Posts

ಜಾನಪದ ಕಲೆಗಳನ್ನು ಮೈಗೊಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಿ : ಡಿ. ಮಂಜುನಾಥ್

Image
 ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ಭದ್ರಾವತಿ ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಉದ್ಯಮಿ ಬಿ.ಕೆ ಜಗನ್ನಾಥ್, ಡಿ. ಮಂಜುನಾಥ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಜಾನಪದ ಕಲೆಗಳನ್ನು ಮೈಗೂಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಕಲೆ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಾನಪದ ಪರಿಷತ್ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.       ಅವರು ಶನಿವಾರ ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು, ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.       ಜಾನಪದ ಕಲೆಗಳು ತಮ್ಮದೇ ಆದ ವಿಶಿಷ್ಟತೆಯನ್ನು ಹೊಂದಿವೆ. ಪ್ರತಿಯೊಂದು ಕಲೆಗೂ ಅದರದೇ ಆದ ಮಹತ್ವವಿದೆ. ಇವುಗಳ ಕುರಿತು ಪ್ರತಿಯೊಬ್ಬರು ಸಮಗ್ರವಾಗಿ ಅಧ್ಯಯನ ನಡೆಸಿ ತಿಳಿದುಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆಗಳ ಸಮಗ್ರ ಮಾಹಿತಿಯನ್ನು ಕರ್ನಾಟಕ ಜಾನಪದ ಪರಿಷತ್ ಸಂಗ್ರಹಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಜಿಲ್ಲಾ ಮತ್ತು ತಾಲೂಕು ಶ...

ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ : ಡಾ. ಬಿ.ಜಿ ಧನಂಜಯ

Image
ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಬಿ.ಕೆ ಮೋಹನ್, ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಶಿಕ್ಷಣ ಎಂಬುದು ಒಂದು ಅದ್ಬುತವಾದ ಶಕ್ತಿಯಾಗಿದ್ದು, ಇದರ ಮೂಲಕ ನಾವು ಉತ್ತಮ ಸಮಾಜ ರೂಪಿಸಿಕೊಳ್ಳಲು ಸಾಧ್ಯ ಎಂದು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.       ಅವರು ಶನಿವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆವತಿಯಿಂದ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.       ಸಮಾಜವನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಶಿಕ್ಷಕರ ಕೊಡುಗೆ ಅಪಾರವಾಗಿದ್ದು, ಪ್ರತಿಯೊಬ್ಬರು ಶಿಕ್ಷಣದ ಮಹತ್ವ ಅರಿತುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಂಡಾಗ ಮಾತ್ರ ಶಿಕ್ಷಕ ವೃತ್ತಿಯ ಶ್ರಮ ಸಾರ್ಥಕವಾಗುತ್ತದೆ. ಶಿಕ್ಷಕರು ಸಹ ತಮ್ಮ ಜವಾಬ್ದಾರಿ ಅರಿತುಕೊಂಡು ಕರ್ತವ್ಯ ನಿರ್ವಹಿಸಬೇಕೆಂದರು.   ...

ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Image
ಎಂ.ಟಿ ಲಕ್ಷ್ಮೀಶ (ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ)      ಭದ್ರಾವತಿ : ತಾಲೂಕಿನ ಎಲ್. ಉಮಾದೇವಿ, ಎಂ.ಟಿ ಲಕ್ಷ್ಮೀಶ ಮತ್ತು ಡಿ.ಆರ್ ರಂಗರಾಜು ಸೇರಿದಂತೆ ೩ ಶಿಕ್ಷಕರಿಗೆ ಈ ಬಾರಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಶಿಕ್ಷಕ ವರ್ಗದಲ್ಲಿ ಸಂತಸವನ್ನುಂಟು ಮಾಡಿದೆ.  ಎಂ.ಟಿ ಲಕ್ಷ್ಮೀಶ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ      ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ(ಜಯಶ್ರೀ ಸರ್ಕಲ್ ಕ್ಲಸ್ಟರ್) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಟಿ ಲಕ್ಷ್ಮೀಶ ಅವರಿಗೆ ಈ ಬಾರಿ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.       ಧಾರವಾಡದಲ್ಲಿ ೨೦೧೬ರಲ್ಲಿ ವೃತ್ತಿ ಆರಂಭಿಸಿದ ಇವರು ನಂತರ ತಾಲೂಕಿನ ಬಿಳಿಕಿ ತಾಂಡ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕಳೆದ ೨ ವರ್ಷಗಳಿಂದ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವೃತ್ತಿ ನಿರ್ವಹಿಸುತ್ತಿದ್ದಾರೆ. ಇವರ ವೃತ್ತಿಯಲ್ಲಿನ ಹಲವು ಸಾಧನೆಗಳನ್ನು ಪರಿಗಣಿಸಿ ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.       ಸೆ.೫ರ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಲ...

ವಿವಿಧೆಡೆ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ : ಶ್ರೀ ಕೃಷ್ಣ-ರಾಧೆ ವೇಷದಲ್ಲಿ ಕಣ್ಮನ ಸೆಳೆದ ಪುಟಾಣಿ ಮಕ್ಕಳು

Image
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಚರಿಸಲಾಯಿತು.       ಭದ್ರಾವತಿ: ನಗರದ ವಿವಿಧೆಡೆ ತಾಲೂಕು ಗೊಲ್ಲ ಯಾದವ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲಾಯಿತು.       ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕೃಷ್ಣ ಜನ್ಮಾಷ್ಟಮಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಚರಿಸಲಾಯಿತು. ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಶ್ರೀ ಕೃಷ್ಣನಿಗೆ ತೊಟ್ಟಿಲು ಸೇವೆ ಕೈಗೊಳ್ಳಲಾಗಿತ್ತು. ತೀರ್ಥಪ್ರಸಾದ ವಿನಿಯೋಗ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನೆರವೇರಿದವು.       ಅರ್ಚಕರಾದ ರಮೇಶ್ ಭಟ್ ಅರಳಿಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. ತಾಲೂಕು ಗೊಲ್ಲ ಯಾದವ ಸಂಘದ ಅಧ್ಯಕ್ಷರಾದ ವೆಂಕಟೇಶಪ್ಪ ಹಾಗು ಪದಾಧಿಕಾರಿಗಳು, ಸೇವಾಕರ್ತರು, ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಶ್ರೀ ಕೃಷ್ಣನ ದರ್ಶನ ಪಡೆದರು. ವಿಶೇಷವಾಗಿ ಭಕ್ತರಿಗೆ ಲಾಡು ವಿತರಿಸಲಾಯಿತು.  ಭದ್ರಾವತಿ ತಾಲೂಕು ...

ಹಿರಿಯ ಫೈಲ್ವಾನ್ ರುದ್ರಪ್ಪ ನಿಧನ

Image
ರುದ್ರಪ್ಪ       ಭದ್ರಾವತಿ : ಹಳೇನಗರ ಕೋಟೆ ಏರಿಯಾ ಶ್ರೀ ಬಸವಣ್ಣ ದೇವಸ್ಥಾನ ಸಮೀಪದ ಶ್ರೀ ಹಿಂದೂ ಕೋಟೆ ಗರಡಿ ಹಿರಿಯ ಫೈಲ್ವಾನ್ ರುದ್ರಪ್ಪ(೯೩) ಗುರುವಾರ ನಿಧನ ಹೊಂದಿದರು.       ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ರುದ್ರಪ್ಪರವರು ಹಲವಾರು ಪ್ರಶಸ್ತಿ, ಬಿರುದುಗಳನ್ನು ಪಡೆದುಕೊಂಡಿದ್ದರು. ಯುವಕರಿಗೆ ಕುಸ್ತಿ ತರಬೇತಿ ನೀಡುವ ಮೂಲಕ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಅವರ ಪ್ರತಿಭೆ ಅನಾವರಣಗೊಳಿಸಲು ಕಾರಣಕರ್ತರಾಗಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ಹಳೇನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.        ಇವರ ನಿಧನಕ್ಕೆ ಹಿರಿಯ ಫೈಲ್ವಾನರಾದ ಕೃಷ್ಣಪ್ಪ, ನಂಜುಂಡಪ್ಪ, ಚನ್ನಬಸಪ್ಪ, ಬಿ.ಎಸ್ ನಾರಾಯಣಪ್ಪ ಮತ್ತು ನರಸಿಂಹಾಚಾರ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.     

ಸಹಕಾರ ಮಹಾಮಂಡಳಿ ನೂತನ ನಿರ್ದೇಶಕರಿಂದ ಮುಖ್ಯಮಂತ್ರಿಗೆ ಸನ್ಮಾನ

Image
ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ ಶಿವಕುಮಾರ್  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ನಿರ್ದೇಶಕರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸನ್ಮಾನಿಸುವ ಮೂಲಕ ಮಂಡಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು.     ಭದ್ರಾವತಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೂತನ ನಿರ್ದೇಶಕರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸನ್ಮಾನಿಸುವ ಮೂಲಕ ಮಂಡಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು.  ಮಂಡಳಿ ನೂತನ ನಿರ್ದೇಶಕರಾದ ಶಾಸಕ ಜಿ.ಟಿ ದೇವೇಗೌಡ, ವೆಂಕಟರಾವ್ ನಾಡಗೌಡ, ಜಗದೀರ್ಶ ಎಂ. ಕವಟಗಿಮಠ, ಬಿ.ಕೆ ಶಿವಕುಮಾರ್, ಎಚ್.ಎನ್ ಅಶೋಕ್, ಬಿಸಿ ಲೋಕಪ್ಪಗೌಡ, ಜೆ.ಎಂ ಪ್ರಸಾದ್, ಅಭಿಷೇಕ ಆರ್. ಪಾಟೀಲ, ಬಿ. ಶಶಿಕುಮಾರ್ ರೈ, ಕೃಷ್ಣಗೌಡ ಬಿ. ಪಾಟೀಲ, ವಿಶ್ವನಾಥರೆಡ್ಡಿ ಎಸ್. ದರ್ಶನಾಪೂರ, ಕಾಶಿಲಿಂಗ ಬಿ. ಹುಡೇದ, ಕೆ. ಸುನೀಲ್ ಮತ್ತು ಕೆ.ಪಿ ಚನ್ನಭೈರೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ನೂತನ ಅಧ್ಯಕ್ಷರು-ಉಪಾಧ್ಯಕ್ಷರ ಆಯ್ಕೆ:  ಶುಕ್ರವಾರ ನಡೆದ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಪುನಃ ಶಾಸಕ ಜಿ.ಟಿ ದೇವೇಗೌಡ ಆಯ್ಕೆಯಾಗಿದ್ದು, ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.  ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಸಹೋದರ ಹಾಗು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್...

ಶ್ರಾವಣ ಮಾಸ ಭಕ್ತಿ, ಪ್ರಕೃತಿ ಸೌಂದರ್ಯದ ಮಾಸ : ಗೀತಾ ರಾಜಕುಮಾರ್

Image
ವೀರಶೈವ ಲಿಂಗಾಯಿತ ಮಹಿಳಾ ಸಮಾಜದಿಂದ ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶ್ರಾವಣ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ : ವೀರಶೈವ ಲಿಂಗಾಯಿತ ಮಹಿಳಾ ಸಮಾಜದಿಂದ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶ್ರಾವಣ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.           ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಮಾತನಾಡಿ, ಶ್ರಾವಣ ಮಾಸ ಭಕ್ತಿ ಮತ್ತು ಪ್ರಕೃತಿ ಸೌಂದರ್ಯದ ಮಾಸ. ರೈತರು ಮಳೆಯೊಂದಿಗೆ ತಮ್ಮ ಚಟುವಟಿಕೆಗಳನ್ನು ಆರಂಭಿಸುವ ಸಮಯ ಇದ್ದಾಗಿದ್ದು, ಎಲ್ಲೆಡೆ ಹಸಿರು ಕಂಗೊಳಿಸುತ್ತಿರುತ್ತದೆ. ಮತ್ತೊಂದೆಡೆ ಹಬ್ಬಗಳ ಮಾಸ ಇದಾಗಿದ್ದು, ಧಾರ್ಮಿಕ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತವೆ. ನಮ್ಮ ಸಂಸ್ಕೃತಿಯಲ್ಲಿ ಶ್ರಾವಣ ಮಾಸ ತನ್ನದೇ ಮಹತ್ವ ಹೊಂದಿದೆ ಎಂದರು.       ಮಹಿಳೆಯರು ಇನ್ನೂ ಹೆಚ್ಚು ಸಂಘಟಿತರಾಗಿ ಕಾರ್ಯ ಚಟುವಟಿಕೆಗಳನ್ನು ಆಯೋಜಿಸುವ ಜೊತೆಗೆ ಸಮಾಜದ ಬಲವರ್ಧನೆಗೆ ಮುಂದಾಗಬೇಕು. ಸದಸ್ಯರ ಸಂಖ್ಯೆ ಹೆಚ್ಚಿಸಿಕೊಳ್ಳಬೇಕೆಂದರು.       ವಿಜಯ ಜಗನ್ನಾಥ್,  ಕುಸುಮಾ ತೀರ್ಥಯ್ಯ, ಗೀತಾ ನಾಗರಾಜ್  ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಗರತ್ನವಾಗೀಶ್ ಕೋಠಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಪರಿಮಳ ರೋಹಿತ್ ಸ್...

ಮಹಿಳೆಯರ ಸಬಲೀಕರಣ, ಕೌಲಶ್ಯ ಅಭಿವೃದ್ಧಿಗೆ ವಿಐಎಸ್‌ಎಲ್ ಸದಾ ಬದ್ದ : ಅನೂಪ್ ಕುಮಾರ್

Image
ಇಸ್ಪಾತ್ ಮಹಿಳಾ ಸಮಾಜದಲ್ಲಿ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಕೇಂದ್ರ ಆರಂಭ  ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ಸೈಲ್-ವಿಐಎಎಲ್) ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್.ಆರ್) ಅಡಿಯಲ್ಲಿಶಿವಮೊಗ್ಗ ಚೈತನ್ಯ ಗ್ರಾಮೀಣಾಭಿವೃದ್ಧಿ ಸೊಸೈಟಿ ಸಹಯೋಗದೊಂದಿಗೆ ನಗರದ ಇಸ್ಪಾತ್ ಮಹಿಳಾ ಸಮಾಜದ ಆವರಣದಲ್ಲಿ ಆರಂಭಿಸಲಾಗಿರುವ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಕೇಂದ್ರ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಉದ್ಘಾಟಿಸಿ ಮಾತಾಡಿದರು.       ಭದ್ರಾವತಿ:  ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ಸೈಲ್-ವಿಐಎಎಲ್) ತನ್ನ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್.ಆರ್) ಅಡಿಯಲ್ಲಿ ಮಹಿಳಾ ಸಬಲೀಕರಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶ ಹೊಂದಿದ್ದು, ಈ ನಿಟ್ಟಿನಲ್ಲಿ ನಿರಂತರವಾಗಿ ತನ್ನ ಬದ್ಧತೆ ಕಾಯ್ದುಕೊಂಡು ಬಂದಿದೆ ಎಂದು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಹೇಳಿದರು.       ಕಾರ್ಖಾನೆಯ ಒಡಂಬಡಿಕೆಯ ಪಾಲುದಾರ ಸಂಸ್ಥೆ ಶಿವಮೊಗ್ಗ ಚೈತನ್ಯ ಗ್ರಾಮೀಣಾಭಿವೃದ್ಧಿ ಸೊಸೈಟಿ ಸಹಯೋಗದೊಂದಿಗೆ ನಗರದ ಇಸ್ಪಾತ್ ಮಹಿಳಾ ಸಮಾಜದ ಆವರಣದಲ್ಲಿ ಆರಂಭಿಸಲಾಗಿರುವ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.       ...

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದಲ್ಲಿ ಅಡಗಿ ಕುಳಿತ್ತಿದ್ದ ರೌಡಿಶೀಟರ್ !

Image
ಸಿನಿಮೀಯ ರೀತಿ ಕಾರ್ಯಾಚರಣೆ ನಡೆಸಿ ಬಂಧಿಸಿದ ನ್ಯೂಟೌನ್ ಠಾಣೆ ಪೊಲೀಸರು ಪೊಲೀಸರಿಂದ ತಪ್ಪಿಸಿಕೊಳ್ಳಲು ಸುಮಾರು ಅರ್ಧ ಗಂಟೆ ಕಾಲ ಕೊಳದಲ್ಲಿ ಗಿಡಗಳ ಮಧ್ಯೆ ಅಡಗಿ ಕುಳಿತ್ತಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಬಂಧಿಸಿರುವ ಘಟನೆ  ಭದ್ರಾವತಿಯಲ್ಲಿ ನಡೆದಿದೆ.       ಭದ್ರಾವತಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಸುಮಾರು ಅರ್ಧ ಗಂಟೆ ಕಾಲ ಕೊಳದಲ್ಲಿ ಗಿಡಗಳ ಮಧ್ಯೆ ಅಡಗಿ ಕುಳಿತ್ತಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಬಂಧಿಸಿರುವ ಘಟನೆ ನಡೆದಿದೆ.       ಬಂಧನದ ಆದೇಶದೊಂದಿಗೆ ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿಯಲ್ಲಿ ರೌಡಿಶೀಟರ್ ದಿಲೀಪನನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಕೊಲೆ, ಕಳ್ಳತನ ಸೇರಿದಂತೆ ೧೬ ಪ್ರಕರಣಗಳಲ್ಲಿ ಆರೋಪಿಯಾಗಿರುವ  ರೌಡಿಶೀಟರ್ ದಿಲೀಪನ ಬಂಧನಕ್ಕೆ ನ್ಯಾಯಾಲಯ ೩ ಬಾರಿ ಬಂಧನ ಆದೇಶ ಜಾರಿ ಮಾಡಿತ್ತು. ಆದರೂ ಈತ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಬುಧವಾರ ಖಚಿತ ಮಾಹಿತಿ ಮೇರೆಗೆ ನ್ಯೂಟೌನ್ ಠಾಣೆ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ. ಪೊಲೀಸರು ಬರುವ ಬಗ್ಗೆ ಮಾಹಿತಿ ತಿಳಿದು ಮನೆಯಿಂದ ದಿಲೀಪ್ ಪರಾರಿಯಾಗಿದ್ದಾನೆ.       ಪೊಲೀಸರು ಸುತ್ತಮುತ್ತ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಕೊನೆಗೆ ಭಂಡಾರಹಳ್ಳಿ ಕೊಳ ಬಳಿ ದಿಲೀಪ್ ಹೋಗಿರುವ ಬಗ್ಗೆ ...

ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೬ನೇ ವರ್ಷದ ಪುಣ್ಯಸ್ಮರಣೆ : ರಕ್ತದಾನ, ನೇತ್ರದಾನ

Image
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಅಭಿಮಾನಿಗಳು ಅಪ್ಪಾಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.          ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ನೇತ್ರದಾನ ಶಿಬಿರ ಆಯೋಜಿಸಲಾಗಿತ್ತು. ಮಧ್ಯಾಹ್ನ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.       ಪಕ್ಷದ ತಾಲೂಕು ಅಧ್ಯಕ್ಷ ಆರ್. ಕುರುಣಾಮೂರ್ತಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಮುಖಂಡರಾದ ಟಿ. ಚಂದ್ರೇಗೌಡ, ಶಿವಾಜಿರಾವ್ ಗಾಯಕ್ವಾಡ್, ರಘುನಾಥರಾವ್ ಗಿಡ್ಡೆ, ಕರಿಯಪ್ಪ, ಚನ್ನಪ್ಪ, ಹುಚ್ಚಪ್ಪ, ಎನ್. ಕೃಷ್ಣಪ್ಪ, ಎಂ.ಎ ಅಜಿತ್, ಅರುಣ್‌ಕುಮಾರ್, ಮಧುಸೂದನ್, ಧರ್ಮರಾಜ್, ವಿಶಾಲಾಕ್ಷ್ಮಿ,...

ಯುಬಿಎಸ್‌ಎಫ್ ಯೋಜನೆಯಡಿ ಪೊಲೀಸ್ ಇಲಾಖೆಗೆ ೪ ವಾಹನಗಳ ಹಸ್ತಾಂತರ

Image
ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪೊಲೀಸ್ ಅಧೀಕ್ಷಕರ ನಿಖಿಲ್ .ಬಿ ಸೇರಿದಂತೆ ಗಣ್ಯರ ಉಪಸ್ಥಿತಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹಯೋಗದೊಂದಿಗೆ ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್(ಯುಬಿಎಸ್‌ಎಫ್)ವತಿಯಿಂದ ಭದ್ರಾವತಿ ಪೊಲೀಸ್ ಉಪವಿಭಾಗಕ್ಕೆ ಮಂಗಳವಾರ ೪ ವಾಹನಗಳನ್ನು ಹಸ್ತಾಂತರಿಸಲಾಯಿತು.       ಭದ್ರಾವತಿ : ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹಯೋಗದೊಂದಿಗೆ ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್(ಯುಬಿಎಸ್‌ಎಫ್)ವತಿಯಿಂದ ಪೊಲೀಸ್ ಉಪವಿಭಾಗಕ್ಕೆ ಮಂಗಳವಾರ ೪ ವಾಹನಗಳನ್ನು ಹಸ್ತಾಂತರಿಸಲಾಯಿತು.       ಹಳೇನಗರದ ತಾಲೂಕು ಕಛೇರಿ, ಮಿನಿ ವಿಧಾನಸೌಧ ಹಿಂಭಾಗದ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ .ಬಿ ಅವರಿಗೆ ವಾಹನಗಳನ್ನು ಹಸ್ತಾಂತರಿಸುವ ಮೂಲಕ ಹಸಿರು ನಿಶಾನೆ ತೋರಿಸಿದರು.       ನಗರದ ವಿವಿಧೆಡೆ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಅನುದಾನ ಸೇರಿದಂತೆ ಪೊಲೀಸ್ ಇಲಾಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕರು ಭರವಸೆ ...

ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗಾಗಿ ಸೆ.೧೫ರಂದು `ಶಿವಮೊಗ್ಗದಿಂದ ಬೆಂಗಳೂರಿಗೆ ಪಾದಯಾತ್ರೆ'

Image
ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿದರು.       ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಅಭಿವೃದ್ಧಿಪಡಿಸಲು ಆಗ್ರಹಿಸಿ ಮತ್ತು ಅನ್ನದಾತ ರೈತರ ಹಾಗು ಶ್ರಮಜೀವಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸೆ.೧೫ರಂದು ಜಿಲ್ಲಾಧಿಕಾರಿ ಕಛೇರಿಯಿಂದ ಬೆಂಗಳೂರು ವಿಧಾನಸೌಧದವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ತಿಳಿಸಿದರು.       ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತರತ್ನ, ಶ್ರೇಷ್ಠ ತಂತ್ರಜ್ಞ ಸರ್.ಎಂ ವಿಶ್ವೇಶ್ವರಾಯ ಹಾಗು ಸರ್ ಮಿರ್ಜಾ ಇಸ್ಮಾಯಿಲ್‌ರವರ ದೂರದೃಷ್ಟಿ ಫಲವಾಗಿ ಕ್ಷೇತ್ರವೂ ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳುವಂತಹ, ಸಾವಿರಾರು ಕಾರ್ಮಿಕರು ಹಾಗು ಕುಟುಂಬಗಳಿಗೆ ಆಶ್ರಯದಾತವಾಗುವಂತಹ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಬೃಹತ್ ಕಾರ್ಖಾನೆಗಳನ್ನು ಸ್ಥಾಪಿಸುವಲ್ಲಿ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಶ್ರಮ ಹೆಚ್ಚಿನದ್ದಾಗಿದೆ.  ಕಾರ್ಖಾನೆಗಳಿಗೆ ಅಗತ್ಯವಿರುವ ಸಾವಿರಾರು ಏಕರೆ ಜಮೀನನ್ನು ಉಚಿತವಾಗಿ ನೀಡಿ, ಭದ್ರಾ ಜಲಾಶಯ ನಿರ್...

ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮಾಸದ ನೆನಪು

Image
ಪುನಃ ಕುಟುಂಬಕ್ಕೆ ಉಕ್ಕಿನ ನಗರ ಒಲಿಯುವುದೇ ? ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ  ಮುಖ್ಯಾಂಶಗಳು:  - ೩ ಬಾರಿ ಕ್ಷೇತ್ರದ ಶಾಸಕರಾಗಿದ್ದ ಎಂ.ಜೆ ಅಪ್ಪಾಜಿ. - ಕಣ್ಮರೆಯಾಗಿ ೬ ವರ್ಷಗಳು ಕಳೆದರೂ ಮಾಸದ ನೆನಪು - ಅಲ್ಪ ಮತಗಳ ಹಿನ್ನಡೆ ಅನುಭವಿಸಿದ ಪತ್ನಿ - ಮುಂಬರುವ ಚುನಾವಣೆಯಲ್ಲಿ ಅದೃಷ್ಟ ಯಾರಿಗೆ? - ಎರಡು ಕುಟುಂಬಗಳ ಪುತ್ರರ ನಡುವೆ ಪೈಪೋಟಿ ನಡೆಯುವುದೇ? * ಅನಂತಕುಮಾರ್     ಭದ್ರಾವತಿ: ಕ್ಷೇತ್ರದ ೩ ದಶಕಗಳ ರಾಜಕೀಯ ಕೊಂಡಿಯೊಂದು ಕಳಚಿ ಹೋಗಿ ಇದೀಗ ೬ ವರ್ಷ ಕಳೆದಿದ್ದು, ಆದರೂ ಸಹ ಜನಮಾನಸದಲ್ಲಿ ಮಾಜಿ ಶಾಸಕ ಎಂ.ಜಿ ಅಪ್ಪಾಜಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆ.  ಸೆ.೨, ೨೦೨೦ರಂದು ನಡುರಾತ್ರಿ ಅಪ್ಪಾಜಿ ಇಹಲೋಕ ತ್ಯಜಿಸುತ್ತಾರೆಂಬ ಕನಸು ಸಹ ಯಾರಿಗೂ ಇರಲಿಲ್ಲ. ಅವರ ನಿಧನದ ಸುದ್ದಿ ಕ್ಷೇತ್ರದ ಜನತೆಯನ್ನು ಒಮ್ಮೆ ತಲ್ಲಣಗೊಳಿಸಿತ್ತು.     ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕನಾಗಿ ೨೦ ರು. ಸಂಬಳಕ್ಕೆ ದುಡಿಯುತ್ತಿದ್ದ ಅಪ್ಪಾಜಿ ಆರಂಭದಲ್ಲಿ ಕಾರ್ಮಿಕ ಹೋರಾಟಗಾರನಾಗಿ ಗುರುತಿಸಿ ಕೊಂಡಿದ್ದರು. ತಿಂಗಳ ಸಂಬಳದಲ್ಲಿ ಜೀವನ ನಡೆಸುವುದೇ ಕಷ್ಟವಿರುವ ಸಂದರ್ಭದಲ್ಲಿ ಜನರು ನೀಡಿದ ದೇಣಿಗೆ ಹಣದಿಂದಲೇ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಜಕೀಯ ಅಸ್ತಿತ್ವ ಕಂಡುಕೊಂಡರು. ನಂತರ ಅವರು ೩ ಬಾರಿ ಶ...

ವಿಐಎಸ್‌ಎಲ್ ನಿವೃತ್ತ ಉದ್ಯೋಗಿ ಕೊಂಡ ಪಂಪಣ್ಣ ನಿಧನ

Image
ಕೊಂಡ ಪಂಪಣ್ಣ       ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಸಿದ್ದಾರೂಢ ನಗರದ ನಿವಾಸಿ ಕೊಂಡ ಪಂಪಣ್ಣ(೮೦) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.       ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ನೆರವೇರಲಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದವರಾದ ಪಂಪಣ್ಣರವರು ವಿಐಎಸ್‌ಎಲ್ ಕಾರ್ಖಾನೆ ಸುಮಾರು ೪೦ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಅಲ್ಲದೆ ತಾಲೂಕು ಬಲಿಜ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.  ಇವರ ನಿಧನಕ್ಕೆ ತಾಲೂಕು ಬಲಿಜ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೫ನೇ ಆರಾಧನಾ ಮಹೋತ್ಸವ : ಉತ್ಸವ ಮೆರವಣಿಗೆ

Image
ಭದ್ರಾವತಿ ನಗರದ ವಿವಿಧೆಡೆ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೫ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸೋಮವಾರ ಹಳೇನಗರದ ಶ್ರೀ ವೀರಾಂಜನೇಯ, ಶ್ರೀ ವಾದಿರಾಜ ಗುರುಸಾರ್ವಭೌಮರ ಹಾಗು ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮಠದಲ್ಲಿ ರಾಯರ ಉತ್ಸವ ಮೆರವಣಿಗೆ ನಡೆಸಲಾಯಿತು.       ಭದ್ರಾವತಿ: ನಗರದ ವಿವಿಧೆಡೆ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೫ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸೋಮವಾರ ರಾಯರ ಉತ್ಸವ ಮೆರವಣಿಗೆ ನಡೆಸಲಾಯಿತು.  ಆರಾಧನಾ ಮಹೋತ್ಸವ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳಿಂದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ದರ್ಶನ ಪಡೆಯಲು ನಗರದ ವಿವಿಧೆಡೆ ಮಠಗಳಿಗೆ ಸಹಸ್ರಾರು ಭಕ್ತರು ಧಾವಿಸುತ್ತಿದ್ದು, ಹಳೇನಗರದ ಶ್ರೀ ವೀರಾಂಜನೇಯ, ಶ್ರೀ ವಾದಿರಾಜ ಗುರುಸಾರ್ವಭೌಮರ ಹಾಗು ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮಠದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಮಠದಿಂದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದವರೆಗೂ ಅಲಂಕೃತಗೊಂಡ ರಥದಲ್ಲಿ ರಾಯರ ಉತ್ಸವ ಮೆರವಣಿಗೆ ನಡೆಸಲಾಯಿತು.      ಉತ್ಸವ ಮೆರವಣಿಗೆ ಆರಂಭಗೊಳ್ಳುತ್ತಿದ್ದಂತೆ ಭಕ್ತರು ರಾಯರಿಗೆ ಜಯಘೋಷಗಳನ್ನು ಹಾಕಿದರು. ಚಂಡೆ ವಾದ್ಯದೊಂದಿಗೆ ವಿವಿಧ ಮಹಿಳಾ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು. ಅಲ್ಲದ...

ಸಹಕಾರ ಮಹಾಮಂಡಳಿ ನೂತನ ನಿರ್ದೇಶಕ ಶಿವಕುಮಾರ್‌ಗೆ ರ್‍ಯಾಮ್ಕೋಸ್ ಸನ್ಮಾನ

Image
 ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ನೂತನವಾಗಿ ಆಯ್ಕೆಯಾಗಿರುವ  ಭದ್ರಾವತಿ ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಅವರನ್ನು ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣಾ ಸಹಕಾರ ಸಂಘ ನಿಯಮಿತ (ರ್‍ಯಾಮ್ಕೋಸ್) ದಿಂದ ಸನ್ಮಾನಿಸಲಾಯಿತು.      ಭದ್ರಾವತಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ನೂತನವಾಗಿ ಆಯ್ಕೆಯಾಗಿರುವ  ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಅವರನ್ನು ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣಾ ಸಹಕಾರ ಸಂಘ ನಿಯಮಿತ (ರ್‍ಯಾಮ್ಕೋಸ್) ದಿಂದ ಸನ್ಮಾನಿಸಲಾಯಿತು.      ನಗರದಲ್ಲಿ ರ್‍ಯಾಮ್ಕೋಸ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಶಿವಕುಮಾರ್ ಅವರು ಅದರ ಷೇರುದಾರರಾಗಿದ್ದು, ಅಲ್ಲದೆ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅದರ ಅಭಿವೃದ್ಧಿಗೆ ನೆರವಾಗುತ್ತಿದ್ದಾರೆ. ಇದೀಗ ಶಿವಕುಮಾರ್ ರವರು  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ರ್‍ಯಾಮ್ಕೋಸ್ ತನ್ನ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿತು.       ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಉಪ...

ವಿಶ್ವೇಶ್ವರಾಯ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ

Image
ಭದ್ರಾವತಿ ವಿಶ್ವೇಶ್ವರಾಯ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.      ಭದ್ರಾವತಿ: ವಿಶ್ವೇಶ್ವರಾಯ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು.      ಶಾಲೆಯ ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಎಲ್ಲರ ಗಮನ ಸೆಳೆದರು.      ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ ಮಾತನಾಡಿ, ಶ್ರೀಕೃಷ್ಣನ ಜೀವನ ಹಾಗೂ ಬೋಧನೆಗಳು ಇಂದಿನ ಮಕ್ಕಳಿಗೆ ಅತ್ಯಂತ ಪ್ರೇರಣಾದಾಯಕವಾಗಿವೆ ಎಂದರು.  ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಹೀನ ಬಾನು ಅವರು ಮಾತನಾಡಿ, ಮಕ್ಕಳು ಶ್ರೀಕೃಷ್ಣನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.      ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹಾಗೂ ಶಾಲೆಯ ಎಲ್ಲಾ ವಿಭಾಗಗಳ ಮುಖ್ಯ ಶಿಕ್ಷಕರು ಹಾಗು ಸಿಬ್ಬಂದಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.      ಎಲ್‌ಕೆಜಿ-ಯುಕೆಜಿ ವಿಭಾಗದ ವಿದ್ಯಾರ್ಥಿನಿಯರಾದ ಮಾಹಿ...

ಮಂಜುನಾಥ್ ನಿಧನ

Image
ಮಂಜುನಾಥ್       ಭದ್ರಾವತಿ : ನಗರದ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ, ಹಿರಿಯ ಮುಖಂಡರಾದ ಮಂಜುನಾಥ್(೮೫) ಶನಿವಾರ ರಾತ್ರಿ ನಿಧನ ಹೊಂದಿದರು.       ಪತ್ನಿ ವಸಂತಮ್ಮ, ಇಬ್ಬರು ಪುತ್ರಿಯರು, ೩ ಪುತ್ರರು ಇದ್ದಾರೆ. ಮಂಜುನಾಥ್‌ರವರು ಕೃಷ್ಣ ಪ್ರಾವಿಜನ್ ಅಂಗಡಿಯ ವೆಂಕಟಸುಬ್ಬಯ್ಯ ಅವರ ಪುತ್ರರಾಗಿದ್ದಾರೆ. ಇವರ ನಿಧನಕ್ಕೆ: ಶ್ರೀ ಮಹಾಗಣಪತಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೆ.ಜೆ ಶ್ರೀನಿವಾಸ್, ಉಪಾಧ್ಯಕ್ಷ ಕೆಂಚಪ್ಪನವರು, ಸಹ ಕಾರ್ಯದರ್ಶಿ ಎ.ಎನ್ ಕಾರ್ತಿಕ್, ಖಜಾಂಚಿ ಮಂಜುನಾಥ್ ಮತ್ತು ಟ್ರಸ್ಟ್ ಸದಸ್ಯರು ಸಂತಾಪ ಸೂಚಿಸುತ್ತಾರೆ.     

ಉಕ್ಕಿನ ನಗರದ ವಿವಿಧೆಡೆ ಸಂಭ್ರಮದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೫ನೇ ಆರಾಧನಾ ಮಹೋತ್ಸವ

Image
ಭದ್ರಾವತಿ ಹಳೇನಗರದ ಶ್ರೀ ವೀರಾಂಜನೇಯ, ಶ್ರೀ ವಾದಿರಾಜ ಗುರುಸಾರ್ವಭೌಮರ ಹಾಗು ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮಠದಲ್ಲಿ ಭಾನುವಾರ ಆರಾಧನಾ ಮಹೋತ್ಸವ ಮಹೋತ್ಸವ ಅಂಗವಾಗಿ ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.       ಭದ್ರಾವತಿ: ನಗರದ ವಿವಿಧೆಡೆ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ೩೫೫ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾನುವಾರ ಬೆಳಿಗ್ಗೆಯಿಂದಲೇ ಭಕ್ತರು ಶ್ರೀ ರಾಘವೇಂದ್ರ ಗುರುಸಾರ್ವಭೌಮರ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿತು.       ಹಳೇನಗರದ ಶ್ರೀ ವೀರಾಂಜನೇಯ, ಶ್ರೀ ವಾದಿರಾಜ ಗುರುಸಾರ್ವಭೌಮರ ಹಾಗು ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮಠದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಭಕ್ತರು ಸಾಲುಗಟ್ಟಿ ನಿಂತು ರಾಯರ ದರ್ಶನ ಪಡೆದರು.  ಭದ್ರಾವತಿ ಹಳೇನಗರದ ಶ್ರೀ ವೀರಾಂಜನೇಯ, ಶ್ರೀ ವಾದಿರಾಜ ಗುರುಸಾರ್ವಭೌಮರ ಹಾಗು ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮಠದಲ್ಲಿ ಭಾನುವಾರ ರಾಯರ ಆರಾಧನಾ ಮಹೋತ್ಸವ ಮಹೋತ್ಸವದ ಹಿನ್ನಲೆಯಲ್ಲಿ ಸಹಸ್ರರಾರು ಭಕ್ತರು ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತು ದರ್ಶನ ಪಡೆದರು.       ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿ...

ವೆಳಾoಗಣಿ ಆರೋಗ್ಯ ಮಾತೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ

Image
     ಭದ್ರಾವತಿ ಹಳೇ ನಗರ ವ್ಯಾಪ್ತಿಯ ಗಾoಧಿನಗರದ ವೆಳಾoಗಣಿ ಆರೋಗ್ಯ ಮಾತೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಶನಿವಾರ ಚಿಕ್ಕಮಗಳೂರು ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರಾದ ಅಂತೋಣಿ ಸ್ವಾಮಿಯವರು ಧ್ವಜರೋಹಣ ನೆರವೇರಿಸುವುದರ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.      ಭದ್ರಾವತಿ : ಹಳೇ ನಗರ ವ್ಯಾಪ್ತಿಯ ಗಾoಧಿನಗರದ ವೆಳಾoಗಣಿ ಆರೋಗ್ಯ ಮಾತೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಶನಿವಾರ ಚಿಕ್ಕಮಗಳೂರು ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರಾದ ಅಂತೋಣಿ ಸ್ವಾಮಿಯವರು ಧ್ವಜರೋಹಣ ನೆರವೇರಿಸುವುದರ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.     ವಾದ್ಯಮೇಳಗಳೊಂದಿಗೆ ಪುಣ್ಯಕ್ಷೇತ್ರದ ಮುಂಭಾಗ ಸ್ಥಾಪಿಸಿರುವ ಧ್ವಜ ಸ್ತoಭದಲ್ಲಿ ಪುಷ್ಪರ್ಚನೆ ಮಾಡುವುದರೊಂದಿಗೆ ಮಾತೆಯ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಧರ್ಮಾಧ್ಯಕ್ಷರಾದ ಅಂತೋಣಿ ಸ್ವಾಮಿಯವರು ಆವರಣದ ನೂತನ ರಸ್ತೆ ಉದ್ಘಾಟನೆ ಕಾರ್ಯ ನೆರೆವೇರಿಸಿದರು.     ಹೂ, ತಳಿರುತೋರಣ ಹಾಗು ವಿದ್ಯುತ್ ದೀಪಾಲಂಕರಾದಿಂದ ವೆಳಾಂಗಣಿ ಆರೋಗ್ಯ ಮಾತೆ ಪುಣ್ಯಕ್ಷೇತ್ರ ಕಂಗೊಳಿಸುತ್ತಿತ್ತು. ವಿವಿಧ ಧರ್ಮಕೇಂದ್ರಗಳ ಗುರುಗಳಿಂದ ಪೂಜಾ ವಿಧಿ ವಿಧಾನಗಳು ನೆರೆವೇರಿದವು. ಧರ್ಮ ಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾ, ಧರ್ಮ ಭಗೀನಿಯರು, ಭಕ್ತಧಿಗಳು ಪಾಲ್ಗೊಂಡಿದ್ದರು.

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಸೌಹಾರ್ದ ಕೂಟಕ್ಕೆ ಮೆಚ್ಚುಗೆ

Image
ಭದ್ರಾವತಿ ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಈದ್ ಮಿಲಾದ್ ಹಬ್ಬ ಸಂಭ್ರಮದ ಆಚರಣೆ ಹಿನ್ನಲೆಯಲ್ಲಿ ಶನಿವಾರ ಸೌಹಾರ್ದ ಕೂಟ ಏರ್ಪಡಿಸಲಾಗಿತ್ತು.       ಭದ್ರಾವತಿ: ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಈದ್ ಮಿಲಾದ್ ಹಬ್ಬ ಸಂಭ್ರಮದ ಆಚರಣೆ ಹಿನ್ನಲೆಯಲ್ಲಿ ಶನಿವಾರ ಸೌಹಾರ್ದ ಕೂಟ ಏರ್ಪಡಿಸಲಾಗಿತ್ತು.       ಸಂಘದ ಅಧ್ಯಕ್ಷ ಎಂ. ಪುಟ್ಟಸ್ವಾಮಿಗೌಡರವರ ನೇತೃತ್ವದಲ್ಲಿ ನಗರದ ಉಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಆವರಣದಲ್ಲಿರುವ ಸಂಘದ ಕಛೇರಿಯಲ್ಲಿ ಇದೆ ಮೊದಲ ಬಾರಿಗೆ ಹಿಂದೂ ಮತ್ತು ಮುಸ್ಲಿಂ ಭಾವೈಕೈತೆ, ಸೌಹಾರ್ದತೆ ಸಂಕೇತವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಗುತ್ತಿಗೆದಾರರು ಹಾಗು ಮೆಸ್ಕಾಂ ಸಿಬ್ಬಂದಿಗಳು ಮಧ್ಯಾಹ್ನ ಪರಸ್ಪರ ಹಬ್ಬದ ಶುಭಾಶಯ ಹಂಚಿಕೊಳ್ಳುವ ಮೂಲಕ ಆಹಾರ ಸೇವಿಸಿದರು. ಈ ಕಾರ್ಯಕ್ರಮದ ಆಯೋಜನೆಗೆ ಉತ್ತಮ ಪ್ರಶಂಸೆ ವ್ಯಕ್ತವಾಯಿತು.       ಸಂಘದಲ್ಲಿ ಒಟ್ಟು ೮೦ ಮಂದಿ ಗುತ್ತಿಗೆದಾರರು ಸದಸ್ಯರಾಗಿದ್ದು, ಗುತ್ತಿಗೆದಾರರ ಸಮಸ್ಯೆಗಳಿಗೆ ಸಂಘ ಪೂರಕವಾಗಿ ಸ್ಪಂದಿಸುವ ಮೂಲಕ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕು ಸಂಘದ ಮಾಜಿ ಅಧ್ಯಕ್ಷ, ಪ್ರಸ್ತುತ ಜಿಲ್ಲಾ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಕೇಂದ್ರ ಸಮಿತಿ ಮಾಜಿ ಸದಸ್ಯ ಮಹಾಲಿಂಗೇಗೌಡ್ರು, ತಾಲೂಕು ಸಂಘದ ಉಪಾಧ್ಯಕ್ಷ ರವಿಕುಮಾರ್...

ತರಂಗ ಶಾಲೆಯಲ್ಲಿ `ಇಂದು ಸುಧಾ ವೇದಿಕೆ' ಉದ್ಘಾಟನೆ

Image
ಭದ್ರಾವತಿ ನಗರದ ಶಿವಭದ್ರ ಟ್ರಸ್ಟ್, ಲಯನ್ಸ್ ಕ್ಲಬ್ ಶುಗರ್ ಟೌನ್, ನ್ಯೂಟೌನ್ ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ ನಾಗೇಶ್ವರಿ ನಟರಾಜ್ ಸ್ಪೂರ್ತಿ ಮಂಟಪ `ಇಂದು ಸುಧಾ ವೇದಿಕೆ'  ಶನಿವಾರ  ಗುತ್ತಿಗೆದಾರ, ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಗೌರ್ನರ್ ದಿವಾಕರ್ ಶೆಟ್ಟಿ  ಉದ್ಘಾಟಿಸಿದರು.       ಭದ್ರಾವತಿ: ನಗರದ ಶಿವಭದ್ರ ಟ್ರಸ್ಟ್, ಲಯನ್ಸ್ ಕ್ಲಬ್ ಶುಗರ್ ಟೌನ್, ನ್ಯೂಟೌನ್ ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ ನಾಗೇಶ್ವರಿ ನಟರಾಜ್ ಸ್ಪೂರ್ತಿ ಮಂಟಪ `ಇಂದು ಸುಧಾ ವೇದಿಕೆ'  ಶನಿವಾರ  ಗುತ್ತಿಗೆದಾರ, ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಗೌರ್ನರ್ ದಿವಾಕರ್ ಶೆಟ್ಟಿ  ಉದ್ಘಾಟಿಸಿದರು.    ಟ್ರಸ್ಟ್ ಅಧ್ಯಕ್ಷ, ವೈದ್ಯ ಡಾ.ಟಿ. ನರೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪಶು ವೈದ್ಯ ಡಾ. ಜಿ.ಎಂ ನಟರಾಜ್,  ಶ್ರವಣ ದೋಷ ತಪಾಷಣೆ ತಜ್ಞೆ ನಾಗೇಶ್ವರಿ, ಲಯನ್ಸ್ ಕ್ಲಬ್ ಶುಗರ್ ಟೌನ್ ಅಧ್ಯಕ್ಷ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ ಹಾಗೂ ಪದಾಧಿಕಾರಿಗಳು, ಸೂಡ ಸದಸ್ಯ ಫ್ರಾನ್ಸಿಸ್, ಕೇಸರಿ ಪಡೆ ಅಧ್ಯಕ್ಷ ಗಿರೀಶ್, ಶಿವಭದ್ರ ಟ್ರಸ್ಟ್  ಪದಾಧಿಕಾರಿಗಳು, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಮತ್ತು ಮಕ್ಕಳು ...

ವಿದ್ಯಾರ್ಥಿಗಳಿಂದ ಪೂಲೀಸ್ ಕವಾಯತ್ತು ಮೈದಾನದಲ್ಲಿ ರಕ್ಷಾ ಬಂಧನ ಹಬ್ಬದ ಸಂಭ್ರಮ

Image
ಭದ್ರಾವತಿ ನಗರದ ಮಿಲಿಟರಿ ಕ್ಯಾಂಪ್ ಪೊಲೀಸ್ ಕವಾಯತ್ತು ಮೈದಾನದಲ್ಲಿ ಶುಕ್ರವಾರ ಬೈಪಾಸ್ ರಸ್ತೆಯಲ್ಲಿರುವ ಟೈಮ್ ಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಕ್ಷಾ ಬಂಧನ ಆಚರಿಸುವ ಮೂಲಕ ಸಂಭ್ರಮಿಸಿದರು.      ಭದ್ರಾವತಿ: ನಗರದ ಮಿಲಿಟರಿ ಕ್ಯಾಂಪ್ ಪೊಲೀಸ್ ಕವಾಯತ್ತು ಮೈದಾನದಲ್ಲಿ ಶುಕ್ರವಾರ ಬೈಪಾಸ್ ರಸ್ತೆಯಲ್ಲಿರುವ ಟೈಮ್ ಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಕ್ಷಾ ಬಂಧನ ಆಚರಿಸುವ ಮೂಲಕ ಸಂಭ್ರಮಿಸಿದರು.      ಸಮಾಜದ ಶಾಂತಿ  ಸುವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ  ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬ ವಿಶಿಷ್ಟವಾಗಿ ಆಚರಿಸಿದರು.      ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಹಾಗೂ ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಉಪನಿರೀಕ್ಷಕರು ಹಾಗೂ  ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಹಬ್ಬದ ಶುಭ ಕೋರಿದರು.

ಆ.29 ‘ಇಂದು ಸುಧಾ ವೇದಿಕೆ’ ಉದ್ಘಾಟನೆ

Image
ಭದ್ರಾವತಿ: ನಗರದ ಶಿವಭದ್ರ ಟ್ರಸ್ಟ್, ಲಯನ್ಸ್ ಕ್ಲಬ್ ಶುಗರ್ ಟೌನ್, ನ್ಯೂಟೌನ್ ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಿರ್ಮಿಸಲಾಗಿರುವ ನಾಗೇಶ್ವರಿ ನಟರಾಜ್ ಸ್ಪೂರ್ತಿ ಮಂಟಪ ‘ಇಂದು ಸುಧಾ ವೇದಿಕೆ’ ಉದ್ಘಾಟನೆ ಆ.29ರ ಶನಿವಾರ ಬೆಳಗ್ಗೆ 11:30ಕ್ಕೆ ನಡೆಯಲಿದೆ.       ನಗರದ ಗುತ್ತಿಗೆದಾರ ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಗೌರ್ನರ್ ದಿವಾಕರ್ ಶೆಟ್ಟಿ ವೇದಿಕೆ ಉದ್ಘಾಟಿಸುವರು. ಟ್ರಸ್ಟ್ ಅಧ್ಯಕ್ಷ, ವೈದ್ಯ ಡಾ.ಟಿ. ನರೇಂದ್ರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಎಸ್.ಎನ್ ಸುಭಾಷ್ ಕೋರಿದ್ದಾರೆ.

ಜಾತಿನಿಂದನೆ ಪ್ರಕರಣಗಳನ್ನು ಕೂಲಂಕುಷವಾರಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ

Image
ಕುಂದುಕೊರತೆ ಸಭೆಯಲ್ಲಿ  ಪರಿಶಿಷ್ಟ ಜಾತಿ/ಪಂಗಡದ ಮುಖಂಡರು ಆಗ್ರಹ ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪೊಲೀಸ್ ಉಪವಿಭಾಗದ ವತಿಯಿಂದ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು.       ಭದ್ರಾವತಿ: ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಜಾತಿನಿಂದನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರು ಜಾತಿನಿಂದನೆ ಪ್ರಕರಣಗಳನ್ನು ಕೂಲಂಕುಷವಾರಿ ಪರಿಶೀಲನೆ ನಡೆಸಿ ಸಂತ್ರಸ್ಥರಿಗೆ ನ್ಯಾಯ ಒದಗಿಸಿಕೊಡಬೇಕೆಂದು  ಪರಿಶಿಷ್ಟ ಜಾತಿ/ಪಂಗಡದ ಮುಖಂಡರು ಆಗ್ರಹಿಸಿದರು.       ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪೊಲೀಸ್ ಉಪವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು, ಜಾತಿನಿಂದನೆ ಪ್ರಕರಣಗಳನ್ನು ಸರಿಯಾಗಿ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಆಗ್ರಹಿಸಿದರು.      ಪರಿಶಿಷ್ಟ ಜಾತಿ/ಪಂಗಡದವರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕು. ರಂಗಪ್ಪ ವೃತ್ತ ಸಮೀಪ ಪೌರಕಾರ್ಮಿಕ ಕುಟುಂಬದವರು ಹೆಚ್ಚಾಗಿ ವಾಸಿಸುತ್ತಿರುವ ಜೈಭೀಮ್ ನಗರದ ಸೂಕ್ಷ್ಮ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸುವುದು. ಕುಂದು ಕೊರತೆ ಸಭೆಯನ್ನು ಹೊಳೆಹೊನ್ನೂರು ಭಾಗದಲ್ಲೂ ನಡೆ...

ಉಕ್ಕಿನ ನಗರದಲ್ಲಿ ಶಂಕರ ದೃಷ್ಠಿ ಕೇಂದ್ರ ಉದ್ಘಾಟನೆ

Image
ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಭದ್ರಾವತಿ ನಗರದ ಭೂತನಗುಡಿ, ಹಳೇ ಸಂತೆ ಮೈದಾನ ರಸ್ತೆ, 3ನೇ ಕ್ರಾಸ್, ಎಸ್ಎಲ್ಎನ್ ಆಸ್ಪತ್ರೆ ಮುಂಭಾಗ ನೂತನವಾಗಿ ಶಂಕರ ದೃಷ್ಠಿ ಕೇಂದ್ರ ನಿರ್ಮಿಸಲಾಗಿದ್ದು, ವಿಐಎಸ್ಎಲ್ ಕಾರ್ಖಾನೆ ಮಾಜಿ ಉದ್ಯೋಗಿ, ಚಲನಚಿತ್ರ ನಟ ದೊಡ್ಡಣ್ಣ ಕೇಂದ್ರವನ್ನು ಉದ್ಘಾಟಿಸಿದರು.      ಭದ್ರಾವತಿ : ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ನಗರದ ಭೂತನಗುಡಿ, ಹಳೇ ಸಂತೆ ಮೈದಾನ ರಸ್ತೆ, 3ನೇ ಕ್ರಾಸ್, ಎಸ್ಎಲ್ಎನ್ ಆಸ್ಪತ್ರೆ ಮುಂಭಾಗ ನೂತನವಾಗಿ ಶಂಕರ ದೃಷ್ಠಿ ಕೇಂದ್ರ ನಿರ್ಮಿಸಲಾಗಿದ್ದು, ವಿಐಎಸ್ಎಲ್ ಕಾರ್ಖಾನೆ ಮಾಜಿ ಉದ್ಯೋಗಿ, ಚಲನಚಿತ್ರ ನಟ ದೊಡ್ಡಣ್ಣ ಕೇಂದ್ರವನ್ನು ಉದ್ಘಾಟಿಸಿದರು.     ಗುಣಮಟ್ಟದ ಹಾಗೂ ಕೈಗೆಟಕುವ ದರದಲ್ಲಿ ನೇತ್ರ ಚಿಕಿತ್ಸಾ ಸೇವೆಗಳನ್ನು ಒದಗಿಸುತ್ತಿರುವ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಇದೀಗ ಉಕ್ಕಿನ ನಗರದಲ್ಲಿ ದೃಷ್ಠಿ ಕೇಂದ್ರ ತೆರೆಯುವ ಮೂಲಕ ನಗರ ಹಾಗು ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ನೇತ್ರ ಚಿಕಿತ್ಸಾ ಸೇವೆಗಳನ್ನು ಸಮೀಪದಲ್ಲೇ ಒದಗಿಸಲು ಮುಂದಾಗಿದೆ. ಈ ಕೇಂದ್ರದಲ್ಲಿ ಸಮಗ್ರ ಕಣ್ಣಿನ ತಪಾಸಣೆ, ದೃಷ್ಟಿ ಪರೀಕ್ಷೆ, ಟೆಲಿ-ಆಫ್ತಾಲ್ಮಾಲಜಿ ಸಲಹಾ ಸೇವೆಗಳು, ಕನ್ನಡಕ ವಿತರಣೆ ಹಾಗೂ ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸೆಗೆ ಮಾರ್ಗದರ್ಶನ ಮತ್ತು ರೆಫರಲ್ ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಉಪಕ್ರಮದ ಮೂಲಕ ಶಂಕರ ಕಣ್ಣಿನ ಆಸ್ಪತ್ರೆಯು ...

ಉಚಿತ ಮಹಿಳಾ ಟೈಲರಿಂಗ್ ತರಬೇತಿಗೆ ಅರ್ಜಿ

Image
     ಭದ್ರಾವತಿ: ವಿಐಎಸ್‌ಎಲ್ (ಸೈಲ್) ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಹಯೋಗದಲ್ಲಿ ಸೆಪ್ಟೆಂಬರ್‌ನಲ್ಲಿ 30 ದಿನಗಳ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ.       18 ರಿಂದ 40 ವರ್ಷ ವಯಸ್ಸಿನ ನಿರುದ್ಯೋಗ ಯುವತಿಯರು ಹಾಗೂ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಪ್ರದೇಶದ ಬಿಪಿಎಲ್ ಪಡಿತರ  ಚೀಟಿ ಹೊಂದಿರುವ ಬಡ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು.      ಆಸಕ್ತರು ಆ.31ರಂದು ಮಧ್ಯಾಹ್ನ 12 ಗಂಟೆಗೆ ವಿಐಎಸ್‌ಎಲ್ ಇಸ್ಪಾತ್ ಮಹಿಳಾ ಸಮಾಜದ ಕಛೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ 9483061981 ಸಂಪರ್ಕಿಸಬಹುದು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕರಾಗಿ ಬಿ.ಕೆ ಶಿವಕುಮಾರ್ ಆಯ್ಕೆ

Image
ಮಹಾಮಂಡಳ ಅಧ್ಯಕ್ಷ ಜಿ.ಟಿ ದೇವೇಗೌಡ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ, ಭದ್ರಾವತಿ ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.  ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಅಧ್ಯಕ್ಷರಾದ ಶಾಸಕ ಜಿ.ಟಿ ದೇವೇಗೌಡ ಹಾಗು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದರು.       ಭದ್ರಾವತಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ, ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.       ಶಿವಕುಮಾರ್‌ರವರು ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕರು ಸಹ ಆಗಿದ್ದು, ಶಿವಮೊಗ್ಗ ಜಿಲ್ಲಾ ಸಹಕಾರ ಕ್ಷೇತ್ರದಿಂದ ಪ್ರತಿನಿಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.       ನೂತನ ನಿರ್ದೇಶಕ ಶಿವಕುಮಾರ್‌ರವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಅಧ್ಯಕ್ಷರಾದ ಶಾಸಕ ಜಿ....

ವಿಐಎಸ್‌ಎಲ್ ನಿವೃತ್ತ ನೌಕರ ಕೆ. ಚಂದ್ರಪ್ಪ ನಿಧನ

Image
                            ಕೆ. ಚಂದ್ರಪ್ಪ      ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಬಾಲಭಾರತಿ ನಿವಾಸಿ ಕೆ. ಚಂದ್ರಪ್ಪ(೭೫) ಗುರುವಾರ ನಿಧನ ಹೊಂದಿದರು.  ಇವರಿಗೆ ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ವಿಐಎಸ್‌ಎಲ್ ಕಾರ್ಖಾನೆ ಎಸ್‌ಎಂಎಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ನಿಧನಕ್ಕೆ ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.    Mob: 9738801478 : 9482007466

ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು

Image
ಮೆರವಣಿಗೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆಬಿಟಿ ಬಾಬು ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ರಕ್ತದಾನ ಶಿಬಿರ ಹಾಗು ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.        ಭದ್ರಾವತಿ : ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನ ಆಚರಣೆ ಸಂಭ್ರಮದ ಹಿನ್ನಲೆಯಲ್ಲಿ ಬುಧವಾರ ಒಂದೆಡೆ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮತ್ತೊಂದೆಡೆ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳಿಂದ ಸಾಮಾಜಿಕ ಸೇವಾ ಕಾರ್ಯಗಳು ನೆರವೇರಿದವು.      ಮೆರವಣಿಗೆ ಆರಂಭಕ್ಕೂ ಮೊದಲು ನಗರದ ಚನ್ನಗಿರಿ ರಸ್ತೆಯ ಹೊಳೆಹೊನ್ನೂರು ವೃತ್ತದಲ್ಲಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆಬಿಟಿ ಬಾಬು ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ರಕ್ತದಾನ ಶಿಬಿರ ಹಾಗು ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.  ಟ್ರಸ್ಟ್ ಪದಾಧಿಕಾರಿಗಳಾದ ಕಾರ್ಯದರ್ಶಿ ಎಂ. ಮುಸ್ವೀರ್ ಬಾಷಾ, ಖಜಾಂಚಿ ನೂರುಲ್ಲಾ ಷರೀಫ್ ಟ್ರಸ್ಟಿಗಳಾದ ವಹೀದ್, ನೂರು ಅಹಮದ್, ಜಾಕೀರ್, ಖಲಂದರ್, ನವೀದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ...