Posts

ಮೇ.೧೦ರಿಂದ ಎರಡನೇ ಹಂತದ `ರಜಾ-ಮಜಾ' ಬೇಸಿಗೆ ಶಿಬಿರ 

Image
ಭದ್ರಾವತಿ : ನಗರದ ಜನ್ನಾಪುರ ಅಪರಂಜಿ ಅಭಿನಯ ಶಾಲೆಯಿಂದ ಪ್ರತಿ ವರ್ಷದಂತೆ ಈ ಬಾರಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಎರಡನೇ ಹಂತದ ರಜಾ-ಮಜಾ ಬೇಸಿಗೆ ಶಿಬಿರ ಮೇ.೧೦ ರಿಂದ ೧೭ರವರೆಗೆ ಆಯೋಜಿಸಲಾಗಿದೆ.      ಉಂಬ್ಳೆಬೈಲು ರಸ್ತೆ, ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೧.೩೦ರವರೆಗೆ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ೬ ರಿಂದ ೧೬ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ.      ಡ್ರಾಮಾ ಜ್ಯೂನಿಯರ್, ಅಭಿನಯ, ಗೀತಗಾಯನ, ಅಭಿನಯ ನೃತ್ಯ, ಡ್ರಾಯಿಂಗ್, ವ್ಯಕ್ತಿ ವಿಕಸನ, ಕ್ರಾಫ್ಟ್ ವರ್ಕ್ ಮತ್ತು ಯೋಗ ಕುರಿತು ಸಂಪನ್ಮೂಲ ವ್ಯಕ್ತಿ, ರಂಗಕರ್ಮಿ, ಕಿರುತೆರೆ-ಚಲನಚಿತ್ರ ನಟ ಅಪರಂಜಿ ಶಿವರಾಜ್ ಮತ್ತು ತಂಡದವರಿಂದ ತರಬೇತಿ ನೀಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಲು ಹಾಗು ಹೆಚ್ಚಿನ ಮಾಹಿತಿಗಾಗಿ ೯೯೮೦೫೩೪೪೦೬ ಮೊಬೈಲ್ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ವಿದ್ಯಾರ್ಥಿನಿಗೆ ಸನ್ಮಾಸ

Image
ಪ್ರಗತಿಪರ ಕೃಷಿಕ ಶ್ರೀಧರ್ ರೂಢಿಸಿಕೊಂಡು ಬಂದಿರುವ ವಿಶಿಷ್ಟ ಕಾರ್ಯ ಭದ್ರಾವತಿ ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಎಲ್ ರಮ್ಯಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಯನ್ನು ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್ ರವರು ಸನ್ಮಾನಿಸಿ ಅಭಿನಂದಿಸಿದರು.      ಭದ್ರಾವತಿ: ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಎಲ್ ರಮ್ಯಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಯನ್ನು ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್ ರವರು ಸನ್ಮಾನಿಸಿ ಅಭಿನಂದಿಸಿದರು.       ರಮ್ಯಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 608 ಹಾಗು ಇದೆ ಶಾಲೆಯ ವಿದ್ಯಾರ್ಥಿನಿ ಡಿ. ಕೀರ್ತನ 605 ಅಂಕಗಳನ್ನು ಪಡೆದು ಅತ್ಯನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಗೆ ಹಾಗು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಪ್ರಗತಿಪರ ಕೃಷಿಕರಾದ ಶ್ರೀಧರ್ ರವರು ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್...

ಮಾರಾಕಾಸ್ತ್ರಗಳಿಂದ ಹಲ್ಲೆ ಪ್ರಕರಣ : ೬ ಮಂದಿಗೆ ಜೈಲು ಶಿಕ್ಷೆ, ದಂಡ 

Image
ಭದ್ರಾವತಿ ತಾಲೂಕಿನ ಜಿಂಕಲೈನ್ ವೀರಾಪುರ ರಸ್ತೆಯಲ್ಲಿರುವ ಬಾಬುರವರ ಮನೆ ಹಿಂಭಾಗದ ತೆಂಗಿನ ತೋಟದಲ್ಲಿ ಸುಮಾರು ೬ ವರ್ಷಗಳ ಹಿಂದೆ ಯುವಕನೊಬ್ಬನ ಮೇಲೆ ಮಾರಾಕಾಸ್ತ್ರಗಳಿಂದ ನಡೆಸಲಾಗಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಮಂದಿ ಯುವಕರಿಗೆ ೩ ವರ್ಷ ಜೈಲು ಶಿಕ್ಷೆ ಹಾಗು ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ೬ ಮಂದಿ ಯುವಕರು.       ಭದ್ರಾವತಿ:  ಸುಮಾರು ೬ ವರ್ಷಗಳ ಹಿಂದೆ ತೆಂಗಿನ ತೋಟವೊಂದರಲ್ಲಿ ಯುವಕನೊಬ್ಬನ ಮೇಲೆ ಮಾರಾಕಾಸ್ತ್ರಗಳಿಂದ ನಡೆಸಲಾಗಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಮಂದಿ ಯುವಕರಿಗೆ ೩ ವರ್ಷ ಜೈಲು ಶಿಕ್ಷೆ ಹಾಗು ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.      ತಾಲೂಕಿನ ಜಿಂಕಲೈನ್ ವೀರಾಪುರ ರಸ್ತೆಯಲ್ಲಿರುವ ಬಾಬುರವರ ಮನೆ ಹಿಂಭಾಗದ ತೆಂಗಿನ ತೋಟದಲ್ಲಿ ಮೇ.೧೦, ೨೦೨೦ರಂದು ಕಿರಣ್(೨೯), ಮಂಜುನಾಥ್ (೨೫) ಮತ್ತು ಅರುಣ (೨೪) ರವರು ನಿಂತಿದ್ದಾಗ,   ಅಜೇಯ ಅಲಿಯಾಸ್ ಅಜ್ಜಿ(೨೪ ), ತೇಜು ಅಲಿಯಾಸ್ ತೇಜಸ್ವಿ ಅಲಿಯಾಸ್ ಟೀಕು(೨೨), ಮನು ಅಲಿಯಾಸ್ ಗೊಣ್ಣೆ ಮಧು ಅಲಿಯಾಸ್ ಮನೋಜ್(೨೨), ಆದರ್ಶ ಅಲಿಯಾಸ್ ಆದು(೨೫), ಅರುಣ(೨೦) ಪಾನಿಪುರಿ ರಂಗ ಅಲಿಯಾಸ್ ರಂಗ ಅಲಿಯಾಸ್ ಪಾನಿಪುರಿ(೨೫)ರವರು ಮಂಜುನಾಥ್ ರವರ ಮೇಲಿನ ಹಳೆಯ ದ್ವೇಷದ ಹಿನ್ನಲೆಯಲ್ಲಿ ಮಾರಕಾಸ್ತ್ರಗ...

ನಗರಸಭೆ ಮಾಜಿ ಸದಸ್ಯ ಕೆ.ಬಿ ಗಂಗಾಧರ ನಿಧನ 

Image
ಕೆ.ಬಿ ಗಂಗಾಧರ        ಭದ್ರಾವತಿ : ತಾಲೂಕಿನ ಮಂಡಲ ಪಂಚಾಯಿತಿ ಹಾಗು ನಗರಸಭೆ ಮಾಜಿ ಸದಸ್ಯ, ಭಂಡಾರಹಳ್ಳಿ ನಿವಾಸಿ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ ಗಂಗಾಧರ(೭೫) ಮಂಗಳವಾರ ಬೆಳಗಿನ ಜಾವ ನಿಧನ ಹೊಂದಿದರು.      ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು ಹಾಗು ಮೊಮ್ಮಕ್ಕಳು ಇದ್ದಾರೆ. ಗಂಗಾಧರ್‌ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಲೋಯರ್ ಹುತ್ತಾ ಕವಲಗುಂದಿ ದೊಣಬಘಟ್ಟ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.      ಪ್ರಸ್ತುತ ಗಂಗಾಧರ್‌ರವರ ಸೊಸೆ ಶೃತಿ ವಸಂತಕುಮಾರ್ ನಗರಸಭೆ ಸದಸ್ಯೆಯಾಗಿದ್ದು, ಗಂಗಾಧರ್‌ರವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗು ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಲ್ಯಾಬೋರೇಟರಿಯಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ : ಪೌರ ಕಾರ್ಮಿಕರಿಗೆ ಸನ್ಮಾನ

Image
ಪ್ರತಿವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ರಂಗಪ್ಪ ವೃತ್ತ, ಮಧು ಲ್ಯಾಬೋರೇಟರಿ ವತಿಯಿಂದ `ವಿಶ್ವ ಕಾರ್ಮಿಕರ ದಿನಾಚರಣೆ' ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು.       ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ಸಹ ನಗರದ ರಂಗಪ್ಪ ವೃತ್ತ, ಮಧು ಲ್ಯಾಬೋರೇಟರಿ ವತಿಯಿಂದ `ವಿಶ್ವ ಕಾರ್ಮಿಕರ ದಿನಾಚರಣೆ' ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು.      ರಂಗಪ್ಪ ವೃತ್ತ ಮತ್ತು ಕೇಶವಪುರ ಬಡಾವಣೆಯಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಾದ ಎಸ್. ಶರವಣ, ಲಿಂಗಮ್ಮ, ತಿರುಮಲ, ಲಕ್ಷ್ಮಮ್ಮ, ಲತೇಶ್ ಮತ್ತು ತುಳಸಿ ಸೇರಿದಂತೆ ೬ ಜನರನ್ನು  ಗೌರವಿಸಿ ಸನ್ಮಾನಿಸಲಾಯಿತು. ಮಧು ಲ್ಯಾಬ್ ಮಾಲೀಕ, ಸಮಾಜ ಸೇವಕ ಎಸ್.ಆರ್. ಜಗದೀಶ್ ಮಾತನಾಡಿ, ಜಗತ್ತು ಸುಖ ನಿದ್ರೆಯಲ್ಲಿದ್ದಾಗ ಎದ್ದು ತಮ್ಮ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರ ಕಾರ್ಯ ಅಭಿನಂದನೀಯ. ಸಮಾಜದ ಸ್ವಚ್ಚತೆಯನ್ನು, ಆರೋಗ್ಯವನ್ನು ಕಾಪಾಡುವ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗ ಉತ್ತಮ ಗುಣಮಟ್ಟದ ಜೀವನ ನಡೆಸಬೇಕು. ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಒತ್ತು ನೀಡಬೇಕು. ದುಶ್ಚಟಗಳಿಗೆ ಬಲಿಯಾಗಬಾರದೆಂದರು. ಸಮಾಜ ಕೂಡ ಎಲ್ಲಾ ಕಾರ್ಮಿಕರನ್ನು ಗೌರವದಿಂದ ಕಾಣಬೇಕು. ಅವರ ಕಾನೂನುಬದ್ದ ಬೇಡಿಕೆಗೆ ಆದ್ಯತೆ ನೀಡಬೇಕೆಂದರು.      ಲೀಲಾವತಿ ಜಗದೀಶ್ ಮತ್ತು ಲ್ಯಾಬ್ ಸಿಬ್ಬಂದಿ...

ಯಡಿಯೂರಪ್ಪ `ಅಭಿಮಾನೋತ್ಸವ' ಕಾರ್ಯಕ್ರಮ ಪೂರ್ವಭಾವಿ ಸಭೆ 

Image
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ : ವಿಜಯೋತ್ಸವ, ಸಂಭ್ರಮಾಚರಣೆ  ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ವಿಜಯೋತ್ಸವದೊಂದಿಗೆ ಸಂಭ್ರಮಾಚರಣೆ ನಡೆಸಲಾಯಿತು.       ಭದ್ರಾವತಿ : ರೈತ ನಾಯಕ, ಜನ ನಾಯಕ, ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಭೆ ಸೋಮವಾರ ನಗರದ ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾಗಿತ್ತು.      ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗು ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಸ್ ತೀರ್ಥಯ್ಯ ಸಭೆಯ ನೇತೃತ್ವವಹಿಸಿ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಗಳ ಕುರಿತು ಚರ್ಚಿಸಲಾಯಿತು. ಅಲ್ಲದೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ವೀಕ್ಷಣೆ ಮಾಡಲಾಯಿತು.      ಬಿಜೆಪಿ ಗೆಲವು : ವಿಜಯೋತ್ಸವ      ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಯವರ ನೇತೃತ್ವದಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ನಡೆಸಿದರು.  ...

ಶಾಸಕ ಸಂಗಮೇಶ್ವರ್ ಗೆ ಅಭಿಮಾನಿಯಿಂದ ಬುದ್ಧ ಪೂರ್ಣಿಮೆಯಂದು ಕಾಣಿಕೆ ಭದ್ರಾವತಿ: ಬುದ್ಧ ಪೂರ್ಣಿಮೆಯಂದು

Image
  ಭದ್ರಾವತಿಯಲ್ಲಿ ಬುದ್ಧ ಪೂರ್ಣಿಮೆಯಂದು ಅಭಿಮಾನಿಯೊಬ್ಬರು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಭಗವಾನ್ ಬುದ್ಧ ಅವರೊಂದಿಗೆ ಅಂಬೇಡ್ಕರ್ ಮತ್ತು ಬಸವಣ್ಣನವರ ಭಾವಚಿತ್ರವಿರುವ ಕಾಣಿಕೆ ನೀಡಿ ಗಮನ ಸೆಳೆದಿದ್ದಾರೆ. ಭದ್ರಾವತಿ: ಅಭಿಮಾನಿಯೊಬ್ಬರು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಭಗವಾನ್ ಬುದ್ಧ ಅವರೊಂದಿಗೆ ಅಂಬೇಡ್ಕರ್ ಮತ್ತು ಬಸವಣ್ಣನವರ ಭಾವಚಿತ್ರವಿರುವ ಕಾಣಿಕೆ ನೀಡಿ ಗಮನ ಸೆಳೆದಿದ್ದಾರೆ.        ಜಗತ್ತಿಗೆ ಸತ್ಯ, ಅಹಿಂಸೆ, ಶಾಂತಿ, ಸೌಹಾರ್ದತೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಭಗವಾನ್ ಬುದ್ಧ, ಜಗಜ್ಯೋತಿ ಬಸವಣ್ಣ ಮತ್ತು ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಆದರ್ಶಗಳು ಪ್ರತಿ ದಿನ ನಮ್ಮದಾಗಬೇಕೆಂಬ ಆಶಯ ಸಂಗಮೇಶ್ವರ್ ಅಭಿಮಾನಿ, ಯುವ ಮುಖಂಡ ವೈ. ನಟರಾಜ್ ಹೊಂದಿದ್ದಾರೆ.   ವೈ. ನಟರಾಜ್ ಶಾಸಕರ ಗೃಹ ಕಚೇರಿಗೆ ತೆರಳಿ ಸನ್ಮಾನಿಸುವ ಮೂಲಕ ಕಾಣಿಕೆ ನೀಡಿ ಬುದ್ದ ಪೂರ್ಣೀಮೆ ಶುಭ ಕೋರಿದ್ದಾರೆ.

ಗೌರಮ್ಮ ನಿಧನ

Image
  ಗೌರಮ್ಮ ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಉಂಳ್ಳೆಬೈಲು ಸಮೀಪದ ಆಲ್ದಾರ ಗ್ರಾಮದ ಹಿರಿಯ ನಿವಾಸಿ ಗೌರಮ್ಮ(85) ಶನಿವಾರ ರಾತ್ರಿ ನಿಧನ ಹೊಂದಿದರು.      ಇವರಿಗೆ ಪತ್ರಕರ್ತ ಶಿವಶಂಕರ್ ಸೇರಿದಂತೆ  ಮೂವರು ಪುತ್ರರು, ಐವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಇದ್ದಾರೆ, ಇವರು ಗ್ರಾಮದ ಹಿರಿಯ ನಿವಾಸಿ ದಿವಂಗತ ಕೃಷ್ಣಮೂರ್ತಿಯವರ ಧರ್ಮಪತ್ನಿಯಾಗಿದ್ದಾರೆ. ಗ್ರಾಮದ ಇವರ ಜಮೀನಿನಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ. ಇವರ ನಿಧನಕ್ಕೆ ಜನಪ್ರತಿನಿಧಿಗಳು ಗಣ್ಯರು ಸಂತಾಪ ಸೂಚಿಸಿದ್ದಾರೆ.     

ಮೇ.೩ರಂದು ಛಲವಾದಿ ಸಮಾಜದ ವಾರ್ಷಿಕೋತ್ಸವ, ಅಂಬೇಡ್ಕರ್ ಜಯಂತಿ 

Image
ಛಲವಾದಿ ಸಮಾಜದವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಭದ್ರಾವತಿ ನಗರದ ನ್ಯೂಟೌನ್ ವಿಐಎಸ್‌ಎಲ್ ನಗರಾಡಳಿತ ಕಛೇರಿ ಸಮೀಪದ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರ ಭಾನುವಾರ ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಯೋಜಿಸಲಾಗಿದೆ. ಈ ಸಂಬಂಧ ಶನಿವಾರ ಸಮಾಜದ ಸದಸ್ಯರು ಹಾಗು ಅವರ ಕುಟುಂಬ ವರ್ಗದವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಿದವು.       ಭದ್ರಾವತಿ : ನಗರದ ನ್ಯೂಟೌನ್ ವಿಐಎಸ್‌ಎಲ್ ನಗರಾಡಳಿತ ಕಛೇರಿ ಸಮೀಪದ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರ ಭಾನುವಾರ ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಯೋಜಿಸಲಾಗಿದೆ. ಈ ಸಂಬಂಧ ಶನಿವಾರ ಸಮಾಜದ ಸದಸ್ಯರು ಹಾಗು ಅವರ ಕುಟುಂಬ ವರ್ಗದವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಿದವು.      ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ನಿಂಬೆಹಣ್ಣು ಮತ್ತು ಚಮಚ ಅಥವಾ ಥ್ರೋ ದ ಬಾಲ್, ಕಪ್ಪೆ ಓಟ ಹಾಗು ೩೦ ಮೀ. ಓಟದ ಸ್ಪರ್ಧೆ ಮತ್ತು ಮೊದಲ ಮತ್ತು ೨ನೇ ಹಂತದಲ್ಲಿ ೪೦ ಮೀ. ಓಟ, ಬುಕ್ ಬ್ಯಾಲೆನ್ಸ್ ಮತ್ತು ಕಪ್ಪೆ ಓಟ, ೩, ೪ ಮತ್ತು ೫ನೇ ಹಂತದಲ್ಲಿ ಒಂಟಿ ಕಾಲಿನ ಜಿಗಿತ, ೫೦ ಮೀ. ಓಟ, ಬಾಲ್ ಇನ್ ದಿ ಬ್ಯಾಸ್ಕೆಟ್ ಹಾಗು ೬ ರಿಂದ ೧೦ನೇ ಹಂತದಲ್ಲಿ ಲಗೋರಿ...

ಖಾಸಗಿ ಸರ್ವೆಯರ್‌ಗಳ ಬೇಡಿಕೆ ಈಡೇರಿಸಿ, ಇಲ್ಲಾ ಕೆಲಸದಿಂದ ವಜಾ ಮಾಡಿ 

Image
ಮೇ.೧೨ರಂದು ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ  ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.       ಭದ್ರಾವತಿ: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು.      ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಿಂಗಳು ಗಟ್ಟಲೆ ಕೆಲಸಕ್ಕೆ ಹಾಜರಾಗದೆ ರೈತರ ಜಮೀನುಗಳನ್ನು ಸರ್ವೆ ಮಾಡದೆ ನಿರ್ಲಕ್ಷ್ಯವಹಿಸಿರುವ ಕಾರಣ ಸರ್ವೆ ಮಾಡಿಕೊಡಲು ಸಲ್ಲಿಸಿರುವ ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಇದರಿಂದಾಗಿ ರೈತರು ಸಾಕಷ್ಟು ತೊಂದರೆ ಎದುರಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.      ಸರ್ಕಾರ ತಕ್ಷಣ ಖಾಸಗಿ ಸರ್ವೆಯರ್‌ಗಳ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವೇ ತಿಂಗಳು ಗಟ್ಟಲೆ ಕೆಲಸಕ್ಕೆ ಹಾಜರಾಗದೆ ಸರ್ವೆ ಮಾಡದೆ ಇರುವ ಸರ್ವೆಯರ್‌ಗಳನ್ನು  ಕೆಲಸದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.      ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡರವರು ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬದಲಾವ...

ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ, ಕಾರ್ಮಿಕರ ದಿನ ರಾಷ್ಟ್ರೀಯ ಹಬ್ಬವನ್ನಾಗಿಸಿ : ವಿ. ವಿನೋದ್ 

Image
ಭದ್ರಾವತಿಯಲ್ಲಿ ಶುಕ್ರವಾರ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್  ಮಾಲಾರ್ಪಣೆ ಮಾಡಿ ಮಾತನಾಡಿದರು.       ಭದ್ರಾವತಿ: ಪ್ರತಿಯೊಬ್ಬ ಕಾರ್ಮಿಕರಿಗೂ ಗೌರವ ಲಭಿಸಬೇಕು. ಆಳುವ ಸರ್ಕಾರಗಳು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಅಲ್ಲದೆ ಅಂತರಾಷ್ಟ್ರೀಯ ಕಾರ್ಮಿಕರ ದಿನ ಸರ್ಕಾರಿ ಕಾರ್ಯಕ್ರಮವನ್ನಾಗಿಸಬೇಕೆಂದು ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.      ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.      ಸಮಾಜದಲ್ಲಿ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದ್ದು, ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರು, ಇತರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಸಂಘಟಿತ ಹಾಗು ಅಸಂಘಟಿತ ಕಾರ್ಮಿಕರು, ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಮಹಿಳಾ ಕಾರ್ಮಿಕರು, ಕಟ್ಟಡ ಹಾಗು ಇತರೆ ನಿರ್ಮಾಣ ಕಾರ...

ಬಿ.ಎಸ್.ವೈ `ಅಭಿಮಾನೋತ್ಸವ' ಲಾಂಛನ ಬಿಡುಗಡೆ : ಸಂಭ್ರಮಾಚರಣೆ 

Image
ಮಾಜಿ ಮುಖ್ಯಮಂತ್ರಿ, ರೈತ ನಾಯಕ, ಹೋರಾಟಗಾರ ಬಿ.ಎಸ್ ಯಡಿಯೂರಪ್ಪನವರ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಲಾಂಛನ(ಲೋಗೋ) ಶುಕ್ರವಾರ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಭದ್ರಾವತಿ ರಂಗಪ್ಪ ವೃತ್ತದಲ್ಲಿ ವಾಹನಗಳಿಗೆ ಅಂಟಿಸುವ ಮೂಲಕ ಬಿಡುಗಡೆಗೊಳಿಸಿದರು.       ಭದ್ರಾವತಿ : ಮಾಜಿ ಮುಖ್ಯಮಂತ್ರಿ, ರೈತ ನಾಯಕ, ಹೋರಾಟಗಾರ ಬಿ.ಎಸ್ ಯಡಿಯೂರಪ್ಪನವರ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಲಾಂಛನ(ಲೋಗೋ) ಶುಕ್ರವಾರ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ವಾಹನಗಳಿಗೆ ಅಂಟಿಸುವ ಮೂಲಕ ಬಿಡುಗಡೆಗೊಳಿಸಿದರು.      ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿ ನಂತರ ರಂಗಪ್ಪ ವೃತ್ತದಲ್ಲಿ `ಅಭಿಮಾನೋತ್ಸವ' ಕಾರ್ಯಕ್ರಮದ ಲಾಂಛನ ವಾಹನಗಳಿಗೆ ಅಂಟಿಸಿ ಕಾರ್ಯಕರ್ತರಿಗೆ, ಯಡಿಯೂರಪ್ಪ ಅವರ ಅಭಿಮಾನಿಗಳಿಗೆ ಹಾಗೂ  ಸಾರ್ವಜನಿಕರಿಗೆ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆತ್ಮೀಯ ಆಮಂತ್ರಣ ನೀಡಿ ಸಂಭ್ರಮಿಸಲಾಯಿತು.      ಪಕ್ಷದ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಪ್ರಮುಖರಾದ ಮಂಗೋಟೆ ರುದ್ರೇಶ್,...

ಭಗವಾನ್ ಗೌತಮ ಬುದ್ಧ ಜಯಂತಿ ಆಚರಿಸದೆ ಬೇಜವಾಬ್ದಾರಿತನ : ಖಂಡನೆ 

Image
ತಾಲೂಕು ಆಡಳಿತದ ವಿರುದ್ದ ಡಿಎಸ್‌ಎಸ್ ಮುಖಂಡ ಶಿವಬಸಪ್ಪ ಆಕ್ರೋಶ  ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಭಗವಾನ್ ಗೌತಮ ಬುದ್ಧ ಜಯಂತಿ ಆಚರಿಸದೆ ಬೇಜವಾಬ್ದಾರಿತನದಿಂದ ವರ್ತಿಸುವ ಮೂಲಕ ಸರ್ಕಾರದ ಸುತ್ತೋಲೆ ಕಡೆಗಣಿಸಿದೆ ಎಂದು ನಿವೃತ್ತ ಪ್ರಾಚಾರ್ಯ, ಡಿಎಸ್‌ಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವಬಸಪ್ಪ ಆರೋಪಿಸುವ ಮೂಲಕ ತಾಲೂಕು ಆಡಳಿತದಿಂದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.      ವಿಶ್ವಕ್ಕೆ ಸತ್ಯ, ಅಹಿಂಸೆ ಹಾಗೂ ಶಾಂತಿಯನ್ನು ಬೋಧಿಸಿದ ಗೌತಮ ಬುದ್ಧನ ಜನ್ಮದಿನ ಮೇ.೧ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ರಾಜ್ಯ ಸರ್ಕಾರ ಕೂಡ ಮೇ.೧ ಬುದ್ಧ ಪೂರ್ಣಿಮೆ ಪ್ರಯುಕ್ತ ರಾಜ್ಯದ ಎಲ್ಲಾ ಜಿಲ್ಲಾಡಳಿತ ಮತ್ತು ತಾಲೂಕ್ ಆಡಳಿತ ಮಟ್ಟದಲ್ಲಿ ಬುದ್ಧ ಜಯಂತಿ ಆಚರಿಸಲು ಸುತ್ತೋಲೆ ಹೊರಡಿಸಿದೆ. ಶಿವಮೊಗ್ಗ ಜಿಲ್ಲಾಡಳಿತ ಮತ್ತು ಜಿಲ್ಲೆಯ ಇತರ ತಾಲೂಕು ಆಡಳಿತದ ಆಶ್ರಯದಲ್ಲಿ ಮೇ ೧ರಂದು ಬುದ್ಧ ಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಆದರೆ ಇಲ್ಲಿನ ತಾಲೂಕು ಆಡಳಿತ ಮಾತ್ರ ತನಗೆ ಬುದ್ಧ ಪೂರ್ಣಿಮೆ ಪ್ರಯುಕ್ತ ಬುದ್ಧ ಜಯಂತಿ ಆಚರಣೆ ಬಗ್ಗೆ ಸರ್ಕಾರದಿಂದ ಮಾಹಿತಿಯೇ ಇಲ್ಲವೇನೋ ಎಂಬಂತೆ ಬೇಜವಾಬ್ದಾರಿತನದಿಂದ ವರ್ತಿಸಿರುವುದು ಖಂಡನೀಯ.      ತಾಲೂಕು ಆಡಳಿತದ ಈ ನಡೆ ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತೆಯ ಪಾಠ ಹೇಳಿಕೊಟ್ಟ ವಿಶ್ವಗುರು ಗೌತಮ ಬುದ್ಧನಿಗೆ ಎಸಗಿದ ಅಪಚಾರವಾಗಿದೆ....

ವಿಜೃಂಭಣೆಯಿಂದ ಜರುಗಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ 

Image
ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ ಮೇ.೧ರ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.       ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ ಮೇ.೧ರ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.      ಪ್ರತಿ ವರ್ಷದಂತೆ ಈ ಬಾರಿ ಸಹ ಮಧ್ಯಾಹ್ನ ಸುಮಾರು ೧೨.೩೦ರ ಸಮಯದಲ್ಲಿ ದೇವಸ್ಥಾನದಿಂದ ಆರಂಭಗೊಂಡ ರಥೋತ್ಸವ ರಥ ಬೀದಿ ರಸ್ತೆಯಲ್ಲಿ ಸಾಗಿ ಪುನಃ ದೇವಸ್ಥಾನ ಬಂದು ತಲುಪಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಸಹಸ್ರರಾರು ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿ ರಥ ಎಳೆದು ಭಕ್ತಿ ಸಮರ್ಪಿಸಿದರು. ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಭಜನೆ ನಡೆಯಿತು.      ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಂಗನಾಥಶರ್ಮ ಹಾಗು ಸಹಾಯಕ ಅರ್ಚಕರಾದ ಶ್ರೀ ಶ್ರೀನಿವಾಸನ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಜಿ. ರಮಾಕಾಂತ ಹಾಗು ಮುಜರಾಯಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.      ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.

ಜಾನಪದ ಕಲಾವಿದ ಜಿ. ದಿವಾಕರ್‌ಗೆ `ಕರ್ನಾಟಕ ಕಲಾವಿಭೂಷಣ' ರಾಜ್ಯ ಪ್ರಶಸ್ತಿ

Image
ಜಿ. ದಿವಾಕರ್       ಭದ್ರಾವತಿ: ಬೆಂಗಳೂರಿನ ಮತ್ತಿಕೆರೆ ಕರ್ನಾಟಕ ನೇತಾಜಿ ಚಾರಿಟೆಬಲ್ ಟ್ರಸ್ಟ್ ನಗರದ ಜಾನಪದ ಹಾಗು ರಂಗಭೂಮಿ ಕಲಾವಿದ ಜಿ. ದಿವಾಕರ ಅವರಿಗೆ `ಕರ್ನಾಟಕ ಕಲಾವಿಭೂಷಣ' ರಾಜ್ಯ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.       ದಿವಾಕರ ಅವರು ಜಾನಪದ ಹಾಗು ರಂಗಭೂಮಿ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಮೇ.೭ರಂದು ಸಂಜೆ ೪ ಗಂಟೆಗೆ ಬೆಂಗಳೂರು, ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ನಾಡಿನ ವಿವಿಧ ಮಠ-ಮಂದಿರಗಳ ಸ್ವಾಮೀಜಿಗಳು, ಸಾಹಿತಿಗಳು ಹಾಗು ವಿವಿಧ ಕ್ಷೇತ್ರದ ಗಣ್ಯರು, ಟ್ರಸ್ಟ್ ಗೌರವಾಧ್ಯಕ್ಷ ಎಂ. ಪುಟ್ಟೇಗೌಡ, ಸಂಸ್ಥಾಪಕ ಅಧ್ಯಕ್ಷ ರವಿಕುಮಾರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿರುವರು.       ದಿವಾಕರ ಅವರಿಗೆ ಈಗಾಗಲೇ ರಾಜ್ಯ ಮತ್ತು ಜಿಲ್ಲಾ ಮಟ್ಟದ ಹಾಗು ತಾಲೂಕು ಮಟ್ಟದ ಹಲವು ಪ್ರಶಸ್ತಿಗಳು ಸಂದಿವೆ. ಜಾನಪದ ಹಾಗು ರಂಗಭೂಮಿ ಕಲಾವಿದರು, ಗಣ್ಯರು, ವಿವಿಧ ಸಂಘ-ಸಂಸ್ಥೆಗಳು, ಇವರನ್ನು ಅಭಿನಂದಿಸಿವೆ. 

ಶ್ರೀ ಮಹಾವಿಷ್ಣು ಮೃತ್ಯುಂಜಯ, ಅಭಯಹಸ್ತ ಶ್ರೀ ವೀರಾಂಜನೇಯಸ್ವಾಮಿ ಮೂರ್ತಿಗಳ ಪ್ರತಿಷ್ಠಾಪನೆ

Image
ತಾಲೂಕು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ ಲೋಕಾರ್ಪಣೆ  ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ ವಾರ್ಡ್ ನಂ. ೧೦ರ ವಿಜಯನಗರದಲ್ಲಿ ನೂತನವಾಗಿ ತಾಲೂಕು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ ನಿರ್ಮಾಣಗೊಂಡಿದ್ದು, ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಗುರುವಾರ  ಲೋಕಾರ್ಪಣೆಗೊಳಿಸಲಾಯಿತು.      ಭದ್ರಾವತಿ: ನಗರಸಭೆ ವ್ಯಾಪ್ತಿಯ ಹೊಸಮನೆ ವಾರ್ಡ್ ನಂ. ೧೦ರ ವಿಜಯನಗರದಲ್ಲಿ ನೂತನವಾಗಿ ತಾಲೂಕು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ ನಿರ್ಮಾಣಗೊಂಡಿದ್ದು, ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಲೋಕಾರ್ಪಣೆಗೊಳಿಸಲಾಯಿತು.      ಆಲಯ ಪ್ರವೇಶ ಹಾಗು ಪ್ರತಿಷ್ಠಾಪನಾ ಮಹೋತ್ಸವ ಅಂಗವಾಗಿ. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಆಯ ಪ್ರವೇಶನ, ಗೋಪೂಜೆ, ಗಂಗಾಪೂಜೆ, ಸುಮಂಗಳಿಯರಿಂದ ದೇವರಿಗೆ ಅಭಿಷೇಕ, ಮಹಾಪ್ರತಿಷ್ಠೆ ಮುಂತಾದ ಅಷ್ಟವದಾನ ಸೇವೆ, ಬಿಂಬದರ್ಶನ ಹಾಗು ಪ್ರತಿಷ್ಠಾಪನಾ ಹವನಗಳು ಹಾಗು ಶ್ರೀ ನರಸಿಂಹಸ್ವಾಮಿ ತಾರಕ ಹೋಮ, ಮಹಾ ಪೂರ್ಣಾಹುತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು.      ಶ್ರೀ ಮಹಾವಿಷ್ಣು ಮೃತ್ಯುಂಜಯ ಮತ್ತು ಅಭಯ ಹಸ್ತ ಶ್ರೀ ವೀರಾಂಜನೇಯಸ್ವಾಮಿ ಮೂರ್ತಿಗಳನ್ನು ಹಾಗೂ ದೇವಸ್ಥಾನ ಮೇಲ್ಭಾಗದಲ್ಲಿ ೩ ಕಳಸಗಳನ್ನು ಪ್ರತಿಷ್ಠಾಪಿಸಲಾಯಿತು.  ಕಾಗದನಗರ ನಾಗರಕಟ್ಟ...

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Image
  ಮೇ.8ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ, ಮೇ.13ರಂದು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಕಡದಕಟ್ಟೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ ಯೋಜನೆ ಅಡಿಯಲ್ಲಿ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.      ಮೇ.8ರ ವರೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ದಾಖಲಾತಿ ಪರಿಶೀಲನೆಗೆ ಕೊನೆಯ ದಿನ ಮೇ.9 ಆಗಿರುತ್ತದೆ. ಪ್ರವೇಶ ಬಯಸುವಂತಹ ಅಭ್ಯರ್ಥಿಗಳು Web:www.cite.karnataka.gov.in ವೆಬ್ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಭದ್ರಾವತಿ. ಪ್ರಾಚಾರ್ಯರನ್ನು ಸಂಪರ್ಕಿಸುವುದು. 08282-200080 ಅಥವಾ 9980129595 ಅಥವಾ 9880085914 ಸಂಖ್ಯೆಗೆ ಕರೆ ಮಾಡಬಹುದಾಗಿದೆ.      ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾತ್ರ ತಮ್ಮ ದಾಖಲಾತಿ(ಮೂಲ) ಪರಿಶೀಲನೆಗೆ ಹಾಜರಾಗುವುದು. ಆ ಸಮಯದಲ್ಲಿ ಅಭ್ಯರ್ಥಿಗಳೊಂದಿಗೆ ಸಮಾಲೋಚಿಸಿ ಅರ್ಜಿಗಳ ತಿದ್ದುಪಡಿ ಮತ್ತು ಇಚ್ಛಾನುಸಾರ ತರಬೇತಿ ಸಂಸ್ಥೆಗಳನ್ನು ಹಾಗು ವೃತ್ತಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು. ಮೇ.11ರಂದು...

ಏ.30ರಂದು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ ಉದ್ಘಾಟನೆ

Image
ಶ್ರೀ ಮಹಾವಿಷ್ಣು ಮೃತ್ಯುಂಜಯ, ಅಭಯಹಸ್ತ ಶ್ರೀ ವೀರಾಂಜನೇಯಸ್ವಾಮಿ ಮೂರ್ತಿಗಳ ಪ್ರತಿಷ್ಠಾಪನೆ ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ ವಾರ್ಡ್ ನಂ. 10ರ ವಿಜಯನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ.       ಭದ್ರಾವತಿ: ನಗರಸಭೆ ವ್ಯಾಪ್ತಿಯ ಹೊಸಮನೆ ವಾರ್ಡ್ ನಂ. 10ರ ವಿಜಯನಗರದಲ್ಲಿ ನೂತನವಾಗಿ ತಾಲೂಕು ವೈಷ್ಣವ ಸಂಸ್ಥಾಪಕರ ಹೈಟೆಕ್ ದೇವಸ್ಥಾನ ನಿರ್ಮಾಣಗೊಂಡಿದ್ದು, ಏ.30ರ ಗುರುವಾರ ದೇವಸ್ಥಾನ ಲೋಕಾರ್ಪಣೆಗೊಳ್ಳಲಿದೆ.       ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ದೇವಸ್ಥಾನದ ಪ್ರಧಾನ ಅರ್ಚಕ ಎನ್. ಗೋವಿಂದರಾಜುರವರ ಕುಟುಂಬಸ್ಥರು ಈ ದೇವಸ್ಥಾನ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ವಿಐಎಸ್ಎಲ್ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಗೋವಿಂದರಾಜುರವರು ತಮಗೆ ಸೇರಿರುವ ಸ್ವಂತ ಜಾಗದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಸ್ವಲ್ಪ ಜಾಗವನ್ನು ದಾನವಾಗಿ ನೀಡಿದ್ದಾರೆ. ಅಲ್ಲದೆ ತಮ್ಮ ನಿವೃತ್ತಿ ಹಣದಲ್ಲಿ ಬಹುತೇಕ ಪಾಲು ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಸಮರ್ಪಿಸಿದ್ದಾರೆ. ಈ ನಡುವೆಯೂ ಆರ್ಥಿಕ ಸಂಕಷ್ಟ ಎದುರಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳು, ದಾನಿಗಳು ಹಾಗು ಭಕ್ತರಿಂದ ಹಣ ಸಂಗ್ರಹಿಸಿ ಇದೀಗ ಪೂರ್ಣಗೊಳಿಸಿದ್ದಾರೆ. ಗೋವಿಂದರಾಜುರವರ ತಂದೆ ದಿವಂಗತ ನರಸಿಂಹಯ್ಯರವರು ದೇವಸ್ಥಾನ ನಿರ್ಮಾಣಕ್ಕೆ ಮು...

ಮಾದಿಗ ಸಮುದಾಯಕ್ಕೆ ೫.೨೫ರಷ್ಟು ಒಳ ಮೀಸಲಾತಿ ಸ್ವಾಗತಾರ್ಹ : ಡಾ. ಎಸ್. ಕೃಷ್ಣ

Image
ಭದ್ರಾವತಿಯಲ್ಲಿ ಬುಧವಾರ ತಾಲೂಕು ಮಾದಿಗ ಸಮಾಜದಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಅಧ್ಯಕ್ಷ ಡಾ. ಎಸ್. ಕೃಷ್ಣ ಮಾತನಾಡಿದರು.       ಭದ್ರಾವತಿ : ರಾಜ್ಯ ಸರ್ಕಾರ ವಿಶೇಷ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಸಂಬಂಧಿಸಿದ ಜಾತಿಗಳಿಗೆ ೫.೨೫ರಷ್ಟು ಒಳ ಮೀಸಲಾತಿ ನೀಡಲು ತೀರ್ಮಾನಿಸಿರುವುದು ಸ್ವಾಗತಾರ್ಹವಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಮಾದಿಗ ಸಮಾಜ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಮಾಜದ ಅಧ್ಯಕ್ಷ ಡಾ. ಎಸ್. ಕೃಷ್ಣ ಹೇಳಿದರು.       ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಳ ಮೀಸಲಾತಿಗಾಗಿ ಕಳೆದ ಸುಮಾರು ೩೫ ವರ್ಷಗಳಿಂದ ನಿರಂತರವಾಗಿ ನಡೆಸಿದ ಹೋರಾಟದ ಫಲವಾಗಿ ಮಾದಿಗ ಸಮುದಾಯಕ್ಕೆ ಸಂಬಂಧಿಸಿದ ಜಾತಿಗಳಿಗೆ ೫.೨೫ರಷ್ಟು ಒಳ ಮೀಸಲಾತಿ ನಿಗದಿಪಡಿಸಲಾಗಿದೆ. ಇದರಿಂದಾಗಿ ತಲತಲಾಂತರಗಳಿಂದ ಶೋಷಣೆಗೆ ಒಳಗಾಗಿರುವ ಸಮುದಾಯದ ಜಾತಿಗಳಿಗೆ ನ್ಯಾಯ ನೀಡಿದಂತಾಗುತ್ತದೆ ಎಂದರು.       ಇಂದಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಈ ಜಾತಿಗಳು ಹಿಂದುಳಿದಿವೆ. ಮುಂದುವರೆದ ಸಮುದಾಯಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಒಳ ಮೀಸಲಾತಿಯಿಂದ ಸ್ವಲ್ಪ ನೆಮ್ಮದಿ ಕಾಣುವಂತಾಗಿದೆ. ಸರ್ಕಾರ ಶೋಷಿತ ಎಲ್ಲಾ ಸಮುದಾಯಗಳಿಗೂ ನ್ಯಾಯಬದ್ದವಾಗಿ ಒಳಮೀಸಲಾತಿ ಪೂರ್ಣಪ್ರಮಾಣದಲ್ಲಿ ಹಂಚಿಕೆಮಾಡಿ ಅನುಷ್ಠಾನಗೊಳಿಸು...

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಸಾವು : ಅಂತ್ಯಕ್ರಿಯೆ

Image
ಪತ್ನಿಗೆ ಕಾರ್ಖಾನೆಯಲ್ಲಿ ಕೆಲಸ, ಗುತ್ತಿಗೆದಾರನಿಂದ ೮ ಲಕ್ಷ ರು. ಪರಿಹಾರ  ಎಸ್. ವಿನೋದ್ ಕುಮಾರ್       ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಸೋಮವಾರ ಕರ್ತವ್ಯ ನಿರ್ವಹಿಸುವಾಗ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಗುತ್ತಿಗೆ ಕಾರ್ಮಿಕರ ಸಂಘದ ಮಾಜಿ ಉಪಾಧ್ಯಕ್ಷ ಎಸ್. ವಿನೋದ್ ಕುಮಾರ್(೩೬) ಅಂತ್ಯಕ್ರಿಯೆ ಮಂಗಳವಾರ ಸಂಜೆ ಬೈಪಾಸ್ ರಸ್ತೆ ಮಿಲ್ಟ್ರಕ್ಯಾಂಪ್, ಹಳೇ ಬುಳ್ಳಾಪುರ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.       ಕಾರ್ಖಾನೆಯ ಟ್ರಾಫಿಕ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿನೋದ್ ಕುಮಾರ್, ಸೋಮವಾರ ಸಂಜೆ ೬.೩೦ರ ಸಮಯದಲ್ಲಿ ಬಿಲ್ಲೆಟ್ ಕಬ್ಬಿಣದ ಸಾಮಗ್ರಿಗಳನ್ನು ಇಳಿಸುವಾಗ ಕಬ್ಬಿಣದ ಸರಪಳಿ ಕತ್ತರಿಸಿಹೋದ ಹಿನ್ನಲೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ರಾತ್ರಿ ಸುಮಾರು ೭.೩೦ರ ಸಮಯದಲ್ಲಿ ಮೃತಪಟ್ಟಿದ್ದರು.      ಮಾಹಿತಿ ತಿಳಿದ ತಕ್ಷಣ ಸಂಸದ ಬಿ.ವೈ ರಾಘವೇಂದ್ರರವರು ಆಸ್ಪತ್ರೆಗೆ ಆಗಮಿಸಿ ಕಾರ್ಮಿಕರಿಗೆ ಧೈರ್ಯ ತುಂಬಿದ್ದರು. ವಿನೋದ್ ಕುಮಾರ್ ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು.       ವಿನೋದ್ ಕುಮಾರ್ ಪತ್ನಿಗೆ ಕಾರ್ಖಾನೆಯಲ್ಲಿ ಕೆಲಸ :...

ಕರ್ತವ್ಯ ನಿರ್ವಹಿಸುವಾಗ ದುರ್ಘಟನೆ ನಡೆದು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಸಾವು

Image
ವಿನೋದ್       ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಂಭವಿಸಿದ ದುರ್ಘಟನೆಯಲ್ಲಿ ಸೋಮವಾರ ರಾತ್ರಿ ಸುಮಾರು ೭.೩೦ರ ಸಮಯದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಮಾಜಿ ಉಪಾಧ್ಯಕ್ಷ ವಿನೋದ್‌ರವರು ಮೃತಪಟ್ಟಿರುವ ಘಟನೆ ನಡೆದಿದೆ.            ಕಾರ್ಖಾನೆಯ ಟ್ರಾಫಿಕ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿನೋದ್‌ರವರು ಸಂಜೆ ೬.೩೦ರ ಸಮಯದಲ್ಲಿ ಬಿಲ್ಲೆಟ್ ಇಳಿಸುವಾಗ ದುರ್ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾರೆ.       ೩೫ ವರ್ಷದ ವಿನೋದ್‌ರವರು ಜನ್ನಾಪುರ ರಾಜಪ್ಪ ಬಡಾವಣೆಯಲ್ಲಿ ವಾಸವಾಗಿದ್ದು, ಪತ್ನಿ ಹಾಗು ಒಂದು ಹೆಣ್ಣು ಮಗು ಇದೆ. ಈ ದುರ್ಘಟನೆಯಿಂದ ಗುತ್ತಿಗೆ ಕಾರ್ಮಿಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.  

ರಾಷ್ಟ್ರ, ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ : ರಾಣೆಬೆನ್ನೂರು ಕುಸ್ತಿಪಟು ಫೈಲ್ವಾನ್ ಕಾರ್ತಿಕ್ ಕಾಟೆಗೆ ಮೊದಲ ಬಹುಮಾನ

Image
ಭದ್ರಾವತಿ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ' ಅಂಗವಾಗಿ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ರಾಣೆಬೆನ್ನೂರು ಕುಸ್ತಿಪಟು ಫೈಲ್ವಾನ್ ಕಾರ್ತಿಕ್ ಕಾಟೆ ಮೊದಲ ಬಹುಮಾನದೊಂದಿಗೆ ಬೆಳ್ಳಿಗದೆ ತಮ್ಮದಾಗಿಸಿಕೊಂಡಿದ್ದಾರೆ.         ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ' ಅಂಗವಾಗಿ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ರಾಣೆಬೆನ್ನೂರು ಕುಸ್ತಿಪಟು ಫೈಲ್ವಾನ್ ಕಾರ್ತಿಕ್ ಕಾಟೆ ಮೊದಲ ಬಹುಮಾನದೊಂದಿಗೆ ಬೆಳ್ಳಿಗದೆ ತಮ್ಮದಾಗಿಸಿಕೊಂಡಿದ್ದಾರೆ.       ಕೊನೆಯ ಅಂತಿಮ ಪಂದ್ಯದಲ್ಲಿ ಕಾರ್ತಿಕ್ ಕಾಟೆ ಮಹಾರಾಷ್ಟ್ರದ ಕುಸ್ತಿಪಟು ಫೈಲ್ವಾನ್ ಸುದೇಶ್ ಠಾಕೂರ್ ಅವರನ್ನು ಪರಾಭವಗೊಳಿಸಿ ಮೊದಲ ಬಹುಮಾನ ೧ ಲಕ್ಷ ರು. ನಗದು ಹಾಗು ಬೆಳ್ಳಿಗದೆ ಪಡೆದರು. ನಗರಸಭೆ ಆಡಳಿತ ಈ ಬೆಳ್ಳಿಗದೆ ದಾನಿಯಾಗಿದ್ದು, ಉಳಿದಂತೆ ದಾವಣಗೆರೆ ಕುಸ್ತಿಪಟು ಫೈಲ್ವಾನ್ ಬಸವರಾಜ್ ಪಾಟೀಲ್ ಮಹಾರಾಷ್ಟ್ರದ ಕುಸ್ತಿಪಟು ಫೈಲ್ವಾನ್ ಶೈಲೇಶ್ ಅವರನ್ನು ಪರಾಭವಗೊಳಿಸಿ ಎರಡನೇ ಬಹುಮಾನ ೫೦ ಸಾವಿರ ರು. ನಗದು ತಮ್ಮದಾಗಿಸಿಕೊಂಡರು.       ಮಹಾರಾಷ್ಟ್ರದ ಕುಸ್ತಿಪಟು...

ಮೇ.೩ರಂದು ಛಲವಾದಿಗಳ ಸಮಾಜದ ವಾರ್ಷಿಕೋತ್ಸವ, ಅಂಬೇಡ್ಕರ್ ಜಯಂತಿ

Image
ಭದ್ರಾವತಿ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರಂದು ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಅಧ್ಯಕ್ಷ ಚನ್ನಪ್ಪ ಹಾಗು ಮುಖಂಡರು ಮಾಹಿತಿ ನೀಡಿದರು.       ಭದ್ರಾವತಿ : ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರಂದು ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದು ಸಮಾಜದ ಅಧ್ಯಕ್ಷ ಚನ್ನಪ್ಪ ತಿಳಿಸಿದರು.          ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ,  ಈ ಬಾರಿ ಹಲವು ಆಶಯಗಳೊಂದಿಗೆ ಅಂಬೇಡ್ಕರ್‌ರವರ ಜಯಂತಿ ಜೊತೆಗೆ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದರು.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಸಂಜೆ ೫ ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೈಸೂರು ಉರಿಲಿಂಗ ಪದ್ದಿಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿಯವರು ಪ್ರವಚನ ನೀಡಲಿದ್ದಾರೆ. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ತಾಲೂಕು ಅಧ್ಯಕ್ಷ ಬಿ....

`ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಪೋಸ್ಟರ್ ಶಾಸಕ ಸಂಗಮೇಶ್ವರ್ ಬಿಡುಗಡೆ 

Image
ಚಿತ್ರದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ  ಭದ್ರಾವತಿ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ `ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಪೋಸ್ಟರ್ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಬಿಡುಗಡೆಗೊಳಿಸಿದರು.       ಭದ್ರಾವತಿ : ಪಡಿತರ ವಿತರಕರ ಸಮಸ್ಯೆಗಳು ಸಾಕಷ್ಟಿವೆ. ಅವರಿಗೂ ಸಾಮಾಜಿಕ ಜವಾಬ್ದಾರಿಗಳಿವೆ. ಅವರ ಬದುಕಿನ ನೈಜತೆ ಕುರಿತು ಚಿತ್ರಿಕರೀಸಲಾಗಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಯಶಸ್ವಿ ಪ್ರದರ್ಶನ ಕಾಣುವಂತಾಗಲಿ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಶಿಸಿದರು.      ಅವರು ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ಚಲನಚಿತ್ರ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.      ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಮಾತನಾಡಿ, ಪಡಿತರ ವಿತರಕರ ಬೇಡಿಕೆಗಳ ಈಡೇರಿಕೆಗಾಗಿ ಸಂಘ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಹಲವಾರುಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗುತ್ತಿದೆ. ಈ ನಡುವೆ ವಿತರಕರು ತಮ್ಮ ಜವಾಬ್ದಾರಿಗಳನ್ನು ...

ದ್ವಿಚಕ್ರ ವಾಹನ ಕಳವು : ೩ ತಿಂಗಳ ನಂತರ ದೂರು

Image
     ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಮೆಡಿಕಲ್ ಅಂಗಡಿಯೊಂದರ ಬಳಿ ಮೀನು ವ್ಯಾಪಾರಿಯೊಬ್ಬರು ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳುವಾಗಿರುವ ಘಟನೆ ಸುಮಾರು ೩ ತಿಂಗಳ ನಡೆದಿದ್ದು, ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ನಡೆದಿದಿದೆ.       ಕೆ. ಪಾರ್ಥಿಬನ್ ಎಂಬುವರು ಬಿ.ಎಚ್ ರಸ್ತೆ ಮೀನುಗಾರರ ಬೀದಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಸುಮಾರು ೫ ವರ್ಷಗಳ ಹಿಂದೆ ಖರೀದಿಸಲಾಗಿದ್ದ ಹಿರೋ ಸ್ಲೆಂಡರ್ ಫ್ಲಸ್ ದ್ವಿಚಕ್ರವಾಹನವನ್ನು ಪ್ರತಿ ದಿನ ಮನೆಯ ಸಮೀಪದ ಮೆಡ್ ಪ್ಲಸ್ ಮೆಡಿಕಲ್ ಅಂಗಡಿ ಬಳಿ ನಿಲ್ಲಿಸುತ್ತಿದ್ದರು. ಜ.೧೯ರ ಬೆಳಗಿನ ಜಾವ ೩ ಗಂಟೆ ಸಮಯದಲ್ಲಿ ಎಂದಿನಂತೆ ದ್ವಿಚಕ್ರ ವಾಹನ ನಿಲ್ಲಿಸಿದ್ದು, ಜ.೨೦ರಂದು ಮೀನು ವ್ಯಾಪಾರಕ್ಕೆ ತೆರಳಲು ಸ್ಥಳಕ್ಕೆ ಬಂದು ನೋಡಿದಾಗ ದ್ವಿಚಕ್ರ ವಾಹನ ಕಳುವಾಗಿರುವುದು ತಿಳಿದು ಬಂದಿದೆ.       ಸುಮಾರು ೪೦ ಸಾವಿರ ರು. ಮೌಲ್ಯದ ದ್ವಿಚಕ್ರ ವಾಹನ ಕಳ್ಳತನ ಮಾಡಲಾಗಿದ್ದು, ಪತ್ತೆ ಮಾಡಿಕೊಡುವಂತೆ ಏ.೨೪ರಂದು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಜೆಡಿಎಸ್ ನಗರ ಘಟಕಕ್ಕೆ ನೂತನ ಪದಾಧಿಕಾರಿಗಳು : ಪುನಃ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ

Image
ಆರ್. ಕರುಣಾಮೂರ್ತಿ       ಭದ್ರಾವತಿ : ಕರ್ನಾಟಕ ಪ್ರದೇಶ ಜನತಾದಳ(ಜಾತ್ಯಾತೀತ) ತಾಲೂಕು ನಗರ ಘಟಕಕ್ಕೆ ನೂತನ ಪದಾಧಿಕಾರಿಗಳು ನೇಮಕಗೊಂಡಿದ್ದು, ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ ಮುಂದುವರೆದಿದ್ದಾರೆ.       ಕಾರ್ಯಾಧ್ಯಕ್ಷರಾಗಿ ಎಸ್.ಕೆ ಉಮೇಶ್, ಉಪಾಧ್ಯಕ್ಷರಾಗಿ ಎಚ್.ಬಿ ರವಿಕುಮಾರ್, ರಾಜು, ದೇವದತ್ತ ಮತ್ತು ಎಸ್.ಪಿ ಮೋಹನ್ ರಾವ್, ಪ್ರಧಾನ ಕಾರ್ಯದರ್ಶಿಯಾಗಿ ಮಧುಸೂಧನ್, ಗಿಡ್ಡರಾಮಕೃಷ್ಣಪ್ಪ, ಪ್ರಕಾಶ್, ಮಂಜುನಾಥ್, ಆನಂದ, ಬಿ.ವಿ ಗಿರಿನಾಯ್ಡು ಮತ್ತು ಮಹಾದೇವಿ ಹಾಗು ಕಾರ್ಯದರ್ಶಿಗಳಾಗಿ ಎಸ್.ಎಂ ಶಶಿಧರಗೌಡ, ಪಿ. ನವೀನ್ ಕುಮಾರ್, ರಘು, ಶಿವಲಿಂಗೇಗೌಡ, ಸಾವಿತ್ರಮ್ಮ, ಚಂದ್ರನ್, ಅಜ್ಮಲ್, ನರಸಯ್ಯ, ಅಬ್ದುಲ್ ಇಲಾಹಿ ಮತ್ತು ಎಸ್.ಪಿ ಕಿರಣ್ ಕುಮಾರ್ ನೇಮಕಗೊಂಡಿದ್ದಾರೆಂದು ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.  

ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿಗೆ ೮ ಜನ ನಾಮನಿರ್ದೇಶನ

Image
     ಭದ್ರಾವತಿ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಕೋರಿಕೆ ಮೇರೆಗೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪರವರ ಶಿಫಾರಸ್ಸಿನಂತೆ ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿಗೆ ನೂತನವಾಗಿ ೮ ಜನರನ್ನು ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿ ಆದೇಶಿಸಲಾಗಿದೆ.        ಭೋವಿಕಾಲೋನಿ ನಿವಾಸಿ ವೈ. ಮಂಜುನಾಥ್, ಹಳೇಬುಳ್ಳಾಪುರ ನಿವಾಸಿ ಐಸಾಕ್ ಲಿಂಕನ್, ಕನಕನಗರದ ನಿವಾಸಿ ರೂಪ ನಾರಾಯಣ, ಜಟ್‌ಪಟ್ ನಗರ ಆಶ್ರಯ ಕಾಲೋನಿ ನಿವಾಸಿ ಮೊಹಮ್ಮದ್ ಸಲ್ಮಾನ್, ಭೂತನಗುಡಿ ನಿವಾಸಿಗಳಾದ ಜೆ.ಎಂ ರಾಜ, ವಾಹಿದ್ ಖಾನ್, ವೀರಾಪುರ ನಿವಾಸಿ ಡಾ. ಕಲೀಂವುದ್ದಿನ್ ಮತ್ತು ಹನುಮಂತ ನಗರ ನಿವಾಸಿ ಅನಿತಾ ಅವರನ್ನು ನಾಮನಿರ್ದೇಶನಗೊಳಿಸಲಾಗಿದೆ.       ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿಗೆ ನೂತನವಾಗಿ ನಾಮನಿರ್ದೇಶನಗೊಂಡಿರುವ ೮ ಜನ ಸದಸ್ಯರಿಗೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ. 

ಓ.ಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು

Image
     ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಹೋಗುವ ರಸ್ತೆಯಲ್ಲಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ನಡೆದಿದೆ.       ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಗುಳ್ಯಪ್ಪ ಮಧ್ಯಾಹ್ನ ೧.೩೦ರ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಗಾಂಜಾ ಸೇವನೆ ಪ್ರಕರಣ ದಾಖಲು

Image
      ಭದ್ರಾವತಿ: ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ವೃತ್ತದ ಬಳಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ನಡೆದಿದೆ.       ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಹಣಮಂತ ಆವಟಿ ಗಸ್ತು ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ ೧೨.೩೦ರ ಸಮಯದಲ್ಲಿ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಗಾಂಜಾ ಸೇವಿಸಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಗಾಂಜಾ ಸೇವನೆ ದೃಢಪಟ್ಟಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಅಕ್ರಮ ಮದ್ಯ ಮಾರಾಟ : ಒಂದೇ ದಿನ ಎರಡು ಕಡೆ ದಾಳಿ

Image
     ಭದ್ರಾವತಿ : ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಹಳ್ಳಿ ಗ್ರಾಮದಲ್ಲಿ ಒಂದೇ ದಿನ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಎರಡು ಕಡೆ ದಾಳಿ ನಡೆಸಿರುವ ಘಟನೆ ನಡೆದಿದೆ.       ಪ್ರೋಬೇಷನರಿ ಐಪಿಎಸ್ ಅಧಿಕಾರಿ ಮೇಘ ಅಗರ್ವಾಲ್‌ರವರು ಏ.೨೧ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ರಾತ್ರಿ ೭.೧೫ರ ಸಮಯದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದು ಒಟ್ಟು ೩೧ ಲೀಟರ್, ೫೦ ಮಿಲಿ ಲೀಟರ್ ಸುಮಾರು ೧೬,೦೫೫ ರು. ಮೌಲ್ಯದ ೪೧ ವಿವಿಧ ಬಗೆಯ ಮದ್ಯದ ಪೌಚ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.       ಗ್ರಾಮದ ಮತ್ತೊಂದು ಕಡೆ ರಾತ್ರಿ ೯ ಗಂಟೆ ಸಮಯದಲ್ಲಿ ದಾಳಿ ನಡೆಸಿ ೧೯ ಲೀಟರ್ ೧೦೦ ಮಿಲಿ ಲೀಟರ್ ಸುಮಾರು ೪,೫೦೦ ರು. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.   

ಮಸಾಜ್ ಕೇಂದ್ರದಲ್ಲಿ ವೇಶ್ಯಾವಾಟಿಕೆ : ಪೊಲೀಸರ ದಾಳಿ

Image
     ಭದ್ರಾವತಿ : ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಸಿದ್ದಾರೂಢ ನಗರದ ಮಸಾಜ್ ಕೇಂದ್ರ(ಸ್ಪಾ ಸೆಂಟರ್)ವೊಂದರ ಮೇಲೆ ದಾಳಿ ನಡೆಸಿ ಮಹಿಳೆಯರನ್ನು ರಕ್ಷಿಸಿರುವ ಘಟನೆ ನಡೆದಿದೆ.       `ವೆಲ್ನಸ್ ಸ್ಪಾ' ಎಂಬ ಹೆಸರಿನ ಸೆಂಟರ್‌ನಲ್ಲಿ ಬೇರೆಡೆಯಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂದಿದ್ದು, ಈ ಹಿನ್ನಲೆಯಲ್ಲಿ ಪೊಲೀಸ್ ನಗರ ವೃತ್ತ ನಿರೀಕ್ಷಕಿ ನಾಗಮ್ಮ ನೇತೃತ್ವದ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸೆಂಟರ್‌ನಲ್ಲಿದ್ದ ಮಹಿಳೆಯರನ್ನು ರಕ್ಷಿಸಲಾಗಿದೆ.       ಹಣದ ಅಮಿಷವೊಡ್ಡಿ ಮಹಿಳೆಯರನ್ನು ಬೇರೆಡೆಯಿಂದ ಕರೆ ತರಲಾಗುತ್ತಿತ್ತು ಎನ್ನಲಾಗಿದೆ. ಸೆಂಟರ್ ಮಾಲೀಕ ಹಾಗು ಕಟ್ಟಡದ ಮಾಲೀಕರ ವಿರುದ್ಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.       ಕಾರ್ಯಾಚರಣೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ರಮೇಶ್, ಸಿಬ್ಬಂದಿಗಳಾದ ವಿಶಾಲಾಕ್ಷಿ, ಚಿನ್ನಾನಾಯ್ಕ, ರೂಪೇಶ್ ಮತ್ತು ಉಮಾಪತಿ ದಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಅರಳಿಹಳ್ಳಿ ಸರ್ಕಾರಿ ಶಾಲೆಗೆ ಶೇ.೯೩ರಷ್ಟು ಫಲಿತಾಂಶ

Image
ಪಿ.ಎಲ್ ರಮ್ಯಾ      ಭದ್ರಾವತಿ:  ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೩ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಪರೀಕ್ಷೆಗೆ ಹಾಜರಾಗಿದ್ದ ಒಟ್ಟು ೧೮೧ ವಿದ್ಯಾರ್ಥಿಗಳಲ್ಲಿ ಪೈಕಿ ೧೬೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ಶಾಲೆಯ ಪಿ.ಎಲ್ ರಮ್ಯಾ-೬೦೮ ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನ ಮತ್ತು ಡಿ. ಕೀರ್ತನ ೬೦೫ ಅಂಕಗಳೊಂದಿಗೆ ದ್ವೀತೀಯ ಸ್ಥಾನ ಪಡೆದು ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.       ೧೧ ವಿದ್ಯಾರ್ಥಿಗಳು ಅತ್ಯುನ್ನತ, ೭೬ ವಿದ್ಯಾರ್ಥಿಗಳು ಪ್ರಥಮ ದರ್ಜೆ, ೪೦ ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ೪೧ ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಡಿ. ಕೀರ್ತನ       ಬಹುತೇಕ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆ ಇದಾಗಿದ್ದು, ಒಟ್ಟು ೨೨ ಶಿಕ್ಷಕರು ಈ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒಟ್ಟು ಶಾಲೆಯಲ್ಲಿ ಸುಮಾರು ೫೦೦ಕ್ಕೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸುವ...

ಪಿಟಿಇಎಸ್ ಶಾಲೆಗೆ ಶೇ.೧೦೦ ಫಲಿತಾಂಶ

Image
     ಭದ್ರಾವತಿ : ಕಾಗದನಗರದ ಪೇಪರ್ ಟೌನ್ ಆಂಗ್ಲ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಪರೀಕ್ಷೆಗೆ ಹಾಜರಾದ ೪೫ ವಿದ್ಯಾರ್ಥಿಗಳ ಪೈಕಿ ೧೦ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೧೪ ವಿದ್ಯಾರ್ಥಿ ಪ್ರಥಮ ಶ್ರೇಣಿ ಹಾಗು ೨೧ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್.ವಿ ಪ್ರತೀಕ್ ೬೦೪ ಅಂಕಗಳೊಂದಿಗೆ ಶಾಲೆಗೆ ಪ್ರಥಮ, ಆರ್. ರಾಚೇಲ್ ೫೮೫ ಅಂಕಗಳೊಂದಿಗೆ ದ್ವಿತೀಯಾ ಹಾಗು ವಿ. ತನುಶ್ರೀ ೫೮೪ ಅಂಕಗಳೊಂದಿಗೆ ತೃತೀಯಾ ಸ್ಥಾನ ಪಡೆದುಕೊಂಡಿದ್ದಾರೆ.       ಉತ್ತಮ ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು ಅಭಿನಂದಿಸಿದ್ದಾರೆ. 

ಕನಕ ವಿದ್ಯಾಸಂಸ್ಥೆಗೆ ಶೇ.೯೯ರಷ್ಟು ಫಲಿತಾಂಶ

Image
     ಭದ್ರಾವತಿ : ಹಳೇನಗರದ ಬಸವೇಶ್ವರ ವೃತ್ತದ ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೯ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಶಾಲೆಯ ೧೩ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೪೯ ವಿದ್ಯಾರ್ಥಿಗಳು ಉತ್ತಮ ಶ್ರೇಣಿ ಹಾಗು ೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹೆಚ್ಚಿನ ಅಂಕಗಳೊಂದಿಗೆ ಉತ್ತಮ ಫಲಿತಾಂಶಕ್ಕೆ ಕಾರಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗ ಮತ್ತು ಶಾಲೆಯ ಆಡಳಿತ ಮಂಡಳಿ ಹಾಗು ಪೋಷಕರು ಅಭಿನಂದಿಸಿದ್ದಾರೆ. 

ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ : ಅವಹೇಳನಕಾರಿ ಹೇಳಿಕೆಗೆ ಖಂಡನೆ

Image
ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಮಾನವ ಸರಪಳಿ, ರಸ್ತೆ ತಡೆ ನಡೆಸಿ ಆಕ್ರೋಶ  ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ಭದ್ರಾವತಿ ನಗರದ ಹಾಲಪ್ಪ ವೃತ್ತದಲ್ಲಿ ಯುವ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಾನವ ಸರ್ಪಳಿ, ರಸ್ತೆ ತಡೆ, ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.        ಭದ್ರಾವತಿ : ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ಪುಲ್ವಾಮಾ ದಾಳಿಯಲ್ಲಿ ೪೪ ಸೈನಿಕರು ಹುತಾತ್ಮರಾದಾಗ ಪಾಕ್ ಆಕ್ರಮಿತ ಪ್ರದೇಶದ ಒಳಗೆ ನುಗ್ಗಿ ಸುಮಾರು ೩೦೦ ಭಯೋತ್ಪಾದಕರನ್ನು ಸಂಹರಿಸಲಾಯಿತು. ೨೫ಕ್ಕೂ ಹೆಚ್ಚು ದೇಶಗಳು ತಮ್ಮ ದೇಶದ ಅತ್ಯುನ್ನತ ಪ್ರಶಸ್ತಿಯ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿ ಸನ್ಮಾನಿಸಿವೆ. ಇಡೀ ವಿಶ್ವವೇ ಅವರನ್ನು ವಿಶ್ವ ನಾಯಕ, ವಿಶ್ವಗುರು ಎಂದು ಕೊಂಡಾಡುತ್ತಿವೆ. ಇಂತಹ ಗೌರವಾನ್ವಿತ ಪ್ರಧಾನ ಮಂತ್ರಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಆವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.       ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ನಗರದ ಹಾಲಪ್ಪ ವೃತ್ತದಲ್ಲಿ ಯುವ ಮೋರ್ಚ...

ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಗೆ ಸತತ ೨ನೇ ಬಾರಿಗೆ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡು ಉತ್ತಮ ಸಾಧನೆ ಮಾಡಿದೆ.       ಭದ್ರಾವತಿ : ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡು ಉತ್ತಮ ಸಾಧನೆ ಮಾಡಿದೆ.       ಗುಣಾತ್ಮಕ ಫಲಿತಾಂಶದಲ್ಲಿ ಎ ಗ್ರೇಡ್ ಪಡೆದಿದ್ದು, ಈ ಶಾಲೆ ಸತತ ಎರಡನೇ ಬಾರಿಗೆ ಶೇ. ೧೦೦ರಷ್ಟು ಫಲಿತಾಂಶ ಪಡೆಯುವ ಮೂಲಕ ಗಮನ ಸೆಳೆದಿದೆ. ಉತ್ತಮ ಫಲಿತಾಂಶ ಪಡೆಯಲು ಕಾರಣಕರ್ತರಾದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪೋಷಕರಿಗೆ ಮತ್ತು ಶಾಲಾಭಿವೃದ್ಧಿ ಸಮಿತಿಗೆ, ಹಿರಿಯ ವಿದ್ಯಾರ್ಥಿಗಳಿಗೆ ಹಾಗು ಜನಪ್ರತಿನಿಧಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರು ಕೃತಜ್ಞತೆ ಸಲ್ಲಿಸಿದ್ದು, ಮುಂಬರುವ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದ್ದಾರೆ.  

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿಇಎಸ್ ವಿದ್ಯಾಸಂಸ್ಥೆಗೆ ಶೇ.೧೦೦ ಫಲಿತಾಂಶ

Image
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ಭದ್ರಾವತಿ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಮತ್ತು ಕನ್ನಡ  ಪ್ರೌಢಶಾಲಾ ವಿಭಾಗ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ. ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.       ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಮತ್ತು ಕನ್ನಡ  ಪ್ರೌಢಶಾಲಾ ವಿಭಾಗ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಆಂಗ್ಲ ಪ್ರೌಢಶಾಲೆ ವಿಭಾಗದ ವಿ.ಎ ಕಿರಣ್ ೬೨೫ಕ್ಕೆ ೬೧೭ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಎಂ. ಸಿಂಚನ ೫೯೪, ಪಿ.ಜಿ ತನುಶ್ರೀ ೫೭೫, ಟಿ. ಮುಕ್ತಿರಾಜ್ ೫೭೨, ಸೌದಾ ಖಾನ್ ೫೬೯ ಮತ್ತು ಬಿ.ಜಿ ನಕ್ಷತ್ರ ಹೆಚ್ಚಿನ ಅಂಕಗಳನ್ನು ಪಡೆದು ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಒಟ್ಟಾರೆ ಆಂಗ್ಲ ಮಾಧ್ಯಮದಲ್ಲಿ ೫  ವಿದ್ಯಾರ್ಥಿಗಳು  ಅತ್ಯುನ್ನತ ಶ್ರೇಣಿಯಲ್ಲಿ,  ೨೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.       ಕನ್ನಡ ಪ್ರೌಢಶಾಲ...