ಬಂಜಾರ ಗೋರ್ ಬಾಯ್ ಸಂಘದಿಂದ ಕಾರೇಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕ ಉಚಿತ ವಿತರಣೆ
ಭದ್ರಾವತಿ: ಸರ್ಕಾರಿ ಶಾಲೆಗಳ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಬಂಜಾರ ಗೋರ್ ಬಾಯ್ ಸಂಘ ನೆರವಾಗಿದೆ. ಭದ್ರಾವತಿ: ಸರ್ಕಾರಿ ಶಾಲೆಗಳ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಬಂಜಾರ ಗೋರ್ ಬಾಯ್ ಸಂಘ ನೆರವಾಗಿದೆ. ಈಗಾಗಲೇ ತಾಲೂಕಿನ ಹಲವು ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಂಘದಿಂದ ಬರವಣಿಗೆ ಪುಸ್ತಕಗಳನ್ನು ಉಚಿತವಾಗಿ ನೀಡಲಾಗಿದ್ದು, ಇದೀಗ ಕಾರೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷ ಎಲ್. ವೇದೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಎಸ್. ಮಂಜುನಾಥ್, ಕಾರ್ಯದರ್ಶಿ ನಾಗನಾಯ್ಕ, ಉಪಾಧ್ಯಕ್ಷ ಶಂಕರನಾಯ್ಕ, ಖಜಾಂಚಿ ಸುರೇಶ್ನಾಯ್ಕ ಹಾಗು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.