ಕಾಮ್ರೇಡ್ ಡಿ.ಸಿ ಮಾಯಣ್ಣನವರಿಗೆ ನಾಗರೀಕ ಪ್ರಶಸ್ತಿ, ಆಶ್ರಯ ಗುಂಪು ಮನೆಗಳಿಗೆ ಹೆಸರು ನಾಮಕರಣಗೊಳಿಸಿ
ಫೆ.೧೦ರಂದು ಬೆಳಿಗ್ಗೆ ೧೧ ಗಂಟೆಗೆ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ ಭದ್ರಾವತಿ : ಹಿರಿಯ ರಾಜಕೀಯ ಮುತ್ಸದ್ದಿ, ಕಾರ್ಮಿಕ ಹೋರಾಟಗಾರ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಸೇವೆಯನ್ನು ಪರಿಗಣಿಸಿ ರಾಜ್ಯ ಹಾಗು ಕೇಂದ್ರ ಸರ್ಕಾರಗಳು ಹಾಗು ಸ್ಥಳೀಯ ಸಂಸ್ಥೆಗಳು ನಾಗರೀಕ ಗೌರವ ಪ್ರಶಸ್ತಿಗಳನ್ನು ನೀಡುವಂತೆ ಹಾಗು ಆಶ್ರಯ ನಿವೇಶನಗಳ ಗುಂಪು ಮನೆಗಳ ಯೋಜನೆಗೆ ಅವರ ಹೆಸರನ್ನು ನಾಮಕರಣಗೊಳಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಫೆ.೧೦ರಂದು ಬೆಳಿಗ್ಗೆ ೧೧ ಗಂಟೆಗೆ ಮನವಿ ಸಲ್ಲಿಸಲಾಗುತ್ತದೆ. ಇತ್ತೀಚೆಗೆ ನಿಧನರಾದ ಕಾರ್ಮಿಕ ಮುಖಂಡರಾದ `ಕಾಮ್ರೇಡ್ ಡಿ.ಸಿ ಮಾಯಣ್ಣ, ಕಾಮ್ರೇಡ್ ಅನಂತ ಸುಬ್ಬರಾವ್, ಕಾಮ್ರೇಡ್ ಕಾಳೇಗೌಡ ಹಾಗು ಕ್ರಾಮ್ರೇಡ್ ಎಸ್. ಆಂಜನೇಯ' ಅವರಿಗೆ ಗೌರವ ಸಲ್ಲಿಸುವಂತಾಗಬೇಕು. ರಾಜ್ಯ ಸರ್ಕಾರ ಸಾಧಕ ಗಣ್ಯರ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕಾರ್ಮಿಕ ಹೋರಾಟಗಾರರನ್ನು ಗುರುತಿಸಿ ಗೌರವಿಸಲು ಕಾರ್ಮಿಕ ರತ್ನ ಎಂಬ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುತ್ತಿದ್ದು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕರು, ಹೋರಾಟಗಾರರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ನಾಗರೀಕರು ಹೆಚ್ಚಿನ ಆಗಮಿಸಿ ಯ...