Posts

ನೂತನ ಪೊಲೀಸ್ ಕವಾಯತು ಮೈದಾನ ಉದ್ಘಾಟಿಸಿದ ಪೂರ್ವವಲಯ ಪೊಲೀಸ್ ಮಹಾನಿರ್ದೇಶಕ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ, ಮಿಲ್ಟ್ರಿ ಕ್ಯಾಂಪ್ ಪೊಲೀಸ್ ವಸತಿ ಸಮುಚ್ಚಯದಲ್ಲಿ ನಿರ್ಮಿಸಲಾಗಿರುವ ನೂತನ ಕವಾಯತು ಮೈದಾನ ಉದ್ಘಾಟಿಸಿದ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ಡಾ. ಬಿ.ಆರ್ ರವಿಕಾಂತೆಗೌಡ ಅವರನ್ನು ಬುಧವಾರ ಪೊಲೀಸ್ ಉಪವಿಭಾಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.        ಭದ್ರಾವತಿ: ನಗರದ ಹುಡ್ಕೋ ಕಾಲೋನಿ, ಮಿಲ್ಟ್ರಿ ಕ್ಯಾಂಪ್ ಪೊಲೀಸ್ ವಸತಿ ಸಮುಚ್ಚಯದಲ್ಲಿ ನಿರ್ಮಿಸಲಾಗಿರುವ ನೂತನ ಕವಾಯತು ಮೈದಾನ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ಡಾ. ಬಿ.ಆರ್ ರವಿಕಾಂತೆಗೌಡ ಬುಧವಾರ ಉದ್ಘಾಟಿಸಿದರು.       ಈ ಹಿಂದೆ ಡಿಎಆರ್ ಮೈದಾನದಲ್ಲಿ ಕವಾಯತು ಮೈದಾನ ನಿರ್ಮಿಸಲಾಗಿತ್ತು. ಪ್ರಸ್ತುತ ಈ ಕವಾಯತು ಮೈದಾನ ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಅಧೀನಕ್ಕೆ ಸೇರ್ಪಡೆಗೊಂಡಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಕವಾಯತು ನಡೆಸಲು ಸೂಕ್ತ ಮೈದಾನವಿರಲಿಲ್ಲ. ಪೊಲೀಸ್ ಸಿಬ್ಬಂದಿಗಳು ವಿಐಎಸ್‌ಎಲ್, ಎಂಪಿಎಂ ಕೀಡಾಂಗಣಗಳಲ್ಲಿ ಕವಾಯತು ನಡೆಸುತ್ತಿದ್ದಾರೆ. ಇಲಾಖೆಗೆ ಪ್ರತ್ಯೇಕ ಕವಾಯತು ಮೈದಾನದ ಅವಶ್ಯಕತೆ ಇತ್ತು  ಈ ಹಿನ್ನಲೆಯಲ್ಲಿ ಸೂಕ್ತ ಸ್ಥಳ ಗುರುತಿಸಿ ನೂತನ ಕವಾಯತು ಮೈದಾನ ನಿರ್ಮಿಸಲಾಗಿದೆ.       ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್,  ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಪೊಲೀಸ್ ಉಪಾಧೀಕ್ಷಕ ...

ಅಮೂಲ್ಯ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ : ಅನೂಪ್ ಕುಮಾರ್

Image
ಭದ್ರಾವತಿ ನ್ಯೂಟೌನ್ ಸೈಲ್-ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಜೀವ ಸಂಜೀವಿನಿ ಸ್ವಯಂ ಸೇವಾ ರಕ್ತ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.       ಭದ್ರಾವತಿ: ಅಮೂಲ್ಯ ಜೀವಗಳನ್ನು ಉಳಿಸಲು ನೌಕರರು ಮತ್ತು ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡುವಂತೆ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಮನವಿ ಮಾಡಿದರು.      ಅವರು ಮಂಗಳವಾರ ನಗರದ ನ್ಯೂಟೌನ್ ಸೈಲ್-ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಜೀವ ಸಂಜೀವಿನಿ ಸ್ವಯಂ ಸೇವಾ ರಕ್ತ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.  ಅಮೂಲ್ಯ ಜೀವ ಉಳಿಸಲು ರಕ್ತದ ಅಗತ್ಯತೆ ಹೆಚ್ಚಿನದ್ದಾಗಿದೆ. ರಕ್ತದ ಮಹತ್ವ ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದರು.       ಮುಖ್ಯ ಮಹಾಪ್ರಬಂಧಕ(ಮಾನವ ಸಂಪನ್ಮೂಲ) ಬಿ. ವಿಶ್ವನಾಥ್,  ಮಹಾಪ್ರಬಂಧಕ ಪ್ರಭಾರಿ(ಸ್ಥಾವರ) ಟಿ. ರವಿಚಂದ್ರನ್,  ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ.ಕೆ.ಎಸ್ ಸುಜೀತ್ ಕುಮಾರ್, ಕಾರ್ಮಿಕರ ಸಂಘದ ಅಧ್ಯಕ್ಷ  ಅಮೃತ್ ಕುಮಾರ್ ಮತ್ತು ಜೀವ ಸಂಜೀವಿನಿ ಸ್ವಯಂಸೇವಾ ರಕ್ತ ಕೇಂದ್ರದ ಆಡಳಿತಾಧಿಕಾರಿ ರಾಜು ನರಸಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉಪ ಮುಖ್ಯ ವೈದ್ಯಾಧಿಕಾರಿ ಡಾ. ಎಚ್. ಶೋಭ ಸ್ವಾಗತಿಸಿ ವಂದಿಸಿ...

ಕುಟುಂಬ ಪ್ರೀತಿಯೊಂದಿಗೆ ಗಮನ ಸೆಳೆಯುತ್ತಿವೆ ಬಗೆ ಬಗೆಯ ಪಾರಿವಾಳಗಳು

Image
ಮೂಡನಂಬಿಕೆ, ಕಂದಾಚಾರಗಳ ನಡುವೆ ಮರೆಯಾಗುತ್ತಿದೆ ಪಾರಿವಾಳಗಳ ಪೋಷಣೆ  ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೆಬಾಗಿ ನಿವಾಸಿ ಅಣ್ಣೇಶ್-ಎಂ. ಆಶಾ ದಂಪತಿ ನಿವಾಸದಲ್ಲಿ ಸಾಕಿರುವ ಪಾರಿವಾಳಗಳು.       * ಅನಂತಕುಮಾರ್        ಭದ್ರಾವತಿ: ಹಿಂದಿನ ಕಾಲದಲ್ಲಿ ಸಾಕು ಪ್ರಾಣಿ ಹಾಗು ಪಕ್ಷಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ಭಾವಿಸಲಾಗುತ್ತಿತ್ತು. ಒಂದು ರೀತಿಯ ಬಾಂಧವ್ಯ ಬೆಸೆದುಕೊಳ್ಳಲಾಗಿತ್ತು. ಆದರೆ ಇಂದು ಈ ರೀತಿಯ ಭಾವನೆಗಳನ್ನು ಹೊಂದಿರುವ ಕುಟುಂಬಗಳು ವಿರಳವಾಗಿವೆ.  ನಗರಸಭೆ ವ್ಯಾಪ್ತಿಯ ಸೀಗೆಬಾಗಿ ನಿವಾಸಿ ಅಣ್ಣೇಶ್-ಎಂ. ಆಶಾ ದಂಪತಿ ಇಂತಹ ವಿರಳ ಕುಟುಂಬಗಳಲ್ಲಿ ಒಂದಾಗಿದೆ. ಮನೆ ತುಂಬಾ ಪಾರಿವಾಳ, ಜೊತೆಗೆ ಕೋಳಿ, ನಾಯಿ ಸಹ ಈ ಕುಟುಂಬದ ಸದಸ್ಯರಾಗಿವೆ. ಇದು ಇಲ್ಲಿನ ನಿವಾಸಿಗಳ ಗಮನ ಸೆಳೆಯುತ್ತಿದೆ.       ಅಣ್ಣೇಶ್-ಎಂ. ಆಶಾ ದಂಪತಿ ಕುಟುಂಬದವರು ಮೊದಲಿನಿಂದಲೂ ಸಾಕು ಪ್ರಾಣಿ, ಪಕ್ಷಿಗಳನ್ನು ತಮ್ಮ ಕುಟುಂಬ ಸದಸ್ಯರಂತೆ ಕಾಣುತ್ತಿದ್ದು, ಇದೀಗ ಇವರ ಇಬ್ಬರು ಮಕ್ಕಳಾದ ಗೌತಮ್ ಮತ್ತು ಪ್ರೀತಂ ಸಹ ಈ ದಾರಿಯಲ್ಲಿ ಸಾಗುತ್ತಿದ್ದಾರೆ. ಕಳೆದ ೬ ವರ್ಷಗಳಿಂದ ಇವರ ಮನೆಯಲ್ಲಿ ವಿವಿಧ ಜಾತಿಯ ಪಾರಿವಾಳ, ಕೋಳಿ ಹಾಗು ನಾಯಿ ಸೇರಿದಂತೆ ಇನ್ನಿತರ ಸಾಕು ಪ್ರಾಣಿಗಳ ಪೋಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.       ತಲೆಯ ಸು...

ಎಸ್‌ಐಆರ್ ಕುರಿತು ಸಮಗ್ರ ಮಾಹಿತಿ ತ್ವರಿತವಾಗಿ ಕಾರ್ಯ ನಿರ್ವಹಿಸಿ : ನವೀದ್ ಅಹಮದ್ ಪರ್ವೇಜ್

Image
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರ ಆಯೋಜಿಸಲಾಗಿತ್ತು.       ಭದ್ರಾವತಿ : ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮತದಾರರಲ್ಲಿರುವ ಗೊಂದಲಗಳನ್ನು ಬಗೆಹರಿಸುವ ಮೂಲಕ ತ್ವರಿತವಾಗಿ ಪರಿಷ್ಕರಣೆ ಕಾರ್ಯ ಕೈಗೊಳ್ಳಬೇಕೆಂದು ಸ್ವೀಪ್ ಕಾರ್ಯಕ್ರಮದ ರಾಜ್ಯಮಟ್ಟದ ತರಬೇತುದಾರ ನವೀದ್ ಅಹಮದ್ ಪರ್ವೇಜ್ ಕರೆ ನೀಡಿದರು. ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎಸ್‌ಐಆರ್-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.       ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು,  ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು. ಅರ್ಹ ನಾಗರಿಕರೆಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಮತ್ತು ಹಾಲಿ ಮತದಾರರ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.     ...

೨-೩ ದಿನಗಳಿಂದ ವ್ಯಾಪಕ ಮಳೆ : ರೈತರ ಮೊಗದಲ್ಲಿ ಮಂದಹಾಸ

Image
ಭದ್ರಾವತಿ ವಿಐಎಸ್‌ಎಲ್-ಎಂಪಿಎಂ ರಸ್ತೆಯ ಜೆಟಿಎಸ್ ಶಾಲೆ ಬಳಿ ಬೃಹತ್ ಮರದ ರೆಂಬೆ-ಕೊಂಬೆ ಮುರಿದು ಬಿದ್ದು, ವಿದ್ಯುತ್ ಕಂಬ ಹಾನಿಗೊಳಗಿದ್ದು, ಮೆಸ್ಕಾಂ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ಕೈಗೊಂಡು ಹೊಸದಾಗಿ ವಿದ್ಯುತ್ ಕಂಬ ಅಳವಡಿಸಿದರು.  -ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರೈತರ ಆತಂಕ ದೂರ. - ಈಗಾಗಲೇ ಭದ್ರಾ ಎಡ-ಬಲ ದಂಡೆ ನಾಲೆಗಳಲ್ಲಿ ನೀರು ಸ್ಥಗಿತ. - ಜಲಾಶಯದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ. - ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳ       ಭದ್ರಾವತಿ: ತಾಲೂಕಿನಲ್ಲಿ ಕಳೆದ ೨-೩ ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಇದುವರೆಗೂ ಯಾವುದೇ ಹಾನಿ ಅಥವಾ ಸಮಸ್ಯೆಗಳು ಎದುರಾಗಿಲ್ಲ.       ಮಳೆಯಾಗುತ್ತಿರುವುದರಿಂದ ಬರಗಾಲ ಎದುರಾಗುವ ಭೀತಿಯಲ್ಲಿದ್ದ ರೈತರ ಮೊಗದಲ್ಲಿ  ಸ್ವಲ್ಪಮಟ್ಟಿಗೆ ಮಂದಹಾಸ ಮೂಡಿದಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ಭೀತಿ ದೂರವಾಗಲಿದೆ. ಈ ಬಾರಿ ಮುಂಗಾರು ಕೈಕೊಟ್ಟ ಹಿನ್ನಲೆಯಲ್ಲಿ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದು, ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ ನೀರು ಸ್ಥಗಿತಗೊಳಿಸಲಾಗಿದೆ. ಜಲಾಶಯದ ನೀರು ಕೇವಲ ಕುಡಿಯುವ ಬಳಕೆಗೆ ಮಾತ್ರ ಸೀಮಿತಗೊಳಿಸಲಾಗಿದೆ.  ರೈತರು ಬೆಳೆ ಬೆಳೆಯದಂತೆ ಸೂಚಿಸಲಾಗಿದೆ. ಈ ನಡುವೆ ಇದೀಗ ಮಳೆಯಾಗುತ್ತಿದ್ದು, ಸ್ವಲ್ಪಮಟ್ಟಿಗೆ ಸಮಾಧಾನ ತಂದ...

ಎಸ್‌ಐಆರ್ ಶೇ.೭೩.೭೭ ರಷ್ಟು ಗಣತಿ ನಮೂನೆ ವಿತರಣೆ

Image
ಪ್ರದೀಪ್ ದೇವಗಿರಿ       ಭದ್ರಾವತಿ: ೧೧೨-ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಸ್‌ಐಆರ್-ಮತದಾರರಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ. ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಸೋಮವಾರ ಸಂಜೆ ೬ರ ವೇಳೆಗೆ ಒಟ್ಟಾರೆ ಶೇ.೭೩.೭೭ರಷ್ಟು ಗುರಿ ಸಾಧಿಸಲಾಗಿದೆ.       ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨೫೩ ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಿಗೂ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಒಟ್ಟು ೨,೧೪,೯೦೭ ಮತದಾರರಿದ್ದು, ಈ ಪೈಕಿ ೧,೫೮,೫೩೮ ಗಣತಿ ನಮೂನೆಗಳ ವಿತರಿಸಲಾಗಿದೆ. ೬,೭೮೬ ಗಣತಿ ನಮೂನೆಗಳನ್ನು ಗಣಕೀರಣಗೊಳಿಸಲಾಗಿದ್ದು, ಶೇ.೩.೧೬ರಷ್ಟು ಗುರಿಸಾಧಿಸಲಾಗಿದೆ.       ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವುದು ಕಡ್ಡಾಯವಾಗಿದ್ದು, ಪರಿಷ್ಕರಣೆ  ಕಾರ್ಯ ತ್ವರಿತಗತಿಯಲ್ಲಿ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು, ಮತದಾರರು ಈ ಕಾರ್ಯಕ್ಕೆ ಹೆಚ್ಚಿನ ಸಹಕಾರ ನೀಡಬೇಕೆಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಕೋರಿದ್ದಾರೆ. 

ಎಸ್‌ಐಆರ್ ಚುನಾವಣಾ ಕರ್ತವ್ಯ ನಿರ್ವಹಿಸುವಾಗ ಅಂಗನವಾಡಿ ಕಾರ್ಯಕರ್ತೆ ಸಾವು

Image
ಮಂಜುಳಾ       ಭದ್ರಾವತಿ :  ತಾಲೂಕಿನ ಕಲ್ಲಾಪುರ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಂಜುಳಾ (೫೨) ಎಸ್‌ಐಆರ್ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಾವನ್ನಪ್ಪಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.       ಇವರಿಗೆ ಪತಿ ಹಾಗು ಓರ್ವ ಪುತ್ರ ಇದ್ದಾರೆ. ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕಳೆದ ೩೦ ವರ್ಷಗಳಿಂದ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಸ್‌ಐಆರ್ ಚುನಾವಣಾ ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ತಾಲೂಕು ಸರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು.  ಮಾಹಿತಿ ತಿಳಿದ ತಕ್ಷಣ ತಹಸಿಲ್ದಾರ್ ಪ್ರದೀಪ್ ದೇವಗಿರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಪೊಲೀಸ್ ಮತ್ತು ಇನ್ನಿತರ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ರೈತ ಪ್ರಮುಖರಾದ ಜಯರಾಂ ಗೊಂದಿ, ಗಜೇಂದ್ರ ಹಾಗು ಮೃತರ ಕುಟುಂಬ ವರ್ಗದವರು ಆಸ್ಪತ್ರೆಗೆ ಜಮಾಯಿಸಿದ್ದರು.  ಸಂಜೆ ೫ ಗಂಟೆವರೆಗೂ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ವರದಿ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. 

ಸರ್ಕಾರಿ ಅಧಿಕಾರಿಗಳು ಸಾಧ್ಯವಾದಷ್ಟು ಬಡವರ ಪರವಾಗಿ ಕಾರ್ಯನಿರ್ವಹಿಸಿ

Image
ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಯೋಜನೆಯಡಿಯಲ್ಲಿ ಬರುವ ವಿವಿಧ ಪಿಂಚಣಿ ಯೋಜನೆಗಳಿಂದ ವಂಚಿತರಾದ ಹಾಗು ಸ್ಥಗಿತಗೊಂಡಿರುವವರ ಪಿಂಚಣಿ ಕುಂದು-ಕೊರತೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.       ಭದ್ರಾವತಿ: ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ಬಡವರ ಪರವಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.       ಅವರು ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಯೋಜನೆಯಡಿಯಲ್ಲಿ ಬರುವ ವಿವಿಧ ಪಿಂಚಣಿ ಯೋಜನೆಗಳಿಂದ ವಂಚಿತರಾದ ಹಾಗು ಸ್ಥಗಿತಗೊಂಡಿರುವವರ ಪಿಂಚಣಿ ಕುಂದು-ಕೊರತೆಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.       ಸರ್ಕಾರದ ವಿವಿಧ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹ ಫಲಾನುಭವಿಗಳು ಮಂತ್ರಿಗಳು, ಸಂಸದರು, ಶಾಸಕರ ಅಥವಾ ದೊಡ್ಡ ದೊಡ್ಡ ಅಧಿಕಾರಿಗಳ ಬಳಿ ಅಲೆದಾಡುವುದು ಬೇಡ. ಎಲ್ಲಾ ರೀತಿಯ ಪಿಂಚಣಿಗಳ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದರು.       ಬಡ ವರ್ಗದವರಿಗೆ ಯಾವುದೇ ರೀತಿ ತೊಂದರೆಯಾಗಬಾರದೆಂಬ ಉದ್ದೇಶದೊಂದಿಗೆ ಸಮಾವೇಶ ಆಯೋಜಿಸಲಾಗಿದೆ. ...

ಹಾಲಿಗೆ ಹಚ್ಚುವರಿ ಬೆಂಬಲ ಬೆಲೆ, ಪ್ರೋತ್ಸಾಹ ಧನ ಬಿಡುಗಡೆ ಆಗ್ರಹ

Image
ಜು.೭ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ  ಭದ್ರಾವತಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಹಾಲು ಉತ್ಪಾದಕರ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಮಾತನಾಡಿದರು.         ಭದ್ರಾವತಿ; ಸರ್ಕಾರ ಹಾಲು ಉತ್ಪಾದಕರ ಒಳಿತಿಗಾಗಿ ಹೆಚ್ಚುವರಿ ಬೆಂಬಲ ಬೆಲೆ ನೀಡುವುದು ಹಾಗೂ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.೭ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಹಾಲು ಉತ್ಪಾದಕರ ಹಿತರಕ್ಷಣಾ ವೇದಿಕೆ ಗೌರವಾಧ್ಯಕ್ಷ ಜಯರಾಮ್ ಗೊಂದಿ ತಿಳಿಸಿದರು.       ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರು ಹೈನುಗಾರಿಕೆ ನಡೆಸಲು ರಾಸುಗಳ ನಿರ್ವಹಣೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಆದರೆ ಹಾಲು ಒಕ್ಕೂಟವು ರೈತರ ಪರಿಶ್ರಮಕ್ಕೆ ತಕ್ಕಂತೆ ಹಾಲಿನ ದರ ನಿಗದಿ ಮಾಡಿಲ್ಲ. ಹಾಲು ಒಕ್ಕೂಟ ಪ್ರಸ್ತುತ ನೀಡುತ್ತಿರುವ ಹಾಲಿನ ದರಕ್ಕೆ ಪ್ರತಿ ಲೀಟರ್ ಹಾಲಿಗೆ ೨೦ ರು. ಹೆಚ್ಚವರಿ ಬೆಂಬಲ ಬೆಲೆ ಹಾಗು ೫ ರು. ಪ್ರೋತ್ಸಾಹ ಧನ ೧೦ ರು.ಗೆ ಹೆಚ್ಚು ಮಾಡುವ ಮೂಲಕ ಕಳೆದ ೬ ತಿಂಗಳ ಪ್ರೋತ್ಸಾಹ ಧನವನ್ನು ಶೀಘ್ರವೇ ಬಿಡುಗಡೆ ಮಾಡಿ ಹೈನುಗಾರಿಕೆಗೆ ಸ...

ಜು.೫ರಂದು ಪಿಂಚಣಿ ಕುಂದುಕೊರತೆಗಳ ಸಮಾವೇಶ

Image
     ಭದ್ರಾವತಿ: ಪಿಂಚಣಿಯಿಂದ ವಂಚಿತರಾಗಿರುವ ಹಾಗು ಸ್ಥಗಿತಗೊಂಡಿರುವವರಿಗೆ ಮರುಪಿಂಚಣಿ ಜಾರಿಗೊಳಿಸಲು ಹಾಗು ತಹಸೀಲ್ದಾರ್‌ರವರ ಕಛೇರಿಯಿಂದ ಶಾಶ್ವತ ಆದೇಶ ಪ್ರತಿ ನೀಡಲು ಜು.೫ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ ಅವರ ನೇತೃತ್ವದಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಪಿಂಚಣಿ ಕುಂದುಕೊರತೆಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ.       ಸಾಮಾಜಿಕ ಯೋಜನೆಯಡಿಯಲ್ಲಿ ಬರುವ ಪಿಂಚಣಿಗಳಾದ ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾಸುರಕ್ಷತಾ ವೇತನ, ವೃದ್ಧಾಪ್ಯ ವೇತನ, ಮನಸ್ವಿನಿ ವೇತನ, ಮೈತ್ರಿ ವೇತನಗಳಿಂದ ವಂಚಿತರಾದ ಹಾಗು ಸ್ಥಗಿತಗೊಂಡಿರುವವರಿಗೆ ಮರುಪಿಂಚಣಿ ಜಾರಿಗೊಳಿಸಲು ಹಾಗು ತಹಸೀಲ್ದಾರ್‌ರವರ ಕಛೇರಿಯಿಂದ ಶಾಶ್ವತ ಆದೇಶ ಪ್ರತಿ ನೀಡಲು ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳು ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ೩ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಪಿಂಚಣಿಯ ಆದೇಶದ ಪ್ರತಿ ಹಾಗು ಆದಾಯ ದೃಢೀಕರಣ ಪತ್ರ ನಕಲು ಪ್ರತಿಗಳನ್ನು ತರುವುದು. ಫಲಾನುಭವಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಕೋರಿದ್ದಾರೆ. 

ವ್ಯಾಪಾರಸ್ಥರಿಂದ ಪಾದಚಾರಿಗಳಿಗೆ ಕಿರಿ ಕಿರಿ : ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಿ

Image
ನಗರಸಭೆ ಆಡಳಿತಕ್ಕೆ ಸಾರ್ವಜನಿಕರ ಆಗ್ರಹ  ಭದ್ರಾವತಿ ನಗರಸಭೆ ವಾರ್ಡ್ ನಂ.೩ರ ಡಾ. ರಾಜಕುಮಾರ್ ರಸ್ತೆ ಹಾಗು ಬಿ.ಎಚ್ ರಸ್ತೆಯ ಪಾದಚಾರಿ ಪಥ ಅಂಗಡಿ-ಮುಂಗಟ್ಟು ವ್ಯಾಪಾರಸ್ಥರು ಆಕ್ರಮಿಸಿಕೊಂಡಿರುವುದು.       ಭದ್ರಾವತಿ: ಪಾದಚಾರಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಎರಡು ಬದಿಯಲ್ಲಿ ಪಾದಚಾರಿ ಪಥ(ಫುಟ್‌ಪಾತ್) ನಿರ್ಮಿಸಲಾಗಿದ್ದರೂ ಸಹ ವ್ಯಾಪಾರಸ್ಥರು ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗಿದೆ. ನಗರಸಭೆ ಆಡಳಿತ ತಕ್ಷಣ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.       ಕೋಟ್ಯಾಂತರ ರು. ವೆಚ್ಚದಲ್ಲಿ ನಗರಸಭೆ ವಾರ್ಡ್ ನಂ.೩ರ ಡಾ. ರಾಜಕುಮಾರ್ ರಸ್ತೆ ಹಾಗು ಬಿ.ಎಚ್ ರಸ್ತೆಯನ್ನು ಅಗಲೀಕರಣಗೊಳಿಸಿ ರಸ್ತೆ ಎರಡು ಬದಿ ಪಾದಚಾರಿ ಪಥ ನಿರ್ಮಿಸಿ ಅಭಿವೃದ್ಧಿಪಡಿಸಲಾಗಿದ್ದು, ಆದರೆ ರಸ್ತೆಯಲ್ಲಿನ ಅಂಗಡಿ-ಮುಂಗಟ್ಟುಗಳ ವ್ಯಾಪಾರಸ್ಥರು ಪಾದಚಾರಿ ಪಥ ಆಕ್ರಮಿಸಿಕೊಂಡಿದ್ದು, ವ್ಯಾಪಾರಸ್ಥರು ತಮ್ಮ ಸರಕು, ಸಾಮಾಗ್ರಿಗಳನ್ನು ಪ್ರದರ್ಶನಕ್ಕೆ ಇಡುತ್ತಿದ್ದಾರೆ. ಇದರಿಂದ ಪಾದಚಾರಿಗಳ ಸಂಚಾರಕ್ಕೆ ಕಿರಿ ಕಿರಿಯಾಗುತ್ತಿದೆ.       ಕೆಲವು ವರ್ಷಗಳಿಂದ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಪಾದಚಾರಿಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬಹಳಷ್ಟು ಅಪಘಾತ ಪ್ರಕರಣಗಳಲ್ಲಿ ಪಾದಚಾರಿ ಸಾವನ್ನಪ್ಪಿರು...

ಜು.೪ ಬೃಹತ್ ರಕ್ತದಾನ ಶಿಬಿರ

Image
     ಭದ್ರಾವತಿ : ನಗರಸಭೆ ವ್ಯಾಪ್ತಿಯ ನ್ಯೂಟೌನ್ ಸೈಂಟ್ ಚಾರ್ಲ್ಸ್ ಪದವಿ ಹಾಗೂ ಪದವಿಪೂರ್ವ ಕಾಲೇಜು ಮತ್ತು ಶಿವಮೊಗ್ಗ ಡಾ. ಬಿ.ಆರ್ ಅಂಬೇಡ್ಕರ್ ಸ್ವಯಂ ಪ್ರೇರಿತ ರಕ್ತ ಕೇಂದ್ರ ಇವುಗಳ  ಸಂಯುಕ್ತಾಶ್ರಯದಲ್ಲಿ ಜು. ೪ರ ಶನಿವಾರ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.       ಸೈಂಟ್ ಚಾರ್ಲ್ಸ್ ಕಾಲೇಜು ಆವರಣದಲ್ಲಿ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨ ಗಂಟೆವರೆಗೆ ಶಿಬಿರ ನಡೆಯಲಿದೆ. ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ರಕ್ತದಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ.  ಹೆಚ್ಚಿನ ಮಾಹಿತಿಗೆ ಮೊ: ೮೮೮೪೭೧೦೪೮೫, ೯೯೧೬೮೬೩೩೯೯ ಅಥವಾ ೮೨೭೭೨೩೦೫೩೫ ಸಂಖ್ಯೆ ಸಂಪರ್ಕಿಸಬಹುದಾಗಿದೆ.

ನಿರ್ಮಲ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Image
ಭದ್ರಾವತಿ  ಹಳೇನಗರದ ನಿರ್ಮಲ ಆಸ್ಪತ್ರೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.       ಭದ್ರಾವತಿ : ಹಳೇನಗರದ ನಿರ್ಮಲ ಆಸ್ಪತ್ರೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.       ಹಿರಿಯ ವೈದ್ಯರಾದ ಸಿಸ್ಟರ್ ಡಾ. ರೆಜೀನಾ, ಡಾ. ಆರ್.ಸಿ ಬೆಂಗಳೂರಿ ಮತ್ತು ಇನ್ನಿತರ ವೈದ್ಯರು ಸೇರಿ ಕೇಕ್ ಕತ್ತರಿಸುವ ಮೂಲಕ ಆಚರಣೆಗೆ ಚಾಲನೆ ನೀಡಿದರು. ಡಾ. ಮಲ್ಲಿಕಾರ್ಜುನ್ ವೈದ್ಯರ ದಿನಾಚರಣೆಯ ಮಹತ್ವ ವಿವರಿಸಿದರು. ಆಸ್ಪತ್ರೆ ಸುಪೀರಿಯರ್ ಸಿಸ್ಟರ್ ವಿಲ್ಮಾ ವೈದ್ಯರ ಕುರಿತು ಮೆಚ್ಚುಗೆಯ ಮಾತುಗಳನಾಡಿದರು. ಡಾ. ಸ್ವರ್ಣಲತಾ ತಮ್ಮ ಅನಿಸಿಕೆಗಳನ್ನು ತಿಳಿಸಿದರು.       ನರ್ಸಿಂಗ್ ಸೂಪರಿಂಟೆಂಡೆಂಟ್ ಸಿಸ್ಟರ್ ವಿನ್ಸಿ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದು, ಸಿಬ್ಬಂದಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಗರದ ವಿವಿಧ ಆಸ್ಪತ್ರೆಗಳ ವೈದ್ಯರು ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ರೋಗಿಗಳ ಪರಿಚಾರಕರು ಪಾಲ್ಗೊಂಡಿದ್ದರು.     

ಹಿಂದೂ ಧರ್ಮ ಸಂಘಟಿಸುವ ಕಾರ್ಯದಲ್ಲಿ ೧ ಶತಮಾನ ಪೂರೈಸಿದ ಆರ್‌ಎಸ್‌ಎಸ್

Image
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಮುಖ ನಾಗರೀಕ ಗೋಷ್ಠಿಯಲ್ಲಿ ಆರ್‌ಎಸ್‌ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ವ್ಯವಸ್ಥಾ ಪ್ರಮುಖರಾದ ಉಮೇಶ್ ಮಾತನಾಡಿದರು.       ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ(ಆರ್‌ಎಸ್‌ಎಸ್) ಸಂಘ ಕಳೆದ ಒಂದು ಶತಮಾನದಿಂದ ಪವಿತ್ರವಾದ ಹಿಂದೂ ಸಮಾಜವನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ಸಹ ವ್ಯವಸ್ಥಾ ಪ್ರಮುಖರಾದ ಉಮೇಶ್ ಹೇಳಿದರು.       ಅವರು ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಮುಖ ನಾಗರೀಕ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಹಿಂದೂ ಸಮಾಜವನ್ನು ಸಂಘಟಿಸುವ ಕಾರ್ಯದಲ್ಲಿ ಆರ್‌ಎಸ್‌ಎಸ್ ನಿರಂತರವಾಗಿ ತೊಡಗಿಸಿಕೊಂಡಿದೆ. ಈ ಕಾರ್ಯದಲ್ಲಿ ಸಮಾಜವನ್ನು ಹೊರತುಪಡಿಸಿ ಸಂಘ ಹಾಗು ಸಂಘದ ಕಾರ್ಯ ಚಟುವಟಿಕೆಗಳು ಇಲ್ಲ. ಇದರಲ್ಲಿ ಸಮಾಜದ ಎಲ್ಲರನ್ನೂ ಒಳಗೊಳ್ಳುವಂತೆ ಮಾಡುತ್ತಿದೆ ಎಂದರು.       ಆರ್‌ಎಸ್‌ಎಸ್ ಸ್ವಾತಂತ್ರ್ಯದ ಹೋರಾಟದ ಸಮಯದಲ್ಲಿ ಒಂದು ಕಡೆ ಬಲಿಷ್ಠ ಭಾರತ ನಿರ್ಮಿಸುವ ಹಿಂದೂಗಳ ಸಂಘಟನೆಯನ್ನು ಕಟ್ಟುವ ಹಾಗು ಸ್ವಾತಂತ್ರ್ಯದ ಹೋರಾಟದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಿಕೆಯ ಯೋಜನೆ ರೂಪಿಸಿತು. ಬ್ರಿಟಿಷರು ನಿರಂತರವಾಗಿ ದೇಶದ ಇತಿಹಾಸ ತಿರುಚುವ, ಜನರನ್ನು ಒಡೆಯುವ ಕಾರ್ಯವನ್ನ...

ಬಂಜಾರ ಗೋರ್ ಬಾಯ್ ಸಂಘದಿಂದ ಕಾರೇಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕ ಉಚಿತ ವಿತರಣೆ

Image
ಭದ್ರಾವತಿ: ಸರ್ಕಾರಿ ಶಾಲೆಗಳ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಬಂಜಾರ ಗೋರ್ ಬಾಯ್ ಸಂಘ ನೆರವಾಗಿದೆ.       ಭದ್ರಾವತಿ: ಸರ್ಕಾರಿ ಶಾಲೆಗಳ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಬಂಜಾರ ಗೋರ್ ಬಾಯ್ ಸಂಘ ನೆರವಾಗಿದೆ.       ಈಗಾಗಲೇ ತಾಲೂಕಿನ ಹಲವು ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಂಘದಿಂದ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡಲಾಗಿದ್ದು, ಇದೀಗ ಕಾರೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು.  ಸಂಘದ ಅಧ್ಯಕ್ಷ ಎಲ್. ವೇದೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಎಸ್. ಮಂಜುನಾಥ್, ಕಾರ್ಯದರ್ಶಿ ನಾಗನಾಯ್ಕ, ಉಪಾಧ್ಯಕ್ಷ ಶಂಕರನಾಯ್ಕ, ಖಜಾಂಚಿ ಸುರೇಶ್‌ನಾಯ್ಕ ಹಾಗು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Image
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ಭದ್ರಾವತಿ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಬುಧವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.       ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಬುಧವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.       ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಮಹತ್ವ ವಿವರಿಸಿದರು. ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ವಿದ್ಯಾಸಂಸ್ಥೆಯಲ್ಲಿ  ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾಭ್ಯಾಸ ಪೂರೈಸಿ ಪ್ರಸ್ತುತ ವೈದ್ಯರಾಗಿ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಅರ್ಬಿಯಾ ಅಂಜುಮ್ ಹಾಗೂ ಡಾ. ಟಿ.ಬಿ ಪ್ರಭಾಕರ ಅವರನ್ನು ಸನ್ಮಾನಿಸಲಾಯಿತು.       ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಅರ್ಬಿಯಾ ಅಂಜುಮ್ ಮತ್ತು ಡಾ. ಟಿ.ಬಿ ಪ್ರಭುದೇವ ವಿದ್ಯಾಸಂಸ್ಥೆಯಲ್ಲಿ ತಮ್ಮ ಬಾಲ್ಯದ ದಿನಗಳು, ತಾವು ಸಾಗಿಬಂದ ಹಾದಿ, ತಮ್ಮ ವಿದ್ಯಾರ್ಥಿ ಜೀವನ ಹಾಗೂ ವಿದ್ಯಾಸಂಸ್ಥೆಯಲ್ಲಿ ತಮಗೆ ಮಾರ್ಗದರ್...

ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಗಣತಿ ಅರ್ಜಿ ವಿತರಿಸುವ ಕಾರ್ಯಕ್ಕೆ ಚಾಲನೆ

Image
ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನಿವಾಸಗಳಿಗೆ ಚುನಾವಣಾ ಅಧಿಕಾರಿಗಳ ತಂಡ ಭೇಟಿ   ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಮನೆಗೆ ತೆರಳಿದ ತಾಲೂಕು ಚುನಾವಣಾ ಅಧಿಕಾರಿಗಳ ತಂಡ ಮತದಾರರ ಗಣತಿ ನಮೂನೆಗಳನ್ನು ವಿತರಿಸಿತು. ಬಿ.ಕೆ ಮೋಹನ್, ಬಿ.ಎಸ್ ಗಣೇಶ್, ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ಬಿ.ಎಂ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.       ಭದ್ರಾವತಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಮನೆ ಮನೆಗೆ ತೆರಳಿ ಮತದಾರರ ಗಣತಿ ಅರ್ಜಿಗಳನ್ನು ವಿತರಿಸುವ ಕಾರ್ಯ ಆರಂಭಗೊಂಡಿದೆ.  ಜು.೨೯ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲಿದ್ದು, ನಂತರ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಆ.೫ರಂದು ಮತದಾರರ ಪಟ್ಟಿ ಬಿಡುಗಡೆಗೊಳಿಸಲಿದ್ದು, ಸೆ.೪ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಅ.೩ರವರೆಗೆ ಆಕ್ಷೇಪಣೆಗಳ ಪರಿಶೀಲನೆ ನಡೆಯಲಿದ್ದು, ಅ.೭ರಂದು ಅಂತಿಮ ಮತದಾರರ ಪಟ್ಟಿ ಬಿಡುಯಾಗಲಿದೆ.       ಮನೆ ಮನೆ ಭೇಟಿಯ ವೇಳೆ ಪ್ರತಿ ಮನೆಗೂ ಎರಡು ನಮೂನೆಗಳನ್ನು ದ್ವಿತಿಯಲ್ಲಿ ನೀಡಿ, ಹೊಸ ಮಾಹಿತಿಯನ್ನು ಹಿಂಪಡೆದು, ಅದರಲ್ಲಿ ಒಂದು ನಮೂನೆಯನ್ನು ಅಧಿಕಾರಿಗಳು ಸಹಿ ಮಾಡಿ ಮತದಾರರಿ...

ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ನೂತನ ಪದಾಧಿಕಾರಿಗಳ ಪದಗ್ರಹಣ

Image
ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ, ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ, ಸುಪ್ರಿಯಾ  ಭಾರತೀಯ ಜನತಾ ಪಕ್ಷದ ನಗರ ಮಂಡಲ ಮಹಿಳಾ ಮೋರ್ಚಾದ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ ಹಾಗು ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ ಮತ್ತು ಸುಪ್ರಿಯಾ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಮಂಗಳವಾರ ನಗರದ ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.      ಭದ್ರಾವತಿ: ಭಾರತೀಯ ಜನತಾ ಪಕ್ಷದ ನಗರ ಮಂಡಲ ಮಹಿಳಾ ಮೋರ್ಚಾದ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ ಹಾಗು ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ ಮತ್ತು ಸುಪ್ರಿಯಾ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಮಂಗಳವಾರ ನಗರದ ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.      ಪಕ್ಷದ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಧುರ ಶಿವಾನಂದ್ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ಬಿ. ಛಲವಾದಿ ಹಾಗು ಪ್ರಧಾನ ಕಾರ್ಯದರ್ಶಿಗಳಾಗಿ ಉಮಾವತಿ ಮತ್ತು ಸುಪ್ರಿಯಾ ಮಂಜುನಾಥ್, ಉಪಾಧ್ಯಕ್ಷರಾಗಿ ರೇಖಾ ಪದ್ಮಾವತಿ, ಆರತಿ ಸಿಂಗ್, ಶೈಲಾ ರಮೇಶ್, ಹೇಮಾವತಿ ಹಾಗೂ  ಕಾರ್ಯದರ್ಶಿಗಳಾಗಿ ಮಂಜುಳಮ್ಮ, ವಿದ್ಯಾ, ಪೂರ್ಣಿಮಾ, ನಿಶಾರಾವ್ ಹಾಗೂ ಶಕುಂ...

ಜಾತಿ, ಮತಪಂಥಗಳನ್ನು ಮೀರಿದ ವ್ಯಕ್ತಿ ನಾಡಪ್ರಭು ಕೆಂಪೇಗೌಡ

Image
ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.       ಭದ್ರಾವತಿ : ನಾಡಪ್ರಭು ಕೆಂಪೇಗೌಡರು ಜಾತಿ, ಮತಪಂಥಗಳನ್ನು ಮೀರಿದ ವ್ಯಕ್ತಿಯಾಗಿದ್ದು, ಅಭಿವೃದ್ಧಿ ಹರಿಕಾರರಾಗಿ ಭವಿಷ್ಯಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸಿದ್ದರು ಎಂದು ನಗರದ ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು.       ಅವರು ವೇದಿಕೆಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆರೆಕಟ್ಟೆಗಳ ನಿರ್ಮಾಣದ ಮೂಲಕ ನೀರಾವರಿ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಬೃಹತ್ ಬೆಂಗಳೂರು ನಗರ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದ ಕೆಂಪೇಗೌಡರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಎಲ್ಲಾ ಧರ್ಮ, ಜಾತಿ, ಜನಾಂಗದವರಿಗೂ ಒಂದೆಡೆ ನೆಲೆ ಕಲ್ಪಿಸಿಕೊಡುವ ಮೂಲಕ ಅವರ ಏಳಿಗೆಗಾಗಿ ಶ್ರಮಿಸಿದ್ದರು ಎಂದರು.       ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ  ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪುಷ್ಪ ಕೇಶವ, ಗಾಯತ್ರಿ ಯಲ್ಲಪ್ಪ ಮತ್ತು ಲೀಲಾ ಗಂಗಾಧರ ಗೌಡ್ರು ಉಪಸ್ಥಿತರಿದ್ದು, ಕಾರ್ಯದರ್ಶಿ ಪ್ರತಿಭಾ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿಕುಮಾರ್ ಹಾಗು ನಿರ್ದೇಶಕರು ಕಾರ್ಯಕ್ರಮದಲ್ಲಿ ಭ...

ಲಾರಿಯ ಟೈರ್ ಸ್ಪೋಟಗೊಂಡು ಪಾದಚಾರಿಗೆ ಡಿಕ್ಕಿ : ಸಾವು

Image
     ಭದ್ರಾವತಿ: ನಗರದ ತರೀಕೆರೆ ರಸ್ತೆ ಶಿವಾನಿ ಕ್ರಾಸ್ ಸಮೀಪ ಲಾರಿಯೊಂದರ ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.       ಮೃತರನ್ನು ಇಸ್ಮಾಯಿಲ್ ಜಬಿವುಲ್ಲಾ (೨೫) ಎಂದು ಗುರುತಿಸಲಾಗಿದೆ.  ತಾಲೂಕಿನ ತಿಪ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂನ್ ೨೭ರಂದು ಮಧ್ಯಾಹ್ನ ಸುಮಾರು ೧.೩೦ರ ವೇಳೆಗೆ ಕೆಲಸದ ನಿಮಿತ್ತ ಶಿವಾನಿ ಕ್ರಾಸ್ ರಸ್ತೆಯ ಎಡಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಭಾರತ್ ಬೆಂಜ್ ಲಾರಿಯ ಹಿಂಭಾಗದ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.  ಇಸ್ಮಾಯಿಲ್ ತಲೆಯ ಮೇಲೆ ಲಾರಿಯ ಚಕ್ರ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು,  ಸ್ಥಳೀಯರು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ನಾಯಕತ್ವ ಎಂಬುದು ಕೇವಲ ಅಧಿಕಾರ ಅನುಭವಿಸುವುದಲ್ಲ, ಬದಲಾವಣೆ, ನೆಮ್ಮದಿಯನ್ನುಂಟು ಮಾಡುವುದು : ಪ್ರಕಾಶ್ ರಾಥೋಡ್

Image
ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಡಿ. ಶಂಕರಮೂರ್ತಿ, ಕಾರ್ಯದರ್ಶಿಯಾಗಿ ವಿನೋದ್ ಗಿರಿ ಪದಗ್ರಹಣ ಭದ್ರಾವತಿ ಲಯನ್ಸ್ ಕ್ಲಬ್ ೨೦೨೬-೨೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಿ. ಶಂಕರಮೂರ್ತಿ ಪದಗ್ರಹಣ ಸ್ವೀಕರಿಸಿದರು.      ಭದ್ರಾವತಿ : ಯಾವುದೇ ಸಂಘ-ಸಂಸ್ಥೆಗಳಲ್ಲಿ ಪದವಿ, ನಾಯಕತ್ವ ಎಂಬುದು ಕೇವಲ ಅಧಿಕಾರ ಅನುಭವಿಸುವುದಲ್ಲ. ತಮ್ಮ ಅವಧಿಯಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರುವುದು, ನೆಮ್ಮದಿಯನ್ನುಂಟು ಮಾಡುವುದು. ತಮ್ಮ ಕೈಲಾದ ಸೇವೆ ಮಾಡುವುದಾಗಿದೆ ಎಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಹೇಳಿದರು.     ಅವರು ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಭವನದಲ್ಲಿ ೨೦೨೬-೨೭ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.     ಲಯನ್ಸ್ ಕ್ಲಬ್ ವಿಶ್ವದಾದ್ಯಂತ ಮಾನವೀಯ ಸೇವೆಗೆ ಮುಂದಾಗಿ ಸಮಾಜದ ವಿವಿಧ ಸೇವಾ ಚಟುವಟಿಕೆಗಳ ಮೂಲಕ ಜನರಲ್ಲಿ ನೆಮ್ಮದಿಯ ಆಶಾಕಿರಣ ಮೂಡಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಸೇವೆ ಮಾಡಲು ಅಧಿಕಾರ, ಸಮಯ ಅಥವಾ ಯಾರನ್ನೂ ಎದುರು ನೋಡುವುದಲ್ಲ. ಸದಾ ನಮ್ಮ ಕೈಲಾದಷ್ಟು ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಅಧಿಕಾರ ಎಂಬುದು ನಿಂತ ನೀರಲ್ಲ. ಸೇವೆ ಮಾಡಲು ಹೆಚ್ಚಿನ ಅವಕಾಶ ಲಭಿಸಿದಾಗ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಾವು ಮಾಡಿರುವ ಸೇವೆಗಳು ನಮ್ಮ ಜೀವನದಲ್ಲಿ ಕೊನೆಯವರೆಗೂ ಉಳಿಯಲಿವೆ ಎಂದರು.   ...

ಮಕ್ಕಳಲ್ಲಿ ಭವಿಷ್ಯದ ನ್ಯೂನ್ಯತೆಗಳು ತಡೆಯಲು ಪಲ್ಸ್ ಪೋಲಿಯೋ ಸಹಕಾರಿ : ಬಲ್ಕೀಶ್ ಬಾನು

Image
ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕುವ ಮೂಲಕ ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು ಕಾರ್ಯಕ್ರಮ ಉದ್ಘಾಟಿಸಿದರು.  - ಪಲ್ಸ್ ಪೋಲಿಯೋ ದಿನ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು - ಭವಿಷ್ಯದ ನ್ಯೂನ್ಯತೆ ತಪ್ಪಿಸಲು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ - ತಾಲೂಕಿನಲ್ಲಿ ೨೨,೩೫೪ ಮಕ್ಕಳ ಗುರುತಿಸುವಿಕೆ - ೧೭೯ ಬೂತ್, ೬೭೫ ಮಂದಿ ಬಳಕೆ ಭದ್ರಾವತಿ : ಭವಿಷ್ಯದಲ್ಲಿ ಮಕ್ಕಳ ಉತ್ತಮ ಆರೋಗ್ಯದ ಹಿನ್ನಲೆಯಲ್ಲಿ ಪಲ್ಸ್ ಪೋಲಿಯೋ ಸಹಕಾರಿಯಾಗಿದ್ದು, ಪ್ರತಿಯೊಬ್ಬ ಪೋಷಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವಂತೆ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಕರೆ ನೀಡಿದರು.     ಅವರು ಭಾನುವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.     ಭವಿಷ್ಯದಲ್ಲಿ ಮಕ್ಕಳು ನ್ಯೂನ್ಯತೆಯಿಂದ ಬಳಲುವುದನ್ನು ತಪ್ಪಿಸುವ ಉದ್ದೇಶದಿಂದ ಪಲ್ಸ್ ಪೋಲಿಯೋ ಲಸಿಕೆ ವಿಶ್ವದಾದಂತ್ಯ ೫ ವರ್ಷದೊಳಗಿನ ಮಕ್ಕಳಿಗೆ ಹಾಕಲಾಗುತ್ತಿದೆ. ಪಲ್ಸ್ ಪೋಲಿಯೋ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಎಂದರು.     ತಾಲೂಕು ಆರೋಗ್ಯಾ...

ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : ೪೩,೯೦೦ ರು. ಮೌಲ್ಯದ ಗಾಂಜಾ ವಶ

Image
ಭದ್ರಾವತಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಿಂದ ತಡಸ ಮಾರ್ಗವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.        ಭದ್ರಾವತಿ : ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಿಂದ ತಡಸ ಮಾರ್ಗವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.     ಮುಬಾರಕ್(೩೧) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ೪೩.೯೦೦ ರು. ಮೌಲ್ಯದ ೮೭೮ ಗ್ರಾಂ. ತೂಕದ ಮಾದಕ ವಸ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ. ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಚಿದಾನಂದ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಾಡಪ್ರಭು ಕೆಂಪೇಗೌಡರಿಂದ ಬೆಂಗಳೂರು ಪ್ರಮುಖ ನಗರವಾಗಿ ಗುರುತಿಸಿಕೊಂಡಿದೆ : ಬಲ್ಕೀಶ್ ಬಾನು 

Image
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಸರ್ಕಾರದ ವಿವಿಧ ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸಿದರು.      ಭದ್ರಾವತಿ : ಪ್ರಸ್ತುತ ಬೆಂಗಳೂರು ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾಗಿ ಗುರುತಿಸಿಕೊಳ್ಳಲು ಅಂದು ನಾಡಪ್ರಭು ಕೆಂಪೇಗೌಡರವರು ರೂಪಿಸಿದ ಯೋಜನೆಗಳು ಕಾರಣಗಳಾಗಿವೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು.     ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಸರ್ಕಾರದ ವಿವಿಧ ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.     ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯುಳ್ಳ ಸಮರ್ಥ ಆಡಳಿತಗಾರರಾಗಿದ್ದರು. ನಗರ ಯೋಜನೆ, ನೀರಾವರಿ, ಕೃಷಿಗೆ ಸಂಬಂಧಿಸಿ...

ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ : ಶಾರದ ಅಪ್ಪಾಜಿ

Image
ಭದ್ರಾವತಿ ನಗರದ ಅಪ್ಪರ್‌ಹುತ್ತಾದಲ್ಲಿ ಶನಿವಾರ ಪ್ರತಿವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.      ಭದ್ರಾವತಿ : ನಾಡಪ್ರಭು ಕೆಂಪೇಗೌಡರು ನಾಡುಕಂಡ ಅಪ್ರತಿಮ ನಾಯಕರಾಗಿದ್ದು, ಇಂತಹ ನಾಯಕನ ಆದರ್ಶತನಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಹೇಳಿದರು.     ಅವರು ಶನಿವಾರ ನಗರದ ಅಪ್ಪರ್ ಹುತ್ತಾದಲ್ಲಿ  ಪ್ರತಿವರ್ಷದಂತೆ ಈ ಬಾರಿ ಸಹ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.     ವೇದಿಕೆ ಅಧ್ಯಕ್ಷ, ನ್ಯಾಯವಾದಿ ಟಿ. ಚಂದ್ರೇಗೌಡ ಮಾತನಾಡಿ, ಈ ನಾಡಿಗೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ವೇದಿಕೆ ವತಿಯಿಂದ ಕೆಂಪೇಗೌಡರ ಜಯಂತಿ ಪ್ರತಿ ವರ್ಷ ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಒಕ್ಕಲಿಗರು ತಮ್ಮ ಶಕ್ತಿ ಪ್ರದರ್ಶಿಸಬೇಕಾಗಿದೆ ಎಂದರು.     ಜಯಂತಿ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಪ್ಪರ್ ಹುತ್ತಾ ಕಾಲೋನಿ, ಲೋಯರ್ ಹುತ್ತಾ, ಗೋಲ್ಡನ್ ಜ್ಯೂಬಿಲಿ, ಜಿಂಕ್‌ಲೈನ್, ಜನ್ನಾಪುರ ಸೇರಿದಂತೆ ನಗರದ ವಿವಿಧೆಡೆ ಒಕ್ಕಲಿಗ ಸಮುದಾಯದವರು, ವಿವಿಧ ಸ...

ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್‌ಗೆ ಸನ್ಮಾನ

Image
ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ, ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ೨೦೨೪ ಹಾಗು ೨೦೨೫ನೇ ಸಾಲಿನ ಕನ್ನಡ ಕುವರ-ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.      ಭದ್ರಾವತಿ : ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ, ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ೨೦೨೪ ಹಾಗು ೨೦೨೫ನೇ ಸಾಲಿನ ಕನ್ನಡ ಕುವರ-ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.     ಅಪೇಕ್ಷ ನೃತ್ಯ ಕಲಾವೃಂದ ಬೆಳವಣಿಗೆಯಲ್ಲಿ ಶಿವಕುಮಾರ್‌ರವರ ಪಾತ್ರ ಹೆಚ್ಚಿನದ್ದಾಗಿದ್ದು, ಪ್ರತಿ ವರ್ಷ ಶ್ರೀ ಬಸವೇಶ್ವರ ಧರ್ಮಸಂಸ್ಥೆ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಹೆಚ್ಚಿನ ಶ್ರಮವಹಿಸುತ್ತಿದ್ದಾರೆ.  ವಿಜೇತರಿಗೆ ಬಹುಮಾನಗಳು ...

ಜೂ.೨೭ರಂದು ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Image
ನೂತನ ಅಧ್ಯಕ್ಷರಾಗಿ ಡಿ. ಶಂಕರಮೂರ್ತಿ, ಕಾರ್ಯದರ್ಶಿಯಾಗಿ ವಿನೋದ್ ಗಿರಿ ಡಿ. ಶಂಕರಮೂರ್ತಿ ಭದ್ರಾವತಿ : ನಗರದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಡಿ. ಶಂಕರಮೂರ್ತಿ ಮತ್ತು ಕಾರ್ಯದರ್ಶಿಯಾಗಿ ವಿನೋದ್ ಗಿರಿ ಜೂ.೨೭ರ ಶನಿವಾರ ಸಂಜೆ ೬.೩೦ಕ್ಕೆ ಪದಗ್ರಹಣ ಸ್ವೀಕರಿಸಲಿದ್ದಾರೆ.      ಲಯನ್ಸ್ ೩೧೭ಸಿ ಜಿಲ್ಲಾ ಗೌರ್‍ನರ್ ಎಚ್.ಎನ್ ಶಿವಕುಮಾರ್ ಪದಗ್ರಹಣ ಬೋಧಿಸಲಿದ್ದು, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಕ್ಲಬ್ ಮಾಜಿ ಜಿಲ್ಲಾ ಗೌರ್‍ನರ್ ಬಿ. ದಿವಾಕರ ಶೆಟ್ಟಿ ಉಪಸ್ಥಿತರಿರುವರು. ವಿನೋದ್ ಗಿರಿ     ಲಯನ್ಸ್ ಕ್ಲಬ್ ೨೦೨೬-೨೭ನೇ ಸಾಲಿನ ಅಧ್ಯಕ್ಷರಾಗಿ ಡಿ. ಶಂಕರಮೂರ್ತಿ, ಕಾರ್ಯದರ್ಶಿಯಾಗಿ ವಿನೋದ್ ಗಿರಿ, ಖಜಾಂಚಿಯಾಗಿ ಎಚ್.ಎಸ್ ಮಂಜುನಾಥ್, ಲಿಯೋ ಕ್ಲಬ್ ಅಧ್ಯಕ್ಷರಾಗಿ ಪಿ. ಧೃವ, ಕಾರ್ಯದರ್ಶಿಯಾಗಿ ಜೆ. ಸಿರಿ ಮತ್ತು ಖಜಾಂಚಿಯಾಗಿ ಎಸ್. ಹರ್ಷ ಪದಗ್ರಹಣ ಸ್ವೀಕರಿಸಲಿದ್ದಾರೆ. ಕ್ಲಬ್ ಸದಸ್ಯರು, ಕುಟುಂಬ ವರ್ಗದವರು, ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.   ಎಚ್.ಎಸ್ ಮಂಜುನಾಥ್    

ಒಕ್ಕಲಿಗರ ಸಂಘದಿಂದ ಜೂ.೨೭ರಂದು ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ

Image
     ಭದ್ರಾವತಿ : ತಾಲೂಕು ಒಕ್ಕಲಿಗರ ಸಂಘದಿಂದ ಜೂ.೨೭ರ ಶನಿವಾರ ಸಂಜೆ ೫ ಗಂಟೆಗೆ ಅಪ್ಪರ್ ಹುತ್ತಾ ಕೆಂಪೇಗೌಡ ಸಮುದಾಯ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಆಯೋಜಿಸಲಾಗಿದೆ.     ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯನಂದನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್. ಆನಂದ್ ಅಧ್ಯಕ್ಷತೆವಹಿಸಲಿದ್ದು, ಸಂಘದ ಮಹಾಪೋಷಕರಾದ ಶಾರದ ಅಪ್ಪಾಜಿ ಉದ್ಘಾಟಿಸಲಿದ್ದಾರೆ.     ಎಸ್‌ಎವಿ ಪ್ರಾಥಮಿಕ ಶಾಲೆ ಶಿಕ್ಷಕ ಪ್ರಶಾಂತ್ ನೇತೃತ್ವದ ತಂಡದಿಂದ ನಾಡಪ್ರಭು ಕೆಂಪೇಗೌಡರ ಜೀವನ ಕುರಿತು ಕಿರುನಾಟಕ ನಡೆಯಲಿದ್ದು, ಕೆಂಪೇಗೌಡರ ಜೀವನ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಎಸ್‌ಎವಿ ಕಾಲೇಜು ಶಮನ್ವಿತ ಗೌಡ ವಿಷಯ ಮಂಡಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ್ರು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಧರ್ಮೇಶ್ ಸಿರಿಬೈಲು ಮತ್ತು ತಾಲೂಕು ಒಕ್ಕಲಿಗರ ಸಂಘದ ಮಹಾಪೋಷಕ ಎಲ್.ಜಿ ನಾಗರಾಜ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್ ನಾಗಭೂಷಣ್ ಕೋರಿದ್ದಾರೆ.

ಜೂ.೨೬ರಂದು ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ, ಪ್ರಶಸ್ತಿ ಪ್ರದಾನ ಸಮಾರಂಭ

Image
ಭದ್ರಾವತಿ : ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಜೂ.೨೬ರ ಶುಕ್ರವಾರ ಬೆಳಿಗ್ಗೆ ೧೦.೩೦ಕ್ಕೆ ಡಾ. ವಿಷ್ಣುವರ್ಧನ್ ಸಂಗೀತ, ನೃತ್ಯ ಸಂಭ್ರಮ ಕಾರ್ಯಕ್ರಮ, ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ೨೦೨೪ ಹಾಗು ೨೦೨೫ನೇ ಸಾಲಿನ ಕನ್ನಡ ಕುವರ-ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದೆ.     ಬೆಳಿಗ್ಗೆ ೧೦.೩೦ರಿಂದ ವಿಷ್ಣು ಸಂಗೀತ ನೃತ್ಯ ಸಂಭ್ರಮ ನಡೆಯಲಿದ್ದು, ಗಾಯಕರಾದ ನಗರದ ಆರ್. ಹರೀಶ್, ಧನ್‌ಪಾಲ್ ಸಿಂಗ್ ರಜಪೂತ್, ಸಂಗೀತ, ಅಪೇಕ್ಷ ಮಂಜುನಾಥ್, ಪುಷ್ಪಲತಾ ಹರೀಶ್, ಶಿವಮೊಗ್ಗ ಪರಶುರಾಮ ಮತ್ತು ನೀಲಪ್ಪ ಹಾಗು ಎನ್.ಆರ್ ಪುರ ವಿಶ್ರೇಯ ಜೆ. ಆಜಾರ್ಯ ಅವರಿಂದ ಸಂಗೀತ ಗಾಯನ ನಡೆಯಲಿದೆ. ಶಿವಮೊಗ್ಗ ಅಭಿನವ ನೃತ್ಯ ತಂಡದಿಂದ ನೃತ್ಯ ಹಾಗು ಜ್ಯೂನಿಯರ್ ವಿಷ್ಣುವರ್ಧನ್ ಅವರಿಂದ ಅಭಿನಯ ಮತ್ತು ಬೇಲೂರು ವಸಂತಕುಮಾರ್ ಜಾದುಗಾರ್ ಅವರಿಂದ ಜಾದು ಪ್ರದರ್ಶನ ನಡೆಯಲಿದೆ.     ಸಂಜೆ ೪ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಅಪೇಕ್ಷ ನೃತ್ಯ ಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆವಹಿಸಲಿದ್ದಾರೆ. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಡಾ. ...

ಜಾಗೃತಿ ಮ್ಯಾರಥಾನ್ ಓಟ : ತನುಶ್ರೀ ಮೊದಲ ಸ್ಥಾನ

Image
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ೫ ಕಿಲೋಮೀಟರ್ ಜಾಗೃತಿ ಮ್ಯಾರಥಾನ್ ಓಟದಲ್ಲಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಡಣಾಯಕಪುರ ನಿವಾಸಿ ತನುಶ್ರೀ ಮೊದಲನೇ ಸ್ಥಾನದೊಂದಿಗೆ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.      ಭದ್ರಾವತಿ:  ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ೫ ಕಿಲೋಮೀಟರ್ ಜಾಗೃತಿ ಮ್ಯಾರಥಾನ್ ಓಟದಲ್ಲಿ ತಾಲೂಕಿನ ಹೊಳೆಹೊನ್ನೂರು ಡಣಾಯಕಪುರ ನಿವಾಸಿ ತನುಶ್ರೀ ಮೊದಲನೇ ಸ್ಥಾನದೊಂದಿಗೆ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.      ಶಿವಮೊಗ್ಗ ಡಿಎಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್,  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ ಕಾರಿಯಪ್ಪ, ಕೆಎಸ್‌ಆರ್‌ಪಿ ಕಮಾಂಡೆಂಟ್ ಯುವ ಕುಮಾರ್ ಸೇರಿದಂತೆ ಇನ್ನಿತರರು ಬಹುಮಾನ ವಿತರಿಸಿ ಅಭಿನಂದಿಸಿದರು.     ತನುಶ್ರೀ ೮ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ನಗರದ ಸಂಚಾರಿ ಪೊಲೀಸ್ ಠಾಣೆಯ ಹೆಡ್‌ಕಾನ್‌...

ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ವಿಶ್ವ ಪರಿಸರ ದಿನ 

Image
ಭದ್ರಾವತಿ ನಗರದ ಯುನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕದಿಂದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.       ಭದ್ರಾವತಿ: ನಗರದ ಯುನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕದಿಂದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.      ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಜಾತಿಯ ಸುಮಾರು ೫೦ ಸಸಿಗಳು ಹಾಗು ತೆಂಗಿನ ಸಸಿಗಳನ್ನು ನೆಡಲಾಯಿತು. ಮಹಿಳಾ ಘಟಕದ ಅಧ್ಯಕ್ಷೆ ಜೆಸ್ಸಿ ಗೊನ್ಸಾಲ್ವಿಸ್ ಅಧ್ಯಕ್ಷತೆವಹಿಸಿದ್ದರು.      ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ, ಯುವ ಮುಖಂಡ ಬಿ.ಎಸ್ ಗಣೇಶ್, ಮಹಿಳಾ ಘಟಕದ ಗೌರವಾಧ್ಯಕ್ಷೆ ಎಲ್ಸಿ ಡಿಸೋಜ, ಧರ್ಮಗುರುಗಳಾದ ಫಾದರ್ ಕ್ರಿಸ್ತರಾಜ, ರೆವರೆಂಡ್ ಪಾಸ್ಟರ್ ಗಿಡಿಯೋನ್ ಹಾಗು ಮಹಿಳಾ ಘಟಕದ ಪದಾಧಿಕಾರಿಗಳು, ಕ್ರೈಸ್ತ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು. 

ಉಚಿತ ಕಣ್ಣಿನ ತಪಾಸಣೆ ಶಿಬಿರ ಯಶಸ್ವಿ 

Image
ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ನೇತೃತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಭದ್ರಾವತಿ ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ಸಮುದಾಯ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.       ಭದ್ರಾವತಿ: ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ನೇತೃತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಶಿವಮೊಗ್ಗ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.      ನ್ಯೂಟೌನ್ ಅಮಲೋದ್ಬವಿ ಮಾತೆ ದೇವಾಲಯದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಆಶೀರ್ವಾದ ಆಸ್ಪತ್ರೆ ಸರ್ಜನ್ ಅರುಣ್ ಮಾತನಾಡಿ, ಕಣ್ಣಿನ ಸುರಕ್ಷತೆ ಹಾಗು ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.       ಸ್ವ ಸಹಾಯ ಸಂಘದ ಸದಸ್ಯರು ಹಾಗು ಸಮುದಾಯದ ೮೨  ಸದಸ್ಯರು ಉಚಿತ ಕಣ್ಣಿನ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಂಡರು. ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿಯಿಂದ ಹಲವಾರು ಸೇವಾ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರಿಂದ ಹೆಚ್ಚಿನ ಸಹಕಾರ ಲಭಿಸುತ್ತಿದ್ದು, ಅಲ್ಲದೆ ಸೇವಾ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. 

ಬಿಜೆಪಿ ಎಸ್‌ಐಆರ್ ಬಳಸಿ ಕುತಂತ್ರದ ಮೂಲಕ ಚುನಾವಣೆ ಗೆಲುವು 

Image
ನಗರಸಭೆ ಹಿರಿಯ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ ಮೋಹನ್ ಆರೋಪ  ಭದ್ರಾವತಿಯಲ್ಲಿ ಶಾಸಕರ ಗೃಹ ಕಛೇರಿಯಲ್ಲಿ ಮಂಗಳವಾರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ ಮೋಹನ್ ಪಾಲ್ಗೊಂಡು ಮಾತನಾಡಿದರು.  - ಶಾಸಕರ ಗೃಹ ಕಛೇರಿಯಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಆಯೋಜನೆ.  - ಪಕ್ಷದ ನಗರ, ಗ್ರಾಮಾಂತರ ಘಟಕದ ಅಧ್ಯಕ್ಷರು ಉಪಸ್ಥಿತಿ. - ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲು ಕರೆ.       ಭದ್ರಾವತಿ: ಚುನಾವಣೆ ಬಂದಾಗ ಗೆಲ್ಲಲು ಭಾರತೀಯ ಜನತಾ ಪಕ್ಷ ಅನೇಕ ರೀತಿಯ ಕುತಂತ್ರಗಳನ್ನು ನಡೆಸುತ್ತದೆ. ಈ ಪೈಕಿ ಎಸ್‌ಐಆರ್ ಸಹ ಒಂದಾಗಿದ್ದು, ಮತದಾರರು ತಮ್ಮ ಹಕ್ಕನ್ನು ಕಸಿದುಕೊಳ್ಳದಂತೆ ಎಚ್ಚರವಹಿಸಬೇಕೆಂದು ನಗರಸಭೆ ಹಿರಿಯ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ ಮೋಹನ್ ಕರೆ ನೀಡಿದರು.      ಅವರು ಶಾಸಕರ ಗೃಹ ಕಛೇರಿಯಲ್ಲಿ ಮಂಗಳವಾರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.      ಭಾರತೀಯ ಜನತಾ ಪಕ್ಷ ಚುನಾವಣೆ ಗೆಲ್ಲಲು ಎಸ್‌ಐಆರ್ ಮೂಲಕ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಪಕ್ಷದ ಮತ ಬ್ಯಾಂಕ್ ಅಲ್ಲದ ಅಲ್ಪಸಂಖ್ಯಾತರು, ಬು...