Posts

ಬೆಲ್ಲದ ಮೂಟೆ ಸಾಗಾಣಿಕೆ ಮಾಡುತ್ತಿದ್ದ ಸರಕು ವಾಹನ ಕಳವು

Image
     ಭದ್ರಾವತಿ : ಬೆಲ್ಲದ ಮೂಟೆಗಳನ್ನು ಬಾಡಿಗೆಗೆ ಪಡೆದು ಸಾಗಾಣಿಕೆ ಮಾಡುತ್ತಿದ್ದ ಅಶೋಕ್ ಲೇಲ್ಯಾಂಡ್ ಸರಕು ವಾಹನವನ್ನು ಕಳ್ಳತನ ಮಾಡಿರುವ ಘಟನೆ ಕಳೆದ ೪ ತಿಂಗಳ ಹಿಂದೆ ನಡೆದಿದ್ದು, ಈ ಸಂಬಂಧ ಇದೀಗ ವಿಳಂಬವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.         ಹೊಸಮನೆ ಸುಭಾಷ್ ನಗರ ನಿವಾಸಿ ಸಿದ್ದೇಶ್ ಎಂಬುವರಿಗೆ ಸೇರಿದ ಅಶೋಕ್ ಲೇಲ್ಯಾಂಡ್ ಸರಕು ವಾಹನವನ್ನು ಬಾಡಿಗೆ ಕೆಲಸ ಮುಗಿದ ನಂತರ ಖಲಂದರ್ ನಗರದ ೧೦ನೇ ಕ್ರಾಸ್‌ನಲ್ಲಿರುವ ಖಾಲಿ ಜಾಗದಲ್ಲಿ ನಿಲ್ಲಿಸಲಾಗುತ್ತಿತ್ತು. ಏ.೩ರಂದು ನಿಲ್ಲಿಸಲಾಗಿದ್ದ ವಾಹನವನ್ನು ಯಾರೋ ಕಳ್ಳತನ ಮಾಡಿದ್ದು, ವಾಹನವನ್ನು ಎಲ್ಲಾ ಕಡೆ ಹುಡುಕಿದರೂ ಎಲ್ಲೂ ಪತ್ತೆಯಾಗಿರಲಿಲ್ಲ. ಇದೀಗ ವಿಳಂಬವಾಗಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.       ಸಿದ್ದೇಶ್‌ರವರು ೨೦೨೩ರಲ್ಲಿ ಕಬಲಿಕಟ್ಟೆ ಗ್ರಾಮದ ಶಶಿಕುಮಾರ್ ಎಂಬುವವರ ಬಳಿ ಈ ಸರಕು ವಾಹನ ಖರೀದಿದ್ದರು. ಈ ವಾಹನದಲ್ಲಿ ಬೆಲ್ಲದ ಮೂಟೆಗಳನ್ನು ಬಾಡಿಗೆಗೆ ಪಡೆದು ಸಾಗಾಣಿಕೆ ಮಾಡಿ ಜೀವನ ಸಾಗಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. 

ಕೃಷಿಕ ಸಮಾಜದ ಅಧ್ಯಕ್ಷರಾಗಿ ದೇವರಾಜ್ ಸಿ. ಪಟೇಲ್ ಆಯ್ಕೆ

Image
ಭದ್ರಾವತಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ನವಿಲೆ ಬಸವಾಪುರದ ದೇವರಾಜ್ ಸಿ. ಪಟೇಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.        ಭದ್ರಾವತಿ : ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ನವಿಲೆ ಬಸವಾಪುರದ ದೇವರಾಜ್ ಸಿ. ಪಟೇಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಇದುವರೆಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಹನುಮಂತಾಪುರದ ಎಚ್.ಎನ್ ನಾಗರಾಜ್‌ರವರು ಜಿಲ್ಲಾಧ್ಯಕ್ಷರಾಗಿ ನೇಮಕವಾದ ಹಿನ್ನಲೆಯಲ್ಲಿ ದೇವರಾಜ್ ಸಿ. ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಪಟೇಲ್‌ರವರು ಈಗಾಗಲೇ ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ.         ರಾಮಕೃಷ್ಣ ಮೇಸ್ತ, ಮೌನೇಶ್ವರ, ಸುರೇಶ್, ಪರಮೇಶ್, ಮೋಹನ್, ಚರಣ್ ರಾಜ್ ಪಟೇಲ್, ಶಿವರಾಜ್ ಪಟೇಲ್, ಶಶಿಕುಮಾರ್, ರಾಷ್ಟ್ರ ಭಕ್ತ ಬಳಗದ ಎಂ. ಪ್ರಭಾಕರ್, ಬಿ.ಎಸ್ ನಾರಾಯಣಪ್ಪ, ರವಿಚಂದ್ರನ್, ರಾಮನಾಥ್ ಬರ್ಗೆ, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು  ನೂತನ ಅಧ್ಯಕ್ಷ ಪಟೇಲ್ ಅವರನ್ನು ಅಭಿನಂದಿಸಿದ್ದಾರೆ. 

ಆ.೨೦ರಂದು ಡಿ. ದೇವರಾಜ ಅರಸು ಜನ್ಮದಿನ : ಪೂರ್ವಭಾವಿ ಸಭೆ

Image
ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ. ದೇವರಾಜ ಅರಸುರವರ ಜನ್ಮದಿನ ಆ.೨೦ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬುಧವಾರ ಭದ್ರಾವತಿ ತಾಲೂಕು ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.        ಭದ್ರಾವತಿ : ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ. ದೇವರಾಜ ಅರಸುರವರ ಜನ್ಮದಿನ ಆ.೨೦ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬುಧವಾರ ತಾಲೂಕು ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.      ತಹಸೀಲ್ದಾರ್ ಗ್ರೇಡ್-೨ ಸುರೇಶ್‌ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಡಿ. ದೇವರಾಜ ಅರಸು ಜನ್ಮದಿನ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವುದು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸುವುದು. ಡಿ. ದೇವರಾಜ ಅರಸುರವರ ವಿಚಾರಧಾರೆಗಳು ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳುವುದು. ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನ್ಮದಿನ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು.       ಸಭೆಯಲ್ಲಿ ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಕ್ಷೇತ್ರ...

ರಾಜಕಾರಣಿಗಳು ಶಾಶ್ವತ ಅಲ್ಲ, ಸರ್ಕಾರಿ ಅಧಿಕಾರಿಗಳು ಮಾಡುವ ಕೆಲಸ ಶಾಶ್ವತ

Image
ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಇಲ್ಲವಾದಲ್ಲಿ ಭವಿಷ್ಯದಲ್ಲಿ ಸಂಕಷ್ಟ  ಭದ್ರಾವತಿ ಉಳಿಸಿ ಹೋರಾಟ ವೇದಿಕೆ ನೇತೃತ್ವದಲ್ಲಿ ಬುಧವಾರ ತಾಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.       ಭದ್ರಾವತಿ : ಕ್ಷೇತ್ರದಲ್ಲಿ ಶಾಸಕರು ಹಾಗು ಅವರ ಕುಟುಂಬದವರ ಪ್ರಭಾವಕ್ಕೆ ಒಳಗಾಗಿ ಅಕ್ರಮಗಳಿಗೆ ಬೆಂಬಲ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳು ತಮ್ಮನ್ನು ಮಾರಿಕೊಳ್ಳುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ರಾಜಕಾರಣಿಗಳು ಶಾಶ್ವತ ಅಲ್ಲ, ನೀವು ಮಾಡುವ ಕೆಲಸ ಶಾಶ್ವತವಾಗಿ ಉಳಿಯಲಿದೆ. ಇದನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ಸಂಕಷ್ಟಕ್ಕೆ ಒಳಗಾಗುವ ಮೂಲಕ ತಮ್ಮ ಇಡೀ ಕುಟುಂಬ ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಬುಧವಾರ ತಾಲೂಕು ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಜೆಡಿಎಸ್ ಹಾಗು ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಸಿದರು.        ಭದ್ರಾವತಿ ಉಳಿಸಿ ಹೋರಾಟ ವೇದಿಕೆ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಕ್ಷೇತ್ರದ ಬಹುತೇಕ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅಧಿಕಾರಿಗಳು, ಸಿಬ್ಬಂದಿಗಳಲ್ಲಿ ಪ್ರಾಮಾಣಿಕತೆ ಎಂಬುದು ಮರೆಯಾಗಿದೆ.  ಕೊಲೆ, ಸುಲಿಗೆ, ದರೋಡೆ, ಗೂಂಡಾಗಿರಿ ಸೇರಿದಂತೆ ಕಾನೂನುಬಾಹಿರ ಕೃತ್ಯಗಳು ಹಾಗು ಓಸಿ ಮ...

ಶಾಲೆಯಲ್ಲಿಯೇ ಕುಸಿದು ಬಿದ್ದು ೮ನೇ ತರಗತಿ ವಿದ್ಯಾರ್ಥಿನಿ ಸಾವು

Image
     ಭದ್ರಾವತಿ : ಮಾಚೇನಹಳ್ಳಿ ಹಾಲಿನ ಡೈರಿ ಸಮೀಪದ ಮದರ್ ತೆರೇಸಾ ಕಿವುಡು ಮತ್ತು ಮೂಗ ಮಕ್ಕಳ ಶಾಲೆಯ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.       ೮ನೇ ತರಗತಿ ಓದುತ್ತಿರುವ ಅಕ್ಷರಾ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಮೂಲತಃ ಶಿಕಾರಿಪುರ ತಾಲೂಕು ಅಣ್ಣಪ್ಪಗೆರೆ ಗ್ರಾಮದ ನಿವಾಸಿಯಾದ ಅಕ್ಷರಾ ಆ.೭ರಂದು ಶಾಲೆಗೆ ದಾಖಲಾಗಿದ್ದಳು. ಆ.೯ರ ರಾತ್ರಿಯಿಂದಲೂ ಆಕೆಗೆ ವಾಂತಿ, ಭೇದಿಯಾಗಿತ್ತು ಎನ್ನಲಾಗಿದೆ.  ಬೆಳಗ್ಗೆ ಶಾಲೆಗೆ ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಈಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಪ್ರಕರಣ ದಾಖಲಾಗಿದೆ.

ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ವ್ಯತ್ಯಾಸದ ಪಟ್ಟಿಯಲ್ಲಿ 3,171 ಮತದಾರರು ಸೇರ್ಪಡೆ

Image
ಸಂಗ್ರಹವಾಗದ 41,002 ಎಸ್‌ಐಆರ್ ನಮೂನೆಗಳು, 1,189 ಗಣಕೀಕರಣಗೊಳ್ಳದ ನಮೂನೆಗಳ      ಭದ್ರಾವತಿ: ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪ್ರಸ್ತುತ 112-ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3,171 ಮತದಾರರನ್ನು ವ್ಯತ್ಯಸದ ಪಟ್ಟಿ(ಎಎಸ್‌ಡಿ)ಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಉಳಿದಂತೆ ವಿತರಿಸಲಾಗಿರುವ ಎಸ್‌ಐಆರ್ ನಮೂನೆಗಳಲ್ಲಿ ಒಟ್ಟು ಶೇ.19.08ರಷ್ಟು ಅಂದರೆ 41,002 ನಮೂನೆಗಳು ಸಂಗ್ರಹವಾಗಿರುವುದಿಲ್ಲ.       ಕ್ಷೇತ್ರದಲ್ಲಿ ಒಟ್ಟು 2,14,907 ಮತದಾರರಿದ್ದು, 253 ಮತಗಟ್ಟೆಗಳಿವೆ. ಈ ಪೈಕಿ ಶೇ.100ರಷ್ಟು ಎಸ್‌ಐಆರ್ ನಮೂನೆಗಳನ್ನು ವಿತರಿಸಲಾಗಿದೆ. ಇಲ್ಲಿಯವರೆಗೂ ಶೇ.80.92 ರಷ್ಟು ಒಟ್ಟು 1,73,905 ನಮೂನೆಗಳು ಗಣಕೀಕರಣಗೊಂಡಿವೆ. 1,189 ನಮೂನೆಗಳು ಬಾಕಿ ಉಳಿದಿದ್ದು, ಮುಂದಿನ 2-3 ದಿನಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದೆ.       ಪ್ರಸ್ತುತ ಚುನಾವಣಾ ಆಯೋಗ ನಮೂನೆಗಳ ಪರಿಶೀಲನೆ ವೇಳೆಯಲ್ಲಿ 3,171 ಮತದಾರರನ್ನು ವ್ಯತ್ಯಾಸದ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದೆ. ಕ್ಷೇತ್ರದಲ್ಲಿ 6,516 ಶೇ.3.03ರಷ್ಟು ಮತದಾರರು ನಿಧನ ಹೊಂದಿದ್ದು, ಮತಗಟ್ಟೆ ಅಧಿಕಾರಿಗಳು ಮನೆ ಮನೆಗಳಿಗೆ ತೆರಳಿದ ವೇಳೆಯಲ್ಲಿ 2,779 ಶೇ.1.29ರಷ್ಟು ಮತದಾರರು ಲಭ್ಯವಾಗದಿರುವುದು, 28,266 ಶೇ.13.15...

ಶ್ರೀ ಚರಣ ಸಂಗೀತ ಕಲಾಸೌದ ಉದ್ಘಾಟನೆ : ಹಿರಿಯ ಕಲಾವಿದರಿಗೆ ಸನ್ಮಾನ

Image
ಇತ್ತೀಚೆಗೆ ಭದ್ರಾವತಿ ನಗರದ ಜನ್ನಾಪುರ ಮಲ್ಲೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಚರಣ ಸಂಗೀತ ಕಲಾಸೌದ ಉದ್ಘಾಟನೆ ಹಾಗು ಸ್ವರ ಸರಸ್ವತಿ, ಗಾನ ಕೋಗಿಲೆ ಎಸ್. ಜಾನಕಮ್ಮನವರ ಸ್ಮರಣಾ ಕಾರ್ಯಕ್ರಮದಲ್ಲಿ  ಹಿರಿಯ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ: ಇತ್ತೀಚೆಗೆ ನಗರದ ಜನ್ನಾಪುರ ಮಲ್ಲೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಚರಣ ಸಂಗೀತ ಕಲಾಸೌದ ಉದ್ಘಾಟನೆ ಹಾಗು ಸ್ವರ ಸರಸ್ವತಿ, ಗಾನ ಕೋಗಿಲೆ ಎಸ್. ಜಾನಕಮ್ಮನವರ ಸ್ಮರಣಾ ಕಾರ್ಯಕ್ರಮದಲ್ಲಿ  ಹಿರಿಯ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.       ಒಂದು ಕಾಲದಲ್ಲಿ ಉಕ್ಕಿನ ನಗರದ ಜನರ ಮನೆಮಾತಾಗಿದ್ದ ಗೀತಾಂಜಲಿ ಆರ್ಕೇಸ್ಟ್ರಾ ಕಾಲ ಕಳೆದಂತೆ ಕಣ್ಮರೆಯಾಗಿದ್ದು, ಈ ಆರ್ಕೇಸ್ಟ್ರಾ ನೇತೃತ್ವವಹಿಸಿದ್ದ ಶ್ರೀನಿವಾಸ್ ನಂತರ ದಿನಗಳಲ್ಲಿ ಗೀತಾಂಜಲಿ ಶ್ರೀನಿವಾಸ್ ಎಂದು ಪ್ರಸಿದ್ದರಾಗಿದ್ದರು. ಅವರ ನಿಧನದ ನಂತರ ಅವರ ಪುತ್ರ ಚರಣ್ ಕವಾಡ್ ಮತ್ತು ಪುತ್ರಿ ಸಂಗೀತ ಇಬ್ಬರು ಸೇರಿ ಇದೀಗ ಹೊಸದಾಗಿ ಶ್ರೀ ಚರಣ ಸಂಗೀತ ಕಲಾಸೌದ ಸಂಘಟನೆ ಆರಂಭಿಸುವ ಮೂಲಕ ತೆರೆಮರೆಯಲ್ಲಿರುವ ಹಳೇಯ ಕಲಾವಿದರನ್ನು ಗುರುತಿಸಿ ಗೌರವಿಸುವ ಮೂಲಕ ದಿವಂಗತ ಗೀತಾಂಜಲಿ ಶ್ರೀನಿವಾಸ್ ಅವರ ಆಶಯವನ್ನು ನನಸಾಗಿಸಿದ್ದಾರೆ. ಅಲ್ಲದೆ  ಸ್ವರ ಸರಸ್ವತಿ, ಗಾನ ಕೋಗಿಲೆ ಎಸ್. ಜಾನಕಮ್ಮನವರನ್ನು ಸ್ಮರಿಸುವ ಮೂಲಕ ಇಂದಿನ ಯುವ ಕಲಾವ...

ಆ.೧೨ರಂದು ತಾಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ

Image
     ಭದ್ರಾವತಿ : ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆ, ದರೋಡೆ, ಗೂಂಡಾಗಿರಿ ಸೇರಿದಂತೆ ಕಾನೂನುಬಾಹಿರ ಕೃತ್ಯಗಳ  ಹಾಗು ಓಸಿ ಮಟ್ಕಾ, ಇಸ್ಪೀಟ್ ಸೇರಿದಂತೆ ಇನ್ನಿತರ ದಂಧೆಗಳ ವಿರುದ್ಧ ಕೆಲವು ದಿನಗಳ ಹಿಂದೆ ಬಿಜೆಪಿ ಪಕ್ಷದಿಂದ ಪೊಲೀಸ್ ಉಪಾಧೀಕ್ಷಕರ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಇದೀಗ ಆ.೧೨ರಂದು ಬೆಳಿಗ್ಗೆ ೧೦.೩೦ಕ್ಕೆ ಭದ್ರಾವತಿ ಉಳಿಸಿ ಹೋರಾಟ ವೇದಿಕೆಯಿಂದ ತಾಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.       ಶಾಸಕರ ಕುಟುಂಬದ ಪ್ರಭಾವಕ್ಕೆ ಒಳಗಾಗಿ ಸುಳ್ಳು ಪ್ರಕರಣ ದಾಖಲಿಸುವ ಹಾಗು ಅಕ್ರಮಗಳಿಗೆ ಬೆಂಬಲ ನೀಡುವ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಶಿಸ್ತುಕ್ರಮ ಜರುಗಿಸುವುದು. ಪೊಲೀಸ್ ಉಮೇಶ್ ಹಾಗು ಅವರ ಅಣ್ಣನ ಮಗನ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು. ಕ್ಷೇತ್ರದಲ್ಲಿ ನಡೆಯುತ್ತಿರುವ ನಕಲಿ ನಿವೇಶನ ದಾಖಲೆ ಸೃಷ್ಟಿ ಹಾಗು ಗೂಂಡಾಗಿರಿ ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು ಖುದ್ದಾಗಿ ಪ್ರತಿಭಟನಾ ಧರಣಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಗಿದೆ.       ಅರುಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯುತ್ತಿದ್ದು, ಸ್ಥಳೀಯ ಸಂಸ್ಥೆಗ...

ಗಾಂಜಾ ಮಾದಕ ವಸ್ತು ಸೇವನೆ : ಪ್ರಕರಣ ದಾಖಲು

Image
     ಭದ್ರಾವತಿ: ನಗರದ ನ್ಯೂಕಾಲೋನಿ ಅಪ್‌ಸೈರ್ ಬಿಲ್ಡಿಂಗ್ ಸಮೀಪ ಗಾಂಜಾ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.       ಬೊಮ್ಮನಕಟ್ಟೆ ೨ನೇ ಡಿವಿಜನ್ ನಿವಾಸಿ, ಸುಮಾರು ೩೨ ವರ್ಷ ವಯಸ್ಸಿನ ವ್ಯಕ್ತಿಯೋರ್ವ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ಆ.೯ರ ಭಾನುವಾರ ಸಂಜೆ ೫ ಗಂಟೆ ಸಮಯದಲ್ಲಿ ಮಾಹಿತಿ ಬಂದಿದ್ದು, ನ್ಯೂಟೌನ್ ಠಾಣೆ ಸಿಬ್ಬಂದಿಗಳಾದ ಹಾಲಪ್ಪ ಮತ್ತು ಪ್ರಸನ್ನರವರು ಠಾಣಾ ಉಪನಿರೀಕ್ಷಕ ಟಿ. ರಮೇಶ್‌ರವರ ಮಾರ್ಗದರ್ಶನದಲ್ಲಿ ಸ್ಥಳಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದು, ಗಾಂಜಾ ಮಾದಕ ವಸ್ತು ಸೇವನೆ ದೃಢಪಟ್ಟಿರುವ ಹಿನ್ನಲೆಯಲ್ಲಿ ಆತನ ವಿರುದ್ದ ಸ್ವ ದೂರು ತಯಾರಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಲೋಕಾಯುಕ್ತ ಅಧಿಕಾರಿಗಳ ನಿರ್ಲಕ್ಷ್ಯ, ಅವ್ಯವಸ್ಥೆ ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Image
ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಬಿಇಓ, ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ನಿರ್ಲಕ್ಷ್ಯ, ಶಾಲಾ-ಕಾಲೇಜುಗಳ ಅವ್ಯವಸ್ಥೆ ಖಂಡಿಸಿ ಮತ್ತು ರೈತರ, ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು  ಮತ್ತು ಕ್ಷೇತ್ರದ ಹಲವು ಸಮಸ್ಯೆಗಳ ಈಡೇರಿಕೆಗೆ ಅಗ್ರಹಿಸಿ  ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಸೋಮವಾರ ಭದ್ರಾವತಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ  ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.      ಭದ್ರಾವತಿ:  ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ನಿರ್ಲಕ್ಷ್ಯ, ಶಾಲಾ-ಕಾಲೇಜುಗಳ ಅವ್ಯವಸ್ಥೆ ಖಂಡಿಸಿ ಮತ್ತು ರೈತರ, ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು  ಮತ್ತು ಕ್ಷೇತ್ರದ ಹಲವು ಸಮಸ್ಯೆಗಳ ಈಡೇರಿಕೆಗೆ ಅಗ್ರಹಿಸಿ  ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಸೋಮವಾರ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ  ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.      ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಕಳೆದ 7-8 ತಿಂಗಳಿನಿಂದ ಜಿಲ್ಲೆಯ ಯಾವುದೇ ತಾಲೂಕುಗಳಲ್ಲಿ ಸಾರ್ವಜನಿಕರ ಕುಂದು-ಕೊರತೆ ಸಭೆಗಳನ್ನು ನಡೆಸಿ ಅಹವಾಲುಗಳನ್ನು ಸ್ವೀಕರಿಸದಿರುವುದು ಖಂಡನೀಯವಾಗಿದ್ದು, ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ದೂರಲಾಯಿತು. ತಕ್ಷಣ  ರಾಜ್ಯ ಉಪ ಲೋಕಾಯುಕ್ತರು,  ನ್ಯಾಯಮೂರ್ತಿ ಬಿ...

ಸುಲಲಿತವಾಗಿ ಮಾತನಾಡುವವರು ಕನ್ನಡ ಪರೀಕ್ಷೆಗಳಲ್ಲಿ ಅನುತ್ತೀರ್ಣ : ಡಿ. ಮಂಜುನಾಥ್ ವಿಷಾದ

Image
'ತಾಯಿ ನುಡಿ' ಕವನ ಸಂಕಲನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ  ಭದ್ರಾವತಿ  ಜನ್ನಾಪುರದ ಶ್ರೀ ಬಸವೇಶ್ವರ ಶಾಲೆ ಸಭಾಂಗಣದಲ್ಲಿ ಶಿಕ್ಷಕ ಮಂಜಾನಾಯ್ಕ ಬಿ.ಆರ್ ಬಳೂರು ರಚಿಸಿರುವ 'ತಾಯಿ ನುಡಿ' ಕವನ ಸಂಕಲನ ಪುಸ್ತಕವನ್ನು  ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಲೋಕಾರ್ಪಣೆಗೊಳಿಸಿದರು.       ಭದ್ರಾವತಿ: ಕನ್ನಡ ಭಾಷೆಯನ್ನು ಸುಲಲಿತವಾಗಿ ಮಾತನಾಡುವ ನಮ್ಮ ಮಕ್ಕಳು ಕನ್ನಡ ವಿಷಯದ ಪರೀಕ್ಷೆಗಳಲ್ಲಿ  ಅನುತ್ತೀರ್ಣರಾಗುತ್ತಿರುವುದು ನೋವಿನ ಸಂಗತಿಯಾಗಿದೆ ಕನ್ನಡ ಸಾಹಿತ್ಯ ಪರಿಷತ್ಎಂ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ವಿಷಾದ ವ್ಯಕ್ತಪಡಿಸಿದರು.      ಜನ್ನಾಪುರದ ಶ್ರೀ ಬಸವೇಶ್ವರ ಶಾಲೆ ಸಭಾಂಗಣದಲ್ಲಿ ಶಿಕ್ಷಕ ಮಂಜಾನಾಯ್ಕ ಬಿ.ಆರ್ ಬಳೂರು ರಚಿಸಿರುವ 'ತಾಯಿ ನುಡಿ' ಕವನ ಸಂಕಲನ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.     ಕನ್ನಡ ಭಾಷೆ ಅರ್ಥಮಾಡಿಕೊಳ್ಳುವ, ಸ್ಪಷ್ಟವಾಗಿ ಓದುವ ಹಾಗು ಬರೆಯುವ  ಪ್ರಕ್ರಿಯೆ ನಿರಂತರವಾಗಿ ನಡೆಯಬೇಕು. ಭಾಷೆಯ ಮೇಲಿನ ಹಿಡಿತ ಕಾಯ್ದುಕೊಳ್ಳಬೇಕೆಂದರು.       ಎಸ್.ಬಿ.ವಿ.ಎಸ್ ಅಧ್ಯಕ್ಷ, ವಕೀಲಲೆಚ್.ಬಿ.ಸಿದ್ದೇಶ್ ಅಧ್ಯಕ್ಷತೆವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ. ಸುರೇಶ್ ರವರು ಸಮಾರಂಭ ಉದ್ಘಾಟಿಸಿ ಮಾತನಾಡಿದರು.    ...

ಶ್ರೀ ಶಂಕರ ಮಠದಲ್ಲಿ ವಿಜೃಂಭಣೆಯಿಂದ ಜರುಗಿದ `ಶ್ರೀ ಸೌಂದರ್ಯ ಲಹರಿಯ ದೀಪ ನಮಸ್ಕಾರ'

Image
ಭದ್ರಾವತಿ ನಗರದ ಹೊಸ ಸೇತುವೆ ರಸ್ತೆ, ಭದ್ರಾ ನದಿ ದಡದಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠದಲ್ಲಿ ಭಾನುವಾರ ೨೬ನೇ ವರ್ಷದ `ಶ್ರೀ ಸೌಂದರ್ಯ ಲಹರಿಯ ದೀಪ ನಮಸ್ಕಾರ' ವಿಜೃಂಭಣೆಯಿಂದ ಜರುಗಿತು.       ಭದ್ರಾವತಿ : ನಗರದ ಹೊಸ ಸೇತುವೆ ರಸ್ತೆ, ಭದ್ರಾ ನದಿ ದಡದಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠದಲ್ಲಿ ಭಾನುವಾರ ೨೬ನೇ ವರ್ಷದ `ಶ್ರೀ ಸೌಂದರ್ಯ ಲಹರಿಯ ದೀಪ ನಮಸ್ಕಾರ' ವಿಜೃಂಭಣೆಯಿಂದ ಜರುಗಿತು.       ಪ್ರತಿ ವರ್ಷದಂತೆ ಈ ಬಾರಿ ಸಹ ರಾಜಲಕ್ಷ್ಮೀ ಟೀಚರ್ ಮತ್ತು ಸಂಗಡಿಗರಿಂದ `ಶ್ರೀ ಸೌಂದರ್ಯ ಲಹರಿಯ ದೀಪ ನಮಸ್ಕಾರ' ಏರ್ಪಡಿಸಲಾಗಿತ್ತು. ದೀಪ ನಮಸ್ಕಾರದ ನಂತರ ಅನ್ನಪೂರ್ಣೇಶ್ವರಿ ಪೂಜೆ, ಗೋಪೂಜೆ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಮಹಾಪ್ರಸಾದ ಕಾರ್ಯಕ್ರಮಗಳು ಜರುಗಿದವು.       ಹಳೇನಗರದ ಸಿದ್ದಾರೂಢನಗರ, ಕನಕನಗರ, ಕೋಟೆ ಏರಿಯಾ, ಅಂಬೇಡ್ಕರ್ ನಗರ, ಹನುಮಂತನಗರ, ಭೂತನಗುಡಿ, ಮಾಧವನಗರ, ಹೊಸಮನೆಯ ಗಾಂಧಿನಗರ, ಕೇಶವಪುರ ಬಡಾವಣೆ, ಕುವೆಂಪು ನಗರ, ಸುಭಾಷ್‌ನಗರ, ತ್ಯಾಗರಾಜ ನಗರ ಹಾಗು ನ್ಯೂಟೌನ್ ಭಾಗದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು. 

ಗಂಗಮ್ಮ ನಿಧನ

Image
ಗಂಗಮ್ಮ       ಭದ್ರಾವತಿ: ಸಿದ್ದಾರೂಢ ನಗರದ ನಿವಾಸಿ, ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯರವರ ಮಾತೃಶ್ರೀ ಗಂಗಮ್ಮ(೯೭) ಶನಿವಾರ ಸಂಜೆ ನಿಧನ ಹೊಂದಿದರು.       ಗಂಗಮ್ಮ ತಾಲೂಕಿನ ಬಾಬಳ್ಳಿ ನಿವಾಸಿ ಬಿ.ಎಂ ಗಂಗಪ್ಪರವರ ಧರ್ಮಪತ್ನಿಯಾಗಿದ್ದು, ಇವರಿಗೆ ಓರ್ವ ಹೆಣ್ಣು ಮಗಳು ಹಾಗು ೮ ಗಂಡು ಮಕ್ಕಳಿದ್ದಾರೆ. ಇವರ ಅಂತ್ಯಕ್ರಿಯೆ ಆ.೯ರ ಭಾನುವಾರ ಮಧ್ಯಾಹ್ನ ಬಾಬಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.         ಇವರ ನಿಧನಕ್ಕೆ ಪ್ರಮುಖರಾದ ಹಾ. ರಾಮಪ್ಪ, ಶಿವಕುಮಾರ್, ಯಶೋಧ ವೀರಭದ್ರಪ್ಪ ಮತ್ತು ನರಸಿಂಹಚಾರ್ ಸೇರಿದಂತೆ ಇನ್ನಿತರ ಗಣ್ಯರು, ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ. 

ಯುವ ಸಮುದಾಯ ಮುಂದಿನ ಭವಿಷ್ಯಕ್ಕೆ ಜನಪದ ಕಲೆಗಳನ್ನು ಕೊಂಡೊಯ್ಯುವ ಜವಾಬ್ದಾರಿ ಹೊಂದಲಿ : ಎಚ್. ತಿಮ್ಮಪ್ಪ

Image
ಭದ್ರಾವತಿ ತಾಲೂಕಿನ ಹಳ್ಳಿಕೆರೆ ಗ್ರಾಮದ ಸಂತ ಡೋಮಿನಿಕ್ ಶಾಲೆಯ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿಯಲ್ಲಿ ನಗರದ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಆಯೋಜಿಸಲಾಗಿದ್ದ ``ಜಾನಪದ ಕಲರವ'' ರಘುಕುಮಾರ್ ಮತ್ತು ತಂಡ, ಎಮ್ಮೆಹಟ್ಟಿ ಇವರಿಂದ ಡೊಳ್ಳು ಕುಣಿತ ಪ್ರದರ್ಶನ  ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ ಉದ್ಘಾಟಿಸಿದರು.       ಭದ್ರಾವತಿ : ಪ್ರಸ್ತುತ ವಿದ್ಯಾರ್ಥಿಗಳಿಗೆ ಜನಪದ ಕಲೆಗಳ ಅರಿವು ಅಗತ್ಯವಾಗಿದ್ದು, ಮುಂದಿನ ಭವಿಷ್ಯಕ್ಕೆ ಜನಪದ ಕಲೆಗಳನ್ನು ಕೊಂಡೊಯ್ಯುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ ಹೇಳಿದರು.       ಅವರು ತಾಲೂಕಿನ ಹಳ್ಳಿಕೆರೆ ಗ್ರಾಮದ ಸಂತ ಡೋಮಿನಿಕ್ ಶಾಲೆಯ ಸಭಾಂಗಣದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿಯಲ್ಲಿ ನಗರದ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಆಯೋಜಿಸಲಾಗಿದ್ದ ``ಜಾನಪದ ಕಲರವ'' ರಘುಕುಮಾರ್ ಮತ್ತು ತಂಡ, ಎಮ್ಮೆಹಟ್ಟಿ ಇವರಿಂದ ಡೊಳ್ಳು ಕುಣಿತ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.        ಇಂದಿನ ದಿನಗಳಲ್ಲಿ ಜನಪದ ಕಲೆಗಳು ಕಣ್ಮರೆಯಾಗುತ್ತಿದ್ದು, ಯುವ ಸಮುದಾಯ...

ಇಎಸ್ಐ ಸೌಲಭ್ಯಗಳನ್ನು ಮರುಸ್ಥಾಪಿಸಿ ಬಡಕಾರ್ಮಿಕರು, ಕುಟುಂಬ ವರ್ಗದ ಹಿತ ಕಾಪಾಡಿ

Image
ಬಿಜೆಪಿ ನಗರ, ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಿ ಮನವಿ ಭಾರತೀಯ ಜನತಾ ಪಕ್ಷ ನಗರ ಹಾಗೂ ಗ್ರಾಮಾಂತರ ಮಂಡಲವತಿಯಿಂದ ಭದ್ರಾವತಿ ನಗರದ ಕಾರ್ಮಿಕರ ಚಿಕಿತ್ಸಾ ಕೇಂದ್ರ (ಇಎಸ್‌ಐ ಡಿಸ್ಪೆನ್ಸರಿ)ದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಉಲ್ಲೇಖ ಪತ್ರ(ರೆಫೆರಲ್ ಲೆಟರ್) ಸೌಲಭ್ಯವನ್ನು ಮರುಸ್ಥಾಪಿಸಲು ಹಾಗೂ ಸ್ಥಳೀಯವಾಗಿ ಅಗತ್ಯವಿರುವ ಖಾಸಗಿ ಆಸ್ಪತ್ರೆಗಳ ಒಪ್ಪಂದವನ್ನು ದೆಹಲಿಯ ಇಎಸ್ ಐ ಪ್ರಧಾನ ಕಚೇರಿಯ ಮಹಾನಿರ್ದೇಶಕರು ನವೀಕರಿಸಬೇಕೆಂದು ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.     ಭದ್ರಾವತಿ: ಭಾರತೀಯ ಜನತಾ ಪಕ್ಷ ನಗರ ಹಾಗೂ ಗ್ರಾಮಾಂತರ ಮಂಡಲವತಿಯಿಂದ ನಗರದ ಕಾರ್ಮಿಕರ ಚಿಕಿತ್ಸಾ ಕೇಂದ್ರ (ಇಎಸ್‌ಐ ಡಿಸ್ಪೆನ್ಸರಿ)ದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಉಲ್ಲೇಖ ಪತ್ರ(ರೆಫೆರಲ್ ಲೆಟರ್) ಸೌಲಭ್ಯವನ್ನು ಮರುಸ್ಥಾಪಿಸಲು ಹಾಗೂ ಸ್ಥಳೀಯವಾಗಿ ಅಗತ್ಯವಿರುವ ಖಾಸಗಿ ಆಸ್ಪತ್ರೆಗಳ ಒಪ್ಪಂದವನ್ನು ದೆಹಲಿಯ ಇಎಸ್ ಐ ಪ್ರಧಾನ ಕಚೇರಿಯ ಮಹಾನಿರ್ದೇಶಕರು ನವೀಕರಿಸಬೇಕೆಂದು ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಪಕ್ಷದ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯರವರ ನೇತೃತ್ವದಲ್ಲಿ ಜನ್ನಾಪುರ ಬಂಟರ ಭವನದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಚಿಕಿತ್ಸಾ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಮುಖರು ಮಾತನಾಡಿ, ಕ್ಷೇತ್ರದಲ್ಲಿ ಸುಮಾ...

ತಿಥಿ ಊಟದ ನಂತರ ಶಾಲಾ ಮಕ್ಕಳು ಅಸ್ವಸ್ಥ : ಚೇತರಿಕೆ

Image
     ಭದ್ರಾವತಿ: ನಗರದ ನ್ಯೂಟೌನ್ ತರಂಗ ಕಿವುಡು ಮಕ್ಕಳ ಶಾಲೆಯ ಸುಮಾರು ೧೫ ವಿದ್ಯಾರ್ಥಿಗಳು ಹಾಗು ೭-೮ ಮಂದಿ ಸಾರ್ವಜನಿಕರು ತಿಥಿ ಊಟದ ನಂತರ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.       ತರಂಗ ಕಿವುಡು ಮಕ್ಕಳ ಶಾಲೆಯ ವಸತಿ ವಿದ್ಯಾರ್ಥಿಗಳಿಗೆ ನಗರಸಭೆ ವ್ಯಾಪ್ತಿಯ ವೇಲೂರು ಶೆಡ್ ಮನೆಯೊಂದರಲ್ಲಿ ನಡೆಸಲಾಗಿದ್ದ ತಿಥಿ ಕಾರ್ಯಕ್ರಮದ ಊಟ ತಂದು ನೀಡಲಾಗಿದೆ. ಗುರುವಾರ ಬೆಳಿಗ್ಗೆ ಊಟದ ನಂತರ ಮಕ್ಕಳು ಅಸ್ವಸ್ಥಗೊಂಡಿದ್ದು, ತಕ್ಷಣ ಮಕ್ಕಳನ್ನು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.  ತಿಥಿ ಊಟದಿಂದ ಸ್ಥಳೀಯರು, ಸಂಬಂಧಿಕರು ಸಹ ಅಸ್ವಸ್ಥಗೊಂಡಿದ್ದು, ಇವರು ಸಹ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.       ಆಸ್ಪತ್ರೆ ಮಾಹಿತಿ ಪ್ರಕಾರ ಮಕ್ಕಳು ಶಾಂತಿ, ಭೇದಿಯಿಂದ ಬಳಲುತ್ತಿದ್ದು, ಬಹುತೇಕ ಗುಣಮುಖರಾಗಿದ್ದಾರೆ. ರಾತ್ರಿ ವೇಳೆಗೆ ಕೆಲವರನ್ನು ಹಾಗು ಉಳಿದವರನ್ನು ಶನಿವಾರ ಬೆಳಿಗ್ಗೆ ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.       ಮಕ್ಕಳು ಸೇವಿಸಿದ ಆಹಾರ ತಪಾಸಣೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸ್ಪಷ್ಟ ಕಾರಣ ತಿಳಿದು ಬರಲಿದೆ. ಈ ಘಟನೆ ಶಾಲಾ ಮಕ್ಕಳನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

ಸಿದ್ದಾರ್ಥ ಅಂಧರ ಕೇಂದ್ರದಲ್ಲಿ `ಸ್ವಚ್ಛ ಭಾರತ ಅಭಿಯಾನ, ಪರಿಸರ ದಿನಾಚರಣೆ

Image
ಭದ್ರಾವತಿ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಿಂದ ಜಾವಳ್ಳಿ ಜ್ಞಾನದೀಪ ಶಾಲೆ ಸಹಯೋಗದೊಂದಿಗೆ `ಸ್ವಚ್ಛ ಭಾರತ ಅಭಿಯಾನ ಮತ್ತು ಪರಿಸರ ದಿನಾಚರಣೆ' ಹಮ್ಮಿಕೊಳ್ಳಲಾಗಿತ್ತು.       ಭದ್ರಾವತಿ: ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಿಂದ ಜಾವಳ್ಳಿ ಜ್ಞಾನದೀಪ ಶಾಲೆ ಸಹಯೋಗದೊಂದಿಗೆ `ಸ್ವಚ್ಛ ಭಾರತ ಅಭಿಯಾನ ಮತ್ತು ಪರಿಸರ ದಿನಾಚರಣೆ' ಹಮ್ಮಿಕೊಳ್ಳಲಾಗಿತ್ತು.       ಜ್ಞಾನದೀಪ ಶಾಲೆಯ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.  ವಿದ್ಯಾರ್ಥಿಗಳು ಅಂಧರ ಕೇಂದ್ರದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಕೈಗೊಂಡು ಸಸಿಗಳನ್ನು ನೆಡುವ ಮೂಲಕ ಸಮುದಾಯ ಸೇವೆ ಮತ್ತು ಸಾಮಾಜಿಕ ಅರಿವು ಕುರಿತು ಜಾಗೃತಿ ಮೂಡಿಸಿದರು. ಅಲ್ಲದೆ ಅಂಧ ವಿಕಲಚೇತನರ ವಿಶಿಷ್ಟ ಹಾಗು ವಿಭಿನ್ನ ರೀತಿಯ ಓದು, ಬರಹ ತರಬೇತಿ ವೀಕ್ಷಿಸಿ ಮಾಹಿತಿ ಪಡೆದರು.      ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂಧ ವಿಕಲಚೇತನರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಲ್ಲಿ ಹಾಗು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಿದ್ದಾರ್ಥ ಅಂಧರ ಕೇಂದ್ರದ ಕೊಡುಗೆಯನ್ನು ಪ್ರಶಂಸಿಸಿದರು.          ಜ್ಞಾನದೀಪ ಶಾಲೆಯ ಶ್ರೀಕಾಂತ್ ಗೋಸಾನಿ ಅವರು ವಿದ್ಯಾರ್ಥಿಗಳಲ್ಲಿ ಸಮುದಾಯ ಸೇವೆಗಳ ಬಗ್ಗೆ ಅ...

ಅಪರಾಧ ಪ್ರಕರಣಗಳು ಹೆಚ್ಚಳ : ಪೊಲೀಸ್ ಉಪಾಧೀಕ್ಷಕರ ಕಛೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ

Image
ಮಕ್ಕಳು, ಮಹಿಳೆಯರು ಸೇರಿದಂತೆ ನಾಗರೀಕರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ  ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಬೆಳಿಗ್ಗೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು.       ಭದ್ರಾವತಿ : ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಬೆಳಿಗ್ಗೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು.       ಕೊಲೆ, ಸುಲಿಗೆ ಅಪರಾಧ ಪ್ರಕರಣಗಳು, ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗು ಓ.ಸಿ ಮಟ್ಕಾ, ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟ ಕ್ಷೇತ್ರದಲ್ಲಿ ಮಿತಿಮೀರಿದ್ದು, ಸಾರ್ವಜನಿಕರು ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ಇಲ್ಲಿನ ಪೊಲೀಸ್ ಇಲಾಖೆ  ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನೆಯಲ್ಲಿ ಆರೋಪಿಸಲಾಯಿತು.  ಭದ್ರಾವತಿ ಕ್ಷೇತ್ರದಲ್ಲಿ ಹೆ...

ಭದ್ರಗಿರಿಯಲ್ಲಿ ವಿಜೃಂಭಣೆಯಿಂದ ಜರುಗಿದ ಆಡಿ ಕೃತಿಕ ಕಾವಡಿ ಉತ್ಸವ

Image
     ಭದ್ರಾವತಿ: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ಆಡಿ ಕೃತಿಕ ಕಾವಡಿ ಉತ್ಸವ ವಿಜೃಂಭಣೆಯಿಂದ ಜರುಗಿತು.       ಬೆಳಗಿನ ಜಾವ ೪ ಗಂಟೆಯಿಂದ ವಿಶ್ವರೂಪ ದರ್ಶನ ಮತ್ತು ಅಭಿಷೇಕ, ೫ ರಿಂದ ಉತ್ಸವ ಪೂಜೆ ಹಾಗು ಕಾವಡಿ ಹರಕೆ ಸಮರ್ಪಣೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ ನೆರವೇರಿತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ನಂತರ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.  ಭದ್ರಾವತಿ ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ಆಡಿ ಕೃತಿಕ ಕಾವಡಿ ಉತ್ಸವ ವಿಜೃಂಭಣೆಯಿಂದ ಜರುಗಿತು.       ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗು ಹೊರ ರಾಜ್ಯಗಳಿಂದ ಭಕ್ತರು ಪಾಲ್ಗೊಂಡಿದ್ದರು. ಕಾವಡಿ ಉತ್ಸವ ಅಂಗವಾಗಿ ಭಕ್ತರಿಗಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ಹಾಗು ಶ್ರೀ ಭದ್ರಗಿರಿ ಸೇವಾ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು. ಕಾವಡಿ ಹರಕೆಹೊತ್ತ ಭಕ್ತರು ಗಮನ ಸೆಳೆದರು. ಕಾಲ್ನಡಿಗೆಯಲ್ಲಿ ...

ಆ.೬ರಂದು ಮುಂಗಾರು ಕಾವ್ಯಧಾರೆ

Image
     ಭದ್ರಾವತಿ : ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಆ.೬ರ ಗುರುವಾರ ಸಂಜೆ ೫.೩೦ಕ್ಕೆ ನ್ಯೂಟೌನ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮುಂಗಾರು ಕಾವ್ಯಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.       ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಹೊಸಹಳ್ಳಿ ದಾಳೇಗೌಡ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಕೆ. ನಾಗರಾಜ್ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ರಮ್ಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕೋರಿದ್ದಾರೆ. 

ಆ.೬ರಂದು ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ಪ್ರತಿಭಟನೆ

Image
     ಭದ್ರಾವತಿ : ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಆ.೬ರ ಗುರುವಾರ ಬೆಳಿಗ್ಗೆ ೧೦.೩೦ಕ್ಕೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಮಂಡಲದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.       ಕೊಲೆ, ಸುಲಿಗೆ ಅಪರಾಧ ಪ್ರಕರಣಗಳು, ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗು ಓ.ಸಿ ಮಟ್ಕಾ, ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟ ಕ್ಷೇತ್ರದಲ್ಲಿ ಮಿತಿಮೀರಿದ್ದು, ಸಾರ್ವಜನಿಕರು ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ಪೊಲೀಸ್ ಇಲಾಖೆ  ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಆ.೬ರಂದು ಭದ್ರಗಿರಿಯಲ್ಲಿ ಆಡಿ ಕೃತಿಕ ಕಾವಡಿ ಉತ್ಸವ

Image
 ಶ್ರೀ ಕ್ಷೇತ್ರ ಭದ್ರಗಿರಿ       ಭದ್ರಾವತಿ: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆ.೬ರ ಗುರುವಾರ ಆಡಿ ಕೃತಿಕ ಕಾವಡಿ ಉತ್ಸವ ನಡೆಯಲಿದೆ.       ಬೆಳಗಿನ ಜಾವ ೪ ಗಂಟೆಯಿಂದ ವಿಶ್ವರೂಪ ದರ್ಶನ ಮತ್ತು ಅಭಿಷೇಕ, ೫ ರಿಂದ ಉತ್ಸವ ಪೂಜೆ ಹಾಗು ಕಾವಡಿ ಹರಕೆ ಸಮರ್ಪಣೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಸಂಜೆ ೫.೩೦ರಿಂದ ದೀಪಾರಾಧನೆ ಹಾಗು ರಾತ್ರಿ ೧೦ಕ್ಕೆ ಅರ್ಧ ಜಾಮಪೂಜೆ ಜರುಗಲಿವೆ.       ಆಡಿ ಕೃತಿಕ ಕಾವಡಿ ಉತ್ಸವ ಜಾತ್ರಾ ಮಹೋತ್ಸವಕ್ಕೆ ಆ.೧ರಂದು ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿದ್ದು, ಬುಧವಾರ ಭರಣಿ ಕಾವಡಿ ಉತ್ಸವ ನಡೆಯಿತು. ಬೆಳಿಗ್ಗೆ ೮ ಗಂಟೆಗೆ ಸಂಧಿಪೂಜೆ, ಮಧ್ಯಾಹ್ನ ೧೨ಕ್ಕೆ ಉಚ್ಚಿಕಾಲ ಪೂಜೆ ನೆರವೇರಿತು. ಭದ್ರಾವತಿ ಹಾಗು ತರೀಕೆರೆ ತಾಲೂಕು ಸೇರಿದಂತೆ ಸುತ್ತಮುತ್ತಲಿನ ತಾಲೂಕಿನ ಭಕ್ತರು ಪಾಲ್ಗೊಂಡಿದ್ದರು.       ಕಾವಡಿ ಉತ್ಸವ ಅಂಗವಾಗಿ ಭಕ್ತರಿಗಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಾತ್ರಾ ಮಹೋತ್ಸವ ಯಶಸ್ವಿಗೊಳಿಸುವಂತೆ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ಹಾಗು ಶ್ರೀ ಭದ್ರಗಿರಿ ಸೇವಾ ಟ್ರಸ್ಟ್ ಕೋರಿವೆ. 

ಆ.೫ರಂದು ವಿದ್ಯುತ್ ವ್ಯತ್ಯಯ

Image
     ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಘಟಕ-೩ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.೫ರ ಬುಧವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.       ಬಿ.ಎಚ್ ರಸ್ತೆ, ಚಾಮೇಗೌಡ ಏರಿಯಾ, ಹಾಲಪ್ಪ ವೃತ್ತ, ಲೋಯರ್ ಹುತ್ತಾ, ಮೀನುಗಾರರ ಬೀದಿ, ಗೌಳಿಗರ ಬೀದಿ, ಸಹ್ಯಾದ್ರಿ ಬಡಾವಣೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂತಿಮಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ : ಪ್ರದೀಪ್ ದೇವಗಿರಿ

Image
ಭದ್ರಾವತಿಯಲ್ಲಿ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ದಿಂದ ಸಾಮಾಜಿಕ ಕಳಕಳಿಯಿಂದ ಸ್ವಯಂ ಪ್ರೇರಿತವಾಗಿ ನಗರದ ರಂಗಪ್ಪ ವೃತ್ತದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಮತದಾರರಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಬೀದಿನಾಟಕ ಪ್ರದರ್ಶನಕ್ಕೆ ತಹಸೀಲ್ದಾರ್ ಪ್ರದೀಪ್ ದೇವಗಿರಿ ಚಾಲನೆ ನೀಡಿದರು.       ಭದ್ರಾವತಿ: ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸುವ ಜೊತೆಗೆ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆಂಬ ಏಕೈಕ ಉದ್ದೇಶ ಹೊಂದಿದ್ದು, ಈ ಹಿನ್ನಲೆಯಲ್ಲಿ ಮತದಾರರಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯ ಅಂತಿಮಗೊಳ್ಳುವವರೆಗೂ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಮನವಿ ಮಾಡಿದರು.       ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘ ದಿಂದ ಸಾಮಾಜಿಕ ಕಳಕಳಿಯಿಂದ ಸ್ವಯಂ ಪ್ರೇರಿತವಾಗಿ ನಗರದ ರಂಗಪ್ಪ ವೃತ್ತದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಮತದಾರರಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಬೀದಿನಾಟಕ ಪ್ರದರ್ಶನಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.       ಪ್ರಸ್ತುತ ಒಂದು ವೇಳೆ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಸಹ ಯಾರು ಭಯಪಡ...

ಕೊನೆಗೂ ಉಕ್ಕಿನ ನಗರಕ್ಕೆ ಸಚಿವ ಸ್ಥಾನ ಸಿಗಲಿಲ್ಲ

Image
  ಬಿ.ಕೆ ಸಂಗಮೇಶ್ವರ್       ಭದ್ರಾವತಿ : ವಿಧಾನಸಭಾ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಕೊನೆಯ ಘಳಿಗೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಭರವಸೆ ಹೊಂದಿದ್ದರು. ಆದರೆ ಇದೀಗ ಮಂತ್ರಿಗಿರಿ ಇಲ್ಲದೆ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.         ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿ ಇತಿಹಾಸ ನಿರ್ಮಿಸಿರುವ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಕ್ಷೇತ್ರದ ಜನರು ಹೊಂದಿದ್ದರು. ಇದುವರೆಗೂ ಕ್ಷೇತ್ರದ ಇತಿಹಾಸದಲ್ಲಿ ಮಂತ್ರಿಗಿರಿ ಭಾಗ್ಯ ಇಲ್ಲಿನ ಜನಪ್ರತಿನಿಧಿಗಳಿಗೆ ಲಭಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಮಗನಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಸಂಗಮೇಶ್ವರ್ ಕಳೆದ ಸುಮಾರು ೨ ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಾದ್ಯಂತ ಮಗನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಆರಂಭದಿಂದಲೂ ಪಕ್ಷ ನಿಷ್ಠೆಯಲ್ಲಿ ತೊಡಗಿಸಿಕೊಂಡಿರುವ ಸಂಗಮೇಶ್ವರ್ ಕಾಂಗ್ರೆಸ್ ಪಕ್ಷದ ಮೇಲೆ ಅಪಾರ ನಂಬಿಕೆ, ವಿಶ್ವಾಸ ಹೊಂದಿದ್ದರು. ಕೊನೆಯ ಘಳಿಗೆಯಲ್ಲಿ ತಮಗೆ ಮಂತ್ರಿಗಿರಿ ಭಾಗ್ಯ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ಮಂತ್ರಿಗಿರಿ ಭಾ...

ಕಾರ್ಯಕ್ರಮದ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ : ಪ್ರಕರಣ ದಾಖಲು

Image
ಗಾಯಗೊಂಡಿರುವ ಪೊಲೀಸ್ ಉಮೇಶ್, ಸುಹಾಸ್ ಗೌಡ : ಓರ್ವನ ಬಂಧನ  ಹಲ್ಲೆಗೊಳಗಾಗಿರುವ ಸುಹಾಸ್ ಗೌಡ       ಭದ್ರಾವತಿ: ನಗರದ ಜನ್ನಾಪುರದಲ್ಲಿ ಕಾರ್ಯಕ್ರಮ ನಡೆಯುವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಕೆಲವರಿಗೆ ತೀವ್ರ ಗಾಯಗಳಾಗಿ ಆರೋಪ-ಪ್ರತ್ಯಾರೋಪ ದೂರುಗಳು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.       ಸ್ನೇಹಿಜೀವಿ ಬಳಗದ ಪೊಲೀಸ್ ಉಮೇಶ್ ಹಾಗು ಅವರ ಅಣ್ಣ ದಿವಂಗತ ಸತೀಶ್ ಗೌಡರವರ ಪುತ್ರ ಸುಹಾಸ್ ಗೌಡರವರು ಹಲ್ಲೆಗೊಳಗಾಗಿದ್ದಾರೆಂದು ತಿಳಿದು ಬಂದಿದೆ. ಜನ್ನಾಪುರದ ಮಲ್ಲೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ನಂತರ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.       ಈ ನಡುವೆ ಘಟನೆಗೆ ಸಂಬಂಧಿಸಿದಂತೆ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲ್ಲೆಗೊಳಗಾಗಿರುವ ಪೊಲೀಸ್ ಉಮೇಶ್ ನ್ಯೂಟೌನ್ ಪೊಲೀಸ್ ಠಾಣೆ ಬಳಿ ಮಾತನಾಡಿ, ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಬೆಲೆ ಇಲ್ಲದಾಗಿದೆ. ದೌರ್ಜನ್ಯ ದಬ್ಬಾಳಿಕೆ ಹೆಚ್ಚಾಗಿದ್ದು, ಪೊಲೀಸರು ಸೂಕ್ತ ತನಿಖೆ ಕೈಗೊಂಡು ನನ್ನ ಮೇಲೆ ಹಾಗು ನನ್ನ ಸಹೋದರನ ಮಗನ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕುಟುಂಬ ಸಮೇತ ಸಾಮೂ...

ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಅಭಿಯಾನಕ್ಕೆ ಚಾಲನೆ

Image
ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿ ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದು, ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.      ಭದ್ರಾವತಿ: ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದು, ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.      ಕಾರ್ಯಕ್ರಮ ಆರಂಭಕ್ಕೂ ಮೊದಲು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಸಿ. ಸುರೇಶ್  ಮಾತನಾಡಿ, ವಿದ್ಯಾರ್ಥಿಗಳು ಮಾದಕವಸ್ತು ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.  ಪ್ರೌಢಶಾಲೆ ಹಾಗು ಕಾಲೇಜು ಅಧ್ಯಯನದ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟವಾದ ಗುರಿಗಳನ್ನು ಹಾಕಿಕೊಂಡು ಆ ನಿಟ್ಟಿನಲ್ಲಿ ಪ್ರಯತ್ನಗಳನ್...

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ೩ ವರ್ಷ ಕಠಿಣ ಜೈಲು ಶಿಕ್ಷೆ, ೩೧ ಸಾವಿರ ರು. ದಂಡ

Image
     ಭದ್ರಾವತಿ :  ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯುವಕನೊಬ್ಬನಿಗೆ ೩ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩೧,೦೦೦ ರು.ದಂಡ ವಿಧಿಸಿ ತೀರ್ಪು ನೀಡಿದೆ.       ೨೦೨೪ರಲ್ಲಿ ತಾಲೂಕಿನ ೨೦ ವರ್ಷದ ಯುವಕನೊಬ್ಬ ೧೬ ವರ್ಷದ ಬಾಲಕಿಯೊಂದಿಗೆ ಗೆಳೆತನ ಬೆಳೆಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.       ಆ ವೇಳೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಠಾಣಾ ಉಪ ನಿರೀಕ್ಷಕಿ ಇ. ಕವಿತಾ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.      ಪ್ರಕರಣದ ವಿಚಾರಣೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದರು.

ಪೇಪರ್‌ಟೌನ್ ಪೊಲೀಸರಿಂದ ಮೇಕೆ ಕಳ್ಳನ ಸೆರೆ

Image
೭೦ ಸಾವಿರ ರು. ಮೌಲ್ಯದ ೫ ಮೇಕೆ ವಶ   ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದಲ್ಲಿ ಮೇಕೆಗಳನ್ನು ಕಳ್ಳತನ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ ಒಟ್ಟು ಸುಮಾರು ೭೦ ಸಾವಿರ ರು. ಮೌಲ್ಯದ ೫ ಮೇಕೆಗಳನ್ನು ವಶಪಡಿಸಿಕೊಳ್ಳುವಲ್ಲಿ ಪೇಪರ್‌ಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.       ಭದ್ರಾವತಿ: ತಾಲೂಕಿನ ಬಾರಂದೂರು ಗ್ರಾಮದಲ್ಲಿ ಮೇಕೆಗಳನ್ನು ಕಳ್ಳತನ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ ಒಟ್ಟು ಸುಮಾರು ೭೦ ಸಾವಿರ ರು. ಮೌಲ್ಯದ ೫ ಮೇಕೆಗಳನ್ನು ವಶಪಡಿಸಿಕೊಳ್ಳುವಲ್ಲಿ ಪೇಪರ್‌ಟೌನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.       ಬಾರಂದೂರು ಗ್ರಾಮದ ಮನಿಯ ಎಂಬುರಿಗೆ ಸೇರಿದ ಒಟ್ಟು ಸುಮಾರು ೯೦ ಸಾವಿರ ರು. ಮೌಲ್ಯದ ಒಟ್ಟು ೬ ಮೇಕೆಗಳನ್ನು ಇತ್ತೀಚೆಗೆ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ದೂರು ದಾಖಲಾಗಿದ್ದು, ಪ್ರಕರಣ ಭೇದಿಸಿದ ಪೊಲೀಸರು .ತಿಮ್ಲಾಪುರ ತಾಂಡಾ ನಿವಾಸಿ ರವಿಕುಮಾರ್ ಯಾನೆ ಕುಂಟ ರವಿಯನ್ನು ಬಂಧಿಸಿ ಒಟ್ಟು ಸುಮಾರು ೭೦ ಸಾವಿರ ರು. ಮೌಲ್ಯದ ೫ ಮೇಕೆಗಳನ್ನು ವಶಕ್ಕೆ ಪಡೆದಿದ್ದಾರೆ.       ಠಾಣೆಯ ಉಪ ನಿರೀಕ್ಷಕ ಎನ್. ಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಠಾಣೆಯ ಸಹಾಯಕ ಉಪ ನಿರೀಕ್ಷಕ ಕುಮಾರ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ನಾಗರಾಜ್, ಬಸವರಾಜ್ ಮತ್ತು ಭರತ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆಯಲ್...

೨ ದಿನಗಳಿಂದ ವ್ಯಾಪಕ ಮಳೆ : ಜನಜೀವನ ಸ್ವಲ್ಪಮಟ್ಟಿಗೆ ಅಸ್ತವ್ಯಸ್ತ

Image
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಕಳೆದ ಕೆಲವು ದಿನಗಳಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸಾಕಷ್ಟು ನಷ್ಟ ಉಂಟಾಗುತ್ತಿದೆ.       ಭದ್ರಾವತಿ: ಕ್ಷೇತ್ರದಲ್ಲಿ ಶುಕ್ರವಾರ ದಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಜನಜೀವನ ಸ್ವಲ್ಪಮಟ್ಟಿಗೆ ಅಸ್ತವ್ಯವಸ್ತಗೊಂಡಿದೆ.       ಶನಿವಾರ ಸಹ ಮಳೆ ಮುಂದುವರೆದಿದ್ದು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮಳೆಯಲ್ಲಿಯೇ ತೆರಳುವಂತಾಯಿತು. ಸೊಪ್ಪು, ತರಕಾರಿ, ಹಣ್ಣು ಹಾಗು ತಿಂಡಿ ತಿನಿಸುಗಳನ್ನು ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳು ಗ್ರಾಹಕರಿಲ್ಲದೆ ಸಂಕಷ್ಟಕ್ಕೆ ಒಳಗಾಗುವಂತಾಯಿತು. ಕೆಲವು ಅಂಗಡಿಮುಗ್ಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಕೆಲವೆಡೆ ಮಣ್ಣಿನ ರಸ್ತೆಗಳು ಕೆಸರುಮಯವಾಗಿದ್ದು, ರಸ್ತೆಯಲ್ಲಿನ ಗುಂಡಿಗೊಟರುಗಳು, ಹಳ್ಳಕೊಳ್ಳಗಳು ಹಾಗು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತು ಕೊಂಡಿದ್ದು, ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಉಳಿದಂತೆ ಯಾವುದೇ ಹಾನಿ ಸಂಭವಿಸಿರುವುದು ತಿಳಿದು ಬಂದಿಲ್ಲ.       ಮಳೆ ವಿಳಂಬವಾಗಿ ಆರಂಭವಾಗಿರುವ ಹಿನ್ನಲೆಯಲ್ಲಿ ರೈತರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಮಳೆ ಇದೆ ರೀತಿ ಮುಂದುವರೆದಲ್ಲಿ ಬೆಳೆ ಹಾನಿ ಸಂಭವಿಸುವ ಭೀತಿ ಎದುರಾಗಿದೆ.  ಮಳೆ ನಡುವೆ ಕೆಲವೆಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದು,  ಸಾಕಷ್ಟು ನಷ್ಟ ಉಂ...

ಆ.೩ರಂದು ಎಸ್‌ಐಆರ್ ಕುರಿತು `ಜಾಗೃತಿ ಬೀದಿನಾಟಕ'

Image
     ಭದ್ರಾವತಿ: ನಗರದ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಸಾಮಾಜಿಕ ಕಳಕಳಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ - ೨೦೨೬ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ `ಜಾಗೃತಿ ಬೀದಿನಾಟಕ' ಕಾರ್ಯಕ್ರಮ ಆ.೩ರ ಸೋಮವಾರ ಆಯೋಜಿಸಲಾಗಿದೆ.    ನಗರದ ರಂಗಪ್ಪ ವೃತ್ತ ಮತ್ತು ಮಾಧವಚಾರ್ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ೩ ಕಡೆ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಚುನಾವಣಾ ಆಯೋಗದ ಆದೇಶದಂತೆ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಜಾನಪದ ಕಲಾಸಂಘ ತೊಡಗಿಸಿಕೊಂಡಿದೆ. ಸಾರ್ವಜನಿಕರು ಈ `ಜಾಗೃತಿ ಬೀದಿನಾಟಕ' ವೀಕ್ಷಿಸಲು ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ  ಕಲಾಸಂಘದ ಕಾರ್ಯದರ್ಶಿಯಾದ ತಮಟೆ ಜಗದೀಶ್ ಕೋರಿದ್ದಾರೆ. 

ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಎಸ್‌ಐಆರ್ ಕಾರ್ಯ

Image
25 ಮತಗಟ್ಟೆ ಅಧಿಕಾರಿಗಳು ಶೇ.100 ಗುರಿ : ಪ್ರಶಂಸೆ, ಸನ್ಮಾನ  ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.       ಭದ್ರಾವತಿ: ತಾಲೂಕಿನ ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕರ್ತವ್ಯ ಶೇ.100ರಷ್ಟು ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.      112 -ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಒಟ್ಟು 253 ಮತಗಟ್ಟೆ ಹಾಗು 2,14,907 ಮತದಾರರನ್ನು ಒಳಗೊಂಡಿದೆ. ಸುಮಾರು 15 ದಿನಗಳ ಹಿಂದೆಯೇ ಶೇ.100ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಸುಮಾರು 1,69,700 ನಮೂನೆಗಳು ಗಣಕೀಕರಣಗೊಂಡಿವೆ.       ಬಹುತೇಕ ಮತಗಟ್ಟೆ ಅಧಿಕಾರಿಗಳು ಪ್ರಸ್ತುತ ಶೇ.100ರಷ್ಟು ಗುರಿ ತಲುಪುವ ಹಂತದಲ್ಲಿದ್ದಾರೆ. ಸಿಂಗನ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ಮತಗಟ್ಟೆ ಅಧಿಕಾರಿಗಳು ಶೇ.೧೦೦ ಗುರಿ ಸಾಧಿಸಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ.  ಮತದಾರರ ನೋಂದ...

ಆ.೨ರಂದು ಓಪನ್ ಜಿಮ್ ಉದ್ಘಾಟನೆ

Image
      ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸುಮಾರು ೨೫ ಲಕ್ಷ ರು. ಅನುದಾನದಲ್ಲಿ ನಿರ್ಮಿಸಲಾಗಿರುವ ಓಪನ್ ಜಿಮ್ ಆ.೨ರ ಭಾನುವಾರ ಸಂಜೆ ೪ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ.       ಈ ಹಿಂದೆ ಸೂಡಾ ಸದಸ್ಯರಾಗಿದ್ದ ಕಾಂಗ್ರೆಸ್ ಮುಖಂಡ ಎಚ್. ರವಿಕುಮಾರ್‌ರವರ ಮನವಿ ಮೇರೆಗೆ ಉದ್ಯಾನವನದಲ್ಲಿ ಹೊರಾಂಗಣ ವ್ಯಾಯಾಮ ಸಾಮಾಗ್ರಿಗಳನ್ನು ಅಳವಡಿಸಲು ೨೫ ಲಕ್ಷ ರು. ಅನುದಾನ ಮಂಜೂರಾತಿಯಾಗಿತ್ತು. ಕೆಲವು ತಿಂಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಉದ್ಘಾಟನೆಗೊಳ್ಳುತ್ತಿದೆ.       ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಯುವ ಮುಖಂಡ ಬಿ.ಎಸ್ ಬಸವೇಶ್, ಸೂಡಾ ಮಾಜಿ ಸದಸ್ಯ ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  

ಆ.೨ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Image
     ಭದ್ರಾವತಿ : ಹಳೇನಗರದ ಭಾವಸಾರ ಕ್ಷತ್ರೀಯ ಸಮಾಜದಿಂದ ಆ.೨ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಮಹಾತ್ಮಗಾಂಧಿ ರಸ್ತೆ(ತರೀಕೆರೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.      ಶಿವಮೊಗ್ಗ ನಂಜಪ್ಪ ಲೈಫ್‌ಕೇರ್ ಹಾಗು ಆದರ್ಶ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಶಿಬಿರದಲ್ಲಿ ಉಚಿತ ಹೃದಯ ರೋಗ, ಮಧುಮೇಹ, ರಕ್ತದೊತ್ತಡ, ಬೆನ್ನುಹುರಿ ಹಾಗು ಮೂಲೆ ಮತ್ತು ಕಣ್ಣುಗಳಿಗೆ ಸಂಬಂಧಿಸಿದ ತಪಾಸಣೆ ನಡೆಯಲಿದೆ. ಶಿಬಿರದಲ್ಲಿ ಖ್ಯಾತ ಮೂಳೆಚಿಕಿತ್ಸೆ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಎ.ಸಿ ಪ್ರೇಮರಾಜ್‌ರವರು ರೋಬೊಟೆಕ್ ಸಹಾಯದಿಂದ ಮಂಡಿ ಚಿಪ್ಪು ಮರುಜೋಡಣೆ, ಬೆನ್ನುಮೂಳೆ, ಕಾಲು ಮತ್ತು ಪಾದದ ಶಸ್ತ್ರ ಚಿಕಿತ್ಸೆ, ಮಕ್ಕಳ ಮೂಳೆ ಚಿಕಿತ್ಸೆಗೆ ಸಂಬಂಧಿಸಿದ ವಿಶೇಷ ಸಮಾಲೋಚನೆ ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರರಾವ್ ಕೋರಿದ್ದಾರೆ.   

ಹುತ್ತಾ ಕಾಲೋನಿಯಲ್ಲಿ ಚೆನ್ನಮ್ಮ ದೇವೇಗೌಡರ ಸ್ಮರಣೆ

Image
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ೧೧ನೇ ದಿನದ ಪುಣ್ಯಸ್ಮರಣೆ ಭದ್ರಾವತಿ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿಯಲ್ಲಿ ನಿವಾಸಿಗಳು ಹಾಗು ಅಭಿಮಾನಿಗಳಿಂದ ನಡೆಸಲಾಯಿತು.       ಭದ್ರಾವತಿ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ೧೧ನೇ ದಿನದ ಪುಣ್ಯಸ್ಮರಣೆ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿಯಲ್ಲಿ ನಿವಾಸಿಗಳು ಹಾಗು ಅಭಿಮಾನಿಗಳಿಂದ ನಡೆಸಲಾಯಿತು.    ಒಂದು ನಿಮಿಷ ಮೌನಾಚರಣೆ ನಡೆಸಿ ಚೆನ್ನಮ್ಮ ದೇವೇಗೌಡರವರ ಆತ್ಮಕ್ಕೆ ಭಗವಂತ ಚಿರಚಿರಶಾಂತಿ ನೀಡಲೆಂದು ಹಾಗೂ ಕುಟುಂಬ ವರ್ಗದವರು ಮತ್ತು ಸಹಸ್ರಾರು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಲಾಯಿತು.  ಸಿಎಂ ರಮೇಶ್, ಅನಿಲ್ ಕುಮಾರ್, ಕೇಶವಮೂರ್ತಿ, ರಾಜಣ್ಣ, ಮಾಯಣ್ಣ, ನಾರಾಯಣಪ್ಪ, ಚೆನ್ನಪ್ಪ ಹಾಗೂ ಹಲವಾರು ಹಿರಿಯರು ಭಾಗವಹಿಸಿದ್ದರು.    

ಆ.೨ರಂದು ಪ್ರಧಾನಿ ಮೋದಿಯವರೊಂದಿಗೆ ಶ್ರೀ ಸತ್ಯಸಾಯಿ ಜ್ಞಾನಪೀಠ ವಿದ್ಯಾರ್ಥಿಗಳು ಸಂವಾದ

Image
ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆ.      ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಆ.೨ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.       ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿರುವ ದೇಶದ ಆಯ್ದ  ೧೧ ಶ್ರೀ ಸತ್ಯಸಾಯಿ ಶಾಲೆಗಳ ಮಕ್ಕಳೊಂದಿಗೆ ಬೆಳಿಗ್ಗೆ ೧೦ ರಿಂದ ೧೧.೩೦ರವರೆಗೆ `ನಶ ಮುಕ್ತ ಭಾರತ' ವಿಷಯ ಕುರಿತು ನರೇಂದ್ರ ಮೋದಿಯವರು ಸಂವಾದ ನಡೆಸಲಿದ್ದಾರೆ. ಈ ಶಾಲೆಗಳ ಪೈಕಿ ನಗರದ ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆ ಸಹ ಒಂದಾಗಿದ್ದು, ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವಲಯದಲ್ಲಿ ಸಂತಸವನ್ನುಂಟು ಮಾಡಿದೆ. ಸಂವಾದಲ್ಲಿ ಸುಮಾರು ೨೦೦ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.       ಈ ಕುರಿತು ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ, ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಡಿ. ಪ್ರಭಾಕರ ಬೀರಯ್ಯ ಹಾಗು ಉಪಾಧ್ಯಕ್ಷ ಆರ್. ವಿನಯ್, ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಜಂಟಿ ಆಡಳಿತಾಧಿಕಾರಿ ಸೌಮ್ಯ ಪ್ರಭಾಕರ ಬೀರಯ್ಯ ಮತ್ತು ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಪ್ರಮುಖರಾದ...

ಮಾನವ ಕಳ್ಳ ಸಾಗಾಣಿಕೆ ಕುರಿತು ಅರಿವಿನ ರಥ, ಬೈಕ್ ಜಾಥಾ ಮೂಲಕ ಜಾಗೃತಿ

Image
  ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಕಾರ್ಯಕ್ರಮ ಆಯೋಜನೆ  ಅಂತರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಭದ್ರಾವತಿ ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದ ನಿರ್ಮಲ ಆಸ್ಪತ್ರೆಯ ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಗುರುವಾರ ಅರಿವಿನ ರಥ ಮತ್ತು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.      ಭದ್ರಾವತಿ : ಅಂತರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದ ನಿರ್ಮಲ ಆಸ್ಪತ್ರೆಯ ನಿರ್ಮಲ ಮಹಿಳಾ ಸೇವಾ ಕೇಂದ್ರದಿಂದ ಗುರುವಾರ ಅರಿವಿನ ರಥ ಮತ್ತು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.       ರಂಗಪ್ಪ ವೃತ್ತದಲ್ಲಿ ಬೆಳಿಗ್ಗೆ ಮಹಿಳೆಯರ ಮೇಲಿನ ಅತ್ಯಾಚಾರಗಳು, ದೌರ್ಜನ್ಯಗಳನ್ನು ವಿರೋಧಿಸಿ ಅರಿವು ಮೂಡಿಸುವುದು, ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ಬೈಕ್ ಜಾಥಾ ಹಾಗು ಅರಿವಿನ ರಥ ಉದ್ಘಾಟನೆ ನಡೆಯಿತು. ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ, ಕಿರಿಯ ವಿಭಾಗದ ನ್ಯಾಯಾಧೀಶರಾದ ರವಿಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಂಗಪ್ಪ ವೃತ್ತದಿಂದ ಆರಂಭಗೊಳ್ಳುವ ಜಾಥಾ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೆ ಸಾಗಿ ನಂತರ ಹೊಸ ಸೇತುವೆ ರಸ್ತೆ ಮೂಲಕ ನಿರ್ಮಲ ಆಸ್ಪತ್ರೆ ತಲುಪಿತು.      ತಾ...

ಆ.೨ರಂದು `ಭೂಮಿಕಾ' ರಜತ ಮಹೋತ್ಸವ ಸಮಾರಂಭ : ಡಾ. ಕೃಷ್ಣ ಎಸ್. ಭಟ್

Image
     ಭದ್ರಾವತಿ: ಕನ್ನಡ ನಾಡು, ನುಡಿ, ಸಂಸ್ಕೃತಿಯ ಸೇವೆಗೆಂದು ಸಹಮನಸ್ಕರಿಂದ ೨೬ನೇ ಜನವರಿ ೨೦೦೨ ರಂದು ಪ್ರಾರಂಭವಾದ ಭೂಮಿಕಾ ವೇದಿಕೆ ಕಳೆದ ೨೫ ವರ್ಷಗಳಿಂದ ನಿರಂತರವಾಗಿ  ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಆ.೨ರ ಭಾನುವಾರ ವೇದಿಕೆಯ ರಜತ ಮಹೋತ್ಸವ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್ ಭಟ್ ತಿಳಿಸಿದರು.        ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೇದಿಕೆ ೨೫ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು ಅವಿಸ್ಮರಣೀಯ ಬೆಳವಣಿಗೆಯಾಗಿದೆ. ಅರ್ಥಪೂರ್ಣ, ಸಾರ್ಥಕ ನಿರಂತರ ಕಾರ್ಯಕ್ರಮಗಳಿಂದಾಗಿ ೨೫ ವರ್ಷಗಳು ಕಳೆದು ಹೋಗಿರುವುದು ಅರಿವಿಗೆ ಬರುತ್ತಿಲ್ಲ. ಹೇಗೆ ಹಕ್ಕಿಯಂತೆ ಹಾರಿ ಹೋಯಿತು ಎಂಬುದು ತಿಳಿಯಲೇ ಇಲ್ಲ ಎಂದರು.       ಕನ್ನಡ ಸಾಹಿತಿಗಳ ಸಂಸ್ಮರಣೆ, ರಸಪ್ರಶ್ನೆ, ಬೇಸಿಗೆ ಶಿಬಿರ, ದೇಶಭಕ್ತಿ ಗೀತೆ, ಕಾವ್ಯ ಗಾಯನ, ಮಹಿಳಾ ದಿನಾಚರಣೆ, ಶಿಕ್ಷಕರ ದಿನಾಚರಣೆ, ಪತ್ರಿಕಾ ದಿನಾಚರಣೆ, ಸಾಹಿತ್ಯ ಸಂಸ್ಕೃತಿ, ನೃತ್ಯ, ಜಾನಪದ, ಯಕ್ಷಗಾನ ಮುಂತಾದ ಸುಮಾರು ೧೫೦ ವಿಭಿನ್ನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸೇರಿದಂತೆ ವೇದಿಕೆ ಎಲ್ಲಾ ಸದಸ್ಯರ ಶ್ರಮ ಹೆಚ್...

ಸಮಾಜಕ್ಕೆ ಎಂದಿಗೂ ಆದರ್ಶಪ್ರಾಯರಾಗಿರುವ ಮಹನೀಯರ ಜಯಂತಿಗಳಲ್ಲಿ ಎಲ್ಲರೂ ಪಾಲ್ಗೊಳ್ಳಿ

Image
ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪ್ರದೀಪ್ ದೇವಗಿರಿ ಭದ್ರಾವತಿಯಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ  ೧೨ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಚನಕಾರ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಸಮಾಜಕ್ಕೆ ಎಂದಿಗೂ ಆದರ್ಶಪ್ರಾಯರಾಗಿರುವ ಮಹನೀಯರ ಜಯಂತಿಗಳಲ್ಲಿ ಎಲ್ಲಾ ಸಮುದಾಯದ ಜನರು ಪಾಲ್ಗೊಂಡು, ಮಹನೀಯರ ಮೌಲ್ಯಯುತ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಕರೆ ನೀಡಿದರು.       ಅವರು ಬುಧವಾರ ತಾಲೂಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ೧೨ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಚನಕಾರ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.        ಮಹನೀಯರ ಜಯಂತಿ ಕಾರ್ಯಕ್ರಮಗಳು ಸಾರ್ಥಕಗೊಳ್ಳಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಮಹನೀಯರ ವಿಚಾರಧಾರೆಗಳನ್ನು ಅರಿತುಕೊಳ್ಳುವ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.       ಸಮಾಜದ ವಿದ್ಯಾರ್ಥಿನಿ ವೈ. ರಕ್ಷಿ...