ಅಪಾಯದ ಅಂಚಿನಲ್ಲಿರುವ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ
ಎರಡು ದಿನಗಳ ಜಾಗೃತಿ ಅಭಿಯಾನಕ್ಕೆ ಚಾಲನೆ, ದೊಣಬಘಟ್ಟದ ೩೬ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ `ಮಿಷನ್ ಸುರಕ್ಷಾ ಅಭಿಯಾನ'ದಡಿ ಭದ್ರಾವತಿ ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿರುವ `ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಎರಡು ದಿನಗಳ ಜಾಗೃತಿ ಅಭಿಯಾನಕ್ಕೆ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಬುಧವಾರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್ ಚಾಲನೆ ನೀಡಿದರು. ಭದ್ರಾವತಿ: ಶಿಕ್ಷಣದಿಂದ ದೂರವಾದ ಮಕ್ಕಳು ಬಾಲಕಾರ್ಮಿಕತೆ, ಬಾಲ್ಯವಿವಾಹ, ದೈಹಿಕ ದೌರ್ಜನ್ಯ, ವಿವಿಧ ರೀತಿಯ ಶೋಷಣೆ ಹಾಗೂ ಮಾದಕ ವ್ಯಸನದಂತಹ ಅಪಾಯಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನಲೆಯಲ್ಲಿ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಪ್ರತಿಯೊಬ್ಬ ಮಗುವನ್ನು ಶಾಲೆಗೆ ಮರಳಿ ಸೇರಿಸಿ, ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್ ಹೇಳಿದರು. ಶಾಲೆಯಿಂದ ಹೊರಗುಳಿದ ೧೮ ವರ್ಷ ಒಳಗಿನ ಎಲ್ಲಾ ಮಕ್ಕಳನ್ನು ಗುರುತಿಸಿ, ಅವರನ್ನು ಮರಳಿ ಶಾಲೆಗೆ ಸೇರಿಸುವ ಉದ್ದೇಶದಿಂದ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ವತ...