ಗೋರ್ ಭಾಯ್ ಸಂಘದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ
ಭದ್ರಾವತಿ ತಾಲೂಕು ಬಂಜಾರ ಗೋರ್ ಭಾಯ್ ಸಂಘದಿಂದ ನಾಗತಿಬೆಳಗಲು ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಭದ್ರಾವತಿ: ತಾಲೂಕು ಬಂಜಾರ ಗೋರ್ ಭಾಯ್ ಸಂಘ ಸರ್ಕಾರಿ ಶಾಲೆಗಳ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಅವರ ಶಿಕ್ಷಣಕ್ಕೆ ನೆರವಾಗಿದೆ. ತಾಲೂಕಿನ ನಾಗತಿಬೆಳಗಲು ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗಲಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ನೀಡುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ತಾಲೂಕು ಬಂಜಾರ ಗೋರ್ ಭಾಯ್ ಸಂಘ ನೆರವಾಗಿದ್ದು, ಸಂಘದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಭದ್ರಾವತಿ ತಾಲೂಕು ಬಂಜಾರ ಗೋರ್ ಭಾಯ್ ಸಂಘದಿಂದ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಬಂಜಾರ ಸಮಾಜದ ತರೀಕೆರೆ ಮಂಜು ಮಹಾರಾಜ್ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿದ್ದು, ಸಂಘದ ಅಧ್ಯಕ್ಷ ಎಲ್. ವೇದೇಶ್ ಅಧ್ಯಕ್ಷತೆವಹಿಸಿದ್ದರು. ಪ್ರಮುಖರಾದ ಹಾಲೇಶ್ ನಾಯ್ಕ, ಸಂಘದ ಉಪಾಧ್ಯಕ್ಷ ಶಂಕರನಾಯ್ಕ, ಕಾರ್ಯದರ್ಶಿ ಸುರೇಶ್ ನಾಯ್ಕ ಹಾಗು ಸಂಘದ ಪದಾಧಿಕಾರಿಗಳು, ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.