ರೇಡಿಯೋ ಕಿಸಾನ್ ದಿವಸ್ ಹಿನ್ನಲೆಯಲ್ಲಿ ಪ್ರಗತಿಪರ ಕೃಷಿಕ ಭಂಡಾರಹಳ್ಳಿ ಶ್ರೀಧರ್ಗೆ ಸನ್ಮಾನ
ಭದ್ರಾವತಿ ತಾಲೂಕಿನ ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗು ಶಿವಮೊಗ್ಗ ಕೃಷಿ ತಂತ್ರಜ್ಞರ ಸಂಸ್ಥೆ ಸಹಯೋಗದೊಂದಿಗೆ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಫೆ.೧೫ರಂದು ರೇಡಿಯೋ ಕಿಸಾನ್ ದಿವಸದ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿಪರ ಕೃಷಿಕ ಭಂಡಾರಹಳ್ಳಿ ಶ್ರೀಧರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ: ತಾಲೂಕಿನ ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗು ಶಿವಮೊಗ್ಗ ಕೃಷಿ ತಂತ್ರಜ್ಞರ ಸಂಸ್ಥೆ ಸಹಯೋಗದೊಂದಿಗೆ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಫೆ.೧೫ರಂದು ರೇಡಿಯೋ ಕಿಸಾನ್ ದಿವಸದ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿಪರ ಕೃಷಿಕ ಭಂಡಾರಹಳ್ಳಿ ಶ್ರೀಧರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ೨೦೦೪ರಲ್ಲಿ ದೇಶಾದ್ಯಂತ ಕಿಸಾನ್ ವಾಣಿ ಕಾರ್ಯಕ್ರಮ ಫೆ.೧೫ರಂದು ಪ್ರಾರಂಭಿಸಿದ ಸವಿನೆನಪಿಗಾಗಿ ಪ್ರತಿ ವರ್ಷ ಫೆ.೧೫ ರೇಡಿಯೋ ಕಿಸಾನ್ ದಿವಸ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ರೈತರ ಸಬಲೀಕರಣ, ಯುವ ರೈತರನ್ನು ಪ್ರೋತ್ಸಾಹಿಸಲು ಮತ್ತು ಆಧುನಿಕ ಕೃಷಿ ಪದ್ದತಿ ಪ್ರೋತ್ಸಾಹಿಸುವ ಧ್ಯೇಯವಾಕ್ಯ ಹೊಂದಲಾಗಿದೆ. ಹಳ್ಳಿಕೆರೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ಸುಮಾರ...