ಸರ್ಕಾರಿ ಅಧಿಕಾರಿಗಳು ಸಾಧ್ಯವಾದಷ್ಟು ಬಡವರ ಪರವಾಗಿ ಕಾರ್ಯನಿರ್ವಹಿಸಿ
ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಯೋಜನೆಯಡಿಯಲ್ಲಿ ಬರುವ ವಿವಿಧ ಪಿಂಚಣಿ ಯೋಜನೆಗಳಿಂದ ವಂಚಿತರಾದ ಹಾಗು ಸ್ಥಗಿತಗೊಂಡಿರುವವರ ಪಿಂಚಣಿ ಕುಂದು-ಕೊರತೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಭದ್ರಾವತಿ: ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ಬಡವರ ಪರವಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು. ಅವರು ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಯೋಜನೆಯಡಿಯಲ್ಲಿ ಬರುವ ವಿವಿಧ ಪಿಂಚಣಿ ಯೋಜನೆಗಳಿಂದ ವಂಚಿತರಾದ ಹಾಗು ಸ್ಥಗಿತಗೊಂಡಿರುವವರ ಪಿಂಚಣಿ ಕುಂದು-ಕೊರತೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ವಿವಿಧ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹ ಫಲಾನುಭವಿಗಳು ಮಂತ್ರಿಗಳು, ಸಂಸದರು, ಶಾಸಕರ ಅಥವಾ ದೊಡ್ಡ ದೊಡ್ಡ ಅಧಿಕಾರಿಗಳ ಬಳಿ ಅಲೆದಾಡುವುದು ಬೇಡ. ಎಲ್ಲಾ ರೀತಿಯ ಪಿಂಚಣಿಗಳ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದರು. ಬಡ ವರ್ಗದವರಿಗೆ ಯಾವುದೇ ರೀತಿ ತೊಂದರೆಯಾಗಬಾರದೆಂಬ ಉದ್ದೇಶದೊಂದಿಗೆ ಸಮಾವೇಶ ಆಯೋಜಿಸಲಾಗಿದೆ. ...