Posts

ಕಾಮ್ರೇಡ್ ಡಿ.ಸಿ ಮಾಯಣ್ಣನವರಿಗೆ ನಾಗರೀಕ ಪ್ರಶಸ್ತಿ, ಆಶ್ರಯ ಗುಂಪು ಮನೆಗಳಿಗೆ ಹೆಸರು ನಾಮಕರಣಗೊಳಿಸಿ

Image
ಫೆ.೧೦ರಂದು ಬೆಳಿಗ್ಗೆ ೧೧ ಗಂಟೆಗೆ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ  ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ       ಭದ್ರಾವತಿ : ಹಿರಿಯ ರಾಜಕೀಯ ಮುತ್ಸದ್ದಿ, ಕಾರ್ಮಿಕ ಹೋರಾಟಗಾರ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಸೇವೆಯನ್ನು ಪರಿಗಣಿಸಿ ರಾಜ್ಯ ಹಾಗು ಕೇಂದ್ರ ಸರ್ಕಾರಗಳು ಹಾಗು ಸ್ಥಳೀಯ ಸಂಸ್ಥೆಗಳು ನಾಗರೀಕ ಗೌರವ ಪ್ರಶಸ್ತಿಗಳನ್ನು ನೀಡುವಂತೆ ಹಾಗು ಆಶ್ರಯ ನಿವೇಶನಗಳ ಗುಂಪು ಮನೆಗಳ ಯೋಜನೆಗೆ ಅವರ ಹೆಸರನ್ನು ನಾಮಕರಣಗೊಳಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಫೆ.೧೦ರಂದು ಬೆಳಿಗ್ಗೆ ೧೧ ಗಂಟೆಗೆ ಮನವಿ ಸಲ್ಲಿಸಲಾಗುತ್ತದೆ.       ಇತ್ತೀಚೆಗೆ ನಿಧನರಾದ ಕಾರ್ಮಿಕ ಮುಖಂಡರಾದ `ಕಾಮ್ರೇಡ್ ಡಿ.ಸಿ ಮಾಯಣ್ಣ, ಕಾಮ್ರೇಡ್ ಅನಂತ ಸುಬ್ಬರಾವ್, ಕಾಮ್ರೇಡ್ ಕಾಳೇಗೌಡ ಹಾಗು ಕ್ರಾಮ್ರೇಡ್ ಎಸ್. ಆಂಜನೇಯ' ಅವರಿಗೆ ಗೌರವ ಸಲ್ಲಿಸುವಂತಾಗಬೇಕು. ರಾಜ್ಯ ಸರ್ಕಾರ ಸಾಧಕ ಗಣ್ಯರ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕಾರ್ಮಿಕ ಹೋರಾಟಗಾರರನ್ನು ಗುರುತಿಸಿ ಗೌರವಿಸಲು ಕಾರ್ಮಿಕ ರತ್ನ ಎಂಬ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುತ್ತಿದ್ದು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕರು, ಹೋರಾಟಗಾರರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ನಾಗರೀಕರು ಹೆಚ್ಚಿನ ಆಗಮಿಸಿ ಯ...

ಫೆ.೮ರಂದು ರಕ್ತದಾನ, ಉಚಿತ ನೇತ್ರ ತಪಾಸಣಾ ಶಿಬಿರ

Image
     ಭದ್ರಾವತಿ : ಹಳೇನಗರ, ಭೂತನಗುಡಿ, ಶ್ರೀ ಕೃಷ್ಣ ರುಕ್ಷ್ಮಿಣಿ ದೇವಸ್ಥಾನದ ಭಾವಸಾರ ಕ್ಷತ್ರಿಯ ಸಮಾಜ ಹಾಗು ಅಂಗ ಸಂಸ್ಥೆಗಳಿಂದ ಫೆ.೮ರ ಭಾನುವಾರ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಬೃಹತ್ ರಕ್ತದಾನ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ.       ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿ ಕೇಂದ್ರ, ಸ್ಪಂದನ ಹೆಲ್ತ್ ಫೌಂಡೇಷನ್ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಶಿಬಿರದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ತಪಾಸಣೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಸರ್ಕಾರಿ ಶಾಲೆಯಲ್ಲಿ ಕ್ಯಾನ್ಸರ್ ಅರಿವು ಕಾರ್ಯಕ್ರಮ

Image
ಭದ್ರಾವತಿ ನಗರದ ನ್ಯೂಟೌನ್ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬುಳ್ಳಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ಸರ್  ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ : ನಗರದ ನ್ಯೂಟೌನ್ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬುಳ್ಳಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ಸರ್  ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.       ಬುಳ್ಳಾಪುರ ಸುತ್ತಮುತ್ತಲಿನ ಮಹಿಳೆಯರಿಗೆ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಮೂಲಕ ಕುಟುಂಬ ಸದಸ್ಯರಲ್ಲಿ ಆರೋಗ್ಯದ ಜಾಗೃತಿವಹಿಸುವಂತೆ ಕರೆ ನೀಡಲಾಯಿತು.       ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿ ವೀಣಾ, ಸಂಸ್ಥೆಯ ಸಿಬ್ಬಂದಿಗಳು, ಒಕ್ಕೂಟದ ಪ್ರತಿನಿಧಿಗಳು, ಸಂಘದ ಸದಸ್ಯರು, ಮಕ್ಕಳು, ತಾಯಂದಿರು ಪಾಲ್ಗೊಂಡಿದ್ದರು.  

ಹಂತ ಹಂತವಾಗಿ ಬಿ.ಎಚ್ ರಸ್ತೆ ಅಭಿವೃದ್ಧಿ ಕಾರ್ಯ : ಕವಲಗುಂದಿ ಕಿರುಸೇತುವೆ ನೆಲಸಮ

Image
ಭದ್ರಾವತಿ ಬಿಳಕಿ ವೃತ್ತದಿಂದ ಕೈಗೊಂಡಿರುವ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಕವಲಗುಂದಿ(ಲೋಯರ್ ಹುತ್ತಾ)ವರೆಗೂ ಸಾಗಿದೆ. ಭದ್ರಾ ನದಿಗೆ ಸಂಪರ್ಕಗೊಂಡಿರುವ ಹಳೇಯ ಕಿರು ಸೇತುವೆ ನೆಲಸಮಗೊಳಿಸಿ ಹೊಸದಾಗಿ ರಸ್ತೆಯ ಅಳತೆಗೆ ತಕ್ಕಂತೆ ದೊಡ್ಡ ಸೇತುವೆ ನಿರ್ಮಿಸಲಾಗುತ್ತಿದೆ.       ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹಾದು ಹೋಗಿರುವ ಬಿ.ಎಚ್ ರಸ್ತೆಯನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ಬಿಳಕಿ ವೃತ್ತದಿಂದ ಕೈಗೊಂಡಿರುವ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಕವಲಗುಂದಿ(ಲೋಯರ್ ಹುತ್ತಾ)ವರೆಗೂ ಸಾಗಿದೆ. ಭದ್ರಾ ನದಿಗೆ ಸಂಪರ್ಕಗೊಂಡಿರುವ ಹಳೇಯ ಕಿರು ಸೇತುವೆ ನೆಲಸಮಗೊಳಿಸಿ ಹೊಸದಾಗಿ ರಸ್ತೆಯ ಅಳತೆಗೆ ತಕ್ಕಂತೆ ದೊಡ್ಡ ಸೇತುವೆ ನಿರ್ಮಿಸಲಾಗುತ್ತಿದೆ.       ಶಿವಮೊಗ್ಗ-ಭದ್ರಾವತಿ ನಡುವಿನ ಪ್ರಮುಖ ಸಂಪರ್ಕಕೊಂಡಿಯಾಗಿರುವ ಬಿ.ಎಚ್ ರಸ್ತೆಯನ್ನು ಸುಮಾರು ಎರಡು ದಶಕಗಳಿಂದ ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ನಡುವೆ ಈ ರಸ್ತೆಯಲ್ಲಿ ಹೊಸದಾಗಿ ಕಡದಕಟ್ಟೆ ಬಳಿ ರೈಲ್ವೆ ಇಲಾಖೆಯಿಂದ ಹೊಸ ಸೇತುವೆ ನಿರ್ಮಿಸಿ ಲೋಕಾರ್ಪಣೆಗೊಳಿಸಲಾಗಿದೆ. ಮತ್ತೊಂದೆಡೆ ಹಳೇಸೇತುವೆ(ಭದ್ರಾ ಸೇತುವೆ)ಬಳಿ ಹೊಸದಾಗಿ `ವಿಶ್ವಕರ್ಮ ಶಿಲ್ಪಿ ಅಮರ ಶಿಲ್ಪಿ ಜಕಣಾಚಾರಿ ಸೇತುವೆ'(ಕಮಾನು ಸೇತುವೆ) ಈಗಾಗಲೇ ನಿರ್ಮಾಣಗೊಂಡು ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ....

ವಿಐಎಸ್‌ಎಲ್ ಮಕ್ಕಳ ಉದ್ಯಾನವನದಲ್ಲಿ ಬೆಂಕಿ : ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ

Image
ಭದ್ರಾವತಿ ನಗರದ  ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಕ್ಕಳ ಉದ್ಯಾನವನದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ.       ಭದ್ರಾವತಿ: ನಗರದ  ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಕ್ಕಳ ಉದ್ಯಾನವನದಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ.       ಇನ್ನೂ ಬೇಸಿಗೆ ಕಾಲ ಆರಂಭವಾಗಿಲ್ಲ. ಈಗಾಗಲೇ ಬಹುತೇಕ ಕಡೆ ಗಿಡಗಂಟಿಗಳು ಬಿಸಿಲಿನ ತಾಪಕ್ಕೆ ಒಣಗಿ ಹೋಗಿವೆ. ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾಗುತ್ತಿವೆ. ಈ ನಡುವೆ ಬೆಂಕಿ ಕಾಣಿಸಿಕೊಳ್ಳುವ ಸ್ಥಳಗಳನ್ನು ನಿರ್ಲಕ್ಷ್ಯ ವಹಿಸಿದರೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.       ಮಕ್ಕಳ ಉದ್ಯಾನವನದ ಹೊರಭಾಗದ ಬೇಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಐಎಸ್‌ಎಲ್ ಕಾರ್ಖಾನೆ ಅಗ್ನಿಶಾಮಕದಳ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಂದು ವೇಳೆ ನಿರ್ಲಕ್ಷ್ಯವಹಿಸಿದ್ದಲ್ಲಿ ಬೆಂಕಿ ಇಡೀ ಉದ್ಯಾನವ...

ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ

Image
ಅಂತರಗಂಗೆ ಗ್ರಾಮ ಪಂಚಾಯಿತಿ ದಾನಿಗಳಿಗೆ ಕೃತಜ್ಞತೆ  ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿದ ದಾನಿಗಳನ್ನು ಬುಧವಾರ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.       ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿದ ದಾನಿಗಳನ್ನು ಬುಧವಾರ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.       ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿ ರಂಗನಾಥ್ ಬರ್ಗೆಯವರ ಪತ್ನಿ ಮೀನಾಕ್ಷಿಬಾಯಿ ಮತ್ತು ಇವರ ಸಹೋದರಿ ಹೆಸರಿನಲ್ಲಿರುವ ಸುಮಾರು ೬ ಲಕ್ಷ ರು. ಬೆಲೆಬಾಳುವ ೩೦*೪೦ ಅಳತೆಯ ನಿವೇಶನ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ದಾನ ನೀಡಿದ್ದು, ಇದರಿಂದಾಗಿ ಗ್ರಾಮಸ್ಥರಿಗೆ ಹೆಚ್ಚಿನ ಅನುಕೂಲವಾಗಿದೆ.       ಅಗತ್ಯ ಮೂಲ ಸೌಕರ್ಯಗಳಲ್ಲಿ ಒಂದಾಗಿರುವ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ನಿವೇಶನ ದಾನ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು  ರಂಗನಾಥ್ ಬರ್ಗೆ, ಮೀನಾಕ್ಷಿಬಾಯಿ ಮತ್ತು ಇವರ ಸಹೋದರಿಯನ್ನು ಸನ...

ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಆಡಳಿತ ಅಧಿಕಾರಿ ಸೇವೆಯಿಂದ ವಜಾಗೊಳಿಸಿ

Image
ವಿವಿಧ ಸಂಘಟನೆಗಳ ಪ್ರಮುಖರಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ  ಭದ್ರಾವತಿ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಗ್ರಾಮ ಆಡಳಿತ ಅಧಿಕಾರಿ  ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ವಿವಿಧ ಸಂಘಟನೆಗಳ ಪ್ರಮುಖರು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಷಡ್ಯಂತ್ರ ರೂಪಿಸಿ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಗ್ರಾಮ ಆಡಳಿತ ಅಧಿಕಾರಿ  ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ವಿವಿಧ ಸಂಘಟನೆಗಳ ಪ್ರಮುಖರು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.       ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಜಿ ಅಭಿಷೇಕ್ ಮಂಗಳವಾರ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ವಿರುದ್ಧ ಇಲ್ಲಸಲ್ಲದ ಷಡ್ಯಂತ್ರ ರೂಪಿಸಿ ಕೆಲಸದ ಒತ್ತಡ ಹೇರಿ ಕರ್ತವ್ಯ ನಿರ್ವಹಿಸಲು ಪದೇ ಪದೇ ತೊಂದರೆ ನೀಡುತ...

ಉದ್ಯಮಿ ಟಿ.ಎಸ್ ಈಶ್ವರನ್ ನಿಧನ

Image
ಟಿ.ಎಸ್ ಈಶ್ವರನ್       ಭದ್ರಾವತಿ: ನಗರದ ಅಂಡರ್‌ಬ್ರಿಡ್ಜ್ ಉಂಬ್ಳೆಬೈಲು ರಸ್ತೆ, ಸಂಜಯ್ ನಗರದ ನಿವಾಸಿ, ಉದ್ಯಮಿ ಟಿ.ಎಸ್ ಈಶ್ವರನ್(೭೦) ಬುಧವಾರ ಬೆಳಗಿನ ಜಾವ ನಿಧನ ಹೊಂದಿದರು.       ಪತ್ನಿ, ನಾಲ್ವರು ಪುತ್ರರು ಇದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ಲೋಯರ್ ಹುತ್ತಾ  ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.  ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಮೀನು ಕೃಷಿ ವ್ಯಾಪಾರ ಆರಂಭಿಸಿದ್ದ ಇವರು ನಂತರದ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯಮವನ್ನಾಗಿಸಿಕೊಂಡು ರಾಜ್ಯದ ವಿವಿಧೆಡೆ ಉತ್ತಮ ಹಾಗು ಆರೋಗ್ಯಕರವಾದ ಮೀನು ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದರು. ಅಲ್ಲದೆ ಸಮಾಜ ಸೇವಕರಾಗಿ ಸಹ ಗುರುತಿಸಿ ಕೊಂಡಿದ್ದರು.       ಇವರ ನಿಧನಕ್ಕೆ ಉದ್ಯಮಿ, ಸಮಾಜ ಸೇವಕ ಎ. ಮಾಧು, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮುರುಗನ್, ಶ್ರೀ ತಿರುಮಲ ಫೌಂಡೇಷನ್ ಪ್ರಶಾಂತ್ ಹಾಗು ಮೀನುಗಾರರ ಬೀದಿ ನಿವಾಸಿಗಳು, ವ್ಯಾಪಾರಿಗಳು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ. 

ವಿಐಎಸ್‌ಎಲ್ ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ಮಾಹಿತಿ ನೀಡಿ : ಸಿರಿಗೆರೆ ಶ್ರೀ

Image
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸುವ ಭರವಸೆ  ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು.       ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು.       ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ ರಿಂದ ಫೆ.೧ರವರೆಗೆ ಆಯೋಜಿಸಲಾಗಿದ್ದ ಶ್ರೀ ಮಠದ ಭಾವೈಕ್ಯತಾ ಹಬ್ಬವಾದ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಆಗಮಿಸಿದ್ದ ಶ್ರೀಗಳು ಬಾಳೆಮಾರನಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದು, ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸಲು ಸಾಧ್ಯವಿರುವ ರೂಪುರೇಷೆಗಳ ಕುರಿತ ಯೋಜನಾ ವರದಿಯ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಈ ಸಂಬಂಧ ಚರ್ಚಿಸುವುದಾಗಿ ಭರವಸೆ ...

ತಹಸೀಲ್ದಾರ್ ವಿರುದ್ಧ ಮಾನಸಿಕ ಹಿಂಸೆ ಆರೋಪ

Image
ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ       ಭದ್ರಾವತಿ: ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ವಿರುದ್ಧ ಕೆಳಹಂತದ ಅಧಿಕಾರಿಯೊಬ್ಬರು ಗಂಭೀರ ಆರೋಪ ಮಾಡುವ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪುತ್ರ ಎಂ.ಎ ಅಜಿತ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮೇಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.          ತಾಲೂಕಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಜೆ. ಅಭಿಷೇಕ್ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಇಲ್ಲಸಲ್ಲದ ಆರೋಪ ಮಾಡಿ ಕಳೆದ ೩ ದಿನಗಳಿಂದ ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಪತ್ರದಲ್ಲಿ ಆರೋಪಿಸಲಾಗಿದೆ.       ಈ ನಡುವೆ ಅಭಿಷೇಕ್ ಸಿದ್ದಾಪುರ ಚಾನಲ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವುದು ತಿಳಿದು ಬಂದಿದೆ. ಆದರೆ ಇದುವರೆಗೂ ಈ ಸಂಬಂಧ ಇದುವರೆಗೂ ಯಾವುದೇ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ. 

ನಗರ ಆಶ್ರಯ ಸಮಿತಿಗೆ ನಾಲ್ವರು ನೂತನ ಸದಸ್ಯರ ನೇಮಕ : ಪದಗ್ರಹಣ

Image
ಭದ್ರಾವತಿ ನಗರ ಆಶ್ರಯ ಸಮಿತಿಗೆ ಸರ್ಕಾರದಿಂದ ನೂತನವಾಗಿ ನಾಮನಿರ್ದೇಶನಗೊಂಡಿರುವ ೪ ಜನ ಸದಸ್ಯರು ಮಂಗಳವಾರ ನಗರಸಭೆಯಲ್ಲಿ ಪದಗ್ರಹಣ ಸ್ವೀಕರಿಸಿದರು.       ಭದ್ರಾವತಿ: ನಗರ ಆಶ್ರಯ ಸಮಿತಿಗೆ ಸರ್ಕಾರದಿಂದ ನೂತನವಾಗಿ ನಾಮನಿರ್ದೇಶನಗೊಂಡಿರುವ ೪ ಜನ ಸದಸ್ಯರು ಮಂಗಳವಾರ ನಗರಸಭೆಯಲ್ಲಿ ಪದಗ್ರಹಣ ಸ್ವೀಕರಿಸಿದರು.       ಶಿವಾಜಿರಾವ್, ವೆಂಕಟೇಶ್ ಇಮಾನ್ಯುವೆಲ್, ನರಸಿಂಹಮೂರ್ತಿ ಮತ್ತು ಮಂಜಳ ನೂತನವಾಗಿ ನಾಮನಿರ್ದೇಶನಗೊಂಡಿರುವ ಸದಸ್ಯರಾಗಿದ್ದಾರೆ. ಬಿ.ಎಸ್ ಗೋಪಾಲ್ ಸಮಿತಿ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ನೂತನ ಸದಸ್ಯರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಯುವ ಮುಖಂಡ ಬಿ.ಎಸ್ ಬಸವೇಶ್, ನಗರಸಭೆ ಅಧ್ಯಕ್ಷೆ ಜೆ.ಎಸ್ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ. ಗಂಗಾಧರ್, ಮಹಮದ್ ರಫಿ, ರೂಪ ನಾರಾಯಣ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 

ತರಳಬಾಳು ಹುಣ್ಣಿಮೆ ಮಹೋತ್ಸವ : ಶಾಸಕ ಬಿ.ಕೆ ಸಂಗಮೇಶ್ವರ್ ಕೃತಜ್ಞತೆ

Image
ಬಿ.ಕೆ ಸಂಗಮೇಶ್ವರ್       ಭದ್ರಾವತಿ: ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ ರಿಂದ ಫೆ.೧ರವರೆಗೆ ಆಯೋಜಿಸಲಾಗಿದ್ದ ಸಿರಿಗೆರೆ ತರಳಬಾಳು ಬೃಹನ್ಮಠದ ಭಾವೈಕ್ಯತಾ ಹಬ್ಬವಾದ ತರಳಬಾಳು ಹುಣ್ಣಿಮೆ ಮಹೋತ್ಸವ ಯಶಸ್ವಿಗೆ ಶ್ರಮಿಸಿದ ಆಯೋಜಕರು ಹಾಗು ಸಹಕರಿಸಿದ ಜಿಲ್ಲಾಡಳಿತ, ತಾಲೂಕು ಆಡಳಿತ, ನಗರಸಭೆ ಹಾಗು ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಕರ್ನಾಟಕ ಗ್ರಾಮೀನ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಸಂಗಮೇಶ್ವರ್ ಕೃತಜ್ಞತೆ ಸಲ್ಲಿಸಿದ್ದಾರೆ.       ೯ ದಿನಗಳ ಕಾಲ ಜರುಗಿದ ಮಹೋತ್ಸವದ ದಿವ್ಯ ಸಾನಿಧ್ಯವಹಿಸಿದ್ದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರಿಗೆ ಹಾಗು ಮಹೋತ್ಸವಕ್ಕೆ ಆಗಮಿಸಿ ಆಶೀರ್ವಚನ ನೀಡಿದ ನಾಡಿನ ವಿವಿಧ ಮಠಗಳ ಮಠಾಧೀಶರಿಗೆ ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ. ಅಲ್ಲದೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಹಾಗು ರಾಜ್ಯ ಸರ್ಕಾರದ ಸಚಿವರು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು, ನ್ಯಾಯಾಧೀಶರು, ನ್ಯಾಯವಾದಿಗಳು, ಚಿಂತಕರು, ಸಾಹಿತಿಗಳು ಸೇರಿದಂತೆ ಸಂಪನ್ಮೂಲ ವ್ಯಕ್ತಿಗಳಿಗೆ, ಸಾಂಸ್ಕೃತಿಕ ಹಾಗು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಕಲಾವಿದರು, ಕ್ರೀಡಾಪಟುಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ       ಆಯೋಜಕರಾದ ತರಳಬಾಳು ಹುಣ್ಣಿಮೆ ಮಹೋತ್ಸವದ ವಿವಿಧ ಸಮಿತಿಗ...

ರಸ್ತೆಯಲ್ಲಿ ಅಡ್ಡಗಟ್ಟಿ, ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಮಾಡಿದ್ದ ಇಬ್ಬರ ಸೆರೆ

Image
೧.೫೦ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶ, ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ  ಕಳೆದ ೪ ದಿನಗಳ ಹಿಂದೆ ತಾಲೂಕಿನ ಶಂಕರಘಟ್ಟ, ಕುವೆಂಪು ನಗರದ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.     ಭದ್ರಾವತಿ :  ಕಳೆದ ೪ ದಿನಗಳ ಹಿಂದೆ ತಾಲೂಕಿನ ಶಂಕರಘಟ್ಟ, ಕುವೆಂಪು ನಗರದ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.     ತಾಲೂಕಿನ ಮಲ್ಲಿಗೇನಹಳ್ಳಿ ಕ್ಯಾಂಪ್ ನಿವಾಸಿಗಳಾದ ಚಂದನ್ ನಾಯ್ಕ(೨೦) ಮತ್ತು ವೇಣುಗೋಪಾಲ(೨೬) ಬಂಧಿತರಾಗಿದ್ದು, ಸುಲಿಗೆ ಮಾಡಲಾಗಿದ್ದ ೧೦ ಗ್ರಾಂ ಚಿನ್ನಾಭರಣ ಹಾಗು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.  ಘಟನೆ ವಿವರ:     ಜಯಂತ್ ಎಂಬುವರು ಜ.೩೦ ರಂದು ಶಂಕರಘಟ್ಟ, ಕುವೆಂಪು ನಗರ ಸಮೀಪದ ಶಿವಮೊಗ್ಗ-ತರಿಕೆರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಯಾರೋ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿ ತಡೆದು ಹಲ್ಲೆ ಮಾಡಿ ೧.೫೦ ಲಕ್ಷ ರು. ಮೌಲ್ಯದ ಸುಮಾರು ೧೪ ಗ್ರಾಂ. ತೂಕದ ಚಿನ್ನದ ಸರ ಸುಲಿಗೆ ಮಾಡಿಕೊಂಡು ಹೋಗಿದ್ದು,...

ದೈಹಿಕ ಶಿಕ್ಷಣ ಶಿಕ್ಷಕ ತಿಮ್ಮಪ್ಪ ನಿಧನ

Image
ತಿಮ್ಮಪ್ಪ       ಭದ್ರಾವತಿ: ನಗರದ ಹೊಸಮನೆ ಶ್ರೀ ಕೃಷ್ಣ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ತಿಮ್ಮಪ್ಪ(೬೭) ಸೋಮವಾರ ಸಂಜೆ ನಿಧನ ಹೊಂದಿದರು.       ಪತ್ನಿ, ಪುತ್ರ ಹಾಗು ಇಬ್ಬರು ಪುತ್ರಿಯರು ಇದ್ದಾರೆ. ತಿಮ್ಮಪ್ಪ ಬಹಳ ವರ್ಷಗಳವರೆಗೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉತ್ತಮ ತರಬೇತಿ ನೀಡುವ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಹಲವಾರು ಕ್ರೀಡಾಪಟು ರೂಪಿಸಿದ್ದ ತಿಮ್ಮಪ್ಪರವರು ಖೋ-ಖೋ ಭೀಷ್ಮ ಎಂಬ ಬಿರುದು ಪಡೆದುಕೊಂಡಿದ್ದರು. ಇವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.       ತಿಮ್ಮಪ್ಪ ಅವರ ನಿಧನಕ್ಕೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು, ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು, ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಹಬ್ಬ, ಹರಿದಿನಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ : ಪ್ರಕಾಶ್ ರಾಥೋಡ್

Image
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಸೋಮವಾರ ಪೊಲೀಸ್ ಉಪವಿಭಾಗದಿಂದ ಶಾಂತಿ ಸಭೆ ಆಯೋಜಿಸಲಾಗಿತ್ತು.       ಭದ್ರಾವತಿ : ಪ್ರತಿಯೊಂದು ಮಸೀದಿ, ಮಠ ಮಂದಿರಗಳು, ಹಬ್ಬ, ಹರಿದಿನಗಳು, ಸಹ ತನ್ನದೇ ಆದ ಪರಂಪರೆ, ವೈಶಿಷ್ಟ್ಯತೆ ಹಾಗು ಮಹತ್ವವನ್ನು ಹೊಂದಿವೆ. ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಪ್ರತಿಯೊಂದು ಧರ್ಮದವರು ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬ, ಹರಿದಿನಗಳನ್ನು ಆಚರಿಸಬೇಕೆಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಹೇಳಿದರು.       ಅವರು ಸೋಮವಾರ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಉಪವಿಭಾಗದಿಂದ ಅಯೋಜಿಸಲಾಗಿದ್ದ ಶಾಂತಿ ಸಭೆಯ ನೇತೃತ್ವವಹಿಸಿ ಮಾತನಾಡಿದರು. ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ಸುಮಾರು ೬೫ ಮಸೀದಿಗಳು, ೫ ದರ್ಗಾಗಳಿದ್ದು, ಹಬ್ಬ, ಹರಿದಿನಗಳನ್ನು ಸಂತೋಷ, ಸಂಭ್ರಮದಿಂದ ಆಚರಿಸುವ ವಾತಾವರಣ ರೂಪಿಸಿಕೊಳ್ಳಬೇಕು. ವಿನಾಕಾರಣ ಸಂಘರ್ಷಗಳಿಗೆ ಎಡೆಮಾಡಿಕೊಡಬಾರದು. ಒಂದೇ ವೇಳೆ ಗೊಂದಲಗಳು ಉಂಟಾದ್ದಲ್ಲಿ ಸಮುದಾಯದ ಹಿರಿಯರು ಒಗ್ಗೂಡಿ ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕು. ಸಂಘರ್ಷಗಳು ಮಿತಿಮೀರಿ ಹೋದಲ್ಲಿ ಇಲಾಖೆ ಮಧ್ಯ ಪ್ರವೇಶಿಸಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.        ದಿನದರ್ಶಿಕೆ ಪ್ರಕಾರ ಫೆ.೪ರಿಂದ ಮುಸ್ಲಿಂ ಸಮುದಾಯದವರ ಹಬ್ಬವಿದ್...

ವಿಜೃಂಭಣೆಯಿಂದ ಜರುಗಿದ ತರಳಬಾಳು ಹುಣ್ಣಿಮೆ ಮಹೋತ್ಸವದ ಮೆರವಣಿಗೆ : ಮೆರಗು ತಂದ ಕಲಾತಂಡಗಳು

Image
ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದ ಮೆರೆವಣಿಗೆಯಲ್ಲಿ  ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಬೆಳ್ಳಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.      ಭದ್ರಾವತಿ: ಸಿರಿಗೆರೆಯ ತರಳಬಾಳು ಬೃಹನ್ಮಠದ ಭಾವೈಕ್ಯತಾ ಹಬ್ಬವಾದ ಜರುಗಿದ ತರಳಬಾಳು ಹುಣ್ಣಿಮೆ ಮಹೋತ್ಸವದ ಪ್ರಯುಕ್ತ ತೆರೆದ ವಾಹನದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಬೆಳ್ಳಿಪಲ್ಲಕ್ಕಿ ಉತ್ಸವವು ತೆರೆದ ವಾಹನದಲ್ಲಿ ಶ್ರೀಮಠದ ಸಕಲಬಿರುದಾವಳಿಗಳೊಂದಿಗೆ ಭಾನುವಾರ ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು.       ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವವು ಮಧ್ಯಾಹ್ನ ೨.೩೦ ಗಂಟೆಗೆ ಚನ್ನಗಿರಿ ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂ.ಸಿ) ಮುಂಭಾಗದಿಂದ ಆರಂಭಗೊಂಡು ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಡಾ.ರಾಜಕುಮಾರ್ ರಸ್ತೆ ಮೂಲಕ ಹಾಲಪ್ಪ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕೆ.ಎಸ್.ಆರ್.ಟಿ.ಸಿ ಮುಖ್ಯ ಬಸ್ ನಿಲ್ದಾಣ, ರಿಲಯನ್ಸ್ ಪೆಟ್ರೋಲ್ ಬಂಕ್ ಮೂಲಕ ಸಾಗಿ ರಾಷ್ಟ್ರಕವಿ ಕುವೆಂಪು ಮಹಾವೇದಿಕೆಯ ಬಳಿ ಸಾಗಿತು.        ಪ್ರತಿವರ್ಷದ ಶ್ರೀಮಠದ ಸಂಪ್ರದಾಯದಂತೆ ತರಳಬಾಳು ಹುಣ್ಣಿಮೆ ಉತ್ಸವದಲ್ಲಿ ಶ್ರೀಮಠದ ವಿದ್ಯಾರ್ಥಿಗಳು ಶಿವಧ್ವಜ ಹಿಡಿದು, ಮಹಿಳೆಯರು ಬಣ್ಣದ ಸೀರೆಯನ್ನುಟ್ಟು ಕುಂಭ ಕಳಸಗಳನ್ನು ಹೊತ್ತು ಹಾಗು ಸಹಸ್ರಾರು ಭಕ್ತರು ಡೊಳ್ಳುಕುಣ...

ಕಾಮ್ರೇಡ್ ಡಿ.ಸಿ ಮಾಯಣ್ಣ, ಕಾಳೇಗೌಡ ಎಂದಿಗೂ ಮರೆಯಲಾಗದ ಮಹಾನ್ ನಾಯಕರು

Image
ನುಡಿನಮನ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಬಣ್ಣನೆ  ಭದ್ರಾವತಿಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಇತ್ತೀಚೆಗೆ ನಿಧನರಾದ ಕಾಮ್ರೇಡ್ ಡಿ.ಸಿ ಮಾಯಣ್ಣ ಹಾಗು ಕಾಮ್ರೇಡ್ ಕಾಳೇಗೌಡ ಮತ್ತು ಕಾಮ್ರೇಡ್ ಅನಂತ ಸುಬ್ಬರಾವ್‌ರವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಪಾಲ್ಗೊಂಡು ಮಾತನಾಡಿದರು.       ಭದ್ರಾವತಿ : ಮಹಾನ್ ಹೋರಾಟಗಾರ, ಕಾರ್ಮಿಕರ ಧ್ವನಿ ಕಾಮ್ರೇಡ್ ಡಿ.ಸಿ ಮಾಯಣ್ಣ ಮತ್ತು ಬಡ ಮಕ್ಕಳಿಗೆ ಶಿಕ್ಷಣ ನೀಡಿದ ಮಹಾತ್ಮ, ಕಾರ್ಮಿಕರ ನಾಯಕ ಕಾಳೇಗೌಡ ಈ ಇಬ್ಬರು ಕ್ಷೇತ್ರದ ಇತಿಹಾಸದಲ್ಲಿ ಎಂದಿಗೂ ಮರೆಯಲಾಗದ ಮಾಣಿಕ್ಯಗಳಾಗಿ ಉಳಿದುಕೊಂಡಿದ್ದಾರೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಬಣ್ಣಿಸಿದರು.       ಅವರು ಭಾನುವಾರ ಭಾರತ ಕಮ್ಯೂನಿಸ್ಟ್ ಪಕ್ಷ ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಇತ್ತೀಚೆಗೆ ನಿಧನರಾದ ಕಾಮ್ರೇಡ್ ಡಿ.ಸಿ ಮಾಯಣ್ಣ ಹಾಗು ಕಾಮ್ರೇಡ್ ಕಾಳೇಗೌಡ ಮತ್ತು ಕಾಮ್ರೇಡ್ ಅನಂತ ಸುಬ್ಬರಾವ್‌ರವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ಡಿ.ಸಿ ಮಾಯಣ್ಣ ಮತ್ತು ಕಾಳೇಗೌಡರವರನ್ನು ಕಳೆದುಕೊಂಡಿರುವುದು ತುಂಬಾ ನೋವುಂಟು ಮಾಡಿದೆ. ಅನಾರೋಗ್ಯಕ್ಕೆ ಒಳಗಾಗಿ ...

ನೂತನ ಶ್ರೀ ಮೈಲಾರೇಶ್ವರ ಸಮುದಾಯ ಭವನ ಲೋಕಾರ್ಪಣೆ

Image
ಭದ್ರಾವತಿ ಹಳೇನಗರ ಕಂಚಿಬಾಗಿಲು ವೃತ್ತದ ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ದೇವಸ್ಥಾನ ಧಾರ್ಮಿಕ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮೈಲಾರೇಶ್ವರ ಸಮುದಾಯ ಭವನ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಲೋಕಾರ್ಪಣೆಗೊಳಿಸಿದರು.       ಭದ್ರಾವತಿ : ಹಳೇನಗರ ಕಂಚಿಬಾಗಿಲು ವೃತ್ತದ ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ದೇವಸ್ಥಾನ ಧಾರ್ಮಿಕ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮೈಲಾರೇಶ್ವರ ಸಮುದಾಯ ಭವನ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಲೋಕಾರ್ಪಣೆಗೊಳಿಸಿದರು.       ಭರತ ಹುಣ್ಣಿಮೆ ಜಾತ್ರಾ ಮಹೋತ್ಸವ ಆಚರಣೆಯೊಂದಿಗೆ ಸಮುದಾಯ ಭವನ ಲೋಕಾರ್ಪಣೆಗೊಳಿಸಲಾಗಿದ್ದು, ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಬೆಳಿಗ್ಗೆ ಗಂಗೆ ಪೂಜೆ, ಪೂರ್ಣ ಕುಂಭಗಳ ಅವಾಹನೆಯೊಂದಿಗೆ ಗಣಪತಿ ಹೋಮ, ನವಗ್ರಹ ಹೋಮ, ರುದ್ರಹೋಮ ಹಾಗು ಶ್ರೀ ಮೈಲಾರಲಿಂಗೇಶ್ವರ ಮೂಲ ಮಂತ್ರ ಹೋಮಗಳನ್ನು ಅರ್ಚಕರಾದ ಎಸ್.ಸಿ ನೀಲಕಂಠ ಜೋಯ್ಸ್‌ರವರ ನೇತೃತ್ವದಲ್ಲಿ ನೆರವೇರಿಸಲಾಯಿತು. ರುದ್ರಾಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.      ಮಜ್ಜಿಗೆ, ಪಾನಕ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಹಳೇನಗರ, ಸಿದ್ದಾರೂಢನಗರ, ಭೂತನಗುಡಿ, ಹೊಸಮನೆ ಸೇರಿದಂತೆ ವಿವಿಧೆಡೆಗಳಿ...

ಕೆಆರ್‌ಐಡಿಎಲ್ ಅಧ್ಯಕ್ಷರಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಮುಂದುವರಿಕೆ

Image
ಶಾಸಕ ಬಿ.ಕೆ ಸಂಗಮೇಶ್ವರ್       ಭದ್ರಾವತಿ: ಸರ್ಕಾರ ಈ ಹಿಂದೆ ಎರಡು ವರ್ಷಗಳ ಅವಧಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಳಿಸಿದ್ದ ಆದೇಶವನ್ನು ಜ.೨೮ರಂದು ಮರು ಜಾರಿಗೊಳಿಸಿದ್ದು, ಈ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.       ಸುಮಾರು ೩೪ ವಿಧಾನಸಭಾ ಸದಸ್ಯರಿಗೆ ಸಚಿವ ಸಂಪುಟ ಸ್ಥಾನಮಾನಗಳೊಂದಿಗೆ ವಿವಿಧ ನಿಗಮ ಮಂಡಳಿ ಅಧ್ಯಕ್ಷರಾಗಿ ೨ ವರ್ಷಗಳ ಅವಧಿಗೆ ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಕುರಿತ ವದಂತಿಗಳು ಹರಿದಾಡುತ್ತಿದ್ದವು. ಮುಖ್ಯಮಂತ್ರಿ ಬದಲಾದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸಹ ಬದಲಾಗುವ ನಿರೀಕ್ಷೆ ಹೊಂದಲಾಗಿತ್ತು. ಆದರೆ ಇದೀಗ ಸರ್ಕಾರ ಹಿಂದಿನ ಆದೇಶವನ್ನು ಮರು ಜಾರಿಗೊಳಿಸಿದೆ.       ಬಹಳಷ್ಟು ನಿಗಮ ಮಂಡಳಿ ಅಧ್ಯಕ್ಷರು ಮುಂದಿನ ಸಚಿವ ಸಂಪುಟ ಬದಲಾವಣೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸಹೊಂದಿದ್ದರು. ಕ್ಷೇತ್ರದ ನಿವಾಸಿಗಳು, ಶಾಸಕ ಬಿ.ಕೆ ಸಂಗಮೇಶ್ವರ್ ಅಭಿಮಾನಿಗಳು ಸಂಗಮೇಶ್ವರ್‌ಗೆ ಸಚಿವ ಸ್ಥಾನ ಲಭಿಸುವ ನಿರೀಕ್ಷೆ ಹೊಂದಿದ್ದರು.   

ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ಕಡಿವಾಣ ಹಾಕಬೇಕು : ತರಳಬಾಳು ಶ್ರೀಗಳು

Image
ಭದ್ರಾವತಿ ವಿಐಎಸ್‌ಎಸ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೮ನೇ ದಿನದ ನ್ಯಾಯಾಂಗ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಶನಿವಾರ ದಿವ್ಯಸಾನಿಧ್ಯವಹಿಸಿ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳವರು ಆಶೀರ್ವಚನ ನೀಡಿದರು.      ಭದ್ರಾವತಿ : ಇಂದಿನ ಸಮಾಜದಲ್ಲಿ ಹೆಚ್ಚುತ್ತಿರುವ ಅವ್ಯವಸ್ಥೆಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿ ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಕಂಡುಬರುತ್ತಿದ್ದು, ಸರ್ಕಾರ ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಿಗೆ ಕಡಿವಾಣ ಹಾಕುವ ನಿರ್ಧಾರ ಕೈಗೊಳ್ಳಬೇಕೆಂದು ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳವರು ಆಗ್ರಹಿಸಿದರು.       ನಗರದ ವಿಐಎಸ್‌ಎಸ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೮ನೇ ದಿನದ ನ್ಯಾಯಾಂಗ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಶನಿವಾರ ದಿವ್ಯಸಾನಿಧ್ಯವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.      ಮಠಪೀಠಗಳು ಹಿಂದಿನ ಕಾಲದಿಂದಲೂ ನ್ಯಾಯದಾನ ಮಾಡುವ ಪರಂಪರೆ ಹೊಂದಿವೆ. ರಾಜಶಾಸನದ ಕಾಲದಲ್ಲಿ ರಾಜನಿಗೂ ಧರ್ಮವಿವೇಚನೆ ಇದ್ದು, ಧರ್ಮಾಧಾರಿತ ಆಡಳಿತ ನಡೆದುಕೊಂಡು ಬಂದಿತ್ತು ಎಂದು ಹೇಳಿದರು.       ಧರ್ಮಕ್ಕೆ ಯಾವುದೇ ಸೀಮಾರೇಖೆಗಳಿಲ್ಲ. ಆದರೆ ಕಾನೂನು ಆಯಾಯ ದೇ...

ಧರ್ಮದ ತಳಹದಿಯ ಮೇಲೆ ಕಾನೂನು ರೂಪುಗೊಂಡಿದೆ - ಜಸ್ಟೀಸ್ ವೇದವ್ಯಾಸ ಶ್ರೀಶಾನಂದ

Image
ಭದ್ರಾವತಿ ನಗರದ ವಿಐಎಸ್‌ಎಸ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಶನಿವಾರ ೮ನೇ ದಿನದ ನ್ಯಾಯಾಂಗ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ  ವೇದವ್ಯಾಸಾಚಾರ್ ಶ್ರೀಶಾನಂದ ಪಾಲ್ಗೊಂಡು ಮಾತನಾಡಿದರು.       ಭದ್ರಾವತಿ :  ಧರ್ಮಕ್ಕೆ ಯಾವುದೇ ಭಾಷೆಯಲ್ಲಿಯೂ ಸಮನಾರ್ಥಕ ಪದವಿಲ್ಲ. ಧರ್ಮದಲ್ಲಿ ದೈವ ಋಣ, ಪಿತೃ ಋಣ, ಋಷಿ ಋಣ ಮತ್ತು ರಾಷ್ಟ್ರ ಋಣ ಎಂಬ ನಾಲ್ಕು ಋಣಗಳಿದ್ದು, ಇವುಗಳನ್ನು ಪರಿಪೂರ್ಣವಾಗಿ ತೀರಿಸಿದಾಗ ಧರ್ಮ ಮತ್ತು ನ್ಯಾಯ ಸ್ವಯಂವಾಗಿ ಸ್ಥಾಪಿತವಾಗುತ್ತದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ  ವೇದವ್ಯಾಸಾಚಾರ್ ಶ್ರೀಶಾನಂದ ಹೇಳಿದರು.       ಅವರು ಶನಿವಾರ ನಗರದ ವಿಐಎಸ್‌ಎಸ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೮ನೇ ದಿನದ ನ್ಯಾಯಾಂಗ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ವಿಶ್ವಕ್ಕೆ ಮೊದಲು ಧರ್ಮವನ್ನು ಕೊಟ್ಟಿದ್ದು ಭಾರತ ದೇಶ. ಅನ್ಯಾಯ ಮಾರ್ಗದಿಂದ ಸಂಪಾದಿಸಿದ ಹಣವನ್ನು ಮಠಗಳಿಗೆ ಅಥವಾ ಧಾರ್ಮಿಕ ಸಂಸ್ಥೆಗಳಿಗೆ ನೀಡಿದರೂ ಪುಣ್ಯ ದೊರೆಯುವುದಿಲ್ಲ. ಅನ್ಯಾಯ ಮಾರ್ಗದಿಂದ ಬಂದ ಹಣ ಜೀವನಕ್ಕೆ ಮಾರಕವಾಗುತ್ತದೆ. ಸತ್ಯವನ್ನು ಹೇಳಲು ಧೈರ್ಯ ಬೇಕಾಗುತ್ತದೆ. ಆದರ...

ನೋಡುಗರ ಮನಸೂರೆಗೊಳಿಸಿದ ತರಳಬಾಳು ಕುಸ್ತಿ ಅಖಾಡ

Image
ತರಳಬಾಳು ಹುಣ್ಣಿಮೆಯಲ್ಲಿ ಕುಸ್ತಿ ಪೈಲ್ವಾನರ ಅಬ್ಬರ ಭದ್ರಾವತಿಯ ತರಳಬಾಳು ಹುಣ್ಣಿಮೆಯಲ್ಲಿ ಶನಿವಾಸ ಜರುಗಿದ ಕುಸ್ತಿ ಸ್ಪರ್ಧೆಗಳಿಗೆ ರಾಷ್ಟ್ರೀಯ ಕುಸ್ತಿ ಪಟು ಮಹೇಶ್ವರಪ್ಪ ಚಾಲನೆ ನೀಡಿದರು.      ಭದ್ರಾವತಿ : ತರಳಬಾಳು ಹುಣ್ಣಿಮೆಯ ಮಹಾಮಂಟಪ ಮುಂಭಾಗದಲ್ಲಿ ಸಿದ್ಧಗೊಳಿಸಿದ ಪಾರಂಪರಿಕ ಮಾದರಿಯ ಕುಸ್ತಿ ಅಖಾಡದಲ್ಲಿ ಶನಿವಾರ ಜರುಗಿದ ರಾಜ್ಯ ಮಟ್ಟದ ಮುಕ್ತ ಹಾಗೂ ಆಹ್ವಾನಿತ ಕುಸ್ತಿ ಸ್ಪರ್ಧೆಗಳಿಗೆ ಭದ್ರಾವತಿಯ ರಾಷ್ಟ್ರೀಯ ಕುಸ್ತಿ ಪಟು ಮಹೇಶ್ವರಪ್ಪ ಚಾಲನೆ ನೀಡಿದರು.      ಕಣದಲ್ಲಿ ಜಗಜಟ್ಟಿಗಳು ತಮ್ಮದೇ ಆದ ಪಟ್ಟು ಹಾಕಿ ಕುಸ್ತಿ ಹಿಡಿದರೆ, ಇತ್ತ ಮೈದಾನದ ಸುತ್ತ ಕಿಕ್ಕಿರಿದು ನಿಂತಿದ್ದ ಪ್ರೇಕ್ಷಕರು ಶಿಳ್ಳೆ, ಚೆಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು. ಪೈಲ್ವಾನ್‌ಗಳ ಕುಸ್ತಿ ಹೋರಾಟ ರೋಚಕ ತಿರುವುಗಳಿಗೆ ಸಾಕ್ಷಿ ಆಯಿತು.  ಪೈಲ್ವಾನರು ತೊಡೆ ತಟ್ಟುತ್ತಾ ಮೈಯೆಲ್ಲಾ ಮಣ್ಣಾಗಿಸಿಕೊಂಡು ಅಂಗಳದ ತುಂಬೆಲ್ಲಾ ಪಟ್ಟುಗಳನ್ನು ಪ್ರದರ್ಶಿಸಿ ಗೆಲ್ಲಲು ಶಕ್ತಿ ಪ್ರದರ್ಶಿಸಿದರು.  ಭದ್ರಾವತಿಯ  ತರಳಬಾಳು ಹುಣ್ಣಿಮೆಯಲ್ಲಿ ನೋಡುಗರ ಮನಸೂರೆಗೊಳಿಸಿದ ಕುಸ್ತಿ ಅಖಾಡಗಳು.      ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಹರಿಹರ, ಮೈಸೂರು, ಕನಕಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ೧೫೦ಕ್ಕೂ ಹೆಚ್ಚು ಕುಸ್ತಿ ಪಟುಗಳು ಭಾಗವಹಿಸಿದ್ದರು. ಇಬ್ಬರೂ ಪೈಲ...

ಫೆ.೧ರಂದು ತರಳಬಾಳು ಹುಣ್ಣಿಮೆ ಮಹೋತ್ಸವದ ಕಡೆಯ ದಿನ : ತರಳಬಾಳು ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ

Image
ಭದ್ರಾವತಿಯಲ್ಲಿ ಭಾನುವಾರ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಉತ್ಸವ ಸಮಿತಿ ಸಂಚಾಲಕ ಜಗದೀಶ್ ಗೌಡ್ರು ಮನವಿ ಮಾಡಿದರು.       ಭದ್ರಾವತಿ: ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಕಡೆಯ ದಿನವಾದ ಫೆ.೧ರ ಭಾನುವಾರ ವಿಜೃಂಭಣೆಯಿಂದ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಉತ್ಸವ ಸಮಿತಿ ಸಂಚಾಲಕ ಜಗದೀಶ್ ಗೌಡ್ರು ಮನವಿ ಮಾಡಿದರು.       ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ಮಧ್ಯಾಹ್ನ ೧.೩೦ಕ್ಕೆ ನಗರದ ಚನ್ನಗಿರಿ ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಮುಂಭಾಗದಿಂದ ಆರಂಭಗೊಳ್ಳಲಿದ್ದು, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಡಾ. ರಾಜಕುಮಾರ್ ರಸ್ತೆ ಮೂಲಕ ಹಾಲಪ್ಪ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ, ರಿಲಯನ್ಸ್ ...

ಫೆ.೧ರಂದು ಮಡಿವಾಳ ಮಾಚಿದೇವ ಜಯಂತಿ

Image
     ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಫೆ.೧ರ ಭಾನುವಾರ ಹಳೇನಗರದ ಬಸವೇಶ್ವರ ವೃತ್ತದ ಮಾಚಿದೇವ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಹಮ್ಮಿಕೊಳ್ಳಲಾಗಿದೆ.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಉದ್ಘಾಟಿಸಲಿದ್ದಾರೆ.       ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಪೌರಾಯುಕ್ತ ಕೆ.ಎನ್ ಹೇಮಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ತಾಲೂಕು ಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 

ಮಾಜಿ ಸೈನಿಕ ರವಿ ಅಪಘಾತದಲ್ಲಿ ನಿಧನ

Image
ರವಿ       ಭದ್ರಾವತಿ : ಕೇರಳ ಪ್ರವಾಸಕ್ಕೆ ತೆರಳಿದ್ದ ನಗರದ ಜನ್ನಾಪುರ ನಿವಾಸಿ, ಮಾಜಿ ಸೈನಿಕ ರವಿ(೬೫) ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.       ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ರವಿಯವರು ಕಳೆದ ವಾರ ಹೊಸ ಕಾರು ಖರೀದಿಸಿದ್ದು, ಈ ಹಿನ್ನಲೆಯಲ್ಲಿ ಕುಟುಂಬಸ್ಥರೊಂದಿಗೆ ಕಳೆದ ೫ ದಿನಗಳ ಹಿಂದೆ ಕೇರಳ ಪ್ರವಾಸಕ್ಕೆ ತೆರಳಿದ್ದರು. ಅಪಘಾತದಲ್ಲಿ ರವಿ ತೀವ್ರ ಗಾಯಗೊಂಡು ಸಾವನ್ನಪ್ಪಿದ್ದು, ಇವರ ಮೃತದೇಹ ಶುಕ್ರವಾರ ರಾತ್ರಿ ನಗರಕ್ಕೆ ಬರಲಿದೆ. ರವಿ ಅವರ ಪತ್ನಿ ಲಕ್ಷ್ಮೀಯವರು ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.       ರವಿಯವರು ನಂದಿನಿ ಹಾಲು ಮಾರಾಟಗಾರರಾಗಿ ಚಿರಪರಿಚಿತರಾಗಿದ್ದು, ಜನ್ನಾಪುರ ವ್ಯಾಪ್ತಿಯ ಅವರ ಗೆಳೆಯ ಬಳಗದಲ್ಲಿ ದುಃಖ ಮನೆ ಮಾಡಿದೆ. 

ಟಿ.ಆರ್.ಪಿ ಹೆಚ್ಚಿಸಲು ಟಿ.ವಿ ಚಾನೆಲ್‌ಗಳ ಪೈಪೋಟಿ : ಸಮಾಜದ ಮೂಲ ಮೌಲ್ಯಗಳು ಮೂಲೆಗುಂಪು

Image
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಆತಂಕ  ಭದ್ರಾವತಿ ನಗರದ ಹುಡ್ಕೋ ಕಾಲೋನಿ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೭ನೇ ದಿನದ ಶುಕ್ರವಾರದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಪಾಲ್ಗೊಂಡು ಮಾತನಾಡಿದರು.       ಭದ್ರಾವತಿ : ಸಮೂಹ ಮಾಧ್ಯಮಗಳು ಸಮಾಜವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುವ ಜವಾಬ್ದಾರಿ ಹೊಂದಿವೆ. ಆದರೆ ಟಿ.ಆರ್.ಪಿ ಕೇಂದ್ರಿತ ವರದಿಗಳಿಂದ ಸಮಾಜದಲ್ಲಿ ತಪ್ಪು ಸಂದೇಶಗಳು ಹರಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಮಾಧ್ಯಮಗಳು ಸತ್ಯ, ಸಂಯಮ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೊದಲಾಗಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಆತಂಕ ವ್ಯಕ್ತಪಡಿಸಿದರು.      ಅವರು ನಗರದ ಹುಡ್ಕೋ ಕಾಲೋನಿ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೭ನೇ ದಿನದ ಶುಕ್ರವಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ಸಮೂಹ ಮಾಧ್ಯಮಗಳು ಸಮಾಜದ ಕನ್ನಡಿ ಇದ್ದಂತೆ ಕಾರ್ಯನಿರ್ವಹಿಸಬೇಕಿದ್ದು, ಆದರೆ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಸ್ಪರ್ಧೆಯಲ್ಲಿ ಇಂದು ಅನೇಕ ಟಿವಿ ಚಾನೆಲ್‌ಗಳು ಸಮಾಜದ ಮೂಲ ಮೌಲ್ಯಗಳನ್ನು ಮರೆತು ಸಂವೇದನಾಶೀಲ ವಿಷಯಗಳ ಬೆನ್ನಟ್ಟುತ್ತಿವೆ ಎಂದು...

ವಿಐಎಸ್‌ಎಲ್ ಕಾರ್ಖಾನೆಯಿಂದ ದೊಡ್ಡೇರಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ, ಸಮಾಲೋಚನಾ ಶಿಬಿರ

Image
ಕೇಂದ್ರ ಉಕ್ಕು ಪ್ರಾಧಿಕಾರ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್) ಯೋಜನೆಯಡಿ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಮಗ್ರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣೆ ಹಾಗು ಸಮಾಲೋಚನಾ ಶಿಬಿರ ಯಶಸ್ವಿಯಾಗಿ ಜರುಗಿತು.       ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ(ಸಿಎಸ್‌ಆರ್) ಯೋಜನೆಯಡಿ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಮಗ್ರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣೆ ಹಾಗು ಸಮಾಲೋಚನಾ ಶಿಬಿರ ಯಶಸ್ವಿಯಾಗಿ ಜರುಗಿತು.       ಸಾಮಾನ್ಯ ತಪಾಸಣೆ, ನೇತ್ರ ವಿಜ್ಞಾನ, ದಂತ ವೈದ್ಯ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಅಲ್ಲದೆ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆಗಳನ್ನು ನಡೆಯಿತು.      ಕಾರ್ಖಾನೆಯ ಮು...

ತರಳಬಾಳು ಹುಣ್ಣಿಮೆ ಮಹೋತ್ಸವ : ವಿಜ್ಞಾನ ವಸ್ತು ಪ್ರದರ್ಶನಕ್ಕೆ ತರಳಬಾಳು ಶ್ರೀಗಳಿಂದ ಚಾಲನೆ

Image
ಹೆಚ್ಚಿನ ಪಾಂಡಿತ್ಯದೊಂದಿಗೆ ಶ್ರೇಷ್ಠ ವಿಜ್ಞಾನಿಗಳಾಗಿ ಹೊರಹೊಮ್ಮಿ  ಭದ್ರಾವತಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-೨೦೨೬ರ ಏಳನೇ ದಿನದ ಶುಕ್ರವಾರ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು.      ಭದ್ರಾವತಿ: ವಿಜ್ಞಾನ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗದೆ ವಿದ್ಯಾರ್ಥಿಗಳ ಜೀವನದ ಅವಿಭಾಜ್ಯ ಅಂಗವಾಗಬೇಕು. ಎಲ್ಲಾ ವಿದ್ಯಾರ್ಥಿಗಳು ಹೆಚ್ಚಿನ ಪಾಂಡಿತ್ಯ ಹೊಂದುವ ಮೂಲಕ ಶ್ರೇಷ್ಠ ವಿಜ್ಞಾನಿಗಳಾಗಿ ರೂಪುಗೊಳ್ಳಬೇಕೆಂದು ಸಿರಿಗೆರೆ ತರಳಬಾಳು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರು ಆಶಿಸಿದರು.      ಶ್ರೀಗಳು ತರಳಬಾಳು ಹುಣ್ಣಿಮೆ ಮಹೋತ್ಸವ-೨೦೨೬ರ ಏಳನೇ ದಿನದ ಕಾರ್ಯಕ್ರಮದಲ್ಲಿ ಶುಕ್ರವಾರ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.      ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಜೊತೆಗೂಡಿ ಹೊಸ ಅವಿಷ್ಕಾರ ಅನುಷ್ಠಾನಗೊಳಿಸುವ ಮನೋಭಾವ ಮತ್ತು ಪ್ರಾಯೋಗಿಕ ಜ್ಞಾನ ಹೆಚ್ಚಾಗುತ್ತದೆ ಎಂದರು.       ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಇದು ಭವಿಷ್ಯದ ವಿಜ್ಞಾನಿಗಳು, ಸಂಶೋಧಕರು ಮತ್ತು ನವೋದ್ಯಮಿಗಳ ಬೆಳವಣಿಗೆಗೆ ಬಲವಾದ ನೆಲೆಯನ್ನು ಒದಗಿಸುತ್ತದ...

ತರಳಬಾಳು ಹುಣ್ಣಿಮೆ : ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗಳಿಗೆ ಚಾಲನೆ

Image
ದೈಹಿಕ, ಮಾನಸಿಕ ಬೆಳವಣಿಗೆಗೆ ಯೋಗಾಸನ ಸಹಕಾರಿ ಭದ್ರಾವತಿಯಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವ-೨೦೨೬ರ ಏಳನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.      ಭದ್ರಾವತಿ: ಯೋಗ ಕೇವಲ ಸ್ಪರ್ಧೆಗೆ ಮಾತ್ರ ಸೀಮಿತವಾಗದೆ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಭಾಗವಾಗಬೇಕು ಎಂದು ಅಂತರಾಷ್ಟ್ರೀಯ ಯೋಗಪಟು ಬಿ.ಓ. ಸುದರ್ಶನ್ ಹೇಳಿದರು.      ಅವರು ಶುಕ್ರವಾರ ನಗರದ ಹುಡ್ಕೋ ಕಾಲೋನಿ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವ-೨೦೨೬ರ ಏಳನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.      ಯೋಗಾಸನದಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಯೋಗದಿಂದ ರೋಗ ಮುಕ್ತ ಜೀವನ ನಡೆಸಬಹುದು. ಯೋಗ ಒಲಂಪಿಕ್ಸ್‌ಕ್ರೀಡೆಗಳಲ್ಲಿ ಒಂದಾಗಿ ಸೇರ್ಪಡೆಗೊಳಿಸುವುದು ಕೇಂದ್ರ ಸರ್ಕಾರದ ಆಶಯವಾಗಿದೆ ಎಂದರು.       ಯೋಗ ಸರ್ಕಸ್ ಅಲ್ಲ, ಸರ್ಕಸ್ ದೇಹಕ್ಕೆ ಮಾತ್ರ ಸೀಮಿತವಾಗಿದೆ. ಯೋಗ ದೇಹ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ಸಾಧನವಾಗಿದೆ. ಇಡೀ ಜಗತ್ತಿನ ೧೯೬ ದೇಶಗಳಲ್ಲಿ ಜೂನ್ ೨೧ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಮೂಲಕ ನಮ್ಮ ದೇಶಕ್ಕೆ ದೊಡ್ಡ ಗೌರವ ಲಭಿಸುತ್ತಿದೆ ಎಂದರು.       ಶ್ರೀ ...

ಎಸ್. ಯೋಗೇಂದ್ರನಾಯ್ಕ ನಿಧನ

Image
ಎಸ್. ಯೋಗೇಂದ್ರನಾಯ್ಕ              ಭದ್ರವತಿ: ತಾಲೂಕಿನ ತಳ್ಳಿಕಟ್ಟೆ ವ್ಯವಸಾಯೋತ್ಪನ್ನ ಸಹಕಾರ ಸಂಘದ ಮಾಜಿ ನಿರ್ದೇಶಕ, ನಾಗತಿಬೆಳಗಲು ತಾಂಡ ನಿವಾಸಿ ಎಸ್. ಯೋಗೇಂದ್ರನಾಯ್ಕ(೬೨) ಗುರುವಾರ ನಿಧನ ಹೊಂದಿದರು.       ಪತ್ನಿ, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್ ಸೇರಿದಂತೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಬಂಜಾರ ಸಮುದಾಯದ ಮುಖಂಡರಾದ ಯೋಗೇಂದ್ರನಾಯ್ಕರವರು ಶ್ರೀ ನಂಜುಂಡೇಶ್ವರ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ವಿಧಾನಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಅವರ ಜಮೀನಿನ ತೋಟದಲ್ಲಿ ನೆರವೇರಿತು. ಯೋಗೇಂದ್ರನಾಯ್ಕ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗ್ರಾಮದ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಹುಣ್ಣಿಮೆ ಮಹೋತ್ಸವದ ಮೂಲಕ ತರಳಬಾಳು ಶ್ರೀಗಳು ನಾಡಿನ ಜನರಿಗೆ ಬೆಳಕು ಚೆಲ್ಲುತ್ತಿದ್ದಾರೆ : ಡಿ.ಕೆ ಶಿವಕುಮಾರ್

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಸರ್ವ ಧರ್ಮ ಸಮನ್ವಯ ವಿಷಯ ಕುರಿತ ೬ನೇ ದಿನದ ಗುರುವಾರ ಸಂಜೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು.       ಭದ್ರಾವತಿ: ತರಳಬಾಳು ಹುಣ್ಣಿಮೆ ಮಹೋತ್ಸವ ಒಂದು ಇತಿಹಾಸವಾಗಿದೆ. ಶ್ರೀಗಳು ಸರ್ವ ಧರ್ಮ ಸಮನ್ವಯ ಕುರಿತ ಕಾರ್ಯಕ್ರಮ ಆಯೋಜನೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ. ದೇವ ಒಂದೇ ನಾಮ ಹಲವು ಎಂಬ ಸಂದೇಶ ಸಾರಲಾಗುತ್ತಿದೆ. ಹುಣ್ಣಿಮೆ ಮಹೋತ್ಸವದ ಮೂಲಕ ನಾಡಿನ ಜನರಿಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದ್ದಾರೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.       ಅವರು ಗುರುವಾರ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಸರ್ವ ಧರ್ಮ ಸಮನ್ವಯ ವಿಷಯ ಕುರಿತ ೬ನೇ ದಿನದ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ಮನಷ್ಯನಿಗೆ ನಂಬಿಕೆ ಬಹಳ ಮುಖ್ಯವಾಗಿದ್ದು, ನಂಬಿಕೆ ಎಂಬುದು ಒಂದು ಮರದ ಬೇರು ಇದ್ದದಂತೆ. ನಾವೆಲ್ಲರೂ ಇಂತಹ ಶ್ರೀಗಳ ವಿಚ...

ಭಾರತ ವಿಶ್ವಕ್ಕೆ ಮಾದರಿಯಾಗಿದ್ದು, ಇಲ್ಲಿ ಎಂದಿಗೂ ಅರಾಜಕತೆ ರೂಪುಗೊಳ್ಳಲು ಸಾಧ್ಯವಿಲ್ಲ : ಬಿ.ಎಲ್ ಸಂತೋಷ್

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ  ಸರ್ವ ಧರ್ಮ ಸಮನ್ವಯ ವಿಷಯ ಕುರಿತ ೬ನೇ ದಿನದ ಸಂಜೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮಾತನಾಡಿದರು.       ಭದ್ರಾವತಿ : ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ  ಸರ್ವ ಧರ್ಮ ಸಮನ್ವಯ ವಿಷಯ ಕುರಿತ ೬ನೇ ದಿನದ ಸಂಜೆ ಕಾರ್ಯಕ್ರಮದಲ್ಲಿ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ದಿವ್ಯ ಸಾನಿಧ್ಯವಹಿಸಿದ್ದರು.      ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮಾತನಾಡಿ, ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಗಲಭೆ, ಯುದ್ಧಗಳನ್ನು ಗಮನಿಸಿದಾಗ ನಮ್ಮ ದೇಶ ಅತ್ಯಂತ ಬಲಿಷ್ಠವಾಗಿದ್ದು, ಈ ದೇಶದಲ್ಲಿ ಎಂದಿಗೂ ಅರಾಜಕತೆ ನಡೆಯುವುದಿಲ್ಲ. ಇದಕ್ಕೆ ಕಾರಣ ಸರ್ವಧರ್ಮಗಳ ಅನೇಕ ಮಹಾನ್ ಸಾಧು-ಸಂತರು ರೂಪಿಸಿಕೊಟ್ಟಿರುವ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುತ್ತಿದ್ದೇವೆ. ಜಗತ್ತಿನ ಇತರೆ ರಾಷ್ಟ್ರಗಳಲ್ಲ...

ಕೂಡ್ಲಿಗೆರೆ ಗ್ರಾಮದಲ್ಲಿ `ಹಿಂದೂ ಸಂಗಮ'

Image
ಹಿಂದೂ ಸಂಗಮ ಆಯೋಜನ ಸಮಿತಿ, ಹೊಳೆಹೊನ್ನೂರು ವತಿಯಿಂದ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ : ಹಿಂದೂ ಸಂಗಮ ಆಯೋಜನ ಸಮಿತಿ, ಹೊಳೆಹೊನ್ನೂರು ವತಿಯಿಂದ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಪ್ರಾಂತ ಗೋ ರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಕಾರ್ಕಳರವರು ಪಾಲ್ಗೊಂಡು ಮಾತನಾಡಿದರು.       ಕಾರ್ಯಕ್ರಮ ಆರಂಭಕ್ಕೂ ಮುನ್ನ ಶೋಭಾ ಯಾತ್ರೆ ನಡೆಯಿತು. ಹಿಂದೂ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ವೇದಿಕೆ ಕಾರ್ಯಕ್ರಮದಲ್ಲಿ ಅಯೋಜನಾ ಸಮಿತಿ ಅಧ್ಯಕ್ಷ ಎಡೆಹಳ್ಳಿ ಮಹೇಶ್ವರಪ್ಪ, ಪ್ರಮುಖರಾದ ನರೇಂದ್ರ ಪ್ರಸಾದ್, ಜಮೀನ್ದಾರ್ ಕೂಡ್ಲಿಗೆರೆ ಹಾಲೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ತರಳಬಾಳು ಹುಣ್ಣಿಮೆ ಮಹೋತ್ಸವ : ಜನಪದ ನೃತ್ಯ ಅನನ್ಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

Image
ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಚನ ನೃತ್ಯ ಮತ್ತು ಜನಪದ ನೃತ್ಯ ಸ್ಪರ್ಧೆಯಲ್ಲಿ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆಯ ಪ್ರೌಢಶಾಲೆ ವಿದ್ಯಾರ್ಥಿಗಳು ಭಾವಹಿಸಿ ಉತ್ತಮ ಪ್ರದರ್ಶನದೊಂದಿಗೆ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.       ಭದ್ರಾವತಿ : ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ  ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಚನ ನೃತ್ಯ ಮತ್ತು ಜನಪದ ನೃತ್ಯ ಸ್ಪರ್ಧೆಯಲ್ಲಿ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆಯ ಪ್ರೌಢಶಾಲೆ ವಿದ್ಯಾರ್ಥಿಗಳು ಭಾವಹಿಸಿ ಉತ್ತಮ ಪ್ರದರ್ಶನದೊಂದಿಗೆ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.       ೮ನೇ ತರಗತಿ ವಿದ್ಯಾರ್ಥಿಗಳು ವಚನ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮವಾಗಿ ಪ್ರದರ್ಶನ ನೀಡಿದ್ದು, ೯ನೇ ತರಗತಿ ವಿದ್ಯಾರ್ಥಿಗಳ ಜನಪದ ನೃತ್ಯ ಪ್ರದರ್ಶಿಸಿ ಪ್ರಥಮ ಬಹುಮಾನ ಪಡೆದುಕೊಂಡು ಕೀರ್ತಿ ತಂದಿದ್ದಾರೆ. ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹ...