ಪೌರ ಕಾರ್ಮಿಕರು ಸಮಾಜದ ಸ್ವಾಸ್ಥ್ಯ ಕಾಪಾಡುವ ವೈದ್ಯರು : ಜೆ.ಸಿ ಗೀತಾ ರಾಜಕುಮಾರ್
ಭದ್ರಾವತಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ನಗರಸಭೆ ವತಿಯಿಂದ ಏರ್ಪಡಿಸಲಾಗಿದ್ದ ಪೌರಕಾರ್ಮಿಕರ ಕ್ರೀಡಾಕೂಟದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಭದ್ರಾವತಿ : ಪೌರಕಾರ್ಮಿಕರು ಸಮಾಜದ ಸ್ವಾಸ್ಥ್ಯ ಕಾಪಾಡುವ ವೈದ್ಯರಾಗಿದ್ದಾರೆ. ಅವರ ಆರೋಗ್ಯ ಸುಧಾರಣೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ನೀಡಿರುವುದನ್ನು ಸದುಪಯೋಗ ಪಡಿಸಿಕೋಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಹೇಳಿದರು. ಅವರು ಹಳೇನಗರದ ಕನಕ ಮಂಟಪ ಮೈದಾನದಲ್ಲಿ ನಗರಸಭೆ ವತಿಯಿಂದ ಏರ್ಪಡಿಸಲಾಗಿದ್ದ ಪೌರಕಾರ್ಮಿಕರ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಪೌರ ಕಾರ್ಮಿಕರ ಕುಟುಂಬ ಸದಸ್ಯರು ಸಹ ಉತ್ತಮ ಆರೋಗ್ಯವಂತಾರಾಗಿ ಬಾಳಬೇಕು. ದುಶ್ಚಟಗಳಿಂದ ದೂರವಿದ್ದು ಸದೃಢರಾಗಬೇಕು. ಜೀವನದ ಜಂಜಾಟದಲ್ಲಿ ಕ್ರೀಡೆಗಳು ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿವೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಕಾರ್ಮಿಕರಿಗಾಗಿ ಕ್ರೀಡಾಕೂಟ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು. ಪೌರಾಯುಕ್ತ ಕೆ.ಎನ್ ಹೇಮಂತ್ ಗುಂಡು ಎಸೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ನಗರ ಸುಂದರಗೊಳಿಸುವಲ್ಲಿ ಪೌರ ಕಾರ್ಮಿಕರ ಶ್ರಮ ಅನನ್ಯವಾದದ್ದು. ಸ್ವಚ್ಚತೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡುವ ಇವರೇ ನಿಜವಾದ ವೈದ...