Posts

ಮೇ.೩ರಂದು ಛಲವಾದಿಗಳ ಸಮಾಜದ ವಾರ್ಷಿಕೋತ್ಸವ, ಅಂಬೇಡ್ಕರ್ ಜಯಂತಿ

Image
ಭದ್ರಾವತಿ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರಂದು ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಅಧ್ಯಕ್ಷ ಚನ್ನಪ್ಪ ಹಾಗು ಮುಖಂಡರು ಮಾಹಿತಿ ನೀಡಿದರು.       ಭದ್ರಾವತಿ : ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರಂದು ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದು ಸಮಾಜದ ಅಧ್ಯಕ್ಷ ಚನ್ನಪ್ಪ ತಿಳಿಸಿದರು.          ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ,  ಈ ಬಾರಿ ಹಲವು ಆಶಯಗಳೊಂದಿಗೆ ಅಂಬೇಡ್ಕರ್‌ರವರ ಜಯಂತಿ ಜೊತೆಗೆ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದರು.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಸಂಜೆ ೫ ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೈಸೂರು ಉರಿಲಿಂಗ ಪದ್ದಿಮಠದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿಯವರು ಪ್ರವಚನ ನೀಡಲಿದ್ದಾರೆ. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ತಾಲೂಕು ಅಧ್ಯಕ್ಷ ಬಿ....

`ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಪೋಸ್ಟರ್ ಶಾಸಕ ಸಂಗಮೇಶ್ವರ್ ಬಿಡುಗಡೆ 

Image
ಚಿತ್ರದ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ  ಭದ್ರಾವತಿ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ `ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಪೋಸ್ಟರ್ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಬಿಡುಗಡೆಗೊಳಿಸಿದರು.       ಭದ್ರಾವತಿ : ಪಡಿತರ ವಿತರಕರ ಸಮಸ್ಯೆಗಳು ಸಾಕಷ್ಟಿವೆ. ಅವರಿಗೂ ಸಾಮಾಜಿಕ ಜವಾಬ್ದಾರಿಗಳಿವೆ. ಅವರ ಬದುಕಿನ ನೈಜತೆ ಕುರಿತು ಚಿತ್ರಿಕರೀಸಲಾಗಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಲನಚಿತ್ರ ಯಶಸ್ವಿ ಪ್ರದರ್ಶನ ಕಾಣುವಂತಾಗಲಿ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಶಿಸಿದರು.      ಅವರು ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು. ಚಲನಚಿತ್ರ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.      ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಮಾತನಾಡಿ, ಪಡಿತರ ವಿತರಕರ ಬೇಡಿಕೆಗಳ ಈಡೇರಿಕೆಗಾಗಿ ಸಂಘ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಹಲವಾರುಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗುತ್ತಿದೆ. ಈ ನಡುವೆ ವಿತರಕರು ತಮ್ಮ ಜವಾಬ್ದಾರಿಗಳನ್ನು ...

ದ್ವಿಚಕ್ರ ವಾಹನ ಕಳವು : ೩ ತಿಂಗಳ ನಂತರ ದೂರು

Image
     ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಮೆಡಿಕಲ್ ಅಂಗಡಿಯೊಂದರ ಬಳಿ ಮೀನು ವ್ಯಾಪಾರಿಯೊಬ್ಬರು ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳುವಾಗಿರುವ ಘಟನೆ ಸುಮಾರು ೩ ತಿಂಗಳ ನಡೆದಿದ್ದು, ಇದೀಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ನಡೆದಿದಿದೆ.       ಕೆ. ಪಾರ್ಥಿಬನ್ ಎಂಬುವರು ಬಿ.ಎಚ್ ರಸ್ತೆ ಮೀನುಗಾರರ ಬೀದಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಸುಮಾರು ೫ ವರ್ಷಗಳ ಹಿಂದೆ ಖರೀದಿಸಲಾಗಿದ್ದ ಹಿರೋ ಸ್ಲೆಂಡರ್ ಫ್ಲಸ್ ದ್ವಿಚಕ್ರವಾಹನವನ್ನು ಪ್ರತಿ ದಿನ ಮನೆಯ ಸಮೀಪದ ಮೆಡ್ ಪ್ಲಸ್ ಮೆಡಿಕಲ್ ಅಂಗಡಿ ಬಳಿ ನಿಲ್ಲಿಸುತ್ತಿದ್ದರು. ಜ.೧೯ರ ಬೆಳಗಿನ ಜಾವ ೩ ಗಂಟೆ ಸಮಯದಲ್ಲಿ ಎಂದಿನಂತೆ ದ್ವಿಚಕ್ರ ವಾಹನ ನಿಲ್ಲಿಸಿದ್ದು, ಜ.೨೦ರಂದು ಮೀನು ವ್ಯಾಪಾರಕ್ಕೆ ತೆರಳಲು ಸ್ಥಳಕ್ಕೆ ಬಂದು ನೋಡಿದಾಗ ದ್ವಿಚಕ್ರ ವಾಹನ ಕಳುವಾಗಿರುವುದು ತಿಳಿದು ಬಂದಿದೆ.       ಸುಮಾರು ೪೦ ಸಾವಿರ ರು. ಮೌಲ್ಯದ ದ್ವಿಚಕ್ರ ವಾಹನ ಕಳ್ಳತನ ಮಾಡಲಾಗಿದ್ದು, ಪತ್ತೆ ಮಾಡಿಕೊಡುವಂತೆ ಏ.೨೪ರಂದು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಜೆಡಿಎಸ್ ನಗರ ಘಟಕಕ್ಕೆ ನೂತನ ಪದಾಧಿಕಾರಿಗಳು : ಪುನಃ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ

Image
ಆರ್. ಕರುಣಾಮೂರ್ತಿ       ಭದ್ರಾವತಿ : ಕರ್ನಾಟಕ ಪ್ರದೇಶ ಜನತಾದಳ(ಜಾತ್ಯಾತೀತ) ತಾಲೂಕು ನಗರ ಘಟಕಕ್ಕೆ ನೂತನ ಪದಾಧಿಕಾರಿಗಳು ನೇಮಕಗೊಂಡಿದ್ದು, ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ ಮುಂದುವರೆದಿದ್ದಾರೆ.       ಕಾರ್ಯಾಧ್ಯಕ್ಷರಾಗಿ ಎಸ್.ಕೆ ಉಮೇಶ್, ಉಪಾಧ್ಯಕ್ಷರಾಗಿ ಎಚ್.ಬಿ ರವಿಕುಮಾರ್, ರಾಜು, ದೇವದತ್ತ ಮತ್ತು ಎಸ್.ಪಿ ಮೋಹನ್ ರಾವ್, ಪ್ರಧಾನ ಕಾರ್ಯದರ್ಶಿಯಾಗಿ ಮಧುಸೂಧನ್, ಗಿಡ್ಡರಾಮಕೃಷ್ಣಪ್ಪ, ಪ್ರಕಾಶ್, ಮಂಜುನಾಥ್, ಆನಂದ, ಬಿ.ವಿ ಗಿರಿನಾಯ್ಡು ಮತ್ತು ಮಹಾದೇವಿ ಹಾಗು ಕಾರ್ಯದರ್ಶಿಗಳಾಗಿ ಎಸ್.ಎಂ ಶಶಿಧರಗೌಡ, ಪಿ. ನವೀನ್ ಕುಮಾರ್, ರಘು, ಶಿವಲಿಂಗೇಗೌಡ, ಸಾವಿತ್ರಮ್ಮ, ಚಂದ್ರನ್, ಅಜ್ಮಲ್, ನರಸಯ್ಯ, ಅಬ್ದುಲ್ ಇಲಾಹಿ ಮತ್ತು ಎಸ್.ಪಿ ಕಿರಣ್ ಕುಮಾರ್ ನೇಮಕಗೊಂಡಿದ್ದಾರೆಂದು ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.  

ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿಗೆ ೮ ಜನ ನಾಮನಿರ್ದೇಶನ

Image
     ಭದ್ರಾವತಿ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಕೋರಿಕೆ ಮೇರೆಗೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪರವರ ಶಿಫಾರಸ್ಸಿನಂತೆ ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿಗೆ ನೂತನವಾಗಿ ೮ ಜನರನ್ನು ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿ ಆದೇಶಿಸಲಾಗಿದೆ.        ಭೋವಿಕಾಲೋನಿ ನಿವಾಸಿ ವೈ. ಮಂಜುನಾಥ್, ಹಳೇಬುಳ್ಳಾಪುರ ನಿವಾಸಿ ಐಸಾಕ್ ಲಿಂಕನ್, ಕನಕನಗರದ ನಿವಾಸಿ ರೂಪ ನಾರಾಯಣ, ಜಟ್‌ಪಟ್ ನಗರ ಆಶ್ರಯ ಕಾಲೋನಿ ನಿವಾಸಿ ಮೊಹಮ್ಮದ್ ಸಲ್ಮಾನ್, ಭೂತನಗುಡಿ ನಿವಾಸಿಗಳಾದ ಜೆ.ಎಂ ರಾಜ, ವಾಹಿದ್ ಖಾನ್, ವೀರಾಪುರ ನಿವಾಸಿ ಡಾ. ಕಲೀಂವುದ್ದಿನ್ ಮತ್ತು ಹನುಮಂತ ನಗರ ನಿವಾಸಿ ಅನಿತಾ ಅವರನ್ನು ನಾಮನಿರ್ದೇಶನಗೊಳಿಸಲಾಗಿದೆ.       ತಾಲೂಕು ಮಟ್ಟದ ಆರೋಗ್ಯ ರಕ್ಷಾ ಸಮಿತಿಗೆ ನೂತನವಾಗಿ ನಾಮನಿರ್ದೇಶನಗೊಂಡಿರುವ ೮ ಜನ ಸದಸ್ಯರಿಗೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ. 

ಓ.ಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು

Image
     ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಹೋಗುವ ರಸ್ತೆಯಲ್ಲಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ನಡೆದಿದೆ.       ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಗುಳ್ಯಪ್ಪ ಮಧ್ಯಾಹ್ನ ೧.೩೦ರ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಗಾಂಜಾ ಸೇವನೆ ಪ್ರಕರಣ ದಾಖಲು

Image
      ಭದ್ರಾವತಿ: ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ವೃತ್ತದ ಬಳಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ನಡೆದಿದೆ.       ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಹಣಮಂತ ಆವಟಿ ಗಸ್ತು ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ ೧೨.೩೦ರ ಸಮಯದಲ್ಲಿ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಗಾಂಜಾ ಸೇವಿಸಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಗಾಂಜಾ ಸೇವನೆ ದೃಢಪಟ್ಟಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಅಕ್ರಮ ಮದ್ಯ ಮಾರಾಟ : ಒಂದೇ ದಿನ ಎರಡು ಕಡೆ ದಾಳಿ

Image
     ಭದ್ರಾವತಿ : ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಹಳ್ಳಿ ಗ್ರಾಮದಲ್ಲಿ ಒಂದೇ ದಿನ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಎರಡು ಕಡೆ ದಾಳಿ ನಡೆಸಿರುವ ಘಟನೆ ನಡೆದಿದೆ.       ಪ್ರೋಬೇಷನರಿ ಐಪಿಎಸ್ ಅಧಿಕಾರಿ ಮೇಘ ಅಗರ್ವಾಲ್‌ರವರು ಏ.೨೧ರಂದು ಗಸ್ತು ಕರ್ತವ್ಯದಲ್ಲಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ರಾತ್ರಿ ೭.೧೫ರ ಸಮಯದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದು ಒಟ್ಟು ೩೧ ಲೀಟರ್, ೫೦ ಮಿಲಿ ಲೀಟರ್ ಸುಮಾರು ೧೬,೦೫೫ ರು. ಮೌಲ್ಯದ ೪೧ ವಿವಿಧ ಬಗೆಯ ಮದ್ಯದ ಪೌಚ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.       ಗ್ರಾಮದ ಮತ್ತೊಂದು ಕಡೆ ರಾತ್ರಿ ೯ ಗಂಟೆ ಸಮಯದಲ್ಲಿ ದಾಳಿ ನಡೆಸಿ ೧೯ ಲೀಟರ್ ೧೦೦ ಮಿಲಿ ಲೀಟರ್ ಸುಮಾರು ೪,೫೦೦ ರು. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.   

ಮಸಾಜ್ ಕೇಂದ್ರದಲ್ಲಿ ವೇಶ್ಯಾವಾಟಿಕೆ : ಪೊಲೀಸರ ದಾಳಿ

Image
     ಭದ್ರಾವತಿ : ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಸಿದ್ದಾರೂಢ ನಗರದ ಮಸಾಜ್ ಕೇಂದ್ರ(ಸ್ಪಾ ಸೆಂಟರ್)ವೊಂದರ ಮೇಲೆ ದಾಳಿ ನಡೆಸಿ ಮಹಿಳೆಯರನ್ನು ರಕ್ಷಿಸಿರುವ ಘಟನೆ ನಡೆದಿದೆ.       `ವೆಲ್ನಸ್ ಸ್ಪಾ' ಎಂಬ ಹೆಸರಿನ ಸೆಂಟರ್‌ನಲ್ಲಿ ಬೇರೆಡೆಯಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂದಿದ್ದು, ಈ ಹಿನ್ನಲೆಯಲ್ಲಿ ಪೊಲೀಸ್ ನಗರ ವೃತ್ತ ನಿರೀಕ್ಷಕಿ ನಾಗಮ್ಮ ನೇತೃತ್ವದ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸೆಂಟರ್‌ನಲ್ಲಿದ್ದ ಮಹಿಳೆಯರನ್ನು ರಕ್ಷಿಸಲಾಗಿದೆ.       ಹಣದ ಅಮಿಷವೊಡ್ಡಿ ಮಹಿಳೆಯರನ್ನು ಬೇರೆಡೆಯಿಂದ ಕರೆ ತರಲಾಗುತ್ತಿತ್ತು ಎನ್ನಲಾಗಿದೆ. ಸೆಂಟರ್ ಮಾಲೀಕ ಹಾಗು ಕಟ್ಟಡದ ಮಾಲೀಕರ ವಿರುದ್ಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.       ಕಾರ್ಯಾಚರಣೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ರಮೇಶ್, ಸಿಬ್ಬಂದಿಗಳಾದ ವಿಶಾಲಾಕ್ಷಿ, ಚಿನ್ನಾನಾಯ್ಕ, ರೂಪೇಶ್ ಮತ್ತು ಉಮಾಪತಿ ದಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಅರಳಿಹಳ್ಳಿ ಸರ್ಕಾರಿ ಶಾಲೆಗೆ ಶೇ.೯೩ರಷ್ಟು ಫಲಿತಾಂಶ

Image
ಪಿ.ಎಲ್ ರಮ್ಯಾ      ಭದ್ರಾವತಿ:  ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೩ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಪರೀಕ್ಷೆಗೆ ಹಾಜರಾಗಿದ್ದ ಒಟ್ಟು ೧೮೧ ವಿದ್ಯಾರ್ಥಿಗಳಲ್ಲಿ ಪೈಕಿ ೧೬೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ಶಾಲೆಯ ಪಿ.ಎಲ್ ರಮ್ಯಾ-೬೦೮ ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನ ಮತ್ತು ಡಿ. ಕೀರ್ತನ ೬೦೫ ಅಂಕಗಳೊಂದಿಗೆ ದ್ವೀತೀಯ ಸ್ಥಾನ ಪಡೆದು ಶಾಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ.       ೧೧ ವಿದ್ಯಾರ್ಥಿಗಳು ಅತ್ಯುನ್ನತ, ೭೬ ವಿದ್ಯಾರ್ಥಿಗಳು ಪ್ರಥಮ ದರ್ಜೆ, ೪೦ ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ೪೧ ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಡಿ. ಕೀರ್ತನ       ಬಹುತೇಕ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆ ಇದಾಗಿದ್ದು, ಒಟ್ಟು ೨೨ ಶಿಕ್ಷಕರು ಈ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒಟ್ಟು ಶಾಲೆಯಲ್ಲಿ ಸುಮಾರು ೫೦೦ಕ್ಕೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸುವ...

ಪಿಟಿಇಎಸ್ ಶಾಲೆಗೆ ಶೇ.೧೦೦ ಫಲಿತಾಂಶ

Image
     ಭದ್ರಾವತಿ : ಕಾಗದನಗರದ ಪೇಪರ್ ಟೌನ್ ಆಂಗ್ಲ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಪರೀಕ್ಷೆಗೆ ಹಾಜರಾದ ೪೫ ವಿದ್ಯಾರ್ಥಿಗಳ ಪೈಕಿ ೧೦ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೧೪ ವಿದ್ಯಾರ್ಥಿ ಪ್ರಥಮ ಶ್ರೇಣಿ ಹಾಗು ೨೧ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್.ವಿ ಪ್ರತೀಕ್ ೬೦೪ ಅಂಕಗಳೊಂದಿಗೆ ಶಾಲೆಗೆ ಪ್ರಥಮ, ಆರ್. ರಾಚೇಲ್ ೫೮೫ ಅಂಕಗಳೊಂದಿಗೆ ದ್ವಿತೀಯಾ ಹಾಗು ವಿ. ತನುಶ್ರೀ ೫೮೪ ಅಂಕಗಳೊಂದಿಗೆ ತೃತೀಯಾ ಸ್ಥಾನ ಪಡೆದುಕೊಂಡಿದ್ದಾರೆ.       ಉತ್ತಮ ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು ಅಭಿನಂದಿಸಿದ್ದಾರೆ. 

ಕನಕ ವಿದ್ಯಾಸಂಸ್ಥೆಗೆ ಶೇ.೯೯ರಷ್ಟು ಫಲಿತಾಂಶ

Image
     ಭದ್ರಾವತಿ : ಹಳೇನಗರದ ಬಸವೇಶ್ವರ ವೃತ್ತದ ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೯ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಶಾಲೆಯ ೧೩ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೪೯ ವಿದ್ಯಾರ್ಥಿಗಳು ಉತ್ತಮ ಶ್ರೇಣಿ ಹಾಗು ೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹೆಚ್ಚಿನ ಅಂಕಗಳೊಂದಿಗೆ ಉತ್ತಮ ಫಲಿತಾಂಶಕ್ಕೆ ಕಾರಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗ ಮತ್ತು ಶಾಲೆಯ ಆಡಳಿತ ಮಂಡಳಿ ಹಾಗು ಪೋಷಕರು ಅಭಿನಂದಿಸಿದ್ದಾರೆ. 

ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ : ಅವಹೇಳನಕಾರಿ ಹೇಳಿಕೆಗೆ ಖಂಡನೆ

Image
ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಮಾನವ ಸರಪಳಿ, ರಸ್ತೆ ತಡೆ ನಡೆಸಿ ಆಕ್ರೋಶ  ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ಭದ್ರಾವತಿ ನಗರದ ಹಾಲಪ್ಪ ವೃತ್ತದಲ್ಲಿ ಯುವ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಾನವ ಸರ್ಪಳಿ, ರಸ್ತೆ ತಡೆ, ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.        ಭದ್ರಾವತಿ : ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ಪುಲ್ವಾಮಾ ದಾಳಿಯಲ್ಲಿ ೪೪ ಸೈನಿಕರು ಹುತಾತ್ಮರಾದಾಗ ಪಾಕ್ ಆಕ್ರಮಿತ ಪ್ರದೇಶದ ಒಳಗೆ ನುಗ್ಗಿ ಸುಮಾರು ೩೦೦ ಭಯೋತ್ಪಾದಕರನ್ನು ಸಂಹರಿಸಲಾಯಿತು. ೨೫ಕ್ಕೂ ಹೆಚ್ಚು ದೇಶಗಳು ತಮ್ಮ ದೇಶದ ಅತ್ಯುನ್ನತ ಪ್ರಶಸ್ತಿಯ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿ ಸನ್ಮಾನಿಸಿವೆ. ಇಡೀ ವಿಶ್ವವೇ ಅವರನ್ನು ವಿಶ್ವ ನಾಯಕ, ವಿಶ್ವಗುರು ಎಂದು ಕೊಂಡಾಡುತ್ತಿವೆ. ಇಂತಹ ಗೌರವಾನ್ವಿತ ಪ್ರಧಾನ ಮಂತ್ರಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಆವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.       ಪ್ರಧಾನಿ ನರೇಂದ್ರ ಮೋದಿರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ನಗರದ ಹಾಲಪ್ಪ ವೃತ್ತದಲ್ಲಿ ಯುವ ಮೋರ್ಚ...

ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಗೆ ಸತತ ೨ನೇ ಬಾರಿಗೆ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡು ಉತ್ತಮ ಸಾಧನೆ ಮಾಡಿದೆ.       ಭದ್ರಾವತಿ : ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡು ಉತ್ತಮ ಸಾಧನೆ ಮಾಡಿದೆ.       ಗುಣಾತ್ಮಕ ಫಲಿತಾಂಶದಲ್ಲಿ ಎ ಗ್ರೇಡ್ ಪಡೆದಿದ್ದು, ಈ ಶಾಲೆ ಸತತ ಎರಡನೇ ಬಾರಿಗೆ ಶೇ. ೧೦೦ರಷ್ಟು ಫಲಿತಾಂಶ ಪಡೆಯುವ ಮೂಲಕ ಗಮನ ಸೆಳೆದಿದೆ. ಉತ್ತಮ ಫಲಿತಾಂಶ ಪಡೆಯಲು ಕಾರಣಕರ್ತರಾದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪೋಷಕರಿಗೆ ಮತ್ತು ಶಾಲಾಭಿವೃದ್ಧಿ ಸಮಿತಿಗೆ, ಹಿರಿಯ ವಿದ್ಯಾರ್ಥಿಗಳಿಗೆ ಹಾಗು ಜನಪ್ರತಿನಿಧಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರು ಕೃತಜ್ಞತೆ ಸಲ್ಲಿಸಿದ್ದು, ಮುಂಬರುವ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದ್ದಾರೆ.  

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿಇಎಸ್ ವಿದ್ಯಾಸಂಸ್ಥೆಗೆ ಶೇ.೧೦೦ ಫಲಿತಾಂಶ

Image
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ಭದ್ರಾವತಿ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಮತ್ತು ಕನ್ನಡ  ಪ್ರೌಢಶಾಲಾ ವಿಭಾಗ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ. ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.       ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಮತ್ತು ಕನ್ನಡ  ಪ್ರೌಢಶಾಲಾ ವಿಭಾಗ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.       ಆಂಗ್ಲ ಪ್ರೌಢಶಾಲೆ ವಿಭಾಗದ ವಿ.ಎ ಕಿರಣ್ ೬೨೫ಕ್ಕೆ ೬೧೭ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಎಂ. ಸಿಂಚನ ೫೯೪, ಪಿ.ಜಿ ತನುಶ್ರೀ ೫೭೫, ಟಿ. ಮುಕ್ತಿರಾಜ್ ೫೭೨, ಸೌದಾ ಖಾನ್ ೫೬೯ ಮತ್ತು ಬಿ.ಜಿ ನಕ್ಷತ್ರ ಹೆಚ್ಚಿನ ಅಂಕಗಳನ್ನು ಪಡೆದು ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಒಟ್ಟಾರೆ ಆಂಗ್ಲ ಮಾಧ್ಯಮದಲ್ಲಿ ೫  ವಿದ್ಯಾರ್ಥಿಗಳು  ಅತ್ಯುನ್ನತ ಶ್ರೇಣಿಯಲ್ಲಿ,  ೨೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.       ಕನ್ನಡ ಪ್ರೌಢಶಾಲ...

ವಿಜೃಂಭಣೆಯಿಂದ ಜರುಗಿದ ಶ್ರೀ ಹಳದಮ್ಮ ದೇವಿಯ `ಸಿಡಿ ಉತ್ಸವ'

Image
ಸಂಸದ ರಾಘವೇಂದ್ರ, ಶಾರದ ಅಪ್ಪಾಜಿ ಇನ್ನಿತರರು ಉಪಸ್ಥಿತಿ ಭದ್ರಾವತಿ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ'ದ ಅಂಗವಾಗಿ ಗುರುವಾರ ಬೆಳಿಗ್ಗೆ `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ವಿಜೃಂಭಣೆಯಿಂದ ನಡೆಯಿತು. ಉತ್ಸವಕ್ಕೂ ಮೊದಲು ಸಂಸದ ಬಿ.ವೈ ರಾಘವೇಂದ್ರ ಶ್ರೀ ಹಳದಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.       ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ'ದ ಅಂಗವಾಗಿ ಗುರುವಾರ ಬೆಳಿಗ್ಗೆ `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ವಿಜೃಂಭಣೆಯಿಂದ ನಡೆಯಿತು.       ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಇದು ಪ್ರಮುಖ ಆಕರ್ಷಣೆಯಾಗಿದ್ದು, `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ವೀಕ್ಷಿಸಲು ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.  ಈ ಹಿಂದಿನ ಸಿಡಿ ಮರ ಬದಲಿಸಿ ಇದೀಗ ಹೊಸ ಸಿಡಿ ಮರ ಪ್ರತಿಷ್ಠಾಪಿಸಲಾಗಿದ್ದು, ಯುವ ಮುಖಂಡ ಬಿ.ಎಸ್ ಬಸವೇಶ್ ಹಾಗು      ಜಮೀನ್ದಾರ್ ತಾರಾಬಾಯಿ ದಿವಂಗತ ಶಿವಾಜಿರಾವ್ ಪವಾರ್ ಕುಟುಂಬಸ್ಥರು ಹೊಸ ಸಿಡಿ ಮರದ ದಾನಿಗಳಾಗಿದ್ದಾರೆ.  ಭದ್ರಾವತಿ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ'ದ ಅಂಗವಾಗಿ ಗುರುವಾರ ಬ...

ಬೀದಿಬದಿ ವ್ಯಾಪಾರಿಗಳ ಸಂಕಷ್ಟಕ್ಕೆ ಸ್ಪಂದನೆ ಉತ್ತಮ ಕಾರ್ಯ : ಪ್ರಭುಲಿಂಗ ಕವಳಿಕಟ್ಟೆ

Image
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಛತ್ರಿ ವಿತರಣಾ ಸಮಾರಂಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಛತ್ರಿಗಳನ್ನು ವಿತರಿಸಿದರು.       ಭದ್ರಾವತಿ: ಬೇಸಿಗೆಯಲ್ಲಿ ಬೀದಿಬದಿ ವ್ಯಾಪಾರಿಗಳು ಪಡುವ ಕಷ್ಟಗಳಿಗೆ ಪೂರಕವಾಗಿ ಸ್ಪಂದಿಸಿ ಅವರುಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸುತ್ತಿರುವುದು ರೋಟರಿ ಕ್ಲಬ್ ಮಾನವೀಯತೆಗೆ ಹಿಡಿತ ಕನ್ನಡಿಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಪ್ರಶಂಸೆ ವ್ಯಕ್ತಪಡಿಸಿದರು.       ಅವರು ಬುಧವಾರ ಸಂಜೆ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಛತ್ರಿ ವಿತರಣಾ ಸಮಾರಂಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಿ ಮಾತನಾಡಿದರು.       ಕಷ್ಟದಲ್ಲಿರುವವರಿಗೆ ನೆರವಾಗುವುದು ಮಾನವೀಯತೆಯಾಗಿದ್ದು, ಸಮಾಜದಲ್ಲಿ ಆರ್ಥಿಕವಾಗಿ, ದೈಹಿಕವಾಗಿ ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ಒಂದು ಉತ್ತಮ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಹಲವಾರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಮಾದರಿಯಾಗಿದೆ ಎಂದರು.       ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಚ್ ಶಿವಕುಮಾರ್ ಅಧ್ಯಕ್ಷತೆವಹಿಸಿದ್ದರು. ವಲಯ-೧೦, ರೋಟರಿ ೩೧೮೨ರ ಸಹಾಯಕ ಜಿಲ್ಲಾ ಗೌರ್‍ನರ್ ಕೆ.ಪಿ ಶೆಟ್ಟಿ, ರೋಟರಿ ಫೌಂ...

ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಅಡುಗೆ ಅನಿಲ ನೀಡುವುದಾಗಿ ಹಣ ಪಡೆದು ವಂಚನೆ

Image
     ಭದ್ರಾವತಿ: ನಗರದ ನ್ಯೂ ಟೌನಿನ ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಅಡುಗೆ ಅನಿಲ(ಸಿಲಿಂಡರ್) ಸರಬರಾಜು ಮಾಡುವುದಾಗಿ ಸುಳ್ಳು ಹೇಳಿ ೪,೫೦೦ ರು. ನಗದು ಪಡೆದು ವಂಚಿಸಿರುವ ಘಟನೆ ಬುಧವಾರ ನಡೆದಿದೆ.       ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಅಡುಗೆ ಅನಿಲ ದೊರೆಯುವುದು ತುಂಬಾ ಕಷ್ಟವಾಗಿರುತ್ತದೆ. ಪ್ರಸ್ತುತ ನಮ್ಮಲ್ಲಿ ಸಂಗ್ರಹವಿದ್ದು, ೪-೫ ಸಿಲಿಂಡರ್ ನೀಡುವುದಾಗಿ ನಗರದ ಜಯದೇವ ಗ್ಯಾಸ್ ಏಜೆನ್ಸಿಯ ಹೆಸರು ಹೇಳಿಕೊಂಡು ಮಂಜುನಾಥ್ ಎಂಬಾತ ಆಟೋರಕ್ಷಾದಲ್ಲಿ ಅಂಧರ ಕೇಂದ್ರಕ್ಕೆ ಬಂದಿದ್ದಾನೆ.       ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪರವರು ಮೂಲೆಕಟ್ಟೆಯಲ್ಲಿರುವ ತಮ್ಮ ಮನೆಗೆ ಬರಲು ಹೇಳಿ ಆತನಿಗೆ ೪,೫೦೦ ರು. ನಗದು ನೀಡಿದ್ದಾರೆ. ಹಣ ಪಡೆದ ನಂತರ ಆಟೋದಲ್ಲಿ ಸಿಲಿಂಡರ್ ತರುವುದಾಗಿ ಹೇಳಿ ಪರಾರಿಯಾಗಿದ್ದಾನೆ. ಈ ಸಂಬಂಧ ನ್ಯೂಟೌನ್ ಹಾಗು ಪೇಪರ್ ಟೌನ್ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿರುವುದಾಗಿ ಶಿವಬಸಪ್ಪ ತಿಳಿಸಿದ್ದಾರೆ. 

ಹುಣಸೇಕಟ್ಟೆ ಗ್ರಾಮದಲ್ಲಿ ವಿದ್ಯುತ್ ಉಪ ಘಟಕ ಸ್ಥಾಪನೆಗೆ ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸಿ

Image
ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ  ಕೆ.ಜೆ ಜಾರ್ಜ್       ಭದ್ರಾವತಿ : ತಾಲೂಕಿನ ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಸ್ಥರ ಬಹುವರ್ಷಗಳ ಬೇಡಿಕೆಯಾದ ಹುಣಸೇಕಟ್ಟೆ ಗ್ರಾಮದಲ್ಲಿ 2x20 M.V.A 66/11 K.V   ವಿದ್ಯುತ್ ಉಪ ಘಟಕ (ಸಬ್‌ಸ್ಟೇಷನ್) ಸ್ಥಾಪಿಸಲು ಇಂಧನ ಇಲಾಖೆ ಮುಂದಾಗಿರುವುದಕ್ಕೆ ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಗ್ರಾಮಸ್ಥರ ಪರವಾಗಿ ಇಂದನ ಸಚಿವ ಕೆ.ಜೆ ಜಾರ್ಜ್‌ರವರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ತಕ್ಷಣ ಟೆಂಡರ್ ಪ್ರಕ್ತಿಯೆ ಆರಂಭಿಸುವಂತೆ ಮನವಿ ಮಾಡಿದೆ.         ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯೂರು, ಅರಳಿಕೊಪ್ಪ, ಕಂಬದಾಳ್ ಹೊಸೂರು, ತ್ಯಾವರಘಟ್ಟ, ಸಿಂಗನಮನೆ, ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಗ್ರಾಮಸ್ಥರಿಗೆ, ರೈತರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದ್ದು, ಅಲ್ಲದೆ ಕುಡಿಯುವ ನೀರಿನ ಸರಬರಾಜಿನಲ್ಲಿಯೂ ಸಮಸ್ಯೆ ಎದುರಾಗುತ್ತಿತ್ತು. 2x20 M.V.A 66/11 K.V     ವಿದ್ಯುತ್ ಉಪ ಘಟಕ (ಸಬ್‌ಸ್ಟೇಷನ್) ಸ್ಥಾಪಿಸಲು ಟೆಂಡರ್ ಪ್ರಕ್ರಿಯೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಅಧೀಕ್ಷಕ ಇಂಜಿನಿಯರ್ ಕೆ.ಪಿ.ಟಿ.ಸಿಎಲ್ ಕಛೇರಿ ಶಿವಮ...

ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

Image
ಭದ್ರಾವತಿ ತಾಲೂಕಿನ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್‌ರವರಿಗೆ ಸಾಮಾಜಿಕ ಹೋರಾಟಗಾರ ಪಿ. ತೀರ್ಥೇಶ್ ಮನವಿ ಸಲ್ಲಿಸಿದ್ದಾರೆ.       ಭದ್ರಾವತಿ : ತಾಲೂಕಿನ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್‌ರವರಿಗೆ ಸಾಮಾಜಿಕ ಹೋರಾಟಗಾರ ಪಿ. ತೀರ್ಥೇಶ್ ಮನವಿ ಸಲ್ಲಿಸಿದ್ದಾರೆ.       ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಂಗನಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟದ ಮಳಿಗೆಯ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲು ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡುತ್ತಿರುವ ಪರವಾನಗಿ ಪಡೆದ ಮದ್ಯದಂಗಡಿ ಮಾಲೀಕರನ್ನು ಪತ್ತೆಹಚ್ಚುವ ಮೂಲಕ ಅವರ ವಿರುದ್ಧ ಸಹ ಪ್ರಕರಣ ದಾಖಲಿಸುವುದು. ಅಲ್ಲದೆ ಅಬಕಾರಿ ಇಲಾಖೆಗೆ ಈ ಕುರಿತು ಸಮಗ್ರ ಮಾಹಿತಿ ನೀಡಿ ಮದ್ಯದಂಗಡಿ ಮುಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.       ತಾಲೂಕಿನ ಎಲ್ಲಾ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಇಲಾಖೆಯ ಸಿಬ್ಬಂದಿಗಳಿಂದ ಹಾಗು ಸ್ಥಳೀಯ ನಿವಾಸಿಗಳಿಂದ ಮಾಹಿತಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು....

ಶ್ರೀ ಮುತ್ತು ಮಾರಿಯಮ್ಮ ೪೧ನೇ ವರ್ಷದ ಕರಗ ಮಹೋತ್ಸವ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ, ಹನುಮಂತನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ೪೧ನೇ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಮಂಗಳವಾರ ಕರಗದೊಂದಿಗೆ ಕಾವಡಿ ಹರಕೆಯೊತ್ತ ಭಕ್ತರು ಬಾಯಿಗೆ ಕಬ್ಬಿಣದ ತ್ರಿಶೂಲ ಚುಚ್ಚಿಕೊಂಡು ಸಾಗಿದರೇ, ಮತ್ತೊಬ್ಬ ಭಕ್ತ ಬೆನ್ನಿಗೆ ಕಬ್ಬಿಣದ ಕೊಕ್ಕೆಗಳನ್ನು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡುವ ಮೂಲಕ ಅಮ್ಮನವರಿಗೆ ಭಕ್ತಿ ಸಮರ್ಪಣೆ ಮಾಡುವ ದೃಶ್ಯ ರೋಮಾಂಚನಕಾರಿ ಕಂಡು ಬಂದಿತು.       ಭದ್ರಾವತಿ : ನಗರಸಭೆ ವ್ಯಾಪ್ತಿಯ ಹೊಸಮನೆ, ಹನುಮಂತನಗರ ಸರ್ಕಾರಿ ಕನ್ನಡ ಶಾಲೆ ಎದುರಿನ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ೪೧ನೇ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.       ಈಗಾಗಲೇ ದುರ್ಗಾಹೋಮ, ಅಮ್ಮನವರಿಗೆ ಕಂಕಣ ಕಟ್ಟುವುದು, ಗಂಗೆಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದ್ದು, ಮಂಗಳವಾರ ಬೆಳಿಗ್ಗೆ ಅಮ್ಮನವರಿಗೆ ಅಭಿಷೇಕ ಮತ್ತು ವಿಶೇಷ ಪೂಜೆ, ಮಂಗಳಾರತಿ, ನಂತರ ಹೊಸಮನೆ ಗೊಂದಿ ಚಾನಲ್ ಹತ್ತಿರ ಕರಗ ಜೋಡಿಸಿ ರಾಜಬೀದಿ ಮೂಲಕ ಉತ್ಸವ ಮೆರವಣಿಗೆ ನಡೆಸಿ ದೇವಸ್ಥಾನಕ್ಕೆ ತರಲಾಯಿತು.       ಮೆರವಣಿಗೆಯಲ್ಲಿ ಕರಗದೊಂದಿಗೆ ಕಾವಡಿ ಹರಕೆಯೊತ್ತ ಭಕ್ತರು ಬಾಯಿಗೆ ಕಬ್ಬಿಣದ ತ್ರಿಶೂಲ ಚುಚ್ಚಿಕೊಂಡು ಸಾಗಿದರೇ, ಮತ್ತೊಬ್ಬ ಭಕ್ತ ಬೆನ್ನು ಹಾಗು ಕಾಲುಗಳಿಗೆ ಕ...

ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜಯಂತಿ ಅಂಗವಾಗಿ ಉತ್ಸವ ಮೆರವಣಿಗೆ

Image
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.       ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹೊಸಸೇತುವೆ ರಸ್ತೆಯ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.       ಶ್ರೀ ಮಠದಲ್ಲಿ ಬೆಳಿಗ್ಗೆ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಶ್ರೀ ಶಂಕರಚಾರ್ಯರ ಭಾವಚಿತ್ರದೊಂದಿಗೆ ಉತ್ಸವ ಮೆರವಣಿಗೆ ನಂತರ ಶ್ರೀ ರುದ್ರ ಹೋಮ, ಹೋಮದ ಪೂರ್ಣಾಹುತಿ, ಬ್ರಹ್ಮಚಾರಿ ಪೂಜೆ, ಅನ್ನಪೂರ್ಣೇಶ್ವರಿ ಪೂಜೆ, ಗೋಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು. ಮಠದ ಭಕ್ತರು, ಸೇವಾಕರ್ತರು, ಸ್ಥಳೀಯ ನಿವಾಸಿಗಳು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. 

ಮೈಕಲ್ ಅಗಸ್ಟಿನ್ ನಿಧನ

Image
ಮೈಕಲ್ ಅಗಸ್ಟಿನ್       ಭದ್ರಾವತಿ : ತಾಲೂಕಿನ ಕಾರೇಹಳ್ಳಿ ನಿವಾಸಿ ಮೈಕಲ್ ಅಗಸ್ಟಿನ್(41) ಇವರು ಸೋಮವಾರ ರಾತ್ರಿ ನಿಧನ ಹೊಂದಿದರು.        ತಾಯಿ, ಪತ್ನಿ, ಪುತ್ರ, ಸಹೋದರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಮಂಗಳವಾರ ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಸೇರಿದ ಕ್ರೈಸ್ತ ಸಮಾಧಿಯಲ್ಲಿ ನೆರೆವೇರಿತು. ಇವರ ನಿಧನಕ್ಕೆ ನಗರದ ಕ್ರೈಸ್ತ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಆದಿ ಗುರು ಶಂಕರಾಚಾರ್ಯರ ಜಯಂತಿ

Image
ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಶಂಕರ ಸೇವಾ ಸಮಿತಿಯಿಂದ ಮಂಗಳವಾರ ಆದಿ ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಆಚರಿಸಲಾಯಿತು.       ಭದ್ರಾವತಿ : ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಶಂಕರ ಸೇವಾ ಸಮಿತಿಯಿಂದ ಮಂಗಳವಾರ ಆದಿ ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಆಚರಿಸಲಾಯಿತು.       ದೇವಸ್ಥಾನದಲ್ಲಿ ಬೆಳಿಗ್ಗೆ ನಿರ್ಮಾಲ್ಯ, ರುದ್ರಾಭಿಷೇಕ ಜರುಗಿತು. ನಂತರ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ರಾಜಬೀದಿ ಉತ್ಸವ ಮೆರವಣಿಗೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನೆರವೇರಿದವು.       ಶಂಕರ್ ಸೇವಾ ಸಮಿತಿ ಅಧ್ಯಕ್ಷ ಸಿ.ಕೆ ರಾಮರಾವ್, ಕಾರ್ಯದರ್ಶಿ ಜೆ.ಎನ್ ಆನಂದರಾವ್, ಮುದುಕೇಶ್, ಶೇಷಾಚಲ, ನಿಖಿಲ್, ರಮಾಕಾಂತ, ಮುರಳಿ, ಮೋಹನ್, ಪಿ.ಕೆ ಮಂಜುನಾಥ್, ಶ್ರೀಧರ, ಶ್ರೀವತ್ಸ ಮತ್ತು ವಿವಿಧ ಭಜನಾ ಮಂಡಳಿಗಳು ಹಾಗು ಭಕ್ತರು ಪಾಲ್ಗೊಂಡಿದ್ದರು.

ತಾರತಮ್ಯವಿಲ್ಲದ ಕಾಯಕ ಸಮಾಜ ನಿರ್ಮಾಣ ಮಾಡಿದ ಮಹಾನ್ ನಾಯಕ ಬಸವಣ್ಣ : ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ

Image
  ಭದ್ರಾವತಿಯಲ್ಲಿ ಸೋಮವಾರ ಸಂಜೆ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನೂತನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಪ್ರತಿಯೊಬ್ಬರು ಯಾವುದೇ ತಾರತಮ್ಯವಿಲ್ಲದೆ ಕಾಯಕದಿಂದ ಬದುಕಬೇಕೆಂಬುದನ್ನು ತಿಳಿಸಿಕೊಡುವ ಜೊತೆಗೆ ೧೨ನೇ ಶತಮಾನದಲ್ಲಿಯೇ ಕಾಯಕ ಸಮಾಜ ನಿರ್ಮಾಣ ಮಾಡಿದ ಮಹಾನ್ ನಾಯಕ ಬಸವಣ್ಣನವರು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕೆಂದು ಚನ್ನಗಿರಿ ಪಾಂಡೋಮಟ್ಟಿ, ವಿರಕ್ತಮಠದ ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ ಹೇಳಿದರು.       ಶ್ರೀಗಳು ಸೋಮವಾರ ಸಂಜೆ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನೂತನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.       ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶೋಷಣೆಗಳಿಂದ ಕೂಡಿದ ಮೂಡನಂಬಿಕೆ, ಕಂದಾಚಾರಗಳಿಂದ ತುಂಬಿದ ಅಂದಿನ ಸಮಾಜದಲ್ಲಿ ಬಸವಣ್ಣನವರು ಮಾಡಿದ ಕ್ರಾಂತಿ ನಿಜಕ್ಕೂ ಅವಿಸ್ಮರಣೀಯವಾಗಿದೆ. ಎಲ್ಲಾ ಶೋಷಣೆಗಳಿಂದ ಮುಕ್ತಿಗೊಳಿಸಿ ಜ್ಞಾನದ ...

ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಹೊಸ ಸಿಡಿ ಮರ ಪ್ರತಿಷ್ಠಾಪನೆ

Image
ಭದ್ರಾವತಿ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ದೇವಸ್ಥಾನದ ಆವರಣದಲ್ಲಿ ಹೊಸ ಸಿಡಿ ಮರ ಸೋಮವಾರ ಪ್ರತಿಷ್ಠಾಪಿಸಲಾಯಿತು.       ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ'ಕ್ಕೆ ಸೋಮವಾರ ಬೆಳಿಗ್ಗೆ ದ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.       ದೇವಸ್ಥಾನ ಮುಂಭಾಗ ಹೊಸ ಸಿಡಿಮರ ಪ್ರತಿಷ್ಠಾಪಿಸಲಾಗಿದ್ದು, ೨೩ರ ಗುರುವಾರ ಬೆಳಿಗ್ಗೆ ೬ ಗಂಟೆಗೆ `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ನಡೆಯಲಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಇದು ಪ್ರಮುಖ ಆಕರ್ಷಣೆಯಾಗಿದ್ದು, `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ವೀಕ್ಷಿಸಲು ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸುತ್ತಾರೆ.       ಈ ಹಿಂದಿನ ಸಿಡಿ ಮರ ಬದಲಿಸಿ ಇದೀಗ ಹೊಸ ಸಿಡಿ ಮರ ಪ್ರತಿಷ್ಠಾಪಿಸಲಾಗಿದ್ದು, ಈ ಹಿನ್ನಲೆಯಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. ಯುವ ಮುಖಂಡ ಬಿ.ಎಸ್ ಬಸವೇಶ್ ಹಾಗು ಜಮೀನ್ದಾರ್ ತಾರಾಬಾಯಿ ದಿವಂಗತ ಶಿವಾಜಿರಾವ್ ಪವಾರ್ ಕುಟುಂಬಸ್ಥರು ಹೊಸ ಸಿಡಿ ಮರದ ದಾನಿಗಳಾಗಿದ್ದು, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ನಿರ್ದೇಶಕರು ಸೇರಿದಂತೆ ಭಕ್ತರು ಉಪಸ್ಥಿತರಿದ್ದರು. 

ಜೆಡಿಎಸ್ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ರಾಜಕಾರಣಿ ಎನ್. ರಾಮಕೃಷ್ಣ ನೇಮಕ

Image
ಭದ್ರಾವತಿ ತಾಲೂಕು ಜನತಾದಳ(ಜಾತ್ಯಾತೀತ) ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ರಾಜಕಾರಣಿ ಎನ್. ರಾಮಕೃಷ್ಣಪ್ಪ ನೇಮಕಗೊಂಡಿದ್ದಾರೆ.  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.       ಭದ್ರಾವತಿ: ತಾಲೂಕು ಜನತಾದಳ(ಜಾತ್ಯಾತೀತ) ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ರಾಜಕಾರಣಿ ಎನ್. ರಾಮಕೃಷ್ಣಪ್ಪ ನೇಮಕಗೊಂಡಿದ್ದಾರೆ.       ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ನಿರ್ದೇಶಿಸುವ ಮೂಲಕ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ.       ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.       ಪಕ್ಷದ ರಾಜ್ಯ ವಕ್ತಾರ ರಾಜುಗೌಡ, ರಾಜ್ಯ ಪ್ರಧಾನ ಕಾರ್ಯದರ್...

ನ್ಯಾಯವಾದಿ ಮಗೇಶ್ ಬಾಬು ನಿಧನ

Image
ಮಗೇಶ್ ಬಾಬು      ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ನಿವಾಸಿ, ನ್ಯಾಯವಾದಿ ಮಗೇಶ್ ಬಾಬು(೫೪) ಶನಿವಾರ ನಿಧನ ಹೊಂದಿದರು.  ಇಬ್ಬರು ಸಹೋದರರು, ಓರ್ವ ಸಹೋದರಿ ಇದ್ದಾರೆ. ಇವರ ಅಂತ್ಯಕ್ರಿಯೆ ಭಾನುವಾರ ಲೋಯರ್ ಹುತ್ತಾ, ದೊಣಬಘಟ್ಟ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮಗೇಶ್ ಬಾಬು ಈ ಹಿಂದೆ ತಾಲೂಕು ವಕೀಲರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.  ಇವರ ನಿಧನಕ್ಕೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಸಿ ಕೇಶವಮೂರ್ತಿ ಹಾಗು ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎ.ಎನ್ ಕಾರ್ತಿಕ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  

ಏ.೨೬ರವರೆಗೆ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ

Image
ಭದ್ರಾವತಿ ಹಳೇನಗರದ ಗ್ರಾಮ ದೇವತ ಶ್ರೀ ಹಳದಮ್ಮ ದೇವಿ ದೇವಸ್ಥಾನ       ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ' ಏ.೨೦ ರಿಂದ ೨೬ರವರೆಗೆ ನಡೆಯಲಿದ್ದು, ಧಾರ್ಮಿಕ ಕಾರ್ಯಗಳ ಜೊತೆಗೆ ಹಲವು ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಕೆ ಲಕ್ಷ್ಮಣ್ ಕೋರಿದರು.       ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಎರಡು ವರ್ಷಕ್ಕೆ ಒಮ್ಮೆ ನಡೆಯುವ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ಜಾತ್ರಾ ಮಹೋತ್ಸವದ ವಿಶೇಷ ಎಂದರೆ ಎಲ್ಲಾ ಜಾತಿ, ಧರ್ಮದವರು ಸೇರಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.       ಏ.೨೦ರ ಸೋಮವಾರ ಬೆಳಿಗ್ಗೆ ೮ ಗಂಟೆಗೆ ಹೊಸ ಸಿಡಿ ಮರ ಪ್ರತಿಷ್ಠಾಪನೆ ಹಾಗು ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ೨೧ರ ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ದೇವರುಗಳಿಗೆ ಅಭಿಷೇಕ, ಮಧ್ಯಾಹ್ನ ೧೧ ಗಂಟೆಗೆ ಮಹಾಮಂಗಳಾರತಿ, ನಂತರ ಅನ್ನದಾನ ನಡೆಯಲಿದೆ ಎಂದರು.       ರಾತ್ರಿ ೮ ಗಂಟೆಗೆ ವಿಶೇಷ ಆಕರ್ಷಕ ಜಾನಪದ ಕಲಾ ತಂಡಗಳೊಂದಿಗೆ `ಶ್ರೀ ದೇವರುಗಳ ರಾಜಬೀದಿ ಉತ್ಸವ' ನಡೆಯಲಿದೆ. ನಂತರ ಆಯೋಜಿಸ...

ನಗರಸಭೆ ಸಾಮಾನ್ಯ ಸಭೆ : ಹಲವು ಪ್ರಸಾವನೆಗಳ ಕುರಿತು ಚರ್ಚೆ

Image
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಹಲವು ಪ್ರಸ್ತಾವನೆಗಳ ಕುರಿತು ಚರ್ಚಿಸಲಾಯಿತು.       ಭದ್ರಾವತಿ : ಹಳೇನಗರದ ಗ್ರಾಮ ದೇವತೆ, ಆದಿ ದೇವತೆ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಪ್ರಯುಕ್ತ  ಹಮ್ಮಿಕೊಳ್ಳಲಾಗುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯ ವಿಜೇತರಿಗೆ ಬೆಳ್ಳಿಗದೆ ಬಹುಮಾನ ನೀಡುವುದು, ಎಲ್‌ಇಡಿ ಟಿವಿ ಪರದೆ ಅಳವಡಿಸುವುದು, ಕೆರೆ ಪುನಶ್ಚೇತನಗೊಳಿಸುವುದು, ಡಾ. ಬಾಬು ಜಗಜೀವನ್ ರಾಮ್‌ರವರ ಭವನ ನಿರ್ಮಿಸುವುದು, ನೀರಿನ ಕಂದಾಯ ಹೆಚ್ಚಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಶನಿವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು.       ನಗರಸಭೆಯಲ್ಲಿ ಈಗಾಗಲೇ ಮುಕ್ತಾಯಗೊಂಡಿರುವ ವಾಹನ ಗುತ್ತಿಗೆಗಳನ್ನು ಮರುವಿಸ್ತರಿಸುವುದು, ವಿಡಿಯೋ ಕವರೇಜ್ ಮತ್ತು ಪೋಟೋ ಚಿತ್ರೀಕರಣ ಹಾಗು ಪೋಸ್ಟ್ ಕಾರ್ಡ್ ಅಳತೆಯ ಪೋಟೋ ಮುದ್ರಿಸಿ ಕೊಡುವುದು, ಬೀದಿ ದೀಪಗಳ ವಾರ್ಷಿಕ ನಿರ್ವಹಣೆ ಸೇರಿದಂತೆ ಹಲವಾರು ಗುತ್ತಿಗೆಗಳನ್ನು ಮುಂದುವರೆಸುವುದು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಪಾವತಿಸುವುದು, ನಗರಸಭೆ ನೌಕರರಿಗೆ ವೈದ್ಯಕೀಯ ಚಿಕಿತ್ಸೆ ಭತ್ಯೆ ನೀಡುವುದು, ನಗರಸಭೆ ವ್ಯಾಪ್ತಿಯಲ್ಲಿರುವ ನಗರಸಭೆಗೆ ಹಸ್ತಾಂತರಗೊಂಡಿರುವ ಕೆರೆಗಳನ್ನು ಪುನಶ್ಚೇತನಗೊಳಿಸಿವುದು, ತ್ಯಾಜ್ಯ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇ...

ನೂತನ ಡಾ.ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸದೆ ಅವಮಾನ

Image
ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಖಂಡನೆ  ಭದ್ರಾವತಿಯಲ್ಲಿ ಶನಿವಾರ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.       ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟನೆಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು.       ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಲ್ಲದೆ ಬಾಳೆಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಮೈಸೂರು ಕಾಗದ ಕಾರ್ಖಾನೆ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದ ಸಿದ್ದರಾಮಯ್ಯರವರು ಇದ...

ನೀರಿನ ಕಂದಾಯ ಕಡಿಮೆಗೊಳಿಸಿ, ಖಾಲಿ ನಿವೇಶನಗಳಿಗೆ ತ್ಯಾಜ್ಯ ಶುಲ್ಕ ವಿಧಿಸದಿರಿ

Image
ಮನೆ ಮಾಲೀಕರ ಸಂಘದಿಂದ ನಗರಸಭೆ ಅಧ್ಯಕ್ಷರಿಗೆ ಮನವ ಭದ್ರಾವತಿ ನಗರಸಭೆ ಆಡಳಿತ ಅವೈಜ್ಞಾನಿಕವಾಗಿ ನೀರಿನ ಕಂದಾಯ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು, ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ಶುಲ್ಕ ವಿಧಿಸುವುದನ್ನು ಕೈಬಿಡಬೇಕು ಹಾಗು ಆಸ್ತಿ ತೆರಿಗೆಯಲ್ಲಿ ಉಂಟಾಗುತ್ತಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಶನಿವಾರ ನಗರಸಭೆ ಸಾಮಾನ್ಯಸಭೆಯಲ್ಲಿ ಅಧ್ಯಕ್ಷರಿಗೆ ಮನೆ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ನಗರಸಭೆ ಆಡಳಿತ ಅವೈಜ್ಞಾನಿಕವಾಗಿ ನೀರಿನ ಕಂದಾಯ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು, ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ಶುಲ್ಕ ವಿಧಿಸುವುದನ್ನು ಕೈಬಿಡಬೇಕು ಹಾಗು ಆಸ್ತಿ ತೆರಿಗೆಯಲ್ಲಿ ಉಂಟಾಗುತ್ತಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಶನಿವಾರ ನಗರಸಭೆ ಸಾಮಾನ್ಯಸಭೆಯಲ್ಲಿ ಅಧ್ಯಕ್ಷರಿಗೆ ಮನೆ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಯಿತು.       ನಗರಸಭೆ ಆಡಳಿತ ಏ.೧ರಿಂದ ಯಾವುದೇ ಮುನ್ಸೂಚನೆ ನೀಡದೆ ಅವೈಜ್ಞಾನಿಕವಾಗಿ ನೀರಿನ ಕಂದಾಯ ಶೇ.೫೦ರಷ್ಟು ಹೆಚ್ಚಳ ಮಾಡಿರುವುದು ಖಂಡನೀಯ. ಈ ಸಂಬಂಧ ಈಗಾಗಲೇ ತಮಗೂ ಹಾಗು ಶಾಸಕರಿಗೂ ಮನವಿ ಮಾಡಲಾಗಿದ್ದು, ಸಾಮಾನ್ಯಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ನಾಗರೀಕರಿಗೆ ಹೊರೆಯಾಗದಂತೆ ನೀರಿನ ಶುಲ್ಕ ಹೆಚ್ಚಳ ಮಾಡಿರುವುದನ್...

ಏ.೧೮ರಂದು ನಗರಸಭೆ ಸಾಮಾನ್ಯ ಸಭೆ

Image
     ಭದ್ರಾವತಿ : ನಗರಸಭೆ ಸಾಮಾನ್ಯ ಸಭೆ ಏ.೧೮ರ ಶನಿವಾರ ಮಧ್ಯಾಹ್ನ ೩ ಗಂಟೆಗೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.       ಈ ಬಾರಿ ಸಾಮಾನ್ಯಸಭೆ ಹೆಚ್ಚು ಗಮನ ಸೆಳೆಯುತ್ತಿದ್ದು, ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ನಂತರ ನಡೆಯುತ್ತಿರುವ ಸಭೆ ಇದಾಗಿದೆ. ಈ ನಡುವೆ ನೀರಿನ ಶುಲ್ಕ ತೆರಿಗೆ, ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ನಗರಸಭೆ ವ್ಯಾಪ್ತಿಯ ನಿವಾಸಿಗಳ ಆಕ್ರೋಶಕ್ಕೆ ತುತ್ತಾಗುವಂತಾಗಿದೆ. ಬೇಸಿಗೆ ಹಿನ್ನಲೆಯಲ್ಲಿ ಬಹುತೇಕ ವಾರ್ಡ್‌ಗಳಲ್ಲಿ ಹಲವಾರು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ನಡುವೆ ಹಲವು ಪ್ರಮುಖ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಯಲಿದೆ. ಇದರಿಂದಾಗಿ ಈ ಬಾರಿ ಸಭೆ ಹೆಚ್ಚು ಗಮನ ಸೆಳೆಯುತ್ತಿದೆ.       ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗು ಸಿಬ್ಬಂದಿಗಳು ತಪ್ಪದೇ ಸಭೆಗೆ ಹಾಜರಾಗಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ.

ಸಾಮಾಜಿಕ ಸುಧಾರಣೆಗಳಿಗೆ ಅದ್ಯತೆ ನೀಡುವ, ಜೀವನ ಮೌಲ್ಯಗಳನ್ನು ತಿಳಿಸುವ ಕಲೆಗಳು ವಿರಳ : ಉಮೇಶ್ ಹಾಲಾಡಿ

Image
ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ನಯನ ಆಸ್ಪತ್ರೆ ಸಭಾಂಗಣದಲ್ಲಿ ಜನ್ನಾಪುರ ಡಾ. ಬಿ.ಆರ್.ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ  ಗಾಯಕ ನಾದ ಮಣಿನಾಲ್ಕೂರುರವರ ಕತ್ತಲಹಾಡು ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.      ಭದ್ರಾವತಿ: ಸಾಮಾಜಿಕ ಸುಧಾರಣೆಗಳಿಗೆ ಹೆಚ್ಚಿನ ಅದ್ಯತೆ ನೀಡುವ, ಜೀವನ ಮೌಲ್ಯಗಳನ್ನು ತಿಳಿಸುವ ಅರ್ಥಗರ್ಭಿತವಾದ ಹಾಡುಗಳ ಮೂಲಕ ಜನರನ್ನು ರಂಜಿಸುವ ಕಲೆಗಳು ತುಂಬಾ ವಿರಳವಾಗಿದ್ದು, ಇಂತಹ ಕಲೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಚ್ಚಿನ ಸಹಕಾರ ನೀಡಲಿದೆ ಎಂದು ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ತಿಳಿಸಿದರು.        ಅವರು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ನಯನ ಆಸ್ಪತ್ರೆ ಸಭಾಂಗಣದಲ್ಲಿ ಜನ್ನಾಪುರ ಡಾ. ಬಿ.ಆರ್.ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ ಆಯೋಜಿಸಲಾಗಿದ್ದ ಗಾಯಕ ನಾದ ಮಣಿನಾಲ್ಕೂರುರವರ ಕತ್ತಲಹಾಡು ಗಾಯನ ಕಾರ್ಯಕ್ರಮ ಏಕತಾರಿ ವಾದ್ಯ ನುಡಿಸುವಿದರ ಮೂಲಕ ಉದ್ಘಾಟಿಸಿ ಮಾತನಾಡಿದರು.       ವಿಶಿಷ್ಟ ಕಲೆಯನ್ನು ಹೊಂದಿರುವ ನಾದ ಮಣಿನಾಲ್ಕೂರುರವರು ಹಾಡುಗಳ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗ...

ಜೆಡಿಎಸ್‌ನಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ-೨ ಕಾರ್ಯಾಗಾರಕ್ಕೆ ಚಾಲನೆ

Image
ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.       ಭದ್ರಾವತಿ: ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.       ಪಕ್ಷದ ರಾಜ್ಯ ವಕ್ತಾರ ರಾಜುಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗು ಕೋರ್ ಕಮಿಟಿ ಸದಸ್ಯೆ ಶಾರದ ಅಪ್ಪಾಜಿ ಸೇರಿದಂತೆ ಇನ್ನಿತರರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜುಗೌಡರವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ನೀಡಿ ಬೂತ್ ಮಟ್ಟದ ಬಿಎಲ್‌ಎ ಅಧಿಕಾರಿಗಳು ಯಾವ ರೀತಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂಬುದನ್ನು ವಿವರಿಸಿದರು.       ಪಕ್ಷದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಗೀತಾ ಸತೀಶ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭೆ  ಸದಸ್ಯೆ ಮಂಜುಳ ಸುಬ್ಬಣ್ಣ, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಮಾಜಿ ಸದಸ್ಯರಾದ ಮೋಹನ್ ರಾವ್, ಎಚ್.ಬಿ...

ಏ.೧೯ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆ : ಒಟ್ಟು ೧೫ ಮಂದಿ ಕಣದಲ್ಲಿ

Image
     ಭದ್ರಾವತಿ : ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯಕಾರಿ ಸಮಿತಿ ಚುನಾವಣೆ ಏ.೧೯ರ ಭಾನುವಾರ ಬೆಳಿಗ್ಗೆ ೮.೩೦ ರಿಂದ ಸಂಜೆ ೪.೩೦ರ ವರೆಗೆ ಹಳೇನಗರದ ಕನಕ ಮಂಟಪ ಮೈದಾನ ಮುಂಭಾಗದ ಪಿ.ಎಂ.ಶ್ರೀ ಶಾಲೆಯಲ್ಲಿ ನಡೆಯಲಿದೆ.       ಕಾರ್ಯಕಾರಿ ಸಮಿತಿಯ ೪ ಮಹಿಳಾ ಮೀಸಲು ವರ್ಗಕ್ಕೆ ದೇವರ ನರಸೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್.ಎಸ್ ಮಾಯಮ್ಮ, ತಿಪ್ಲಾಪುರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಎಸ್. ಚಿತ್ರ, ಗೊಂದಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಆಸ್ಮಾ ಬೇಗಂ, ಹಳೇನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಕೋಕಿಲ ಮತ್ತು ಕಲ್ಲಿಹಾಳ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಿ. ಪಾರ್ವತಮ್ಮ ಸೇರಿದಂತೆ ಒಟ್ಟು ೫ ಅಭ್ಯರ್ಥಿಗಳು ಕಣದಲ್ಲಿದ್ದಾರೆ.      ೯ ಸಾಮಾನ್ಯ ವರ್ಗಕ್ಕೆ ಮೀಸಲಾದ ಸ್ಥಾನಗಳಿಗೆ ಅನವೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್.ಎಂ ಜಗದೀಶ್, ಆಟಗಾರಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಟಿ. ಪೃಥ್ವಿರಾಜ್, ಹಿರಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ.ಎಸ್ ಮಲ್ಲಿಕಾರ್ಜುನ್, ಹೊಳೆಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್. ಹನುಮಂತಪ್ಪ, ಗೌಳಿಗೆರೆ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಚ್. ಭಾರತಿ, ಅಂತರಗಂಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಕೆಪಿಎಸ್)ಯ ಎಂ.ಸಿ ...

ಹೋರಾಟಗಾರ ಐ.ಎಲ್ ಅರುಣ್ ಕುಮಾರ್ ನಿಧನ

Image
ಐ.ಎಲ್ ಅರುಣ್ ಕುಮಾರ್       ಭದ್ರಾವತಿ : ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ನಿವಾಸಿ, ಹಿರಿಯ ಹೋರಾಟಗಾರ ಐ.ಎಲ್ ಅರುಣ್ ಕುಮಾರ್(೭೪) ಬುಧವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.       ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ಪ್ರಗತಿಪರ ಹಾಗು ಕನ್ನಡಪರ ಹೋರಾಟಗಾರರಾಗಿದ್ದರು. ಈ ಹಿಂದೆ ಪತ್ರಿಕಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.       ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಜಟ್‌ಪಟ್ ನಗರದ ಕ್ರೈಸ್ತ ಸಮಾಧಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ, ಅವಮಾನ, ಜೀವ ಬೆದರಿಕೆ : ೫ ಮಂದಿಗೆ ೨ ಲಕ್ಷ ಜೈಲು ಶಿಕ್ಷೆ

Image
ಭದ್ರಾವತಿ ಅಂತರಗಂಗೆ ಗ್ರಾಮದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ, ಅವಮಾನ, ಜೀವ ಬೆದರಿಕೆ, ೫ ಮಂದಿಗೆ ೨ ಲಕ್ಷ ಜೈಲು ಶಿಕ್ಷೆ       ಭದ್ರಾವತಿ: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಆಕೆಯ ಜಡೆ ಹಾಗು ಸೀರೆ ಎಳೆದು ಅವಮಾನಗೊಳಿ ಕೊಲೆ ಬೆದರಿಕೆ ಹಾಕಿದ್ದ ೫ ಮಂದಿಗೆ ೨ ವರ್ಷ ಜೈಲು ಶಿಕ್ಷೆ ಹಾಗು ಒಟ್ಟು ೧ ಲಕ್ಷ ರು. ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.       ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ  ೬ ಜೂನ್ ೨೦೨೩ ರಂದು ರಾತ್ರಿ ೧೧.೪೫ ಸಮಯದಲ್ಲಿ ನವೀನ(೨೫), ಮನು(೩೧), ಕೆ. ಸಂತೋಷ(೩೧), ವಿ. ಮಂಜುನಾಥ(೩೩) ಹಾಗೂ ಅಭಿಷೇಕ್(೨೪) ಎಂಬುವರು ಗ್ರಾಮದ ರಾಧಾ(೩೫)ರವರ ಮನೆಗೆ ಅವರ ಪತಿ ವೆಂಕಟೇಶ್‌ರನ್ನ ಹುಡುಕಿಕೊಂಡು ಬಂದಿದ್ದು, ಈ ಸಂದರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ರಾಧಾರಿಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಅವರ ಜಡೆ ಹಾಗು ಸೀರೆ ಎಳೆದು ಅವಮಾನಗೊಳಿ ಕೊಲೆ ಬೆದರಿಕೆ ಹಾಕಿದ್ದರು. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.       ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಐಪಿಎಸ್ ಅಧಿಕಾರಿ  ಜಿತೇಂದ್ರ ಕುಮಾರ ದಯಾಮರವರು ಪ್ರಕರಣದ ದೋಷಾರೋಪಣಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ...

ಶ್ರಮ ಜೀವಿಗಳಾದ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಮೋಹನ್

Image
ಭದ್ರಾವತಿ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.        ಭದ್ರಾವತಿ: ಶ್ರಮ ಜೀವಿಗಳಾದ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಪ್ರಾಮಾಣಿಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಕಾಳಜಿವಹಿಸಿದ್ದು, ಎಲ್ಲಾ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುತ್ತಿದ್ದಾರೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ಅವರು ಗುರುವಾರ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  ...