ಮಾ.೨೩ರಂದು ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆ
ಭದ್ರಾವತಿ: ತಾಲೂಕಿನ ಗೊಂದಿ ಆಶ್ರಮದ ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆ ಮಾ.೨೩ರ ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ವಿವಿಧ ಮಠ-ಮಂದಿರಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಚಿತ್ರದುರ್ಗ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ಕ್ಷೇತ್ರದ ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗ ಶ್ರೀ ಸರ್ದಾರ್ ಸೇವಾಲಾಲ್ ಮಠ ಪೀಠಾಧ್ಯಕ್ಷರಾದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮತ್ತು ತಾಯಿ ಮುಕ್ತಾನಂದಮಯಿ ಮಾತಾಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ಕಜಂಪಾಡಿ ಸುಬ್ರಮಣ್ಯ ಭಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಅಭ್ಯುದಯ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.