ಮೂಲ ಸೌಕರ್ಯ ಕಲ್ಪಿಸಿ, ಹೊಸದಾಗಿ ೧೮ ಮಕ್ಕಳನ್ನು ದಾಖಲಿಸಿ ಸರ್ಕಾರಿ ಶಾಲೆ ಉಳಿಸಿಕೊಳ್ಳಲಾಯಿತು : ಸೈಯದ್ ಆಸಿಫ್
ಭದ್ರಾವತಿ ಜಟ್ಪಟ್ ನಗರ ಆಶ್ರಯ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಸೈಯದ್ ಆಸಿಫ್ ಮತ್ತು ಶಿಕ್ಷಕ ಜೆ. ಮಂಜುನಾಥ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ಭದ್ರಾವತಿ : ಕೇವಲ ೬ ಮಕ್ಕಳ ದಾಖಲಾತಿ ಹೊಂದುವ ಮೂಲಕ ಮುಚ್ಚುವ ಸ್ಥಿತಿ ತಲುಪಿದ್ದ ಜಟ್ಪಟ್ ನಗರ ಆಶ್ರಯ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಸಹಕಾರ ಹಾಗು ಪರಿಶ್ರಮದಿಂದ ಉಳಿಸಿಕೊಳ್ಳಲಾಯಿತು. ಭವಿಷ್ಯದಲ್ಲಿ ಈ ಶಾಲೆ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಹೊಂದುವ ಮೂಲಕ ಮಾದರಿಯಾಗಬೇಕೆಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೈಯದ್ ಆಸಿಫ್ ಹೇಳಿದರು. ಅವರು ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿ, ಈ ಶಾಲೆಯಲ್ಲಿ ೨೦೨೪-೨೫ರ ಸಾಲಿನಲ್ಲಿ ಕೇವಲ ೬ ಮಕ್ಕಳು ದಾಖಲಾಗಿದ್ದರು. ಈ ಸಂದರ್ಭದಲ್ಲಿ ಶಾಲೆಯನ್ನು ಮುಚ್ಚಲು ಆಶ್ರಯ ಬಡಾವಣೆಯಲ್ಲಿ ಗುಸು ಗುಸು ಚರ್ಚೆ ನಡೆಯುತ್ತಿತ್ತು. ಇಂತಹ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶಾಲೆಗೆ ಅನುದಾನ ಬಿಡುಗಡೆಗೊಳಿಸಿದರು. ಅಲ್ಲದೆ ಈ ಭಾಗದ ನಗರಸಭಾ ಸದಸ್ಯ ಬಿ.ಎಂ ಮಂಜುನಾಥ್( ಟೀಕು) ಹೆಚ್ಚಿನ ಸಹಕಾರ ನೀಡಿದ ಹಿನ್ನಲೆಯಲ್ಲಿ ಶಾಲೆಯ ಮೂಲಬೋತ ಸೌಕರ್ಯಗಳಾದ ಕುಡಿಯುವ ನೀರು, ವ...