Posts

ಗೌರಿ-ಗಣೇಶ ಹಬ್ಬ : ಬೆಲೆ ಏರಿಕೆ ನಡುವೆ ಖರೀದಿ ಭರಾಟೆ

Image
ಗೌರಿ-ಗಣೇಶ ಹಬ್ಬ ಈ ಬಾರಿ ಒಟ್ಟಿಗೆ ಆಚರಿಸಲಾಗುತ್ತಿದ್ದು, ಭದ್ರಾವತಿ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ಖರೀದಿಯಲ್ಲಿ ಭಕ್ತರು ತೊಡಗಿರುವುದು.      ಭದ್ರಾವತಿ : ನಗರದಲ್ಲಿ ಗೌರಿ-ಗಣೇಶ ಹಬ್ಬ ಈ ಬಾರಿ ಒಟ್ಟಿಗೆ ಆಚರಿಸುತ್ತಿರುವ ಹಿನ್ನಲೆಯಲ್ಲಿ ಶನಿವಾರ ಮತ್ತು ಭಾನುವಾರ ಖರೀದಿ ಭರಾಟೆ ಹೆಚ್ಚಾಗಿರುವುದು ಕಂಡು ಬಂದಿತು.     ಪ್ರಮುಖ ರಸ್ತೆಗಳಲ್ಲಿ ಹಾಗು ವಾಣಿಜ್ಯ ಮಾರುಕಟ್ಟೆ ಬಳಿ ಜನ ಸಂದಣಿ ಅಧಿಕವಾಗಿದ್ದು, ಒಂದೆಡೆ ಹೂ-ಹಣ್ಣು, ತರಕಾರಿ ಮಾರುಕಟ್ಟೆ ಬಳಿ ಖರೀದಿ ಭರಾಟೆ ಕಂಡು ಬಂದರೇ, ಮತ್ತೊಂದೆಡೆ ದಿನಸಿ ಹಾಗು ಪೂಜಾ ಸಾಮಾಗ್ರಿ, ಹೊಸ ಹೊಸ ಬಟ್ಟೆಗಳ ಖರೀದಿಗಾಗಿ ದೊಡ್ಡ ದೊಡ್ಡ ಮಳಿಗೆ ಹಾಗು ಮಾಲ್‌ಗಳಲ್ಲಿ ಖರೀದಿ ಭರಾಟೆ ಹೆಚ್ಚಾಗಿರುವುದು ಕಂಡು ಬಂದಿತು. ಇನ್ನೊಂದೆಡೆ ಗೌರಿ-ಗಣೇಶ ಮೂರ್ತಿಗಳ ಖರೀದಿಯಲ್ಲಿ ತೊಡಗಿರುವುದು ಕಂಡು ಬಂದಿತು.     ಪ್ರತಿ ವರ್ಷದಂತೆ ಈ ಬಾರಿ ಸಹ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಆದರೂ ಸಹ ಹಬ್ಬದ ಹಿನ್ನಲೆಯಲ್ಲಿ ವಿಧಿ ಇಲ್ಲದೆ ವ್ಯಾಪಾರಸ್ಥರು ಕೇಳಿದಷ್ಟು ನೀಡಿ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುವುದು ಸಾಮಾನ್ಯವಾಗಿತ್ತು.     ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಈ ಬಾರಿ ಸಹ ವಿಜೃಂಭಣೆಯಿಂದ ನಡೆಯುತ್ತಿದ್ದು, ಈಗಾಗಲೇ ಸಿದ್ದತೆಗಳು ಪೂರ್ಣಗೊಂಡಿವೆ. ಉಳಿದಂತೆ ...

ವಿವಿಧ ಬೇಡಿಕೆ ಈಡೇರಿಕೆಗಾಗಿ ಸೆ.೧೫ರಿಂದ ವಿಧಾನಸೌಧದವರೆಗೂ ಪಾದಯಾತ್ರೆ

Image
  ಬಿ.ಎನ್ ರಾಜು      ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮತ್ತು ಮೈಸೂರು ಕಾಗದ ಕಾರ್ಖಾನೆ ಅಭಿವೃದ್ಧಿಗೊಳಿಸುವುದು, ಅ.೨೬ರಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪರವರ ಜನ್ಮದಿನ ಸರ್ಕಾರದಿಂದ ಆಚರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸೆ.೧೫ರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿಯಿಂದ ಬೆಂಗಳೂರಿನ ವಿಧಾನಸೌಧದವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.     ಅನ್ನದಾತ ರೈತರ ಶ್ರಮಜೀವಿ ಕಾರ್ಮಿಕರ ಶೋಷಿತ ನಾಗರೀಕರ ವಿವಿಧ ಸಮಸ್ಯೆಗಳ ಖಂಡಿಸಿ, ನಿದಿಗೆ ಪಂಚಾಯಿತಿ ಮಾಚೇನಹಳ್ಳಿ ಸರ್ವೇ ನಂ.೧೨೨ರಲ್ಲಿ ೩ ಎಕರೆ ೫ ಗುಂಟೆ ಸರ್ಕಾರದ ಜಾಗದಲ್ಲಿ ನಿವೇಶನ ನೀಡಲು ಒತ್ತಾಯಿಸಿ, ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದ ಊಟದ ಕೊಠಡಿಗಳ ನಿರ್ಮಾಣಕ್ಕೆ ೨ ಕೋ. ರೂ. ಅನುದಾನ ಬಿಡುಗೊಳಿಸುವಂತೆ ಒತ್ತಾಯಿಸಿ ಹಾಗು ಪಿಟಿಸಿಎಲ್ ಕಾಯ್ದೆ ಹಾಗು ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸುತ್ತಿರುವ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್, ಕಂದಾಯ ಮತ್ತು ಗ್ರಾಮಲೆಕ್ಕಿಗ ಸೇರಿದಂತೆ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕೈಗೊಳ್ಳಲು ಆಗ್ರಹಿಸಿ, ಕಸ್ತೂರಿ ರಂಗನ್ ವರದಿ ಅಧಿಸೂಚನೆ ರದ್ದುಗೊಳಿಸಲು ಆಗ್ರಹಿಸಿ, ಶರಾವತಿ ಸಂತ್ರಸ್ತರಿಗೆ ಸುಮಾರು ೬೫ ವರ್ಷಗಳಿಂದ ನ...

ಅಂತರಗಂಗೆ ಗ್ರಾಮದಲ್ಲಿ "ಅಂಬೇಡ್ಕರ್‌ ಓದು" ಕಾರ್ಯಕ್ರಮ

Image
ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಪದವಿ ಪೂರ್ವ ವಿಭಾಗದ ಸಹಯೋಗದೊಂದಿಗೆ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂವಿಧಾನ ಶಿಲ್ಪಿ "ಅಂಬೇಡ್ಕರ್‌ ಓದು" ಕಾರ್ಯಕ್ರಮ ಏರ್ಪಡಿಸಲಾಗಿತ್ತು.      ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಪದವಿ ಪೂರ್ವ ವಿಭಾಗದ ಸಹಯೋಗದೊಂದಿಗೆ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂವಿಧಾನ ಶಿಲ್ಪಿ "ಅಂಬೇಡ್ಕರ್‌ ಓದು" ಕಾರ್ಯಕ್ರಮ ಏರ್ಪಡಿಸಲಾಗಿತ್ತು.        ಕಾಲೇಜಿನ ಸಿ.ಬಿ.ಸಿ ಅಧ್ಯಕ್ಷ ಗಂಗಾಧರ್‌ ಅಂಬೇಡ್ಜರ್‌ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಪ್ರಾಚಾರ್ಯ ಡಾ. ಸಾಸ್ವೇಹಳ್ಳಿ ಸತೀಶ್ ರವರು ಅಂಬೇಡ್ಕರ್‌ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.      ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್‌ ಶಾಲೆಯ ಉಪ ಪ್ರಾಚಾರ್ಯರಾದ ಎಂ. ಸತೀಶ್‌ ಹಾಗೂ ಸಿಬಿಸಿ ಸದಸ್ಯ ಗೋವಿಂದಚಾರ್‌ ರವರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೂ ಮೊದಲು ಅಂಬೇಡ್ಕರ್‌ ರವರ ಕುರಿತಾದ ಗೀತೆಗಳನ್ನು ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಪ್ರಧಾನ ಕಾರ್ಯದರ್ಶಿ ತಮಟೆ ಜಗದೀಶ್‌ ಹಾಗೂ ತರಬೇತಿ ಪಡೆದ ವಿದ್ಯಾರ್ಥಿಗಳು ಹಾಡಿದರು.        ಕಾರ್...

ಭೂಪಾಳಂರವರು ಗಾಂಧೀಜಿಯವರಿಂದ ಕನ್ನಡದಲ್ಲಿ ಸಹಿ ಮಾಡಿದ ಪತ್ರ ಪಡೆದು ಕನ್ನಡದ ಬದ್ಧತೆ ತೋರ್ಪಡಿಸಿದ್ದರು

Image
 ದತ್ತಿ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ಎಂ. ಎಂ ಸ್ವಾಮಿ ಬಣ್ಣನೆ ಕನ್ನಡ ಸಾಹಿತ್ಯ ಪರಿಷತ್ ಭದ್ರಾವತಿ ತಾಲೂಕು ಘಟಕದಿಂದ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದತ್ತಿ ಕಾರ್ಯಕ್ರಮ ಎಂ.ಎಂ ಸ್ವಾಮಿ, ಡಾ. ವಿಜಯದೇವಿ, ರತ್ನಯ್ಯ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.      ಭದ್ರಾವತಿ: ವಸುದೇವ ಭೂಪಾಳಂರವರ ವಿಚಾರಧಾರೆ ವಿಶಿಷ್ಟವಾಗಿತ್ತು. ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಸೆರೆಮನೆ ವಾಸ ಅನುಭವಿಸಿದ್ದರು. ಮಹಾತ್ಮ ಗಾಂಧೀಜಿ ಅವರಿಗೆ ಜೈಲಿನಲ್ಲಿಯೇ ಕನ್ನಡ ಓದಲು ಮತ್ತು ಬರೆಯಲು ಹೇಳಿಕೊಡುವ ಮೂಲಕ ಅವರಿಂದ ಕನ್ನಡದಲ್ಲಿಯೇ ಸಹಿ ಮಾಡಿರುವ ಪತ್ರವನ್ನು ಪಡೆದಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಎಂ.ಎಂ. ಸ್ವಾಮಿ ಹೇಳಿದರು.      ಅವರು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.        ಶಿವಮೊಗ್ಗದ ಪ್ರತಿಷ್ಠಿತ ಕುಟುಂಬದಲ್ಲಿ ಜನಿಸಿದ ವಸುದೇವ ಭೂಪಾಳಂರವರು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರೊಂದಿಗೆ ಜೈಲಿನಲ್ಲಿದ್ದ ಸಂದರ್ಭದಲ್ಲಿ ಗಾಂಧೀಜಿಯವರಿಗೆ ಕನ್ನಡ ಓದಲು ಮತ್ತು ಬರ...

ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸುತ್ತಿರುವ ಪೋಲ್ ವಾಲ್ಟ್ ಕ್ರೀಡಾಪಟು ಸಿಂಧುಶ್ರೀ ಅಭಿನಂದಿಸಿದ ಬಿಜೆಪಿ

Image
ಪೋಷಕರಿಗೆ ರಾಷ್ಟ್ರಧಜ್ವ ನೀಡಿ ಗೌರವಿಸಿದ ಮಂಡಲ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಜಪಾನ್‌ನಲ್ಲಿ ಸೆ.19ರಿಂದ ಆರಂಭಗೊಳ್ಳಲಿರುವ 20ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿರುವ ಭದ್ರಾವತಿ ನಗರದ ಜನ್ನಾಪುರ ನಿವಾಸಿ, ಪೋಲ್ ವಾಲ್ಟ್ ಕ್ರೀಡಾಪಟು ಸಿಂಧುಶ್ರೀ ಅವರಿಗೆ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದಿಂದ ಅಭಿನಂದಿಸುವ ಮೂಲಕ ಅವರ ಪೋಷಕರಿಗೆ ರಾಷ್ಟ್ರಧಜ್ವ ನೀಡುವ ಮೂಲಕ ಗೌರವಿಸಲಾಯಿತು.      ಭದ್ರಾವತಿ: ಜಪಾನ್‌ನಲ್ಲಿ ಸೆ.19ರಿಂದ ಆರಂಭಗೊಳ್ಳಲಿರುವ 20ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿರುವ ನಗರದ ಜನ್ನಾಪುರ ನಿವಾಸಿ, ಪೋಲ್ ವಾಲ್ಟ್ ಕ್ರೀಡಾಪಟು ಸಿಂಧುಶ್ರೀ ಅವರಿಗೆ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದಿಂದ ಅಭಿನಂದಿಸುವ ಮೂಲಕ ಅವರ ಪೋಷಕರಿಗೆ ರಾಷ್ಟ್ರಧಜ್ವ ನೀಡುವ ಮೂಲಕ ಗೌರವಿಸಲಾಯಿತು.       ಸಿಂಧುಶ್ರೀ ಅವರು ಮಹಿಳೆಯರ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ 4.25 ಮೀಟರ್ ಎತ್ತರಕ್ಕೆ ನೆಗೆದು ಚಿನ್ನದ ಪದಕ ಗೆಲ್ಲುವುದರ ಜೊತೆಗೆ ರಾಷ್ಟ್ರೀಯ ದಾಖಲೆ ನಿರ್ಮಿಸಿ ಏಷ್ಯನ್ ಗೇಮ್ಸ್ ಪ್ರವೇಶಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ.      ಸೆ.19 ರಿಂದ ಅ.4ರವರೆಗೆ ನಡೆಯಲಿರುವ 20ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿರುವ ಸಿಂಧುಶ್ರೀ ಪ್ರಸ್ತುತ ದೆಹಲಿಯಲ್ಲಿ ಅಭ್ಯಾಸದಲ್ಲಿ ನಿರತರಾಗಿರುವ ಹಿನ್ನಲೆಯಲ್ಲಿ ಅವರನ್ನು ಬಿಜೆಪಿ ನಗರ ಮಂ...

ಎಸ್ಐಆರ್ ಪ್ರಕ್ರಿಯೆ : 4929 ಮತದಾರರಿಗೆ ನೋಟಿಸ್, 1 ಬಾಕಿ

Image
ಮತದಾರರ ಗುರುತಿನ ಸಂಖ್ಯೆ ಮೂಲಕ ಕರಡುಪಟ್ಟಿಯಲ್ಲಿ ಹೆಸರು ಪರಿಶೀಲಿಸಿ ಡಾ. ಮೈತ್ರಿ ಎಚ್.ಪಿ.ಎಸ್      ಭದ್ರಾವತಿ : ತಾಲೂಕಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ಐಆರ್) ಕಾರ್ಯ ಮುಂದುವರೆದಿದ್ದು, 4,929 ಮತದಾರರಿಗೆ ನೋಟಿಸ್ ಕಳುಹಿಸಲಾಗಿದೆ. ನೋಟಿಸ್ ವಿಚಾರಣೆಯನ್ನು ಅ.9ರವರೆಗೆ ಮತದಾರರ ನೋಂದಣಿ ಅಧಿಕಾರಿಗಳು ಅಥವಾ ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳಿಂದ ನಡೆಸಲಾಗುತ್ತದೆ ಎಂದು ಮತದಾರರ ನೊಂದಣಾಧಿಕಾರಿಯಾಗಿರುವ ನೂತನ ಉಪವಿಭಾಗಾಧಿಕಾರಿ ಡಾ. ಮೈತ್ರಿ ಎಚ್.ಪಿ.ಎಸ್ ತಿಳಿಸಿದರು.      ಅವರು ಈ ಕುರಿತು ತಾಲೂಕು ಕಛೇರಿ ಸಭಾಂಗಣದಲ್ಲಿ ಮಾಹಿತಿ ನೀಡಿ, 112- ವಿಧಾನಸಭಾ ಕ್ಷೇತ್ರ ಭದ್ರಾವತಿ ತಾಲೂಕಿನಲ್ಲಿ ಒಟ್ಟು ಮತದಾರರ ಸಂಖ್ಯೆ 1,74,332 ಇದ್ದು, 84,755 ಪುರುಷರು, 89,573 ಮಹಿಳೆಯರು ಹಾಗೂ 4 ಇತರೆ ಮತದಾರರು ಇದ್ದಾರೆ. ಎಸ್‌ಐಆರ್ ನಮೂನೆಯಲ್ಲಿ ಸೂಕ್ತ ಮಾಹಿತಿ ನೀಡದೆ ಅಥವಾ ಪೂರ್ಣ ಮಾಹಿತಿ ಸಲ್ಲಿಸದ ಹಿನ್ನಲೆಯಲ್ಲಿ ಮ್ಯಾಪಿಂಗ್ ನಡೆಸದ 3,1754 ಹಾಗು ಯಾವುದಕ್ಕೂ ಹೋಲಿಕೆಯಾಗದ (ಅನೋಮಲಿಯಸ್) 1,756 ಒಟ್ಟು 4,930 ಮತದಾರರಿಗೆ ನೋಟಿಸ್ ಕಳುಹಿಸಲು ಈ ಹಿಂದೆ ಸಿದ್ದತೆ ಕೈಗೊಳ್ಳಲಾಗಿತ್ತು. ಈಗಾಗಲೇ 4,929 ಮತದಾರರಿಗೆ ನೋಟಿಸ್ ತಲುಪಿಸಲಾಗಿದೆ. 1 ಮಾತ್ರ ಬಾಕಿ ಉಳಿದಿದ್ದು, ಕಳುಹಿಸಲಾಗಿರುವ ನೋಟಿಸ್‌ಗಳ ಪೈಕಿ 665 ಮತದಾರರ ವಿಚಾರಣೆ ಪೂರ್ಣಗೊಂಡಿದೆ. ನೋಟಿಸ್‌ಗಳ ರಚನಾ ವೇಳಾಪಟ್ಟಿಯ...

ಯಾವುದೇ ಹಬ್ಬವಿರಲಿ ಒಗ್ಗಟ್ಟಾಗಿ ಸೌಹಾರ್ದಯುತವಾಗಿ ಆಚರಿಸಿ

Image
ನಾಗರೀಕರ ಸೌಹಾರ್ದ ಸಭೆಯಲ್ಲಿ ಮುಖಂಡರ ಅಭಿಪ್ರಾಯ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಉಪವಿಭಾಗದಿಂದ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರೀಕರ ಸೌಹಾರ್ದ ಸಭೆಯಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.      ಭದ್ರಾವತಿ: ಹಬ್ಬ ಎಂದರೆ ಎಲ್ಲರೂ ಒಗ್ಗಟ್ಟಾಗಿ ಸೌಹಾರ್ದಯುತವಾಗಿ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಅತಿರೇಕ, ದುವರ್ತನೆಯಿಂದ ನಡೆದುಕೊಳ್ಳದೆ ಮಾನವೀಯ ಸಂಬಂಧಗಳನ್ನು ಗೌರವಿಸುವಂತವರಾಗಬೇಕೆಂದು ನಗರದ ವಿವಿಧ ಸಂಘ-ಸಂಸ್ಥೆಗಳ, ಸರ್ವಧರ್ಮಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.     ಗುರುವಾರ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಉಪವಿಭಾಗದಿಂದ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರೀಕರ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಮುಖಂಡರಾದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಅಂಜುಮನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ದಿಲ್‌ದಾರ್, ಹಿಂದೂ ಜಾಗೃತಿ ವೇದಿಕೆ ಅರಳಿಹಳ್ಳಿ ದೇವರಾಜ್, ಪೋಕಸ್ ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷೆ ಲತಾ...

ಟಾಸ್ಕ್ ಫೋರ್ಸ್ ಸಮಿತಿ ತಂಡದಿಂದ 5 ಬಾಲಕಾರ್ಮಿಕರ ರಕ್ಷಣೆ

Image
ಬಾಲಕಾರ್ಮಿಕ ನಿಷೇಧ ಟಾಸ್ಕ್ ಫೋರ್ಸ್ ಸಮಿತಿ ತಂಡ ಭದ್ರಾವತಿ ತಾಲೂಕಿನ ವಿವಿಧೆಡೆ ತಪಾಸಣೆ ನಡೆಸಿ 3 ಬಾಲಕರು ಮತ್ತು 2 ಬಾಲಕಿಯರು ಒಟ್ಟು 5 ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಭದ್ರಾವತಿ: ಬಾಲಕಾರ್ಮಿಕ ನಿಷೇಧ ಟಾಸ್ಕ್ ಫೋರ್ಸ್ ಸಮಿತಿ ತಂಡ ತಾಲೂಕಿನ ವಿವಿಧೆಡೆ ತಪಾಸಣೆ ನಡೆಸಿ 3 ಬಾಲಕರು ಮತ್ತು 2 ಬಾಲಕಿಯರು ಒಟ್ಟು 5 ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.      ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ತಂಡ ವಿವಿಧ ಗ್ಯಾರೇಜ್ ಮತ್ತು ಆಲೆಮನೆಗಳಿಗೆ ಭೇಟಿ ನೀಡಿ ಬಾಲಕಾರ್ಮಿಕರ ತಪಾಸಣೆ ನಡೆಸಿತು. ಈ ವೇಳೆ 5 ಬಾಲಕಾರ್ಮಿಕರನ್ನು ಪತ್ತೆ ಮಾಡಿ ರಕ್ಷಣೆ ಮಾಡುವ ಮೂಲಕ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು. ಬಾಲಕಾರ್ಮಿಕರನ್ನು ನೇಮಿಸಿಕೊಂಡಿದ್ದ ಮಾಲೀಕರುಗಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಬಗ್ಗೆ ಅರಿವು ಮೂಡಿಸಲಾಯಿತು.      ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಆಸ್ಮಿತ ಸಂಸ್ಥೆಯ ಸಿಬ್ಬಂದಿಗಳು, ಮುಂತಾದವರು ಉಪಸ್ಥಿತರಿದ್ದರು.

ವಾಮಾಚಾರ ನಂಬಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಣ ಕಳೆದುಕೊಂಡಿದ್ದ ಮಹಿಳೆ

Image
ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ವಾಪಸ್ ನೀಡಿದ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಮುರುಳಿ      ಭದ್ರಾವತಿ : ಮಹಿಳೆಯೊಬ್ಬರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗು ಹಣ ಪಡೆದು ವಾಮಾಚಾರ ಪರಿಹರಿಸುವುದಾಗಿ ಹೇಳಿ ನಂಬಿಸಿ ವಂಚನೆ ಮಾಡಿದ್ದ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ನಗರದ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.     ನಗರಸಭೆ ವ್ಯಾಪ್ತಿಯ ಗಾಂಧಿನಗರ ನಿವಾಸಿ, ಕೆಎಸ್‌ಆರ್‌ಟಿಸಿ ಕಿರಿಯ ಸಹಾಯಕಿ ಮಂಗಳ ನಾಯ್ಕ್‌ರವರು ಸೆ.೭ರಂದು ಠಾಣೆಗೆ ದೂರು ನೀಡಿದ್ದರು. ತಮಗೆ ಪರಿಚಯವಿದ್ದ ಮುರಳಿ ಹಾಗೂ ಆತನ ಸಹೋದರ ರವಿ ಎಂಬುವರು, ನಿಮ್ಮ ಮೇಲೆ ವಾಮಾಚಾರ ಪ್ರಯೋಗವಾಗಿದೆ. ಅದನ್ನು ಪರಿಹರಿಸದಿದ್ದರೆ ನಿಮಗೆ ಹಾಗೂ ನಿಮ್ಮ ಮಕ್ಕಳಿಗೆ ದೊಡ್ಡ ಮಟ್ಟದ ಸಮಸ್ಯೆಯಾಗಬಹುದು ಎಂದು ಭಯ ಹುಟ್ಟಿಸಿದ್ದರು. ನಂತರ ನಮ್ಮ ಮನೆಗೆ ಆಗಮಿಸಿ ವಾಮಾಚಾರ ಪರಿಹರಿಸುವುದಾಗಿ ಪೂಜೆ ನಡೆಸಿದ್ದರು. ಪೂಜೆ ಮುಗಿದ ನಂತರ ಬಂಗಾರದ ಒಡವೆ ಹಾಗು ನಗದು ಹಣ ತಮ್ಮ ಬಳಿ ನೀಡುವಂತೆ ತಿಳಿಸಿ, ಅವುಗಳನ್ನು ಮನೆಗೆ ಕೊಂಡೊಯ್ದು ವಿಶೇಷ ಪೂಜೆ ಮಾಡಿ ವಾಪಸ್ ನೀಡುವುದಾಗಿ ನಂಬಿಸಿದ್ದರು. ಈ ತಮ್ಮ ಬಳಿ ಇದ್ದ  ಸುಮಾರು ೧೯೩ ಗ್ರಾಂ ಚಿನ್ನಾಭರಣ ಹಾಗೂ ೨ ಲಕ್ಷ ರು. ನಗದು ಹಣ ನೀಡಿದ್ದು, ಆದರೆ ಪಡೆದುಕೊಂಡ ಚಿನ್ನಾಭರಣ ಮತ್ತು ನಗದು ಹಣ ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸ...

ಕರಾಟೆ ಓಪನ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಹೊಸಮನೆ ಸರ್ಕಾರಿ ಶಾಲೆ ಮಕ್ಕಳಿಗೆ ಬಹುಮಾನ

ಉಚಿತ ತರಬೇತಿ ನೀಡಿ ಪ್ರೋತ್ಸಾಹಿಸುತ್ತಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ಭದ್ರಾವತಿ : ನಗರದ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಶನ್ ಮಕ್ಕಳಿಗಾಗಿ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ನಗರಸಭೆ ವ್ಯಾಪ್ತಿಯ ಹೊಸಮನೆ ಸರ್ಕಾರಿ ಕನ್ನಡ ಶಾಲೆಯ ಸುಮಾರು 40 ಮಕ್ಕಳಿಗೆ ಉಚಿತವಾಗಿ ಕರಾಟೆ ತರಬೇತಿ ವ್ಯವಸ್ಥೆ ಕಲ್ಪಿಸಿಕೊಡುವ ಮೂಲಕ ಸರ್ಕಾರಿ ಶಾಲೆ ಮಕ್ಕಳು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಲ್ಲಿ ನೆರವಾಗಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು, ದೈಹಿಕ ಸಾಮರ್ಥ್ಯ ಹಾಗೂ ಆತ್ಮರಕ್ಷಣೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ. ಕರಾಟೆ ಶಿಕ್ಷಕರಾದ ಪ್ರೇಮ ಮತ್ತು ಮನೋಜ್ ಅವರು ಮಕ್ಕಳಿಗೆ ಕರಾಟೆ ತರಬೇತಿ ನೀಡಿದ್ದಾರೆ.     ಕರಾಟೆ ತರಬೇತಿ ಪಡೆದ ಮಕ್ಕಳ ಪೈಕಿ 8 ಮಕ್ಕಳನ್ನು ಆಯ್ಕೆ ಮಾಡಿ ತರೀಕೆರೆಯಲ್ಲಿ ಆಯೋಜಿಸಲಾಗಿದ್ದ ಕರಾಟೆ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳು ಆತ್ಮವಿಶ್ವಾಸದಿಂದ ಸ್ಪರ್ಧೆಯಲ್ಲಿ ಭಾಗವಹಿಸಿ ಕಟಾ ಹಾಗೂ ಫೈಟ್ ವಿಭಾಗಗಳಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ಶಾಲೆಗೆ ಹಾಗೂ ನಗರಕ್ಕೆ ಕೀರ್ತಿ ತಂದಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳಲ್ಲಿಯೂ ಅಪಾರ ಪ್ರತಿಭೆ, ಸಾಮರ್ಥ್ಯ ಮತ್ತು ಸಾಧಿಸುವ ಛಲವಿದೆ. ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ಮತ್ತು ವೇದಿಕೆ ದೊರೆತರೆ ಅವರು ರಾಜ್ಯ ಹಾಗೂ ರಾ...

ಬಂಜಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಎಚ್ ಮಲ್ಲಿಕಾರ್ಜುನ

Image
     ಭದ್ರಾವತಿ: ತಾಲೂಕು ಬಂಜಾರ ಸಂಘದ ನೂತನ ಅಧ್ಯಕ್ಷರಾಗಿ ತಾಲೂಕಿನ ಹಿರಿಯೂರು ತಾಂಡ ಎಚ್.ಎಚ್ ಮಲ್ಲಿಕಾರ್ಜುನ ಹಾಗು ಕಾರ್ಯದರ್ಶಿಯಾಗಿ ಕೋಮಾರನಹಳ್ಳಿ ಮಂಜುನಾಥನಾಯ್ಕ ಆಯ್ಕೆಯಾಗಿದ್ದಾರೆ.       ನಗರದ ಮಿಲ್ಟ್ರಿಕ್ಯಾಂಪ್, ಪ್ರೊ. ಬಿ. ಕೃಷ್ಣಪ್ಪ ವೃತ್ತದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಪದ್ಮೇನಹಳ್ಳಿ ಶಂಕರನಾಯ್ಕ, ಉಪಾಧ್ಯಕ್ಷರಾಗಿ ನಾಗತಿಬೆಳಗಲು ಲಕ್ಷ್ಮಣನಾಯ್ಕ, ಸಿರಿಯೂರು ಕೃಷ್ಣಾನಾಯ್ಕ, ಜಯನಗರ ಹನುಮಂತನಾಯ್ಕ ಮತ್ತು ನೆಲ್ಲಿಸರ ಸೋಮೇಶ್ವರ ನಾಯ್ಕ, ಖಜಾಂಚಿಯಾಗಿ ಕಲ್ಲಹಳ್ಳಿ ವೇದೇಶ್ ನಾಯ್ಕ, ಸಹಕಾರ್ಯದರ್ಶಿಯಾಗಿ ಅರಳಿಕೊಪ್ಪ ಪ್ರವೀಣ್ ನಾಯ್ಕ, ಸಂಘಟನಾ ಕಾರ್ಯದರ್ಶಿಯಾಗಿ ಕಾರೇಹಳ್ಳಿ ಟಿ. ಚಂದ್ರು, ಸಂಚಾಲಕ ಸಿದ್ದಾಪುರ ರವಿನಾಯ್ಕ, ಸಲಹೆಗಾರರಾಗಿ ಕಲ್ಪನಹಳ್ಳಿ ಉಮಾಮಹೇಶ್ವರನಾಯ್ಕ, ನೆಲ್ಲಿಸರ ಮಂಜಾನಾಯ್ಕ ಹಾಗು ಸಂಘದ ನಿರ್ದೇಶಕರಾಗಿ ಗೋಣಿಬೀಡು ದೇವ್ಲಾನಾಯ್ಕ, ಶಿವರಾಮನಗರ ಪಿ.ಟಿ ಪ್ರಕಾಶ್, ಗೊಂದಿ ರಾಮಾನಾಯ್ಕ, ಅರಳಿಕೊಪ್ಪ ಸುರೇಂದ್ರ ನಾಯ್ಕ, ಅರಹತೊಳಲು ಗಿರೀಶ್ ನಾಯ್ಕ, ಆದ್ರಿಹಳ್ಳಿ ದರ್ಶನ್ ನಾಯ್ಕ, ಕಲ್ಪನಹಳ್ಳಿ ಮಂಜಾನಾಯ್ಕ, ಸಿರಿಯೂರು ಹೇಮಂತ್ ನಾಯ್ಕ, ಅರಿಶಿನ ಘಟ್ಟ ಗುರುಮೂರ್ತಿ ನಾಯ್ಕ, ಹೆಬ್ಬಂಡಿ ಮಂಜಾನಾಯ್ಕ, ತಿಮ್ಲಾಪುರ ಬಿ. ಚೇತನ್, ಮೈಸೂರು ಮಂಜು, ದೊಡ್ಡಗೊಪ್ಪೇನಹಳ್ಳಿ ನಾಗಾನಾಯ್ಕ, ಸಿರಿಯೂರು ಮೋಹನ್ ನಾಯ್ಕ,...

ಸೆ.೯ರಂದು ವಿದ್ಯುತ್ ವ್ಯತ್ಯಯ

Image
          ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಘಟಕ-೪ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಸೆ.೯ರ ಬುಧವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.       ಸೀಗೇಬಾಗಿ, ಹಳೇ ಸೀಗೇಬಾಗಿ, ಭದ್ರಾ ಕಾಲೋನಿ, ಸತ್ಯಸಾಯಿ ನಗರ, ಸೈಯ್ಯದ್ ಕಾಲೋನಿ, ಕಣಕಟ್ಟೆ, ವೀರಾಪುರ, ರಾಮನಗರ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಮಾಸಾಶನ ಪಡೆಯಲು ರಂಗಕರ್ಮಿ ಎಚ್.ಬಿ ಉಮೇಶರಾವ್‌ಗೆ ಕಲಾವಿದರ ಒಕ್ಕೂಟ ಸಹಕಾರ

Image
ರಂಗಭೂಮಿಯ ಬೆಳಕು ಸಂಯೋಜನೆಯಲ್ಲಿ ಸುಮಾರು ೪೦ ವರ್ಷಗಳ ಸೇವೆ ಸಲ್ಲಿಸಿರುವ ಭದ್ರಾವತಿ ರಂಗಕರ್ಮಿ ಎಚ್.ಬಿ ಉಮೇಶರಾವ್ ಅವರು ಮಾಸಾಶನ ಪಡೆಯಲು ರಂಗ ಕಲಾವಿದರ ಒಕ್ಕೂಟ ಹೆಚ್ಚಿನ ಸಹಕಾರ ನೀಡುತ್ತಿದ್ದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದೆ.      ಭದ್ರಾವತಿ:  ರಂಗಭೂಮಿಯ ಬೆಳಕು ಸಂಯೋಜನೆಯಲ್ಲಿ ಸುಮಾರು ೪೦ ವರ್ಷಗಳ ಸೇವೆ ಸಲ್ಲಿಸಿರುವ ರಂಗಕರ್ಮಿ ಎಚ್.ಬಿ ಉಮೇಶರಾವ್ ಅವರು ಮಾಸಾಶನ ಪಡೆಯಲು ರಂಗ ಕಲಾವಿದರ ಒಕ್ಕೂಟ ಹೆಚ್ಚಿನ ಸಹಕಾರ ನೀಡುತ್ತಿದ್ದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದೆ.   ಉಮೇಶ್‌ರಾವ್ ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇವರ ನೆರವಿಗೆ ಇದೀಗ ಕಲಾವಿದರ ಒಕ್ಕೂಟ ಮುಂದಾಗಿದೆ. ಕಲಾವಿದರ ಮಾಸಾಶನದ ಅರ್ಜಿ ಸಲ್ಲಿಸುವ ಸಲುವಾಗಿ ರಂಗ ಕಲಾವಿದರ ಒಕ್ಕೂಟವು ಸಂಪೂರ್ಣವಾಗಿ ಸಹಕಾರ ನೀಡಿ ದಾಖಲೆಗಳನ್ನು ಸಿದ್ಧಪಡಿಸಿ ಮಂಗಳವಾರ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಅವರಿಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿರುವ ಸಹಾಯಕ ನಿರ್ದೇಶಕರು ಅರ್ಜಿಯನ್ನು ಆದಷ್ಟು ಬೇಗ ಮುಂದಿನ ಸೂಕ್ತ ಕ್ರಮಕ್ಕಾಗಿ ಕೇಂದ್ರ ಕಚೇರಿಗೆ ಕಳುಹಿಸಿ ಕಲಾವಿದರಿಗೆ ಸಹಕಾರ ನೀಡುವುದಾಗಿ ತಿಳಿಸಿದರು.       ಎಚ್.ಬಿ ಉಮೇಶ್ ರಾವ್,  ರಂಗ ಕಲಾವಿದರ ಒಕ್ಕೂಟದ ಖಜಾಂಚಿ ಕೆ.ಎಸ್ ರವಿಕುಮಾರ್, ಪ್ರಧಾನ ಕಾರ್ಯದರ್...

ಸೆ.೧೦ರಂದು ಕಸಾಪದಿಂದ ದತ್ತಿ ಕಾರ್ಯಕ್ರಮ

Image
ಭದ್ರಾವತಿ : ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಸೆ.೧೦ರ ಗುರುವಾರ ಸಂಜೆ ೫ ಗಂಟೆಗೆ ರೋಟರಿ ಕ್ಲಬ್ ಸಭಾಂಗಣದಲ್ಲಿ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಸುದೇವ ಭೂಪಾಳಂ ದತ್ತಿ ಹಾಗು ಶ್ರೀಮತಿ ಸರ್ವಮಂಗಳಮ್ಮ ಮತ್ತು ಶ್ರೀ ಶಿವಶಂಕರಯ್ಯ ದತ್ತಿ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಎಂ ಸ್ವಾಮಿ ಉದ್ಘಾಟಿಸಲಿದ್ದು, ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎಚ್. ತಿಮ್ಮಪ್ಪ ಅಧ್ಯಕ್ಷತೆವಹಿಸಲಿದ್ದಾರೆ.   ವಸುದೇವ ಭೂಪಾಳಂರವರ ಸಾಹಿತ್ಯ ಅವಲೋಕನ ಕುರಿತು ಶಿವಮೊಗ್ಗ ಹಿರಿಯ ಸಾಹಿತಿ ಆರ್. ರತ್ನಯ್ಯ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಚನ ಗಾಯನ ನಡೆಯಲಿದೆ.  ದತ್ತಿ ದಾನಿಗಳಾದ ವಸುದೇವ ಭೂಪಾಳಂ ಮತ್ತು ಎಮರಿಟಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿ ಉಪಸ್ಥಿತರಿರುವರು. ರೋಟರಿ ಕ್ಲಬ್ ಅಧ್ಯಕ್ಷ ನಿರಂಜನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಸಾಪ ತಾಲೂಕು ಘಟಕದ ಅಧ್ಯಕ್ಷ  ಎಚ್. ತಿಮ್ಮಪ್ಪ ಕೋರಿದ್ದಾರೆ. 

ಸೆ.೮ರಂದು ವಿದ್ಯುತ್ ವ್ಯತ್ಯಯ

Image
     ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯಲ್ಲಿ ಸೆ.೮ರ ಮಂಗಳವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.       ಮಾಧವಾಚಾರ್ ವೃತ್ತ, ಬಸವೇಶ್ವರ ವೃತ್ತ, ಎನ್‌ಎಸ್‌ಟಿ ರಸ್ತೆ, ಸಿ.ಎನ್ ರಸ್ತೆ, ರಂಗಪ್ಪ ವೃತ್ತ, ಮಾಧವ ನಗರ, ಗಾಂಧಿ ವೃತ್ತ, ಭೂತನಗುಡಿ, ಕೋಡಿಹಳ್ಳಿ, ಹೊಸ ಕೋಡಿಹಳ್ಳಿ, ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ರಸ್ತೆ, ಕೋಟೆ ಏರಿಯಾ, ಖಾಜಿ ಮೊಹಲ್ಲಾ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ವೇಳಾಂಗಣಿ ಆರೋಗ್ಯ ಮಾತೆ ವಾರ್ಷಿಕೋತ್ಸವ : ಭವ್ಯ ತೇರಿನ ಮೆರವಣಿಗೆ

Image
ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಭವ್ಯ ಅಲಂಕೃತ ತೇರಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಭದ್ರಾವತಿ : ಹಳೇನಗರ ವ್ಯಾಪ್ತಿಯ ಗಾಂಧಿನಗರದ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಭವ್ಯ ಅಲಂಕೃತ ತೇರಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.     ತೀರ್ಥಹಳ್ಳಿ ಧರ್ಮ ಕೇಂದ್ರದ ಧರ್ಮಗುರುಗಳಾದ ಫಾದರ್ ವೀರೇಶ್ ಮೊರಾಸ್ ತೇರಿನ ಮೆರವಣಿಗೆಗೆ ಚಾಲನೆ ನೀಡಿದರು. ಗಾಂಧಿನಗರ, ಸಂತೆ ಮೈದಾನ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ತರೀಕೆರೆ ರಸ್ತೆ, ಗಾಂಧಿವೃತ್ತ ಮಾರ್ಗವಾಗಿ ದೇವಾಲಯಕ್ಕೆ ಹಿಂದಿರುಗಲಾಯಿತು.     ಭಕ್ತರು ಮೇಣದಬತ್ತಿಗಳನ್ನು ಹಿಡಿದು ಪ್ರಾರ್ಥಿಸುತ್ತಾ ಮೆರವಣಿಗೆಯಲ್ಲಿ ಸಾಗಿಸಿದರು. ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮಗುರು ಫಾದರ್ ಸ್ಟೀವನ್ ಡೇಸಾ, ಧರ್ಮಭಗಿನಿಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.

ಫಿಲ್ಟರ್ ಶೆಡ್‌ನಲ್ಲಿ ಅಕ್ರಮ ಜಾಗ ನೋಂದಣಿ : ನ್ಯಾಯ ಒದಗಿಸಿಕೊಡುವ ಭರವಸೆ

Image
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ  ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಫಿಲ್ಟರ್ ಶೆಡ್‌ಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಸೋಮವಾರ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.       ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ಫಿಲ್ಟರ್ ಶೆಡ್‌ಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಸೋಮವಾರ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.       ಅಕ್ರಮ ಜಾಗ ನೋಂದಣಿಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಹಳ ವರ್ಷಗಳಿಂದ ಅಕ್ರಮ ಜಾಗಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಶಾರದ ಅಪ್ಪಾಜಿಯವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.       ಜೆಡಿಎಸ್ ಪಕ್ಷದ ತಾಲೂಕು ಘಟಕದ ಕಾರ್ಯಾಧ್ಯಕ್ಷ ಉಮೇಶ್, ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಶ್ರೀ ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಬಿ.ಕೆ ಶಿವಕುಮಾರ್‌ಗೆ ಸನ್ಮಾನ

Image
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಭದ್ರಾವತಿ ನಗರದ ಶ್ರೀ ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಬಿ.ಕೆ ಶಿವಕುಮಾರ್ ಅವರನ್ನು ಸೊಸೈಟಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.         ಭದ್ರಾವತಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ನಗರದ ಶ್ರೀ ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಬಿ.ಕೆ ಶಿವಕುಮಾರ್ ಅವರನ್ನು ಸೊಸೈಟಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.       ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರರಾಗಿರುವ ಬಿ.ಕೆ ಶಿವಕುಮಾರ್, ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರು ಹಾಗು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಮತ್ತು ಟಿಎಪಿಸಿಎಂಎಸ್ ನಿರ್ದೇಶಕರು ಸಹ ಆಗಿದ್ದಾರೆ. ಶ್ರೀ ಬೀರೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಇವರನ್ನು ಸನ್ಮಾನಿಸಿ ಸೊಸೈಟಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಂತೆ ಮನವಿ ಮಾಡಲಾಯಿತು.       ಸೊಸೈಟಿ ಉಪಾಧ್ಯಕ್ಷ ರಾಜಶೇಖರ ಉಪ್ಪಾರ, ನಿರ್ದೇಶಕರಾದ ಬಸವಂತಪ್ಪ, ಸುರೇಶ್ ವರ್ಮಾ, ಸೊಸೈಟಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.  

ಬಾಲ್ಯ ವಿವಾಹದ ವಿರುದ್ಧ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ನೇತೃತ್ವದ ಅಭಿಯಾನಕ್ಕೆ ವಿಶ್ವಸಂಸ್ಥೆಯ ಮಾನ್ಯತೆ

Image
ನ.೨೭ರಂದು ಅಂತರರಾಷ್ಟ್ರೀಯ ದಿನ ಘೋಷಣೆ ಆಶ್ರಿತ ಸಂಸ್ಥೆ ಸ್ವಾಗತ : ಎಸ್. ಹನುಮಂತಪ್ಪ  ಭದ್ರಾವತಿ ನಗರದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಶ್ರಿತ.ಸಂಸ್ಥೆಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ  ಸಂಸ್ಥೆಯ ಜಿಲ್ಲಾ ಸಂಯೋಜಕ ಎಸ್. ಹನುಮಂತಪ್ಪ ಮಾತನಾಡಿದರು.        ಭದ್ರಾವತಿ:  ``ಬಾಲ್ಯ ವಿವಾಹ, ಬಾಲ್ಯಾವಸ್ಥೆಯಲ್ಲಿನ ಹಾಗೂ ಬಲವಂತದ ವಿವಾಹಗಳ ನಿರ್ಮೂಲನೆಗಾಗಿ ನ. ೨೭ರಂದು ಅಂತರರಾಷ್ಟ್ರೀಯ ದಿನ'' ಎಂದು ಘೋಷಿಸುವ ವಿಶ್ವಸಂಸ್ಥೆಯ ಐತಿಹಾಸಿಕ ನಿರ್ಧಾರವನ್ನು ಜಿಲ್ಲೆಯಲ್ಲಿ ಬಾಲ್ಯ ವಿವಾಹದ ವಿರುದ್ಧ ತಳಮಟ್ಟದಲ್ಲಿ ಅಭಿಯಾನವನ್ನು ಮುನ್ನಡೆಸುತ್ತಿರುವ ಆಶ್ರಿತ.ಸಂಸ್ಥೆ  ಸ್ವಾಗತಿಸುತ್ತದೆ ಎಂದು ಸಂಸ್ಥೆಯ ಜಿಲ್ಲಾ ಸಂಯೋಜಕ ಎಸ್. ಹನುಮಂತಪ್ಪ ಹೇಳಿದರು.       ಅವರು ನಗರದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.  ಈ ಘೋಷಣೆಯು ದೇಶಾದ್ಯಂತ ಬಾಲ್ಯ ವಿವಾಹವನ್ನು ತಡೆಗಟ್ಟಲು ಸರ್ಕಾರಗಳು ಮತ್ತು ಆಡಳಿತ ವ್ಯವಸ್ಥೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಭಾರತದ ಅತಿದೊಡ್ಡ ಎನ್‌ಜಿಓ ಜಾಲವಾದ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ (ಜೆಆರ್‌ಸಿ) ನಡೆಸಿದ ಅಸಾಧಾರಣ ಪ್ರಯತ್ನಗಳಿಗೆ ...

ಸೆ.೭ರಂದು ವಿದ್ಯುತ್ ವ್ಯತ್ಯಯ

Image
     ಭದ್ರಾವತಿ : ಮೆಸ್ಕಾಂ ಶಿವಮೊಗ್ಗ ೨೨೦ ಕೆವಿ ಎಮ್.ಆರ್.ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ತಾಲೂಕಿನಲ್ಲಿ ಸಂಪರ್ಕಗೊಂಡಿರುವ ೧೧೦ ಕೆವಿ ೩ ಮಾರ್ಗ ಮತ್ತು ಬೇ ಯ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವ ಸಂಬಂಧ ವಿದ್ಯುತ್ ಮಾರ್ಗ ಮುಕ್ತತೆ ಪಡೆಯಲಾಗುವುದರಿಂದ ಜೆ.ಪಿ.ಎಸ್ ಕಾಲೋನಿ ೧೧೦/೩೩//೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಮತ್ತು ೧೧೦/೧೧ ಕೆವಿ ಮಾಚೇನಹಳ್ಳಿ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ.೭ರ ಸೋಮವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.       ನಗರ ಮತ್ತು ಗ್ರಾಮೀಣ ಉಪವಿಭಾಗ ವ್ಯಾಪ್ತಿಗೆ ಒಳಪಡುವ ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣಿ, ಎನ್‌ಟಿಬಿ ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ, ಐ.ಟಿ.ಐ, ಜನ್ನಾಪುರ, ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ. ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಿಕಿ ತಾಂಡ, ಹೊಳೆ ಗ...

ಎಂಪಿಎಂ ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಎಚ್‌ಪಿಸಿಎಲ್‌ಗೆ ವಹಿಸಿಕೊಟ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ

Image
ಹೆಗಡೆ, ಅರಸು ಜನ್ಮದಿನಾಚರಣೆ, ಸ್ವಚ್ಛತಾ ಕಾರ್ಯ, ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಆರ್. ವೇಣುಗೋಪಾಲ್ ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್)ಯ ೩ನೇ ಕ್ರಾಸ್‌ನಲ್ಲಿರುವ ಉದ್ಯಾನವನದಲ್ಲಿ ಭಾನುವಾರ ಶ್ರೀ ಡಿ. ದೇವರಾಜ ಅರಸ್ ಅಮಹಿಂದ(ಅಲ್ಪಸಂಖ್ಯಾತ, ಮಹಿಳಾ, ಹಿಂದುಳಿದ ಮತ್ತು ದಲಿತ ವರ್ಗಗಳು) ಮತ್ತು ಶೋಷಿತ ವರ್ಗಗಳ ಒಕ್ಕೂಟದ ಉದ್ಘಾಟನೆ, ಸ್ವಚ್ಛತಾ ಕಾರ್ಯ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಹಾಗು ರಾಮಕೃಷ್ಣ ಹೆಗಡೆಯವರ ಜನ್ಮ ದಿನಾಚರಣೆ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.       ಭದ್ರಾವತಿ : ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಹಿಂದೂಸ್ತಾನ್ ಪೇಪರ್ ಕಾರ್ಪೋರೇಷನ್ ಲಿಮಿಟೆಡ್(ಎಚ್‌ಪಿಸಿಎಲ್)ಗೆ ವಹಿಸುವಂತೆ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಶ್ರೀ ಡಿ. ದೇವರಾಜ ಅರಸ್ ಅಮಹಿಂದ ಮತ್ತು ಶೋಷಿತ ವರ್ಗಗಳ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಆರ್. ವೇಣುಗೋಪಾಲ್ ಒತ್ತಾಯಿಸಿದ್ದಾರೆ.       ಅವರು ಭಾನುವಾರ ನಗರಸಭೆ ವಾರ್ಡ್ ನಂ.೨೯ರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್)ಯ ೩ನೇ ಕ್ರಾಸ್‌ನಲ್ಲಿರುವ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾ...

ಜಾನಪದ ಕಲೆಗಳನ್ನು ಮೈಗೊಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಿ : ಡಿ. ಮಂಜುನಾಥ್

Image
 ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ಭದ್ರಾವತಿ ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಉದ್ಯಮಿ ಬಿ.ಕೆ ಜಗನ್ನಾಥ್, ಡಿ. ಮಂಜುನಾಥ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಜಾನಪದ ಕಲೆಗಳನ್ನು ಮೈಗೂಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಕಲೆ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಾನಪದ ಪರಿಷತ್ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.       ಅವರು ಶನಿವಾರ ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.       ಜಾನಪದ ಕಲೆಗಳು ತಮ್ಮದೇ ಆದ ವಿಶಿಷ್ಟತೆಯನ್ನು ಹೊಂದಿವೆ. ಪ್ರತಿಯೊಂದು ಕಲೆಗೂ ಅದರದೇ ಆದ ಮಹತ್ವವಿದೆ. ಇವುಗಳ ಕುರಿತು ಪ್ರತಿಯೊಬ್ಬರು ಸಮಗ್ರವಾಗಿ ಅಧ್ಯಯನ ನಡೆಸಿ ತಿಳಿದುಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆಗಳ ಸಮಗ್ರ ಮಾಹಿತಿಯನ್ನು ಕರ್ನಾಟಕ ಜಾನಪದ ಪರಿಷತ್ ಸಂಗ್ರಹಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಜಿಲ್ಲಾ ಮತ್ತು ತಾಲೂಕು ಶ...

ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ : ಡಾ. ಬಿ.ಜಿ ಧನಂಜಯ

Image
ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಬಿ.ಕೆ ಮೋಹನ್, ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಶಿಕ್ಷಣ ಎಂಬುದು ಒಂದು ಅದ್ಬುತವಾದ ಶಕ್ತಿಯಾಗಿದ್ದು, ಇದರ ಮೂಲಕ ನಾವು ಉತ್ತಮ ಸಮಾಜ ರೂಪಿಸಿಕೊಳ್ಳಲು ಸಾಧ್ಯ ಎಂದು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.       ಅವರು ಶನಿವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.       ಸಮಾಜವನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಶಿಕ್ಷಕರ ಕೊಡುಗೆ ಅಪಾರವಾಗಿದ್ದು, ಪ್ರತಿಯೊಬ್ಬರು ಶಿಕ್ಷಣದ ಮಹತ್ವ ಅರಿತುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಂಡಾಗ ಮಾತ್ರ ಶಿಕ್ಷಕ ವೃತ್ತಿಯ ಶ್ರಮ ಸಾರ್ಥಕವಾಗುತ್ತದೆ. ಶಿಕ್ಷಕರು ಸಹ ತಮ್ಮ ಜವಾಬ್ದಾರಿ ಅರಿತುಕೊಂಡು ಕರ್ತವ್ಯ ನಿರ್ವಹಿಸಬೇಕೆಂದರು.   ...

ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Image
ಎಂ.ಟಿ ಲಕ್ಷ್ಮೀಶ (ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ)      ಭದ್ರಾವತಿ : ತಾಲೂಕಿನ ಎಲ್. ಉಮಾದೇವಿ, ಎಂ.ಟಿ ಲಕ್ಷ್ಮೀಶ ಮತ್ತು ಡಿ.ಆರ್ ರಂಗರಾಜು ಸೇರಿದಂತೆ ೩ ಶಿಕ್ಷಕರಿಗೆ ಈ ಬಾರಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಶಿಕ್ಷಕ ವರ್ಗದಲ್ಲಿ ಸಂತಸವನ್ನುಂಟು ಮಾಡಿದೆ.  ಎಂ.ಟಿ ಲಕ್ಷ್ಮೀಶ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ      ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ(ಜಯಶ್ರೀ ಸರ್ಕಲ್ ಕ್ಲಸ್ಟರ್) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಟಿ ಲಕ್ಷ್ಮೀಶ ಅವರಿಗೆ ಈ ಬಾರಿ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.       ಧಾರವಾಡದಲ್ಲಿ ೨೦೧೬ರಲ್ಲಿ ವೃತ್ತಿ ಆರಂಭಿಸಿದ ಇವರು ನಂತರ ತಾಲೂಕಿನ ಬಿಳಿಕಿ ತಾಂಡ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕಳೆದ ೨ ವರ್ಷಗಳಿಂದ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವೃತ್ತಿ ನಿರ್ವಹಿಸುತ್ತಿದ್ದಾರೆ. ಇವರ ವೃತ್ತಿಯಲ್ಲಿನ ಹಲವು ಸಾಧನೆಗಳನ್ನು ಪರಿಗಣಿಸಿ ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.       ಸೆ.೫ರ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಲ...

ವಿವಿಧೆಡೆ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ : ಶ್ರೀ ಕೃಷ್ಣ-ರಾಧೆ ವೇಷದಲ್ಲಿ ಕಣ್ಮನ ಸೆಳೆದ ಪುಟಾಣಿ ಮಕ್ಕಳು

Image
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಚರಿಸಲಾಯಿತು.       ಭದ್ರಾವತಿ: ನಗರದ ವಿವಿಧೆಡೆ ತಾಲೂಕು ಗೊಲ್ಲ ಯಾದವ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲಾಯಿತು.       ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಚರಿಸಲಾಯಿತು. ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಶ್ರೀ ಕೃಷ್ಣನಿಗೆ ತೊಟ್ಟಿಲು ಸೇವೆ ಕೈಗೊಳ್ಳಲಾಗಿತ್ತು. ತೀರ್ಥಪ್ರಸಾದ ವಿನಿಯೋಗ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನೆರವೇರಿದವು.       ಅರ್ಚಕರಾದ ರಮೇಶ್ ಭಟ್ ಅರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. ತಾಲೂಕು ಗೊಲ್ಲ ಯಾದವ ಸಂಘದ ಅಧ್ಯಕ್ಷರಾದ ವೆಂಕಟೇಶಪ್ಪ ಹಾಗು ಪದಾಧಿಕಾರಿಗಳು, ಸೇವಾಕರ್ತರು, ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಶ್ರೀ ಕೃಷ್ಣನ ದರ್ಶನ ಪಡೆದರು. ವಿಶೇಷವಾಗಿ ಭಕ್ತರಿಗೆ ಲಾಡು ವಿತರಿಸಲಾಯಿತು.  ಭದ್ರಾವತಿ ತಾಲೂಕು ...

ಹಿರಿಯ ಫೈಲ್ವಾನ್ ರುದ್ರಪ್ಪ ನಿಧನ

Image
ರುದ್ರಪ್ಪ       ಭದ್ರಾವತಿ : ಹಳೇನಗರ ಕೋಟೆ ಏರಿಯಾ ಶ್ರೀ ಬಸವಣ್ಣ ದೇವಸ್ಥಾನ ಸಮೀಪದ ಶ್ರೀ ಹಿಂದೂ ಕೋಟೆ ಗರಡಿ ಹಿರಿಯ ಫೈಲ್ವಾನ್ ರುದ್ರಪ್ಪ(೯೩) ಗುರುವಾರ ನಿಧನ ಹೊಂದಿದರು.       ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ರುದ್ರಪ್ಪರವರು ಹಲವಾರು ಪ್ರಶಸ್ತಿ, ಬಿರುದುಗಳನ್ನು ಪಡೆದುಕೊಂಡಿದ್ದರು. ಯುವಕರಿಗೆ ಕುಸ್ತಿ ತರಬೇತಿ ನೀಡುವ ಮೂಲಕ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಅವರ ಪ್ರತಿಭೆ ಅನಾವರಣಗೊಳಿಸಲು ಕಾರಣಕರ್ತರಾಗಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ಹಳೇನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.        ಇವರ ನಿಧನಕ್ಕೆ ಹಿರಿಯ ಫೈಲ್ವಾನರಾದ ಕೃಷ್ಣಪ್ಪ, ನಂಜುಂಡಪ್ಪ, ಚನ್ನಬಸಪ್ಪ, ಬಿ.ಎಸ್ ನಾರಾಯಣಪ್ಪ ಮತ್ತು ನರಸಿಂಹಾಚಾರ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.     

ಸಹಕಾರ ಮಹಾಮಂಡಳಿ ನೂತನ ನಿರ್ದೇಶಕರಿಂದ ಮುಖ್ಯಮಂತ್ರಿಗೆ ಸನ್ಮಾನ

Image
ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ ಶಿವಕುಮಾರ್  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ನಿರ್ದೇಶಕರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸನ್ಮಾನಿಸುವ ಮೂಲಕ ಮಂಡಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು.     ಭದ್ರಾವತಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ನಿರ್ದೇಶಕರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸನ್ಮಾನಿಸುವ ಮೂಲಕ ಮಂಡಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು.  ಮಂಡಳಿ ನೂತನ ನಿರ್ದೇಶಕರಾದ ಶಾಸಕ ಜಿ.ಟಿ ದೇವೇಗೌಡ, ವೆಂಕಟರಾವ್ ನಾಡಗೌಡ, ಜಗದೀರ್ಶ ಎಂ. ಕವಟಗಿಮಠ, ಬಿ.ಕೆ ಶಿವಕುಮಾರ್, ಎಚ್.ಎನ್ ಅಶೋಕ್, ಬಿಸಿ ಲೋಕಪ್ಪಗೌಡ, ಜೆ.ಎಂ ಪ್ರಸಾದ್, ಅಭಿಷೇಕ ಆರ್. ಪಾಟೀಲ, ಬಿ. ಶಶಿಕುಮಾರ್ ರೈ, ಕೃಷ್ಣಗೌಡ ಬಿ. ಪಾಟೀಲ, ವಿಶ್ವನಾಥರೆಡ್ಡಿ ಎಸ್. ದರ್ಶನಾಪೂರ, ಕಾಶಿಲಿಂಗ ಬಿ. ಹುಡೇದ, ಕೆ. ಸುನೀಲ್ ಮತ್ತು ಕೆ.ಪಿ ಚನ್ನಭೈರೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ನೂತನ ಅಧ್ಯಕ್ಷರು-ಉಪಾಧ್ಯಕ್ಷರ ಆಯ್ಕೆ:  ಶುಕ್ರವಾರ ನಡೆದ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಪುನಃ ಶಾಸಕ ಜಿ.ಟಿ ದೇವೇಗೌಡ ಆಯ್ಕೆಯಾಗಿದ್ದು, ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.  ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಸಹೋದರ ಹಾಗು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್...

ಶ್ರಾವಣ ಮಾಸ ಭಕ್ತಿ, ಪ್ರಕೃತಿ ಸೌಂದರ್ಯದ ಮಾಸ : ಗೀತಾ ರಾಜಕುಮಾರ್

Image
ವೀರಶೈವ ಲಿಂಗಾಯಿತ ಮಹಿಳಾ ಸಮಾಜದಿಂದ ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶ್ರಾವಣ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ : ವೀರಶೈವ ಲಿಂಗಾಯಿತ ಮಹಿಳಾ ಸಮಾಜದಿಂದ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶ್ರಾವಣ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.           ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಮಾತನಾಡಿ, ಶ್ರಾವಣ ಮಾಸ ಭಕ್ತಿ ಮತ್ತು ಪ್ರಕೃತಿ ಸೌಂದರ್ಯದ ಮಾಸ. ರೈತರು ಮಳೆಯೊಂದಿಗೆ ತಮ್ಮ ಚಟುವಟಿಕೆಗಳನ್ನು ಆರಂಭಿಸುವ ಸಮಯ ಇದ್ದಾಗಿದ್ದು, ಎಲ್ಲೆಡೆ ಹಸಿರು ಕಂಗೊಳಿಸುತ್ತಿರುತ್ತದೆ. ಮತ್ತೊಂದೆಡೆ ಹಬ್ಬಗಳ ಮಾಸ ಇದಾಗಿದ್ದು, ಧಾರ್ಮಿಕ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತವೆ. ನಮ್ಮ ಸಂಸ್ಕೃತಿಯಲ್ಲಿ ಶ್ರಾವಣ ಮಾಸ ತನ್ನದೇ ಮಹತ್ವ ಹೊಂದಿದೆ ಎಂದರು.       ಮಹಿಳೆಯರು ಇನ್ನೂ ಹೆಚ್ಚು ಸಂಘಟಿತರಾಗಿ ಕಾರ್ಯ ಚಟುವಟಿಕೆಗಳನ್ನು ಆಯೋಜಿಸುವ ಜೊತೆಗೆ ಸಮಾಜದ ಬಲವರ್ಧನೆಗೆ ಮುಂದಾಗಬೇಕು. ಸದಸ್ಯರ ಸಂಖ್ಯೆ ಹೆಚ್ಚಿಸಿಕೊಳ್ಳಬೇಕೆಂದರು.       ವಿಜಯ ಜಗನ್ನಾಥ್,  ಕುಸುಮಾ ತೀರ್ಥಯ್ಯ, ಗೀತಾ ನಾಗರಾಜ್  ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಗರತ್ನವಾಗೀಶ್ ಕೋಠಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಪರಿಮಳ ರೋಹಿತ್ ಸ್...

ಮಹಿಳೆಯರ ಸಬಲೀಕರಣ, ಕೌಲಶ್ಯ ಅಭಿವೃದ್ಧಿಗೆ ವಿಐಎಸ್‌ಎಲ್ ಸದಾ ಬದ್ದ : ಅನೂಪ್ ಕುಮಾರ್

Image
ಇಸ್ಪಾತ್ ಮಹಿಳಾ ಸಮಾಜದಲ್ಲಿ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಕೇಂದ್ರ ಆರಂಭ  ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ಸೈಲ್-ವಿಐಎಎಲ್) ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್.ಆರ್) ಅಡಿಯಲ್ಲಿಶಿವಮೊಗ್ಗ ಚೈತನ್ಯ ಗ್ರಾಮೀಣಾಭಿವೃದ್ಧಿ ಸೊಸೈಟಿ ಸಹಯೋಗದೊಂದಿಗೆ ನಗರದ ಇಸ್ಪಾತ್ ಮಹಿಳಾ ಸಮಾಜದ ಆವರಣದಲ್ಲಿ ಆರಂಭಿಸಲಾಗಿರುವ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಕೇಂದ್ರ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಉದ್ಘಾಟಿಸಿ ಮಾತಾಡಿದರು.       ಭದ್ರಾವತಿ:  ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ಸೈಲ್-ವಿಐಎಎಲ್) ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್.ಆರ್) ಅಡಿಯಲ್ಲಿ ಮಹಿಳಾ ಸಬಲೀಕರಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶ ಹೊಂದಿದ್ದು, ಈ ನಿಟ್ಟಿನಲ್ಲಿ ನಿರಂತರವಾಗಿ ತನ್ನ ಬದ್ಧತೆ ಕಾಯ್ದುಕೊಂಡು ಬಂದಿದೆ ಎಂದು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಹೇಳಿದರು.       ಕಾರ್ಖಾನೆಯ ಒಡಂಬಡಿಕೆಯ ಪಾಲುದಾರ ಸಂಸ್ಥೆ ಶಿವಮೊಗ್ಗ ಚೈತನ್ಯ ಗ್ರಾಮೀಣಾಭಿವೃದ್ಧಿ ಸೊಸೈಟಿ ಸಹಯೋಗದೊಂದಿಗೆ ನಗರದ ಇಸ್ಪಾತ್ ಮಹಿಳಾ ಸಮಾಜದ ಆವರಣದಲ್ಲಿ ಆರಂಭಿಸಲಾಗಿರುವ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.       ...

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದಲ್ಲಿ ಅಡಗಿ ಕುಳಿತ್ತಿದ್ದ ರೌಡಿಶೀಟರ್ !

Image
ಸಿನಿಮೀಯ ರೀತಿ ಕಾರ್ಯಾಚರಣೆ ನಡೆಸಿ ಬಂಧಿಸಿದ ನ್ಯೂಟೌನ್ ಠಾಣೆ ಪೊಲೀಸರು ಪೊಲೀಸರಿಂದ ತಪ್ಪಿಸಿಕೊಳ್ಳಲು ಸುಮಾರು ಅರ್ಧ ಗಂಟೆ ಕಾಲ ಕೊಳದಲ್ಲಿ ಗಿಡಗಳ ಮಧ್ಯೆ ಅಡಗಿ ಕುಳಿತ್ತಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಬಂಧಿಸಿರುವ ಘಟನೆ  ಭದ್ರಾವತಿಯಲ್ಲಿ ನಡೆದಿದೆ.       ಭದ್ರಾವತಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಸುಮಾರು ಅರ್ಧ ಗಂಟೆ ಕಾಲ ಕೊಳದಲ್ಲಿ ಗಿಡಗಳ ಮಧ್ಯೆ ಅಡಗಿ ಕುಳಿತ್ತಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಬಂಧಿಸಿರುವ ಘಟನೆ ನಡೆದಿದೆ.       ಬಂಧನದ ಆದೇಶದೊಂದಿಗೆ ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿಯಲ್ಲಿ ರೌಡಿಶೀಟರ್ ದಿಲೀಪನನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಕೊಲೆ, ಕಳ್ಳತನ ಸೇರಿದಂತೆ ೧೬ ಪ್ರಕರಣಗಳಲ್ಲಿ ಆರೋಪಿಯಾಗಿರುವ  ರೌಡಿಶೀಟರ್ ದಿಲೀಪನ ಬಂಧನಕ್ಕೆ ನ್ಯಾಯಾಲಯ ೩ ಬಾರಿ ಬಂಧನ ಆದೇಶ ಜಾರಿ ಮಾಡಿತ್ತು. ಆದರೂ ಈತ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಬುಧವಾರ ಖಚಿತ ಮಾಹಿತಿ ಮೇರೆಗೆ ನ್ಯೂಟೌನ್ ಠಾಣೆ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ. ಪೊಲೀಸರು ಬರುವ ಬಗ್ಗೆ ಮಾಹಿತಿ ತಿಳಿದು ಮನೆಯಿಂದ ದಿಲೀಪ್ ಪರಾರಿಯಾಗಿದ್ದಾನೆ.       ಪೊಲೀಸರು ಸುತ್ತಮುತ್ತ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಕೊನೆಗೆ ಭಂಡಾರಹಳ್ಳಿ ಕೊಳ ಬಳಿ ದಿಲೀಪ್ ಹೋಗಿರುವ ಬಗ್ಗೆ ...