ಮಾದಿಗ ಸಮುದಾಯಕ್ಕೆ ೫.೨೫ರಷ್ಟು ಒಳ ಮೀಸಲಾತಿ ಸ್ವಾಗತಾರ್ಹ : ಡಾ. ಎಸ್. ಕೃಷ್ಣ
ಭದ್ರಾವತಿ : ರಾಜ್ಯ ಸರ್ಕಾರ ವಿಶೇಷ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಸಂಬಂಧಿಸಿದ ಜಾತಿಗಳಿಗೆ ೫.೨೫ರಷ್ಟು ಒಳ ಮೀಸಲಾತಿ ನೀಡಲು ತೀರ್ಮಾನಿಸಿರುವುದು ಸ್ವಾಗತಾರ್ಹವಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಮಾದಿಗ ಸಮಾಜ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಮಾಜದ ಅಧ್ಯಕ್ಷ ಡಾ. ಎಸ್. ಕೃಷ್ಣ ಹೇಳಿದರು. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಳ ಮೀಸಲಾತಿಗಾಗಿ ಕಳೆದ ಸುಮಾರು ೩೫ ವರ್ಷಗಳಿಂದ ನಿರಂತರವಾಗಿ ನಡೆಸಿದ ಹೋರಾಟದ ಫಲವಾಗಿ ಮಾದಿಗ ಸಮುದಾಯಕ್ಕೆ ಸಂಬಂಧಿಸಿದ ಜಾತಿಗಳಿಗೆ ೫.೨೫ರಷ್ಟು ಒಳ ಮೀಸಲಾತಿ ನಿಗದಿಪಡಿಸಲಾಗಿದೆ. ಇದರಿಂದಾಗಿ ತಲತಲಾಂತರಗಳಿಂದ ಶೋಷಣೆಗೆ ಒಳಗಾಗಿರುವ ಸಮುದಾಯದ ಜಾತಿಗಳಿಗೆ ನ್ಯಾಯ ನೀಡಿದಂತಾಗುತ್ತದೆ ಎಂದರು. ಇಂದಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಈ ಜಾತಿಗಳು ಹಿಂದುಳಿದಿವೆ. ಮುಂದುವರೆದ ಸಮುದಾಯಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಒಳ ಮೀಸಲಾತಿಯಿಂದ ಸ್ವಲ್ಪ ನೆಮ್ಮದಿ ಕಾಣುವಂತಾಗಿದೆ. ಸರ್ಕಾರ ಶೋಷಿತ ಎಲ್ಲಾ ಸಮುದಾಯಗಳಿಗೂ ನ್ಯಾಯಬದ್ದವಾಗಿ ಒಳಮೀಸಲಾತಿ ಪೂರ್ಣಪ್ರಮಾಣದಲ್ಲಿ ಹಂಚಿಕೆಮಾಡಿ ಅನುಷ್ಠಾನಗೊಳಿಸುವ ವಿಶ್ವಾಸವಿದೆ ಎಂದರು. ಒಳ ಮೀಸಲಾತಿ ಜಾರಿಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗು ಸಚಿವ ಸಂಪುಟದ ಸಚಿವರುಗಳಿಗೆ ಮತ್ತು ಒಳಮೀಸಲಾತಿಗಾಗಿ ಹೋರಾಟ ನಡೆಸಿದ...