Posts

ನ್ಯಾಯವಾದಿ ಮಗೇಶ್ ಬಾಬು ನಿಧನ

Image
ಮಗೇಶ್ ಬಾಬು      ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ನಿವಾಸಿ, ನ್ಯಾಯವಾದಿ ಮಗೇಶ್ ಬಾಬು(೫೪) ಶನಿವಾರ ನಿಧನ ಹೊಂದಿದರು.  ಇಬ್ಬರು ಸಹೋದರರು, ಓರ್ವ ಸಹೋದರಿ ಇದ್ದಾರೆ. ಇವರ ಅಂತ್ಯಕ್ರಿಯೆ ಭಾನುವಾರ ಲೋಯರ್ ಹುತ್ತಾ, ದೊಣಬಘಟ್ಟ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮಗೇಶ್ ಬಾಬು ಈ ಹಿಂದೆ ತಾಲೂಕು ವಕೀಲರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.  ಇವರ ನಿಧನಕ್ಕೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಉಮೇಶ್ ಹಾಗು ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎ.ಎನ್ ಕಾರ್ತಿಕ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  

ಏ.೨೬ರವರೆಗೆ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ

Image
ಭದ್ರಾವತಿ ಹಳೇನಗರದ ಗ್ರಾಮ ದೇವತ ಶ್ರೀ ಹಳದಮ್ಮ ದೇವಿ ದೇವಸ್ಥಾನ       ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ' ಏ.೨೦ ರಿಂದ ೨೬ರವರೆಗೆ ನಡೆಯಲಿದ್ದು, ಧಾರ್ಮಿಕ ಕಾರ್ಯಗಳ ಜೊತೆಗೆ ಹಲವು ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಕೆ ಲಕ್ಷ್ಮಣ್ ಕೋರಿದರು.       ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಎರಡು ವರ್ಷಕ್ಕೆ ಒಮ್ಮೆ ನಡೆಯುವ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ಜಾತ್ರಾ ಮಹೋತ್ಸವದ ವಿಶೇಷ ಎಂದರೆ ಎಲ್ಲಾ ಜಾತಿ, ಧರ್ಮದವರು ಸೇರಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.       ಏ.೨೦ರ ಸೋಮವಾರ ಬೆಳಿಗ್ಗೆ ೮ ಗಂಟೆಗೆ ಹೊಸ ಸಿಡಿ ಮರ ಪ್ರತಿಷ್ಠಾಪನೆ ಹಾಗು ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ೨೧ರ ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ದೇವರುಗಳಿಗೆ ಅಭಿಷೇಕ, ಮಧ್ಯಾಹ್ನ ೧೧ ಗಂಟೆಗೆ ಮಹಾಮಂಗಳಾರತಿ, ನಂತರ ಅನ್ನದಾನ ನಡೆಯಲಿದೆ ಎಂದರು.       ರಾತ್ರಿ ೮ ಗಂಟೆಗೆ ವಿಶೇಷ ಆಕರ್ಷಕ ಜಾನಪದ ಕಲಾ ತಂಡಗಳೊಂದಿಗೆ `ಶ್ರೀ ದೇವರುಗಳ ರಾಜಬೀದಿ ಉತ್ಸವ' ನಡೆಯಲಿದೆ. ನಂತರ ಆಯೋಜಿಸ...

ನಗರಸಭೆ ಸಾಮಾನ್ಯ ಸಭೆ : ಹಲವು ಪ್ರಸಾವನೆಗಳ ಕುರಿತು ಚರ್ಚೆ

Image
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಹಲವು ಪ್ರಸ್ತಾವನೆಗಳ ಕುರಿತು ಚರ್ಚಿಸಲಾಯಿತು.       ಭದ್ರಾವತಿ : ಹಳೇನಗರದ ಗ್ರಾಮ ದೇವತೆ, ಆದಿ ದೇವತೆ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಪ್ರಯುಕ್ತ  ಹಮ್ಮಿಕೊಳ್ಳಲಾಗುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯ ವಿಜೇತರಿಗೆ ಬೆಳ್ಳಿಗದೆ ಬಹುಮಾನ ನೀಡುವುದು, ಎಲ್‌ಇಡಿ ಟಿವಿ ಪರದೆ ಅಳವಡಿಸುವುದು, ಕೆರೆ ಪುನಶ್ಚೇತನಗೊಳಿಸುವುದು, ಡಾ. ಬಾಬು ಜಗಜೀವನ್ ರಾಮ್‌ರವರ ಭವನ ನಿರ್ಮಿಸುವುದು, ನೀರಿನ ಕಂದಾಯ ಹೆಚ್ಚಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಶನಿವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು.       ನಗರಸಭೆಯಲ್ಲಿ ಈಗಾಗಲೇ ಮುಕ್ತಾಯಗೊಂಡಿರುವ ವಾಹನ ಗುತ್ತಿಗೆಗಳನ್ನು ಮರುವಿಸ್ತರಿಸುವುದು, ವಿಡಿಯೋ ಕವರೇಜ್ ಮತ್ತು ಪೋಟೋ ಚಿತ್ರೀಕರಣ ಹಾಗು ಪೋಸ್ಟ್ ಕಾರ್ಡ್ ಅಳತೆಯ ಪೋಟೋ ಮುದ್ರಿಸಿ ಕೊಡುವುದು, ಬೀದಿ ದೀಪಗಳ ವಾರ್ಷಿಕ ನಿರ್ವಹಣೆ ಸೇರಿದಂತೆ ಹಲವಾರು ಗುತ್ತಿಗೆಗಳನ್ನು ಮುಂದುವರೆಸುವುದು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಪಾವತಿಸುವುದು, ನಗರಸಭೆ ನೌಕರರಿಗೆ ವೈದ್ಯಕೀಯ ಚಿಕಿತ್ಸೆ ಭತ್ಯೆ ನೀಡುವುದು, ನಗರಸಭೆ ವ್ಯಾಪ್ತಿಯಲ್ಲಿರುವ ನಗರಸಭೆಗೆ ಹಸ್ತಾಂತರಗೊಂಡಿರುವ ಕೆರೆಗಳನ್ನು ಪುನಶ್ಚೇತನಗೊಳಿಸಿವುದು, ತ್ಯಾಜ್ಯ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇ...

ನೂತನ ಡಾ.ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸದೆ ಅವಮಾನ

Image
ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಖಂಡನೆ  ಭದ್ರಾವತಿಯಲ್ಲಿ ಶನಿವಾರ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.       ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟನೆಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು.       ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಲ್ಲದೆ ಬಾಳೆಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಮೈಸೂರು ಕಾಗದ ಕಾರ್ಖಾನೆ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದ ಸಿದ್ದರಾಮಯ್ಯರವರು ಇದ...

ನೀರಿನ ಕಂದಾಯ ಕಡಿಮೆಗೊಳಿಸಿ, ಖಾಲಿ ನಿವೇಶನಗಳಿಗೆ ತ್ಯಾಜ್ಯ ಶುಲ್ಕ ವಿಧಿಸದಿರಿ

Image
ಮನೆ ಮಾಲೀಕರ ಸಂಘದಿಂದ ನಗರಸಭೆ ಅಧ್ಯಕ್ಷರಿಗೆ ಮನವ ಭದ್ರಾವತಿ ನಗರಸಭೆ ಆಡಳಿತ ಅವೈಜ್ಞಾನಿಕವಾಗಿ ನೀರಿನ ಕಂದಾಯ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು, ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ಶುಲ್ಕ ವಿಧಿಸುವುದನ್ನು ಕೈಬಿಡಬೇಕು ಹಾಗು ಆಸ್ತಿ ತೆರಿಗೆಯಲ್ಲಿ ಉಂಟಾಗುತ್ತಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಶನಿವಾರ ನಗರಸಭೆ ಸಾಮಾನ್ಯಸಭೆಯಲ್ಲಿ ಅಧ್ಯಕ್ಷರಿಗೆ ಮನೆ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ನಗರಸಭೆ ಆಡಳಿತ ಅವೈಜ್ಞಾನಿಕವಾಗಿ ನೀರಿನ ಕಂದಾಯ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು, ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ಶುಲ್ಕ ವಿಧಿಸುವುದನ್ನು ಕೈಬಿಡಬೇಕು ಹಾಗು ಆಸ್ತಿ ತೆರಿಗೆಯಲ್ಲಿ ಉಂಟಾಗುತ್ತಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಶನಿವಾರ ನಗರಸಭೆ ಸಾಮಾನ್ಯಸಭೆಯಲ್ಲಿ ಅಧ್ಯಕ್ಷರಿಗೆ ಮನೆ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಯಿತು.       ನಗರಸಭೆ ಆಡಳಿತ ಏ.೧ರಿಂದ ಯಾವುದೇ ಮುನ್ಸೂಚನೆ ನೀಡದೆ ಅವೈಜ್ಞಾನಿಕವಾಗಿ ನೀರಿನ ಕಂದಾಯ ಶೇ.೫೦ರಷ್ಟು ಹೆಚ್ಚಳ ಮಾಡಿರುವುದು ಖಂಡನೀಯ. ಈ ಸಂಬಂಧ ಈಗಾಗಲೇ ತಮಗೂ ಹಾಗು ಶಾಸಕರಿಗೂ ಮನವಿ ಮಾಡಲಾಗಿದ್ದು, ಸಾಮಾನ್ಯಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ನಾಗರೀಕರಿಗೆ ಹೊರೆಯಾಗದಂತೆ ನೀರಿನ ಶುಲ್ಕ ಹೆಚ್ಚಳ ಮಾಡಿರುವುದನ್...

ಏ.೧೮ರಂದು ನಗರಸಭೆ ಸಾಮಾನ್ಯ ಸಭೆ

Image
     ಭದ್ರಾವತಿ : ನಗರಸಭೆ ಸಾಮಾನ್ಯ ಸಭೆ ಏ.೧೮ರ ಶನಿವಾರ ಮಧ್ಯಾಹ್ನ ೩ ಗಂಟೆಗೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.       ಈ ಬಾರಿ ಸಾಮಾನ್ಯಸಭೆ ಹೆಚ್ಚು ಗಮನ ಸೆಳೆಯುತ್ತಿದ್ದು, ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ನಂತರ ನಡೆಯುತ್ತಿರುವ ಸಭೆ ಇದಾಗಿದೆ. ಈ ನಡುವೆ ನೀರಿನ ಶುಲ್ಕ ತೆರಿಗೆ, ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ನಗರಸಭೆ ವ್ಯಾಪ್ತಿಯ ನಿವಾಸಿಗಳ ಆಕ್ರೋಶಕ್ಕೆ ತುತ್ತಾಗುವಂತಾಗಿದೆ. ಬೇಸಿಗೆ ಹಿನ್ನಲೆಯಲ್ಲಿ ಬಹುತೇಕ ವಾರ್ಡ್‌ಗಳಲ್ಲಿ ಹಲವಾರು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ನಡುವೆ ಹಲವು ಪ್ರಮುಖ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಯಲಿದೆ. ಇದರಿಂದಾಗಿ ಈ ಬಾರಿ ಸಭೆ ಹೆಚ್ಚು ಗಮನ ಸೆಳೆಯುತ್ತಿದೆ.       ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗು ಸಿಬ್ಬಂದಿಗಳು ತಪ್ಪದೇ ಸಭೆಗೆ ಹಾಜರಾಗಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ.

ಸಾಮಾಜಿಕ ಸುಧಾರಣೆಗಳಿಗೆ ಅದ್ಯತೆ ನೀಡುವ, ಜೀವನ ಮೌಲ್ಯಗಳನ್ನು ತಿಳಿಸುವ ಕಲೆಗಳು ವಿರಳ : ಉಮೇಶ್ ಹಾಲಾಡಿ

Image
ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ನಯನ ಆಸ್ಪತ್ರೆ ಸಭಾಂಗಣದಲ್ಲಿ ಜನ್ನಾಪುರ ಡಾ. ಬಿ.ಆರ್.ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ  ಗಾಯಕ ನಾದ ಮಣಿನಾಲ್ಕೂರುರವರ ಕತ್ತಲಹಾಡು ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.      ಭದ್ರಾವತಿ: ಸಾಮಾಜಿಕ ಸುಧಾರಣೆಗಳಿಗೆ ಹೆಚ್ಚಿನ ಅದ್ಯತೆ ನೀಡುವ, ಜೀವನ ಮೌಲ್ಯಗಳನ್ನು ತಿಳಿಸುವ ಅರ್ಥಗರ್ಭಿತವಾದ ಹಾಡುಗಳ ಮೂಲಕ ಜನರನ್ನು ರಂಜಿಸುವ ಕಲೆಗಳು ತುಂಬಾ ವಿರಳವಾಗಿದ್ದು, ಇಂತಹ ಕಲೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಚ್ಚಿನ ಸಹಕಾರ ನೀಡಲಿದೆ ಎಂದು ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ತಿಳಿಸಿದರು.        ಅವರು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ನಯನ ಆಸ್ಪತ್ರೆ ಸಭಾಂಗಣದಲ್ಲಿ ಜನ್ನಾಪುರ ಡಾ. ಬಿ.ಆರ್.ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ ಆಯೋಜಿಸಲಾಗಿದ್ದ ಗಾಯಕ ನಾದ ಮಣಿನಾಲ್ಕೂರುರವರ ಕತ್ತಲಹಾಡು ಗಾಯನ ಕಾರ್ಯಕ್ರಮ ಏಕತಾರಿ ವಾದ್ಯ ನುಡಿಸುವಿದರ ಮೂಲಕ ಉದ್ಘಾಟಿಸಿ ಮಾತನಾಡಿದರು.       ವಿಶಿಷ್ಟ ಕಲೆಯನ್ನು ಹೊಂದಿರುವ ನಾದ ಮಣಿನಾಲ್ಕೂರುರವರು ಹಾಡುಗಳ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗ...

ಜೆಡಿಎಸ್‌ನಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ-೨ ಕಾರ್ಯಾಗಾರಕ್ಕೆ ಚಾಲನೆ

Image
ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.       ಭದ್ರಾವತಿ: ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.       ಪಕ್ಷದ ರಾಜ್ಯ ವಕ್ತಾರ ರಾಜುಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗು ಕೋರ್ ಕಮಿಟಿ ಸದಸ್ಯೆ ಶಾರದ ಅಪ್ಪಾಜಿ ಸೇರಿದಂತೆ ಇನ್ನಿತರರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜುಗೌಡರವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ನೀಡಿ ಬೂತ್ ಮಟ್ಟದ ಬಿಎಲ್‌ಎ ಅಧಿಕಾರಿಗಳು ಯಾವ ರೀತಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂಬುದನ್ನು ವಿವರಿಸಿದರು.       ಪಕ್ಷದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಗೀತಾ ಸತೀಶ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭೆ  ಸದಸ್ಯೆ ಮಂಜುಳ ಸುಬ್ಬಣ್ಣ, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಮಾಜಿ ಸದಸ್ಯರಾದ ಮೋಹನ್ ರಾವ್, ಎಚ್.ಬಿ...

ಏ.೧೯ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆ : ಒಟ್ಟು ೧೫ ಮಂದಿ ಕಣದಲ್ಲಿ

Image
     ಭದ್ರಾವತಿ : ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯಕಾರಿ ಸಮಿತಿ ಚುನಾವಣೆ ಏ.೧೯ರ ಭಾನುವಾರ ಬೆಳಿಗ್ಗೆ ೮.೩೦ ರಿಂದ ಸಂಜೆ ೪.೩೦ರ ವರೆಗೆ ಹಳೇನಗರದ ಕನಕ ಮಂಟಪ ಮೈದಾನ ಮುಂಭಾಗದ ಪಿ.ಎಂ.ಶ್ರೀ ಶಾಲೆಯಲ್ಲಿ ನಡೆಯಲಿದೆ.       ಕಾರ್ಯಕಾರಿ ಸಮಿತಿಯ ೪ ಮಹಿಳಾ ಮೀಸಲು ವರ್ಗಕ್ಕೆ ದೇವರ ನರಸೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್.ಎಸ್ ಮಾಯಮ್ಮ, ತಿಪ್ಲಾಪುರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಎಸ್. ಚಿತ್ರ, ಗೊಂದಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಆಸ್ಮಾ ಬೇಗಂ, ಹಳೇನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಕೋಕಿಲ ಮತ್ತು ಕಲ್ಲಿಹಾಳ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಿ. ಪಾರ್ವತಮ್ಮ ಸೇರಿದಂತೆ ಒಟ್ಟು ೫ ಅಭ್ಯರ್ಥಿಗಳು ಕಣದಲ್ಲಿದ್ದಾರೆ.      ೯ ಸಾಮಾನ್ಯ ವರ್ಗಕ್ಕೆ ಮೀಸಲಾದ ಸ್ಥಾನಗಳಿಗೆ ಅನವೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್.ಎಂ ಜಗದೀಶ್, ಆಟಗಾರಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಟಿ. ಪೃಥ್ವಿರಾಜ್, ಹಿರಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ.ಎಸ್ ಮಲ್ಲಿಕಾರ್ಜುನ್, ಹೊಳೆಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್. ಹನುಮಂತಪ್ಪ, ಗೌಳಿಗೆರೆ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಚ್. ಭಾರತಿ, ಅಂತರಗಂಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಕೆಪಿಎಸ್)ಯ ಎಂ.ಸಿ ...

ಹೋರಾಟಗಾರ ಐ.ಎಲ್ ಅರುಣ್ ಕುಮಾರ್ ನಿಧನ

Image
ಐ.ಎಲ್ ಅರುಣ್ ಕುಮಾರ್       ಭದ್ರಾವತಿ : ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ನಿವಾಸಿ, ಹಿರಿಯ ಹೋರಾಟಗಾರ ಐ.ಎಲ್ ಅರುಣ್ ಕುಮಾರ್(೭೪) ಬುಧವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.       ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ಪ್ರಗತಿಪರ ಹಾಗು ಕನ್ನಡಪರ ಹೋರಾಟಗಾರರಾಗಿದ್ದರು. ಈ ಹಿಂದೆ ಪತ್ರಿಕಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.       ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಜಟ್‌ಪಟ್ ನಗರದ ಕ್ರೈಸ್ತ ಸಮಾಧಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ, ಅವಮಾನ, ಜೀವ ಬೆದರಿಕೆ : ೫ ಮಂದಿಗೆ ೨ ಲಕ್ಷ ಜೈಲು ಶಿಕ್ಷೆ

Image
ಭದ್ರಾವತಿ ಅಂತರಗಂಗೆ ಗ್ರಾಮದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ, ಅವಮಾನ, ಜೀವ ಬೆದರಿಕೆ, ೫ ಮಂದಿಗೆ ೨ ಲಕ್ಷ ಜೈಲು ಶಿಕ್ಷೆ       ಭದ್ರಾವತಿ: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಆಕೆಯ ಜಡೆ ಹಾಗು ಸೀರೆ ಎಳೆದು ಅವಮಾನಗೊಳಿ ಕೊಲೆ ಬೆದರಿಕೆ ಹಾಕಿದ್ದ ೫ ಮಂದಿಗೆ ೨ ವರ್ಷ ಜೈಲು ಶಿಕ್ಷೆ ಹಾಗು ಒಟ್ಟು ೧ ಲಕ್ಷ ರು. ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.       ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ  ೬ ಜೂನ್ ೨೦೨೩ ರಂದು ರಾತ್ರಿ ೧೧.೪೫ ಸಮಯದಲ್ಲಿ ನವೀನ(೨೫), ಮನು(೩೧), ಕೆ. ಸಂತೋಷ(೩೧), ವಿ. ಮಂಜುನಾಥ(೩೩) ಹಾಗೂ ಅಭಿಷೇಕ್(೨೪) ಎಂಬುವರು ಗ್ರಾಮದ ರಾಧಾ(೩೫)ರವರ ಮನೆಗೆ ಅವರ ಪತಿ ವೆಂಕಟೇಶ್‌ರನ್ನ ಹುಡುಕಿಕೊಂಡು ಬಂದಿದ್ದು, ಈ ಸಂದರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ರಾಧಾರಿಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಅವರ ಜಡೆ ಹಾಗು ಸೀರೆ ಎಳೆದು ಅವಮಾನಗೊಳಿ ಕೊಲೆ ಬೆದರಿಕೆ ಹಾಕಿದ್ದರು. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.       ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಐಪಿಎಸ್ ಅಧಿಕಾರಿ  ಜಿತೇಂದ್ರ ಕುಮಾರ ದಯಾಮರವರು ಪ್ರಕರಣದ ದೋಷಾರೋಪಣಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ...

ಶ್ರಮ ಜೀವಿಗಳಾದ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಮೋಹನ್

Image
ಭದ್ರಾವತಿ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.        ಭದ್ರಾವತಿ: ಶ್ರಮ ಜೀವಿಗಳಾದ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಪ್ರಾಮಾಣಿಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಕಾಳಜಿವಹಿಸಿದ್ದು, ಎಲ್ಲಾ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುತ್ತಿದ್ದಾರೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ಅವರು ಗುರುವಾರ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  ...

ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷೆ ಗಂಗಮ್ಮ ನಿಧನ

Image
ಗಂಗಮ್ಮ       ಭದ್ರಾವತಿ : ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಮಾಜಿ ಅಧ್ಯಕ್ಷ ದಿವಂಗತ ಕೆ.ಟಿ ಗಿರಿಯಪ್ಪನವರ ಪತ್ನಿ, ಹಳೇ ಸೀಗೇಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷೆ ಗಂಗಮ್ಮ(೭೬) ಬುಧವಾರ ಸಂಜೆ ನಿಧನ ಹೊಂದಿದರು.       ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಮಹಿಳಾ ಘಟಕದ ಅಧ್ಯಕ್ಷೆ ವಾಣಿ ಸೇರಿದಂತೆ ನಾಲ್ವರು ಪುತ್ರಿಯರಿದ್ದಾರೆ. ಗಂಗಮ್ಮ ಕೆ.ಟಿ ಗಿರಿಯಪ್ಪನವರ ನಿಧನದ ನಂತರ ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಹಾಗು ರಾಜೀವ್ ಗಾಂಧಿ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.       ಗಂಗಮ್ಮನವರ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಹಾಗು ರಾಜೀವ್ ಗಾಂಧಿ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ. 

ಸಿಬಿಎಸ್‌ಇ ಪರೀಕ್ಷೆ : ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆಗೆ ಶೇ.೧೦೦ರಷ್ಟು ಫಲಿತಾಂಶ

Image
ಎಸ್. ವೈಭವಿ (ಶೇ.೯೪.೨)      ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದ್ದು, ೧೦ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.       ಒಟ್ಟು ೩೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಪ್ರಥಮ ದರ್ಜೆಯಲ್ಲಿ ೨೫ ಹಾಗು ದ್ವಿತೀಯ ದರ್ಜೆಯಲ್ಲಿ ೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಾಮಾಜಿಕ ವಿಜ್ಞಾನದಲ್ಲಿ ೯ ವಿದ್ಯಾರ್ಥಿಗಳು ೯೦ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರುವುದು ವಿಶೇಷವಾಗಿದೆ.  ಎ.ವಿ ಚಿರಾಂತ್ ಗೌಡ (ಶೇ.೯೨.೨)      ಎಸ್. ವೈಭವಿ ಶೇ.೯೪.೨, ಎ.ವಿ ಚಿರಾಂತ್ ಗೌಡ ಶೇ.೯೨.೨, ಎಂ.ಪಿ ಹನಿ ಶೇ.೯೧.೬, ತಸ್ಮಿಯಾ ಶೇ.೯೦.೬ ಹಾಗು ವಿ.ಆರ್ ಕಾರುಣ್ಯ ಶೇ.೯೦.೨ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾಗಿದ್ದಾರೆ.       ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಲಭಿಸಲು ಕಾರಣಕರ್ತರಾಗಿರುವ ವಿದ್ಯಾರ್ಥಿಗಳು ಹಾಗು ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗು ಪೋಷಕರಿಗೆ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಮತ್ತು ಶ್ರೀ ಸತ್ಯಸಾಯಿ ಜ್ಞಾನಪೀಠ ಅಭಿನಂದನೆ ಸಲ್ಲಿಸಿವೆ.  ಎಂ.ಪಿ ಹನಿ (ಶೇ.೯೧.೬)

ದಲಿತ ಮುಖಂಡ ವಿ. ವಿನೋದ್‌ಗೆ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ

Image
ಭದ್ರಾವತಿ ನಗರದ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದಲಿತ ಮುಖಂಡ ವಿ. ವಿನೋದ್‌ರವರಿಗೆ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.       ಭದ್ರಾವತಿ: ನಗರದ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದಲಿತ ಮುಖಂಡ ವಿ. ವಿನೋದ್‌ರವರಿಗೆ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ  ಆಯೋಜಿಸಲಾಗಿದ್ದ ವಿಶ್ವಜ್ಞಾನಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ೧೩೫ನೇ ಜನ್ಮ ದಿನಾಚರಣೆ ಹಾಗು ನೂತನವಾಗಿ ನಿರ್ಮಾಣಗೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ  ಪ್ರಶಸ್ತಿ ನೀಡಿ ಗೌರವಿಸಲಾಯಿತು.       ವಿನೋದ್‌ರವರು ಹಲವಾರು ವರ್ಷಗಳಿಂದ ದಲಿತಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅಲ್ಲದೆ ಕಟ್ಟಡ ಹಾಗು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಪರವಾಗಿ ಸಹ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ...

ಅಂಬೇಡ್ಕರ್, ವಿಶ್ವೇಶ್ವರಾಯ ಇಬ್ಬರು ಮಹನೀಯರ ಬದುಕು ಪ್ರತಿಯೊಬ್ಬರಿಗೂ ಆದರ್ಶ : ಬಿ. ವಿಶ್ವನಾಥ್

Image
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮ ದಿನ ಆಚರಿಸಲಾಯಿತು.        ಭದ್ರಾವತಿ : ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಮತ್ತು  ಸರ್.ಎಂ ವಿಶ್ವೇಶ್ವರಾಯ ಈ ಇಬ್ಬರು ಮಹನೀಯರ ಬದುಕು ಪ್ರತಿಯೊಬ್ಬರಿಗೂ ದಾರಿ ದೀಪವಾಗಿದೆ ಎಂದು ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಖ್ಯ ಮಹಾಪ್ರಬಂಧಕ(ಎಚ್.ಆರ್), ಪ್ರಭಾರಿ ಕಾರ್ಯಪಾಲಕ ನಿರ್ದೇಶಕ ಬಿ. ವಿಶ್ವನಾಥ್ ಹೇಳಿದರು.        ಅವರು ಕಾರ್ಖಾನೆಯಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅಂಬೇಡ್ಕರ್ ಮತ್ತು ವಿಶ್ವೇಶ್ವರಾಯರವರ ಬಾಲ್ಯ ಜೀವನ, ವಿದ್ಯಾಭ್ಯಾಸ, ಅವರು ಅನುಭವಿಸಿದ ನೋವು, ಅವಮಾನ ಹಾಗು ಸಾಧನೆ ಕುರಿತು ವಿವರಿಸಿ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡುವಂತೆ ಕರೆ ನೀಡಿದರು.       ಪ್ರಭಾರಿ ಮಹಾಪ್ರಬಂಧಕರು(ಸ್ಥಾವರ) ಟಿ. ರವಿಚಂದ್ರನ್, ಮಹಾಪ್ರಬಂಧಕರು (ಪರಿಸರ ನಿರ್ವಹಣಾ ಇಲಾಖೆ) ಎಂ. ಸುಬ್ಬರಾವ್,  ಮಹಾಪ್ರಬಂಧಕರು (ನಿರ್ವಹಣೆ ಮತ್ತು ಐಇಡಿ) ಮತ್ತು ಎಸ್.ಸಿ/ಎಸ್.ಟಿ ಕಾರ್ಮಿಕರ ಸಮನ್ವಯಾಧಿಕಾರಿ ಎಲ್. ಸುಂದರ ವಡಿವೇಲು, ಸಹಾಯಕ ...

ಅಬಕಾರಿ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ

Image
ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಭದ್ರಾವತಿ ಹಳೇನಗರದ ಪತ್ರಿಕಾ ಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಕಛೇರಿಯಲ್ಲಿ ಮಂಗಳವಾರ ಆಚರಿಸಲಾಯಿತು.       ಭದ್ರಾವತಿ: ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಳೇನಗರದ ಪತ್ರಿಕಾ ಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಕಛೇರಿಯಲ್ಲಿ ಆಚರಿಸಲಾಯಿತು.       ಕಳೆದ ಹಲವಾರು ವರ್ಷಗಳಿಂದ ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬಕಾರಿ ಕಛೇರಿಗೆ ಕೆಲವು ತಿಂಗಳ ಹಿಂದೆ ಪತ್ರಿಕಾಭವನ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಹ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜನ್ಮದಿನ ಆಚರಿಸಲಾಯಿತು. ಅಬಕಾರಿ ನಿರೀಕ್ಷಕ ಹಾಲನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬಕಾರಿ ಉಪ ನಿರೀಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಬಿಜೆಪಿ ಪಕ್ಷದಿಂದ ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಜನ್ಮದಿನ ಆಚರಣೆ

Image
ಸಂವಿಧಾನ ಶಿಲ್ಪಿ, ಭಾರತ ರತ್ನ,  ಡಾ.   ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದಿಂದ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.        ಭದ್ರಾವತಿ: ಸಂವಿಧಾನ ಶಿಲ್ಪಿ, ಭಾರತ ರತ್ನ,  ಡಾ.   ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಭಾರತೀಯ ಜನತಾ ಪಕ್ಷದಿಂದ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.        ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ಬೆಳಿಗ್ಗೆ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.       ನಂತರ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್‌ವರು ಮುಂಬೈ, ಅಮೇರಿಕ ಮತ್ತು ಲಂಡನ್ ವಿಶ್ವವಿದ್ಯಾಲಯಗಳಿಂದ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಕಾನೂನು ಶಾಸ್ತ್ರಗಳಲ್ಲಿ ಉನ್ನತ ಪದವಿಯನ್ನು ಪಡೆದಿದ್ದಾರೆ.  ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷತೆ ವಹಿಸಿದ್ದರು. ಇಡೀ ವಿಶ್ವದಲ್ಲಿ ಶ್ರೇಷ್ಠವಾದ ಸಂವಿಧಾನ ನೀಡಿದ ಮಹನೀಯರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದರು.   ...

ಡಾ. ಬಿ.ಆರ್ ಅಂಬೇಡ್ಕರ್ ಚಿಂತನೆ, ಆದರ್ಶತನ ಅಳವಡಿಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್

Image
೪.೬೨ ಕೋ. ರು. ವೆಚ್ಚದ ನೂತನ ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮ  ಭದ್ರಾವತಿಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಜ ಕಲ್ಯಾಣ ಇಲಾಖೆ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೫ನೇ ಜಯಂತಿ ಕಾರ್ಯಕ್ರಮ ಹಾಗು ನೂತನವಾಗಿ ಸುಮಾರು ೪.೬೨ ಕೋ. ರು. ವೆಚ್ಚದಲ್ಲಿ ನಗರದ ಹೃದಯ ಭಾಗ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನಿರ್ಮಿಸಲಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.       ಭದ್ರಾವತಿ : ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಚಿಂತನೆ, ಆದರ್ಶತನ ಈ ದೇಶದ ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.       ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಜ ಕಲ್ಯಾಣ ಇಲಾಖೆ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾ...

ಏ.೧೫ರಂದು ನಾದ ಮಣಿನಾಲ್ಕೂರು ಹಾಡುಗಾರಿಕೆ

Image
ನಾದ ಮಣಿನಾಲ್ಕೂರು      ಭದ್ರಾವತಿ: ನಗರದ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ ಏ.೧೫ರಂದು ಸಂಜೆ ೬.೩೦ಕ್ಕೆ ವಿಶೇಷ ಹಾಡುಗಾರಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.       ನಾದ ಮಣಿನಾಲ್ಕೂರು ಇವರಿಂದ ಕತ್ತಲ ಹಾಡು ಬೆಳಕಿನೆಡೆಗೆ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಲಾಸಕ್ತರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ತಮಟೆ ಜಗದೀಶ್ ಕೋರಿದ್ದಾರೆ. 

ಕೊನೆಗೂ ಜನ್ಮದಿನದಂದೇ ಉದ್ಘಾಟನೆಗೊಳ್ಳುತ್ತಿದೆ ಡಾ. ಬಿ.ಆರ್ ಅಂಬೇಡ್ಕರ್ ಭವನ

Image
ಭದ್ರಾವತಿಯಲ್ಲಿ ನಿರ್ಮಾಣಗೊಂಡಿರುವ ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ.         * ಅನಂತಕುಮಾರ್          ಮುಖ್ಯಾಂಶಗಳು :-      - ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ೨೦೧೭ರಲ್ಲಿ ಶಂಕುಸ್ಥಾಪನೆ.       - ಒಟ್ಟು ೪.೬೨ ಕೋ. ರು. ವೆಚ್ಚದ ಸುಸ್ಸಜಿತ ಭವನ       - ವಿಳಂಬ ಕಾಮಕಾರಿ, ೯ ವರ್ಷಗಳ ನಂತರ ಪೂರ್ಣ      - ಎಸ್. ಮಧು ಬಂಗಾರಪ್ಪ ಉದ್ಘಾಟನೆ, ಸಚಿವ ಡಾ. ಎಚ್.ಸಿ ಮಹಾದೇವಪ್ಪ ಉಪಸ್ಥಿತಿ      ಭದ್ರಾವತಿ: ಕ್ಷೇತ್ರದಲ್ಲಿ ಸುಮಾರು ೪ ದಶಕಗಳ ಹೋರಾಟಕ್ಕೆ ಇದೀಗ ಫಲ ಲಭಿಸಿದ್ದು, ವಿಶ್ವಜ್ಞಾನಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಇಂದು ಉದ್ಘಾಟನೆಗೊಳ್ಳುತ್ತಿದೆ.       ದಲಿತ ಚಳುವಳಿ ಹುಟ್ಟಿದ ನೆಲದಲ್ಲಿ ಅದರ ಮೂಲ ಪ್ರೇರಕ ಶಕ್ತಿ, ಜಗತ್ತಿನ ಶ್ರೇಷ್ಠ ಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ. ಬಿ.ಆರ್ ಅಂಬೇಡ್ಕರ್‌ರವರ ಭವನದ ಕನಸು ಇದೀಗ ನನಸಾಗುತ್ತಿದೆ. ಕ್ಷೇತ್ರದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು ವಿವಿಧ ದಲಿತಪರ ಸಂಘಟನೆಗಳು ಸುಮಾರು ೪ ದಶಕಗಳ ಹಿಂದೆ ಆರಂಭಿಸಿದ ಹೋರಾಟ ಇದೀಗ ಅಂತ್ಯಗೊಳ್ಳುವಂತಾಗಿದೆ.     ಆರಂಭದ ಹೋರಾಟದಲ್ಲಿ ಜ...

ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾರದ ಮಾರ್ಗ ಪಥಸಂಚಲನ

Image
ರೌಡಿಶೀಟರ್ ಮನೆಗಳ ಪರಿಶೀಲನೆ, ಚಲನವಲನಗಳ ಮೇಲೆ ನಿಗಾ  ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ರಮೇಶ್‌ರವರ ನೇತೃತ್ವದಲ್ಲಿ ಪಥಸಂಚಲನ ನಡೆಸಲಾಯಿತು. ಅಲ್ಲದೆ ರೌಡಿಶೀಟರ್‌ಗಳ ಮನೆಗಳಿಗೆ ತೆರಳಿ ತಪಾಸಣೆ ನಡೆಸಿ, ಅವರ ಗುಣ, ನಡೆತೆ ಪರಿಶೀಲಿಸಲಾಯಿತು. ಅವರ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ.       ಭದ್ರಾವತಿ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ಸಮುದಾಯದಲ್ಲಿ ಶಾಂತಿ-ಸೌಹಾರ್ದತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಲವು ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಪೈಕಿ ವಾರದ ಮಾರ್ಗ ಪಥಸಂಚಲನ(ರೂಟ್ ಮಾರ್ಚ್) ನಡೆಸಲಾಗುತ್ತಿದೆ.       ಪ್ರತಿ ಭಾನುವಾರ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಠಾಣಾ ಉಪ ನಿರೀಕ್ಷಕರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಗುತ್ತಿದೆ. ನಿವಾಸಿಗಳು ಯಾವುದೇ ರೀತಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸುರಕ್ಷತೆಗೆ ಮೊದಲ ಆದ್ಯತೆ, ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸುವ ನಿಟ್ಟಿನಲ್ಲಿ ಇಲ್ಲಿನ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ರಮೇಶ್‌ರವರ ನೇತೃತ್ವದಲ್ಲಿ ಪಥಸಂಚಲನ ನಡೆಸಲಾಯಿತು. ಅಲ್ಲದೆ ರೌಡಿಶೀಟರ್‌ಗಳ ಮನೆಗಳಿಗೆ ತೆರಳಿ ತಪಾಸಣೆ ನಡೆಸಿ, ಅವರ ಗುಣ, ನಡೆತೆ ಪರಿಶೀಲಿಸಲಾಯಿತು. ಅವರ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ.       ಠಾಣೆಯ ಉಪ ನಿರೀಕ್ಷಕ...

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

Image
ಪುತ್ರ ಗಣೇಶ್‌ರನ್ನು ಪರಿಚಯಿಸಿದ ಶಾಸಕ ಬಿ.ಕೆ ಸಂಗಮೇಶ್ವರ್  ಚಿಕ್ಕಮಗಳೂರು ಎನ್ ಆರ್ ಪುರದಲ್ಲಿ ಭದ್ರನದಿ ಸೇತುವೆ ಉದ್ಘಾಟನೆಗಾಗಿ ಭಾನುವಾರ ವಿಶೇಷ ವಿಮಾನದ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸುವ ಜೊತೆಗೆ ತಮ್ಮ ಪುತ್ರ ಬಿ.ಎಸ್ ಗಣೇಶ್‌ರನ್ನು ಪರಿಚಯಿಸಿದರು.       ಭದ್ರಾವತಿ: ಚಿಕ್ಕಮಗಳೂರು ಎನ್ ಆರ್ ಪುರದಲ್ಲಿ ಭದ್ರನದಿ ಸೇತುವೆ ಉದ್ಘಾಟನೆಗಾಗಿ ಭಾನುವಾರ ವಿಶೇಷ ವಿಮಾನದ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸುವ ಜೊತೆಗೆ ತಮ್ಮ ಪುತ್ರ ಬಿ.ಎಸ್ ಗಣೇಶ್‌ರನ್ನು ಪರಿಚಯಿಸಿದರು.       ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ರ ಗಣೇಶ್‌ರವರಿಗೆ ತಮ್ಮ ಸ್ಥಾನ ಬಿಟ್ಟು ಕೊಡಲು ನಿರ್ಧರಿಸಿರುವ ಸಂಗಮೇಶ್ವರ್‌ರವರು ಈಗಾಗಲೇ ಗಣೇಶ್‌ರನ್ನು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಥಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷರನ್ನಾಗಿಸಿದ್ದು, ಕ್ಷೇತ್ರದಾದ್ಯಂತ ಬಹಿರಂಗ ಸಭೆಗಳನ್ನು ನಡೆಸಿ ಗಣೇಶ್‌ರನ್ನು ಮುಂಬರು...

ಪಿಯುಸಿ ಪರೀಕ್ಷೆ : ವಿಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

Image
ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪಿಯು ಕಾಲೇಜು ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.    ವಿಶ್ವೇಶ್ವರಾಯ ವಿದ್ಯಾಸಂಸ್ಥೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ ೪೧ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೯೫ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗು ೧೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.  ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ನೂರ್ ಫಾತಿಮಾ(೫೮೩), ಬ್ಯೂಲ ಸುಪ್ರೀತಿ(೫೭೧), ಪಿ. ರಮ್ಯಾ(೫೬೬), ಗೀತಾ(೫೬೦), ಅಲ್ಫಿಯಾ ನಜ್ಮೀನ್(೫೫೮) ಹಾಗೂ ವಾಣಿಜ್ಯ ವಿಭಾಗದಲ್ಲಿ ಎಚ್. ನಂದಿತ(೫೭೬), ಆಲಿಯಾ ಖಾನಮ್(೫೬೮), ಎನ್. ಸಂಜನ(೫೫೧), ಪ್ರತೀಕ್ಷ(೫೫೦) ಮತ್ತು ಸರ್ವೋತ್ತಮ್ ಚಕ್ರವರ್ತಿ(೫೫೦) ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.  ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಸಂಸ್ಥೆಯ ಉಪನ್ಯಾಸಕರ ಬೋಧನೆ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕಾರ್ಯಾಧ್ಯಕ್ಷ ಡಾ. ಎಂ. ವ...

ಸುಮಾರು ೩ ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ : ಪೇಪರ್‌ಟೌನ್ ಪೊಲೀಸರ ಕಾರ್ಯಾಚರಣೆ

Image
ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಸುಮಾರು ೩ ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪತ್ತೆ ಮಾಡುವಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.       ಭದ್ರಾವತಿ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಸುಮಾರು ೩ ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪತ್ತೆ ಮಾಡುವಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.       ಮುಡ್ಲಾಗಿರಿ(೬೫) ಎಂಬುವರ ವಿರುದ್ಧ ಅಕ್ರಮ ಪ್ರವೇಶ, ಹಲ್ಲೆ ಹಾಗು ಜೀವ ಬೆದರಿಕೆ ಹಾಕಿದ ಆರೋಪದಡಿ ೧೯೯೧ರಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ನ್ಯಾಯಲಯದಲ್ಲಿ ವಿಚಾರಣೆಗೆ ಹಾಜರಾಗದೆ ಅಂದಿನಿಂದ ಆರೋಪಿ ತಲೆಮರೆಸಿಕೊಂಡಿದ್ದು, ಈ ಸಂಬಂಧ ಪಿಸಿಜೆ & ಜೆಎಂಎಫ್‌ಸಿ ನ್ಯಾಯಾಲಯ ೧೯೯೪ರಲ್ಲಿ ಆರೋಪಿ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.        ಆರೋಪಿ ಪತ್ತೆಗಾಗಿ ಠಾಣೆಯ ಉಪ ನಿರೀಕ್ಷಕ ಎನ್. ಕುಮಾರ್ ನೇತೃತ್ವದಲ್ಲಿ ಸಹಾಯಕ ಉಪ ನಿರೀಕ್ಷಕ ಕುಮಾರ್, ಹೆಡ್ ಕಾನ್‌ಸ್ಟೇಬಲ್ ಯಲ್ಲಪ್ಪ, ಜಿಲ್ಲಾ ಪೊಲೀಸ್ ಕಛೇರಿಯ ಎಎನ್‌ಸಿ ವಿಭಾಗದ ಹೆಡ್ ಕಾನ್‌ಸ್ಟೇಬಲ್‌ಗಳಾದ ಇಂದ್ರೇಶ್ ಮತ್ತು ಗುರುರಾಜ್ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.       ಬೆಂಗಳೂರಿನ ಪೀಣ್ಯದಲ್ಲಿ ...

ವಿಐಎಸ್‌ಎಲ್ ಕಾರ್ಖಾನೆ ಮುಖ್ಯ ದ್ವಾರದ ವಿಘ್ನ ನಿವಾರಕ ಎಡ ಭಾಗಕ್ಕೆ ಸ್ಥಳಾಂತರ

Image
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಖ್ಯದ್ವಾರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಿ ಗ್ರಾಮದಲ್ಲಿ ಈಗಾಗಲೇ ತಯಾರಿಸಲಾಗಿರುವ ವಿಘ್ನ ನಿವಾಕರನ ಶಿಲಾ ಮೂರ್ತಿಗೆ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ಗ್ರಾಮಕ್ಕೆ ತೆರಳಿ ಶಿಲಾ ಪೂಜೆ ಸಲ್ಲಿಸಿದ್ದಾರೆ.       ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಖ್ಯದ್ವಾರದಲ್ಲಿ ಸುಮಾರು ೩ ದಶಕಗಳಿಗೂ ಹೆಚ್ಚು ಕಾಲದಿಂದ ಅಲಂಕರಿಸಿರುವ ವಿಘ್ನ ನಿವಾರಕನನ್ನು ಇದೀಗ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ.       ಕಾರ್ಖಾನೆಯಲ್ಲಿ ಯಾವುದೇ ರೀತಿಯ ವಿಘ್ನಗಳು ನಡೆಯಬಾರದು. ಅಲ್ಲದೇ ಕಾರ್ಖಾನೆ ಇನ್ನೂ ಬೃಹತ್ ಪ್ರಮಾಣದಲ್ಲಿ ಬೆಳೆದು ಸಾವಿರಾರು ಕಾರ್ಮಿಕರು ಹಾಗು ಅವರ ಕುಟುಂಬ ವರ್ಗದವರಿಗೆ ಅನ್ನದಾತನಾಗಿ ದೇಶದ ಹಾಗು ನಾಡಿನ ಆರ್ಥಿಕ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆಗಳನ್ನು ನೀಡುವಂತಾಗಲಿ ಎಂಬ ಆಶಯದೊಂದಿಗೆ ಮುಖ್ಯದ್ವಾರದಲ್ಲಿ ವಿಘ್ನನಿವಾರಕನನ್ನು ಪ್ರತಿಷ್ಠಾಪಿಸಲಾಗಿತ್ತು.       ದಿನ ಕಳೆದಂತೆ ಈ ವಿಘ್ನ ನಿವಾರಕ ಕಾರ್ಖಾನೆಯ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ ಸ್ಪೂರ್ತಿದಾಯಕನಾಗಿದ್ದು, ಪ್ರತಿಯೊಂದು ಕೆಲಸಗಳು ಈತನ ಆರಾಧನೆ ಮ...

ಸಿ. ಪೂಜಾ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ೫೭೫ ಅಂಕ

Image
ಸಿ. ಪೂಜಾ       ಭದ್ರಾವತಿ:  ನಗರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕಾಲೇಜಿ(ಬಿಜಿಎಸ್)ನ ವಿದ್ಯಾರ್ಥಿನಿ ಸಿ. ಪೂಜಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.       ಈ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ೬೦೦ಕ್ಕೆ ೫೭೫ ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ನಗರಕ್ಕೆ ಕೀರ್ತಿ ತಂದಿದ್ದಾರೆ. ತಾಲೂಕು ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಸಹಕಾರ ಭಾರತಿ ಕಾರ್ಯದರ್ಶಿ ಚಂದ್ರಶೇಖರ್ ಜಾದವ್‌ರವರ ಪುತ್ರಿಯಾಗಿದ್ದಾರೆ. ಸಿ. ಪೂಜಾರವರ ಸಾಧನೆಯನ್ನು ಬಿಜೆಪಿ ಓಬಿಸಿ ಮೋರ್ಚಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ. 

ಖರ್ಗೆ ದ್ವೇಷ ಭಾಷಣ : ಯುವ ಮೋರ್ಚಾದಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು

Image
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಆರ್‌ಎಸ್‌ಎಸ್ ಹಾಗು ಬಿಜೆಪಿ ಕುರಿತು ದ್ವೇಷ ಭಾಷಣ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭದ್ರಾವತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಶುಕ್ರವಾರ ದೂರು ನೀಡಲಾಯಿತು.       ಭದ್ರಾವತಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಆರ್‌ಎಸ್‌ಎಸ್ ಹಾಗು ಬಿಜೆಪಿ ಕುರಿತು ದ್ವೇಷ ಭಾಷಣ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಶುಕ್ರವಾರ ದೂರು ನೀಡಲಾಯಿತು.       ಮಲ್ಲಿಕಾರ್ಜುನ ಖರ್ಗೆಯವರು ಪ್ರಚಾರದ ಸಂದರ್ಭದಲ್ಲಿ `ಖುರಾನ್‌ನಲ್ಲಿ ಬರೆದಿದೆ ವಿಷ ಸರ್ಪಗಳನ್ನು ಕಂಡರೆ ಕೊಲ್ಲಬೇಕು.  ಆರ್‌ಎಸ್‌ಎಸ್ ಹಾಗೂ ಬಿಜೆಪಿ ಅದೇ ವಿಷ ಸರ್ಪಗಳು. ಅವುಗಳನ್ನು ಕೊಲ್ಲಬೇಕು, ಇಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ. ನಮಾಜ್ ಮಾಡುವ ಸಂದರ್ಭದಲ್ಲಿಯಾದರೂ ಅದನ್ನು ಬಿಟ್ಟು ಕೊಲ್ಲಬೇಕು.' ಎಂಬುದಾಗಿ ದ್ವೇಷ ಭಾಷಣ ಮಾಡಿರುವುದು ಖಂಡನೀಯ. ತಕ್ಷಣ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಂಡಲ ಯುವ ಮೋರ್ಚಾ ನೇತೃತ್ವದಲ್ಲಿ ಹಳೇನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಸುನೀಲ್ ಬಿ. ತೇಲಿ, ಪೇಪರ್ ಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕ ಎನ್. ಕುಮಾರ್, ನ್ಯೂಟೌನ್ ಪೊಲ...

ಏ.೧೧ರಂದು ವಿದ್ಯುತ್ ವ್ಯತ್ಯಯ

Image
          ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.೧೧ರ ಶನಿವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.       ದಿ ಸದರನ್ ಗ್ಯಾಸ್ ಫ್ಯಾಕ್ಟರಿ, ಜೆಪಿಎಸ್ ಕಾಲೋನಿ, ಕಾಗದನಗರ ೬ನೇ ವಾರ್ಡ್, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಎಂಪಿಎಂ ಅತಿಥಿ ಗೃಹದ ಭಾಗ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.    

ಏ.೧೮ರಂದು ನಗರಸಭೆ ಸಾಮಾನ್ಯ ಸಭೆ

Image
     ಭದ್ರಾವತಿ: ನಗರಸಭೆ ಸಾಮಾನ್ಯ ಸಭೆ ಏ.೧೮ರ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.       ಪ್ರಸಕ್ತ ಸಾಲಿನ ಬಜೆಟ್ ಮಂಡನೆ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದ್ದು, ಹಲವಾರು ಸಮಸ್ಯೆಗಳ ಕುರಿತು ನಗರಸಭೆ ಆಡಳಿತ ಪಕ್ಷದ ಸದಸ್ಯರೇ ಬಜೆಟ್ ಮಂಡನೆ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಬೇಸಿಗೆ ಆರಂಭವಾಗಿದ್ದು, ಈ ನಡುವೆ ಕುಡಿಯುವ ನೀರು, ಸೊಳ್ಳೆ, ಬೀದಿನಾಯಿಗಳ ಹಾವಳಿ, ಅಸಮರ್ಪಕ ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ನಡುವೆ ಸಭೆ ನಡೆಯುತ್ತಿದ್ದು,  ನಗರಸಭೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸದಸ್ಯರು ಸಭೆಗೆ ಕಡ್ಡಾಯವಾಗಿ ಹಾಜರಾಗಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ. 

ದ್ವಿತೀಯ ಪಿಯುಸಿ : ಶ್ರೀ ಆದಿಚುಂಚನಗಿರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.೯೯.೩೦ ಫಲಿತಾಂಶ

Image
ಬಿ.ಎಸ್ ಸಿಂಚನಾ-೫೮೫      ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೯೯.೩೦ ಫಲಿತಾಂಶ ಪಡೆದುಕೊಂಡಿದ್ದು, ೮೦ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.       ಈ ಬಾರಿ ೧೪೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೬೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇ.೯೯.೩೦ ಫಲಿತಾಂಶ ಲಭಿಸಿದೆ. ಅಲ್ಲದೆ ಈ ಕಾಲೇಜು ತಾಲೂಕಿಗೆ ಪ್ರಥಮ ಸ್ಥಾನ ಕಾಯ್ದುಕೊಂಡಿದೆ.  ಜಿ.ಎಸ್ ಸಂಜನಾ-೫೮೫      ಕಾಲೇಜಿನ ಬಿ.ಎಸ್ ಸಿಂಚನಾ-೫೮೫, ಜಿ.ಎಸ್ ಸಂಜನಾ-೫೮೫, ನಿಶಾಂತ್ ಅಂಜುಮ್-೫೮೨, ಎಂ. ಆರ್ಮಾನ್-೫೮೦, ಎ. ಕೃತಿಕಾ-೫೮೦, ಪಿ. ರಕ್ಷಿತಾ ಗೌಡ-೫೭೯, ರುತ್ವಿಕಾ ಎ. ಗೌಡ-೫೭೯, ಸಂಜು.ಎಂ-೫೭೯, ವರ್ಷಿಣಿ. ಎಂ-೫೭೯ ಮತ್ತು ಭರತ್. ಎನ್-೫೭೫ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾಗಿದ್ದಾರೆ.       ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗು ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ...

ದ್ವಿತೀಯ ಪಿಯುಸಿ ಪರೀಕ್ಷೆ : ಚಿನ್ಮಯ ಪ್ರಸಾದ್ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ

Image
ಚಿನ್ಮಯ ಪ್ರಸಾದ್ ಭದ್ರಾವತಿ : ಶಿವಮೊಗ್ಗ ನಂದನ ಎಜುಕೇಷನ್ ಟ್ರಸ್ಟ್ ದ್ವಿತೀಯ ಪಿಯುಸಿ ವಿದ್ಯಾರ್ಥಿ, ನಗರದ ಹೊಸಮನೆ ನಿವಾಸಿ ಚಿನ್ಮಯ ಪ್ರಸಾದ್. ಜಿ ದ್ವಿತೀಯ ಪಿಯುಸಿ ವಾಣಿಜ್ಯ ವಿಧಾಗದಲ್ಲಿ ಶೇ.೯೨ರಷ್ಟು ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.   ಚಿನ್ಮಯರವರು ಒಟ್ಟು ೬೦೦ ಅಂಕಗಳಿಗೆ ೫೫೦ ಅಂಕಗಳನ್ನು ಪಡೆದುಕೊಂಡಿದ್ದಾರೆ. ತಮ್ಮ ಮುಂದಿನ ವಿದ್ಯಾಭ್ಯಾಸ ಲೆಕ್ಕ ಪರಿಶೋಧನಾ ಶಾಸ್ತ್ರ ಹಾಗು ನ್ಯಾಯಾಂಗ ಶಾಸ್ತ್ರದ ಕುರಿತು ಒಲವು ಹೊಂದಿರುವುದಾಗಿ ಪತ್ರಿಕೆಗೆ ಚಿನ್ನಯರವರು ಪ್ರತಿಕ್ರಿಯಿಸಿದ್ದಾರೆ.    ಚಿನ್ಮಯರವರು ಭಾರತೀಯ ಜನತಾ ಪಕ್ಷದ ನಗರ ಮಂಡಲ ಅಧ್ಯಕ್ಷ, ಲೆಕ್ಕ ಪರಿಶೋಧಕ ಜಿ. ಧರ್ಮಪ್ರಸಾದ್ ಹಾಗು ವೈದ್ಯೆ ಡಾ. ಆಶಾ ದಂಪತಿರವರ ಪುತ್ರರಾಗಿದ್ದಾರೆ. ನಗರದ ಗಣ್ಯರು ಚಿನ್ಮಯರವರ ಸಾಧನೆಯನ್ನು ಅಭಿನಂದಿಸಿದ್ದಾರೆ. 

ಡಾ. ಬಿ.ಆರ್ ಅಂಬೇಡ್ಕರ್ ಚಿಂತನೆಗಳು ಮುಂದಿನ ಪೀಳಿಗೆಗೆ ತಲುಪಲಿ : ಎಂ. ರಾಜೇಂದ್ರ

Image
ಭದ್ರಾವತಿಯಲ್ಲಿ ಬಾಪೂಜಿ ಹರಿಜನ ಸೇವಾ ಸಂಘ ಮತ್ತು ಡಾ ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ನಗರದ ಉಂಬ್ಳೆಬೈಲು ರಸ್ತೆ, ವಿದ್ಯಾಮಂದಿರ ಸಮೀಪದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಕಾರ್ಯಕ್ರಮದ ಭಾಗವಾಗಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಹೋರಾಟದ ಕುರಿತಾದ ಹಾಡುಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.       ಭದ್ರಾವತಿ : ವಿದ್ಯಾರ್ಥಿಗಳು ಅಂಬೇಡ್ಕರ್ ಆಶಯಗಳನ್ನು ಓದಿಗೆ ಮಾತ್ರ ಸೀಮಿತಗೊಳಿಸದೆ ಬದುಕಿಗೆ ಅಳವಡಿಸಿಕೊಳ್ಳಬೇಕು. ಅಲ್ಲದೆ ಅವರ ಬರಹ, ಚಿಂತನೆಗಳು ಮುಂದಿನ ಪೀಳಿಗೆಗೂ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಬಾಪೂಜಿ ಹರಿಜನ ಸೇವಾ ಸಂಘದ ಪ್ರದಾನ ಕಾರ್ಯದರ್ಶಿ ಎಂ. ರಾಜೇಂದ್ರ ಕರೆ ನೀಡಿದರು.       ಅವರು ಬಾಪೂಜಿ ಹರಿಜನ ಸೇವಾ ಸಂಘ ಮತ್ತು ಡಾ ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ನಗರದ ಉಂಬ್ಳೆಬೈಲು ರಸ್ತೆ, ವಿದ್ಯಾಮಂದಿರ ಸಮೀಪದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಕಾರ್ಯಕ್ರಮದ ಭಾಗವಾಗಿ ಏರ್ಪಡಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ಹೋರಾಟದ ಕುರಿತಾದ ಹಾಡುಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಮಾತನಾಡಿದರು.     ತಾಲೂಕು ರಾಷ್ಟ್ರೀಯ ಹಬ್ಬ...