Posts

ಕೇರಳ ಸಮಾಜಂ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Image
ಭದ್ರಾವತಿ ನಗರದ ನ್ಯೂಟೌನ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಸಭಾಭವನದಲ್ಲಿ ಕೇರಳ ಸಮಾಜಂ ಮಹಿಳಾ ಘಟಕದಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕೇರಳ ಸಮಾಜದ ಅಧ್ಯಕ್ಷ ಗಂಗಾಧರನ್ ಉದ್ಘಾಟಿಸಿದರು.      ಭದ್ರಾವತಿ : ನಗರದ ಕೇರಳ ಸಮಾಜಂ ಮಹಿಳಾ ಘಟಕದಿಂದ ನ್ಯೂಟೌನ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು.      ಸಮಾಜದ ಅಧ್ಯಕ್ಷೆ ಶೋಭಾ ಬಾಲಚಂದ್ರನ್ ಅಧ್ಯಕ್ಷತೆ ವಹಿಸಿದ್ದರು. ಸುರಭಿ ವ್ಯಸನ ಮುಕ್ತ ಕೇಂದ್ರದ ನಿರ್ದೇಶಕಿ ವಿ.ವಿ.ಲತಾ, ಹಿರಿಯ ಪೌರ ಕಾರ್ಮಿಕರಾದ ಸುಶೀಲಮ್ಮ, ಸಮಾಜದ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ಪಿ.ಸಿ.ಕುಮಾರ್, ಪದಾಧಿಕಾರಿಗಳಾದ ವಾಸಂತಿ, ಕಲ್ಯಾಣಿ ಶಶಿಧರನ್, ಯಶೋಧ, ಎಸ್.ವಿಜಯಲಕ್ಷ್ಮಿ, ಸೀತಾಲಕ್ಷ್ಮಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.       ಕೇರಳ ಸಮಾಜಂ ಅಧ್ಯಕ್ಷ ಗಂಗಾಧರನ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮತದಾರರ ಪಟ್ಟಿಯ (ಎಸ್‌ಐಆರ್) ವಿಶೇಷ ಸಮಗ್ರ ಪರಿಷ್ಕರಣೆ

Image
ಭದ್ರಾವತಿ ತಾಲೂಕು ಕಚೇರಿಯಲ್ಲಿ ಸಭಾಂಗಣದಲ್ಲಿ ವಿಧಾನಸಭಾ ಕ್ಷೇತ್ರ-೧೧೨ ಮತದಾರರು ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ತಹಸೀಲ್ದಾರ್ ಪರುಸಪ್ಪ ಕುರುಬರ ಸಭೆ ನಡೆಸಿ ಮಾಹಿತಿ ನೀಡಿದರು.        ಭದ್ರಾವತಿ: ವಿಧಾನಸಭಾ ಕ್ಷೇತ್ರ-೧೧೨ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯ ಏಪ್ರಿಲ್-೨೦೨೬ರಿಂದ ಆರಂಭಗೊಳ್ಳಲಿದೆ. ಮತದಾರರು ೨೦೦೨ ಮತ್ತು ೨೦೨೫ ರ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ಪ್ರೋಜಿನಿ ಮಾಡಿಸಿಕೊಳ್ಳಬೇಕಾಗಿದೆ ಎಂದು ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ತಹಸೀಲ್ದಾರ್ ಪರುಸಪ್ಪ ಕುರುಬರ ತಿಳಿಸಿದರು.      ಅವರು ತಮ್ಮ ಕಛೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಮಾಹಿತಿ ನೀಡಿದರು. ಈ ವಿಶೇಷ ಪರಿಷ್ಕರಣೆಯು ೨೦೦೨ ಮತದಾರ ಪಟ್ಟಿಯಲ್ಲಿರುವ ಮತದಾರರನ್ನು ೨೦೨೫ರ ಮತದಾರರ ಪಟ್ಟಿಯಲ್ಲಿರುವಂತೆ ಗುರುತಿಸಿಕೊಳ್ಳಲು ಮ್ಯಾಪಿಂಗ್ ಮತ್ತು ಪ್ರೋಜಿನಿ ಕಾರ್ಯ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮತದಾರರು ತಾವು ಮತದಾನ ಮಾಡುವ ಕೇಂದ್ರದಲ್ಲಿ ಬಿಎಲ್‌ಓ ಅವರನ್ನು ಸಂಪರ್ಕಿಸಿ ೨೦೦೨ರಲ್ಲಿ ಮತದಾನ ಮಾಡಿದವರು ೨೦೨೫ ಮತಪಟ್ಟಿಯಲ್ಲಿ ಹೆಸರುಗಳು ಇರುವಂತೆ ನೋಡಿಕೊಳ್ಳಬೇಕು. ಅದರಲ್ಲಿ ಸಂತತಿ ಸೇರ್ಪಡೆ-೧೮ ವರ್ಷ ಮೇಲ್ಪಟ್ಟ ೪೦ ವರ್ಷದೊಳಗಿ...

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಘಟನಾ ಸ್ಥಳಕ್ಕೆ ಎಎಸ್‌ಪಿ ಭೇಟಿ : ಪರಿಶೀಲನೆ

Image
ಕಳೆದ ೪ ದಿನಗಳ ಹಿಂದೆ ಭದ್ರಾವತಿ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಬಿಳಿಕಿ ತಿರುವಿನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಎ.ಜಿ ಕಾರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಉಪವಿಭಾಗದ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.        ಭದ್ರಾವತಿ: ಕಳೆದ ೪ ದಿನಗಳ ಹಿಂದೆ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಬಿಳಿಕಿ ತಿರುವಿನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅವರಿಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಎ.ಜಿ ಕಾರಿಯಪ್ಪ ಸೂಚಿಸಿದ್ದಾರೆ.        ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡಿಪಡಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎ.ಜಿ ಕಾರಿಯಪ್ಪರವರು ಘಟನೆ ಸಂಬಂಧ ದಾಖಲಾಗಿರುವ ದೂರನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ತಕ್ಷಣ ಪತ್ತೆ ಮಾಡುವ ಕುರಿತಂತೆ ನ್ಯೂಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ಮಾರ್ಗದರ್ಶನ ನೀಡಿದರು.       ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸುವಂತೆ ಹಾಗು ನಗರದ ಅತಿಸೂಕ್ಷ್ಮ ಸ್ಥಳಗಳಲ್...

ಮಾ.೨೩ರಿಂದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಕಳಸಾರೋಹಣ, ಚಂಡಿಕಾ ಹೋಮ

Image
     ಭದ್ರಾವತಿ: ಹಳೇನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನ ಸ್ವಾಮಿಗಳವರು ಹಾಗು ವಡ್ಡನಹಾಳ್ ಶ್ರೀಮದ್ ಜಗದ್ಗುರು ಮಹಾಸಂಸ್ಥಾನ ಸಾವಿತ್ರಿ ಪೀಠದ ಶ್ರೀ ಶಂಕರಾತ್ಮಾನಂದ ಸರಸ್ವತಿ ಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಮಾ. ೨೩ ರಿಂದ ೨೫ರವರೆಗೆ ಕಳಸಾರೋಹಣ ಮತ್ತು ಚಂಡಿಕಾ ಹೋಮ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ.    ಶ್ರೀ ಕಾಳಿಕಾಂಬ ಸೇವಾ ಸಮಿತಿಯಿಂದ ೨೩ರ ಸೋಮವಾರ ಸಂಜೆ ವಾಸ್ತು, ನವಗ್ರಹ, ರಾಕ್ಷೆಘ್ನ, ಅಘೋರ, ಸುದರ್ಶನ ಹೋಮ, ಬಲಿಪೂಜೆ ಮತ್ತು ಕಲಶ ಪ್ರತಿಷ್ಠಾಪನೆ ಮತ್ತು ೨೪ರ ಮಂಗಳವಾರ ಬೆಳಿಗ್ಗೆ ಶ್ರೀ ಕಾಳಿಕಾದೇವಿ ವಿಗ್ರಹಕ್ಕೆ ಅಷ್ಟಬಂಧ ಹಾಕುವುದು, ಪ್ರಾಣ ಷ್ಠಾಪನೆ, ದೇವಿಯ ಶ್ರೀ ಪಾದುಕ ಪ್ರತಿಷ್ಠಾಪನೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಹಾಗು ೨೫ರ ಬುಧವಾರ ಬೆಳಿಗ್ಗೆ ಶ್ರೀ ಕಾಳಿಕಾದೇವಿ ವಿಮಾನ ಗೋಪುರಕ್ಕೆ ಕಳಸಾರೋಹಣ, ಶ್ರೀ ಚಂಡಿಕಾ ಹೋಮ ಆಯೋಜಿಸಲಾಗಿದೆ.   ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಧಾರ್ಮಿಕ ಆಚರಣೆಗಳಿಗೆ ಚಾಲನೆ ನೀಡಲಿದ್ದು, ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ರಾಜ್ಯ ವಿಶ್ವಕರ್ಮ ಅಭಿವೃಧ್ಧಿ ನಿಗಮದ...

ಮೇ.೨೫ರಂದು ಉಚಿತ ಸಾಮೂಹಿಕ ವಿವಾಹ ಮಹೋತ್ಸವ

Image
     ಭದ್ರಾವತಿ : ನಗರದ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ಮತ್ತು ಧರ್ಮಶ್ರೀ ಸಭಾ ಭವನ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ೪೨ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಮೇ. ೨೫ರ ಭಾನುವಾರ ಹಮ್ಮಿಕೊಳ್ಳಲಾಗಿದೆ.       ಸಿದ್ದಾರೂಢ ನಗರದ ಕಾಳಿದಾಸ ಬಡಾವಣೆ, ಧರ್ಮಶ್ರೀ ಸಭಾಭವನದಲ್ಲಿ ಅಂದು ಮಧ್ಯಾಹ್ನ ೧೨ ರಿಂದ ೧ ಗಂಟೆವರೆಗಿನ ಶುಭ ಮುಹೂರ್ತದಲ್ಲಿ ಮಹೋತ್ಸವ ಜರುಗಲಿದೆ. ಇದುವರೆಗೂ ೭೭೬ ಜೊತೆ ವಿವಾಹಗಳನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಸಾರ್ವಜನಿಕರು ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.       ವರನಿಗೆ ೨೧ ವರ್ಷ, ವಧುವಿಗೆ ೧೮ ವರ್ಷ ತುಂಬಿರಬೇಕು. ಈ ಸಂಬಂಧ ವಯಸ್ಸಿನ ದೃಢೀಕರಣ ಪತ್ರ ಸಲ್ಲಿಸುವುದು ಹಾಗು ಇತ್ತಿಚಿನ ೨ ಭಾವಚಿತ್ರ ಮತ್ತು ಆಧಾರ್ ಗುರುತಿನ ಚೀಟಿ ಕಡ್ಡಾಯವಾಗಿ ಕೋರಿಕೆ ಅರ್ಜಿ ಜೊತೆಯಲ್ಲಿ ಸಲ್ಲಿಸತಕ್ಕದ್ದಾಗಿದೆ. ಮೇ. ೧ರೊಳಗೆ ಕೆ. ನಿರಂಜನ, ವ್ಯವಸ್ಥಾಪಕರು, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪ, ಬಿ.ಎಚ್ ರಸ್ತೆ, ಭದ್ರಾವತಿ ಈ ವಿಳಾಸದಲ್ಲಿ ಕೋರಿಕೆ ಅರ್ಜಿ ಸಲ್ಲಿಸಬೇಕು. ೨ ನೇ ಮದುವೆಗೆ ಅವಕಾಶ ಇರುವುದಿಲ್ಲ.        ವಿವಾಹ ಮಹೋತ್ಸವದಲ್ಲಿ ಅನೇಕ ಪರಮ ಪೂಜ್ಯರು ಸಾನಿಥ್ಯವಹಿಸುವರು. ಹೆಚ್ಚಿನ ಮಾಹಿತಿಗೆ ಡಿ.ಆರ್ ಶಿವಕುಮಾರ್ ಮೊ : ೯೯೬೪೨೩...

ಮಾ.೨೧ರಂದು ಬಂಜೆತನ ಉಚಿತ ಶಿಬಿರ

Image
     ಭದ್ರಾವತಿ : ನಗರದ ಉಂಬ್ಳೇಬೈಲ್ ರಸ್ತೆಯಲ್ಲಿರುವ ರೋಟರಿ ಕ್ಲಬ್ ಸಭಾಂಗಣದಲ್ಲಿ ಮಾ. ೨೧ರಂದು ಶನಿವಾರ ಬೆಳಗ್ಗೆ ೧೦ ರಿಂದ ಮದ್ಯಾಹ್ನ ೩ ಗಂಟೆವರೆಗೆ ಬೆಂಗಳೂರಿನ ಮಿಲನ್ ಫರ್ಟಿಲಿಟಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಉಚಿತ ಬಂಜೆತನ ಶಿಬಿರ ಮತ್ತು ತಜ್ಞ ವೈದ್ಯೆ ಡಾ: ಕಾವ್ಯ ಡಿ.ಶರ್ಮಾ ಅವರಿಂದ ಉಚಿತ ಸಮಾಲೋಚನೆ ನಡೆಯಲಿದೆ.      ಅತ್ಯಂತ ವಿಶ್ವಾಸಾರ್ಹ ಬಂಜೆತನ ನಿವಾರಣಾ ಮಿಲನ್ ಫರ್ಟಿಲಿಟಿ ಸ್ಪೆಷಲಿಸ್ಟ್ ಸಂಸ್ಥೆಯಲ್ಲಿ ಫರ್ಟಿಲಿಟಿ ಮತ್ತು ಐವಿಎಫ್, ಪುರುಷರ ಆರೋಗ್ಯ, ಸ್ತ್ರೀರೋಗ ಶಾಸ್ತ್ರ, ಸರೊಗಸಿ ಇತರ ಸೌಲಭ್ಯ ಲಭ್ಯವಿದ್ದು ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಿಲನ್ ಸಂಸ್ಥೆಯ ಪ್ರಾಡಕ್ಟ್ ಸ್ಪೆಷಲಿಸ್ಟ್ (ಹೆಚ್.ಸಿ.ಎಲ್) ಬಿ.ಆರ್ ವೆಂಕಟೇಶ್ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: ೯೬೨೦೨ ೧೩೦೪೬ ಸಂಪರ್ಕಿಸಬಹುದಾಗಿದೆ.

ಜಮೀನಿಗೆ ನುಗ್ಗಿ ಜಾತಿ ನಿಂದನೆ, ಹಲ್ಲೆ, ಜೀವ ಬೆದರಿಕೆ ಪ್ರಕರಣ

Image
6 ಮಂದಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, 1.74 ಲಕ್ಷ ರು. ದಂಡ       ಭದ್ರಾವತಿ : ಸುಮಾರು 6 ವರ್ಷಗಳ ಹಿಂದಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಮಂದಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗು 1,74 ಲಕ್ಷ ರು. ದಂಡ ವಿಧಿಸಿ ನಗರದ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.       ತಾಲೂಕಿನ ಲಕ್ಷ್ಮೀಪುರ ಗ್ರಾಮದ ಭೋವಿ ಜಾತಿಯ ಸೀನಪ್ಪ ಎಂಬುವರಿಗೆ ಸೇರಿದ ಸರ್ವೆ ನಂ.37/1 ಮತ್ತು 37/6ರ ಜಮೀನಿನಲ್ಲಿ ೨೮ ಜುಲೈ ೨೦೨೦ರಂದು ಇದೆ ಗ್ರಾಮದ ಒಕ್ಕಲಿಗ ಜಾತಿಗೆ ಸೇರಿದ ಕೆಂಪಮ್ಮ, ಗೌತಮಿ, ನಾಗರಾಜ, ರಾಘವೇಂದ್ರ, ಬೇಬಿಯಮ್ಮ, ಲಕ್ಷ್ಮಮ್ಮ ಮತ್ತು ದೇವೇಂದ್ರರವರು ಏಕಾಏಕಿ ನುಗ್ಗಿ ಸೀನಪ್ಪ ಹಾಗು ಇವರ ಕುಟುಂಬಸ್ಥರು ಮತ್ತು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕೆಲಸಗಾರರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು.       ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕರವರು ಪ್ರಕಣದ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸಿದ್ದರು.       ವಿಚಾರಣೆ ನಡೆಸಿದ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ...

ಸಂಭಾವ್ಯ ಅಪರಾಧ, ಕಾನೂನು ಉಲ್ಲಂಘನೆಗಳಿಗೆ ಕಡಿವಾಣ ಹಾಕಲು ಆಟೋಗಳಿಗೆ ವಿಶಿಷ್ಟ ಸಂಖ್ಯೆ

Image
ಶಿವಮೊಗ್ಗ ಜಿಲ್ಲಾ ಪೊಲೀಸ್ ಕೈಗೊಂಡಿರುವ ಅಭಿಯಾನಕ್ಕೆ ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಚಾಲನೆ  ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಉಪವಿಭಾಗದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಗೆ ಪೂರಕ ದಾಖಲೆಗಳನ್ನು ಒದಗಿಸಿರುವ ಆಟೋ ರಿಕ್ಷಾಗಳಿಗೆ ವಿಶಿಷ್ಟ ಸಂಖ್ಯೆಯ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಹೆಚ್ಚುವರಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಚಾಲನೆ ನೀಡಿದರು.       ಭದ್ರಾವತಿ:  ಆಟೋ ರಿಕ್ಷಾಗಳ ದಾಖಲೆಗಳನ್ನು ಪರಿಶೀಲಿಸಿ ಅವುಗಳಿಗೆ ವಿಶಿಷ್ಠ ಸಂಖ್ಯೆ ನೀಡುವ ಅಭಿಯಾನ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆರಂಭಿಸಲಾಗಿದ್ದು, ಇದರಿಂದ ಆಟೋ ರಿಕ್ಷಾ ಪ್ರಯಾಣದ ವೇಳೆ ನಡೆಯಬಹುದಾದ ಸಂಭಾವ್ಯ ಅಪರಾಧಗಳಿಗೆ ಹಾಗು ಕಾನೂನು ಉಲ್ಲಂಘನೆಗಳಿಗೆ ಕಡಿವಾಣ ಹಾಕಬಹುದಾಗಿದೆ ಎಂದು  ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹೇಳಿದರು.       ಅವರು ಬುಧವಾರ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಉಪವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಗೆ ಪೂರಕ ದಾಖಲೆಗಳನ್ನು ಒದಗಿಸಿರುವ ಆಟೋ ರಿಕ್ಷಾಗಳಿಗೆ ವಿಶಿಷ್ಟ ಸಂಖ್ಯೆಯ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನ...

ಯುಗಾದಿ ಹಬ್ಬ ಆಚರಣೆ : ಜೂಜಾಟಕ್ಕೆ ಕಡಿವಾಣ ಹಾಕಿ

Image
ಪೊಲೀಸ್ ಇಲಾಖೆಗೆ ಬಿಎನ್ ರಾಜು ಆಗ್ರಹ  ಬಿ.ಎನ್ ರಾಜು      ಭದ್ರಾವತಿ: ಯುಗಾದಿ ಹಬ್ಬಕ್ಕೆ ತನ್ನದೇ ಆದ ಪರಂಪರೆ ಇದ್ದು, ಧಾರ್ಮಿಕ ಶ್ರೇಷ್ಠತೆ ಹೊಂದಿದೆ. ದೇಶದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಈ ಹಬ್ಬವನ್ನು ಬೇವು-ಬೆಲ್ಲ ಸವಿಯುವ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತದೆ. ಕ್ಷೇತ್ರದಲ್ಲಿ ಈ ಪವಿತ್ರ ಹಬ್ಬವನ್ನು ಜೂಜಾಟಕ್ಕೆ ಬಳಸಿಕೊಳ್ಳುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಪೊಲೀಸ್ ಇಲಾಖೆ ತಕ್ಷಣ ಜೂಜಾಟಕ್ಕೆ ಕಡಿವಾಣ ಹಾಕಲು ಮುಂದಾಗಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದ್ದಾರೆ.       ಭಾರತ ದೇಶ ಬಹುಸಂಸ್ಕೃತಿಯ ಜಾತ್ಯಾತೀತಿ ದೇಶವಾಗಿದ್ದು, ಯುಗಾದಿ ಹಬ್ಬ ಅತ್ಯಂತ ಶ್ರೇಷ್ಠತೆಯನ್ನು ಹೊಂದಿದೆ. ಅಲ್ಲದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬ ಇದಾಗಿದೆ. ಸೌಹಾರ್ದತೆ, ಸಮಾನತೆಯಿಂದ ದೇಶದ ಎಲ್ಲಾ ವರ್ಗದ ಜನರು ಆಚರಿಸುತ್ತಾರೆ. ಇಂತಹ ಹಬ್ಬದ ಸಂದರ್ಭದಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ, ವಾರ್ಡ್‌ಗಳಲ್ಲಿ ಅನೇಕ ವರ್ಷಗಳಿಂದಲೂ ಸುಮಾರು ವಾರಗಟ್ಟಲೆ ಶಾಮಿಯಾನ ಹಾಕಿಕೊಂಡು ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟಗಳಲ್ಲಿ ತೊಡಗುತ್ತಿರುವುದು ಪವಿತ್ರವಾದ ಹಬ್ಬದ ಆಚರಣೆಗೆ ಮಾಡುತ್ತಿರುವ ಅಪಚಾರವಾಗಿದೆ. ಅಲ್ಲದೆ ಅನೇಕ ಜನಪ್ರತಿನಿಧಿಗಳು, ಊರಿನ ಮುಖಂಡರು ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟದಲ್ಲಿ ಮುಂಚೂಣಿಯಲ್ಲಿದ್ದು, ಯುಗಾದಿ ಹಬ್ಬ ಜೂಜಾ...

ಜೀತ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯ : ನ್ಯಾ. ರವಿಕುಮಾರ್

Image
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ  ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗು ಕಾರ್ಯಾಗಾರದ ಆಯೋಜಿಸಲಾಗಿತ್ತು.       ಭದ್ರಾವತಿ: ಸಮಾಜದಲ್ಲಿ ಜೀತ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಕಾಯ್ದೆ ಕುರಿತು ಅರಿತುಕೊಳ್ಳಬೇಕೆಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್ ಹೇಳಿದರು.       ಅವರು ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗು ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಮಾತನಾಡಿದರು.       ಜೀತ ಪದ್ಧತಿ ನಿಷೇಧ ಕಾಯ್ದೆ ೧೯೭೬ರ ಕುರಿತು ಸಮಗ್ರ ಮಾಹಿತಿ ನೀಡಿ, ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ವಿವರಿಸಿದರು.       ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಮಾತನಾಡಿ, ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿದ್ದು, ಎಲ್ಲಾ ಅಧಿಕಾರಿಗಳು ...

ಭಾರತ ತನ್ನ ನಿಲುವು ಪ್ರಕಟಿಸಲಿ, `ಯುದ್ದ ಬೇಡ ಜಾಗತಿಕ ಶಾಂತಿ ಬೇಕು'

Image
ಮಾ.೧೮ರಂದು ಸಂಜೆ ೫ ಗಂಟೆಗೆ ಸಾಂಕೇತಿಕ ಪ್ರತಿಭಟನೆ       ಭದ್ರಾವತಿ: ಅಮೇರಿಕ-ಇಸ್ರೇಲ್ ವಿರುದ್ಧ, ಇರಾನ್ ಜನತೆಯ ಪರವಾಗಿ 'ಯುದ್ಧ ಬೇಡ ಜಾಗತಿಕ ಶಾಂತಿ ಬೇಕು' ಎಂಬ ನಿಲುವು  ಭಾರತ ಪ್ರಕಟಿಸುವಂತೆ ಒತ್ತಾಯಿಸಿ ಮಾ.೧೮ರ ಬುಧವಾರ ಸಂಜೆ ೫ ಗಂಟೆಗೆ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆ ಮುಂಭಾಗ ಅಂಬೇಡ್ಕರ್ ವೈಚಾರಿಕ ವೇದಿಕೆ ಕರ್ನಾಟಕ ಸಂಘಟನೆಯಿಂದ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.       ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆ ಸಂಚಾಲಕರಾದ ಪಿ. ಮೂರ್ತಿ ಮತ್ತು ಜಯರಾಮ್‌ರವರು, ಅಮೇರಿಕ ಮತ್ತು ಇಸ್ರೇಲ್ ದೇಶಗಳು ಕಾರಣವಿಲ್ಲದೆ ಇರಾನ್ ಅದ್ಯಕ್ಷ ಆಯಾತುಲ್ಲಾ ಖಮೇನಿಯವರನ್ನು ಕೊಂದು ಹಾಕುವುದರ ಮೂಲಕ ಯುದ್ಧ ಘೋಷಿಸಿವೆ. ಯುದ್ಧ ಈಗಾಗಲೇ ೧೬ನೇ ದಿನಕ್ಕೆ ಕಾಲಿಟ್ಟಿದೆ. ಆ ದೇಶದ ಶಾಲಾ-ಕಾಲೇಜುಗಳ ಮೇಲೆ ಬಾಂಬುಗಳ ಸುರಿಮಳೆ ಗೈದಿದ್ದರಿಂದ ಸಾವಿರಾರು ಜನರ ಮರಣಹೋಮವಾಗಿದೆ. ಇರಾನ್ ತೈಲ ಉತ್ಪಾಧಕ ಘಟಕಗಳು, ಮಿಲಿಟರಿ ನೆಲೆಗಳು, ಮೂಲಭೂತ ಸೌಲಭ್ಯಗಳು ಬಾಂಬ್, ಕ್ಷಿಪಣಿ ಮತ್ತು ಡೋನ್‌ಗಳ ದಾಳಿಗಳಿಂದ ಅಪಾರ ಸಂಪತ್ತು ನಷ್ಟವಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.         ಇರಾನ್ ದೇಶದ ಆಗಾದ ತೈಲ ಸಂಪತ್ತಿನ ಮೇಲೆ ಅಮೇರಿಕ ಮತ್ತು ಇಸ್ರೇಲ್ ದೇಶಗಳ ದೊಡ್ಡ ಕಾರ್ಪೋರೇಟ್...

೨೫ ಕೋ.ರು. ವೆಚ್ಚದಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ : ಷಡಾಕ್ಷರಿ

Image
ರಾಜ್ಯ ವಲಯ ಯೋಜನೆ-೮, ಜಿಲ್ಲಾ ವಲಯ ವಿಶೇಷ ಘಟಕ ಮತ್ತು ಗಿರಿಜನ ಪ್ರಯೋಜನ ಇಲಾಖಾ ವತಿಯಿಂದ ಮಂಗಳವಾರ ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ೩೩ ಅರ್ಹ ಬಡ ಮೀನುಗಾರರಿಗೆ ಇಲಾಖೆಯ ಕಿಟ್ ವಿತರಿಸಲಾಯಿತು.       ಭದ್ರಾವತಿ : ದೊಣಬಘಟ್ಟ ರಸ್ತೆಯ ನಗರಸಭೆ ವ್ಯಾಪ್ತಿಯ ಕವಲಗುಂದಿ ಗ್ರಾಮದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಭಾಗಿತ್ವದಲ್ಲಿ ಸುಮಾರು ೨೫ ಕೋ. ರು. ವೆಚ್ಚದಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ರೂಪುರೇಷೆ ಸಿದ್ದಪಡಿಸಲಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಷಡಾಕ್ಷರಿ ತಿಳಿಸಿದರು.       ರಾಜ್ಯ ವಲಯ ಯೋಜನೆ-೮, ಜಿಲ್ಲಾ ವಲಯ ವಿಶೇಷ ಘಟಕ ಮತ್ತು ಗಿರಿಜನ ಪ್ರಯೋಜನ ಇಲಾಖಾ ವತಿಯಿಂದ ಮಂಗಳವಾರ ಶಾಸಕರ ಗೃಹ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ೩೩ ಅರ್ಹ ಬಡ ಮೀನುಗಾರರಿಗೆ ಇಲಾಖೆಯ ಕಿಟ್ ವಿತರಿಸಿ ಮಾತನಾಡಿದರು.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನಿರಂತರ ಪ್ರಯತ್ನದ ಫಲವಾಗಿ ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುತ್ತಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಹ ಸುಮಾರು ೧೦ ಸಾವಿರ ರು. ಮೌಲ್ಯದ ಮೀನು ಬಲೆ, ತೆ...

ಸುದರ್ಶನ ಶಾಸ್ತ್ರಿ ನಿಧನ

Image
ಸುದರ್ಶನ ಶಾಸ್ತ್ರಿ       ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಸಿದ್ದಾರೂಢ ನಗರದ ಧರ್ಮಶ್ರೀ ಸಭಾಭವನ ಸಮೀಪದ ನಿವಾಸಿ ಸುದರ್ಶನ ಶಾಸ್ತ್ರಿ(೭೬) ನಿಧನ ಹೊಂದಿದರು.       ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ವಿಐಎಸ್‌ಎಲ್ ಕಾರ್ಖಾನೆ ಪ್ರೊಸಸ್ ಕಂಟ್ರೋಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಸೋಮವಾರ ನೆರವೇರಿತು. ಇವರ ನಿಧನಕ್ಕೆ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರರು, ಕಾರ್ಮಿಕ ಮುಖಂಡರು ಸೇರಿದಂತೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ನಾಗರಾಜ ನಿಧನ

Image
ನಾಗರಾಜ     ಭದ್ರಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ರೂಪ ಅವರ ಪತಿ, ಹಳೇ ಸಿದ್ದಾಪುರ ನಿವಾಸಿ ನಾಗರಾಜ(೪೮) ಭಾನುವಾರ ರಾತ್ರಿ ನಿಧನ ಹೊಂದಿದರು.     ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹಳೇ ಸಿದ್ದಾಪುರದ ಇವರ ಜಮೀನಿನಲ್ಲಿ ನೆರವೇರಿತು. ನಾಗರಾಜ ಮೂಲತಃ ಕೃಷಿಕರಾಗಿದ್ದು, ಅಲ್ಲದೆ ಡೈರಿ ಗುತ್ತಿಗೆದಾರರಾಗಿದ್ದರು.     ಇವರ ನಿಧನಕ್ಕೆ ಬಿಳಿಕಿ ಹಿರೇಮಠ, ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಉದ್ಯಮಿ ಬಿ.ಕೆ ಜಗನ್ನಾಥ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಮಾಜಿ ಅಧ್ಯಕ್ಷರಾದ ಸಿದ್ದಲಿಂಗಯ್ಯ, ವಾಗೀಶ್, ನಗರಸಭೆ ಸದಸ್ಯ ಸೈಯದ್ ರಿಯಾಜ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  

ಮಾ.೨೧ರಂದು `ಜೀವಂತ ಶಿಲುಬೆ ಹಾದಿ' ಮಹೋತ್ಸವ

Image
ಭದ್ರಾವತಿ ತಾಲೂಕಿನ ಮಾವಿನಕೆರೆ ಕಿರಿಯ ಪುಷ್ಪ ಸಂತ ತೆರೇಸರ ಚರ್ಚ್ ವತಿಯಿಂದ ಐತಿಹಾಸಿಕ ಶಿಲುಬೆ ಬೆಟ್ಟದ ಮಹೋತ್ಸವ ಜೀವಂತ ಶಿಲುಬೆ ಹಾದಿ ಮಾ.೨೧ರ ಶನಿವಾರ ಆಯೋಜಿಸಲಾಗಿದೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ನಗರದ ಗಾಂಧಿನಗರ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮಗುರು ಪಾದರ್ ಸ್ಟೀವನ್ ಡೆಸಾ ಸೇರಿದಂತೆ ಇನ್ನಿತರರು ಮಾಹಿತಿ ನೀಡಿದರು.  ಭದ್ರಾವತಿ: ತಾಲೂಕಿನ ಮಾವಿನಕೆರೆ ಕಿರಿಯ ಪುಷ್ಪ ಸಂತ ತೆರೇಸರ ಚರ್ಚ್ ವತಿಯಿಂದ ಐತಿಹಾಸಿಕ ಶಿಲುಬೆ ಬೆಟ್ಟದ ಮಹೋತ್ಸವ ಜೀವಂತ ಶಿಲುಬೆ ಹಾದಿ ಮಾ.೨೧ರ ಶನಿವಾರ ಆಯೋಜಿಸಲಾಗಿದೆ.  ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರದ ಗಾಂಧಿನಗರ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದ ಧರ್ಮಗುರು ಪಾದರ್ ಸ್ಟೀವನ್ ಡೆಸಾ, ಏಸು ಕ್ರಿಸ್ತನ ಸಾವಿನ ಕೊನೆಯ ಘಟನೆಗಳಿಗೆ ಅಭಿನಯದ ಮೂಲಕ ಜೀವಂತಿಕೆ ತುಂಬುವ ಜೊತೆಗೆ ಏಸು ಕ್ರಿಸ್ತನನ್ನು ಸ್ಮರಿಸಲಾಗುವುದು. ಅಲ್ಲದೆ ಜೀವಂತ ಶಿಲುಬೆ ಹಾದಿಯನ್ನು ವಿಜಯೋತ್ಸವದ ಸಂಕೇತವಾಗಿ ಆಚರಿಸಲಾಗುತ್ತದೆ ಎಂದರು.  ತ್ಯಾಗ ಮತ್ತು ಭಕ್ತಿಯಿಂದ ಶಿಲುಬೆ ಬೆಟ್ಟದ ಮಹೋತ್ಸವ ಆಚರಿಸಲಾಗುತ್ತದೆ. ತಮ್ಮಲ್ಲಿನ ಕೆಟ್ಟ ಗುಣಗಳನ್ನು ದೂರ ಮಾಡಿ ಸದ್ಗುಣಗಳನ್ನು ಅಳವಡಿಸಿಕೊಳ್ಳುವ ಜೊತೆಗೆ ಮಾನಸಿಕವಾಗಿ, ಆಧ್ಯಾತ್ಮಿಕವಾಗಿ ಪರಿಶುದ್ಧರಾಗಿ ಸಾಗುವ ಮಾರ್ಗ ಈ ಮಹೋತ್ಸವದಲ್ಲಿ ಭಕ್ತರು ಕಂಡುಕೊಳ್ಳಲಿದ್ದಾರೆ. ಮಹೋತ್ಸವಕ್ಕೆ ಪ್ರತಿ ವರ್ಷ ವಿವಿಧೆಡೆಗಳಿಂದ...

ದಿವಂಗತ ಲಕ್ಷ್ಮೀಪತಿಯವರು ಯುವ ಕಲಾವಿದರಿಗೆ ಮಾರ್ಗದರ್ಶಕರು

Image
ಭದ್ರಾವತಿ ನಗರದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಹಿರಿಯ ರಂಗ ಕಲಾವಿದ ದಿವಂಗತ ಲಕ್ಷ್ಮೀಪತಿಯವರ ಶ್ರದ್ದಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.      ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ಹಿರಿಯ ರಂಗ ಕಲಾವಿದ ದಿವಂಗತ ಲಕ್ಷ್ಮೀಪತಿಯವರು ಇಂದಿನ ಯುವ ಕಲಾವಿದರಿಗೆ ಮಾರ್ಗದರ್ಶಕರಾಗಿದ್ದರು. ರಂಗಭೂಮಿ ಕ್ಷೇತ್ರಕ್ಕೆ ಅವರ ಕೊಡುಗೆ ಅನನ್ಯವಾಗಿದೆ ಎಂದು ನಗರದ ರಂಗಭೂಮಿ ಕಲಾವಿದರು ಬಣ್ಣಿಸಿದರು.       ನಗರದ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ದಿವಂಗತ ಲಕ್ಷ್ಮೀಪತಿಯವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ನಗರದಲ್ಲಿ ರಂಗಭೂಮಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯುವ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಿ ಅವರು ಸಮಾಜದ ಮುಂಚೂಣಿಯಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾಗಿದ್ದರು. ಇವರ ನಿಧನದಿಂದ ರಂಗಭೂಮಿ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಂತಾಪ ಸೂಚಿಸಿದರು.       ಜಾನಪದ ಕಲಾವಿದರಾದ ತಮಟೆ ಜಗದೀಶ್, ಜಿ. ದಿವಾಕರ್, ರಂಗಭೂಮಿ ಹಾಗು ಕಿರುತೆರೆ ನಟ ಅಪರಂಜಿ ಶಿವರಾಜ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕ...

ಸದಾ ಕಾಲ ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಿಂದ ಹೆಚ್ಚಿನ ಸಹಕಾರಿ : ಬಿ.ಕೆ ಮೋಹನ್

Image
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಹಳೇನಗರ ಭೂತನಗುಡಿ ಡೇಕೇರ್-ಸರ್ಜಿಕಲ್ ಕೇರ್ & ಡಯಾಗ್ನೋಸ್ಟಿಕ್ಸ್ ಸಹಯೋಗದೊಂದಿಗೆ ಪತ್ರಕರ್ತರು ಮತ್ತು ಅವರ ಕುಟುಂಬ ವರ್ಗದವರಿಗೆ ಭಾನುವಾರ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಅನಉದ್ಘಾಟಿಸಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ : ಸದಾ ಕಾಲ ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿ ಬಹಳ ಮುಖ್ಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆ ಶಿಬಿರಗಳು ಹೆಚ್ಚಿನ ಸಹಕಾರಿಯಾಗಲಿವೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ಅವರು ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದಿಂದ ಹಳೇನಗರ ಭೂತನಗುಡಿ ಡೇಕೇರ್-ಸರ್ಜಿಕಲ್ ಕೇರ್ & ಡಯಾಗ್ನೋಸ್ಟಿಕ್ಸ್ ಸಹಯೋಗದೊಂದಿಗೆ ಪತ್ರಕರ್ತರು ಮತ್ತು ಅವರ ಕುಟುಂಬ ವರ್ಗದವರಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.       ಸಮಾಜದಲ್ಲಿ ಬಹುಮುಖ್ಯ ಪಾತ್ರವಹಿಸಿರುವ ಪತ್ರಕರ್ತರು ಸದಾ ಕಾಲ ಆರೋಗ್ಯವಂತರಾಗಿರಬೇಕು. ವಿಭಿನ್ನ ಕಾರ್ಯ ಚಟುವಟಿಕೆಗಳ ಮೂಲಕ ನಗರದಲ್ಲಿರುವ ಪತ್ರಕರ್ತರ ಸಂಘ ಇತರರಿಗೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.  ಬಡ ವರ್ಗದವ...

ದೊಣಬಘಟ್ಟ, ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ದ ಕುಡಿಯುವ ನೀರು ಸರಬರಾಜು ಮಾಡಿ

Image
ಸಚಿವರಿಗೆ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ  ಭದ್ರಾವತಿ ತಾಲೂಕಿನ ಬಿಳಿಕಿ ಗ್ರಾಮದಲ್ಲಿರುವ ಬಿಳಿಕಿ ಕೆರೆ.     ಭದ್ರಾವತಿ : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಣಬಘಟ್ಟ ಮತ್ತು ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಲು ಭದ್ರಾ ನದಿಯಿಂದ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಜನ್ನಾಪುರ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧುಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ.       ಈ ಸಂಬಂಧ ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ ಸಲ್ಲಿಸಿದ್ದು,  ಕಳೆದ ಸುಮಾರು ೫೦ ವರ್ಷಗಳಿಂದ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಹೋರಾಟದ ಸ್ಮರಣೆಗಾಗಿ ಗ್ರಾಮೀಣೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಇದಕ್ಕೆ ಪೂರಕವಾಗಿ  ವಿಧಾನಸಭಾ ಕ್ಷೇತ್ರದ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದು.       ಪ್ರಸ್ತುತ ದೊಣಬಘಟ್ಟ ಮತ್ತು ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

ಭದ್ರಾವತಿ ನಗರಸಭೆ : ಹಲವು ಹೊಸ ಯೋಜನೆಗಳೊಂದಿಗೆ 1.46 ಕೋ. ರು. ಉಳಿತಾಯ ಬಜೆಟ್ ಮಂಡನೆ

Image
ಹಲವು ಹೊಸ ಯೋಜನೆಗಳೊಂದಿಗೆ ಭದ್ರಾವತಿ ನಗರಸಭೆ ಪ್ರಸ್ತುತ ಅವಧಿಯ ಕೊನೆಯ ಬಜೆಟ್ ಶುಕ್ರವಾರ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಮಂಡಿಸಿದರು.      ಭದ್ರಾವತಿ: ಹಲವು ಹೊಸ ಯೋಜನೆಗಳೊಂದಿಗೆ ನಗರಸಭೆ ಪ್ರಸ್ತುತ ಅವಧಿಯ ಕೊನೆಯ ಬಜೆಟ್ ಶುಕ್ರವಾರ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಮಂಡಿಸಿದರು. ಈ ಬಾರಿ 1.46 ಕೋ. ರು. ಉಳಿತಾಯ ಬಜೆಟ್ ಮಂಡಿಸಲಾಗಿದ್ದು, ನಗರಸಭೆ ಇತಿಹಾದಲ್ಲಿಯೇ ಒಂದೇ ಅವಧಿಯಲ್ಲಿ 2 ಬಾರಿ ಅಧ್ಯಕ್ಷರಾಗಿ, 2 ಬಾರಿ ಬಜೆಟ್ ಮಂಡಿಸಿರುವ ದಾಖಲೆಗೆ ಗೀತಾರಾಜಕುಮಾರ್ ಪಾತ್ರರಾಗಿದ್ದಾರೆ.     ಬಜೆಟ್ ಮಂಡಿಸಿದ ಗೀತಾರಾಜಕುಮಾರ್, ಆರಂಭದಲ್ಲಿ ಈ ಬಾರಿ ಆಯ-ವ್ಯಯದ ಆರಂಭಿಕ ಶಿಲ್ಕು 2,161.44 ಲಕ್ಷ ರು. ಗಳಾಗಿದೆ. ಒಟ್ಟು ಆದಾಯ(ಸ್ವಿಕೃತಿ) 14,808.87 ಲಕ್ಷ ರು.ಗಳಾಗಿದ್ದು, ಇದರಲ್ಲಿ ರಾಜಸ್ವ ಸ್ವಿಕೃತಿಗಳು 5,476.93 ಲಕ್ಷ ರು., ಬಂಡವಾಳ ಸ್ವಿಕೃತಿಗಳು 3,351 ಲಕ್ಷ ರು. ಮತ್ತು ಅಸಾಧಾರಣ ಸ್ವಿಕೃತಿಗಳು 5,980.84 ಲಕ್ಷ ರು. ಸೇರ್ಪಡೆಗೊಂಡಿವೆ. ಈ ಬಾರಿ ಒಟ್ಟು ವೆಚ್ಚ 14,662.87 ಲಕ್ಷ ರು. ಗಳಾಗಿದ್ದು, ಇದರಲ್ಲಿ ರಾಜಸ್ವ ಪಾವತಿಗಳು 517.76 ಲಕ್ಷ ರು., ಬಂಡವಾಳ ಪಾವತಿಗಳು 3,554.18 ಲಕ್ಷ ರು. ಹಾಗು ಅಸಾಧಾರಣ ಪಾವತಿಗಳು 5,980.94 ಲಕ್ಷ ರು. ಒಳಗೊಂಡಿವೆ. ಆಯ-ವ್ಯಯದ ಆಖೈರು ಶಿಲ್ಕು 2,307.44 ಲಕ್ಷ ರು.ಗಳಾಗಿದ್ದು, ಒಟ್ಟು ಉಳಿತಾಯ 146 ಲಕ್ಷ ರು. ಗಳಾಗಿದೆ ಎಂದರು. ...

೪ ತಿಂಗಳ ಹಿಂದಿನ ಮನೆಗಳ್ಳತನ ಪ್ರಕರಣ ಭೇದಿಸಿದ ನ್ಯೂಟೌನ್ ಠಾಣೆ ಪೊಲೀಸರು

Image
ಓರ್ವ ಯುವಕ ಬಂಧನ : ೧.೪೦ ಲಕ್ಷ ರು. ಮೌಲ್ಯದ ಸ್ವತ್ತು ವಶ   ಎಂ. ಸೂರ್ಯ       ಭದ್ರಾವತಿ: ಸುಮಾರು ೪ ತಿಂಗಳ ಹಿಂದೆ ನಗರಸಭೆ ವ್ಯಾಪ್ತಿಯ ಜನ್ನಾಪುರದ ಮನೆಯೊಂದರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಭೇದಿಸುವಲ್ಲಿ ನ್ಯೂಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.       ಝೆಪ್ಟೋ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿರುವ ಬೆಂಗಳೂರು, ವಿವೇಕ ನಗರ, ಸಂಜೀವಪುರಂ ವನ್ನಾರ್ ಪೇಟೆ ನಿವಾಸಿ ಎಂ. ಸೂರ್ಯ(೨೮) ಬಂಧಿತ ಆರೋಪಿಯಾಗಿದ್ದು, ಕಳ್ಳತನ ಮಾಡಲಾಗಿದ್ದ ಸುಮಾರು ೧.೪೦ ಲಕ್ಷ ರು. ಮೌಲ್ಯದ ೧೦ ಗ್ರಾಂ ತೂಕದ ಬಂಗಾರದ ಸರ ಈತನಿಂದ ವಶಪಡಿಸಿಕೊಳ್ಳಲಾಗಿದೆ.        ಜನ್ನಾಪುರ ಎನ್‌ಟಿಬಿ ಕಚೇರಿ ಸಮೀಪ ವಾಸವಾಗಿರುವ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೌಭಾಗ್ಯ ಎಂಬುವರರ ಮನೆಯಲ್ಲಿ ೧೯ ನವೆಂಬರ್ ೨೦೨೫ರಂದು ಮನೆಯ ಡ್ರೆಸ್ಸಿಂಗ್ ಟೇಬಲ್ ಮೇಲೆ ಇಟ್ಟಿದ್ದ ಸುಮಾರು ೧೦ ಗ್ರಾಂ ಬಂಗಾರದ ಸರ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು.      ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ ಕಾರಿಯಪ್ಪ ಮತ್ತು ರಮೇಶ್‌ರವರ ಮಾರ್ಗದರ್ಶನದಲ್ಲಿ ಹಾಗೂ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್...

ಇಂದಿರಾ ಕ್ಯಾಂಟೀನ್‌ನಲ್ಲಿ ಸಿಲಿಂಡರ್ ಬಳಕೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಸಮಸ್ಯೆ

Image
ಕಲ್ಯಾಣಮಂಟಪ ಸೇರಿದಂತೆ ಇನ್ನಿತರೆಡೆ ಆಯೋಜಕರೇ ಸಿಲಿಂಡರ್ ಪೂರೈಸಿಕೊಳ್ಳಬೇಕು       ಭದ್ರಾವತಿ: ಸದ್ಯದ ಪರಿಸ್ಥಿತಿಯಲ್ಲಿ ಪ್ರತಿ ದಿನ ಆಹಾರ ತಯಾರಿಸುವ ಇಂದಿರಾ ಕ್ಯಾಂಟೀನ್‌ನಲ್ಲಿ ಸಿಲಿಂಡರ್ ಬಳಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಉಳಿದಂತೆ ಕಲ್ಯಾಣ ಮಂಟಪ ಸೇರಿದಂತೆ ಇನ್ನಿತರೆ ಸಿಲಿಂಡರ್ ಬಳಕೆ ಕಾರ್ಯಕ್ರಮ ಆಯೋಜಕರೇ ಮಾಡಿಕೊಳ್ಳಬೇಕಾಗಿದೆ. ಅಂಗನವಾಡಿಗಳಿಗೆ ಈಗಾಗಲೇ ಸಿಲಿಂಡರ್ ಪೂರೈಸಲಾಗಿದ್ದು, ಖಾಲಿಯಾಗಲು ಕೆಲವು ದಿನಗಳು ಬೇಕಾಗಿವೆ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಕಂಡು ಬರುತ್ತಿಲ್ಲ.       ನ್ಯೂಟೌನ್ ಬಂಟರ ಭವನದ ಸುಬ್ಬಣ್ಣ ರೈ ಮಾತನಾಡಿ, ನಾವು ಅಡುಗೆ ತಯಾರಿಕೆಗೆ ಅಗತ್ಯವಿರುವ ಪಾತ್ರೆ ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಒದಗಿಸುತ್ತೇವೆ. ಸಿಲಿಂಡರ್ ವ್ಯವಸ್ಥೆ ಕಾರ್ಯಕ್ರಮ ಆಯೋಜಕರೇ ಮಾಡಿಕೊಳ್ಳಬೇಕು. ಅಡುಗೆ ಮಾಡಲು ಸಿಲಿಂಡರ್ ಬಳಕೆ ಬಿಟ್ಟು ಬೇರೆ ಯಾವುದೇ ವ್ಯವಸ್ಥೆ ಅಳವಡಿಸಿಕೊಂಡಿಲ್ಲ. ಇದುವರೆಗೂ ಸಿಲಿಂಡರ್ ಸಮಸ್ಯೆ ಹಿನ್ನಲೆಯಲ್ಲಿ ನಿಗದಿಯಾಗಿರುವ ಯಾವುದೇ ಕಾರ್ಯಕ್ರಮಗಳು ಮುಂದೂಡಿಲ್ಲ ಎಂದರು.       ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಮಾತನಾಡಿ, ನಗರದಲ್ಲಿ ಎರಡು ಕಡೆ ಇಂದಿರಾ ಕ್ಯಾಂಟೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಒಂದು ಕಡೆ ಮಾತ್ರ ಅಡುಗೆ ಸಿದ್ದಪಡಿಸಲಾಗುತ್ತಿದೆ. ಸದ್ಯಕ್ಕೆ ಸಿಲ...

ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಿ

Image
ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆ ಹಾಗೂ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ನಗರ ವ್ಯಾಪ್ತಿಯ ಸ್ತ್ರೀಬಂಧು  ಒಕ್ಕೂಟಗಳಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.      ಭದ್ರಾವತಿ:  ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆ ಹಾಗೂ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ನಗರ ವ್ಯಾಪ್ತಿಯ ಸ್ತ್ರೀಬಂಧು  ಒಕ್ಕೂಟಗಳಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.          ಪ್ರತಿಭಟನೆ ನೇತೃತ್ವವಹಿಸಿದ್ದ ಪ್ರಮುಖರು ಮಾತನಾಡಿ,  ತಾಲೂಕಿನಲ್ಲಿ  ಸ್ತ್ರೀಬಂಧು ಒಕ್ಕೂಟಗಳು ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವ-ಸಹಾಯ ಸಂಘಗಳಾಗಿವೆ.  ಕಳೆದ ೧೩ ವರ್ಷಗಳಿಂದ ಮಹಿಳೆಯರ, ಅವರ ಕುಟುಂಬ ಹಾಗೂ ಸಮುದಾಯದ ಅಭಿವೃದ್ಧಿಗಾಗಿ ಮತ್ತು ಸಮುದಾಯದಲ್ಲಿನ ಸಮಸ್ಯೆ ಮತ್ತು ದೌರ್ಜನ್ಯಗಳನ್ನು ಖಂಡಿಸಿ ಶೋಷಿತ, ಬಡ ಬಗ್ಗರ, ದೀನದಲಿತರ, ಮಹಿಳೆಯರ...

ನಗರಸಭೆ ೫ ಮಂದಿ ನಾಮನಿರ್ದೇಶಿತ ಸದಸ್ಯರಿಂದ ಅಧಿಕಾರ ಸ್ವೀಕಾರ

Image
ಭದ್ರಾವತಿ ನಗರಸಭೆಗೆ ಸರ್ಕಾರದಿಂದ ನೂತನವಾಗಿ ನೇಮಕಗೊಂಡಿರುವ ೫ ಜನ ನಾಮನಿರ್ದೇಶಿತ ಸದಸ್ಯರು ಗುರುವಾರ ನಗರಸಭೆ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು.       ಭದ್ರಾವತಿ: ನಗರಸಭೆಗೆ ಸರ್ಕಾರದಿಂದ ನೂತನವಾಗಿ ನೇಮಕಗೊಂಡಿರುವ ೫ ಜನ ನಾಮನಿರ್ದೇಶಿತ ಸದಸ್ಯರು ಗುರುವಾರ ನಗರಸಭೆ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು.       ಹಳೇನಗರ, ಗೌಳಿಗರ ಬೀದಿ ಶ್ರೀ ಚೌಡಮ್ಮ ದೇವಸ್ಥಾನ ಹತ್ತಿರದ ನಿವಾಸಿ ಮಂಜುನಾಥ್, ನ್ಯೂಟೌನ್ ಆಂಜನೇಯ ಅಗ್ರಹಾರ ನಿವಾಸಿ ಎಂ.ಜಿ ರಾಮಚಂದ್ರ, ಬಿಳಿಕಿ ಜೇಡಿಕಟ್ಟೆ ನಿವಾಸಿ ಎಸ್. ವಾಗೀಶ್, ಹಳೇನಗರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಸಮೀಪದ ನಿವಾಸಿ ಸೈಯದ್ ಅಬ್ದುಲ್ ರೆಹಮಾನ್(ದಿಲ್‌ದಾರ್) ಹಾಗು ಹುಡ್ಕೋ ಕಾಲೋನಿ ನಿವಾಸಿ ಎ. ವಿಲ್ಸನ್ ಬಾಬು ನೂತನ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.       ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಮುಖಂಡರು ನೂತನ ನಾಮನಿರ್ದೇಶಿತ ಸದಸ್ಯರನ್ನು ಅಭಿನಂದಿಸಿದ್ದಾರೆ. 

ಅಡುಗೆ ಅನಿಲ ಸಿಲಿಂಡರ್ ಸಮಸ್ಯೆ : ೨-೩ ದಿನಗಳಲ್ಲಿ ಹೋಟೆಲ್‌ಗಳು ಬಂದ್

Image
ಪ್ರಸ್ತುತ ಗೋಡಂಬಿ ಬೀಜದ ಸಿಪ್ಪೆ ಅವಲಂಬಿಸಿ ಕಾರ್ಯಾಚರಣೆ  ಭದ್ರಾವತಿ ಕಾಗದನಗರದ ಜನವಸತಿ ಪ್ರದೇಶದಲ್ಲಿ ಬುಧವಾರ ರಾತ್ರಿ ಕಂಡು ಬಂದ ಸಿಲಿಂಡರ್ ಸರಬರಾಜು ಮಾಡುವ ಲಾರಿ.        ಭದ್ರಾವತಿ: ನಗರದಲ್ಲಿ ಅಡುಗೆ ಅನಿಲ ಸಿಲಿಂಡರ್ ಅವಲಂಬಿಸಿರುವ ಹೋಟೆಲ್‌ಗಳು ಮುಂದಿನ ೨-೩ ದಿನಗಳಲ್ಲಿ ಸಂಪೂರ್ಣವಾಗಿ ಬಂದ್ ಮಾಡುವ ಸ್ಥಿತಿ ಎದುರಾಗಿದ್ದು, ಈಗಾಗಲೇ ವಿತರಕರು ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ.       ಗೌರಿ ಗ್ಯಾಸ್ ವಿತರಕರಾದ ಸೆಲ್ವರಾಜ್ ಮಾತನಾಡಿ, ಈಗಾಗಲೇ ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಗೃಹ ಬಳಕೆ ಸಿಲಿಂಡರ್ ತಿಂಗಳಿಗೆ ೧ ಸಿಲಿಂಡರ್ ಮಾತ್ರ ಸರಬರಾಜು ಮಾಡಲಾಗುವುದು. ಇರಾನ್ ಯುದ್ಧ ಮುಗಿದ ತಕ್ಷಣ ಸಮಸ್ಯೆ ಬಗೆಹರಿಯಲಿದೆ. ಈ ಹಿನ್ನಲೆಯಲ್ಲಿ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.       ಉಳಿದಂತೆ ರಂಗನಾಥ್ ಗ್ಯಾಸ್ ವಿತರಕರಾದ ಮನು ಮಾತನಾಡಿ, ಪ್ರಸ್ತುತ ಗೃಹಬಳಕೆ ಸಿಲಿಂಡರ್‌ಗಳಿಗೂ ಸಮಸ್ಯೆ ಎದುರಾಗುತ್ತಿದೆ. ಗ್ರಾಹಕರು ಬುಕಿಂಗ್ ಮಾಡಲು ತೊಂದರೆಯಾಗುತ್ತಿದ್ದು, ಏಕ ಬಳಕೆ ಸಿಲಿಂಡರ್ ಗ್ರಾಹಕರಿಗೆ ೨೧ ದಿನಗಳ ನಂತರ ಬುಕ್ ಮಾಡುವ ಹಾಗು ಎರಡು ಬಳಕೆ ಸಿಲಿಂಡರ್ ಗ್ರಾಹಕರಿಗೆ ೩೦ ದಿನಗಳ ನಂತರ ಬುಕ್ ಮಾಡುವ ಅವಕಾಶ ನೀಡಲಾಗಿದೆ. ಪರಿಸ್ಥಿತಿ ಇದೆ ರೀತಿ ಮ...

ವಿಐಎಸ್‌ಎಲ್ ನಿವೃತ್ತ ನೌಕರ, ರಂಗಭೂಮಿ ಕಲಾವಿದ ಲಕ್ಷ್ಮೀಪತಿ ನಿಧನ

Image
‌ ಲಕ್ಷ್ಮೀಪತಿ      ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ರಂಗಭೂಮಿ ಕಲಾವಿದ ಲಕ್ಷ್ಮೀಪತಿ(೭೬) ಬುಧವಾರ ನಿಧನ ಹೊಂದಿದರು.       ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ವಿಐಎಸ್‌ಎಲ್ ಕಾರ್ಖಾನೆಯ ಬ್ಲಾಸ್ಟ್ ಫರ್ನೇಸ್ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ರಂಗಭೂಮಿ ಕಲಾವಿದರಾದ ಇವರು ನವೋದಯ ಕಲಾ ಸಂಘದಲ್ಲಿ ತೊಡಗಿಸಿಕೊಂಡು ಅನೇಕ ನಾಟಕ ಪ್ರದರ್ಶನಗಳಲ್ಲಿ ಅಭಿನಯಿಸುವ ಮೂಲಕ ರಾಜ್ಯಮಟ್ಟದ ಪ್ರಶಸ್ತಿಗೆ ಪುರಸ್ಕೃತರಾಗಿದ್ದರು.       ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ನಿರ್ದೇಶಕ ನರಸಿಂಹಚಾರ್, ನಿವೃತ್ತ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಮುಕುಂದಪ್ಪ, ನಿವೃತ್ತ ಕಾರ್ಮಿಕ, ಚಲನಚಿತ್ರ ನಟ ದೊಡ್ಡಣ್ಣ, ಪ್ರಮುಖರಾದ ರಾಜಪ್ಪ, ಚಿಕ್ಕ ಕರಿಯಪ್ಪ, ಈಶ್ವರಪ್ಪ, ಕಾರ್ಮಿಕರ ಸಂಘದ ಅಮೃತ್ , ರಂಗ ಕಲಾವಿದರಾದ ದಿವಾಕರ್‌ ಮತ್ತು  ತಮಟೆ ಜಗದೀಶ್ ಹಾಗು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. 

ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪಿಯುಸಿ ತರಗತಿ ಆರಂಭಿಸಿ

Image
ಸಚಿವ ಮಧುಬಂಗಾರಪ್ಪನವರಿಗೆ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ ಭದ್ರಾವತಿ ಹೊಸಸಿದ್ದಾಪುರ ನೇತಾಜಿ ಎಸ್.ಸಿ.ಬಿ ಸರ್ಕಾರಿ ಪ್ರೌಢಶಾಲೆ.       ಭದ್ರಾವತಿ: ವಿಧಾನಸಭಾ ಕ್ಷೇತ್ರ ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ ನೇತಾಜಿ ಎಸ್.ಸಿ.ಬಿ ಸರ್ಕಾರಿ ಪ್ರೌಢಶಾಲೆ ಶಾಲೆಯನ್ನು ಮೇಲ್ದರ್ಜೆಗೇರಿಸಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪಿ.ಯು.ಸಿ ತರಗತಿಗಳನ್ನು ಆರಂಭಿಸುವಂತೆ ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪನವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.       ಪ್ರಸ್ತುತ ಈ ಶಾಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ಸುಮಾರು ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅನುಭವಿ ಶಿಕ್ಷಕ ವರ್ಗದವರನ್ನು ಒಳಗೊಂಡಿದೆ. ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು,  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಶಾಲೆಗೆ ಪ್ರತಿ ವರ್ಷ ಶೇ.೯೦ರಷ್ಟು ಫಲಿತಾಂಶ ಲಭಿಸುತ್ತಿದೆ.  ಶಾಲೆಯು ಸುಸಜ್ಜಿತವಾದ ಗ್ರಂಥಾಲಯ, ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಕೀಡಾಂಗಣವಿದ್ದು, ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳ ಜೊತೆಗೆ ಸಾಂಸ್ಕೃತಿಕ ಚಟುಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇತ ವ...

ನಾಮನಿರ್ದೇಶನ ಸದಸ್ಯರಾಗಿ ವಿಲ್ಸನ್ ಬಾಬು, ಎಂ.ಜಿ ರಾಮಚಂದ್ರ ನೇಮಕ

Image
ಎ. ವಿಲ್ಸನ್ ಬಾಬು      ಭದ್ರಾವತಿ : ನಗರಸಭೆ ಉಳಿದ ಅವಧಿಗೆ ನೂತನ ನಾಮನಿರ್ದೇಶಿತ ಸದಸ್ಯರಾಗಿ ಹುಡ್ಕೋ ಕಾಲೋನಿ ನಿವಾಸಿ, ಯುವ ಮುಖಂಡರಾದ ಎ. ವಿಲ್ಸನ್ ಬಾಬು ಮತ್ತು ನ್ಯೂಟೌನ್ ಆಂಜನೇಯ ಆಗ್ರಹಾರ ನಿವಾಸಿ ಎಂ.ಜಿ ರಾಮಚಂದ್ರ ನೇಮಕಗೊಂಡಿದ್ದಾರೆ.       ನಗರಸಭೆಗೆ ಎ. ವಿಲ್ಸನ್ ಬಾಬು ಮತ್ತು ಎಂ.ಜಿ ರಾಮಚಂದ್ರ ಸೇರಿದಂತೆ ಒಟ್ಟು ೫ ಜನರನ್ನು ನಾಮನಿರ್ದೇಶನಗೊಳಿಸಲಾಗಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್ ಬುಧವಾರ ಅಧಿಸೂಚನೆ ಹೊರಡಿಸಿದ್ದಾರೆ.  ಎಂ.ಜಿ ರಾಮಚಂದ್ರ        ನೂತನ ನಾಮನಿರ್ದೇಶಿತ ಸದಸ್ಯರಾದ ವಿಲ್ಸನ್ ಬಾಬು ಮತ್ತು ರಾಮಚಂದ್ರ ಅವರಿಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರಾನ್ಸಿಸ್, ಮುಖಂಡರಾದ ದಾಸ್, ಆನಂದ, ಜಾನ್ಸನ್, ಅಪ್ಪು, ಬ್ಲೆಸ್ಸಿಂಗ್. ಜಿ, ಸುಬ್ರಮಣಿ, ಪ್ರದೀಪ್, ಬಾಬು, ಚಂದ್ರು, ಮುರುಳಿ, ಬಿಪಿಎಲ್ ಸಂಘದ ಅಧ್ಯಕ್ಷ ಸಂಪತ್‌ಕುಮಾರ್, ಅಭಿ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. ಅಲ್ಲದೆ ನಗರಸಭೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕೊಳ್ಳಲು ಕಾರಣಕರ್ತರಾದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಹಿರಿಯ ಸದಸ್ಯರಾದ...

ಗ್ಯಾರಂಟಿ ಯೋಜನೆ ಅನುಷ್ಠಾನ ಪರಿಪೂರ್ಣ : ಮಧ್ಯಮ, ಬಡ ವರ್ಗದವರಿಗೆ ಹೆಚ್ಚಿನ ಅನುಕೂಲ

Image
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್  ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಪಂಚಾಯಿತಿ ವ್ಯಾಪ್ತಿಯ  ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.       ಭದ್ರಾವತಿ : ಸರ್ಕಾರದ ೫ ಗ್ಯಾರಂಟಿ ಯೋಜನೆಗಳನ್ನು ತಾಲೂಕಿನಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಮಧ್ಯಮ ಹಾಗು ಬಡ ವರ್ಗದವರಿಗೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.       ಅವರು ತಾಲೂಕಿನ ಕಂಬದಾಳು ಹೊಸೂರು ಪಂಚಾಯಿತಿ ವ್ಯಾಪ್ತಿಯ  ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದರು.       ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಸರ್ಕಾರ ಕೋಟ್ಯಾಂತರ ರು. ಅನುದಾನ ಬಿಡುಗಡೆಗೊಳಿಸಿದ್ದು, ಬಹುತೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಮುಂಬರುವ ...

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ.೧೧ರಿಂದ ಮುಷ್ಕರ

Image
ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆಗೆ ಅವಕಾಶ       ಭದ್ರಾವತಿ : ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರ ಪ್ರಮುಖ ೧೨ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಮಾ.೧೧ ರಿಂದ ೧೫ರವರೆಗೆ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.       ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ, ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ಸೇರಿದಂತೆ ಎಲ್ಲಾ ಸಂಘಟನೆಗಳ ಸಾರಥ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಬಲದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರು ತಮ್ಮ ಕೇಂದ್ರ ಸ್ಥಾನಗಳಲ್ಲಿ ಕಪ್ಪುಪಟ್ಟಿ ಧರಿಸಿ ಹೊರರೋಗಿ ಸೇವೆ ನೀಡದೆ ಕೇವಲ ತುರ್ತು ಸೇವೆ ಒದಗಿಸುವುದರ ಮೂಲಕ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವ ಮೂಲಕ ಮುಷ್ಕರ ಬೆಂಬಲಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಗೌರವಾಧ್ಯಕ್ಷರಾದ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಅಧ್ಯಕ್ಷೆ ಕ...

ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ.: ಸ್ಟೀವನ್ ಡೆಸಾ

Image
ಭದ್ರಾವತಿ ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ: ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ. ಆ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಗಾಂಧಿನಗರ ವೇಳಾಂಗಣಿ ಆರೋಗ್ಯಮಾತೆ ದೇವಾಲಯದ ಧರ್ಮಗುರು ಸ್ಟೀವನ್ ಡೆಸಾ ಹೇಳಿದರು.       ಅವರು ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿದರು.       ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ. ಸಮಾಜದಲ್ಲಿ ತಮ್ಮ ಮೇಲಿನ ಶೋಷಣೆ, ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಅಶಕ್ತರು, ದೀನದಲಿತರು, ಸಂಕಷ್ಟಕ್ಕೆ ಒಳಗಾದವರ ಸೇವೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಬದುಕು ಸಾರ್ಥಕಗೊಳ್ಳು...

ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ.: ಸ್ಟೀವನ್ ಡೆಸಾ

Image
ಭದ್ರಾವತಿ ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ: ಮಹಿಳೆಯರು ಸಹ ಹೆಚ್ಚು ಸಂಘಟಿತರಾದಾಗ ಹೆಚ್ಚಿನ ಬಲಗೊಳ್ಳಲು ಸಾಧ್ಯ. ಆ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಗಾಂಧಿನಗರ ವೇಳಾಂಗಣಿ ಆರೋಗ್ಯಮಾತೆ ದೇವಾಲಯದ ಧರ್ಮಗುರು ಸ್ಟೀವನ್ ಡೆಸಾ ಹೇಳಿದರು.       ಅವರು ನ್ಯೂಟೌನ್ ಅಮಲೋಧ್ಬವಿ ಮಾತೆ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿದರು.       ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮತ್ತಷ್ಟು ಸಬಲೀಕರಣಗೊಳ್ಳಬೇಕಿದೆ. ಸಮಾಜದಲ್ಲಿ ತಮ್ಮ ಮೇಲಿನ ಶೋಷಣೆ, ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಅಶಕ್ತರು, ದೀನದಲಿತರು, ಸಂಕಷ್ಟಕ್ಕೆ ಒಳಗಾದವರ ಸೇವೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ಬದುಕು ಸಾರ್ಥಕಗೊಳ್ಳು...

ಉಕ್ಕಿನ ನಗರದಲ್ಲಿ ಸಂಚಾರಿ ದಟ್ಟನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಅಧಿಸೂಚನೆ : ಉಪಾಧೀಕ್ಷಕ ಪ್ರಕಾಶ್ ರಾಥೋಡ್

Image
ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ಆದೇಶ, ಉಲ್ಲಂಘಿಸಿದ್ದಲ್ಲಿ ಸ್ಥಳದಲ್ಲಿಯೇ ದಂಡ  ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್       ಭದ್ರಾವತಿ : ಸಂಚಾರ ಪೊಲೀಸ್ ಠಾಣಾ ನಗರಸಭೆ ವ್ಯಾಪ್ತಿಯಲ್ಲಿ ದಿನೇ ದಿನೇ ವಾಹನಗಳ ದಟ್ಟನೆ ಮತ್ತು ಸಂಚಾರ ದಟ್ಟನೆ ಹೆಚ್ಚಾಗುತ್ತಿದ್ದು, ಪದೇ ಪದೇ ಟ್ರಾಫಿಕ್ ಜಾಮ್ ಮತ್ತು ಅಪಘಾತದಿಂದಾಗಿ ಅನೇಕ ಸಾವುನೋವುಗಳು ಸಂಭವಿಸುತ್ತಿವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ವಾಹನ ನಿಲುಗಡೆ ನಿಷೇಧ, ಏಕ ಮುಖ ಸಂಚಾರ ಮತ್ತು ದಿನ ಬಿಟ್ಟು ದಿನ ವಾಹನಗಳ ನಿಲುಗಡೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಜಿಲ್ಲಾಧಿಕಾರಿಗಳಾದ ಪ್ರಭಲಿಂಗ ಕವಳಿಕಟ್ಟೆಯವರು ಅಧಿಸೂಚನೆ ಹೊರಡಿಸಿ ಆದೇಶಿಸಿದ್ದಾರೆಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ತಿಳಿಸಿದರು.      ಈ ಕುರಿತು ಸೋಮವಾರ ಮಾಹಿತಿ ನೀಡಿ, ಭದ್ರಾವತಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ೩.೩೯,೮೪೬ ಜನಸಂಖ್ಯೆ ಇದ್ದು, ಪ್ರತಿ ದಿನ ಕೆಲಸದ ನಿಮಿತ್ತ ಹೊರಗಿನಿಂದ ಸಾವಿರಾರು ಜನರು ನಗರಕ್ಕೆ ಭೇಟಿ ಕೊಡುತ್ತಿರುತ್ತಾರೆ. ನಗರದಲ್ಲಿ ಒಂದು ರಾಷ್ಟ್ರೀಯ ಹೆದ್ದಾರಿ (ಎನ್.ಎಚ್-೬೯), ಮೂರು ರಾಜ್ಯ ಹೆದ್ದಾರಿಗಳು (ಎಸ್.ಎಚ್-೬೫, ಎಸ್.ಎಚ್-೬೮ ಮತ್ತು ಎಸ್.ಎಚ್-೧೧೬) ಹಾದು ಹೋಗಿರುತ್ತವೆ. ...

ಮಾ.೧೩ರಂದು ನಗರಸಭೆ ಬಜೆಟ್ ಮಂಡನೆ

Image
     ಭದ್ರಾವತಿ : ನಗರಸಭೆ ೨೦೨೬-೨೭ನೇ ಸಾಲಿನ ಆಯ-ವ್ಯಯ ಮಂಡನೆ ಮಾ.೧೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.       ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದೆ. ಕೆಲವು ಪ್ರಮುಖ ಕಾಮಗಾರಿಗಳು ವಿಳಂಬವಾಗಿ ಆರಂಭಗೊಂಡರೆ, ಮತ್ತೆ ಕೆಲವು ಕಾಮಗಾರಿಗಳು ಅನುದಾನ ಲಭ್ಯತೆ ಇಲ್ಲದೆ ಇನ್ನೂ ಆರಂಭಗೊಂಡಿಲ್ಲ. ಈ ನಡುವೆ ನಗರಸಭೆಯಲ್ಲಿ ಪ್ರತಿ ವರ್ಷ ಆದಾಯಕ್ಕಿಂತ ಖರ್ಚು ಅಧಿಕವಾಗುತ್ತಿದೆ.       ಕುಡಿಯುವ ನೀರು ಪೂರೈಕೆ, ತ್ಯಾಜ್ಯ ನಿರ್ವಹಣೆಗಾಗಿ ಸಾಕಷ್ಟು ಹಣ ವ್ಯಯಿಸಲಾಗುತ್ತಿದೆ. ಆದರೂ ಸಹ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಎಲ್ಲಾ ವಾರ್ಡ್‌ಗಳಲ್ಲೂ ಹಲವಾರು ಸಮಸ್ಯೆಗಳಿದ್ದು, ಈ ಹಿನ್ನಲೆಯಲ್ಲಿ ಈ ಬಾರಿ ಆಯ-ವ್ಯಯ ಗಮನ ಸೆಳೆಯುತ್ತಿದೆ.       ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆ ವಹಿಸಿದ್ದು, ಸದಸ್ಯರು ಸಭೆಗೆ ಆಗಮಿಸಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ. 

ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಿ : ಕವಿತಾ

Image
ಬಿಜೆಪಿ ಮಹಿಳಾ ಮೋರ್ಚಾದಿಂದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ  ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದ ದೇವರಾಜ ಅರಸು ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾರವರು, ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿ ಜೀವನದ ನಿರ್ಣಾಯಕ ಘಟ್ಟದಲ್ಲಿರುವ ತಾವೆಲ್ಲರೂ ಶ್ರದ್ದೆಯಿಂದ ಓದಿ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಧೈರ್ಯವಾಗಿ ಹೋರಾಡುವ ಜೊತೆಗೆ ಮೋಸ, ವಂಚನೆಗಳಿಂದ ಜಾಗೃತರಾಗಿರಬೇಕು. ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ಸಮಸ್ಯೆಗಳು ಇದ್ದ...