Posts

ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ : ತೆಲುಗು ಕ್ರಿಶ್ಚಿಯನ್ ವೆಲ್‌ಫೇರ್ ಅಸೋಯೇಷನ್ ಆಗ್ರಹ

ಭದ್ರಾವತಿ : ಎಲ್ಲಾ ಧರ್ಮದ, ಎಲ್ಲಾ ಸಮುದಾಯದ, ಜಾತಿ-ಜನಾಂಗದವರನ್ನು ಒಗ್ಗೂಡಿಸಿಕೊಂಡು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ತೆಲುಗು ಕ್ರಿಶ್ಚಿಯನ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಜೆ. ಭಾಸ್ಕರ್ ಬಾಬು ಆಗ್ರಹಿಸಿದ್ದಾರೆ.      ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಯಾ ಸಮಯ, ಸಂದರ್ಭಗಳಿಗೆ ತಕ್ಕಂತೆ ಸಮುದಾಯದ ಏಳಿಗೆಗಾಗಿ ಅಸೋಸಿಯೇಷನ್ ಸೂಕ್ತ ನಿರ್ಣಯಗಳನ್ನು ಕೈಗೊಳ್ಳುತ್ತಾ ಬಂದಿದೆ. ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಕ್ಷೇತ್ರಕ್ಕೆ ಈ ಬಾರಿ ಮಂತ್ರಿ ಸ್ಥಾನ ಲಭಿಸಬೇಕು. ಈ ಹಿನ್ನಲೆಯಲ್ಲಿ ೪ ಬಾರಿ ಗೆಲುವು ಸಾಧಿಸಿ ಶಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಸೋಸಿಯೇಷನ್ ಆಗ್ರಹಿಸುತ್ತದೆ ಎಂದರು.      ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಆರ್. ಜಯರಾವ್, ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ್ ಬಾಬು, ಖಜಾಂಚಿ ರಾಜು, ಡಿ. ಸಿರಿಲ್, ಟಿ. ಪ್ರಭುದಾಸ್, ಕೆ. ಅಂತೋಣಿ, ಪಾಸ್ಟರ್ ರೆವರೆಂಡ್ ಜಯರಾಮ್ ಹಾಗು ನಗರಸಭೆ ಸದಸ್ಯ ಎಂ.ಜಿ ರಾಮಚಂದ್ರನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಡಿ೨-ಬಿಡಿವಿಟಿ೨ ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ತೆಲುಗು ಕ್ರಿಶ್ಚಿಯನ್ ವೆಲ್‌ಫೇರ್ ಅಸೋಸಿಯೇಷನ್ ಅ...

ಶಾಸಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ, ಕೆ.ಎಚ್ ಮುನಿಯಪ್ಪರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ 

Image
ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಅಧ್ಯಕ್ಷ ಎಸ್. ಪುಟ್ಟರಾಜು ಸೇರಿದಂತೆ ಇನ್ನಿತರರು ಮಾತನಾಡಿದರು.       ಭದ್ರಾವತಿ:  ಜಿಲ್ಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾಗಿರುವ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಆಗ್ರಹಿಸಿದೆ.      ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಎಸ್. ಪುಟ್ಟರಾಜು, ಕ್ಷೇತ್ರದಲ್ಲಿ ೪ ಬಾರಿ ಗೆಲುವು ಸಾಧಿಸಿ ಶಾಸಕರಾಗಿ ಸೇವೆ ಸಲ್ಲಿಸುವ ಮೂಲಕ ಹೆಚ್ಚಿನ ಅನುಭವ ಹೊಂದಿರುವ ಸಂಗಮೇಶ್ವರ್ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು. ಇದರಿಂದ ಜಿಲ್ಲೆಯ ಸರ್ವತೋರ್ಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಅದರಲ್ಲೂ ವಿಶೇಷ ಭದ್ರಾವತಿ ವಿಧಾನ ಸಭಾ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ. ಆ ಮೂಲಕ ಕ್ಷೇತ್ರದಲ್ಲಿ ಪುನಃ ಇತಿಹಾಸದ ವೈಭವ ಮರಳಲಿದೆ ಎಂದರು.      ಇದೆ ರೀತಿ ರಾಜ್ಯದಲ್ಲಿ ೭ ಬಾರಿ ಸತತವಾಗಿ ಸಂಸದರಾಗಿ, ಕೇಂದ್ರ ಸರ್ಕಾರದ ಹಲವು ಉನ್ನತ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ಅಪಾರ ಅನುಭವ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕರು, ಧುರೀಣರಾಗಿರುವ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ...

ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ 

Image
ಕೀರ್ತನ       ಭದ್ರಾವತಿ: ಅನಿರೀಕ್ಷಿತವಾಗಿ ಸಾವನ್ನಪ್ಪಿದ ಯುವತಿಯೋರ್ವಳು ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ ಮೆರೆದಿರುವ ಘಟನೆ ನಡೆದಿದೆ.      ನಗರದ ಹೊಸಮನೆ ಸುಭಾಷ್ ನಗರ, ೪ನೇ ತಿರುವಿನ ಕುಮಾರ್-ಲೀಲಾ ದಂಪತಿ ಪುತ್ರಿ ಕೀರ್ತನ(೨೩) ಸಾವು ಕಂಡಿದ್ದು, ಇವರು ಅಂಗಾಂಗ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.      ಕೀರ್ತನ ಸುಮಾರು ೧ ವರ್ಷದಿಂದ ತುಮಕೂರಿನಲ್ಲಿ ನರ್ಸ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಕಳೆದ ಮಂಗಳವಾರ ಕೆಲಸ ಮಾಡುವಾಗ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದು, ಇವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.      ಕೀರ್ತನ ಅವರಿಗೆ ಓರ್ವ ಸಹೋದರಿ ಇದ್ದು, ಕುಟುಂಬಸ್ಥರಲ್ಲಿ ದುಃಖ ಮನೆ ಮಾಡಿದೆ. ಇವರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆ ಹಿಂದೂ ರುದ್ರ ಭೂಮಿಯಲ್ಲಿ ಮಂಗಳವಾರ ನೆರವೇರಿತು. 

ಸುಲ್ತಾನಮಟ್ಟಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ 

Image
ಪೂರ್ವ ಪ್ರಾಥಮಿಕ ಶಾಲೆಗೆ ಚಾಲನೆ  ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಲ್ತಾನಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಬಾರಿ ಪ್ರಾರಂಭೋತ್ಸವ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಅಲ್ಲದೆ ಶಾಲೆ ಪೂರ್ವ ಪ್ರಾಥಮಿಕ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಲಾಯಿತು.       ಭದ್ರಾವತಿ : ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಲ್ತಾನಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಬಾರಿ ಪ್ರಾರಂಭೋತ್ಸವ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಅಲ್ಲದೆ ಶಾಲೆ ಪೂರ್ವ ಪ್ರಾಥಮಿಕ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಲಾಯಿತು.      ಪ್ರಸ್ತುತ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿದ್ದು, ಇಂತಹ ಸಂದರ್ಭದಲ್ಲಿ ವಿನೂತನ ಪ್ರಯೋಗಗಳ ಮೂಲಕ ನಿರಂತರ ಪ್ರಯತ್ನದ ಫಲವಾಗಿ ಶಾಲಾ ದಾಖಲಾತಿಯಲ್ಲಿ ಸುಧಾರಣೆ ಕಂಡುಕೊಳ್ಳುವಲ್ಲಿ ಈ ಶಾಲೆ ಯಶಸ್ವಿಯಾಗಿದೆ. ಖಾಸಗಿ ಶಾಲೆಗಳನ್ನು ಮೀರಿಸುವಂತೆ ಈ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪರವರು ಶಾಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಲಕ್ಷಾಂತರ ರು. ತಮ್ಮ ಸ್ವಂತ ಹಣ ವ್ಯಯವಾಡಿದ್ದಾರೆ. ಇವರ ಜೊತೆ ಮತ್ತೊಬ್ಬ ಶಿಕ್ಷಕ ಪ್ರಶಸ್ತಿ ಪುರಸ್ಕೃತ...

ತಾಲೂಕಿನೆಲ್ಲೆಡೆ ಸಂಭ್ರಮದ ಶಾಲಾ ಪ್ರಾರಂಭೋತ್ಸವ 

Image
ಗುಲಾಬಿ, ಹೂ ಗುಚ್ಛ, ಲೇಖನಿ ನೀಡಿ ಸ್ವಾಗತ  ಭದ್ರಾವತಿ: ತಾಲೂಕಿನ ಸರ್ಕಾರಿ, ಅನುದಾನಿತ ಹಾಗು ಅನುದಾನಿತ ರಹಿತ ಒಟ್ಟು ಸುಮಾರು ೪೪೮ ಶಾಲೆಗಳಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.       ಭದ್ರಾವತಿ: ತಾಲೂಕಿನ ಸರ್ಕಾರಿ, ಅನುದಾನಿತ ಹಾಗು ಅನುದಾನಿತ ರಹಿತ ಒಟ್ಟು ಸುಮಾರು ೪೪೮ ಶಾಲೆಗಳಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.      ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳನ್ನು ಮೀರಿಸುವಂತೆ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಶಾಲೆಯಲ್ಲಿ ಸ್ವಚ್ಛತೆ ಹಾಗು ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು.      ಬೆಳಿಗ್ಗೆ ಶಾಲೆಗೆ ಆಗಮಿಸಿದ ಮಕ್ಕಳನ್ನು ಬಹುತೇಕ ಶಾಲೆಗಳಲ್ಲಿ ಶಿಕ್ಷಕರು, ಸಿಬ್ಬಂದಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕೆಲವು ಶಾಲೆಗಳಲ್ಲಿ ವಿಶಿಷ್ಟವಾಗಿ ತಾವೇ ಸಿದ್ದಪಡಿಸಿರುವ ಆಕರ್ಷಕವಾದ ಹೂ ಗುಚ್ಛ ಹಾಗು ಗುಲಾಬಿ ಮಾದರಿಗಳನ್ನು ನೀಡಲಾಯಿತು. ಇನ್ನೂ ಕೆಲವು ಶಾಲೆಗಳನ್ನು ಲೇಖನಿ(ಪೆನ್ನು)ಗಳನ್ನು ನೀಡಲಾಯಿತು. ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು.      ನಂತರ ಶಿಕ್ಷಕರು-ಪೋಷಕರ ಮಹಾಸಭೆ ಏರ್ಪಡಿಸಿ ಶಾಲೆಯಲ್ಲಿ ಮುಂದಿನಗಳಲ್ಲಿ ಕೈಗೊಳ್ಳಬೇಕಿರುವ ಶೈಕ್ಷಣಿಕ ಚಟುವಟಿಗಳು, ಕೈಗೊಳ್ಳಬಹುದಾದ ಸುಧಾರಣೆಗಳು, ಮೂಲ ಸೌಕರ್ಯಗಳನ್ನು ...

ಜೇಡಿಕಟ್ಟೆಯಲ್ಲಿ  ಸಭಾಭವನ, ಮಳಿಗೆ ಉದ್ಘಾಟನೆ 

Image
ಭದ್ರಾವತಿ ನಗರದ ಜೇಡಿಕಟ್ಟೆ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಟ್ರಸ್ಟ್ ಆಶ್ರಯದಲ್ಲಿ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ರವರ ಅನುದಾನದಲ್ಲಿ ನಿರ್ಮಿಸಲಾಗಿರುವ ಸಭಾಭವನ ಹಾಗೂ ಮಳಿಗೆಯನ್ನು ಭಾನುವಾರ ನಗರಸಭೆ ಹಿರಿಯ ಸದಸ್ಯ ಬಿ .ಕೆ ಮೋಹನ್ ಉದ್ಘಾಟಿಸಿದರು.‌ ಭದ್ರಾವತಿ: ನಗರದ ಜೇಡಿಕಟ್ಟೆ ಗ್ರಾಮದ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಟ್ರಸ್ಟ್ ಆಶ್ರಯದಲ್ಲಿ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ರವರ ಅನುದಾನದಲ್ಲಿ ನಿರ್ಮಿಸಲಾಗಿರುವ ಸಭಾಭವನ ಹಾಗೂ ಮಳಿಗೆಯನ್ನು ಭಾನುವಾರ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.      ಜೇಡಿಕಟ್ಟೆ  ಗ್ರಾಮದ  ಬಿ.ಎಚ್ ರಸ್ತೆ ಪಕ್ಕದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನ ಕೆಲವು ವರ್ಷಗಳ ಹಿಂದೆ ಜೀರ್ಣೋದ್ಧಾರಗೊಂಡಿದ್ದು, ಜನಪ್ರತಿನಿಧಿಗಳು, ದಾನಿಗಳು ಹಾಗೂ ಭಕ್ತರ ಸಹಕಾರದಿಂದ ಹಂತ ಹಂತವಾಗಿ ಅಭಿವೃದ್ಧಿಗೊಳ್ಳುತ್ತಿದೆ.        ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.       ಸರ್ಕಾರದ 5 ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ  ಬಿ‌. ಎಸ್ ಗಣೇಶ್ ಹಾಗೂ ಶ್ರೀ ಮರುಳ ಸಿದ್ದೇಶ್ವರ ಸ್ವಾಮಿ ಜನ ಕಲ್ಯಾಣ ಟ್ರಸ್ಟ್...

ಕಾರ್ಮಿಕರು ಕಾನೂನು ಉಲ್ಲಂಘನೆಗಳ ಪ್ರಶ್ನಿಸುವುದನ್ನು ಕಲಿಯಿರಿ

Image
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಜೆ.ಎಂ.ಎಫ್.ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ರವಿಕುಮಾರ್ ಉದ್ಘಾಟಿಸಿಮಾತನಾಡಿದರು.      ಭದ್ರಾವತಿ : ಸಮಾಜದಲ್ಲಿ ಕಾರ್ಮಿಕರು ತಮ್ಮ ಜವಾಬ್ದಾರಿಯನ್ನು ಅರಿತು ಯಾವುದೇ ಇಲಾಖೆಯ ಉಲ್ಲಂಘನೆಗಳನ್ನು ಪ್ರಶ್ನೆ ಮಾಡುವುದನ್ನು ಕಲಿಯಬೇಕು. ತಮ್ಮ ವೇತನದ ಬಗ್ಗೆ, ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯಬೇಕೆಂದು ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ರವಿಕುಮಾರ್ ಹೇಳಿದರು.      ಅವರು ತಾಲೂಕಿನ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.      ಅಸಂಘಟಿತ ಕಾರ್ಮಿಕರಿಗೆ ಹಲವಾರು ಸಾಮಾಜಿಕ ಭದ್ರತಾ ಯೋಜನೆಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕಾರ್ಮಿಕರು ಕೆಲಸ ಮಾ...

ಎಸ್‌ಐಆರ್ ಮೂಲಕ ಮತದಾನದ ಹಕ್ಕು ಕದಿಯುವ ಹುನ್ನಾರ : ಎವೈವಿಕೆ ಆರೋಪ

Image
ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ, ರದ್ದುಗೊಳಿಸಲು ಆಗ್ರಹ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತದಾರರ ಪಟ್ಟಿಯ ವಿಶೇಷ ತೀವ್ರತೆ ಪರೀಕ್ಷರಣೆ (ಎಸ್‌ಐಆರ್) ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಕೆಲಸಕ್ಕೆ ಕೈಹಾಕಿದೆ ಎಂದು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ಕರ್ನಾಟಕ (ಎವೈವಿಕೆ) ಆರೋಪಿಸಿದ್ದು, ಶನಿವಾರ ಭದ್ರಾವತಿಯಲ್ಲಿ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.       ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತದಾರರ ಪಟ್ಟಿಯ ವಿಶೇಷ ತೀವ್ರತೆ ಪರೀಕ್ಷರಣೆ (ಎಸ್‌ಐಆರ್) ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಕೆಲಸಕ್ಕೆ ಕೈಹಾಕಿದೆ ಎಂದು ನಗರದ ಅಂಬೇಡ್ಕರ್ ವೈಚಾರಿಕ ವೇದಿಕೆ ಕರ್ನಾಟಕ (ಎವೈವಿಕೆ) ಆರೋಪಿಸಿದ್ದು, ಶನಿವಾರ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.      ಪ್ರಜಾಪ್ರಭುತ್ತ ದೇಶದಲ್ಲಿ ಮತದಾನದ ಹಕ್ಕು ಬಹಳ ಮಹತ್ವ ಪಡೆದುಕೊಂಡಿವೆ. ಮತದಾನದ ಹಕ್ಕು ಇರುವ ಕಾರಣಕ್ಕಾಗಿ ರಾಜಕಾರಣಿಗಳು (ಜನಪ್ರತಿನಿಧಿಗಳು) ದೇಶದ ನಾಗರೀಕರಿಗೆ ಕನಿಷ್ಠ ಗೌರವ ಕೊಡುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಎಸ್‌ಐಆರ್ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಕೆಲಸಕ್ಕೆ ಕೈಹಾಕಿದೆ. ಅಂದರೆ ತನ್ನ ಮತಬ್ಯಾಂಕ್ ಅಲ್ಲದ ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು,...

ವಡೇರಾಪುರ ಸರ್ಕಾರಿ ಶಾಲೆ ಶಿಕ್ಷಕ ಎಚ್. ಯೋಗೇಂದ್ರಪ್ಪ ಸೇರಿ ೧೦ ಮಂದಿ ನಿವೃತ್ತಿ 

Image
ಸಿಆರ್‌ಪಿ ಕಛೇರಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸನ್ಮಾನ, ಗೌರವ  ಭದ್ರಾವತಿ ತಾಲೂಕಿನ ವಡೇರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್. ಯೋಗೇಂದ್ರಪ್ಪ ಸೇರಿದಂತೆ ಒಟ್ಟು ೧೦ ಮಂದಿ ಶಿಕ್ಷಕರು ಮೇ.೩೧ರಂದು ವಯೋ ನಿವೃತ್ತಿ ಹೊಂದುತ್ತಿದ್ದು, ಈ ಹಿನ್ನಲೆಯಲ್ಲಿ ಶನಿವಾರ ಹಳೇನಗರದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ: ತಾಲೂಕಿನ ವಡೇರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್. ಯೋಗೇಂದ್ರಪ್ಪ ಸೇರಿದಂತೆ ಒಟ್ಟು ೧೦ ಮಂದಿ ಶಿಕ್ಷಕರು ಮೇ.೩೧ರಂದು ವಯೋ ನಿವೃತ್ತಿ ಹೊಂದುತ್ತಿದ್ದು, ಈ ಹಿನ್ನಲೆಯಲ್ಲಿ ಶನಿವಾರ ಹಳೇನಗರದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.      ಸರ್ಕಾರಿ ಕಿರಿಯ ಹಾಗು ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಾದ ವಡೇರಾಪುರದ ಎಚ್. ಯೋಗೇಂದ್ರಪ್ಪ, ಹನುಮಂತಪುರದ ಲೋಕೇಶಪ್ಪ, ಹಾಲಪ ವೃತ್ತದ ಮೈಲಾರಪ್ಪ, ಹಿರಿಯೂರಿನ ಸಿ.ಎಚ್ ರುದ್ರಮ್ಮ, ನಂಜಾಪುರದ ಸರಸ್ವತಿ, ಯಶೋಧಮ್ಮ, ಸೀಗೆಬಾಗಿ ಷಹರ್ ಬಾನು, ಸಿರಿಯೂರಿನ ನೇತ್ರಾವತಿ, ಬಾಳೇಮಾರನಹಳ್ಳಿ ಇಂದ್ರಮ್ಮ ಮತ್ತು ಉಕ್ಕುಂದ ಪಿ.ಶಾಂತ ನಿವೃತ್ತಿ ಹೊಂದುತ್ತಿದ್ದಾರೆ.      ಪ್ರಾಥಮಿಕ ಶಾಲಾ...

ಸೂಡಾ ಮಾಜಿ ಸದಸ್ಯ ಎಚ್. ರವಿಕುಮಾರ್ ಪುತ್ರಿ ವಿವಾಹ ಮಹೋತ್ಸವ 

Image
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ, ಕಾರ್ಮಿಕ ಮುಖಂಡ ಎಚ್. ರವಿಕುಮಾರ್‌ರವರ ಪುತ್ರಿ ಆರ್. ಪುಷ್ಪರವರ ವಿವಾಹ ಮಹೋತ್ಸವ ಬಿ. ಕಾರ್ತಿಕ್ ಅವರೊಂದಿಗೆ ಗುರುವಾರ ಮೈಸೂರಿನಲ್ಲಿ ನೆರವೇರಿತು.       ಭದ್ರಾವತಿ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ, ಕಾರ್ಮಿಕ ಮುಖಂಡ ಎಚ್. ರವಿಕುಮಾರ್‌ರವರ ಪುತ್ರಿ ಆರ್. ಪುಷ್ಪರವರ ವಿವಾಹ ಮಹೋತ್ಸವ ಬಿ. ಕಾರ್ತಿಕ್ ಅವರೊಂದಿಗೆ ಗುರುವಾರ ಮೈಸೂರಿನಲ್ಲಿ ನೆರವೇರಿತು.      ತಾಲೂಕು ಕುರುಬ ಸಮಾಜದ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ನವದಂಪತಿಗೆ ಆಶೀರ್ವದಿಸಿದರು. ಮೇ.೩೧ರ ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ನಗರದ ಲಯನ್ಸ್ ಕ್ಲಬ್ ಭವನದಲ್ಲಿ ಆರಕ್ಷತೆ ನಡೆಯಲಿದೆ. 

ನ್ಯಾಯಾಧೀಶೆ ಇಂದಿರಾ ಮೈಲಾಸ್ವಾಮಿ ಚಟ್ಟಿಯಾರ್ ನಿವೃತ್ತಿ : ಸನ್ಮಾನಿಸಿ ಗೌರವಿಸಿದ ವಕೀಲರು

Image
ಭದ್ರಾವತಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್‌ರವರು ಮೇ.೩೧ರಂದು ನಿವೃತ್ತಿ ಹೊಂದುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಶುಕ್ರವಾರ ಅವರನ್ನು ನಗರದ ವಕೀಲರು ಸನ್ಮಾನಿಸಿ ಗೌರವಿಸಿದರು.     ಭದ್ರಾವತಿ : ಹಿರಿಯ ನ್ಯಾಯಾಧೀಶೆ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್‌ರವರು ಮೇ.೩೧ರಂದು ನಿವೃತ್ತಿ ಹೊಂದುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಶುಕ್ರವಾರ ಅವರನ್ನು ನಗರದ ವಕೀಲರು ಸನ್ಮಾನಿಸಿ ಗೌರವಿಸಿದರು.      ನ್ಯಾಯಾಧೀಶೆ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್‌ರವರು ಇಲ್ಲಿನ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಕರ್ತವ್ಯ ಆರಂಭಿಸಿದಾಗಿನಿಂದ ಹಲವು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ. ಕೆಲವು ಪ್ರಕರಣಗಳಲ್ಲಿ ಮರಣ ದಂಡನೆ ಶಿಕ್ಷೆ ಸಹ ವಿಧಿಸಿದ್ದು, ಈ ಮೂಲಕ ಗಮನ ಸೆಳೆದಿದ್ದರು.      ತಾಲೂಕು ವಕೀಲರ ಸಂಘದ ನೇತೃತ್ವದಲ್ಲಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ನ್ಯಾಯಾಧೀಶೆ ಇಂದಿರಾ ಮೈಲಾಸ್ವಾಮಿ ಚಟ್ಟಿಯಾರ್‌ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.      ತಾಲೂಕು ವಕೀಲರ ಸಂಘದ ಹಾಲಿ ಹಾಗು ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ ಹಾಗು ಕಿರಿಯ ವಕೀಲರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ಕಾರ್ಖಾನೆಗೆ ಉಕ್ಕು ಪ್ರಾಧಿಕಾರದ ಮುಖ್ಯ ವ್ಯವಸ್ಥಾಪಕ ನಿರ್ದೇಶಕರ ಭೇಟಿ

Image
ಖುದ್ದು ಪರಿಶೀಲನೆ, ಆಡಳಿತ ಮಂಡಳಿ, ಅಧಿಕಾರಿಗಳು, ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ  ಡಾ. ಅಶೋಕ್ ಕುಮಾರ್ ಪಾಂಡ       ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಗುರುವಾರ ಸಂಜೆ ಪ್ರಾಧಿಕಾರದ ಮುಖ್ಯ ವ್ಯವಸ್ಥಾಪಕ ನಿರ್ದೇಶಕ(ಸಿಎಂಡಿ) ಡಾ. ಅಶೋಕ್ ಕುಮಾರ್ ಪಾಂಡ ಭೇಟಿ ನೀಡಿ ಕಾರ್ಖಾನೆ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಹಾಗು ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಿದ್ದಾರೆ.       ಮಾಜಿ ಮುಖ್ಯಮಂತ್ರಿ, ಕೇಂದ್ರ ಬೃಹತ್ ಕೈಗಾರಿಕೆ ಹಾಗು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಕಳೆದ ಸುಮಾರು ೨ ವರ್ಷಗಳಿಂದ ಕಾರ್ಖಾನೆ ಪುನಶ್ಚೇತನಕ್ಕೆ ನಿರಂತರವಾಗಿ ಪ್ರಯತ್ನಿಸುತ್ತಿದ್ದು, ಈ ನಡುವೆ ಕಾರ್ಖಾನೆಗೆ ೨-೩ ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುನಶ್ಚೇತನಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದ್ದರೂ ಸಹ ಹಲವು ಅಡೆತಡೆಗಳು ಎದುರಾಗುತ್ತಿದ್ದು, ಆದರೂ ಸಹ ಪ್ರಯತ್ನ ಮುಂದುವರೆಸಿದ್ದಾರೆ. ಇದರ ಭಾಗವಾಗಿ ಉಕ್ಕು ಪ್ರಾಧಿಕಾರದ ಮುಖ್ಯ ವ್ಯವಸ್ಥಾಪಕ ನಿರ್ದೇಶಕರು ಖುದ್ದಾಗಿ ಕಾರ್ಖಾನೆಗೆ ಭೇಟಿ ನೀಡಿ ಅಧಿಕಾರಿಗಳು ಹಾಗು ಕಾರ್ಮಿಕ ಸಂಘಟನೆಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.      ಡಾ. ಅಶೋಕ್ ಕುಮಾರ್ ಪಾಂಡರವರು ಬೆಳಿಗ್ಗೆ ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್...

ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಶಾಲು ಹೊದಿಸಿ ಸನ್ಮಾನಿಸಿದ ಸಂಗಮೇಶ್ವರ್ 

Image
ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಉಪಮುಖ್ಯಮಂತ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಗೌರವಿಸಿದರು.      ಭದ್ರಾವತಿ : ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಉಪಮುಖ್ಯಮಂತ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಗೌರವಿಸಿದರು.      ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ನಿಯೋಜನೆಯಾಗುತ್ತಿದ್ದಂತೆ ಸಂಗಮೇಶ್ವರ್‌ರವರು ಸಂಭ್ರಮ ವ್ಯಕ್ತಪಡಿಸುವ ಮೂಲಕ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಗೌರವಿಸಿದರು.      ವಿಧಾನಸಭೆ ಹಾಗು ವಿಧಾನ ಪರಿಷತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗು ಪುತ್ರ ಬಿ.ಎಸ್ ಬಸವೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ನಿವೃತ್ತ ಅಧಿಕಾರಿ ರತ್ನ ನಿಧನ 

Image
ವಿಐಎಸ್‌ಎಲ್ ನಿವೃತ್ತ ಅಧಿಕಾರಿ ರತ್ನ       ಭದ್ರಾವತಿ : ನಗರದ ಹುತ್ತಾಕಾಲೋನಿ ಜಿಂಕ್‌ಲೈನ್ ರಸ್ತೆ, ಸೇಂಟ್ ಚಾರ್ಲ್ಸ್ ವಿದ್ಯಾಸಂಸ್ಥೆ ಮುಂಭಾಗದ ನಿವಾಸಿ, ವಿಐಎಸ್‌ಎಲ್ ನಿವೃತ್ತ ಅಧಿಕಾರಿ ರತ್ನ(೮೦) ಗುರುವಾರ ಬೆಳಗ್ಗೆ ವಯೋಸಹಜವಾಗಿ ನಿಧನ ಹೊಂದಿದರು.      ಇವರಿಗೆ ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಇವರ ಅಂತ್ಯ ಕ್ರಿಯೆಯು ಸಂಜೆ ನೆರವೇರಿತು. ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ನಿವೃತ್ತ ಅಧಿಕಾರಿಗಳು ಸಂತಾಪ ಸೂಚಿಸಿದರು. 

ಮುಖ್ಯಮಂತ್ರಿ ಬದಲಾವಣೆಯಿಂದ ಉಕ್ಕಿನ ನಗರ ಚಿತ್ರಣ ಬದಲಾಗುವುದೇ?

Image
ಭದ್ರಾವತಿ ಮೈಸೂರು ಕಾರ್ಖಾನೆ  * ಅನಂತಕುಮಾರ್  ಮುಖ್ಯಾಂಶಗಳು :  - ಎಂಪಿಎಂ ಕಾರ್ಖಾನೆ ಸೇರಿದಂತೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ. - ಕ್ಷೇತ್ರದ ಜನತೆಗೆ ಭರವಸೆ, ತರಳುಬಾಳು ಶ್ರೀಗಳ ಮುಂದೆ ವಾಗ್ದಾನ. - ಸಂಗಮೇಶ್ವರ್ ಮೊದಲ ಮಂತ್ರಿಯಾಗುವರೇ?      ಭದ್ರಾವತಿ : ರಾಜ್ಯ ರಾಜಕಾರಣದಲ್ಲಿನ ಬದಲಾವಣೆಯಿಂದ ಕ್ಷೇತ್ರಕ್ಕೆ ಲಾಭವಾಗುವುದೇ ಎಂಬ ನಿರೀಕ್ಷೆ ಇಲ್ಲಿನ ನಿವಾಸಿಗಳು ಎದುರು ನೋಡುತ್ತಿದ್ದು, ಒಂದೆಡೆ ಕೇಂದ್ರ ಉಕ್ಕು ಪ್ರಾಧಿಕಾರದ ಶತಮಾನ ಪೂರೈಸಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅವನತಿ ದಾರಿ ಹಿಡಿದಿದೆ. ಮತ್ತೊಂದೆಡೆ ಕಳೆದ ಒಂದು ದಶಕದಿಂದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಮುಚ್ಚಲ್ಪಟ್ಟಿದೆ. ಈ ನಡುವೆ ಕ್ಷೇತ್ರದ ಆರ್ಥಿಕತೆ ಸಂಪೂರ್ಣವಾಗಿ ಕುಸಿದು ಬಿದ್ದು, ಉದ್ಯೋಗಕ್ಕಾಗಿ ಬೇರೆಡೆಗೆ ವಲಸೆ ಆರಂಭವಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕ್ಷೇತ್ರಕ್ಕೆ ವರದಾನವಾಗುವುದೇ ?     ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮೇಲೆ ಹೆಚ್ಚಿನ ನಿರೀಕ್ಷೆ ಹೊಂದಿದ್ದ ಕ್ಷೇತ್ರದ ಜನತೆಗೆ ಇದೀಗ ಅವರ ರಾಜೀನಾಮೆಯಿಂದ ನಿರಾಸೆ ಉಂಟಾಗಿದೆ. ಈ ನಡುವೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಷೇತ್ರದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದು, ಹಲವು ಬಾರಿ ಸಭೆ-ಸಮಾರಂಭಗಳಲ್ಲಿ ಎಂಪಿಎಂ ಕಾರ್ಖಾನೆ ಪುನರ್ ಆರಂಭ...

ತಹಸೀಲ್ದಾರ್ ಕೆ. ಪರುಸಪ್ಪ ವರ್ಗಾವಣೆ : ಸ್ಥಳ, ಹುದ್ದೆ ಸೂಚಿಸದ ಸರ್ಕಾರ 

Image
ತಹಸೀಲ್ದಾರ್ ಕೆ. ಪರುಸಪ್ಪ       ಭದ್ರಾವತಿ : ಒಂದೆಡೆ ರಾಜ್ಯದ ಮುಖ್ಯಮಂತ್ರಿ ಬದಲಾಗುತ್ತಿದ್ದರೆ, ಮತ್ತೊಂದೆಡೆ ರಾತ್ರೋರಾತ್ರಿ ತಹಸೀಲ್ದಾರ್ ಬದಲಾವಣೆಯಾಗಿದ್ದಾರೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ ಕೆ. ಪರುಸಪ್ಪರನ್ನು ಸರ್ಕಾರ ಬೇರೆಡೆಗೆ ವರ್ಗಾವಣೆಗೊಳಿಸಿದೆ. ಆದರೆ ಯಾವುದೇ ಹುದ್ದೆ, ಸ್ಥಳ ಸೂಚಿಸಿಲ್ಲ.     ಕುರುಬ ಸಮಾಜಕ್ಕೆ ಸೇರಿರುವ ತಹಸೀಲ್ದಾರ್ ಪರುಸಪ್ಪ ಕುರುಬರ ಅವರು ತಾಲೂಕಿನಲ್ಲಿ ಸುಮಾರು ೧೬ ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಏಕಾಏಕಿ ಇವರನ್ನು ವರ್ಗಾವಣೆಗೊಳಿಸಲಾಗಿದೆ. ಸರ್ಕಾರದ ಹಲವು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಯಾವುದೇ ವಿವಾದಗಳಿಗೆ ಎಡೆಮಾಡಿಕೊಡದೆ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ವರ್ಗಾವಣೆಗೊಳಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.       ಪ್ರದೀಪ್ ದೇವಗಿರಿ ನೂತನ ತಹಸೀಲ್ದಾರ್ :      ಕೆ. ಪರುಸಪ್ಪ ಅವರ ಹುದ್ದೆಗೆ ವಿಜಯಪುರ ತಾಳಿಕೋಟೆ ತಹಸೀಲ್ದಾರ್ ಗ್ರೇಡ್-೨ ಪ್ರದೀಪ್ ದೇವಗಿರಿ ಅವರನ್ನು ವರ್ಗಾವಣೆಗೊಳಿಸಿ ಮೇ.೨೭ರಂದು ಸರ್ಕಾರ ಆದೇಶಿಸಿದೆ. ಗುರುವಾರ ಬಕ್ರೀದ್ ಹಿನ್ನಲೆಯಲ್ಲಿ ಸಾರ್ವಜನಿಕ ರಜೆ ಇರುವ ಕಾರಣ ನೂತನ ತಹಸೀಲ್ದಾರ್ ಪ್ರದೀಪ್ ದೇವಗಿರಿಯವರು ಶುಕ್ರವಾರ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಡಯಟ್ ಹಿರಿಯ ಉಪನ್ಯಾಸಕರಾಗಿ ಎ.ಕೆ ನಾಗೇಂದ್ರಪ್ಪ ಅಧಿಕಾರ ಸ್ವೀಕಾರ 

Image
ಭದ್ರಾವತಿಯಲ್ಲಿ ಈ ಹಿಂದೆ ಕ್ಷೇತ್ರ ಶಿಕ್ಷಣಾಧಿಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಕೆ ನಾಗೇಂದ್ರಪ್ಪ ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರ(ಡಯಟ್)ದ ಹಿರಿಯ ಉಪನ್ಯಾಸಕರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು.       ಭದ್ರಾವತಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರ(ಡಯಟ್)ದ ಹಿರಿಯ ಉಪನ್ಯಾಸಕರಾಗಿ ಎ.ಕೆ ನಾಗೇಂದ್ರಪ್ಪ ಬುಧವಾರ ಅಧಿಕಾರ ವಹಿಸಿಕೊಂಡರು.       ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರಪ್ಪ ಮಾರ್ಚ್ ತಿಂಗಳಿನಲ್ಲಿ ತಮ್ಮ ಕಛೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಭ್ರಷ್ಟಾಚಾರದ ಆರೋಪದಡಿ ಅಮಾನತ್ತುಗೊಂಡಿದ್ದರು. ಪ್ರಸ್ತುತ ಅಮಾನತ್ತು ರದ್ದುಗೊಂಡಿದ್ದು,  ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಸರಿಸಮಾನವಾದ ಹಿರಿಯ ಉಪನ್ಯಾಸಕರ ಹುದ್ದೆಯ ಅಧಿಕಾರ ವಹಿಸಿಕೊಂಡರು.      ಡಯಟ್ ಕಾಲೇಜಿನ ಪ್ರಾಚಾರ್ಯರಾದ ಎಚ್.ಆರ್ ಕೃಷ್ಣಮೂರ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ,  ನಿವೃತ್ತ ಪ್ರಾಚಾರ್ಯ ಶಿವಬಸಪ್ಪ,  ತರೀಕೆರೆ ಎಸ್.ಜೆ.ಎಂ ಕಾಲೇಜಿನ ನಿವೃತ್ತ ನೌಕರ ಕಡದಕಟ್ಟೆ ರಾಜಶೇಖರ್, ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡರಾದ ಅತ್ತಿಗುಂದ ಕರಿಯಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಹ ಪ್ರಾಧ್ಯಾಪಕ ಡಾ. ಎಸ್. ವರದರಾಜರಿಗೆ ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ 

Image
ಡಾ. ಎಸ್. ವರದರಾಜ       ಭದ್ರಾವತಿ: ಬಹಳ ವರ್ಷಗಳವರೆಗೆ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಬೇರೆಡೆಗೆ ವರ್ಗಾವಣೆಗೊಂಡಿರುವ ಡಾ. ಎಸ್. ವರದರಾಜರವರು ತಮ್ಮ ಕ್ರೀಡಾ ಪ್ರತಿಭೆಯನ್ನು ಮುಂದುವರೆಸಿದ್ದು, ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.       ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪುರುಷರ ಭಾರ ಎತ್ತುವ ಸ್ಪರ್ಧೆಯ ೭೯ ಕೆ.ಜಿ. ದೇಹ ತೂಕ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ.     ವರದರಾಜರವರು ಕಳೆದ ೩ ವರ್ಷಗಳಿಂದ ರಾಷ್ಟ್ರಮಟ್ಟ ಹಾಗೂ ೧೨ ವರ್ಷಗಳಿಂದ ರಾಜ್ಯಮಟ್ಟದಲ್ಲಿ ಗೆಲವು ಸಾಧಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕರಾಗಿದ್ದು, ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ಗಣ್ಯರು ಅಭಿನಂದಿಸಿದ್ದಾರೆ.      ವರದರಾಜರವರು ಪ್ರಸ್ತುತ ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಲ್ಲ...

ಭದ್ರಾವತಿ ನಗರಸಭೆ ಘನತ್ಯಾಜ್ಯ ವಸ್ತು ನಿರ್ವಹಣೆ-2026 ನಿಯಮ ಜಾರಿ

Image
ಭದ್ರಾವತಿ ನಗರಸಭೆ ಮುಖ್ಯಾಂಶಗಳು: - ಘನತ್ಯಾಜ್ಯ ವಸ್ತುಗಳನ್ನು 4 ವಿಧಗಳಾಗಿ ಕಡ್ಡಾಯವಾಗಿ ಮೂಲದಲ್ಲಿಯೇ ವಿಂಗಡಿಸಿ. - ತ್ಯಾಜ್ಯ ವಿಂಗಡಣೆ ಮಾಡದೆ ಇರುವವರ ವಿರುದ್ಧ ದಂಡ. - ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ.     ಭದ್ರಾವತಿ : ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು -2026 ನಗರಸಭೆ ವ್ಯಾಪ್ತಿಯಲ್ಲಿ ಏ.1ರಿಂದ ಜಾರಿಗೆ ಬಂದಿದ್ದು, ಕಡ್ಡಾಯವಾಗಿ ನಿಯಮಗಳನ್ನು ಪಾಲಿಸುವುದು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು, ಅಲ್ಲದೆ ನೀರು ಮತ್ತು ವಿದ್ಯುತ್ ಸಂಪರ್ಕ ಸಹ ಕಡಿತಗೊಳಿಸಲಾಗುವುದು ಎಂದು ನಗರಸಭೆ ಆಡಳಿತ ಎಚ್ಚರಿಸಿದೆ. ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಸಚಿವಾಲಯ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು -2026 ಜಾರಿಗೆ ತಂದಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ನಗರಸಭೆ ವ್ಯಾಪ್ತಿಯ ನಿವಾಸಿಗಳು, ವ್ಯಾಪಾರೋದ್ಯಮಿಗಳು, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಮತ್ತು ಇತರೆ ವಾಣಿಜ್ಯ ಉದ್ದಿಮೆದಾರರು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ವಸ್ತುಗಳನ್ನು 4 ವಿಧಗಳಾಗಿ ಮೂಲದಲ್ಲಿಯೇ ವಿಂಗಡಿಸಿ ನಗರಸಭೆಯ ಆಟೋ ಟಿಪ್ಪರ್‌ಗಳಿಗೆ ನೀಡುವುದು ಕಡ್ಡಾಯವಾಗಿದೆ.     1. ಹಸಿ ತ್ಯಾಜ್ಯ : ಅಡಿಗೆ ಮನೆ ತ್ಯಾಜ್ಯ, ಆಹಾರ ತ್ಯಾಜ್ಯ, ತರಕಾರಿ ತ್ಯಾಜ್ಯ, ಮಾಂಸದ ತ್ಯಾಜ್ಯ, ಹಣ್ಣಿನ ತ್ಯಾಜ್ಯ, ಹೂವಿನ ತ್ಯಾಜ್ಯ, ಗಾರ್ಡನ್ ತ್ಯಾಜ್ಯ ಇತರೆ ಕರಗುವ ತ್ಯಾಜ್ಯ ವ...

ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರಿಗೆ ಸನ್ಮಾನ 

Image
ಭದ್ರಾವತಿ ನಗರದ ಜನ್ನಾಪುರ ಎಸ್.ಜೆ ರಸ್ತೆಯ ಗಾಯತ್ರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಅಭಿನಂದನಾ ಕಾರ್ಯಕ್ರಮವನ್ನು ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಅನನ್ಯ ಶಾಸ್ತ್ರಿ ಉದ್ಘಾಟಿಸಿದರು.        ಭದ್ರಾವತಿ : ನಗರದ ಜನ್ನಾಪುರ ಎಸ್.ಜೆ ರಸ್ತೆಯ ಗಾಯತ್ರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ನೂತನವಾಗಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಅನನ್ಯ ಶಾಸ್ತ್ರಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.       ಅನನ್ಯ ಶಾಸ್ತ್ರಿಯವರು ಕೆಲವು ತಿಂಗಳ ಹಿಂದೆ ನ್ಯಾಯಾಧೀಶರ ಹುದ್ದೆ ಪರೀಕ್ಷೆಯಲ್ಲಿ ಅತಿಹೆಚ್ಚು  ಅಂಕಗಳನ್ನು ಪಡೆದು ಉತ್ತೀರ್ಣರಾಗುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದು, ಇವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.      ಸನ್ಮಾನ ಸ್ವೀಕರಿಸಿದ ಅನನ್ಯ ಶಾಸ್ತ್ರಿಯವರು ತಮ್ಮ ಸಾಧನೆಯ ಹಾದಿಯನ್ನು ಸ್ಮರಿಸುವ ಮೂಲಕ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.      ಸೊಸೈಟಿ ಅಧ್ಯಕ್ಷೆ ಎಸ್. ಶ್ವೇತಾ ಅಧ್ಯಕ್ಷತೆ ವಹಿಸಿದ್ದರು.  ಸೊಸೈಟಿ ಮಾಜಿ ಅಧ್ಯಕ್ಷ ಆನಂದ ರಾವ್, ಉಪಾಧ್ಯಕ್ಷ ಡಿ. ಗುರುಪ್ರಸಾದ್, ಕಾರ್ಯದರ್ಶಿ ಎಂ.ವಿ ಶಶಿಧರ್, ನಿರ್ದೇಶಕರಾದ ಇಂದ್ರಸೇನರಾವ್, ಶ್ರೀವತ...

ಜಿಂಕೆ ಮಾಂಸ ಮಾರಾಟ : ಮೂವರ ಬಂಧನ

Image
20 ಕೆ.ಜಿ ಜಿಂಕೆ ಮಾಂಸ ವಶ, ಪ್ರಮುಖ ಆರೋಪಿ ನಾಪತ್ತೆ  ಜಿಂಕೆ ಮಾಂಸ ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿ, ಅವರಿಂದ ಸುಮಾರು 20 ಕೆ.ಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.       ಭದ್ರಾವತಿ : ಜಿಂಕೆ ಮಾಂಸ ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿ, ಅವರಿಂದ ಸುಮಾರು 20 ಕೆ.ಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.      ಅಂತರಗಂಗೆ ವಿಭಾಗ, ಬೊಮ್ಮನಕಟ್ಟೆ ಬೀಟ್ ವ್ಯಾಪ್ತಿಯ ನಗರದ ಬಿ.ಎಚ್ ರಸ್ತೆ, ಹುತ್ತಾ ಬಸ್ ನಿಲ್ದಾಣದ ಬಳಿ ಹಾಗು 206 ರಾಷ್ಟ್ರೀಯ ಹೆದ್ದಾರಿ, ಮೂರ್ತಿ ಹೋಟೆಲ್ ಮುಂಭಾಗ ಮಾಂಸ ಮಾರಾಟದಲ್ಲಿ ತೊಡಗಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.      ನಗರಸಭೆ ವ್ಯಾಪ್ತಿಯ ಸೀಗೆಬಾಗಿ, ಸೈಯದ್ ಕಾಲೋನಿ ನಿವಾಸಿ ಮುನ್ನ(45), ಸುರಗಿತೋಪು 2ನೇ ಕ್ರಾಸ್ ನಿವಾಸಿ ಚಂದ್ರಶೇಖರ್(49) ಮತ್ತು ಹೊಸ ಸಿದ್ದಾಪುರ, ೫ನೇ ಕ್ರಾಸ್ ಮಿಲ್ಕ್ ಡೈರಿ ಬಳಿ ನಿವಾಸಿ ಮೂರ್ತಿ(50) ಬಂಧಿತರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಕಾಚಗೊಂಡನಹಳ್ಳಿ ಗ್ರಾಮದ ಆರ್ಮುಗಂ ನಾಪತ್ತೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.       ಕಾಡಿನಲ್ಲಿ ಜಿಂಕೆಯನ್ನು ಭೇಟಿಯಾಡಿ ಕೊಂದು ಅದರ ಮಾಂಸವನ್ನು ನಗರಕ್ಕೆ ತಂದು ಮಾರಾಟ ಮಾಡಲಾಗುತ್ತ...

ಶಾಂತಿ, ಸೌಹಾರ್ದತೆ, ಸಂಭ್ರಮದಿಂದ ಪ್ರತಿಯೊಂದು ಹಬ್ಬ ಆಚರಿಸಿ : ಪ್ರಕಾಶ್ ರಾಥೋಡ್ 

Image
ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ಪಾಂಡುರಂಗ ಕಲ್ಯಾಣ ಮಂಟಪದಲ್ಲಿಬಕ್ರೀದ್ ಹಬ್ಬದ ಅಂಗವಾಗಿ ಪೊಲೀಸ್ ಉಪವಿಭಾಗದಿಂದ ಶಾಂತಿ ಸಭೆ ಏರ್ಪಡಿಸಲಾಗಿತ್ತು.       ಭದ್ರಾವತಿ : ಸಮಾಜದಲ್ಲಿ ಪ್ರತಿಯೊಂದು ಹಬ್ಬ ಶಾಂತಿ, ಸೌಹಾರ್ದತೆ, ಸಂಭ್ರಮದಿಂದ ಆಚರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇದನ್ನು ಎಲ್ಲರೂ ಅರಿತುಕೊಳ್ಳಬೇಕೆಂದು ನಗರದ ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಹೇಳಿದರು.      ಅವರು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ಪಾಂಡುರಂಗ ಕಲ್ಯಾಣ ಮಂಟಪದಲ್ಲಿಬಕ್ರೀದ್ ಹಬ್ಬದ ಅಂಗವಾಗಿ ಪೊಲೀಸ್ ಉಪವಿಭಾಗದಿಂದ ಏರ್ಪಡಿಸಲಾಗಿದ್ದ ಶಾಂತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.       ಯಾವುದೇ ಧರ್ಮದ ಹಬ್ಬವಿರಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಯಿಂದ ಆಚರಿಸಲು ಮುಂದಾಗಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಹ್ವಾನ ನೀಡಬಾರದು. ತಾಲೂಕಿನಾದ್ಯಂತ ಬಕ್ರೀದ್ ಹಬ್ಬ ಯಶಸ್ವಿಯಾಗಿ ನಡೆಯಲು ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ. ಒಂದು ವೇಳೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.      ಪ್ರಮುಖರಾದ ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್,  ಅಂಜುಮನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಅಯುಬ್ ಖಾನ್...

ಭಾರ ಎತ್ತುವ ಸ್ಪರ್ಧೆಯಲ್ಲಿ ಸಹ ಪ್ರಾಧ್ಯಾಪಕ ಶಿವರುದ್ರಪ್ಪರಿಗೆ 11ನೇ ಬಾರಿ ಚಿನ್ನದ ಪದಕ

Image
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭದ್ರಾವತಿ ನಗರದ ನ್ಯೂಟೌನ್ ನಿವಾಸಿ, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್.ಎಸ್ ಶಿವರುದ್ರಪ್ಪ ಭಾರ ಎತ್ತುವ ಸ್ಪರ್ಧೆ(ಪವರ್ ಲಿಫ್ಟಿಂಗ್) ಚಿನ್ನದ ಪದಕ ಪಡೆದುಕೊಂಡಿದ್ದಾರೆ.      ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗಾಗಿ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನಗರದ ನ್ಯೂಟೌನ್ ನಿವಾಸಿ, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್.ಎಸ್ ಶಿವರುದ್ರಪ್ಪ ಭಾರ ಎತ್ತುವ ಸ್ಪರ್ಧೆ(ಪವರ್ ಲಿಫ್ಟಿಂಗ್) ಚಿನ್ನದ ಪದಕ ಪಡೆದುಕೊಂಡಿದ್ದಾರೆ.      ಶಿವರುದ್ರಪ್ಪರವರು ವೈಯಕ್ತಿಕ ವಿಭಾಗದಲ್ಲಿ 105 ಕೆ.ಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇವರು ಭಾರ ಎತ್ತುವ ಸ್ಪರ್ಧೆಯಲ್ಲಿ 11ನೇ ಬಾರಿಗೆ ಚಿನ್ನದ ಪದಕ ಪಡೆದಿರುವುದು ವಿಶೇಷವಾಗಿದ್ದು, ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ.      ಶಿವರುದ್ರಪ್ಪರನ್ನು ಕರ್ನಾಟಕ ರಾಜ್ಯ ಸರ್ಕಾರಿ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Image
     ಭದ್ರಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವೀರಶೈವ ಲಿಂಗಾಯತ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿಯನ್ನು ಮಹಾಸಭೆ ವೆಬ್‌ಸೈಟ್ www. aivlm.org  ನಲ್ಲಿ ಆನ್ ಲೈನ್‌ ಮೂಲಕ ಮೇ. 25ರೊಳಗೆ ಸಲ್ಲಿಸಬೇಕು. ಅಂಚೆ ಅಥವಾ ಕೋರಿಯರ್‌ ಮೂಲಕ ಅರ್ಜಿ ಸಲ್ಲಿಸಿದಲ್ಲಿ ಸ್ವಿಕರಿಸುವುದಿಲ್ಲ. ಅರ್ಹರು ತಕ್ಷಣ ಅರ್ಜಿ ಸಲ್ಲಿಸುವ ಮೂಲಕ ಮಹಾಸಭಾ ಹಮ್ಮಿಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಮಹಾಸಭಾ ತಾಲೂಕು  ಅಧ್ಯಕ್ಷ  ಕೆ.ಎಸ್ ವಿಜಯ ಕುಮಾರ್ ಕೋರಿದ್ದಾರೆ.      ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು, ಕೆ.ಎಸ್ ವಿಜಯ ಕುಮಾರ್, ಮೊ:  9845855233 ಅಥವಾ ಪ್ರಧಾನ ಕಾರ್ಯದರ್ಶಿ ನಟರಾಜ್ ಹೆಬ್ಬಂಡಿ, ಮೊ.7353380123 ಸಂಖ್ಯೆಗೆ ಸಂಪಕಿಶಬಹುದಾಗಿದೆ. 

ಉಚಿತ ಸಾಮೂಹಿಕ ವಿವಾಹದಿಂದ ಕೌಟುಂಬಿಕ ವ್ಯವಸ್ಥೆ ಗಟ್ಟಿ, ಹಿಂದೂ ಧಾರ್ಮಿಕ ಪರಂಪರೆ ಉಳಿವು 

Image
ವಿಎಚ್‌ಪಿ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಬಿ.ಕೆ ಮೋಹನ್  ಭದ್ರಾವತಿ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿಯಿಂದ ಭಾನುವಾರ ಆಯೋಜಿಸಲಾಗಿದ್ದ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.       ಭದ್ರಾವತಿ : ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಮೂಲಕ ಹಿಂದೂ ಧರ್ಮದ ಧಾರ್ಮಿಕ ಪರಂಪರೆ ಭವಿಷ್ಯದ ಪೀಳಿಗೆಗೆ ತಿಳಿಸಿಕೊಡುವ ಜೊತೆಗೆ ಕೌಟುಂಬಿಕ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.      ಅವರು ಭಾನುವಾರ ಸಿದ್ಧಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿಯಿಂದ ಆಯೋಜಿಸಲಾಗಿದ್ದ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.      ಸಾಮೀಜಿಗಳು, ಗಣ್ಯರು ಸೇರಿದಂತೆ ಬಂಧು-ಬಳಗದವರ ಸಮ್ಮುಖದಲ್ಲಿ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳ ಮೂಲಕ ವಿವಾಹವಾಗುವ ಭಾಗ್ಯ ಎಲ್ಲರಿಗೂ ಲಭಿಸುವುದಿಲ್ಲ. ಉಚಿತ ಸಾಮೂಹಿಕ ಮಹೋತ್ಸವ ನೂತನ ವಧು-ವರರಲ್ಲಿ ಹೆಚ್ಚಿನ ಜವಾಬ್ದಾರಿ ಮೂಡಿಸುತ್ತದೆ. ಭವಿಷ್ಯದಲ್ಲಿ ಇಬ್ಬರು...

ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಸಂಗಮೇಶ್ವರ್ 

Image
ಭದ್ರಾವತಿ ಬಾರಂದೂರು ಗ್ರಾಮದ ಬಯಲು ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಭಾನುವಾರ ಗುರುತಿನ ಚೀಟಿ ವಿತರಣೆ, ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಉನ್ನತ ಹುದ್ದೆಯಲ್ಲಿರುವವರಿಗೆ ಸನ್ಮಾನ ಹಾಗು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಶ್ರಮ ಜೀವಿಗಳಾದ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.      ಅವರು ಭಾನುವಾರ ಬಾರಂದೂರು ಗ್ರಾಮದ ಬಯಲು ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಆಯೋಜಿಸಲಾಗಿದ್ದ ಗುರುತಿನ ಚೀಟಿ ವಿತರಣೆ, ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಉನ್ನತ ಹುದ್ದೆಯಲ್ಲಿರುವವರಿಗೆ ಸನ್ಮಾನ ಹಾಗು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.      ಕಾರ್ಮಿಕರ ಯಾವುದೇ ರೀತಿಯ ಸ...

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಚನ್ನಗಿರಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಚಾಲನೆ 

Image
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಭದ್ರಾವತಿ ನಗರದ ಚನ್ನಗಿರಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಕೊನೆಗೂ ನಗರಸಭೆ ಸಭೆ ಆಡಳಿತ ಮುಂದಾಗಿದೆ.  ವರ್ತಕರ ತೀವ್ರ ವಿರೋಧದ ನಡೆವೆಯೂ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.       ಭದ್ರಾವತಿ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಗರದ ಚನ್ನಗಿರಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಕೊನೆಗೂ ನಗರಸಭೆ ಸಭೆ ಆಡಳಿತ ಮುಂದಾಗಿದೆ.  ವರ್ತಕರ ತೀವ್ರ ವಿರೋಧದ ನಡೆವೆಯೂ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.      ನಗರದ ಹೃದಯ ಭಾಗದಲ್ಲಿರುವ ಚನ್ನಗಿರಿ ರಸ್ತೆ, ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ. ಮಾಧವಚಾರ್ ವೃತ್ತದಿಂದ ಹಾಲಪ್ಪ ವೃತ್ತದವರೆಗೆ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಅಧಿಕವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವು ವರ್ಷಗಳ ಹಿಂದೆಯೇ ರಸ್ತೆ ಅಗಲೀಕರಣ ಕಾರ್ಯಕ್ಕೆ ನಗರಸಭೆ ಆಡಳಿತ ಮುಂದಾಗಿದ್ದು, ರಸ್ತೆಯ ಮಧ್ಯ ಭಾಗದಿಂದ ಎರಡು ಕಡೆ ಅಳತೆ ಗುರುತು ಮಾಡಲಾಗಿದೆ. ರಸ್ತೆಯ ಎರಡೂ ಬದಿ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯ ಕೈಗೊಳ್ಳಬೇಕಾಗಿದೆ. ಆದರೆ ಇದಕ್ಕೆ ಸ್ಥಳೀಯರು ಹಾಗು ವರ್ತಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಲವು ಬಾರಿ ಗುರುತು ಕಾರ್ಯ ಕೈಗೊಂಡಿದ್ದರೂ ಸಹ ವಿರೋಧದಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲು ಸಾಧ್ಯವಾಗದೆ ಕೈಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ನಡ...

ಪಿಡಬ್ಲ್ಯೂಡಿ ನಿವೃತ್ತ ವ್ಯವಸ್ಥಾಪಕ ಶಾಮಣ್ಣ ನಿಧನ 

Image
ಶಾಮಣ್ಣ       ಭದ್ರಾವತಿ : ನಗರದ ವಾರ್ಡ್ ನಂ.೩ರ ಡಾ. ರಾಜಕುಮಾರ್ ರಸ್ತೆ, ಗೌಳಿಗರ ಬೀದಿ ನಿವಾಸಿ, ಲೋಕೋಪಯೋಗಿ ಇಲಾಖೆ ನಿವೃತ್ತ ವ್ಯವಸ್ಥಾಪಕ ಶಾಮಣ್ಣ(೭೯) ನಿಧನ ಹೊಂದಿದರು.      ವಿಕಲಚೇತನರಾದ ಇವರು ಅವಿವಾಹಿತರಾಗಿದ್ದು, ಚಿರಪರಿಚಿತರಾಗಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಹೊಳೆಹೊನ್ನೂರು ರಸ್ತೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.      ಇವರ ನಿಧನಕ್ಕೆ ಪ್ರಮುಖರಾದ ಎಂ.ಎಸ್ ಜನಾರ್ಧನಾ ಅಯ್ಯಂಗಾರ್, ಎಸ್. ನರಸಿಂಹಚಾರ್, ಮುರುಳಿ ಭಟ್ಟರು, ವಿಶ್ವ ಹಿಂದೂ ಪರಿಷದ್ ಪ್ರಮುಖರಾದ  ಹಾ. ರಾಮಪ್ಪ, ಹಳೇನಗರ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಭಜನ ಮಂಡಳಿ ಹಾಗು ವೇದ ಪಾಠ ಶಾಲೆ ಮತ್ತು ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.  

ಆಸ್ಪತ್ರೆ ಮುಂಭಾಗ ತ್ಯಾಜ್ಯ ಎಸೆಯದಂತೆ ರಂಗೋಲಿ ಬಿಡಿಸಿ ಜಾಗೃತಿ 

Image
ಆಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯ ದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಲು ಭದ್ರಾವತಿ ನಗರಸಭೆ ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ತಮ್ಮದೇ ಆದ ವಿಶಿಷ್ಟ ರೀತಿಯ ಪ್ರಯೋಗದ ಮೂಲಕ ಗಮನ ಸೆಳೆದಿದ್ದಾರೆ.      ಭದ್ರಾವತಿ : ಆಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಲು ನಗರಸಭೆ ಸಿಬ್ಬಂದಿಗಳು ಹಾಗೂ ಸಮುದಾಯ ಸಂಚಾಲಕರು ತಮ್ಮದೇ ಆದ ವಿಶಿಷ್ಟ ರೀತಿಯ ಪ್ರಯೋಗದ ಮೂಲಕ ಗಮನ ಸೆಳೆದಿದ್ದಾರೆ.     ನಗರಸಭೆ ವಾರ್ಡ್ ನಂಬರ್ ೨೨ರ ಉಜ್ಜನಿಪುರ ಮುಖ್ಯ ರಸ್ತೆಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಹಲವು ಬಾರಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರಿಗೆ ನಗರಸಭೆ ವತಿಯಿಂದ ಸೂಚಿಸಿದ್ದರೂ ಸಹ ತ್ಯಾಜ್ಯ ಎಸೆಯುವುದು ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ನಗರಸಭೆ ಸಮುದಾಯ ಸಂಚಾಲಕರು ಹಾಗೂ ಪೌರಕಾರ್ಮಿಕರು ತ್ಯಾಜ್ಯ ಎಸೆಯುವ ಸ್ಥಳವನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸುವ ಮೂಲಕ ಸಾರ್ವಜನಿಕರಲ್ಲಿ ತ್ಯಾಜ್ಯ ಎಸೆಯಂತೆ ಅರಿವು ಮೂಡಿಸಿ ಸ್ವಚ್ಛತೆ ಕಾಪಾಡಿಕೊಳ್ಳಲು ಮನವಿ ಮಾಡಿದರು.      ಒಂದು ವೇಳೆ ಮುಂದಿನ ದಿನಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದಲ್ಲಿ ನಗರಸಭೆ ವತಿಯಿಂದ ೫,೦೦೦ ರು. ದಂಡ ವಿಧಿಸುವುದಾಗಿ ಎಚ್ಚರಿಸಿದರು. ಅಲ್ಲದೆ ತ್ಯಾಜ್ಯ ಎಸೆಯ...

ವಿನಾಕಾರಣ ಯಾವುದೋ ನೆಪ್ಪವೊಡ್ಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡದಿರಿ 

Image
೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್  ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿ ಮಾತನಾಡಿದರು.       ಭದ್ರಾವತಿ: ವಿನಾಕಾರಣ ತಾಲೂಕು ಆಡಳಿತ ಯಾವುದೋ ನೆಪವೊಡ್ಡಿ ಕ್ಷೇತ್ರದಲ್ಲಿ ೫೦-೬೦ ವರ್ಷಗಳಿಂದ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಹಕ್ಕು ಪತ್ರ ನೀಡದಿರುವುದು ಸರಿಯಲ್ಲ. ಯಾವುದೇ ರೀತಿಯ ಸಮಸ್ಯೆಗಳು ಇದ್ದರೂ ಸಹ ಬಗೆಹರಿಸಿಕೊಂಡು ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡಲು ಮುಂದಾಗಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.      ಅವರು ಬುಧವಾರ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.      ಕ್ಷೇತ್ರದಲ್ಲಿರುವ ಅರ್ಹ ಫಲಾನುಭವಿಗಳಿಗೆ ಮೊದಲು ಹಕ್ಕು ಪತ್ರ ನೀಡಿ. ಎಲ್ಲದಕ್ಕೂ ಅರಣ್ಯ ಇಲಾಖೆ ನೆಪಮಾಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡುತ್ತಿರುವುದು ಸರಿಯಲ್ಲ. ಅರಣ್ಯ ಇಲಾಖೆಯವರು ಮನೆ ಕಟ್ಟಿಕೊಳ್ಳುವಾಗ ಸುಮ್ಮನಿರುತ್ತಾರೆ. ಜಾಗಕ್ಕ...

ಹಾಲಪ್ಪ ವೃತ್ತದಲ್ಲಿ ವಿಭಜಕ ನಿರ್ಮಾಣಕ್ಕೆ ಜೆಡಿಎಸ್ ವಿರೋಧ : ಕಾಮಗಾರಿ ಅರ್ಧಕ್ಕೆ ಸ್ಥಗಿತ 

Image
ನಗರಸಭೆ ಸಭಾಂಗಣದಲ್ಲಿ ಮೇ.೨೧ರ ಗುರುವಾರ ಸಭೆ ನಡೆಸಿ ಮುಂದಿನ ತೀರ್ಮಾನ  ಭದ್ರಾವತಿ: ಕರ್ನಾಟಕ ರತ್ನ, ವರನಟ ಡಾ. ರಾಜಕುಮಾರ್ ರಸ್ತೆ(ಬಿ.ಎಚ್ ರಸ್ತೆ), ಹಾಲಪ್ಪ ವೃತ್ತದಲ್ಲಿ ನಗರಸಭೆಯಿಂದ ರಸ್ತೆ ಮಧ್ಯ ಭಾಗದಲ್ಲಿ ವಿಭಜಕ ನಿರ್ಮಿಸಲಾಗುತ್ತಿದ್ದು, ಇದಕ್ಕೆ ಜಾತ್ಯಾತೀತ ಜನತಾದಳ ಮುಖಂಡರು ಬುಧವಾರ ಕಾಮಗಾರಿ ಸ್ಥಳದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ಮೇ.೨೧ರ ಗುರುವಾರ ನಗರಸಭೆ ಸಭಾಂಗಣದಲ್ಲಿ ಸಭೆ ನಡೆಯಲಿದೆ.      ಹಾಲಪ್ಪ ವೃತ್ತದಲ್ಲಿ ರಸ್ತೆ ಕಿರಿದಾಗಿದ್ದು, ಈಗಾಗಲೇ ಅಪಘಾತಗಳು ಸಂಭವಿಸುತ್ತಿವೆ. ಇಂತಹ ಸ್ಥಳದಲ್ಲಿ ರಸ್ತೆ ವಿಭಜಕ ನಿರ್ಮಿಸುವುದರಿಂದ ಮತ್ತಷ್ಟು ಅಪಘಾತಗಳು ಹೆಚ್ಚಾಗಲಿವೆ. ರಸ್ತೆ ವಿಭಜಕ ಅವೈಜ್ಞಾನಿಕವಾಗಿದ್ದು, ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.      ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ನೇತೃತ್ವದಲ್ಲಿ ಸುಮಾರು ೧ ಗಂಟೆಗೂ ಹೆಚ್ಚು ಸಮಯ ನಗರಸಭೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಯಿತು. ಅಂತಿಮವಾಗಿ ಈ ಸಂಬಂಧ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿ, ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಳಿಸಿದರು.      ಜೆಡಿಎಸ್ ಪಕ್ಷದ ಪ್ರಮುಖರಾದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ, ನಗರಸಭೆ ಸದಸ್ಯರಾದ ಉದಯ್ ಕುಮಾರ್, ಆರ್. ಮೋಹನ್ ಕುಮಾರ್, ಎಸ್. ...

ಸರ್ಕಾರಕ್ಕೆ ೩ ವರ್ಷ : ಶಾಸಕರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ 

Image
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ೩ ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ಭದ್ರಾವತಿ  ನಗರದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.       ಭದ್ರಾವತಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ೩ ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ನಗರದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.      ಪಕ್ಷದ ಹಿಂದುಳಿದ ವರ್ಗಗಳ(ಒಬಿಸಿ) ಜಿಲ್ಲಾ ಘಟಕದಿಂದ ಶಾಸಕರ ಗೃಹ ಕಛೇರಿಯಲ್ಲಿ ಲಾಡು ತಿನ್ನಿಸುವ ಮೂಲಕ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಲಭಿಸಲಿ. ಸರ್ಕಾರ ೫ ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸಂಭ್ರಮ ವ್ಯಕ್ತಪಡಿಸಲಾಯಿತು.      ಹಿಂದುಳಿದ ವರ್ಗಗಳ ಪ್ರಮುಖರಾದ ಬಿ. ಗಂಗಾಧರ್, ನರಸಿಂಹಮೂರ್ತಿ, ಮಹಮದ್ ರಫಿ, ಶಬ್ಬೀರ್ ಅಹಮದ್, ಧರ್ಮಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ 

Image
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಅಕಾಲಿಕ ಗಾಳಿ ಮಳೆಯಿಂದಾಗಿ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.       ಭದ್ರಾವತಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಅಕಾಲಿಕ ಗಾಳಿ ಮಳೆಯಿಂದಾಗಿ ಕ್ಷೇತ್ರದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.      ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸಂಕಷ್ಟಕ್ಕೆ ಒಳಗಾದವರಿಗೆ ಧೈರ್ಯ ತುಂಬಿದರು. ಅಲ್ಲದೆ ಅಧಿಕಾರಿಗಳಿಗೆ ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ವರದಿ ನೀಡುವಂತೆ ಸೂಚಿಸಿದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹಾಗು ಸಂಬಂಧಪಟ್ಟ ಸಚಿವರುಗಳೊಂದಿಗೆ ಚರ್ಚಿಸಿ ಸಿ ಸರ್ಕಾರದ ನಿಯಮಾವಳಿ ಪ್ರಕಾರ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.      ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ತಾಲ...

ಎಂಪಿಎಂ ನಿವೃತ್ತ ನೌಕರ ದೇವದತ್ತ ನಿಧನ 

Image
ದೇವದತ್ತ       ಭದ್ರಾವತಿ : ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ, ಉಜ್ಜನಿಪುರ ನಿವಾಸಿ ಗಂಧಮ್ ಜಾರ್ಜ್ ದೇವದತ್ತ ಸೋಮವಾರ ರಾತ್ರಿ ನಿಧನ ಹೊಂದಿದರು.      ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಎಂಪಿಎಂ ಕಾರ್ಖಾನೆಯ ಚಿಪ್ಪರ್ ಮೆಕಾನಿಕ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಉಜ್ಜನಿಪುರ ನೆಕ್ಸ್ಟ್ ಟು ಚರ್ಚ್ ಆಫ್ ಕ್ರಿಸ್ಟ್ ಸೆಕೆಂಡ್ ದೇವಾಲಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಂಗಳವಾರ ಸಂಜೆ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಸಮೀಪದ ಯೂನೈಟೆಡ್ ಪ್ರೊಟೆಸ್ಟೆಂಟ್ ಸಮಾಧಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಇವರ ನಿಧನಕ್ಕೆ ಎಂಪಿಎಂ ನಿವೃತ್ತ ಕಾರ್ಮಿಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಮೇ.೨೦ರಂದು ಕೆಡಿಪಿ ಸಭೆ 

Image
     ಭದ್ರಾವತಿ : ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮೇ.೨೦ರ ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದಾರೆ.      ತಾಲೂಕು ಮಟ್ಟದ ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ೨೦ ಅಂಶಗಳು ಸೇರಿದಂತೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಇದಾಗಿದ್ದು, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಂಡು ಜ.೧ ರಿಂದ ಮಾ.೩೧ರವರೆಗಿನ ವರದಿ ಸಲ್ಲಿಸುವ ಮೂಲಕ ಸಭೆ ಯಶಸ್ವಿಗೊಳಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೋರಿದ್ದಾರೆ. 

ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿ : ಶಾರದ ಅಪ್ಪಾಜಿ ನೇತೃತ್ವದ ತಂಡ ಪರಿಶೀಲನೆ

Image
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಭದ್ರಾವತಿ ಕ್ಷೇತ್ರದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಸೋಮವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.       ಭದ್ರಾವತಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕ್ಷೇತ್ರದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಸೋಮವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.       ಸಂಜೆ ವೇಳೆ ಗುಡುಗು ಸಹಿತ ಗಾಳಿ ಮಳೆಯಾಗುತ್ತಿದ್ದು, ನಗರ ಹಾಗು ಗ್ರಾಮೀಣ ಭಾಗದಲ್ಲಿ ಹಾನಿ ಉಂಟಾಗಿದೆ. ಹಳ್ಳಕೊಳ್ಳಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಗಾಳಿ ಮಳೆಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿ ಬಿದ್ದಿವೆ. ಕೆಲವೆಡೆ ಮನೆಯ ಮೇಲ್ಛಾವಣಿಗಳು ಹಾರಿ ಹೋಗಿರುವ ಘಟನೆಗಳು ನಡೆದಿವೆ. ಅಲ್ಲದೆ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿದ್ದು, ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಪರದಾಡುವಂತಾಗಿದೆ. ಎಲ್ಲೆಡೆ ಭತ್ತದ ಕೊಯ್ಲು ಆರಂಭಗೊಂಡಿದ್ದು, ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಭಂಡಾರಹಳ್ಳಿ ರೈತ ಶ್ರೀಧರ್‌ರವರು ೧ ಎಕರೆ ಜಮೀನಿನಲ...

ಎಂಪಿಎಂ ಅರಣ್ಯ ವ್ಯಾಪ್ತಿಯ ಸಹಾಯಕ ಅರಣ್ಯಾಧಿಕಾರಿ ಅಕ್ರಮದ ವಿರುದ್ಧ ತನಿಖೆ ನಡೆಸಿ

Image
ಮುಖ್ಯಮಂತ್ರಿಗಳಿಗೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮನವಿ  ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ತಾಂತ್ರಿಕ ಸಹಾಯಕ ಮತ್ತು ಸಹಾಯಕ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಬಿ ಪಾಲಾಕ್ಷಿರವರ ಅಕ್ರಮಗಳ ಬಗ್ಗೆ ಉನ್ನತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಹಾಗು ಸೇವೆಯಿಂದ ತಕ್ಷಣ ಬಿಡುಗಡೆಗೊಳಿಸುವಂತೆ ಜನ್ನಾಪುರ ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.       ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯಲ್ಲಿ ತಾಂತ್ರಿಕ ಸಹಾಯಕ ಮತ್ತು ಸಹಾಯಕ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ಬಿ ಪಾಲಾಕ್ಷಿರವರ ಅಕ್ರಮಗಳ ಬಗ್ಗೆ ಉನ್ನತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಹಾಗು ಸೇವೆಯಿಂದ ತಕ್ಷಣ ಬಿಡುಗಡೆಗೊಳಿಸುವಂತೆ ಜನ್ನಾಪುರ ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  ಎನ್.ಬಿ ಪಾಲಾಕ್ಷಿರವರು ಸರ್ಕಾರಿ ನೌಕರಿಯಲ್ಲಿ ನಿವೃತ್ತಿ ಹೊಂದಿದ್ದು, ನಿವೃತ್ತಿಯ ನಂತರದಲ್ಲಿ ಸರ್ಕಾರದ ಆದೇಶದ ಮೇರೆಗೆ ನಗರದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ತಾಂತ್ರಿಕ ಸಹಾಯಕ ಮತ್ತು...

ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರ ಸಾವು

Image
     ಭದ್ರಾವತಿ: ನಗರದ ತರೀಕೆರೆ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ನಾಗರಾಜ್(೪೮) ಎಂಬುವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.        ಶನಿವಾರ ಸಂಜೆ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರವಾಹನದಲ್ಲಿ ಹಿಂಬದಿ ಕುಳಿತಿದ್ದ ಇವರ ಸಹೋದರರ ಮಗಳಿಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.       ನಾಗರಾಜ್‌ರವರು ನೆಹರೂ ನಗರದಲ್ಲಿರುವ ಸಂಬಂಧಿಕರ ಮನೆಗೆ ಸಹೋದರನ ಮಗಳನ್ನು ಕೂರಿಸಿಕೊಂಡು ಹೋಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.