ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಶಂಕರ ಸೇವಾ ಸಮಿತಿಯಿಂದ ಮಂಗಳವಾರ ಆದಿ ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಆಚರಿಸಲಾಯಿತು. ಭದ್ರಾವತಿ : ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಶಂಕರ ಸೇವಾ ಸಮಿತಿಯಿಂದ ಮಂಗಳವಾರ ಆದಿ ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಆಚರಿಸಲಾಯಿತು. ದೇವಸ್ಥಾನದಲ್ಲಿ ಬೆಳಿಗ್ಗೆ ನಿರ್ಮಾಲ್ಯ, ರುದ್ರಾಭಿಷೇಕ ಜರುಗಿತು. ನಂತರ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ರಾಜಬೀದಿ ಉತ್ಸವ ಮೆರವಣಿಗೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನೆರವೇರಿದವು. ಶಂಕರ್ ಸೇವಾ ಸಮಿತಿ ಅಧ್ಯಕ್ಷ ಸಿ.ಕೆ ರಾಮರಾವ್, ಕಾರ್ಯದರ್ಶಿ ಜೆ.ಎನ್ ಆನಂದರಾವ್, ಮುದುಕೇಶ್, ಶೇಷಾಚಲ, ನಿಖಿಲ್, ರಮಾಕಾಂತ, ಮುರಳಿ, ಮೋಹನ್, ಪಿ.ಕೆ ಮಂಜುನಾಥ್, ಶ್ರೀಧರ, ಶ್ರೀವತ್ಸ ಮತ್ತು ವಿವಿಧ ಭಜನಾ ಮಂಡಳಿಗಳು ಹಾಗು ಭಕ್ತರು ಪಾಲ್ಗೊಂಡಿದ್ದರು.