Posts

ಕನ್ನಡನಾಡು, ಕನ್ನಡಿಗರ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಹೊಂದಿದ್ದ ಡಾ. ಎಸ್. ಜಾನಕಿ

Image
ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದಿಂದ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ನುಡಿ ಗೀತಾ ನಮನ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಉದ್ಘಾಟಿಸಿದರು.       ಭದ್ರಾವತಿ: ಖ್ಯಾತ ಗಾಯಕಿ ದಿವಂಗತ ಡಾ. ಎಸ್. ಜಾನಕಿ ಅವರು ಕನ್ನಡನಾಡು, ಕನ್ನಡಿಗರ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಹೊಂದಿದ್ದರು. ಅಲ್ಲದೆ ಈ ನಾಡಿನ ಮಣ್ಣಿನಲ್ಲಿಯೇ ಮಣ್ಣಾದರು ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.       ಅವರು ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದಿಂದ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ನುಡಿ ಗೀತಾ ನಮನ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.       ಡಾ. ಎಸ್. ಜಾನಕಿಯವರು ತಮ್ಮ ಸುಮಧುರವಾದ ಕಂಠದ ಮೂಲಕ ದೇಶಾದ್ಯಂತ ಮನೆಮಾತಾಗಿದ್ದರು. ವಿಶೇಷವಾಗಿ ಕನ್ನಡನಾಡು, ಕನ್ನಡಿಗರ ಬಗ್ಗೆ ಪ್ರೀತಿ, ಅಭಿಮಾನ ಹೊಂದುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಈ ನಾಡಿನ ಪ್ರತಿಯೊಬ್ಬರು ಇವರ ಸ್ಮರಣೆ ಮಾಡಬೇಕೆಂದರು.       ಉದ್ಯಮಿ ಬಿ.ಕೆ ಜಗನ್ನಾಥ್, ಡಾ. ಎಸ್. ಜಾನಕಿಯವರ ಹಲವು ವಿಷಯಗಳ ಕುರ...

ಸಂಚಾರಿ ನಿಯಮ ಉಲ್ಲಂಘನೆ : ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ

Image
ಭದ್ರಾವತಿ ನಗರದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮೂಲಕ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ಸಂಖ್ಯೆ ಫಲಕ(ನಂಬರ್ ಫ್ಲೇಟ್) ಹೊಂದಿಲ್ಲದ ಹಾಗು ದೋಷಪೂರಿತ ಸೈಲೆನ್ಸರ್ ಹೊಂದಿರುವ ಸುಮಾರು ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.       ಭದ್ರಾವತಿ : ನಗರದಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮೂಲಕ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ಸಂಖ್ಯೆ ಫಲಕ(ನಂಬರ್ ಫ್ಲೇಟ್) ಹೊಂದಿಲ್ಲದ ಹಾಗು ದೋಷಪೂರಿತ ಸೈಲೆನ್ಸರ್ ಹೊಂದಿರುವ ಸುಮಾರು ೩೫ ದ್ವಿಚಕ್ರ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.       ಪೊಲೀಸ್ ನಗರ ವೃತ್ತ ನಿರೀಕ್ಷಕಿ ನಾಗಮ್ಮರವರ ನೇತೃತ್ವದಲ್ಲಿ ಸಂಚಾರಿ ಠಾಣೆಯ ಉಪ ನಿರೀಕ್ಷಕರಾದ ಚಂದ್ರಶೇಖರ ನಾಯ್ಕ ಹಾಗು ರಾಜೇಶ್ ಸಂಗೊಳ್ಳಿ ಮತ್ತು ಸಿಬ್ಬಂದಿಗಳು ವಿಶೇಷ ಕಾರ್ಯಚರಣೆ ನಡೆಸಿದ್ದು, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ವಾಹನ ಚಾಲಕರು ಮತ್ತು ಮಾಲೀಕರ ವಾಹನ ದಾಖಲಾತಿಗಳನ್ನು ಪರಿಶೀಲಿಸಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.       ಇತ್ತೀಚಿನ ವರ್ಷಗಳಲ್ಲಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಅಲ್ಲದೆ ಅಪಘಾತ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯಿಂದ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಾಹನ ಚಾಲಕರು...

ಬೃಹತ್ ರಕ್ತದಾನ ಶಿಬಿರ ಆಯೋಜನೆ : ಪತ್ರಕರ್ತರ ಸಂಘದ ಕಾರ್ಯಕ್ಕೆ ಶ್ಲಾಘನೆ

Image
ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ ಆರಂಭಕ್ಕೂ ಮೊದಲು ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹಾಗು ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ರಕ್ತದಾನ ಮಾಡಿದರು.       ಭದ್ರಾವತಿ : ಸರ್ಕಾರಿ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಿ ಯಶಸ್ವಿಗೊಳಿಸುವ ಮೂಲಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ ಇತರರಿಗೆ ಮಾದರಿಯಾಗಿದೆ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.       ಅವರು ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.       ಪತ್ರಕರ್ತರ ಬದ್ದತೆ ಹಾಗು ಸಾಮಾಜಿಕ ಕಳಕಳಿಯನ್ನು ಪ್ರಶಂಸಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಪತ್ರಕರ್ತರು ಕೈಗೊಳ್ಳುವ ಕಾರ್ಯಕ್ರಮಗಳಿಗೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದಕ್ಕೂ ಮೊದಲು ರಕ್ತದಾನ ಮಾಡುವ ಮೂಲಕ ಯುವ ಸಮುದಾಯಕ್ಕೆ ರಕ್ತದಾನ...

ಎಸ್ಐಆರ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಗೆ ನಾಯಿ ಕಡಿತ

Image
ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇನಗರದ ಖಾಜಿಮೊಹಲ್ಲಾ-ಕೋಟೆ ಏರಿಯಾ ಭಾಗದಲ್ಲಿ ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ತಾಲ್ಲೂಕು  ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡರು . ಭದ್ರಾವತಿ:    ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇನಗರದ ಖಾಜಿಮೊಹಲ್ಲಾ-ಕೋಟೆ ಏರಿಯಾ ಭಾಗದಲ್ಲಿ ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ.  ನಗರಸಭೆ 5ನೇ ವಾರ್ಡಿನ ಖಾಜಿಮೊಹಲ್ಲಾ-ಕೋಟೆ ಏರಿಯಾ 3ನೇ ತಿರುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತಗಟ್ಟೆ ಅಧಿಕಾರಿ ರಹಮತುಲ್ಲಾ ಅವರ ಕಾಲಿಗೆ ಮನೆಯೊಂದರ ನಾಯಿ ಕಚ್ಚಿದ್ದು,  ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಇವರು ತಕ್ಷಣ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.       ಮಾಹಿತಿ ತಿಳಿದ ತಕ್ಷಣ ಉಪತಹಸೀಲ್ದಾರ್ ಮಂಜಾನಾಯ್ಕರವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು. ಸಾರ್ವಜನಿಕರು ಇತರರ ಮೇಲೆ ದಾಳಿ ಮಾಡುವ ತಮ್ಮ ಸಾಕು ನಾಯಿಗಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. 

ಗಾಣಿಗ ಸಂಘದ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ

Image
ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಟಿ. ವೆಂಕಟೇಶ್ ಆಗ್ರಹ  ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಗಾಣಿಗರ ಸಂಘ ಪ್ರಮುಖರು ಮಾತನಾಡಿದರು.               ಭದ್ರಾವತಿ: ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ರಾಜಕಾರಣದಲ್ಲಿ ಹೆಚ್ಚಿನ ಅನುಭವ ಹೊಂದಿರುವ ಗಾಣಿಗ ಸಮಾಜದ ಹಿರಿಯರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಗಾಣಿಗರ ಸಂಘ ಆಗ್ರಹಿಸಿದೆ.       ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಟಿ. ವೆಂಕಟೇಶ್, ಸರ್ವ ಜನಾಂಗವನ್ನು ಪ್ರೀತಿಸುವ ಜೊತೆಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿರುವ, ಅಭಿವೃದ್ಧಿ ಹರಿಗಾರರಾಗಿರುವ ಗಾಣಿಗರ ಸಮಾಜದ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.       ಸಂಘದ ಇನ್ನಿತರ ಪದಾಧಿಕಾರಿಗಳು, ಪ್ರಮುಖರು ಮಾತನಾಡಿ, ಕ್ಷೇತ್ರದಲ್ಲಿ ಸುಮಾರು ೩೦೦೦ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ೭೫೦ ಕುಟುಂಬಗಳಿವೆ. ಈ ಪೈಕಿ ಸಂಘದಲ್ಲಿ ೧೬೦೦ ಜನ ಸದಸ್ಯರಿದ್ದಾರೆ. ಕಳೆದ ೧೪ ವರ್ಷಗಳಿಂದ ಬಿ.ಕೆ ಸಂಗಮೇಶ್ವರ್ ಅವರು ಸಂಘದ ಗೌರವಾಧ್ಯಕ್ಷರಾಗಿ ಗಾ...

೧೦ ಸಾವಿರು ರು. ಲಂಚ ಸ್ವೀಕರಿಸುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

Image
20 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಮದೇವ್  ಭದ್ರಾವತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ನಾಮದೇವ್.       ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.       ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಸಿ. ಮೇಘರಾಜ್ ಅವರು ತಮ್ಮ ಪುತ್ರಿ ದೀಕ್ಷಾ ಅವರನ್ನು ವಸತಿ ಶಾಲೆಯ ೭ನೇ ತರಗತಿಗೆ ದಾಖಲಿಸಲು ಪ್ರಾಂಶುಪಾಲರನ್ನು ಸಂಪರ್ಕಿಸಿದ್ದರು. ಈ ವೇಳೆ ಶಾಲೆಗೆ ಡ್ರಮ್ ಸೆಟ್ ಖರೀದಿಸುವ ನೆಪವೊಡ್ಡಿದ ಪ್ರಾಂಶುಪಾಲ ನಾಮದೇವ್ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ೨೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.      ಈ ಸಂಬಂಧ ಮೇಘರಾಜ್ ಅವರು ಜು. ೧೮ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ಪ್ರಾಂಶುಪಾಲನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-೧೯೮೮ (ತಿದ್ದುಪಡಿ-೨೦೧೮)ರ ಕಲಂ ೭(೩) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ...

ದೊಣಬಘಟ್ಟ, ಬಿಳಿಕಿ ಗ್ರಾಮ ಪಂಚಾಯಿತಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಡಿಪಿಆರ್

Image
ಸೂಕ್ತ ಕ್ರಮ ಕೈಗೊಳ್ಳಲು ಕುಡಿಯುವ ನೀರು, ನೈರ್ಮಲ್ಯ ಇಲಾಖೆಗೆ ಮನವಿ       ಭದ್ರಾವತಿ : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಣಬಘಟ್ಟ ಹಾಗು ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಸಂಬಂಧ ಕಾಮಗಾರಿ ಕೈಗೊಳ್ಳಲು ಅಂದಾಜು ಪಟ್ಟಿ(ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆ ಗುರುತಿಸಲು ಪ್ರಸ್ತಾವನೆ ಸಲ್ಲಿಕೆಯಾಗಿರುವ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಭಾರ ಪ್ರಧಾನ ಅಭಿಯಂತರರಾದ ಎ. ಸುನಂದ ಅವರಿಗೆ ನಗರದ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.       ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪ್ರಸ್ತುತ ಬಿಳಿಕಿ ಕೆರೆಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಕೆರೆಯಲ್ಲಿ ಜಡ್ಡು ವಿಪರೀತ ಪ್ರಮಾಣದಲ್ಲಿ ಬೆಳೆದಿರುವುದರಿಂದ, ಮೀನು ಸಾಕಾಣಿಕೆ ಮಾಡುತ್ತಿರುವುದರಿಂದ ಹಾಗೂ ವ್ಯವಸಾಯಕ್ಕೆ ಬಳಸಲಾದ ರಾಸಾಯನಿಕ ಗೊಬ್ಬರ, ಕೀಟನಾಶಕಗಳು, ಕೆರೆಯ ನೀರಲ್ಲಿ ಸೇರ್ಪಡೆಯಾಗುತ್ತಿರುವುದರಿಂದ, ಸತ್ತ ಪ್ರಾಣಿಗಳು ಕೆರೆಯಲ್ಲಿ ಕಂಡು ಬರುತ್ತಿರುವುದರಿಂದ ಕೆರೆಯ ನೀರು ಕುಡಿಯಲು ಯೋಗ್ಯವಾಗಿಲ್ಲ.       ಗ್ರಾಮಸ್ಥರಿಗೆ  ಕುಡಿಯಲ...

ಸುದ್ದಿಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪತ್ರಕರ್ತರು ಗಮನ ಹರಿಸಿ : ಸಂಸದ ಬಿ.ವೈ ರಾಘವೇಂದ್ರ

Image
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಭದ್ರಾವತಿ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಆಶಾಕಿರಣ ಮಾದಕ ಮತ್ತು ಮದ್ಯ ವ್ಯಸನಗಳ ಸಮಗ್ರ ಪುನರ್ವತಿ ಕೇಂದ್ರದ ಫಾ. ಪ್ರಕಾಶ್ ಕೊಲಾಕೊ, ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಗದ್ದುಗೆ ಮಠದ ತಿಪ್ಪೇಸ್ವಾಮಿ(ರುದ್ರೇಶ ಶಾಸ್ತ್ರಿ) ಮತ್ತು ಜಮಾಹತೆ ಇಸ್ಲಾಮಿ-ಇ-ಹಿಂದ್ ಅಧ್ಯಕ್ಷ ಸುಲ್ತಾನ್ ಬೇಗ್ ಸರ್ವಧರ್ಮಿಯರು ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿದರು.       ಭದ್ರಾವತಿ: ವೇಗವಾಗಿ ಸುದ್ದಿ ನೀಡುವುದ್ದಕ್ಕಿಂತ ಸುದ್ದಿಯ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪತ್ರಕರ್ತರು ಗಮನ ಹರಿಸಬೇಕು. ವಸ್ತುನಿಷ್ಠ ಹಾಗು ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವ ಗಟ್ಟಿಗೊಳಿಸುತ್ತದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.      ಅವರು ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾದಿನಾಚರಣೆ ಉದ್ಘಾಟಿಸಿ ಮಾತನಾಡಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ...

ಮಂಗಳೂರು ಬಿ.ಸಿ ರೋಡ್ ಯುವತಿ ಹತ್ಯೆ ಪ್ರಕರಣ :

Image
ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ   ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದಿರುವ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಖಂಡಿಸಿ ಆರೋಪಿ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಮಹಿಳೆಯರ ಸುರಕ್ಷತೆ ಬಲಪಡಿಸುವಂತೆ ಆಗ್ರಹಿಸಿ ಭದ್ರಾವತಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಮಹಿಳಾ ಘಟಕದಿಂದ ಶನಿವಾರ ತಹಸೀಲ್ದಾರ್ ಪ್ರದೀಪ್ ದೇವಗಿರಿರವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.            ಭದ್ರಾವತಿ : ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದಿರುವ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಖಂಡಿಸಿ ಆರೋಪಿ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಮಹಿಳೆಯರ ಸುರಕ್ಷತೆ ಬಲಪಡಿಸುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಮಹಿಳಾ ಘಟಕದಿಂದ ಶನಿವಾರ ತಹಸೀಲ್ದಾರ್ ಪ್ರದೀಪ್ ದೇವಗಿರಿರವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು.       ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಅತ್ಯಂತ ದುಃಖಕರ ಹಾಗೂ ಖಂಡನೀಯವಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ಆತಂಕವನ್ನುಂಟುಮಾಡುತ್ತಿದ್ದು, ಅಲ್ಲದೆ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಹಿಳೆಯರ...

`ಮ್ಯಾರಥ್ಯಾನ್ ಓಟ'ದ ಮೂಲಕ ರಕ್ತದಾನ ಶಿಬಿರ ಕುರಿತು ಜಾಗೃತಿ

Image
ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.೧೯ರ ಭಾನುವಾರ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿಯಾಗಿ ಶನಿವಾರ ಬೆಳಿಗ್ಗೆ ಲಯನ್ಸ್ ಕ್ಲಬ್ ವತಿಯಿಂದ ಮ್ಯಾರಥಾನ್ ಓಟ ಆಯೋಜಿಸಲಾಗಿತ್ತು.       ಭದ್ರಾವತಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.೧೯ರ ಭಾನುವಾರ ಹಮ್ಮಿಕೊಳ್ಳಲಾಗಿರುವ ಬೃಹತ್ ರಕ್ತದಾನ ಶಿಬಿರದ ಪೂರ್ವಭಾವಿಯಾಗಿ ಶನಿವಾರ ಬೆಳಿಗ್ಗೆ ಲಯನ್ಸ್ ಕ್ಲಬ್ ವತಿಯಿಂದ ಮ್ಯಾರಥಾನ್ ಓಟ ಆಯೋಜಿಸಲಾಗಿತ್ತು.          ನಗರದ ರಂಗಪ್ಪ ವೃತ್ತದಲ್ಲಿ ಮ್ಯಾರಥಾನ್ ಓಟಕ್ಕೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಚಾಲನೆ ನೀಡಿದರು. ರಂಗಪ್ಪ ವೃತ್ತದಿಂದ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಹುತ್ತಾಕಾಲೋನಿ ನಮ್ಮ ಭದ್ರಾವತಿ ವೃತ್ತದವರೆಗೂ ಮ್ಯಾರಥಾನ್ ಓಟ ನಡೆಯಿತು.       ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಹಳೇನಗರ ಮಹಿಳಾ ಸೇವಾ ಸಮಾಜ, ಲಯನ್ಸ್ ಕ್ಲಬ್ ಶುಗರ್ ಟೌನ್, ಅಪರಂಜಿ ಶಿವರಾಜ್ ಅಭಿನಯ ಶಾಲೆ  ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು,...

ಎಸ್‌ಐಆರ್ ಶೇ.೧೦೦ರಷ್ಟು ಗುರಿ ಸಾಧಿಸಿದ ಮತಗಟ್ಟೆ ಅಧಿಕಾರಿ ಆರ್. ವಿಜಯಲಕ್ಷ್ಮೀ

Image
ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಿದ ತಾಲೂಕು ಆಡಳಿತ  ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯದಲ್ಲಿ ೧೧೨-ಭದ್ರಾವತಿ ವಿಧಾನಸಭಾ ಕ್ಷೇತ್ರದ ಭಾಗಸಂಖ್ಯೆ ೨೩೨ರ ಮತಗಟ್ಟೆ ಅಧಿಕಾರಿಯಾಗಿರುವ ಅಂಗನವಾಡಿ ಕಾರ್ಯಕರ್ತೆ ಆರ್. ವಿಜಯಲಕ್ಷ್ಮಿ ಶೇ.೧೦೦ರಷ್ಟು ಗುರಿಸಾಧಿಸಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.       ಭದ್ರಾವತಿ : ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯದಲ್ಲಿ ೧೧೨-ಭದ್ರಾವತಿ ವಿಧಾನಸಭಾ ಕ್ಷೇತ್ರದ ಭಾಗಸಂಖ್ಯೆ ೨೩೨ರ ಮತಗಟ್ಟೆ ಅಧಿಕಾರಿಯಾಗಿರುವ ಅಂಗನವಾಡಿ ಕಾರ್ಯಕರ್ತೆ ಆರ್. ವಿಜಯಲಕ್ಷ್ಮಿ ಶೇ.೧೦೦ರಷ್ಟು ಗುರಿಸಾಧಿಸಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.       ಗಣತಿ ನಮೂನೆ ವಿತರಣೆ ಹಾಗು ನಮೂನೆಗಳ ಗಣಕೀಕರಣ ಕಾರ್ಯದಲ್ಲಿ ಶೇ.೧೦೦ರಷ್ಟು ಗುರಿ ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ. ತಹಸೀಲ್ದಾರ್ ಪ್ರದೀಪ್ ದೇವಗಿರಿ, ಚುನಾವಣಾ ಶಿರಸ್ತೇದಾರ್ ಗಿರಿರಾಜ್, ಕಂದಾಯ ನಿರೀಕ್ಷಕ ಪ್ರಶಾಂತ್, ಹನುಮಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.       ಶೇ.೧೦೦ರಷ್ಟು ಗಣತಿ ನಮೂನೆ ವಿತರಣೆ :       ೧೧೨-ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರಪಟ್ಟಿ ಸಮಗ್...

ಫೆ.೧೯ರಂದು ಪತ್ರಿಕಾ ದಿನಾಚರಣೆ, ಬೃಹತ್ ರಕ್ತದಾನ ಶಿಬಿರ ಯಶಸ್ವಿಗೊಳಿಸಿ : ಗಂಗಾನಾಯ್ಕ ಗೊಂದಿ

Image
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಗುರುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಹಾಗು ಬೃಹತ್ ರಕ್ತದಾನ ಕುರಿತು ಮಾಹಿತಿ ನೀಡಲಾಯಿತು.       ಭದ್ರಾವತಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.೧೯ರ ಭಾನುವಾರ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಹಾಗು ಬೃಹತ್ ರಕ್ತದಾನ ಶಿಬಿರ ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷ ಗಂಗಾನಾಯ್ಕ ಗೊಂದಿರವರು ಮನವಿ ಮಾಡಿದರು.       ಅವರು ಗುರುವಾರ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಪತ್ರಿಕಾ ದಿನಾಚರಣೆ ವಿಶೇಷವಾಗಿ ಆಚರಿಸಲಾಗುತ್ತಿದೆ. ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳು ಬೃಹತ್ ರಕ್ತದಾನ ಶಿಬಿರಕ್ಕೆ ಹೆಚ್ಚಿನ ಸಹಕಾರ ನೀಡುತ್ತಿವೆ. ಶಿಬಿರ ಯಶಸ್ವಿಗೆ ವಿವಿಧ ಸಮಿತಿಗಳು ಹೆಚ್ಚಿನ ಶ್ರಮವಹಿಸಿವೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡುವ ಮೂಲಕ ಶಿಬಿರ ಯಶಸ್ವಿಗೊಳಿಸಬೇಕೆಂದರು.       ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಬೆಳಿಗ್ಗೆ ೮.೩೦ರಿಂದ ಶಿಬಿರ ಆರಂಭವಾಗಲಿದ್ದು, ವಿವಿಧ ಧರ್ಮ ಗುರುಗಳು ರಕ್ತದಾನ ನೆರವೇರಿಸುವ ಮೂಲಕ ಶಿಬಿರಕ್ಕೆ...

ರಾಜೀವ್ ಗಾಂಧಿ ಮೆಮೊರಿಯಲ್ ಪ್ರೌಢಶಾಲೆ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ.ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್, ರಾಜೀವ್ ಗಾಂಧಿ ಮೆಮೊರಿಯಲ್ ಪ್ರೌಢಶಾಲೆ ಮಕ್ಕಳಿಗೆ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ವತಿಯಿಂದ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.       ಭದ್ರಾವತಿ : ನಗರಸಭೆ ವ್ಯಾಪ್ತಿಯ ಸೀಗೆಬಾಗಿ ಡಾ.ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್, ರಾಜೀವ್ ಗಾಂಧಿ ಮೆಮೊರಿಯಲ್ ಪ್ರೌಢಶಾಲೆ ಮಕ್ಕಳಿಗೆ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ವತಿಯಿಂದ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.       ಕ್ಲಬ್ ಅಧ್ಯಕ್ಷ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪನವರ ನೇತೃತ್ವದಲ್ಲಿ ಸುಮಾರು ೬೦ ರಿಂದ ೭೦ ಮಕ್ಕಳಿಗಳಿಗೆ ಬರವಣಿಗೆ ಪುಸ್ತಕ ವಿತರಿಸುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಲಾಯಿತು.       ಕ್ಲಬ್ ಖಜಾಂಚಿ ಸೋಲಾರ್ ನಾಗರಾಜ್, ಫ್ರಾನ್ಸಿಸ್, ನಾಗೇಂದ್ರಪ್ಪ, ಶಿವಾಜಿ ರಾವ್, ನಟರಾಜ್, ಕೆ.ಪಿ ಗಿರೀಶ್, ಶಿವಕುಮಾರ್ ಮತ್ತು ಮಧುಸೂದನ್, ಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್ ಹಾಗು ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.     

ಯುವ ಸಮುದಾಯ ಸ್ವಾವಲಂಬಿಯನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಹಲವಾರು ಯೋಜನೆ

Image
ಬಿಜೆಪಿ ನಗರ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಘೋಷಣೆ, ಪದಗ್ರಹಣ ಕಾರ್ಯಕ್ರಮ ಭದ್ರಾವತಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಗರ ಯುವ ಮೋರ್ಚಾ ಅಧ್ಯಕ್ಷ ಪ್ರಜ್ವಲ್ ನಂಜುಂಡಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಲಿಖಿತ್ ಮತ್ತು ತೇಜಸ್‌ರವರ ನೇತೃತ್ವದಲ್ಲಿ ಹಾಗು ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ನೂತನ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಘೋಷಣೆ ಹಾಗೂ ಪದಗ್ರಹಣ ಕಾರ್ಯಕ್ರಮ ಜರುಗಿತು.       ಭದ್ರಾವತಿ:  ಯುವ ಸಮುದಾಯ ದೇಶದ ಶಕ್ತಿ ಹಾಗೂ ಭವಿಷ್ಯದ ನಿರ್ಮಾತೃ ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರ ಯುವ ಸಮುದಾಯ ಸ್ವಾವಲಂಬಿಯನ್ನಾಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.       ಅವರು ಪಕ್ಷದ ಕಛೇರಿಯಲ್ಲಿ ನಗರ ಯುವ ಮೋರ್ಚಾ ಅಧ್ಯಕ್ಷ ಪ್ರಜ್ವಲ್ ನಂಜುಂಡಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಲಿಖಿತ್ ಮತ್ತು ತೇಜಸ್‌ರವರ ನೇತೃತ್ವದಲ್ಲಿ ನೂತನ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಘೋಷಣೆ ಹಾಗೂ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.        ಕೇಂದ್ರ ಸರ್ಕಾರ ಯುವಕರು, ರೈತರು, ಮಹಿಳೆಯರು ಹಾಗೂ ಬಡವರ ಸಬಲೀಕರಣಕ್ಕಾಗಿ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೊಳಿ...

ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು ಸಾವು

Image
     ಭದ್ರಾವತಿ : ಎಲ್‌ಕೆಜಿ ಮಗು ಶಾಲೆಯಿಂದ ಮನೆಗೆ ತೆರಳುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಘಟನೆ ಮಂಗಳವಾರ ನಡೆದಿದೆ.       ಗ್ರಾಮದ ನಿವಾಸಿ ನಸ್ರುಲ್ಲಾ ಎಂಬುವರ ಪುತ್ರ ನಾಲ್ಕೂವರೆ ವರ್ಷದ ಮೊಹಮ್ಮದ್ ಮುನಾವರ್ ತೈಫ್ ಮೃತ ದುರ್ದೈವಿಯಾಗಿದ್ದು, ಈ ಬಾಲಕನನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿಗೆ ದಾಖಲಿಸಲಾಗಿತ್ತು.  ಸೋಮವಾರ ಮೊದಲ ದಿನ ಶಾಲೆಗೆ ಆಗಮಿಸಿದ್ದ ಬಾಲಕ ಎರಡನೇ ದಿನ ಮಂಗಳವಾರ ತರಗತಿ ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ದೊಣಬಘಟ್ಟ ಗ್ರಾಮದಲ್ಲಿ ಶೋಕದ ವಾತಾವರಣ ಕಂಡು ಬರುತ್ತಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನರ್ಸರಿ ಟೀಚರ್‍ಸ್ ಟ್ರೈನಿಂಗ್ ಪ್ರೋಗಾಂ ತರಬೇತಿ : ಪದವಿ, ಪ್ರಮಾಣ ಪತ್ರ ವಿತರಣೆ

Image
ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಪ್ರಮುಖ ಪಾತ್ರವಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್  ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪದ ಈಬೈಟ್ ಎಜ್ಯುಕೇಷನ್ ಸೆಂಟರ್‌ನಲ್ಲಿ ನರ್ಸರಿ ಟೀಚರ್‍ಸ್ ಟ್ರೈನಿಂಗ್ ಪ್ರೋಗಾಂ(ಪಿಎಸ್‌ಟಿಟಿಐ) ತರಬೇತಿ ಪಡೆದು ಉತ್ತೀರ್ಣರಾದವರಿಗೆ ಪದವಿ ಹಾಗು ಪ್ರಮಾಣ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ವಿತರಿಸಿದರು.       ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪದ ಈಬೈಟ್ ಎಜ್ಯುಕೇಷನ್ ಸೆಂಟರ್‌ನಲ್ಲಿ ನರ್ಸರಿ ಟೀಚರ್‍ಸ್ ಟ್ರೈನಿಂಗ್ ಪ್ರೋಗಾಂ(ಪಿಎಸ್‌ಟಿಟಿಐ) ತರಬೇತಿ ಪಡೆದು ಉತ್ತೀರ್ಣರಾದವರಿಗೆ ಪದವಿ ಹಾಗು ಪ್ರಮಾಣ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ವಿತರಿಸಿ ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಪ್ರಮುಖ ಪಾತ್ರವಹಿಸುವಂತೆ ಕರೆ ನೀಡಿದರು.       ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೌಂಟ್ ವಿಷನ್ ಸ್ಕೂಲ್ ಸಂಸ್ಥಾಪಕಿ ಹಾಗು ಪ್ರಾಂಶುಪಾಲರಾದ ನಜಿಯಾ ಬಾನು ಪದವಿ ಪಡೆದವರನ್ನು ಅಭಿನಂದಿಸಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಪದವಿ ಪಡೆದ ಶೃತಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಾಲ್‌ಪ್ರೋ ಸ್ಪೋರ್ಟ್ಸ್‌ವೇರ್ ಮಾಲೀಕ ಜೇಮ್ಸ್ ವ್ಯಾಲೆಂಟೈನ್ ೨೦೨೬-೨೭ನೇ ಸಾಲಿನ ಶೈಕ್ಷಣಿಕ ತಂಡಕ್ಕೆ ಸ್ವಾಗತ ಕೋರಿದರು. ಈಬೈಟ್ ಎಜ್ಯುಕ...

೩ನೇ ಸೌತ್ ಲೆವೆಲ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ

Image
ಕಿಂಗ್ ಕಿಕ್ ಮಾರ್ಷಿಯಲ್ ಆರ್ಟ್ಸ್ ಆಕಾಡೆಮಿ ಕ್ರೀಡಾಪಟುಗಳಿಗೆ ಬಹುಮಾನ  ಬೆಂಗಳೂರು ಬನ್ನೇರುಘಟ್ಟದಲ್ಲಿ ಜರುಗಿದ ೩ನೇ ಸೌತ್ ಲೆವೆಲ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ತಾಲೂಕಿನ ಕಿಂಗ್ ಕಿಕ್ ಮಾರ್ಷಿಯಲ್ ಆರ್ಟ್ಸ್ ಆಕಾಡೆಮಿಯ ಕರಾಟೆ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.       ಭದ್ರಾವತಿ:  ಬೆಂಗಳೂರು ಬನ್ನೇರುಘಟ್ಟದಲ್ಲಿ ಜರುಗಿದ ೩ನೇ ಸೌತ್ ಲೆವೆಲ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ತಾಲೂಕಿನ ಕರಾಟೆ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.       ಕಿಂಗ್ ಕಿಕ್ ಮಾರ್ಷಿಯಲ್ ಆರ್ಟ್ಸ್ ಆಕಾಡೆಮಿಯ ಸುಮಾರು ೪೮ ಕ್ರೀಡಾಪಟುಗಳು ಜು. ೧೨ರಂದು ಜರುಗಿದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಈ ಪೈಕಿ ೩೬ ಕ್ರೀಡಾಪಟುಗಳು ಪ್ರಥಮ ಹಾಗು ಉಳಿದಂತೆ ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪಡೆದುಕೊಂಡು ಕೀರ್ತಿ ತಂದಿದ್ದಾರೆ.       ಪರಿಶ್ರಮ, ಶಿಸ್ತು ಹಾಗೂ ತರಬೇತುದಾರರ ಮಾರ್ಗದರ್ಶನವೇ ಈ ಯಶಸ್ಸಿನ ಹಿಂದಿನ ಪ್ರಮುಖ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಆಕಾಡೆಮಿ ಶುಭ ಹಾರೈಸಿದೆ. 

ನಗರಸಭೆ ವ್ಯಾಪ್ತಿಯಲ್ಲಿ ಎಸ್‌ಐಆರ್ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪನೆ

Image
ಸದುಪಯೋಗಪಡಿಸಿಕೊಳ್ಳಲು ನಗರಸಭೆ ಪೌರಾಯುಕ್ತರ ಮನವಿ       ಭದ್ರಾವತಿ: ವಿಧಾನಸಭಾ ಕ್ಷೇತ್ರ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ(ಎಸ್‌ಐಆರ್)-2026ಕ್ಕೆ ಸಂಬಂಧಿಸಿದಂತೆ ನಗರಸಭೆ ವ್ಯಾಪ್ತಿಯಲ್ಲಿ ಮತದಾರರ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.       ವಾರ್ಡ್ ನಂ.1 ರಿಂದ 5ರವರೆಗೆ 2025ರ ಮತದಾರರ ಪಟ್ಟಿ ಭಾಗ ಸಂಖ್ಯೆ 48, 49, 50, 51, 69, 70, 73, 74, 75, 76, 120, 123, 121, 122, 124, 81, 109, 110, 116, 111, 112, 115, 77, 78, 107, 108, 113, 114, 116 ಮತ್ತು 115ರ ಮತದಾರರಿಗೆ ಡಾ. ರಾಜ್‌ಕುಮಾರ್ ರಸ್ತೆ, ಹಾಲಪ್ಪ ವೃತ್ತ, ಭದ್ರಾ ಪ್ರೌಢಶಾಲೆಯಲ್ಲಿ, ವಾರ್ಡ್ ನಂ. 6 ರಿಂದ 10ರವರೆಗೆ ಭಾಗ ಸಂಖ್ಯೆ 77,78, 107, 113, 108, 79, 80, 66, 67, 68, 77, 78, 81, 82, 109, 110, 53, 54, 55, 56, 65, 66, 67, 68, 82, 83, 53, 54, 55, 56, 58, 59, 62, 61, 62, 63, 64, 85, 92 ಮತ್ತು 93ರ ಮತದಾರರಿಗೆ ಹೊಸ ಸೇತುವೆ ರಸ್ತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ, ವಾರ್ಡ್ ನಂ. 11 ರಿಂದ 15ರವರೆಗೆ ಭಾಗ ಸಂಖ್ಯೆ 57, 94, 62, 84, 85, 93, 102, 85, 93, 102, 95, 99, 102, 103, 104, 105, 106, 125, 82, 96, 86, 87, 97, 98, 83, 60, 61, 88, 89, 90 ಮತ್...

ತೆರದ ಮನೆ ಕಾರ್ಯಕ್ರಮದಲ್ಲಿ ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿಗಳು

Image
ಜಿಲ್ಲಾ ಪೊಲೀಸ್ ವತಿಯಿಂದ ಸಾಮಾಜಿಕ ಜವಾಬ್ದಾರಿ ಕಾರ್ಯಯೋಜನೆಯಡಿ ಪೊಲೀಸ್ ಠಾಣೆಗಳನ್ನು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಕೆಲವು ವರ್ಷಗಳ ಹಿಂದೆ ಅನುಷ್ಠಾನಕ್ಕೆ ತರಲಾಗಿರುವ ತೆರದಮನೆ ಹಾಗು ಪ್ರಸ್ತುತ ಅನುಷ್ಠಾನಕ್ಕೆ ತರಲಾಗಿರುವ ಬೇಡ ಬ್ರೋ ಕಾರ್ಯಕ್ರಮ ಭದ್ರಾವತಿ ನಗರದ ನ್ಯೂಟೌನ್ ಪೊಲೀಸ್ ಠಾಣೆಯಿಂದ ನಡೆಯಿತು.       ಭದ್ರಾವತಿ : ಜಿಲ್ಲಾ ಪೊಲೀಸ್ ವತಿಯಿಂದ ಸಾಮಾಜಿಕ ಜವಾಬ್ದಾರಿ ಕಾರ್ಯಯೋಜನೆಯಡಿ ಪೊಲೀಸ್ ಠಾಣೆಗಳನ್ನು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಕೆಲವು ವರ್ಷಗಳ ಹಿಂದೆ ಅನುಷ್ಠಾನಕ್ಕೆ ತರಲಾಗಿರುವ ತೆರದಮನೆ ಹಾಗು ಪ್ರಸ್ತುತ ಅನುಷ್ಠಾನಕ್ಕೆ ತರಲಾಗಿರುವ ಬೇಡ ಬ್ರೋ ಕಾರ್ಯಕ್ರಮ ನಗರದ ನ್ಯೂಟೌನ್ ಪೊಲೀಸ್ ಠಾಣೆಯಿಂದ ನಡೆಯಿತು.       ಶಾಲಾ ವಿದ್ಯಾರ್ಥಿಗಳನ್ನು ಠಾಣೆಗಳಿಗೆ ಕರೆತಂದು ಪೊಲೀಸ್ ಇಲಾಖೆಯ ಕಾರ್ಯ ವಿಧಾನಗಳನ್ನು ಪರಿಚಯಿಸುವ ಮೂಲಕ ಜನಸ್ನೇಹಿಯಾಗಿಸುವುದು ತೆರದಮನೆ ಕಾರ್ಯಕ್ರಮದ ಉದ್ದೇಶವಾಗಿದೆ.  ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಬೇಡ ಬ್ರೋ ಕಾರ್ಯಕ್ರಮ ಕುರಿತು ನ್ಯೂಟೌನ್ ಲಿಟ್ಲ್ ಫ್ಲವರ್ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಠಾಣಾ ಉಪ ನಿರೀಕ್ಷಕರಾದ ರಮೇಶ್, ಕವಿತಾ ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು. 

ಶಾಲೆಯಿಂದ ದೂರ ಉಳಿದ ಮಕ್ಕಳ ಗುರುತಿಸಿ ಪುನಃ ಶಾಲೆಗೆ ಸೇರ್ಪಡೆ

Image
ಜಿಲ್ಲಾ ಪೊಲೀಸ್ ವಿನೂತನ ಕಾರ್ಯಯೋಜನೆಗೆ ವ್ಯಾಪಕ ಪ್ರಶಂಸೆ  ಜಿಲ್ಲಾ ಪೊಲೀಸ್ ವತಿಯಿಂದ ಸಾಮಾಜಿಕ ಜವಾಬ್ದಾರಿ ಕಾರ್ಯಯೋಜನೆಯಡಿ ಇದೀಗ ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವ ಪ್ರಯತ್ನ ಕೈಗೊಳ್ಳಲಾಗುತ್ತಿದೆ. ಭದ್ರಾವತಿ ತಾಲೂಕಿನ ಗೌಡ್ರಳ್ಳಿ ಗ್ರಾಮದಲ್ಲಿ ೩ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.       ಭದ್ರಾವತಿ : ಜಿಲ್ಲಾ ಪೊಲೀಸ್ ವತಿಯಿಂದ ಸಾಮಾಜಿಕ ಜವಾಬ್ದಾರಿ ಕಾರ್ಯಯೋಜನೆಯಡಿ ಇದೀಗ ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವ ಪ್ರಯತ್ನ ಕೈಗೊಳ್ಳಲಾಗುತ್ತಿದೆ.       ಪೊಲೀಸರು ಸಹ ಸಮಾಜದ ಒಂದು ಭಾಗ ಎಂಬುದನ್ನು ಇತ್ತೀಚಿನ  ಕೆಲವು ವರ್ಷಗಳಿಂದ ಇಲಾಖೆ ರೂಪಿಸುತ್ತಿರುವ ಕಾರ್ಯಯೋಜನೆಗಳು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುತ್ತಿವೆ. ಪೊಲೀಸರು ಎಂದರೆ ಕೇವಲ ಗಲಭೆಗಳನ್ನು ನಿಯಂತ್ರಿಸುವವರು, ರೌಡಿ, ಪುಂಡ-ಪೋಕರಿಗಳನ್ನು ಸೆದೆ ಬಡಿಯುವವರು, ಕೊಲೆ, ಸುಲಿಗೆ, ಕಳ್ಳಕಾಕರನ್ನು ಹಿಡಿಯುವವರು ಎಂಬ ಭಾವನೆ ಇಂದಿಗೂ ಸಮಾಜದಲ್ಲಿ ಮೂಡಿದೆ. ಇತ್ತೀಚಿನ ವರ್ಷಗಳಲ್ಲಿ ಜಿಲ್ಲಾ ಪೊಲೀಸ್ ಸಮುದಾಯದೊಂದಿಗೆ ಬೆರೆಯುವ ನಿಟ್ಟಿನಲ್ಲಿ ವಿನೂತನ ಕಾರ್ಯಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಮನೆ ಮನೆಗೆ ಪೊಲೀಸ್ ಹೆಚ್ಚು ಪರಿಣಾಮಕಾರಿಯಾಗಿದ್ದು, ಪ್ರತಿಯೊಂದು ಮನೆಯ ಕುಂದು-ಕೊರತೆಗಳನ್ನು ಆಲಿಸಿ ...

ಓಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು

Image
    ಭದ್ರಾವತಿ : ಸಾರ್ವಜನಿಕರನ್ನು ಗುಂಪು ಸೇರಿಸಿಕೊಂಡು ರಸ್ತೆಯಲ್ಲಿ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.       ನಗರದ ಬಿ.ಎಚ್ ರಸ್ತೆ, ರೈಲ್ವೆ ನಿಲ್ದಾಣದಿಂದ ಮೂಪಾ ಕಾಂಪೌಂಡ್ ಕಡೆಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೋರ್ವ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿ ಚಿಕ್ಕಪ್ಪ ಸಣ್ಣತಂಗೇರ ದಾಳಿ ನಡೆಸಿದ್ದು, ನ್ಯಾಯಾಲಯದ ಅನುಮತಿ ಪಡೆದು ಓಸಿ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  

ಸರ್ಕಾರಿ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕ, ಲೇಖನ ಸಾಮಗ್ರಿ ವಿತರಣೆ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ನ್ಯೂಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸ್ಕಂದ ಟ್ರಸ್ಟ್ ಉಚಿತ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ಶನಿವಾರ ವಿತರಿಸಲಾಯಿತು.        ಭದ್ರಾವತಿ: ನಗರಸಭೆ ವ್ಯಾಪ್ತಿಯ ನ್ಯೂಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸ್ಕಂದ ಟ್ರಸ್ಟ್ ಉಚಿತ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ಶನಿವಾರ ವಿತರಿಸಲಾಯಿತು.       ಸಾಮಾಜಿಕ ಸೇವಾ ಮನೋಭಾವನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸ್ಕಂದ ಟ್ರಸ್ಟ್ ಪ್ರಸಕ್ತ ಸಾಲಿನಲ್ಲಿ ಈಗಾಗಲೇ ಹಲವಾರು ಸರ್ಕಾರಿ ಶಾಲೆಗಳಿಗೆ ತೆರಳಿ ಉಚಿತವಾಗಿ ಬರವಣಿಗೆ ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸರ್ಕಾರಿ ಶಾಲೆ ಮಕ್ಕಳ ಕಲಿಕೆಗೆ ನೆರವಾಗುವ ಮೂಲಕ ಮಾದರಿಯಾಗಿದೆ.      ಸ್ಕಂದ ಟ್ರಸ್ಟ್ ಪ್ರಮುಖರಾದ ಜಿ.ಕೆ ಮಧುಸೂದನ್, ನಾರಾಯಣ ಮತ್ತು ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.  

ಶೇ.೯೫ರಷ್ಟು ಎಸ್‌ಐಆರ್ ಗಣತಿ ನಮೂನೆ ವಿತರಣೆ

Image
     ಭದ್ರಾವತಿ: ೧೧೨-ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಸ್‌ಐಆರ್-ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ. ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಶನಿವಾರ ಸಂಜೆ ೬ರ ವೇಳೆಗೆ ಒಟ್ಟಾರೆ ಶೇ.೯೫.೮೮ರಷ್ಟು ಗುರಿ ಸಾಧಿಸಲಾಗಿದೆ.      ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨೫೩ ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಿಗೂ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಒಟ್ಟು ೨,೧೪,೯೦೭ ಮತದಾರರಿದ್ದು, ಈ ಪೈಕಿ ೨,೦೬,೦೫೭ ಗಣತಿ ನಮೂನೆಗಳ ವಿತರಿಸಲಾಗಿದೆ. ೩೯,೬೦೮ ಗಣತಿ ನಮೂನೆಗಳನ್ನು ಗಣಕೀರಣಗೊಳಿಸಲಾಗಿದ್ದು, ಶೇ.೧೮.೪೩ರಷ್ಟು ಗುರಿಸಾಧಿಸಲಾಗಿದೆ ಎಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಕೋರಿದ್ದಾರೆ. 

ಜು.೧೧ರಂದು ಪದವಿ, ಪ್ರಮಾಣಪತ್ರ ವಿತರಣೆ ಸಮಾರಂಭ

Image
     ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪದ ಈಬೈಟ್ ಎಜ್ಯುಕೇಷನ್ ಸೆಂಟರ್(ನರ್ಸರಿ ಟೀಚರ್‍ಸ್ ಟೈನಿಂಗ್ ಪ್ರೋಗಾಂ) ವತಿಯಿಂದ ಜು.೧೧ರ ಶನಿವಾರ ಸಂಜೆ ೪ ಗಂಟೆಗೆ ಪದವಿ ಮತ್ತು ಪ್ರಮಾಣಪತ್ರ ವಿತರಣೆ ಸಮರಂಭ ಆಯೋಜಿಸಲಾಗಿದೆ.       ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್, ಮೌಂಟ್ ವಿಷನ್ ಸ್ಕೂಲ್ ಸಂಸ್ಥಾಪಕಿ ಹಾಗು ಪ್ರಾಂಶುಪಾಲರಾದ ನಜಿಯಾ ಬಾನು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ೨೦೨೫-೨೬ನೇ ಸಾಲಿನ ಪಿಎಸ್‌ಟಿಟಿಐ ಪದವಿ ಮತ್ತು ಪ್ರಮಾಣಪತ್ರ ವಿತರಣೆ ಹಾಗು ೨೦೨೬-೨೭ನೇ ಸಾಲಿನ ಶೈಕ್ಷಣಿಕ ತಂಡಕ್ಕೆ ಸ್ವಾಗತ ನಡೆಯಲಿದೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಕೋಟ್ಯಾಂತರ ಭಕ್ತರ ಕನಸು ನನಸಾಗಿಸಲು ಅಯೋಧ್ಯೆ ಶ್ರೀರಾಮ ಮಂದಿರ ಕಲಾಕೃತಿ ನಿರ್ಮಾಣ

Image
ಉಕ್ಕಿನ ನಗರದ ವಾಸವಿ ಮಹಲ್‌ನಲ್ಲಿ ೧೦೯ನೇ ಪ್ರದರ್ಶನ  ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ನೂತನ ಶ್ರೀರಾಮ ಮಂದಿರ ನಿರ್ಮಾಣಗೊಂಡು ೨ ವರ್ಷಗಳು ಕಳೆದಿದ್ದು, ಇನ್ನೂ ಕೋಟ್ಯಾಂತರ ಭಕ್ತರಿಗೆ ಆಯೋಧ್ಯೆಗೆ ತೆರಳಿ ಶ್ರೀರಾಮ ಮಂದಿರ ಕಣ್ತುಂಬಿಕೊಳ್ಳಲು ಸಾಧ್ಯವಾಗಿಲ್ಲ. ಇಂತಹ ಭಕ್ತರ ಕನಸು ನನಸಾಗಿಸಬೇಕೆಂಬ ಆಶಯದೊಂದಿಗೆ ತುಮಕೂರು, ಗುಬ್ಬಿ ತಾಲೂಕಿನ ಬಿದರೆ ಗ್ರಾಮದ ನಿವಾಸಿಗಳಾದ ವಿನಯ್ ರಾಮ್ ಗುರೂಜಿ ಅವರು ಆಯೋಧ್ಯೆ ಶ್ರೀರಾಮ ಮಂದಿರದ ಶೈಲಿಯನ್ನು(ಕಲಾಕೃತಿ) ನಿರ್ಮಿಸಿದ್ದು, ಇದೀಗ ಉಕ್ಕಿನ ನಗರ ಭದ್ರಾವತಿಯಲ್ಲಿ ಭಕ್ತರು ಈ ಶ್ರೀರಾಮ ಮಂದಿರವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ.       ಭದ್ರಾವತಿ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ನೂತನ ಶ್ರೀರಾಮ ಮಂದಿರ ನಿರ್ಮಾಣಗೊಂಡು ೨ ವರ್ಷಗಳು ಕಳೆದಿದ್ದು, ಇನ್ನೂ ಕೋಟ್ಯಾಂತರ ಭಕ್ತರಿಗೆ ಆಯೋಧ್ಯೆಗೆ ತೆರಳಿ ಶ್ರೀರಾಮ ಮಂದಿರ ಕಣ್ತುಂಬಿಕೊಳ್ಳಲು ಸಾಧ್ಯವಾಗಿಲ್ಲ. ಇಂತಹ ಭಕ್ತರ ಕನಸು ನನಸಾಗಿಸಬೇಕೆಂಬ ಆಶಯದೊಂದಿಗೆ ತುಮಕೂರು, ಗುಬ್ಬಿ ತಾಲೂಕಿನ ಬಿದರೆ ಗ್ರಾಮದ ನಿವಾಸಿಗಳಾದ ವಿನಯ್ ರಾಮ್ ಗುರೂಜಿ ಅವರು ಆಯೋಧ್ಯೆ ಶ್ರೀರಾಮ ಮಂದಿರದ ಶೈಲಿಯನ್ನು(ಕಲಾಕೃತಿ) ನಿರ್ಮಿಸಿದ್ದು, ಇದೀಗ ಉಕ್ಕಿನ ನಗರದ ಭಕ್ತರು ಈ ಶ್ರೀರಾಮ ಮಂದಿರವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ.         ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾ...

ಮಕ್ಕಳು ಚೆಸ್ ಆಟದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲಿ : ಚನ್ನಪ್ಪ

Image
ಭದ್ರಾವತಿ ಲಯನ್ಸ್ ಕ್ಲಬ್ ಶುಗರ್ ಟೌನ್ ಆವರಣದಲ್ಲಿ ಎನ್ ಚೆಸ್ ಸರ್ಕಲ್ ಸಂಯುಕ್ತಾಶ್ರಯದಲ್ಲಿ ದಿವಂಗತ ಸುಲೋಚನಮ್ಮ ಮತ್ತು ಫಿಲೋಮೀನರವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಓಪನ್ ರ್‍ಯಾಪಿಡ್ ಚೆಸ್ ಪಂದ್ಯಾವಳಿಯನ್ನು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಚನ್ನಪ್ಪ, ಎಚ್.ಡಿ ಕೃಷ್ಣ, ಡಾ. ಸಿ.ಆರ್ ಗುರುರಾಜ ಹಾಗು ಆರ್. ಉಮೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಚೆಸ್(ಚದುರಂಗ) ನಮ್ಮ ದೇಶದ ಕ್ರೀಡೆ. ಇದು ಒಂದು ಬುದ್ದಿವಂತರ ಆಟ. ಮಕ್ಕಳು ಚೆಸ್ ಆಟದಲ್ಲಿ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಲಯನ್ಸ್ ಕ್ಲಬ್ ಶುಗರ್ ಟೌನ್ ಅಧ್ಯಕ್ಷ ಚನ್ನಪ್ಪ  ಕರೆ ನೀಡಿದರು.       ಅವರು ಕ್ಲಬ್ ಆವರಣದಲ್ಲಿ ಎನ್ ಚೆಸ್ ಸರ್ಕಲ್ ಸಂಯುಕ್ತಾಶ್ರಯದಲ್ಲಿ ದಿವಂಗತ ಸುಲೋಚನಮ್ಮ ಮತ್ತು ಫಿಲೋಮೀನರವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಓಪನ್ ರ್‍ಯಾಪಿಡ್ ಚೆಸ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.       ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಕ್ಲಬ್ ಮಾಜಿ ಅಧ್ಯಕ್ಷ ಡಾ ಸಿ.ಆರ್ ಗುರುರಾಜು, ಕಾರ್ಯದರ್ಶಿ ಎಚ್.ಡಿ ಕೃಷ್ಣ, ಸೋಲಾರ್ ನಾಗರಾಜ್, ಆರ್. ಉಮೇಶ್, ಮದಿಯಳಗನ್ ಮತ್ತು ಯುವರಾಜ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಚ್ಛ ನ್ಯಾಯಾಲಯದ ನ್ಯಾಯವಾದಿ ಆರ್. ಲೋಕನಾಥ್ ಕಾರ್ಯಕ್ರಮ ನಿರೂಪಿಸಿ, ಪ...

ನೂತನ ಪೊಲೀಸ್ ಕವಾಯತು ಮೈದಾನ ಉದ್ಘಾಟಿಸಿದ ಪೂರ್ವವಲಯ ಪೊಲೀಸ್ ಮಹಾನಿರ್ದೇಶಕ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ, ಮಿಲ್ಟ್ರಿ ಕ್ಯಾಂಪ್ ಪೊಲೀಸ್ ವಸತಿ ಸಮುಚ್ಚಯದಲ್ಲಿ ನಿರ್ಮಿಸಲಾಗಿರುವ ನೂತನ ಕವಾಯತು ಮೈದಾನ ಉದ್ಘಾಟಿಸಿದ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ಡಾ. ಬಿ.ಆರ್ ರವಿಕಾಂತೆಗೌಡ ಅವರನ್ನು ಬುಧವಾರ ಪೊಲೀಸ್ ಉಪವಿಭಾಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.        ಭದ್ರಾವತಿ: ನಗರದ ಹುಡ್ಕೋ ಕಾಲೋನಿ, ಮಿಲ್ಟ್ರಿ ಕ್ಯಾಂಪ್ ಪೊಲೀಸ್ ವಸತಿ ಸಮುಚ್ಚಯದಲ್ಲಿ ನಿರ್ಮಿಸಲಾಗಿರುವ ನೂತನ ಕವಾಯತು ಮೈದಾನ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ಡಾ. ಬಿ.ಆರ್ ರವಿಕಾಂತೆಗೌಡ ಬುಧವಾರ ಉದ್ಘಾಟಿಸಿದರು.       ಈ ಹಿಂದೆ ಡಿಎಆರ್ ಮೈದಾನದಲ್ಲಿ ಕವಾಯತು ಮೈದಾನ ನಿರ್ಮಿಸಲಾಗಿತ್ತು. ಪ್ರಸ್ತುತ ಈ ಕವಾಯತು ಮೈದಾನ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಅಧೀನಕ್ಕೆ ಸೇರ್ಪಡೆಗೊಂಡಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಕವಾಯತು ನಡೆಸಲು ಸೂಕ್ತ ಮೈದಾನವಿರಲಿಲ್ಲ. ಪೊಲೀಸ್ ಸಿಬ್ಬಂದಿಗಳು ವಿಐಎಸ್‌ಎಲ್, ಎಂಪಿಎಂ ಕೀಡಾಂಗಣಗಳಲ್ಲಿ ಕವಾಯತು ನಡೆಸುತ್ತಿದ್ದಾರೆ. ಇಲಾಖೆಗೆ ಪ್ರತ್ಯೇಕ ಕವಾಯತು ಮೈದಾನದ ಅವಶ್ಯಕತೆ ಇತ್ತು  ಈ ಹಿನ್ನಲೆಯಲ್ಲಿ ಸೂಕ್ತ ಸ್ಥಳ ಗುರುತಿಸಿ ನೂತನ ಕವಾಯತು ಮೈದಾನ ನಿರ್ಮಿಸಲಾಗಿದೆ.       ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್,  ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಪೊಲೀಸ್ ಉಪಾಧೀಕ್ಷಕ ...

ಅಮೂಲ್ಯ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ : ಅನೂಪ್ ಕುಮಾರ್

Image
ಭದ್ರಾವತಿ ನ್ಯೂಟೌನ್ ಸೈಲ್-ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಜೀವ ಸಂಜೀವಿನಿ ಸ್ವಯಂ ಸೇವಾ ರಕ್ತ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.       ಭದ್ರಾವತಿ: ಅಮೂಲ್ಯ ಜೀವಗಳನ್ನು ಉಳಿಸಲು ನೌಕರರು ಮತ್ತು ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡುವಂತೆ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಮನವಿ ಮಾಡಿದರು.      ಅವರು ಮಂಗಳವಾರ ನಗರದ ನ್ಯೂಟೌನ್ ಸೈಲ್-ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಜೀವ ಸಂಜೀವಿನಿ ಸ್ವಯಂ ಸೇವಾ ರಕ್ತ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.  ಅಮೂಲ್ಯ ಜೀವ ಉಳಿಸಲು ರಕ್ತದ ಅಗತ್ಯತೆ ಹೆಚ್ಚಿನದ್ದಾಗಿದೆ. ರಕ್ತದ ಮಹತ್ವ ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದರು.       ಮುಖ್ಯ ಮಹಾಪ್ರಬಂಧಕ(ಮಾನವ ಸಂಪನ್ಮೂಲ) ಬಿ. ವಿಶ್ವನಾಥ್,  ಮಹಾಪ್ರಬಂಧಕ ಪ್ರಭಾರಿ(ಸ್ಥಾವರ) ಟಿ. ರವಿಚಂದ್ರನ್,  ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ.ಕೆ.ಎಸ್ ಸುಜೀತ್ ಕುಮಾರ್, ಕಾರ್ಮಿಕರ ಸಂಘದ ಅಧ್ಯಕ್ಷ  ಅಮೃತ್ ಕುಮಾರ್ ಮತ್ತು ಜೀವ ಸಂಜೀವಿನಿ ಸ್ವಯಂಸೇವಾ ರಕ್ತ ಕೇಂದ್ರದ ಆಡಳಿತಾಧಿಕಾರಿ ರಾಜು ನರಸಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪ ಮುಖ್ಯ ವೈದ್ಯಾಧಿಕಾರಿ ಡಾ. ಎಚ್. ಶೋಭ ಸ್ವಾಗತಿಸಿ ವಂದಿಸಿ...

ಕುಟುಂಬ ಪ್ರೀತಿಯೊಂದಿಗೆ ಗಮನ ಸೆಳೆಯುತ್ತಿವೆ ಬಗೆ ಬಗೆಯ ಪಾರಿವಾಳಗಳು

Image
ಮೂಡನಂಬಿಕೆ, ಕಂದಾಚಾರಗಳ ನಡುವೆ ಮರೆಯಾಗುತ್ತಿದೆ ಪಾರಿವಾಳಗಳ ಪೋಷಣೆ  ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೆಬಾಗಿ ನಿವಾಸಿ ಅಣ್ಣೇಶ್-ಎಂ. ಆಶಾ ದಂಪತಿ ನಿವಾಸದಲ್ಲಿ ಸಾಕಿರುವ ಪಾರಿವಾಳಗಳು.       * ಅನಂತಕುಮಾರ್        ಭದ್ರಾವತಿ: ಹಿಂದಿನ ಕಾಲದಲ್ಲಿ ಸಾಕು ಪ್ರಾಣಿ ಹಾಗು ಪಕ್ಷಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಭಾವಿಸಲಾಗುತ್ತಿತ್ತು. ಒಂದು ರೀತಿಯ ಬಾಂಧವ್ಯ ಬೆಸೆದುಕೊಳ್ಳಲಾಗಿತ್ತು. ಆದರೆ ಇಂದು ಈ ರೀತಿಯ ಭಾವನೆಗಳನ್ನು ಹೊಂದಿರುವ ಕುಟುಂಬಗಳು ವಿರಳವಾಗಿವೆ.  ನಗರಸಭೆ ವ್ಯಾಪ್ತಿಯ ಸೀಗೆಬಾಗಿ ನಿವಾಸಿ ಅಣ್ಣೇಶ್-ಎಂ. ಆಶಾ ದಂಪತಿ ಇಂತಹ ವಿರಳ ಕುಟುಂಬಗಳಲ್ಲಿ ಒಂದಾಗಿದೆ. ಮನೆ ತುಂಬಾ ಪಾರಿವಾಳ, ಜೊತೆಗೆ ಕೋಳಿ, ನಾಯಿ ಸಹ ಈ ಕುಟುಂಬದ ಸದಸ್ಯರಾಗಿವೆ. ಇದು ಇಲ್ಲಿನ ನಿವಾಸಿಗಳ ಗಮನ ಸೆಳೆಯುತ್ತಿದೆ.       ಅಣ್ಣೇಶ್-ಎಂ. ಆಶಾ ದಂಪತಿ ಕುಟುಂಬದವರು ಮೊದಲಿನಿಂದಲೂ ಸಾಕು ಪ್ರಾಣಿ, ಪಕ್ಷಿಗಳನ್ನು ತಮ್ಮ ಕುಟುಂಬ ಸದಸ್ಯರಂತೆ ಕಾಣುತ್ತಿದ್ದು, ಇದೀಗ ಇವರ ಇಬ್ಬರು ಮಕ್ಕಳಾದ ಗೌತಮ್ ಮತ್ತು ಪ್ರೀತಂ ಸಹ ಈ ದಾರಿಯಲ್ಲಿ ಸಾಗುತ್ತಿದ್ದಾರೆ. ಕಳೆದ ೬ ವರ್ಷಗಳಿಂದ ಇವರ ಮನೆಯಲ್ಲಿ ವಿವಿಧ ಜಾತಿಯ ಪಾರಿವಾಳ, ಕೋಳಿ ಹಾಗು ನಾಯಿ ಸೇರಿದಂತೆ ಇನ್ನಿತರ ಸಾಕು ಪ್ರಾಣಿಗಳ ಪೋಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.       ತಲೆಯ ಸು...

ಎಸ್‌ಐಆರ್ ಕುರಿತು ಸಮಗ್ರ ಮಾಹಿತಿ ತ್ವರಿತವಾಗಿ ಕಾರ್ಯ ನಿರ್ವಹಿಸಿ : ನವೀದ್ ಅಹಮದ್ ಪರ್ವೇಜ್

Image
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರ ಆಯೋಜಿಸಲಾಗಿತ್ತು.       ಭದ್ರಾವತಿ : ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮತದಾರರಲ್ಲಿರುವ ಗೊಂದಲಗಳನ್ನು ಬಗೆಹರಿಸುವ ಮೂಲಕ ತ್ವರಿತವಾಗಿ ಪರಿಷ್ಕರಣೆ ಕಾರ್ಯ ಕೈಗೊಳ್ಳಬೇಕೆಂದು ಸ್ವೀಪ್ ಕಾರ್ಯಕ್ರಮದ ರಾಜ್ಯಮಟ್ಟದ ತರಬೇತುದಾರ ನವೀದ್ ಅಹಮದ್ ಪರ್ವೇಜ್ ಕರೆ ನೀಡಿದರು. ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.       ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು,  ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು. ಅರ್ಹ ನಾಗರಿಕರೆಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಮತ್ತು ಹಾಲಿ ಮತದಾರರ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.     ...

೨-೩ ದಿನಗಳಿಂದ ವ್ಯಾಪಕ ಮಳೆ : ರೈತರ ಮೊಗದಲ್ಲಿ ಮಂದಹಾಸ

Image
ಭದ್ರಾವತಿ ವಿಐಎಸ್‌ಎಲ್-ಎಂಪಿಎಂ ರಸ್ತೆಯ ಜೆಟಿಎಸ್ ಶಾಲೆ ಬಳಿ ಬೃಹತ್ ಮರದ ರೆಂಬೆ-ಕೊಂಬೆ ಮುರಿದು ಬಿದ್ದು, ವಿದ್ಯುತ್ ಕಂಬ ಹಾನಿಗೊಳಗಿದ್ದು, ಮೆಸ್ಕಾಂ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ಕೈಗೊಂಡು ಹೊಸದಾಗಿ ವಿದ್ಯುತ್ ಕಂಬ ಅಳವಡಿಸಿದರು.  -ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರೈತರ ಆತಂಕ ದೂರ. - ಈಗಾಗಲೇ ಭದ್ರಾ ಎಡ-ಬಲ ದಂಡೆ ನಾಲೆಗಳಲ್ಲಿ ನೀರು ಸ್ಥಗಿತ. - ಜಲಾಶಯದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ. - ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳ       ಭದ್ರಾವತಿ: ತಾಲೂಕಿನಲ್ಲಿ ಕಳೆದ ೨-೩ ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಇದುವರೆಗೂ ಯಾವುದೇ ಹಾನಿ ಅಥವಾ ಸಮಸ್ಯೆಗಳು ಎದುರಾಗಿಲ್ಲ.       ಮಳೆಯಾಗುತ್ತಿರುವುದರಿಂದ ಬರಗಾಲ ಎದುರಾಗುವ ಭೀತಿಯಲ್ಲಿದ್ದ ರೈತರ ಮೊಗದಲ್ಲಿ  ಸ್ವಲ್ಪಮಟ್ಟಿಗೆ ಮಂದಹಾಸ ಮೂಡಿದಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ಭೀತಿ ದೂರವಾಗಲಿದೆ. ಈ ಬಾರಿ ಮುಂಗಾರು ಕೈಕೊಟ್ಟ ಹಿನ್ನಲೆಯಲ್ಲಿ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದು, ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ ನೀರು ಸ್ಥಗಿತಗೊಳಿಸಲಾಗಿದೆ. ಜಲಾಶಯದ ನೀರು ಕೇವಲ ಕುಡಿಯುವ ಬಳಕೆಗೆ ಮಾತ್ರ ಸೀಮಿತಗೊಳಿಸಲಾಗಿದೆ.  ರೈತರು ಬೆಳೆ ಬೆಳೆಯದಂತೆ ಸೂಚಿಸಲಾಗಿದೆ. ಈ ನಡುವೆ ಇದೀಗ ಮಳೆಯಾಗುತ್ತಿದ್ದು, ಸ್ವಲ್ಪಮಟ್ಟಿಗೆ ಸಮಾಧಾನ ತಂದ...