Posts

ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ವಿಶ್ವ ಪರಿಸರ ದಿನ 

Image
ಭದ್ರಾವತಿ ನಗರದ ಯುನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕದಿಂದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.       ಭದ್ರಾವತಿ: ನಗರದ ಯುನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕದಿಂದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.      ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಜಾತಿಯ ಸುಮಾರು ೫೦ ಸಸಿಗಳು ಹಾಗು ತೆಂಗಿನ ಸಸಿಗಳನ್ನು ನೆಡಲಾಯಿತು. ಮಹಿಳಾ ಘಟಕದ ಅಧ್ಯಕ್ಷೆ ಜೆಸ್ಸಿ ಗೊನ್ಸಾಲ್ವಿಸ್ ಅಧ್ಯಕ್ಷತೆವಹಿಸಿದ್ದರು.      ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ, ಯುವ ಮುಖಂಡ ಬಿ.ಎಸ್ ಗಣೇಶ್, ಮಹಿಳಾ ಘಟಕದ ಗೌರವಾಧ್ಯಕ್ಷೆ ಎಲ್ಸಿ ಡಿಸೋಜ, ಧರ್ಮಗುರುಗಳಾದ ಫಾದರ್ ಕ್ರಿಸ್ತರಾಜ, ರೆವರೆಂಡ್ ಪಾಸ್ಟರ್ ಗಿಡಿಯೋನ್ ಹಾಗು ಮಹಿಳಾ ಘಟಕದ ಪದಾಧಿಕಾರಿಗಳು, ಕ್ರೈಸ್ತ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು. 

ಉಚಿತ ಕಣ್ಣಿನ ತಪಾಸಣೆ ಶಿಬಿರ ಯಶಸ್ವಿ 

Image
ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ನೇತೃತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಭದ್ರಾವತಿ ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ಸಮುದಾಯ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.       ಭದ್ರಾವತಿ: ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ನೇತೃತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.      ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಆಶೀರ್ವಾದ ಆಸ್ಪತ್ರೆ ಸರ್ಜನ್ ಅರುಣ್ ಮಾತನಾಡಿ, ಕಣ್ಣಿನ ಸುರಕ್ಷತೆ ಹಾಗು ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.       ಸ್ವ ಸಹಾಯ ಸಂಘದ ಸದಸ್ಯರು ಹಾಗು ಸಮುದಾಯದ ೮೨  ಸದಸ್ಯರು ಉಚಿತ ಕಣ್ಣಿನ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಂಡರು. ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿಯಿಂದ ಹಲವಾರು ಸೇವಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರಿಂದ ಹೆಚ್ಚಿನ ಸಹಕಾರ ಲಭಿಸುತ್ತಿದ್ದು, ಅಲ್ಲದೆ ಸೇವಾ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. 

ಬಿಜೆಪಿ ಎಸ್‌ಐಆರ್ ಬಳಸಿ ಕುತಂತ್ರದ ಮೂಲಕ ಚುನಾವಣೆ ಗೆಲುವು 

Image
ನಗರಸಭೆ ಹಿರಿಯ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ ಮೋಹನ್ ಆರೋಪ  ಭದ್ರಾವತಿಯಲ್ಲಿ ಶಾಸಕರ ಗೃಹ ಕಛೇರಿಯಲ್ಲಿ ಮಂಗಳವಾರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ ಮೋಹನ್ ಪಾಲ್ಗೊಂಡು ಮಾತನಾಡಿದರು.  - ಶಾಸಕರ ಗೃಹ ಕಛೇರಿಯಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಆಯೋಜನೆ.  - ಪಕ್ಷದ ನಗರ, ಗ್ರಾಮಾಂತರ ಘಟಕದ ಅಧ್ಯಕ್ಷರು ಉಪಸ್ಥಿತಿ. - ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲು ಕರೆ.       ಭದ್ರಾವತಿ: ಚುನಾವಣೆ ಬಂದಾಗ ಗೆಲ್ಲಲು ಭಾರತೀಯ ಜನತಾ ಪಕ್ಷ ಅನೇಕ ರೀತಿಯ ಕುತಂತ್ರಗಳನ್ನು ನಡೆಸುತ್ತದೆ. ಈ ಪೈಕಿ ಎಸ್‌ಐಆರ್ ಸಹ ಒಂದಾಗಿದ್ದು, ಮತದಾರರು ತಮ್ಮ ಹಕ್ಕನ್ನು ಕಸಿದುಕೊಳ್ಳದಂತೆ ಎಚ್ಚರವಹಿಸಬೇಕೆಂದು ನಗರಸಭೆ ಹಿರಿಯ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ ಮೋಹನ್ ಕರೆ ನೀಡಿದರು.      ಅವರು ಶಾಸಕರ ಗೃಹ ಕಛೇರಿಯಲ್ಲಿ ಮಂಗಳವಾರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.      ಭಾರತೀಯ ಜನತಾ ಪಕ್ಷ ಚುನಾವಣೆ ಗೆಲ್ಲಲು ಎಸ್‌ಐಆರ್ ಮೂಲಕ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಪಕ್ಷದ ಮತ ಬ್ಯಾಂಕ್ ಅಲ್ಲದ ಅಲ್ಪಸಂಖ್ಯಾತರು, ಬು...

ವಿದ್ಯುತ್ ಉಪ ಘಟಕ ಸ್ಥಾಪನೆ : ಸಚಿವರಿಗೆ ಕೃತಜ್ಞತೆ 

Image
ಆರ್. ವೇಣುಗೋಪಾಲ್      ಭದ್ರಾವತಿ : ತಾಲೂಕಿನ ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಸ್ಥರ ಬಹುವರ್ಷಗಳ ಬೇಡಿಕೆಯಾದ ಹುಣಸೇಕಟ್ಟೆ ಗ್ರಾಮದಲ್ಲಿ ೨*೨೦ ಎಂ.ವಿ.ಎ ೬೬/೧೧ ಕೆ.ವಿ  ವಿದ್ಯುತ್ ಉಪ ಘಟಕ (ಸಬ್‌ಸ್ಟೇಷನ್) ಸ್ಥಾಪಿಸಲು ಇಂಧನ ಇಲಾಖೆ ಮುಂದಾಗಿರುವುದಕ್ಕೆ ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಗ್ರಾಮಸ್ಥರ ಪರವಾಗಿ ಇಂಧನ ಹಾಗು ಪ್ರವಾಸೋದ್ಯಮ ಖಾತೆ ಸಚಿವ ಕೆ.ಜೆ ಜಾರ್ಜ್‌ರವರಿಗೆ ಕೃತಜ್ಞತೆ ಸಲ್ಲಿಸಿದೆ.       ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯೂರು, ಅರಳಿಕೊಪ್ಪ, ಕಂಬದಾಳ್ ಹೊಸೂರು, ತ್ಯಾವರಘಟ್ಟ, ಸಿಂಗನಮನೆ, ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಗ್ರಾಮಸ್ಥರಿಗೆ, ರೈತರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದ್ದು, ಅಲ್ಲದೆ ಕುಡಿಯುವ ನೀರಿನ ಸರಬರಾಜಿನಲ್ಲಿಯೂ ಸಮಸ್ಯೆ ಎದುರಾಗುತ್ತಿತ್ತು. ಈ ಹಿನ್ನಲೆಯಲ್ಲಿ ೨*೨೦ ಎಂ.ವಿ.ಎ ೬೬/೧೧ ಕೆ.ವಿ ವಿದ್ಯುತ್ ಉಪ ಘಟಕ (ಸಬ್‌ಸ್ಟೇಷನ್) ಸ್ಥಾಪಿಸುವಂತೆ ಸಚಿವರಿಗೆ ಟ್ರಸ್ಟ್‌ನಿಂದ ಮನವಿ ಸಲ್ಲಿಸಲಾಗಿತ್ತು. ಅಲ್ಲದೆ ಉಪ ಘಟಕ ಸ್ಥಾಪನೆಯಿಂದ ಸುಮಾರು ೩೦ ಸಾವಿರ ಜನರಿಗೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಲಾಗಿತ್ತು.      ಮನವಿಗೆ ಸ್ಪಂದಿಸಿದ ಸಚಿವರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯ...

ಲಿಯಾಕತ್-ನೆಹರು ಒಪ್ಪಂದ ದುಷ್ಪರಿಣಾಮ ಆರಂಭದಲ್ಲಿಯೇ ಕಂಡುಕೊಂಡಿದ್ದ ಶ್ಯಾಮಪ್ರಸಾದ್ ಮುಖರ್ಜಿ : ಜಿ. ಧರ್ಮಪ್ರಸಾದ್ 

Image
ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲದಿಂದ ದೇಶದ ಅಖಂಡತೆಗೆ ಶ್ರಮಿಸಿದ ನಾಯಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿದರು.       ಭದ್ರಾವತಿ: ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿಯವರು ಮಹಾನ್ ದಾರ್ಶನಿಕರು. ಲಿಯಾಕತ್-ನೆಹರು ಒಪ್ಪಂದದಿಂದ ಭವಿಷ್ಯದಲ್ಲಿ ಉಂಟಾಗುವ ದುಷ್ಪರಿಣಾಮ ಒಪ್ಪಂದದ ಸಂದರ್ಭದಲ್ಲಿಯೇ ಮುಖರ್ಜಿ ಕಂಡುಕೊಂಡಿದ್ದರು ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.       ಅವರು ಮಂಗಳವಾರ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲದಿಂದ ದೇಶದ ಅಖಂಡತೆಗೆ ಶ್ರಮಿಸಿದ ನಾಯಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.    ಪೂರ್ವ ಪಾಕಿಸ್ತಾನ ಇಂದಿನ ಬಾಂಗ್ಲಾದೇಶದಲ್ಲಿ ಇಂದಿಗೂ ಹಿಂದುಗಳ ನರಮೇಧ ನಡೆಯುತ್ತಿದೆ. ಆರ್ಟಿಕಲ್ ೩೭೦ ವಿಧಿ ಅಸಂವಿಧಾನಿಕ. ಒಂದು ದೇಶದಲ್ಲಿ ಎರಡು ಸಂವಿಧಾನ, ಎರಡು ಪ್ರಧಾನಿ, ಎರಡು ಚಿನ್ನೆ ನಡೆಯುವುದಿಲ್ಲ ಎಂಬುದನ್ನು ಪ್ರತಿಪಾದಿಸಿದ್ದರು. ಈ ನಿಟ್ಟಿನಲ್ಲಿಯೇ ತಮ್ಮ ಬದುಕಿನ ಕೊನೆಯವರೆಗೂ ಹೋರಾಟ ನಡೆಸಿ ತಮ್ಮ ಪ್ರಾಣ ಸಮರ್ಪಿಸಿ...

ಬೃಹತ್ ರಕ್ತದಾನ ಶಿಬಿರ ಪೂರ್ವಭಾವಿ ಸಭೆ 

Image
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಭದ್ರಾವತಿ ತಾಲೂಕು ಘಟಕದಿಂದ ಈ ಬಾರಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಸರ್ಕಾರದ ವಿವಿಧ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿ ಸಭೆ ಮಂಗಳವಾರ ಸಂಜೆ ಹಳೇನಗರದ ಪತ್ರಿಕಾ ಭವನದಲ್ಲಿ ನಡೆಯಿತು.        ಭದ್ರಾವತಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಈ ಬಾರಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಸರ್ಕಾರದ ವಿವಿಧ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿ ಸಭೆ ಮಂಗಳವಾರ ಸಂಜೆ ಹಳೇನಗರದ ಪತ್ರಿಕಾ ಭವನದಲ್ಲಿ ನಡೆಯಿತು.      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಸಭೆಯ ನೇತೃತ್ವ ವಹಿಸಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಬೃಹತ್ ರಕ್ತದಾನ ಶಿಬಿರ ಆಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದರು. ಅಲ್ಲದೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.

ಆರೋಗ್ಯ ಇಲಾಖೆ ಟಾಸ್ಕ್ ಪೋರ್ಸ್ ಕಮಿಟಿ ಸಭೆ 

Image
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಭದ್ರಾವತಿ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸೋಮವಾರ ಟಾಸ್ಕ್  ಫೋರ್ಸ್ ಕಮಿಟಿ ಸಭೆ ನಡೆಯಿತು.       ಭದ್ರಾವತಿ: ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸೋಮವಾರ ಟಾಸ್ಕ್  ಫೋರ್ಸ್ ಕಮಿಟಿ ಸಭೆ ನಡೆಯಿತು.      ತಹಸೀಲ್ದಾರ್ ಪ್ರದೀಪ್ ದೇವಗಿರಿ ಅಧ್ಯಕ್ಷತೆವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಜೂ.೨೮ರಿಂದ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಮಾಹಿತಿ ನೀಡಿ ಯಶಸ್ವಿಗೊಳಿಸಲು ಸಹಕಾರ ನೀಡುವಂತೆ ಕೋರಿದರು.  ಅಲ್ಲದೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಕುರಿತು ಇಲಾಖೆಯಿಂದ ನಡೆಸುತ್ತಿರುವ ಎಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಗೃಹ ಆರೋಗ್ಯ ಯೋಜನೆ, ನಾಯಿ ಕಡಿತ, ಹಾವು ಕಡಿತ, ಎಚ್‌ಪಿವಿ ಲಸಿಕೆ, ಶಾಲಾ ಆರೋಗ್ಯ ಕಾರ್ಯಕ್ರಮ ಮತ್ತು ತಪಾಸಣೆ ಸೇರಿದಂತೆ ಇನ್ನಿತರ  ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿದರು.      ಸಭೆಯಲ್ಲಿ ನಗರಸಭೆ, ತಾಲೂಕು ಪಂಚಾಯಿತಿ, ಐಸಿಡಿಎಸ್, ಬಿಇಓ, ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಶ್ರೀ ಅಕ್ಕಮಹಾದೇವಿ ಬಳಗದ ಅಧ್ಯಕ್ಷೆ ಸುವರ್ಣಮ್ಮ ಹಿರೇಮಠ್

Image
ಸುವರ್ಣಮ್ಮ ಹಿರೇಮಠ್       ಭದ್ರಾವತಿ: ಹಳೇನಗರದ ಶ್ರೀ ಅಕ್ಕಮಹಾದೇವಿ ಬಳಗದ ಅಧ್ಯಕ್ಷೆ ಸುವರ್ಣಮ್ಮ ಹಿರೇಮಠ್(೮೦) ಸೋಮವಾರ ಬೆಳಗಿನ ಜಾವ ಎನ್‌ಎಸ್‌ಟಿ ರಸ್ತೆಯ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು.      ಸುವರ್ಣಮ್ಮ ಹಿರೇಮಠ್‌ರವರ ಅಪೇಕ್ಷೆಯಂತೆ ಅವರ ಮೃತದೇಹವನ್ನು ಕುಟುಂಬಸ್ಥರು ಚಿತ್ರದುರ್ಗದ ಶ್ರೀ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದೇಹದಾನ ಮಾಡಿದರು.     ಅಕ್ಕಮಹಾದೇವಿ ಬಳಗದ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿರುವ ಇವರು ಅಕ್ಕಮಹಾದೇವಿ ಸಮುದಾಯ ಭವನ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲೂ ಸೇವೆ ಸಲ್ಲಿಸಿದ್ದರು.      ಸುವರ್ಣಮ್ಮ ಹಿರೇಮಠ್ ರವರ ನಿಧನಕ್ಕೆ ಅಕ್ಕಮಹಾದೇವಿಬಳಗದ ಸಂಚಾಲಕ ಟಿ.ಜಿ ಬಸವರಾಜಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಕೆ ಎಸ್ ವಿಜಯಕುಮಾರ್, ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರಮುಖರು ಮುಂತಾದವರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಜೂ.೨೩ರಂದು ವಿದ್ಯುತ್ ವ್ಯತ್ಯಯ 

Image
     ಭದ್ರಾವತಿ : ಮೆಸ್ಕಾಂ ಗ್ರಾಮೀಣ ಉಪವಿಭಾಗದ ಘಟಕ-೧ರ ಶಾಖಾ ವ್ಯಾಪ್ತಿಯಲ್ಲಿ ಮಾರ್ಗಗಳ ತುರ್ತು ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಜೂ.೨೩ರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.      ಅರಳಿಕೊಪ್ಪ, ರಬ್ಬರ್ ಕಾಡು, ಬಾಳೆಮಾರನಹಳ್ಳಿ, ಸುಲ್ತಾನ್‌ಮಟ್ಟಿ, ತಾರೀಕಟ್ಟೆ, ಹೊಳೆಗಂಗೂರು, ಚಿಕ್ಕಗೊಪ್ಪೇನಹಳ್ಳಿ, ಗೊಂದಿ, ಕಾಳನಕಟ್ಟೆ, ಹಿರಿಯೂರು, ಹೊನ್ನೆಗುಡ್ಡ ನೀರು ಸರಬರಾಜು ಕೇಂದ್ರ, ಕಂಬದಾಳ್ ಹೊಸೂರು, ಹೊನ್ನಟ್ಟಿ ಹೊಸೂರು ಕ್ಯಾಂಪ್, ಜಂಕ್ಷನ್ ನೀರು ಸರಬರಾಜು ಕೇಂದ್ರ ಸಿದ್ದರಹಳ್ಳಿ, ಹುಣಸೇಕಟ್ಟೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

ಭದ್ರಾವತಿ ವಿವಿಧೆಡೆ ಶಾಲಾ-ಕಾಲೇಜುಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ 

Image
ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನಕ ವಿದ್ಯಾಸಂಸ್ಥೆಯಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನ ಆವರಣದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಲಾಯಿತು.  - ವಿಇಎಸ್, ಅನನ್ಯ, ಕನಕ ವಿದ್ಯಾಸಂಸ್ಥೆ ಸೇರಿದಂತೆ ಶಾಲಾ-ಕಾಲೇಜುಗಳಲ್ಲಿ ಆಚರಣೆ. - ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳಿಗೆ ರಜೆ ಇದ್ದರೂ ಸಹ ಎಂದಿನಂತೆ ಯೋಗ ದಿನಾಚರಣೆಯಲ್ಲಿ ಹಾಜರು.  - ಯೋಗ ಕೇಂದ್ರಗಳ ಶಿಕ್ಷಕರಿಂದ ಯೋಗ ಕುರಿತು ಅರಿವು.       ಭದ್ರಾವತಿ: ನಗರದ ವಿವಿಧೆಡೆ ಶಾಲಾ-ಕಾಲೇಜು, ಸರ್ಕಾರಿ ಕಛೇರಿ, ಸಂಘ-ಸಂಸ್ಥೆಗಳಿಂದ ಭಾನುವಾರ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.      ಶಾಲಾ-ಕಾಲೇಜು, ಸರ್ಕಾರಿ ಕಛೇರಿಗಳಿಗೆ ರಜೆ ಇದ್ದರೂ ಸಹ ಎಂದಿನಂತೆ ಬೆಳಿಗ್ಗೆ ಹಾಜರಾಗಿ ವಿವಿಧ ಆಸನಗಳ ಪ್ರದರ್ಶನದ ಮೂಲಕ ಯೋಗ ದಿನ ಆಚರಿಸಲಾಯಿತು. ವಿವಿಧೆಡೆ ಯೋಗ ಕೇಂದ್ರಗಳ ಶಿಕ್ಷಕರು ಹಾಜರಾಗಿ ಯೋಗ ಕಲಿಕೆ ಮಹತ್ವ, ಪರಂಪರೆ ಹಾಗು ವಿವಿಧ ಆಸನಗಳ ಕುರಿತು ಮಾಹಿತಿ ನೀಡಿದರು.      ಶ್ರೀ ಕನಕ ವಿದ್ಯಾಸಂಸ್ಥೆ :      ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನಕ ವಿದ್ಯಾಸಂಸ್ಥೆಯಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನ ಆವರಣದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಲಾಯಿತು.      ಪ್ರೌಢ ಶಾಲಾ ವಿಭಾಗದ  ಮುಖ್ಯೋಪಾಧ್ಯಾಯ ಸಿ.ಡಿ ...

ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯ ಆತಂಕಕ್ಕೆ ಒಳಗಾಗದಿರಿ : ಶಾಸಕ ಸಂಗಮೇಶ್ವರ್ 

Image
ಬೆಂಗಳೂರಿನಲ್ಲಿ ಕಾರ್ಮಿಕ ಮುಖಂಡರೊಂದಿಗೆ ಆಯುಕ್ತರ ಜೊತೆ ಚರ್ಚಿಸಿ ಭರವಸೆ  ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಮಿಕ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಮೂಲಕ ಮನವಿ ಸಲ್ಲಿಸಿ ಎಲ್ಲಾ ಸೌಲಭ್ಯಗಳು ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ಲಭಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರಿರುತ್ತಾರೆ.   ಭದ್ರಾವತಿ:  ಇಎಸ್‌ಐ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸೆಗೆ ಸಾಮಾನ್ಯ ವೈದ್ಯರು ತಜ್ಞ ವೈದ್ಯರಿಗೆ ನೀಡುತ್ತಿದ್ದ ಉಲ್ಲೇಖಿತ ಪತ್ರ(ಓಪಿಡಿ) ಸೇರಿದಂತೆ ಎಲ್ಲಾ ಸೌಲಭ್ಯಗಳು ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ಲಭಿಸಲಿವೆ. ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಮಿಕರಿಗೆ ಮನವಿ ಮಾಡಿದರು.      ಸ್ಥಳೀಯ ಇಎಸ್‌ಐ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಗೆ ಉಲ್ಲೇಖಿತ ಪತ್ರ ಸೇರಿದಂತೆ ಇನ್ನಿತರ ಸೌಲಭ್ಯಗಳು ಸ್ಥಗಿತಗೊಳಿಸಿರುವ ಬಗ್ಗೆ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘಟನೆಗಳು ಹಾಗು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು.       ಮನವಿಗೆ ಸ್ಪಂದಿಸಿದ ಶಾಸಕರು ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಮೂಲಕ ಮನವಿ ಸಲ್ಲಿಸಿ ಎಲ್ಲಾ ಸೌಲಭ್ಯಗಳು...

ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಸಾಮಾಜಿವಾದಿ ನಾಯಕ ಮಂಗೋಟೆ ಮುರಿಗೆಪ್ಪ 

Image
೫೦ ಸಾವಿರ ರು. ದೇಣಿಗೆ ನೀಡಿ ಸ್ಮರಿಸಿದ ಪುತ್ರ, ನ್ಯಾಯವಾದಿ ಮಂಗೋಟೆ ರುದ್ರೇಶ್  ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ನ್ಯಾಯವಾದಿ ಮಂಗೋಟೆ ರುದ್ರೇಶ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅವರಿಗೆ ೫೦ ಸಾವಿರ ರು. ದೇಣಿಗೆ ಚೆಕ್ ಹಸ್ತಾಂತರಿಸಿದರು.        ಭದ್ರಾವತಿ: ಸಾಮಾಜವಾದಿ ನಾಯಕರು, ಹಿರಿಯ ಚಿಂತಕರು, ನ್ಯಾಯವಾದಿಗಳಾದ ದಿವಂಗತ ಮಂಗೋಟೆ ಮುರಿಗೆಪ್ಪನವರ ಆಶಯದಂತೆ ಪತ್ರಕರ್ತರ ಕ್ಷೇಮ ನಿಧಿಗೆ ೫೦ ಸಾವಿರ ರು. ದೇಣಿಗೆ ನೀಡುತ್ತಿದ್ದು, ಸದ್ಬಳಕೆಕೊಳ್ಳುವಂತೆ ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ನ್ಯಾಯವಾದಿ ಮಂಗೋಟೆ ರುದ್ರೇಶ್ ಮನವಿ ಮಾಡಿದರು.      ಅವರು ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅವರಿಗೆ ಚೆಕ್ ಹಸ್ತಾಂತರಿಸಿ ಮಾತನಾಡಿದರು.      ನಮ್ಮ ತಂದೆಯವರಾದ ಮಂಗೋಟೆ ಮುರಿಗೆಪ್ಪ ಅವರು ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು,  ಪತ್ರಕರ್ತರ ನೋವು-ನಲಿವುಗಳಿಗೆ ಸ್ಪಂದಿಸುತ್ತಿದ್ದರು. ಅವರ ನಿಧನದ ನಂತರ ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಟ್ರಸ್ಟ್ ಸ್...

ಪ್ರಧಾನಿ ನರೇಂದ್ರ ಮೋದಿಯಿಂದ ಪ್ರತಿ ದಿನ ಹೊಸ ಹೊಸ ದಾಖಲೆ

Image
ವಿಶ್ವದ ಗಮನ ಸೆಳೆಯುತ್ತಿರುವ ನಾಯಕ : ಡಿ.ಎಸ್ ಅರುಣ್ ಬಿಜೆಪಿ ನಗರ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ೧೨ ವರ್ಷಗಳ ಯಶಸ್ವಿ ಆಡಳಿತ ಪೂರೈಸಿದ ಹಿನ್ನೆಲೆ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪ್ರಬುದ್ಧರ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ : ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ದಿನ ಹೊಸ ಹೊಸ ದಾಖಲೆಗಳ ಮೂಲಕ ವಿಶ್ವದ ಗಮನ ಸೆಳೆಯುತ್ತಿದ್ದು, ದೇಶದ ೧೨ ವರ್ಷಗಳ ಸುಧೀರ್ಘ ಆಡಳಿತದಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಲ್ಲಿ ಕ್ರಾಂತಿಯನ್ನುಂಟುಮಾಡಿದ್ದಾರೆ. ಈ ಮೂಲಕ ದೇಶದ ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದು, ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆಂದು ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಪ್ರಶಂಸೆ ವ್ಯಕ್ತಪಡಿಸಿದರು.     ಅವರು ಬಿಜೆಪಿ ನಗರ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ೧೨ ವರ್ಷಗಳ ಯಶಸ್ವಿ ಆಡಳಿತ ಪೂರೈಸಿದ ಹಿನ್ನೆಲೆ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧರ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.     ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ, ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಮೂರು ಅವಧಿ ಪೂರ್ಣಗೊಳಿಸಿ, ಇದೀಗ ದೇಶದ ಪ್ರಧಾನಿಯಾಗಿ ೧೨ ವರ್ಷಗಳನ್ನು ಯಶಸ್ವಿಯಾಗಿ ಪೂರ...

ಜೂ.೨೦ರಂದು `ಪರಿಸರ ವ್ಯಸ್ತಿ-ಸಮಸ್ಟಿ' ವಿಶೇಷ ಕಾರ್ಯಕ್ರಮ 

Image
ಭದ್ರಾವತಿ : ಕನ್ನಡ ನಾಡು ನಡೆ-ನುಡಿ ಬಿಂಬಿಸುವ ನಗರದ ಭೂಮಿಕಾ ವೇದಿಕೆಯಿಂದ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘದ ಸಹಯೋಗದೊಂದಿಗೆ ಜೂ.೨೦ರ ಶನಿವಾರ ಸಂಜೆ ೬ ಗಂಟೆಗೆ `ಪರಿಸರ ವ್ಯಷ್ಟಿ-ಸಮಸ್ಟಿ' ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.      ಹಳೇನಗರದ ಶ್ರೀ ರಾಮೇಶ್ವರ ದೇವಸ್ಥಾನ ಹಿಂಭಾಗ ಶ್ರೀ ಗಾಯಿತ್ರಿ ಧರ್ಮ ಶಾಲಾ ಭವನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ತಜ್ಞ ವೈದ್ಯ ಹಾಗು ಪರಿಸರ ಸ್ನೇಹಿ ಡಾ. ರತ್ನಾಕರ್, ಭಾರತೀ ವೈದ್ಯಕೀಯ ಸಂಘದ ತಾಲೂಕು ಶಾಖೆ ಅಧ್ಯಕ್ಷ ಡಾ. ಡಿ. ಮಂಜುನಾಥನ್ ಉಪಸ್ಥಿತರಿರುವರು.     ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್ ಭಟ್ ಅಧ್ಯಕ್ಷತೆವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದ್ದಾರೆ.  

ಗೋರ್ ಭಾಯ್ ಸಂಘದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ 

Image
ಭದ್ರಾವತಿ ತಾಲೂಕು ಬಂಜಾರ ಗೋರ್ ಭಾಯ್ ಸಂಘದಿಂದ ನಾಗತಿಬೆಳಗಲು ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.  ಭದ್ರಾವತಿ: ತಾಲೂಕು ಬಂಜಾರ ಗೋರ್ ಭಾಯ್ ಸಂಘ ಸರ್ಕಾರಿ ಶಾಲೆಗಳ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಅವರ ಶಿಕ್ಷಣಕ್ಕೆ ನೆರವಾಗಿದೆ.      ತಾಲೂಕಿನ ನಾಗತಿಬೆಳಗಲು ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗಲಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ನೀಡುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ತಾಲೂಕು ಬಂಜಾರ ಗೋರ್ ಭಾಯ್ ಸಂಘ ನೆರವಾಗಿದ್ದು, ಸಂಘದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.  ಭದ್ರಾವತಿ ತಾಲೂಕು ಬಂಜಾರ ಗೋರ್ ಭಾಯ್ ಸಂಘದಿಂದ ಕಲ್ಲಹಳ್ಳಿ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.      ಬಂಜಾರ ಸಮಾಜದ ತರೀಕೆರೆ ಮಂಜು ಮಹಾರಾಜ್ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿದ್ದು, ಸಂಘದ ಅಧ್ಯಕ್ಷ ಎಲ್. ವೇದೇಶ್ ಅಧ್ಯಕ್ಷತೆವಹಿಸಿದ್ದರು. ಪ್ರಮುಖರಾದ ಹಾಲೇಶ್ ನಾಯ್ಕ, ಸಂಘದ ಉಪಾಧ್ಯಕ್ಷ ಶಂಕರನಾಯ್ಕ, ಕಾರ್ಯದರ್ಶಿ ಸುರೇಶ್ ನಾಯ್ಕ ಹಾಗು ಸಂಘದ ಪದಾಧಿಕಾರಿಗಳು, ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಉಲ್ಬಣಗೊಳ್ಳುತ್ತಿರುವ ಘನತ್ಯಾಜ್ಯ ಸಮಸ್ಯೆ ನಡುವೆ ನಗರಸಭೆಯಿಂದ ವಿನೂತನ ಪ್ರಯೋಗ 

Image
-ಶೇ.೫೦ರಷ್ಟು ಯಶಸ್ವಿ, ಶೇ.೧೦೦ರ ಗುರಿ ಸಾಧಿಸುವ ವಿಶ್ವಾಸ. - ತ್ಯಾಜ್ಯ ಕಂಡು ಬರುವ ಸ್ಥಳಗಳ ಸ್ವಚ್ಛತೆ  - ರಂಗೋಲಿ ಬಿಡಿಸಿ, ಗಿಡ ನೆಟ್ಟು, ಕಲಾಕೃತಿ ನಿರ್ಮಿಸಿ ಜಾಗೃತಿ. - ಘನತ್ಯಾಜ್ಯ  ವಸ್ತು ನಿರ್ವಹಣೆ ನಿಯಮಗಳು -೨೦೨೬ ಜಾರಿ      * ಅನಂತಕುಮಾರ್      ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಘನ ತ್ಯಾಜ್ಯ ಸಮಸ್ಯೆ ಉಲ್ಬಣವಾಗುತ್ತಿದ್ದು, ನಗರಸಭೆ ಆಡಳಿತಕ್ಕೆ ಸಮಸ್ಯೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಪ್ರಾಥಮಿಕ ಹಂತದಲ್ಲಿಯೇ ಘನ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ಕೈಗೊಂಡಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.  ಈ ನಡುವೆ ಎಲ್ಲಿಬೇಕೆಂದರಲ್ಲಿ ತ್ಯಾಜ್ಯ ಎಸೆಯದಂತೆ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಕಾರ್ಯ ಶೇ.೫೦ರಷ್ಟು ಯಶಸ್ವಿಯಾಗಿದೆ ಎಂಬುದು ಸ್ವಲ್ಪಮಟ್ಟಿಗೆ ಸಮಾಧಾನಕರ ಸಂಗತಿಯಾಗಿದೆ.       ನಗರಸಭೆ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಗಾಗಿ ವಿಭಿನ್ನ ರೀತಿಯ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳಲಾಗಿದೆ. ಈ ಪೈಕಿ ಮನೆ ಮನೆ ಕಸ ಸಂಗ್ರಹಣೆ ಸಹ ಒಂದಾಗಿದ್ದು, ವಿವಿಧ ಮಾದರಿ ಘನ ತ್ಯಾಜ್ಯ ಸಂಗ್ರಹಣೆಗಾಗಿ ಪ್ರತ್ಯೇಕ ಕಸದ ಬುಟ್ಟಿಗಳನ್ನು ನೀಡಲಾಗಿದೆ. ಆದರೂ ಸಹ ಬಹುತೇಕ ಮನೆಗಳಲ್ಲಿ ಘನ ತ್ಯಾಜ್ಯ ವಿಂಗಡಿಸದೆ ಕಸದ ಗಾಡಿಯವರಿಗೆ ನೀಡಲಾಗುತ್ತಿದೆ. ಇನ್ನೂ ಕೆಲವು ಮನೆಗಳಲ್ಲಿ ಕಸದ ಗಾಡಿಗೆ ತ್ಯಾಜ್ಯ ನೀಡ...

ಸಿ.ಎನ್ ರಸ್ತೆ ಅಗಲೀಕರಣ ತೆರವು ಕಾರ್ಯಾಚರಣೆಗೆ ತೀವ್ರ ವಿರೋಧ 

Image
ಭದ್ರಾವತಿಯಲ್ಲಿ ಚನ್ನಗಿರಿ ರಸ್ತೆಯ ಅಗಲೀಕರಣ ಕಾರ್ಯ ಭರದಿಂದ ಸಾಗುತ್ತಿದ್ದು, ರಸ್ತೆ ಅಗಲೀಕರಣದ ಹಿನ್ನಲೆಯಲ್ಲಿ ಬೃಹತ್ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.       ಭದ್ರಾವತಿ: ನಗರದ ಚನ್ನಗಿರಿ ರಸ್ತೆ (ಸಿ.ಎನ್ ರಸ್ತೆ) ಅಗಲೀಕರಣ ಕಾರ್ಯ ಭರದಿಂದ ಸಾಗುತ್ತಿದ್ದು, ಈ ನಡುವೆ ವರ್ತಕರಿಂದ ತೆರವು ಕಾರ್ಯಾಚರಣೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.      ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಚನ್ನಗಿರಿ ರಸ್ತೆ  ಅಗಲೀಕರಣ ಕಾರ್ಯ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದ ವರೆಗೆ ಹಲವಾರು ಬಾರಿ ಗುರುತು ಕಾರ್ಯ ನಡೆಸಿ ಸ್ಥಳೀಯರು ಹಾಗು ವರ್ತಕರ ವಿರೋಧದಿಂದಾಗಿ ಕೈಬಿಡಲಾಗಿತ್ತು. ಕಳೆದ ೫-೬ ತಿಂಗಳಿನಿಂದ ಪುನಃ ರಸ್ತೆ ಅಗಲೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು, ವರ್ತಕರು, ಜನಪ್ರತಿನಿಧಿಗಳು ಹಾಗು ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಹಲವಾರು ಬಾರಿ ನಗರಸಭೆ ಆಡಳಿತ ಸಭೆ ನಡೆಸಿದ್ದು, ಒಮ್ಮತದ ತೀರ್ಮಾನ ಕೈಗೊಳ್ಳುವಲ್ಲಿ ವಿಫಲವಾಗಿದೆ. ಆದರೂ ಸಹ ಹೇಗಾದರೂ ಮಾಡಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಬೇಕೆಂಬ ದೃಢ ನಿರ್ಧಾರದೊಂದಿಗೆ ಅಗಲೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ.     ಈ ಹಿಂದೆ ಭೂ ಮಾಪಕರ ಅಳತೆ ಪ್ರಕಾರ ರಸ್ತೆ ಅಗಲೀಕರಣದಲ್ಲಿ ಎರಡು ಬದಿ ೪೦ ಅಡಿ ವಿಸ್ತೀರ್ಣಕ್ಕೆ ನಿಗದಿಪಡಿಸಲಾಗಿತ...

ಟಾಟಾ ಪವರ್‌ಗೆ ವಿತರಣಾ ಪರವಾನಿಗೆ ನೀಡಬೇಡಿ : ಮೆಸ್ಕಾಂ ನೌಕರರ ಪ್ರತಿಭಟನೆ 

Image
ಯಾವುದೇ ಕಾರಣಕ್ಕೂ ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡಬೇಡಿ ಎಂದು ಮೆಸ್ಕಾಂ ನೌಕರರು ಬುಧವಾರ ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಗ್ರಹಿಸಿದರು.  - ಟಾಟಾ ಪವರ್‌ಗೆ ಪರವಾನಿಗೆ ಭವಿಷ್ಯದಲ್ಲಿ ಸಂಕಷ್ಟ. - ಮೆಸ್ಕಾಂ ನೌಕರರ ವಿರೋಧ  - ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ ಮುಂಭಾಗ ಪ್ರತಿಭಟನೆ       ಭದ್ರಾವತಿ: ಯಾವುದೇ ಕಾರಣಕ್ಕೂ ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡಬೇಡಿ ಎಂದು ಮೆಸ್ಕಾಂ ನೌಕರರು ಬುಧವಾರ ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಗ್ರಹಿಸಿದರು.      ವಿದ್ಯುತ್ ವಿತರಣಾ ಪರವಾನಿಗೆ ಖಾಸಗಿಯವರಿಗೆ ನೀಡುವುದರಿಂದ ಭವಿಷ್ಯದಲ್ಲಿ ಸಾಕಷ್ಟು ತೊಂದರೆ ಎದುರಿಬೇಕಾಗುತ್ತದೆ. ೨೦೦೩ ವಿದ್ಯುತ್ ಕಾಯ್ದೆ ಅನ್ವಯ ಈಗಾಗಲೇ ಟಾಟಾ ಪವರ್ ದೇಶದ ಇತರೆ ರಾಜ್ಯಗಳಲ್ಲಿ ವಿದ್ಯುತ್ ವಿತರಣಾ ಪರವಾನಿಗೆ ಪಡೆದುಕೊಂಡಿದೆ. ಈ ಹಿಂದೆ ರಾಜ್ಯದಲ್ಲೂ ಸಹ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿತ್ತು. ಇದಕ್ಕೆ ನೌಕರರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಹಿಂದೆ ಸರಿದಿತ್ತು. ಇದೀಗ ಪುನಃ ಅರ್ಜಿ ಸಲ್ಲಿಸಿದ್ದು, ಜೂ.೨೩ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ತಿಳಿಸಲಾಗಿದೆ. ಈ ಹಿನ್ನಲೆಯಲ್ಲಿ ನೌಕರರು ಪ್ರತಿಭಟಿಸಿ ವಿರೋಧ ವ್ಯ...

ದ್ವಿಚಕ್ರ ವಾಹನ-ಕಾರು ನಡುವೆ ಅಪಘಾತ : ದಂಪತಿ ಗಾಯ

Image
     ಭದ್ರಾವತಿ: ನಗರದ ಶಿವನಿ ತಿರುವಿನ ಬಳಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಮಂಗಳವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.     ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪನ್ನೀರು ಸೆಲ್ವ (೭೦) ಮತ್ತು ಕುಪಂ ರಾಣಿ (೬೨) ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವನಿ ತಿರುವಿನ ಹತ್ತಿರದ ಆಲೆಮನೆಯೊಂದರಿಂದ ನಗರಕ್ಕೆ ಬರುತ್ತಿರುವಾಗ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.  ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.

ಒಂಟಿಯಾಗಿದ್ದ ಯುವತಿಯ ಮನೆಯ ಆವರಣಕ್ಕೆ ವಿಷಪೂರಿತ ಹಾವು

Image
ಕೊಲ್ಲುವ ಉದ್ದೇಶದಿಂದ ಕೃತ್ಯ, ಪೊಲೀಸರಿಗೆ ದೂರು - ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ.  - ಚೀಲದಲ್ಲಿ ತಂದಿದ್ದ ದೊಡ್ಡ ವಿಷಕಾರಿ ಹಾವು.  - ಕೃತ್ಯದ ದೃಶ್ಯಾವಳಿಗಳು ಸಿ.ಸಿ ಟಿವಿಯಲ್ಲಿ ಸೆರೆ.  - ನ್ಯೂಟೌನ್ ಪೊಲೀಸ್ ಠಾಣೆಗೆ ದೂರು.       ಭದ್ರಾವತಿ :  ಯುವತಿಯೊಬ್ಬಳು ಮನೆಯಲ್ಲಿದ್ದಾಗ ಹಾಡುಹಗಲೇ ಇಬ್ಬರು ಅಪರಿಚಿತ ಯುವಕರು ವಿಷಪೂರಿತ ಹಾವನ್ನು ಮನೆಯ ಆವರಣದಲ್ಲಿ ಬಿಟ್ಟು ಹೋಗಿರುವ ಘಟನೆ ಕಳೆದ ೫ ದಿನಗಳ ಹಿಂದೆ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.      ನಗರದ ಪ್ರಮುಖ ಪ್ರದೇಶಗಳಲ್ಲಿ ಒಂದಾಗಿರುವ ಜನ್ನಾಪುರದಲ್ಲಿ ಈ ಘಟನೆ ನಡೆದಿದ್ದು, ಜೂ. ೧೨ರಂದು ಬೆಳಗ್ಗೆ ಸುಮಾರು ೧೦.೫೫ರ ಸಮಯದಲ್ಲಿ ಸುಮಾರು ೨೪ ವರ್ಷ ವಯಸ್ಸಿನ ಗುಣಶ್ರೀ ಎಂಬ ಯುವತಿ ಮನೆಯಲ್ಲಿ ಒಂಟಿಯಾಗಿದ್ದಾಗ ಸುಮಾರು ೨೦ ರಿಂದ ೨೫ ವರ್ಷದೊಳಗಿನ ಇಬ್ಬರು ಯುವಕರು ಗೇಟ್ ಒಳಗೆ ಪ್ರವೇಶಿಸಿ, ತಮ್ಮೊಂದಿಗೆ ತಂದಿದ್ದ ಚೀಲದಿಂದ ದೊಡ್ಡ ವಿಷಕಾರಿ ಹಾವೊಂದನ್ನು ಮನೆಯ ಆವರಣದೊಳಗೆ ಬಿಟ್ಟು ಓಡಿಹೋಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.      ಮನೆಯ ಸಿ.ಸಿ ಟಿವಿಯಲ್ಲಿ ಘಟನೆಯ ದೃಶ್ಯಾವಳಿ ಸೆರೆಯಾಗಿದ್ದು, ಕೆಲಸಕ್ಕೆ ತೆರಳಿದ್ದ ಗುಣಶ್ರೀ ಅವರ ತಾಯಿ ಮನೆಗೆ ಹಿಂದಿರುಗಿ ಬಂದ ನಂತರ ಪರಿಶೀಲನೆ ನಡೆಸಿ ದೂರು ನೀಡಿ...

ದೇಶದ ೧೪೦ ಕೋಟಿ ಜನರ ಹಿತಕಾಪಾಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಶಸ್ವಿ

Image
ಪ್ರಬುದ್ಧರ ಸಭೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಆರ್.ಕೆ ಸಿದ್ರಾಮಣ್ಣ  ಭದ್ರಾವತಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ೧೨ ವರ್ಷಗಳ ಯಶಸ್ವಿ ಆಡಳಿತದ ಹಿನ್ನಲೆಯಲ್ಲಿ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪ್ರಬುದ್ಧರ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.      ಭದ್ರಾವತಿ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ೧೨ ವರ್ಷಗಳ ಆಡಳಿತ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುವಂತೆ ಮಾಡಿದ್ದು, ಪ್ರಸ್ತುತ ದೇಶದ ೧೪೦ ಕೋಟಿ ಜನರ  ಹಿತಕಾಪಾಡುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ ಹೇಳಿದರು.      ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ೧೨ ವರ್ಷಗಳ ಯಶಸ್ವಿ ಆಡಳಿತದ ಹಿನ್ನಲೆಯಲ್ಲಿ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧರ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.      ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತೀಯ ಸೈನಿಕರು ಭಯೋತ್ಪಾದಕರ ಅಡಗುತಾಣಗಳಿಗೆ ನುಗ್ಗಿ ದಿಟ್ಟ ಕ್ರಮ ಕೈಗೊಂಡಿದ್ದಾರೆ. ನಕ್ಸಲ್ ವಾದ ನಿಯಂತ್ರಿಸುವಲ್ಲಿ ಮಹತ್ವದ ಸಾಧನೆ ಆಗಿದ್ದು, ಅನೇಕ ನಕ್ಸಲರು ಶರಣಾಗುತ್ತಿದ್ದಾರೆ. ನೆರೆ ರಾಷ್ಟ್ರಗಳಲ್ಲಿ ಯುದ್ಧದಂತಹ ತುರ್ತು ...

ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ಕಲಿಸುವುದು ಪೋಷಕರ ಕರ್ತವ್ಯ : ನಾಗರತ್ನ ವಾಗೀಶ್  ಕೋಠಿ     

Image
ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದಿಂದ ಸರ್ವ ಸದಸ್ಯರ ಸಭೆ ಮತ್ತು ಎಸ್‌ಎಸ್‌ಎಲ್‌ಸಿ ಹಾಗು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಮಕ್ಕಳನ್ನು ವಿದ್ಯಾವಂತರನ್ನಾಗಿಸಿದರೆ ಸಾಲದು ಉತ್ತಮ ಸಂಸ್ಕಾರವಂತರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ತಮ್ಮ ತಮ್ಮ ಮನೆಗಳಲ್ಲಿಯೇ ಸಂಸ್ಕಾರ ಕಲಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ನಾಗರತ್ನ ವಾಗೀಶ್ ಕೋಠಿ ಕರೆ ನೀಡಿದರು.     ಅವರು ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಸರ್ವ ಸದಸ್ಯರ ಸಭೆ ಮತ್ತು ಎಸ್‌ಎಸ್‌ಎಲ್‌ಸಿ ಹಾಗು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.      ಸಮಾಜದ ಗೌರವಾಧ್ಯಕ್ಷೆ ಆರ್.ಎಸ್ ಶೋಭಾ, ಉಪಾಧ್ಯಕ್ಷೆ ಯಶೋಧ ವೀರಭದ್ರಪ್ಪ, ನಿರ್ದೇಶಕಿ ಮಂಜುಳಾ ಆನಂದ ಮೂರ್ತಿ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು     ಪ್ರಧಾನ ಕಾರ್ಯದರ್ಶಿ ಕುಸುಮ ತೀರ್ಥಯ್ಯ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಪರಿಮಳ ರ...

ಹಿರಿಯ ಸಮಾಜ ಸೇವಕ ಎಚ್.ವಿ ಶಿವರುದ್ರಪ್ಪ ನಿಧನ

Image
ಎಚ್.ವಿ ಶಿವರುದ್ರಪ್ಪ  - ೨೦೨೫ರ ನಾಡಹಬ್ಬ ದಸರಾ ಉದ್ಘಾಟಕರು. - ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದರು.   - ಸಂಸದರು, ಶಾಸಕರು, ಗಣ್ಯರು, ವಿವಿಧ ಸಂಘ-ಸಂಸ್ಥೆಗಳಿಂದ ಸಂತಾಪ      ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಸಹ್ಯಾದ್ರಿ ಬಡಾವಣೆ ನಿವಾಸಿ, ಹಿರಿಯ ಸಮಾಜ ಸೇವಕ ಹೆಬ್ಬಂಡಿ ವೀರಪ್ಪ ಶಿವರುದ್ರಪ್ಪ(೮೮) ಸೋಮವಾರ ನಿಧನ ಹೊಂದಿದರು.  ಇವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಹೆಬ್ಬಂಡಿ ಗ್ರಾಮದ ಇವರ ತೋಟದಲ್ಲಿ ಸಂಜೆ ನೆರವೇರಿತು. ಕಳೆದ ವರ್ಷ ೨೦೨೫ ನಗರಸಭೆಯಿಂದ ಆಯೋಜಿಸಲಾಗಿದ್ದ ನಾಡಹಬ್ಬ ದಸರಾ ಆಚರಣೆಯ ಉದ್ಘಾಟಕರಾಗಿ ಆಹ್ವಾನಿಸಲಾಗಿತ್ತು.  ಶಿವರುದ್ರಪ್ಪರವರು ಮೂಲತಃ ಕೃಷಿಕರು ಹಾಗು ವ್ಯಾಪಾರಸ್ಥರಾಗಿದ್ದು, ೧೯೭೦ರಿಂದ ಸುಮಾರು ೫೫ ವರ್ಷಗಳಿಂದ ನಗರದ ಲಯನ್ಸ್ ಕ್ಲಬ್ ಅಂತರಾಷ್ಟ್ರೀಯ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿಕೊಂಡು ಬರುವ ಮೂಲಕ  ಅಜೀವ ಸದಸ್ಯರಾಗಿದ್ದರು. ಕಡದಕಟ್ಟೆ ರೈತರ ವ್ಯವಸಾಯೋತ್ಪನ್ನ ಸಹಕಾರ ಸಂಘದಲ್ಲಿ ೩ ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಜೊತೆಗೆ ಸಹಕಾರ ಸಂಘದ ಬೆಳವಣಿಗೆಗೆ ಆರ್ಥಿಕ ನೆರವನ್ನು ನೀಡಿದ್ದರು. ಅಲ್ಲದೆ ಉತ್ತಮ ಜಿಲ್ಲಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.      ಕಡದಕಟ್ಟೆ ಶ್ರೀ ವಿನಾಯಕ ದೇವಸ್ಥಾನದ ಸಂಸ್ಥಾಪಕ ಕಾರ್ಯದರ್ಶಿಯಾಗಿ, ತಾಲ...

ಭದ್ರಾವತಿ: ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

Image
ಭದ್ರಾವತಿ: ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಗ್ರಾಮಾಂತರ ಮಂಡಲ ಕೆ.ಎಚ್ ತೀರ್ಥಯ್ಯ ಸಮ್ಮುಖದಲ್ಲಿ ಗ್ರಾಮಾಂತರ ಮಹಿಳಾ ಮೋರ್ಚಾ ಪದಾಧಿಕಾರಿಗಳ ಘೋಷಣಾ ಪಟ್ಟಿ ಬಿಡುಗಡೆಗೊಳಿಸಲಾಯಿತು.     ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಶಕುಂತಲಾ ಪ್ರದೀಪ್ ಅರಳಿಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರವೀಣ್ ಕುಮಾರಿ ಮಂಜುನಾಥ್, ಹಾತಿಕಟ್ಟೆ ಹಾಗೂ ಅನುಸೂಯ ಚರಣ್ ಕುಮಾರ್ ಗಾಯಕ್ವಾಡ್, ದೇವರಹಳ್ಳಿ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಜಯಶೀಲಾ ಮಂಜುನಾಥ, ಅತ್ತಿಗುಂದ, ಮಧುಮಾಲ ಸೋಮಶೇಖರ್ ಪದ್ಮೇನಹಳ್ಳಿ, ಸುನಂದಮ್ಮ ಬಸವರಾಜಯ್ಯ ಗೋಣಿಬೀಡು, ಭಾಗ್ಯ ಮಲ್ಲಿಕಾರ್ಜುನ್ ಅರಳಿಹಳ್ಳಿ, ಇಂದ್ರಕಲಾ ನರೇಂದ್ರ ಕುಮಾರ್ ಬೋಸ್ಲೆ ದೇವರಹಳ್ಳಿ ಮತ್ತು ಉಜಾಲಾಬಾಯಿ ದೇವರಹಳ್ಳಿ ಹಾಗು ಕಾರ್ಯದರ್ಶಿಗಳಾಗಿ ರಮಾ ತಾರೀಕಟ್ಟೆ, ರಂಜಿತಾ ಶಂಕರ್ ರಾವ್ ಬೋಸ್ಲೆ ದೇವರಹಳ್ಳಿ, ಮಮತಾ ಪುರುಷೋತ್ತಮ್ ಬಸಲಿಕಟ್ಟೆ, ಮಂಜುಳಾ ವೆಂಕಟೇಶ್ ಹಾತಿಕಟ್ಟೆ. ಆರತಿ ಶಶಿಧರ್, ಕೊಮಾರನಹಳ್ಳಿ. ನಂದಿನಿ ಬಾಯಿ ಚಂದ್ರಶೇಖರ್ ರಾವ್ ಕೋಮಾರನಹಳ್ಳಿ ಅವರನ್ನುನೇಮಕಗೊಳಿಸಲಾಗಿದೆ.     ಖಜಾಂಚಿಯಾಗಿ ಪದ್ಮಪ್ರಿಯಾ ಪ್ರಭಾಕರ ಮೂರ್ತಿ, ಸೀತಾರಾಮ ಪುರ, ಸಾಮಾಜಿಕ ಜಾಲತಾಣದವರಾಗಿ ಸುಮಲತಾ ಪ್ರಸನ್ನ ಕುಮಾರ್ ಅರಳಿಹಳ್ಳಿ ಹಾಗು ಸದಸ್ಯರಾಗಿ ಸರೋಜಾ ವೆಂಕಟೇಶ್ ಬಸಲಿಕಟ್ಟೆ, ಆಶಾ ಅಣ್ಣಪ್ಪ ಹಿರಿಯೂರು, ಪ್ರತಿಮಾ ಶಂಕ್ರಪ್ಪ ಬಾರಂದೂರು. ಗುಣವತಿ ದ...

ಅಂಗನವಾಡಿ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ 

Image
ಜೂ.೨೦ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ೨೩ರಂದು ಮೂಲ ದಾಖಲಾತಿ ಹಾಜರುಪಡಿಸಿ   ಭದ್ರಾವತಿ: ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತಂತೆ ಆಕ್ಷೇಪಣೆಗಳಿದ್ದಲ್ಲಿ ಜೂ.೨೦ರೊಳಗೆ ಸಲ್ಲಿಸುವಂತೆ ಕೋರಲಾಗಿದೆ.      ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಹಾಗು ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ.      ಜೂ.೨೩ರಂದು ಬೆಳಿಗ್ಗೆ ೧೦ ಗಂಟೆಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲನೆಗಾಗಿ ಹಾಜರು ಪಡಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.  

ನಾಡಿನಾದ್ಯಂತ ತುಳು ಭಾಷೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ : ತಾರಾನಾಥ ಗಟ್ಟಿ ಕಾಪಿಕಾಡ್ 

Image
ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ತುಳು ಕೂಟದಿಂದ ಆಯೋಜಿಸಲಾಗಿದ್ದ ತುಳು ಉತ್ಸವ-೨೦೨೬ ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉದ್ಘಾಟಿಸಿದರು.  ಭದ್ರಾವತಿ : ತುಳು ಭಾಷೆಗೆ ತನ್ನದೇ ಆದ ಪರಂಪರೆ ಇದ್ದು, ಈ ಭಾಷೆಯ ಬೆಳವಣಿಗೆಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ನಾಡಿನ ಎಲ್ಲೆಡೆ ತುಳು ಭಾಷೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದರು.      ಭಾನುವಾರ ಮಧ್ಯಾಹ್ನ ನ್ಯೂಟೌನ್ ಬಂಟರ ಭವನದಲ್ಲಿ ತುಳು ಕೂಟದಿಂದ ಆಯೋಜಿಸಲಾಗಿದ್ದ ತುಳು ಉತ್ಸವ-೨೦೨೬ ಉದ್ಘಾಟಿಸಿ ಮಾತನಾಡಿದರು. ತುಳು ಭಾಷಿಕರು ಎಲ್ಲೆ ಇದ್ದರೂ ಸಹ ಭಾಷೆ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ತುಳುನಾಡಿನ ಸಾಹಿತ್ಯ, ಸಂಸ್ಕೃತಿ, ಭಾಷೆ ವೈವಿಧ್ಯತೆಯಿಂದ ಕೂಡಿದೆ. ಈ ಭಾಷೆಯನ್ನು ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಕಲಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹೋರಾಟ ನಡೆಸಿದ ಪರಿಣಾಮ ಸರ್ಕಾರ ತುಳುನಾಡಿನ ಭಾಗದ ಶಾಲೆಗಳಲ್ಲಿ ತುಳು ಭಾಷೆಯನ್ನು ಒಂದು ಆಯ್ಕೆಯ ಭಾಷೆಯನ್ನಾಗಿಸಿದೆ. ಪ್ರಸ್ತುತ ತುಳು ಭಾಷೆ ಕಲಿಕೆಯಲ್ಲಿ ತೊಡಗಿರುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ತುಳು ಭಾಷೆ ಕಲಿಕೆಗೆ ಪ್ರೋತ್ಸಾಹಿಸಬೇಕೆಂದರು.  ...

ನರಸಮ್ಮ ನಿಧನ 

Image
ನರಸಮ್ಮ       ಭದ್ರಾವತಿ : ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ, ಗೋಲ್ಡನ್ ಜ್ಯೂಬಿಲಿ ಹುತ್ತಾ ಕಾಲೋನಿ ನಿವಾಸಿ ಮರಿಯಪ್ಪ ಅವರ ಧರ್ಮಪತ್ನಿ ನರಸಮ್ಮ(೮೦) ನಿಧನ ಹೊಂದಿದರು.      ಇವರಿಗೆ ನಾಲ್ವರು ಪುತ್ರರು ಹಾಗು ಪುತ್ರಿ ಇದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಶನಿವಾರ ಸಂಜೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.       ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸೇರಿದಂತೆ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಸ್ಕಂದ ಟ್ರಸ್ಟ್‌ನಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕ, ಲೇಖನ ಸಾಮಗ್ರಿ ವಿತರಣೆ 

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಜಯಶ್ರೀ ವೃತ್ತದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸ್ಕಂದ ಟ್ರಸ್ಟ್ ಉಚಿತ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ಶನಿವಾರ ವಿತರಿಸಲಾಯಿತು.        ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ಜಯಶ್ರೀ ವೃತ್ತದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸ್ಕಂದ ಟ್ರಸ್ಟ್ ಉಚಿತ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ಶನಿವಾರ ವಿತರಿಸಲಾಯಿತು.       ಸಾಮಾಜಿಕ ಸೇವಾ ಮನೋಭಾವನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸ್ಕಂದ ಟ್ರಸ್ಟ್ ಸರ್ಕಾರಿ ಶಾಲೆ ಮಕ್ಕಳ ಕಲಿಕೆಗೆ ನೆರವಾಗುವ ಮೂಲಕ ಮಾದರಿಯಾಗಿದೆ.      ಬಿಜೆಪಿ ಮಂಡಲ ನಗರ ಅಧ್ಯಕ್ಷ ಜಿ. ಧರ್ಮಪ್ರಸಾದ್, ಶ್ರೀಧರ್, ಶಾಂತಕುಮಾರ್, ನಾರಾಯಣ, ಮಧುಸೂದನ ಮತ್ತು ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.  

ಹಾವು ಕಡಿತಕ್ಕೆ ರೈತ ಮಹಿಳೆ ಭಾಗ್ಯಮ್ಮ ಸಾವು 

Image
ಭಾಗ್ಯಮ್ಮ  ಭದ್ರಾವತಿ : ನಗರಸಭೆ ವ್ಯಾಪ್ತಿಯ ಗೌರಾಪುರ ಗ್ರಾಮದ ನಿವಾಸಿ ಭಾಗ್ಯಮ್ಮ(೬೧) ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿತ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ.      ಕಳೆದ ೪ ದಿನಗಳ ಹಿಂದೆ ಹಾವು ಕಡಿತಕ್ಕೆ ಒಳಗಾಗಿದ್ದ ಭಾಗ್ಯಮ್ಮ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಬಸವಗುಡಿ ಹಿಂದೂ ರುದ್ರಭೂಮಿಯಲ್ಲಿ ಸಂಜೆ ನೆರವೇರಿತು. ಇವರ ನಿಧನಕ್ಕೆ ಗ್ರಾಮದ ಮುಖಂಡರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ. 

ಸರ್ಕಾರಿ ಶಾಲೆಗಳ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಸೇವಾ ಕಾರ್ಯಗಳು ಸಾರ್ಥಕ 

Image
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.  - ಸಮಾಜ ಸೇವಕ ಎ. ಧರ್ಮೇಂದ್ರ ನೇತೃತ್ವದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ. -  ಸರ್ಕಾರಿ ಶಾಲೆಗಳ ಸುಮಾರು ೪,೫೦೦ ಮಕ್ಕಳಿಗೆ ಒಟ್ಟು ೨೫ ಸಾವಿರ ಬರವಣಿಗೆ ಪುಸ್ತಕ.  - ೯ ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಸೇವಾ ಕಾರ್ಯಕ್ಕೆ ಶ್ಲಾಘನೆ.        ಭದ್ರಾವತಿ: ಗ್ರಾಮೀಣ ಪ್ರದೇಶಗಳ ಮಕ್ಕಳು ಸಹ ತಮ್ಮ ಪ್ರತಿಭೆಗಳ ಮೂಲಕ ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಸೇವಾ ಕಾರ್ಯಗಳು ಸಾರ್ಥಕಗೊಳ್ಳುತ್ತವೆ ಎಂದು ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಎ. ಧರ್ಮೇಂದ್ರ ಹೇಳಿದರು.      ಅವರು ಶನಿವಾರ ತಾಲೂಕಿನ ಅರಳಿಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.      ಸರ್ಕಾರಿ ಶಾಲೆಗಳ ಮಕ್ಕಳು ಸಹ ಪ್ರತಿಭಾವಂತರಾಗಿದ್ದು, ಅವರ ಶಿಕ್ಷಣಕ್ಕೆ ನೆರವಾಗುತ್ತಿರುವುದು ತುಂಬಾ ಹೆಮ್ಮೆಯ ಸಂಗತಿಯಾಗಿದೆ. ಬಾಲ್ಯದಲ್ಲಿ ಶಿಕ್ಷ...

ಸ್ವಾತಂತ್ರ್ಯ ಬಂದು ೭೯ ವರ್ಷಗಳು ಕಳೆದರೂ ಸಹ ಬಾಲಕಾರ್ಮಿಕ ಪದ್ಧತಿ ಜೀವಂತ

Image
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ನ್ಯಾಯಾಧೀಶೆ ಚೇತನಾ ವಿಷಾದ ಭದ್ರಾವತಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ಯೋಜಿಸಲಾಗಿತ್ತು.      ಭದ್ರಾವತಿ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ೭೯ ವರ್ಷಗಳು ಕಳೆದರೂ ಸಹ ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳು ಇನ್ನೂ ಜೀವಂತವಾಗಿವೆ ಎಂದು ೨ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಚೇತನಾ ವಿಷಾದ ವ್ಯಕ್ತಪಡಿಸಿದರು.      ಅವರು ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.     ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ನಾವೆಲ್ಲರೂ ಶ್ರಮಿಸಬೇಕು ಎಂದರು.     ನೂತನ ತಹಸೀಲ್ದಾರ್ ಪ್ರದೀಪ್ ದೇವಗ...

ಮಾರಾಕಾಸ್ತ್ರಗಳಿಂದ ಭೀಕರ ಹಲ್ಲೆ ಪ್ರಕರಣ : ೭ ಮಂದಿ ಪೊಲೀಸರ ವಶಕ್ಕೆ

Image
ವಿಶ್ವನಾಥ್ ಅಲಿಯಾಸ್ ಮುದ್ದೆ       ಭದ್ರಾವತಿ: ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಜೀವನ ನಿರ್ವಹಿಸುತ್ತಿರುವ ಹಳೇನಗರದ ಶ್ರೀ ಹಳದಮ್ಮ ದೇವಸ್ಥಾನ ಸಮೀಪದ ನಿವಾಸಿ ವಿಶ್ವನಾಥ ಅಲಿಯಾಸ್ ಮುದ್ದೆ ಮೇಲೆ ಕಳೆದ ೫ ದಿನಗಳ ಹಿಂದೆ ಗುಂಪೊಂದು ಮಾರಾಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿ ಪರಾರಿಯಾಗಿತ್ತು. ಈ ಸಂಬಂಧ ಹಳೇನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪತ್ತೆ ಕಾರ್ಯಕ್ಕಾಗಿ ವಿಶೇಷ ರಚಿಸಿತ್ತು. ಇದೀಗ ಪ್ರಕರಣ ಸಂಬಂಧ ೭ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.     ಈ ಪ್ರಕರಣದಲ್ಲಿ ಪ್ರಕಾಶ್ ಅಲಿಯಾಸ್ ಕರಾಟೆ ಪ್ರಕಾಶ್, ಪ್ರಮೋದ್ ಅಲಿಯಾಸ್ ಗಾಂಧಿ, ಜಗದೀಶ್, ಅಲ್ವಿನ್, ಭರತ್ ಅಲಿಯಾಸ್ ಕೊಳಕ ಭರತ್, ರಾಕೇಶ್ ಅಲಿಯಾಸ್ ತುಂಬೆ, ಪ್ರಜ್ವಲ್ ಹಾಗೂ ಡಾಲ್ವಿನ್ ಭಾಗಿಯಾಗಿರುವ ಆರೋಪ ಕೇಳಿಬಂದಿದೆ.     ಪ್ರಕರಣ ಸಂಬಂಧ ಆರಂಭದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಂತೆ ಆರೋಪಿಗಳ ಸಂಖ್ಯೆ ಹೆಚ್ಚಾಗಿದ್ದು, ಮೊದಲಿಗೆ ಪ್ರಮೋದ್ ಹಾಗೂ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಶುಕ್ರವಾರ ಕರಾಟೆ ಪ್ರಕಾಶ್, ಭರತ್, ರಾಕೇಶ್, ಪ್ರಜ್ವಲ್ ಹಾಗೂ ಡಾಲ್ವಿನ್ ಅವರು ನಗರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶ ಚೇತನ್ ಅವರ ಎದುರು ಶರಣಾಗಿದ್ದಾರೆ. ಒಟ್ಟು ೭ ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ಸಂಬಂಧ ತನಿಖೆ ಮುಂದು ವರೆಸಿದ...

ಜೂ.೧೩ರಂದು ಸುಮಾರು ೨೫ ಸಾವಿರ ಉಚಿತ ಬರವಣಿಗೆ ಪುಸ್ತಕ ವಿತರಣೆ 

Image
ಕಳೆದ ೯ ವರ್ಷಗಳಿಂದ ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿರುವ ಎ. ಧರ್ಮೇಂದ್ರ      ಭದ್ರಾವತಿ : ಕಳೆದ ೯ ವರ್ಷಗಳಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸುವ ಮೂಲಕ ಸಮಾಜ ಸೇವಕ ಎ. ಧಮೇಂದ್ರರವರು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಈ ಬಾರಿ ಸಹ ಜೂ.೧೩ರಂದು ಸುಮಾರು ೨೫ ಸಾವಿರ ಬರವಣಿಗೆ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ.      ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಮೂಲಕ ಧಮೇಂದ್ರರವರು ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ೯ ವರ್ಷಗಳ ಹಿಂದೆ ಸರ್ಕಾರಿ ಶಾಲೆಯ ೫೦೦ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯ ಆರಂಭಿಸಿದ್ದು, ಇದೀಗ ೫೦೦೦ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ.      ಕಳೆದ ವರ್ಷ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೩, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೨ ಹಾಗು ನಾಗತಿಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೧ ಸರ್ಕಾರಿ ಶಾಲೆಗಳ ಮಕ್ಕಳಿಗೆ ಒಟ್ಟು ಸುಮಾರು ೧೮ ಸಾವಿರ ಪುಸ್ತಕಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆ ಮಕ್ಕಳ ಶಿಕ್ಷಣಕ್ಕೆ ನೆರವಾಗಿದ್ದರು.      ಈ ಬಾರಿ ಕುಮಾರಿ ನಾರಾಯಣಪುರ, ತಳ್ಳಿಕಟ್ಟೆ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ತಾಂಡ, ಆಟಿಕೆರೆ ಕ್ಯಾಂಪ್, ಜಯನಗರ, ಅರಳಿಹಳ...

ಜೂ.೧೪ರಂದು ತುಳು ಉತ್ಸವ : ಕನ್ನಡ ಜಗತ್ತಿಗೆ ತುಳು ಲೋಕದ ಪರಿಚಯ ಮಾಲಿಕೆ 

Image
     ಭದ್ರಾವತಿ : ``ತುಳುನಾಡಿನ ಆಚರಣೆ-ಆರಾಧನೆಗಳ ಲೋಕ ದೃಷ್ಠಿ'' ಕನ್ನಡ ಜಗತ್ತಿಗೆ ತುಳು ಲೋಕದ ಪರಿಚಯ ಮಾಲಿಕೆ ಜೂ.೧೪ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ನ್ಯೂಟೌನ್ ಬಂಟರ ಭವನದಲ್ಲಿ ನಡೆಯಲಿದೆ.      ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಬಿ.ಕೆ ಸಂಗಮೇಶ್ವರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.      ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಸದಸ್ಯ ಕನ್ನಡ ಸಾಹಿತಿ ಕುಂಬ್ರ ದುರ್ಗಾ ಪ್ರಸಾದ್ ರೈ ತುಳುನಾಡಿನ ಕೃಷಿ, ಬದುಕಿನ ಆಚರಣೆ-ಆರಾಧನೆಗಳು ಕುರಿತು ಉಪನ್ಯಾಸ ನೀಡಲಿದ್ದು, ತುಳು ಕೂಟದ ಅಧ್ಯಕ್ಷ ಪಿ. ಸುಧಾಕರ ಶೆಟ್ಟಿ ಅಧ್ಯಕ್ಷತೆವಹಿಸಲಿದ್ದಾರೆ.      ಕವಿಗಳಾದ ದೀಪ್ತಿ ಹರ್ಷ, ನಂದಿನಿ ಮಲ್ಲಿಕಾರ್ಜುನ, ಪೂರ್ಣಿಮ ಉಡುಪ, ಅಂಬಿಕಾ ದೇವರಾಜ್, ಸುರೇಶ್ ರಾವ್ ಅತ್ತೂರ್ ಮತ್ತು ಪದ್ಮಶ್ರೀ ಗೋವಿಂದರಾಜ್ ಭಾಗವಹಿಸಲಿದ್ದಾರೆ.      ಮಧ್ಯಾಹ್ನ ೨ ಗಂಟೆಗೆ ತುಳು ಉತ್ಸವ ನಡೆಯಲಿದ್ದು, ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉತ್ಸವ ಉದ್ಘಾಟಿಸುವರು. ತುಳು ಕೂಟದ ಸದಸ್ಯರಿಂದ ತುಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉತ್ಸವ ಯಶಸ್ವಿಗೊಳಿಸುವಂತೆ ತುಳು ಕೂಟದ ಪ್ರಧಾನ ಕಾರ...