ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು
ಮೆರವಣಿಗೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆಬಿಟಿ ಬಾಬು ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ರಕ್ತದಾನ ಶಿಬಿರ ಹಾಗು ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಭದ್ರಾವತಿ : ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನ ಆಚರಣೆ ಸಂಭ್ರಮದ ಹಿನ್ನಲೆಯಲ್ಲಿ ಬುಧವಾರ ಒಂದೆಡೆ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮತ್ತೊಂದೆಡೆ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳಿಂದ ಸಾಮಾಜಿಕ ಸೇವಾ ಕಾರ್ಯಗಳು ನೆರವೇರಿದವು. ಮೆರವಣಿಗೆ ಆರಂಭಕ್ಕೂ ಮೊದಲು ನಗರದ ಚನ್ನಗಿರಿ ರಸ್ತೆಯ ಹೊಳೆಹೊನ್ನೂರು ವೃತ್ತದಲ್ಲಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆಬಿಟಿ ಬಾಬು ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ರಕ್ತದಾನ ಶಿಬಿರ ಹಾಗು ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಟ್ರಸ್ಟ್ ಪದಾಧಿಕಾರಿಗಳಾದ ಕಾರ್ಯದರ್ಶಿ ಎಂ. ಮುಸ್ವೀರ್ ಬಾಷಾ, ಖಜಾಂಚಿ ನೂರುಲ್ಲಾ ಷರೀಫ್ ಟ್ರಸ್ಟಿಗಳಾದ ವಹೀದ್, ನೂರು ಅಹಮದ್, ಜಾಕೀರ್, ಖಲಂದರ್, ನವೀದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ...