ಆ.೧೯ ರಿಂದ ಎರಡು ದಿನ ಭದ್ರಾವತಿಯಲ್ಲಿ ``ಓಓಎಸ್ಸಿ ಮುಕ್ತ ಶಿವಮೊಗ್ಗ '' ಅಭಿಯಾನ
ಭದ್ರಾವತಿ : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ``ಓಓಎಸ್ಸಿ ಮುಕ್ತ ಶಿವಮೊಗ್ಗ''(ಓಓಎಸ್ಸಿ-ಔಟ್ ಆಫ್ ಸ್ಕೂಲ್ ಚಿಲ್ಡ್ರನ್) ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿ ಆ.೧೯ ಮತ್ತು ೨೦ ಎರಡು ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗು ಶಿಕ್ಷಣ ಇಲಾಖೆ ಸಿಬ್ಬಂದಿಗಳ ಮೇಲ್ವಿಚಾರಣೆಯಲ್ಲಿ ಶಿಕ್ಷಣ ಇಲಾಖೆ ಹಾಜರಾತಿ ಅಧಿಕಾರಿಗಳು ಹಾಗು ನೋಡೆಲ್ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ಇಲಾಖೆ/ನಗರಸಭೆ/ಪಟ್ಟಣ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು/ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಣ ಇಲಾಖೆ ಸ್ಥಳೀಯ ಮುಖ್ಯ ಶಿಕ್ಷಕರು, ಪೊಲೀಸ್ ಇಲಾಖೆ ಪೊಲೀಸ್ ಸಿಬ್ಬಂದಿ ಹಾಗು ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಸಹಾಯಕಿಯರನ್ನೊಳಗೊಂಡ ೬ ಸದಸ್ಯರ ತಂಡವನ್ನು ರಚಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಗಳಿಗೆ ತಂಡ ಭೇಟಿ ನೀಡಿ ಮಕ್ಕಳ ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸುವ ಕಾರ್ಯದಲ್ಲಿ ತೊಡಗಲಿದೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ ಸುರೇಶ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೇರಿದಂತೆ ಇನ್ನಿತರ ತಾಲೂಕು ಮಟ್ಟದ ಅಧಿಕಾರಿಗಳು ಸಹ ತಂಡದ ಜೊತೆಗೆ ಮನೆ ಮನೆಗೆ ತೆರ...