ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ರವರು ದೇಶದ ಸಮಗ್ರ ಅಭಿವೃದ್ಧಿಯ ಹರಿಕಾರರು
ಒಂದು ಸಮುದಾಯ, ವರ್ಗಕ್ಕೆ ಸೀಮಿತಗೊಳಿಸದಿರಿ : ಉಪನ್ಯಾಸಕ ಡಾ. ಕೆ.ಎಚ್ ಕುಮಾರಸ್ವಾಮಿ ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಾಜ ಕಲ್ಯಾನ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ್ರವರ ೧೧೯ನೇ ಜಯಂತಿ ಕಾರ್ಯಕ್ರಮ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಮತ್ತು ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. ಭದ್ರಾವತಿ : ದೇಶದ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ರವರು ಕೇವಲ ಅಸ್ಪೃಶ್ಯರು, ದಲಿತರಿಗಾಗಿ ಹೋರಾಟ ನಡೆಸಲಿಲ್ಲ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕ. ಇಂತಹ ನಾಯಕನ ಜನ್ಮ ದಿನಾಚರಣೆ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲರೂ ಸೇರಿ ಆಚರಿಸುವಂತಾಗಬೇಕೆಂದು ಉಪನ್ಯಾಸಕ ಡಾ. ಕೆ.ಎಚ್ ಕುಮಾರಸ್ವಾಮಿ ಹೇಳಿದರು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಾಜ ಕಲ್ಯಾನ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ್ರವರ ೧೧೯ನೇ ಜಯಂತಿ ಕಾ...