉಪಾಧ್ಯಕ್ಷರಾಗಿ ಎಸ್. ಕೃಷ್ಣಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಅಧ್ಯಕ್ಷ ಬಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೃಷ್ಣಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೃಷ್ಣಪ್ಪ ಬ್ಯಾಂಕಿನ ಹಿರಿಯ ನಿರ್ದೇಶಕರಾಗಿದ್ದು, ಈ ಹಿಂದಿನ ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಸುಮಾರು ೧ ವರ್ಷದ ಹಿಂದೆ ನಿರ್ದೇಶಕಿ ಮೀರಾಬಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಅಧಿಕಾರ ಹಂಚಿಕೆ ಸೂತ್ರ ಅನ್ವಯಿಸಿಕೊಂಡು ನಿರ್ದೇಶಕರ ಮಂಡಳಿ ಆಡಳಿತ ಮುನ್ನಡೆಸಿಕೊಂಡು ಹೋಗುತ್ತಿದೆ. ನೂತನ ಉಪಾಧ್ಯಕ್ಷ ಎಸ್. ಕೃಷ್ಣಪ್ಪರಿಗೆ ಬ್ಯಾಂಕಿನ ಅಧ್ಯಕ್ಷ ಬಿ.ಕೆ ಶಿವಕುಮಾರ್, ನಿರ್ದೇಶಕರಾದ ಎಸ್. ವಿರುಪಾಕ್ಷಪ್ಪ, ಜಿ.ಎಂ ಚನ್ನಬಸಪ್ಪ, ಬಿ. ನಾಗೇಶ್, ಎಚ್.ಎಲ್ ಏಕಾಂತ, ಕೆ. ಶ್ರೀನಿವಾಸ್, ಎನ್.ಟಿ ಸಂಗನಾಥ, ಟಿ.ಎಸ್ ಮೌನೇಶ್ವರ, ಕೆ. ...