ವಿನಾಕಾರಣ ಯಾವುದೋ ನೆಪ್ಪವೊಡ್ಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡದಿರಿ
೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿ ಮಾತನಾಡಿದರು. ಭದ್ರಾವತಿ: ವಿನಾಕಾರಣ ತಾಲೂಕು ಆಡಳಿತ ಯಾವುದೋ ನೆಪವೊಡ್ಡಿ ಕ್ಷೇತ್ರದಲ್ಲಿ ೫೦-೬೦ ವರ್ಷಗಳಿಂದ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಹಕ್ಕು ಪತ್ರ ನೀಡದಿರುವುದು ಸರಿಯಲ್ಲ. ಯಾವುದೇ ರೀತಿಯ ಸಮಸ್ಯೆಗಳು ಇದ್ದರೂ ಸಹ ಬಗೆಹರಿಸಿಕೊಂಡು ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡಲು ಮುಂದಾಗಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಕ್ಷೇತ್ರದಲ್ಲಿರುವ ಅರ್ಹ ಫಲಾನುಭವಿಗಳಿಗೆ ಮೊದಲು ಹಕ್ಕು ಪತ್ರ ನೀಡಿ. ಎಲ್ಲದಕ್ಕೂ ಅರಣ್ಯ ಇಲಾಖೆ ನೆಪಮಾಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡುತ್ತಿರುವುದು ಸರಿಯಲ್ಲ. ಅರಣ್ಯ ಇಲಾಖೆಯವರು ಮನೆ ಕಟ್ಟಿಕೊಳ್ಳುವಾಗ ಸುಮ್ಮನಿರುತ್ತಾರೆ. ಜಾಗಕ್ಕ...