ಲಕ್ಷಾಂತರ ರು. ಮೌಲ್ಯ ಚಿನ್ನಾಭರಣ ಕಳವು : ಇಬ್ಬರ ಬಾಲಕರು ವಶಕ್ಕೆ
ಭದ್ರಾವತಿ ತಾಲೂಕಿನ ತಡಸ ಗ್ರಾಮದ ಮನೆಯೊಂದರಲ್ಲಿ ಬಾಲಕರಿಬ್ಬರು ಕಳ್ಳತನ ಮಾಡಿದ್ದ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಭದ್ರಾವತಿ : ತಾಲೂಕಿನ ತಡಸ ಗ್ರಾಮದ ಮನೆಯೊಂದರಲ್ಲಿ ಬಾಲಕರಿಬ್ಬರು ಕಳ್ಳತನ ಮಾಡಿದ್ದ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗ್ರಾಮದಲ್ಲಿ ಆ.೧೭ರಂದು ಮನೆಯೊಂದರ ಅಡುಗೆ ಕೋಣೆಯ ವೆಂಟಿಲೇಟರ್ ಮೂಲಕ ಒಳ ಪ್ರವೇಶಿಸಿ ಒಟ್ಟು ಸುಮಾರು ೬,೮೯,೯೬೫ ರು. ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದ ವಿಶೇಷ ತಂಡ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಬಾಲಕರಿಂದ ಕಳವು ಮಾಡಲಾಗಿದ್ದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಚಿದಾನಂದ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಗ್ರಾಮಾಂತರ ಠಾಣೆ ಉಪ ನಿರೀಕ್ಷಕಿ ಶಿಲ್ಪ ನಾಯನೇಗಲಿ ಸೇರಿದಂತೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ...