Posts

ಸಿ. ಪೂಜಾ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ೫೭೫ ಅಂಕ

Image
ಸಿ. ಪೂಜಾ       ಭದ್ರಾವತಿ:  ನಗರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕಾಲೇಜಿ(ಬಿಜಿಎಸ್)ನ ವಿದ್ಯಾರ್ಥಿನಿ ಸಿ. ಪೂಜಾ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.       ಈ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ೬೦೦ಕ್ಕೆ ೫೭೫ ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ನಗರಕ್ಕೆ ಕೀರ್ತಿ ತಂದಿದ್ದಾರೆ. ತಾಲೂಕು ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಸಹಕಾರ ಭಾರತಿ ಕಾರ್ಯದರ್ಶಿ ಚಂದ್ರಶೇಖರ್ ಜಾದವ್‌ರವರ ಪುತ್ರಿಯಾಗಿದ್ದಾರೆ. ಸಿ. ಪೂಜಾರವರ ಸಾಧನೆಯನ್ನು ಬಿಜೆಪಿ ಓಬಿಸಿ ಮೋರ್ಚಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ. 

ಖರ್ಗೆ ದ್ವೇಷ ಭಾಷಣ : ಯುವ ಮೋರ್ಚಾದಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು

Image
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಆರ್‌ಎಸ್‌ಎಸ್ ಹಾಗು ಬಿಜೆಪಿ ಕುರಿತು ದ್ವೇಷ ಭಾಷಣ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭದ್ರಾವತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಶುಕ್ರವಾರ ದೂರು ನೀಡಲಾಯಿತು.       ಭದ್ರಾವತಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಆರ್‌ಎಸ್‌ಎಸ್ ಹಾಗು ಬಿಜೆಪಿ ಕುರಿತು ದ್ವೇಷ ಭಾಷಣ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಶುಕ್ರವಾರ ದೂರು ನೀಡಲಾಯಿತು.       ಮಲ್ಲಿಕಾರ್ಜುನ ಖರ್ಗೆಯವರು ಪ್ರಚಾರದ ಸಂದರ್ಭದಲ್ಲಿ `ಖುರಾನ್‌ನಲ್ಲಿ ಬರೆದಿದೆ ವಿಷ ಸರ್ಪಗಳನ್ನು ಕಂಡರೆ ಕೊಲ್ಲಬೇಕು.  ಆರ್‌ಎಸ್‌ಎಸ್ ಹಾಗೂ ಬಿಜೆಪಿ ಅದೇ ವಿಷ ಸರ್ಪಗಳು. ಅವುಗಳನ್ನು ಕೊಲ್ಲಬೇಕು, ಇಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ. ನಮಾಜ್ ಮಾಡುವ ಸಂದರ್ಭದಲ್ಲಿಯಾದರೂ ಅದನ್ನು ಬಿಟ್ಟು ಕೊಲ್ಲಬೇಕು.' ಎಂಬುದಾಗಿ ದ್ವೇಷ ಭಾಷಣ ಮಾಡಿರುವುದು ಖಂಡನೀಯ. ತಕ್ಷಣ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಂಡಲ ಯುವ ಮೋರ್ಚಾ ನೇತೃತ್ವದಲ್ಲಿ ಹಳೇನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಸುನೀಲ್ ಬಿ. ತೇಲಿ, ಪೇಪರ್ ಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕ ಎನ್. ಕುಮಾರ್, ನ್ಯೂಟೌನ್ ಪೊಲ...

ಏ.೧೧ರಂದು ವಿದ್ಯುತ್ ವ್ಯತ್ಯಯ

Image
          ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.೧೧ರ ಶನಿವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.       ದಿ ಸದರನ್ ಗ್ಯಾಸ್ ಫ್ಯಾಕ್ಟರಿ, ಜೆಪಿಎಸ್ ಕಾಲೋನಿ, ಕಾಗದನಗರ ೬ನೇ ವಾರ್ಡ್, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಎಂಪಿಎಂ ಅತಿಥಿ ಗೃಹದ ಭಾಗ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.    

ಏ.೧೮ರಂದು ನಗರಸಭೆ ಸಾಮಾನ್ಯ ಸಭೆ

Image
     ಭದ್ರಾವತಿ: ನಗರಸಭೆ ಸಾಮಾನ್ಯ ಸಭೆ ಏ.೧೮ರ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.       ಪ್ರಸಕ್ತ ಸಾಲಿನ ಬಜೆಟ್ ಮಂಡನೆ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದ್ದು, ಹಲವಾರು ಸಮಸ್ಯೆಗಳ ಕುರಿತು ನಗರಸಭೆ ಆಡಳಿತ ಪಕ್ಷದ ಸದಸ್ಯರೇ ಬಜೆಟ್ ಮಂಡನೆ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಬೇಸಿಗೆ ಆರಂಭವಾಗಿದ್ದು, ಈ ನಡುವೆ ಕುಡಿಯುವ ನೀರು, ಸೊಳ್ಳೆ, ಬೀದಿನಾಯಿಗಳ ಹಾವಳಿ, ಅಸಮರ್ಪಕ ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ನಡುವೆ ಸಭೆ ನಡೆಯುತ್ತಿದ್ದು,  ನಗರಸಭೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸದಸ್ಯರು ಸಭೆಗೆ ಕಡ್ಡಾಯವಾಗಿ ಹಾಜರಾಗಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ. 

ದ್ವಿತೀಯ ಪಿಯುಸಿ : ಶ್ರೀ ಆದಿಚುಂಚನಗಿರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.೯೯.೩೦ ಫಲಿತಾಂಶ

Image
ಬಿ.ಎಸ್ ಸಿಂಚನಾ-೫೮೫      ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೯೯.೩೦ ಫಲಿತಾಂಶ ಪಡೆದುಕೊಂಡಿದ್ದು, ೮೦ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.       ಈ ಬಾರಿ ೧೪೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೬೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇ.೯೯.೩೦ ಫಲಿತಾಂಶ ಲಭಿಸಿದೆ. ಅಲ್ಲದೆ ಈ ಕಾಲೇಜು ತಾಲೂಕಿಗೆ ಪ್ರಥಮ ಸ್ಥಾನ ಕಾಯ್ದುಕೊಂಡಿದೆ.  ಜಿ.ಎಸ್ ಸಂಜನಾ-೫೮೫      ಕಾಲೇಜಿನ ಬಿ.ಎಸ್ ಸಿಂಚನಾ-೫೮೫, ಜಿ.ಎಸ್ ಸಂಜನಾ-೫೮೫, ನಿಶಾಂತ್ ಅಂಜುಮ್-೫೮೨, ಎಂ. ಆರ್ಮಾನ್-೫೮೦, ಎ. ಕೃತಿಕಾ-೫೮೦, ಪಿ. ರಕ್ಷಿತಾ ಗೌಡ-೫೭೯, ರುತ್ವಿಕಾ ಎ. ಗೌಡ-೫೭೯, ಸಂಜು.ಎಂ-೫೭೯, ವರ್ಷಿಣಿ. ಎಂ-೫೭೯ ಮತ್ತು ಭರತ್. ಎನ್-೫೭೫ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾಗಿದ್ದಾರೆ.       ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗು ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ...

ದ್ವಿತೀಯ ಪಿಯುಸಿ ಪರೀಕ್ಷೆ : ಚಿನ್ಮಯ ಪ್ರಸಾದ್ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ

Image
ಚಿನ್ಮಯ ಪ್ರಸಾದ್ ಭದ್ರಾವತಿ : ಶಿವಮೊಗ್ಗ ನಂದನ ಎಜುಕೇಷನ್ ಟ್ರಸ್ಟ್ ದ್ವಿತೀಯ ಪಿಯುಸಿ ವಿದ್ಯಾರ್ಥಿ, ನಗರದ ಹೊಸಮನೆ ನಿವಾಸಿ ಚಿನ್ಮಯ ಪ್ರಸಾದ್. ಜಿ ದ್ವಿತೀಯ ಪಿಯುಸಿ ವಾಣಿಜ್ಯ ವಿಧಾಗದಲ್ಲಿ ಶೇ.೯೨ರಷ್ಟು ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.   ಚಿನ್ಮಯರವರು ಒಟ್ಟು ೬೦೦ ಅಂಕಗಳಿಗೆ ೫೫೦ ಅಂಕಗಳನ್ನು ಪಡೆದುಕೊಂಡಿದ್ದಾರೆ. ತಮ್ಮ ಮುಂದಿನ ವಿದ್ಯಾಭ್ಯಾಸ ಲೆಕ್ಕ ಪರಿಶೋಧನಾ ಶಾಸ್ತ್ರ ಹಾಗು ನ್ಯಾಯಾಂಗ ಶಾಸ್ತ್ರದ ಕುರಿತು ಒಲವು ಹೊಂದಿರುವುದಾಗಿ ಪತ್ರಿಕೆಗೆ ಚಿನ್ನಯರವರು ಪ್ರತಿಕ್ರಿಯಿಸಿದ್ದಾರೆ.    ಚಿನ್ಮಯರವರು ಭಾರತೀಯ ಜನತಾ ಪಕ್ಷದ ನಗರ ಮಂಡಲ ಅಧ್ಯಕ್ಷ, ಲೆಕ್ಕ ಪರಿಶೋಧಕ ಜಿ. ಧರ್ಮಪ್ರಸಾದ್ ಹಾಗು ವೈದ್ಯೆ ಡಾ. ಆಶಾ ದಂಪತಿರವರ ಪುತ್ರರಾಗಿದ್ದಾರೆ. ನಗರದ ಗಣ್ಯರು ಚಿನ್ಮಯರವರ ಸಾಧನೆಯನ್ನು ಅಭಿನಂದಿಸಿದ್ದಾರೆ. 

ಡಾ. ಬಿ.ಆರ್ ಅಂಬೇಡ್ಕರ್ ಚಿಂತನೆಗಳು ಮುಂದಿನ ಪೀಳಿಗೆಗೆ ತಲುಪಲಿ : ಎಂ. ರಾಜೇಂದ್ರ

Image
ಭದ್ರಾವತಿಯಲ್ಲಿ ಬಾಪೂಜಿ ಹರಿಜನ ಸೇವಾ ಸಂಘ ಮತ್ತು ಡಾ ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ನಗರದ ಉಂಬ್ಳೆಬೈಲು ರಸ್ತೆ, ವಿದ್ಯಾಮಂದಿರ ಸಮೀಪದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಕಾರ್ಯಕ್ರಮದ ಭಾಗವಾಗಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಹೋರಾಟದ ಕುರಿತಾದ ಹಾಡುಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.       ಭದ್ರಾವತಿ : ವಿದ್ಯಾರ್ಥಿಗಳು ಅಂಬೇಡ್ಕರ್ ಆಶಯಗಳನ್ನು ಓದಿಗೆ ಮಾತ್ರ ಸೀಮಿತಗೊಳಿಸದೆ ಬದುಕಿಗೆ ಅಳವಡಿಸಿಕೊಳ್ಳಬೇಕು. ಅಲ್ಲದೆ ಅವರ ಬರಹ, ಚಿಂತನೆಗಳು ಮುಂದಿನ ಪೀಳಿಗೆಗೂ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಬಾಪೂಜಿ ಹರಿಜನ ಸೇವಾ ಸಂಘದ ಪ್ರದಾನ ಕಾರ್ಯದರ್ಶಿ ಎಂ. ರಾಜೇಂದ್ರ ಕರೆ ನೀಡಿದರು.       ಅವರು ಬಾಪೂಜಿ ಹರಿಜನ ಸೇವಾ ಸಂಘ ಮತ್ತು ಡಾ ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ನಗರದ ಉಂಬ್ಳೆಬೈಲು ರಸ್ತೆ, ವಿದ್ಯಾಮಂದಿರ ಸಮೀಪದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಕಾರ್ಯಕ್ರಮದ ಭಾಗವಾಗಿ ಏರ್ಪಡಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ಹೋರಾಟದ ಕುರಿತಾದ ಹಾಡುಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಮಾತನಾಡಿದರು.     ತಾಲೂಕು ರಾಷ್ಟ್ರೀಯ ಹಬ್ಬ...

ಕೇಂದ್ರದ ಮಾಜಿ ಸಚಿವೆ ಮೋಹಿಸಿನಾ ಕಿದ್ವಾಯಿ ನಿಧನಕ್ಕೆ ಶಾಸಕ ಸಂಗಮೇಶ್ವರ್ ಸಂತಾಪ

Image
ಮೋಹಿಸಿನಾ ಕಿದ್ವಾಯಿ       ಭದ್ರಾವತಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಮೋಹಿಸಿನಾ ಕಿದ್ವಾಯಿ ಅವರ ನಿಧನಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.        ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ಮೋಹಿಸಿನಾ ಕಿದ್ವಾಯಿಯವರು ದೇಶದ ರಾಜಕಾರಣದ ಧೀಮಂತ ಶಕ್ತಿಯಾಗಿದ್ದರು. ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಾಗಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಪ್ರಮುಖ ಸದಸ್ಯರಾಗಿ ಸಲ್ಲಿಸಿದ ಸೇವೆ ಅಪಾರವಾಗಿದೆ. ಪಕ್ಷದ ಅತ್ಯಂತ ಕಠಿಣ ಸಂದರ್ಭಗಳಲ್ಲಿಯೂ ದಾರಿದೀಪವಾಗಿ ಬಲವರ್ಧನೆಗೆ ಶ್ರಮಿಸಿದ್ದರು.        ಇವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಇವರ ಆತ್ಮಕ್ಕೆ ಸದ್ಗತಿ ನೀಡಲಿ ಹಾಗು ಇವರ ಕುಟುಂಬ, ಅಭಿಮಾನಿ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದ್ದಾರೆ.  

ಗೌರಬಾಯಿ ನಿಧನ

Image
ಗೌರಬಾಯಿ       ಭದ್ರಾವತಿ : ನಗರದ ಅಪ್ಪರ್‌ಹುತ್ತಾ ನಿವಾಸಿ, ದಿನ ಪತ್ರಿಕೆ ವಿತರಕ ಪರಶುರಾಮ ರಾವ್‌ರವರ ತಾಯಿ ಗೌರಬಾಯಿ(೯೬) ಮಂಗಳವಾರ ರಾತ್ರಿ ವಯೋ ಸಹಜವಾಗಿ ನಿಧನ ಹೊಂದಿದರು.       ೫ ಗಂಡು, ೩ ಹೆಣ್ಣು ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ದೊಣಬಘಟ್ಟ ರಸ್ತೆಯ ಹಿಂದೂ ರುದ್ರ ಭೂಮಿಯಲ್ಲಿ ಬುಧವಾರ ಮಧ್ಯಾಹ್ನ ನೆರವೇರಿತು. ಇವರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು, ಪತ್ರಿಕಾ ವಿತರಕರು ಸಂತಾಪ ಸೂಚಿಸಿದ್ದಾರೆ. 

ಓ.ಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು

Image
     ಭದ್ರಾವತಿ : ನಗರದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಪ್ರೊ. ಬಿ. ಕೃಷ್ಣಪ್ಪ ವೃತ್ತದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಯುವಕನೊಬ್ಬನ ವಿರುದ್ಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.       ಈ ವ್ಯಾಪ್ತಿಯಲ್ಲಿ ಗಸ್ತು ಕರ್ತವ್ಯದಲ್ಲಿ ತೊಡಗಿದ್ದ ಹೆಡ್‌ಕಾನ್ಸ್‌ಸ್ಟೇಬಲ್ ಗುಳ್ಯಪ್ಪರವರು ಖಚಿತ ಮಾಹಿತಿ ಮೇರೆಗೆ ಏ.೬ರಂದು ಬೆಳಿಗ್ಗೆ ೧೦ ಗಂಟೆ ಸಮಯದಲ್ಲಿ ದಾಳಿ ನಡೆಸಿದ್ದು, ಕೂಲಿಬ್ಲಾಕ್‌ಶೆಡ್ ನಿವಾಸಿ ಸುಮಾರು ೩೦ ವರ್ಷ ವಯಸ್ಸಿನ ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಹೆಜ್ಜೇನು ದಾಳಿ : ೧೦ಕ್ಕೂ ಹೆಚ್ಚು ಮಂದಿಗೆ ಕಡಿತ

Image
ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣ.       ಭದ್ರಾವತಿ : ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿದ್ದವರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿ ಸುಮಾರು ೧೦ಕ್ಕೂ ಹೆಚ್ಚು ಮಂದಿ ಹೆಜ್ಜೇನು ಕಡಿತಕ್ಕೆ ಒಳಗಾಗಿರುವ ಘಟನೆ ನಡೆದಿದೆ.       ಜೈನ್ ಸಮುದಾಯದವರು ಕ್ರೀಡಾಂಗಣದ ಒಳಭಾಗದ ಮುಖ್ಯ  ಅಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ್ದು, ಕ್ರೀಡಾಕೂಟ ಆರಂಭದ ಸಂದರ್ಭದಲ್ಲಿ ಗುಂಪು ಸೇರಿದ್ದ ಸ್ಥಳದ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಇದರಿಂದಾಗಿ ಹೆಚ್ಚಿನ ಮಂದಿ ಕಡತಕ್ಕೆ ಒಳಗಾಗಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಾವುದೇ ಪ್ರಾಣಾಪಾಯ ಸಂಭಸಿಲ್ಲ ಎಂದು ತಿಳಿದು ಬಂದಿದೆ.       ಬೇಸಿಗೆ ರಜೆ ಹಿನ್ನಲೆಯಲ್ಲಿ ಕೀಡಾಂಗಣದಲ್ಲಿ ಬೆಳಿಗ್ಗೆ ಮತ್ತು ಸಂಜೆ ಹೆಚ್ಚಿನ ಕ್ರೀಡಾಪಟುಗಳು ಕಂಡು ಬರುತ್ತಿದ್ದಾರೆ. ಅಲ್ಲದೆ ಶಾಲಾ-ಕಾಲೇಜುಗಳು ರಜೆ ಇರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಹಾಗು ಅವರೊಂದಿಗೆ ಪೋಷಕರು ಸಹ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಾರೆ. ಈ ನಡುವೆ ವಿವಿಧ ಸಂಘ-ಸಂಸ್ಥೆಗಳು ಕ್ರೀಡಾಕೂಟಗಳನ್ನು ಆಯೋಜನೆ ಮಾಡುತ್ತಿದ್ದು, ಇದರಿಂದಾಗಿ ಬೆಳಿಗ್ಗೆಯಿಂದ ಸಂಜೆವರೆಗೂ ಕ್ರೀಡಾಂಗಣದ ತುಂಬಾ ದಟ್ಟನೆ ಕಂಡು ಬರುತ್ತದೆ. ಸಂಬಂಧಪಟ್ಟವರು ಕ್ರೀಡಾಂಗಣಕ್ಕೆ ಆಗಮಿಸ...

ಬಿಜೆಪಿ ಪ್ರಸ್ತುತ ವಿಶ್ವದಲ್ಲಿಯೇ ಅತಿ ದೊಡ್ಡ ರಾಜಕೀಯ ಪಕ್ಷ ಎಂಬುದು ನಮ್ಮೆಲ್ಲರ ಹೆಮ್ಮೆ

Image
ಭದ್ರಾವತಿ ನಗರದಲ್ಲಿ ಸೋಮವಾರ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು.        ಭದ್ರಾವತಿ: ಭಾರತೀಯ ಜನತಾ ಪಕ್ಷದ ಪ್ರತಿಯೊಂದು ಹೆಜ್ಜೆಯಲ್ಲೂ ಕಾರ್ಯಕರ್ತರ ತ್ಯಾಗ, ಹಿರಿಯರ ಮಾರ್ಗದರ್ಶನ ಮತ್ತು ಜನರ ವಿಶ್ವಾಸ ಹೆಚ್ಚಿನದ್ದಾಗಿದ್ದು, ಪ್ರಸ್ತುತ ವಿಶ್ವದಲ್ಲಿಯೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡಿದೆ ಎಂದು ಪಕ್ಷದ      ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮತ್ತು ಗ್ರಾಮಾಂತರ ಮಂಡಲ ಕೆ.ಎಚ್ ತೀರ್ಥಯ್ಯ ಅಭಿಮಾನ ವ್ಯಕ್ತಪಡಿಸಿದರು.        ನಗರದಲ್ಲಿ ಸೋಮವಾರ ಪಕ್ಷದ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು. ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ, ದೀನ ದಯಾಳ್ ಉಪಾಧ್ಯಾಯ, ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಪ್ರಮುಖರು ಏ.೬, ೧೮೯೦ರಲ್ಲಿ ಸ್ಥಾಪಿಸಿದ ಪಕ್ಷ ೪೬ ವರ್ಷಗಳಿಂದ ನಿರಂತರವಾಗಿ ಬಲವರ್ಧನೆಗೊಂಡು ಮುನ್ನಡೆಯುತ್ತಿದ್ದು, ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರ ಬಲಿಷ್ಠ ನಾಯಕತ್ವ ಲಭಿಸಿದೆ. ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಪ್ರತಿಯೊಬ್ಬರು ಶಕ್ತಿ ಮೀರಿ ಶ್ರಮಿಸಬೇಕೆಂದರು.       ಪಕ್ಷದ ಪ್ರಮುಖರಾದ ಜಿ. ಆನಂದ ಕುಮಾರ್, ಎಂ. ಮ...

ವಿಇಎಸ್ ವಿದ್ಯಾಸಂಸ್ಥೆಯಲ್ಲಿ `ಗ್ರಾಜುಯೇಷನ್ ಡೇ' : ಗಮನ ಸೆಳೆದ ಪುಟಾಣಿ ಮಕ್ಕಳು

Image
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭದ್ರಾವತಿ ತಾಲೂಕು ಸಂಘದ ಆಶ್ರಿತದ ನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ  ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ  `ಗ್ರಾಜುಯೇಷನ್ ಡೇ' ನಡೆಸಲಾಯಿತು.       ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಆಶ್ರಿತದ ನಗರದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ  ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ  `ಗ್ರಾಜುಯೇಷನ್ ಡೇ' ನಡೆಸಲಾಯಿತು.    ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾಥಿಗಳು ಎಲ್ಲರ ಗಮನ ಸೆಳೆದರು. ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಮಕ್ಕಳಲ್ಲಿ ಆತ್ಮ ವಿಶ್ವಾಸ ಬೆಳೆಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂಬ ಭಾವನೆ ವ್ಯಕ್ತವಾಯಿತು.       ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ ಡಾ. ಎಸ್. ಪಿ ರಾಕೇಶ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ,  ಮುಖ್ಯೋಪಾಧ್ಯಾಯಿನಿ ಕೆ. ಚೈತ್ರ, ಎಂ. ಹೇಮಾವತಿ ಹಾಗೂ ಕಿರಣ್ ಮತ್ತು ಶಿಕ್ಷಕ ವೃಂದ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

೬ ದಿನಗಳ ಉಚಿತ ಬೇಸಿಗೆ ಮಕ್ಕಳ ಶಿಬಿರಕ್ಕೆ ಚಾಲನೆ

Image
ಭದ್ರಾವತಿ ಹಳೇನಗರ ವ್ಯಾಪ್ತಿಯ ಗಾಂಧಿನಗರ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಸೋಮವಾರ ೬ ದಿನಗಳ ಉಚಿತ ಬೇಸಿಗೆ ಮಕ್ಕಳ ಶಿಬಿರಕ್ಕೆ ಚಾಲನೆ ನೀಡಲಾಯಿತು.        ಭದ್ರಾವತಿ : ಹಳೇನಗರ ವ್ಯಾಪ್ತಿಯ ಗಾಂಧಿನಗರ ವೇಳಾಂಗಣಿ ಆರೋಗ್ಯ ಮಾತೆ ದೇವಾಲಯದಲ್ಲಿ ಸೋಮವಾರ ೬ ದಿನಗಳ ಉಚಿತ ಬೇಸಿಗೆ ಮಕ್ಕಳ ಶಿಬಿರಕ್ಕೆ ಚಾಲನೆ ನೀಡಲಾಯಿತು.        ಶಿಬಿರ ಉದ್ಘಾಟಿಸಿ ಮಾತನಾಡಿದ ಧರ್ಮ ಕೇಂದ್ರದ ಗುರುಗಳಾದ ಫಾದರ್ ಸ್ಟೀವನ್ ಡೇಸಾರವರು, ದೇವರು ಎಲ್ಲರಿಗೂ ತಮ್ಮ-ತಮ್ಮೊಳಗೆ ಅವರಿಗೆ ಬೇಕಾದ ವಿಶೇಷ ಪ್ರತಿಭೆಗಳನ್ನು ನೀಡಿರುತ್ತಾನೆ. ಮಕ್ಕಳಿರುವಾಗಲೇ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ, ಹಿರಿಯರು ಪ್ರೋತ್ಸಾಹಿಸಬೇಕು. ಅದಕ್ಕೆ ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದರು.       ೬ ದಿನಗಳು ನಡೆಯುವ ಈ ಉಚಿತ ಶಿಬಿರಕ್ಕೆ ಧರ್ಮ ಕೇಂದ್ರದ ಭಕ್ತರು ಸಹಕರಿಸುತ್ತಿದ್ದು, ತಮ್ಮ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಿ ಕೊಡುತ್ತಿದ್ದಾರೆ.  ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಆಧ್ಯಾತ್ಮಿಕ, ಸಾಮಾಜಿಕ, ನೈತಿಕ ಮತ್ತು ಅನ್ಯೋನ್ಯತೆಯ ಸಹಕಾರ ಮನೋಭಾವ ರೂಢಿಸಿಕೊಳ್ಳುವುದನ್ನು ಕಲಿಸಿಕೊಡಲಾಗುವುದು.       ೧ ರಿಂದ ೯ನೇ ತರಗತಿ ಮಕ್ಕಳಿಗೆ ಶಿಬಿರ ನಡೆಸಲಾಗುತ್ತಿದ್ದು, ಪ್ರತಿದಿನ ಆಟ, ಪಾಠ, ಧ್ಯಾನ, ಕಲಿಕೆ, ಸ್ವಚ್ಛತೆಗೆ ಆದ್ಯತೆ ನ...

ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ರವರು ದೇಶದ ಸಮಗ್ರ ಅಭಿವೃದ್ಧಿಯ ಹರಿಕಾರರು

Image
ಒಂದು ಸಮುದಾಯ, ವರ್ಗಕ್ಕೆ ಸೀಮಿತಗೊಳಿಸದಿರಿ : ಉಪನ್ಯಾಸಕ ಡಾ. ಕೆ.ಎಚ್ ಕುಮಾರಸ್ವಾಮಿ ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಾಜ ಕಲ್ಯಾನ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ್‌ರವರ ೧೧೯ನೇ ಜಯಂತಿ ಕಾರ್ಯಕ್ರಮ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಮತ್ತು ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.      ಭದ್ರಾವತಿ : ದೇಶದ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ರವರು ಕೇವಲ ಅಸ್ಪೃಶ್ಯರು, ದಲಿತರಿಗಾಗಿ ಹೋರಾಟ ನಡೆಸಲಿಲ್ಲ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕ. ಇಂತಹ ನಾಯಕನ ಜನ್ಮ ದಿನಾಚರಣೆ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲರೂ ಸೇರಿ ಆಚರಿಸುವಂತಾಗಬೇಕೆಂದು ಉಪನ್ಯಾಸಕ ಡಾ. ಕೆ.ಎಚ್ ಕುಮಾರಸ್ವಾಮಿ ಹೇಳಿದರು.       ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಾಜ ಕಲ್ಯಾನ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ್‌ರವರ ೧೧೯ನೇ ಜಯಂತಿ ಕಾ...

ಶಾಂತಿ, ಸೌಹಾರ್ದತೆಗಾಗಿ ಕ್ರೈಸ್ತರಿಂದ `ರನ್ ಫಾರ್ ಜೀಸಸ್'

Image
ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ಶನಿವಾರ ಭದ್ರಾವತಿ ನಗರದಲ್ಲಿ `ರನ್ ಫಾರ್ ಜೀಸಸ್' ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ `ರನ್ ಫಾರ್ ಜೀಸಸ್' ಕಾರ್ಯಕ್ರಮಕ್ಕೆ ತಾಲೂಕಿನ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೈಟ್ ರೆವೆರೆಂಡ್ ಡಾ. ಜೋಸೆಫ್ ಅರಮಚ್ಚಾದತ್ ಚಾಲನೆ ನೀಡಿದರು.       ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾನವ ಕುಲಕ್ಕೆ ಯೇಸು ಕ್ರಿಸ್ತರ ತ್ಯಾಗ, ಬಲಿದಾನ ಸ್ಮರಿಸಲಾಯಿತು.  ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕನಕಮಂಟಪ ಮೈದಾನದವರೆಗೂ `ರನ್ ಫಾರ್ ಜೀಸಸ್' ನಡೆಯಿತು. ಪ್ರಮುಖ ವೃತ್ತಗಳಲ್ಲಿ ಯೇಸು ಕ್ರಿಸ್ತರ ಜೀವನ ಚರಿತ್ರೆ ಹಾಗು ಮರಣದ ಕೊನೆಯ ಕ್ಷಣಗಳ ದೃಶ್ಯಗಳನ್ನು ನಾಟಕದ ಮೂಲಕ ಪ್ರದರ್ಶಿಸಲಾಯಿತು. ಅಲ್ಲದೆ ಮಧ್ಯಪ್...

ಸಮುದಾಯದಾಯ ಕಲ್ಯಾಣದ ಜೊತೆಗೆ ಸದಸ್ಯರ ಮನೋಭಾವ ಬಲವರ್ಧನೆ : ಸಪ್ನಾ ಸುರೇಶ್

Image
ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಅಳವಡಿಸಲಾಗಿರುವ ಸುಮಾರು ೫೫,೦೦೦ ರು. ಮೌಲ್ಯದ ಸಾರ್ವಜನಿಕ ಗೋಡೆ ಗಡಿಯಾರ ಲಯನ್ಸ್ ಕ್ಲಬ್ ೩೧೭-ಸಿ, ಮೊದಲ ಜಿಲ್ಲಾ ಮಹಿಳಾ ಗೌರ್‍ನರ್ ಲಯನ್ಸ್ ಸಪ್ನಾ ಸುರೇಶ್ ಉದ್ಘಾಟಿಸಿದರು.       ಭದ್ರಾವತಿ: ಸಮುದಾಯದ ಕಲ್ಯಾಣಕ್ಕಾಗಿ ಮತ್ತು ಲಯನ್ಸ್ ಕ್ಲಬ್ ಸದಸ್ಯರ ಮನೋಭಾವ ಬಲಪಡಿಸುವ ನಿಟ್ಟಿನಲ್ಲಿ ಹಲವಾರು ಪರಿಣಾಮಕಾರಿ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸೇವಾ ಮನೋಭಾವನೆ ಹೊಂದಿರುವ ಕ್ಲಬ್‌ನ ಇಲ್ಲಿನ ತಂಡಕ್ಕೆ ಈ ಸೇವಾ ಕಾರ್ಯಗಳು ಸಂತೃಪ್ತಿ ಉಂಟು ಮಾಡಿವೆ ಎಂದು ಲಯನ್ಸ್ ಕ್ಲಬ್ ೩೧೭-ಸಿ, ಮೊದಲ ಜಿಲ್ಲಾ ಮಹಿಳಾ ಗೌರ್‍ನರ್ ಲಯನ್ಸ್ ಸಪ್ನಾ ಸುರೇಶ್ ಹೇಳಿದರು.       ಅವರು ನಗರದ ಲಯನ್ಸ್ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿ ವಿವಿಧೆಡೆ ಸೇವಾ ಕಾರ್ಯಗಳಿಗೆ ಚಾಲನೆ ನೀಡಿದರು. ನಗರದ ಬಿ.ಎಚ್ ರಸ್ತೆ ಮೀನು ಮಾರುಕಟ್ಟೆ ಬಳಿ ಮರುಸ್ಥಾಪಿಸಲಾಗಿರುವ ಫಲಕ ಉದ್ಘಾಟಿಸಿ, ಈ ಫಲಕ ನಗರದಲ್ಲಿ ಲಯನ್ಸ್‌ಕ್ಲಬ್ ಗೋಚರತೆ ಮತ್ತು ಸಾರ್ವಜನಿಕ ಗುರುತನ್ನು ಹೆಚ್ಚಿಸುತ್ತದೆ ಎಂದರು.       ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಅಳವಡಿಸಲಾಗಿರುವ ಸುಮಾರು ೫೫,೦೦೦ ರು. ಮೌಲ್ಯದ ಸಾರ್ವಜನಿಕ ಗೋಡೆ ಗಡಿಯಾರ ಉದ್ಘಾಟಿಸಿ, ಈ ಗಡಿಯಾರ ಸಾವಿರಾರು ದೈನಂದಿನ ಪ್ರಯಾಣ...

ನಿವೃತ್ತಿ ಹೊಂದಿ ತವರಿಗೆ ಮರಳಿದ ಯೋಧ ಟಿ.ಪಿ ವಿಶ್ವನಾಥ್‌ರಿಗೆ ಅದ್ದೂರಿ ಸ್ವಾಗತ : ಮುಖಂಡರು, ಗ್ರಾಮಸ್ಥರಿಂದ ಸನ್ಮಾನ

Image
ಭಾರತೀಯ ಸೇನೆಯಲ್ಲಿ ಸುಧೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶುಕ್ರವಾರ ತವರಿಗೆ ಮರಳಿದ ಭದ್ರಾವತಿ ತಾಲೂಕಿನ ಬಿಸಿಲುಮನೆ ಗ್ರಾಮದ ಟಿ.ಪಿ ವಿಶ್ವನಾಥ್‌ರವರನ್ನು ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸುವ ಮೂಲಕ ಗೌರವಿಸಲಾಯಿತು.       ಭದ್ರಾವತಿ : ಭಾರತೀಯ ಸೇನೆಯಲ್ಲಿ ಸುಧೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಶುಕ್ರವಾರ ತವರಿಗೆ ಮರಳಿದ ತಾಲೂಕಿನ ಬಿಸಿಲುಮನೆ ಗ್ರಾಮದ ಟಿ.ಪಿ ವಿಶ್ವನಾಥ್‌ರವರನ್ನು ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿದರು.       ಗಂಗೂರಿನ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಟಿ.ಪಿ ವಿಶ್ವನಾಥ್‌ರವರನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ಗೌರವಿಸಲಾಯಿತು.       ರವಿ, ಮಂಜಣ್ಣ, ಶ್ರೀನಿವಾಸ್, ಪರಮೇಶ್ವರಪ್ಪ, ರಾಮಮೂರ್ತಿ, ಜಗದೀಶ್, ಬಾಬುರಾವ್, ರಾಮ, ಸಿದ್ದರಾಮಪ್ಪ, ಗಣೇಶ್, ಸತೀಶ್ ಹಾಗು ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ರೈಲ್ವೆ ಇಲಾಖೆ ನೌಕರ ವರ್ಗದವರು ಉಪಸ್ಥಿತರಿದ್ದರು.  

ಪ್ರಸಕ್ತ ಸಾಲಿನಲ್ಲಿ ಲಯನ್ಸ್ ಕ್ಲಬ್‌ನಿಂದ ಹಲವಾರು ಉತ್ತಮ ಸೇವಾ ಕಾರ್ಯಗಳು : ನಾಗರಾಜ್ ಎಂ. ಶೇಟ್

Image
ಭದ್ರಾವತಿ ಲಯನ್ಸ್ ಕ್ಲಬ್‌ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗೌರ್‍ನರ್ ಸಪ್ನಾ ಸುರೇಶ್ ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ್ ಎಂ. ಶೇಟ್ ಸೇರಿದಂತೆ ಇನ್ನಿತರರು ಮಾತನಾಡಿದರು.       ಭದ್ರಾವತಿ : ಎಲ್ಲರ ಸಹಕಾರದಿಂದ ನಗರದ ಲಯನ್ಸ್ ಕ್ಲಬ್ ವತಿಯಿಂದ ಈ ಸಾಲಿನಲ್ಲಿ ಸಾಕಷ್ಟು ಸೇವಾ ಕಾರ್ಯಗಳನ್ನು ನೆರವೇರಿಸಲಾಗಿದ್ದು, ಮುಂದಿನ ಇದೆ ರೀತಿಯ ಸಹಕಾರ ನೀಡಬೇಕೆಂದು ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ್ ಎಂ. ಶೇಟ್ ಮನವಿ ಮಾಡಿದರು.       ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಅವಧಿಯಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ, ಶುದ್ಧ ಕುಡಿಯುವ ನೀರಿನ ಯಂತ್ರ, ಭಾವನಾತ್ಮಕ ಆರೋಗ್ಯ ಮತ್ತು ಯೋಗಕ್ಷೇಮ ಕುರಿತ ಕಾರ್ಯಾಗಾರ, ವನಮಹೋತ್ಸವ ಅಂಗವಾಗಿ ಪರಿಸರ ಕುರಿತು ಜಾಗೃತಿ ಕಾರ್ಯಕ್ರಮ, ಶಾಲಾ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ, ಸಂಕಷ್ಟಕ್ಕೆ ಒಳಗಾದ ಸದಸ್ಯರಿಗೆ ನೆರವು, ಉಚಿತ ನೇತ್ರ ತಪಾಸಣೆ ಹಾಗು ಕನ್ನಡಕ ವಿತರಣೆ, ಕಾಲೇಜು ವಿದ್ಯಾರ್ಥಿಗಳೊಂದಿಗೆ ರಕ್ತದಾನ ಶಿಬಿರ ಸೇರಿದಂತೆ ಹಲವಾರು ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದರು.       ಮೊದಲ ಜಿಲ್ಲಾ ಮಹಿಳಾ ಗೌರ್‍ನರ್ ಲಯನ್ಸ್ ಸಪ್ನಾ ಸುರೇಶ್ ಮಾತನಾಡಿ, ಸದಸ್ಯರೆಲ್ಲರೂ ಸೇವಾ ಮನೋಭಾವನೆಯೊಂದಿಗೆ ಒಗ್ಗಟ್ಟಾಗಿ ಸೇವಾ ಚಟು...

ಅಂಬೇಡ್ಕರ್-ಬಾಬು ಜಗಜೀವನರಾಮ್ ಜಯಂತಿ ಒಟ್ಟಿಗೆ ಆಚರಿಸದ ತಾಲೂಕು ಆಡಳಿತ ವಿರುದ್ಧ ಅಸಮಾಧಾನ

Image
ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲು ಬಾಪೂಜಿ ಹರಿಜನ ಸೇವಾ ಸಂಘ, ಡಿಎಸ್‌ಎಸ್ ಎಚ್ಚರಿಕೆ  ಭದ್ರಾವತಿ ಹಳೇನಗರ ಪತ್ರಿಕಾಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಬಾಪೂಜಿ ಹರಿಜನ ಸೇವಾ ಸಂಘ, ಡಿಎಸ್‌ಎಸ್ ಮುಖಂಡರು ಪಾಲ್ಗೊಂಡು ಮಾತನಾಡಿದರು.       ಭದ್ರಾವತಿ:  ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗು ಡಾ. ಬಾಬು ಜಗಜೀವನರಾಮ್‌ರವರ ಜಯಂತಿ ಒಟ್ಟಿಗೆ ಆಚರಣೆ ಮಾಡುವ ನಿಲುವಿನಿಂದ ಈ ಬಾರಿ ದೂರ ಸರಿದಿರುವುದು ಅಸಮಾಧಾನಕ್ಕೆ ಕಾರಣವಾಗಿದ್ದು, ಈ ನಡುವೆಯೂ ಏ.೫ರಂದು ಆಯೋಜಿಸಲಾಗಿರುವ ಡಾ. ಬಾಬು ಜಗಜೀವನರಾಮ್‌ರವರ ಜಯಂತಿ ಹಾಗು ಏ.೧೪ರಂದು ನಡೆಯಲಿರುವ ಡಾ. ಬಿ.ಆರ್ ಅಂಬೇಡ್ಕರ್‌ರವರ ಜಯಂತಿ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಬಾಪೂಜಿ ಹರಿಜನ (ಮಾದರ) ಸೇವಾ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಮತ್ತು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯರಾದ ಶಿವಬಸಪ್ಪ ಮನವಿ ಮಾಡಿದರು.       ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಮ್‌ರವರ ಹೋರಾಟ ಭಿನ್ನವಾಗಿದ್ದರೂ ಸಹ ಇಬ್ಬರ ನಿಲುವುಗಳು ಒಂದೇ ಆಗಿವೆ. ದಲಿತಪರವಾದ ನಿಲುವುಗಳ...

ಏ.೩ರಂದು ನಿವೃತ್ತಿ ಹೊಂದಿದ ಸೈನಿಕನಿಗೆ ಅಭಿನಂದನಾ ಸಮಾರಂಭ

Image
     ಭದ್ರಾವತಿ : ಭಾರತೀಯ ಸೇನೆಯಲ್ಲಿ ಸುಧೀರ್ಘ ೧೮ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ತಾಲೂಕಿನ ಬಿಸಿಲುಮನೆ ಗ್ರಾಮದ ಟಿ.ಪಿ ವಿಶ್ವನಾಥ್ ಅವರಿಗೆ ಏ.೩ರ ಶುಕ್ರವಾರ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.       ಗ್ರಾಮಸ್ಥರು ಹಾಗು ಅಭಿಮಾನಿಗಳು ವಿಶ್ವನಾಥ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಿದ್ದತೆಗಳು ನಡೆಸಿದ್ದು, ಮಧ್ಯಾಹ್ನ ೨ ಗಂಟೆಗೆ ಗಂಗೂರಿನ ಸರ್ಕಾರಿ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಬಿಸಿಲುಮನೆ ಗ್ರಾಮದ ಶ್ರೀನಿವಾಸರಾವ್ ಕೋರಿದ್ದಾರೆ

ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದ ಸರಕು ತುಂಬಿದ ಲಾರಿ

Image
ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿ  ಗುರುವಾರ  ಸಂಜೆ ಸರಕು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.       ಭದ್ರಾವತಿ : ನಗರದ ಬೈಪಾಸ್ ರಸ್ತೆಯಲ್ಲಿ ಗುರುವಾರಸಂಜೆ ಸರಕು ತುಂಬಿಕೊಂಡು ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.       ಹೊಸಕೋಟೆಯಿಂದ ಸರಕು ತುಂಬಿಕೊಂಡು ಬರುತ್ತಿದ್ದ ಲಾರಿ ಬೈಪಾಸ್ ರಸ್ತೆ, ಉಜ್ಜನೀಪುರ ಬಳಿ ರಸ್ತೆಯಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕಕ್ಕೆ ಲಾರಿ ಇಳಿಸಲಾಗಿದ್ದು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.       ಘಟನೆಯಲ್ಲಿ ಚಾಲಕನಿಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದು, ಲಾರಿ ಸ್ವಲ್ಪ ಜಖಂಗೊಂಡಿದೆ. ಅಲ್ಲದೆ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ವಿದ್ಯುತ್ ತಂತಿ ಕತ್ತರಿಸಿ ಹೋಗಿದೆ. ಸರಕು ತುಂಬಿದ ಲಾರಿ ಶಿವಮೊಗ್ಗ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ತೆರಳುತ್ತಿತ್ತು.   

ಮಹಾನ್ ಆದರ್ಶ ವ್ಯಕ್ತಿಗಳ ಜಯಂತಿ ಕೇವಲ ನೆಪ ಮಾತ್ರಕ್ಕೆ ಆಚರಣೆಯಾಗದಿರಲಿ : ಶ್ರೀ ಡಾ. ಬಸವಮರುಳಸಿದ್ದ ಮಹಾಸ್ವಾಮಿ

Image
ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಜಾಗೃತಿ ದಿನಾಚರಣೆ  ಭದ್ರಾವತಿ ಹಳೇನಗರದ ಶ್ರೀ ಅಕ್ಕಮಹಾದೇವಿ ಬಳಗದಿಂದ ಗುರುವಾರ ವೀರವೀರಾಗಿಣಿ, ಕನ್ನಡದ ಪ್ರಪ್ರಥಮ ಮಹಿಳಾ ಕವಯಿತ್ರಿ, ಜಗದ ಅಕ್ಕ ಶ್ರೀ ಅಕ್ಕಮಹಾದೇವಿಯವರ ಜಯಂತ್ಯೋತ್ಸವ ಸಮಾರಂಭದ ಅಂಗವಾಗಿ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಜಾಗೃತಿ ದಿನಾಚರಣೆ ಕಾರ್ಯಕ್ರಮ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಉದ್ಘಾಟಿಸಿದರು.       ಭದ್ರಾವತಿ: ಸರ್ಕಾರ ಮಹಾನ್ ಆದರ್ಶ ವ್ಯಕ್ತಿಗಳ ಜಯಂತಿಗೆ ಸಾರ್ವಜನಿಕ ರಜಾ ನೀಡುವ ಬದಲು ಆದರ್ಶ ವ್ಯಕ್ತಿಗಳ ಕುರಿತು ಯುವ ಸಮುದಾಯಕ್ಕೆ ಮಾಹಿತಿ ನೀಡುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಚಿಕ್ಕಮಗಳೂರು ಬಸವತತ್ವ ಪೀಠ ಹಾಗು ಶಿವಮೊಗ್ಗ ಬಸವಕೇಂದ್ರದ ಶ್ರೀ ಡಾ. ಬಸವಮರುಳಸಿದ್ದ ಮಹಾಸ್ವಾಮಿಯವರು ಸಲಹೆ ವ್ಯಕ್ತಪಡಿಸಿದರು.  ಹಳೇನಗರದ ಶ್ರೀ ಅಕ್ಕಮಹಾದೇವಿ ಬಳಗದಿಂದ ಗುರುವಾರ ವೀರವೀರಾಗಿಣಿ, ಕನ್ನಡದ ಪ್ರಪ್ರಥಮ ಮಹಿಳಾ ಕವಯಿತ್ರಿ, ಜಗದ ಅಕ್ಕ ಶ್ರೀ ಅಕ್ಕಮಹಾದೇವಿಯವರ ಜಯಂತ್ಯೋತ್ಸವ ಸಮಾರಂಭದ ಅಂಗವಾಗಿ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಜಾಗೃತಿ ದಿನಾಚರಣೆ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಶ್ರೀಗಳು ಆಶೀವರ್ಚನ ನೀಡಿದರು.  ಸರ್ಕಾರ ಆದರ್ಶ ವ್ಯಕ್ತಿಗಳ ಜಯಂತಿಗಳಂದು ಸಾರ್ವಜನಿಕ ರಜಾ ನೀಡುವುದು ಸರಿಯಲ್ಲ. ಇದರಿಂದ ಯಾವ...

ಕೆಪಿಸಿ ನೌಕರರ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಕೆ. ವೀರೇಂದ್ರ ಭದ್ರಾ ಯೋಜನೆ ಪ್ರದೇಶಕ್ಕೆ ಭೇಟಿ

Image
ಬಿಆರ್‌ಪಿ ರಂಗಮಂದಿರದಲ್ಲಿ ಅಧಿಕಾರಿಗಳು, ನೌಕರರು, ಗುತ್ತಿಗೆದಾರರಿಂದ ಸನ್ಮಾನ  ಕೆಪಿಸಿ ನೌಕರರ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಕೆ. ವೀರೇಂದ್ರ ಭದ್ರಾವತಿ ತಾಲೂಕಿನ ಭದ್ರಾ ಯೋಜನೆ ಪ್ರದೇಶಕ್ಕೆ ಬುಧವಾರ ಭೇಟಿ ಪರಿಶೀಲಿಸಿದರು. ಬಿಆರ್‌ಪಿ ರಂಗಮಂದಿರದಲ್ಲಿ ಇವರನ್ನು ಅಧಿಕಾರಿಗಳು, ನೌಕರರು, ಗುತ್ತಿಗೆದಾರರಿಂದ ಸನ್ಮಾನಿಸಿ ಗೌರವಿಸಿದರು.       ಭದ್ರಾವತಿ: ಕರ್ನಾಟಕ ವಿದ್ಯುತ್ ನಿಗಮ ನಿರ್ದೇಶಕರ ಮಂಡಳಿಗೆ ಸರ್ಕಾರದಿಂದ ನೂತನ ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿರುವ ಕೆಪಿಸಿ ನೌಕರರ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷರಾದ ಕೆ. ವೀರೇಂದ್ರ ಅವರು ಬುಧವಾರ ಭದ್ರಾ ಯೋಜನೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.       ಬಿಆರ್‌ಪಿ ರಂಗಮಂದಿರದಲ್ಲಿ ನೌಕರರ ಸಮಸ್ಯೆಗಳನ್ನು ವೀರೇಂದ್ರರವರು ಆಲಿಸಿದರು. ಭದ್ರಾ ಕೆಪಿಸಿ ನೌಕರರ ಸಂಘ, ಕರ್ನಾಟಕ ವಿದ್ಯುತ್ ನಿಗಮ ಪದವೀಧರ ಇಂಜಿನಿಯರ್‍ಸ್ ಅಸೋಸಿಯೇಷನ್, ಡಿಪ್ಲೋಮಾ ಇಂಜಿನಿಯರ್‍ಸ್ ಅಸೋಸಿಯೇಷನ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘ ಹಾಗು ಭದ್ರಾ ವಿದ್ಯುತ್ ಹೊರ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ವೀರೇಂದ್ರರವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ನೌಕರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.      ...

ಪ್ರಯಾಣಿಕರಿಗೆ ಉಚಿತ ಕುಡಿಯುವ ನೀರಿನ ಸೇವೆ ಶ್ಲಾಘನೀಯ

Image
ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿವರ್ಷದಂತೆ ಈ ಬಾರಿ ಬೇಸಿಗೆ ತಿಂಗಳಿನಲ್ಲಿ ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಕುಡಿಯುವ ನೀರಿನ ಸೇವೆಗೆ ಬುಧವಾರ ಚಾಲನೆ ನೀಡಲಾಯಿತು.       ಭದ್ರಾವತಿ: ಶ್ರೀ ಸತ್ಯಸಾಯಿ ಬಾಬಾರವರ ಆಶಯದಂತೆ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಅದರಲ್ಲೂ ಬೇಸಿಗೆ ಸಮಯದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕುಡಿಯುವ ನೀರಿನ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಆರ್. ಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು.       ಅವರು ಬುಧವಾರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿವರ್ಷದಂತೆ ಈ ಬಾರಿ ಬೇಸಿಗೆ ತಿಂಗಳಿನಲ್ಲಿ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಕುಡಿಯುವ ನೀರಿನ ಸೇವೆಗೆ ಚಾಲನೆ ನೀಡಿ ಮಾತನಾಡಿದರು.  ಬಸ್ ನಿಲ್ದಾಣದಲ್ಲಿ ನಿರಂತರವಾಗಿ ಸೇವಾ ಕಾರ್ಯ ಆಯೋಜಿಸಿಕೊಂಡು ಬರುವ ಮೂಲಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಇಲಾಖೆ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.  ಶ್ರೀ ಸತ್ಯಸಾಯಿ ಸ...

ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ ೧೧೯ನೇ ಜಯಂತಿ : ಅನ್ನದಾಸೋಹ

Image
  ಪದ್ಮಭೂಷಣ, ಕರ್ನಾಟಕ ರತ್ನ, ಬಸವಶ್ರೀ ಪ್ರಶಸ್ತಿ ಪುರಸ್ಕೃತರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಾಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ ೧೧೯ನೇ ಜಯಂತಿ, ದಾಸೋಹ ದಿನ ಬುಧವಾರ ಭದ್ರಾವತಿ ನಗರದಲ್ಲಿ ಆಚರಿಸಲಾಯಿತು.       ಭದ್ರಾವತಿ: ಪದ್ಮಭೂಷಣ, ಕರ್ನಾಟಕ ರತ್ನ, ಬಸವಶ್ರೀ ಪ್ರಶಸ್ತಿ ಪುರಸ್ಕೃತರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ದಾಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ ೧೧೯ನೇ ಜಯಂತಿ, ದಾಸೋಹ ದಿನ ಬುಧವಾರ ನಗರದಲ್ಲಿ ಆಚರಿಸಲಾಯಿತು.       ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಮಾಜಿ ಅಧ್ಯಕ್ಷರಾದ ಸಿದ್ದಲಿಂಗಯ್ಯರವರ ನೇತೃತ್ವದಲ್ಲಿ ತಮಿಳ್ ಯೂತ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದ ಪೆಟ್ರೋಲ್ ಬಂಕ್‌ನಲ್ಲಿ ವಯೋವೃದ್ಧರು, ನಿರ್ಗತಿಕರಿಗೆ ಅನ್ನದಾನ ಮಾಡುವ ಮೂಲಕ ದಾಸೋಹ ದಿನ ಆಚರಿಸಲಾಯಿತು.       ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿ, ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ ಕೊಡುಗೆ ಅನನ್ಯವಾಗಿದೆ.  ಸದಾ ಕಾಲ ಅವರ ಸ್ಮರಣೆಯೊಂದಿಗೆ ಅವರ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದರು.       ಪ್ರಮುಖರಾದ ನಂದಿನಿ ಹೋಟೆಲ್ ಮಾಲೀಕ ಮಹಾದೇವ್, ನಾಗರತ್ನ ಸಿದ...

ಏ.೨ ರಿಂದ 'ಸುಗಮ ಸಂಗೀತ ತರಬೇತಿ ಶಿಬಿರ'

Image
     ಭದ್ರಾವತಿ: ನಗರದ ಭದ್ರಾ ಸುಗಮ ಸಂಗೀತ ವೇದಿಕೆಯಿಂದ ಸಂಗೀತ ಆಸಕ್ತರಿಗಾಗಿ ಎರಡು ದಿನಗಳ ಕಾಲ 'ಸುಗಮ ಸಂಗೀತ ತರಬೇತಿ ಶಿಬಿರ' ಏ.೨ ಮತ್ತು ೩ ರಂದು ಆಯೋಜಿಸಲಾಗಿದೆ.      ಹಳೇನಗರದ ಮಹಿಳಾ ಸೇವಾ ಸಮಾಜದಲ್ಲಿ ಶಿಬಿರ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ ೯.೩೦ ರಿಂದ ಸಂಜೆ ೪.೩೦ರವರೆಗೆ ತರಬೇತಿ ನೀಡಲಾಗುತ್ತದೆ. ಚಲನಚಿತ್ರ ಹಿನ್ನೆಲೆ ಗಾಯಕರು ಹಾಗೂ ಸಂಗೀತ ಸಂಯೋಜಕರಾದ ಶಿವಮೊಗ್ಗದ ಪ್ರಹ್ಲಾದ್ ದೀಕ್ಷಿತ್‌ರವರು ಶಿಬಿರದ ಸಾರಥ್ಯ ವಹಿಸಲಿದ್ದಾರೆ. ಎಲ್ಲಾ ವಯೋಮಾನದ ತರಬೇತಿ ಪಡೆಯಲಿಚ್ಚಿಸುವವರು ಏ.೨ ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ.       ಹೆಚ್ಚಿನ ಮಾಹಿತಿಗೆ ವೇದಿಕೆ ಅಧ್ಯಕ್ಷರಾದ ಎಸ್. ಅಡವೀಶಯ್ಯ-೯೪೪೮೩ ೮೭೨೪೭ ಅಥವಾ ಕಾರ್ಯದರ್ಶಿ ಜ್ಯೋತಿ ರಾಜಶೇಖರ್-೯೪೮೧೬ ೫೫೧೯೪ ಅಥವಾ  ಶೋಭ ಗಂಗರಾಜು-೯೪೪೯೯೪೨೯೩೨ ಅವರನ್ನು ಸಂಪರ್ಕಿಸಬಹುದಾಗಿದೆ. 

ಭದ್ರಾ ನದಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ

Image
ಭದ್ರಾ ನದಿ ಸಂರಕ್ಷಣಾ ಪಡೆಯಿಂದ ನಗರಸಭೆಗೆ ದೂರು  ಭದ್ರಾವತಿ : ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಪವಿತ್ರವಾದ ಭದ್ರಾ ನದಿಗೆ ತ್ಯಾಜ್ಯ ಎಸೆಯಲಾಗುತ್ತಿದ್ದು, ಇದು ಜಲಚರಗಳು ಹಾಗು ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿಗೆ ತ್ಯಾಜ್ಯ ಎಸೆಯುವುದು ಶಿಕ್ಷೆ ವಿಧಿಸಬಹುದಾದ ಅಪರಾಧವಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಭದ್ರಾ ನದಿ ಸಂರಕ್ಷಣಾ ಪಡೆ ಮುಖಂಡ, ಸಾಮಾಜಿಕ ಹೋರಾಟಗಾರ ಸಿ. ತೀರ್ಥೇಶ್ ಪೌರಾಯುಕ್ತ ಕೆ.ಎನ್ ಹೇಮಂತ್ ಅವರಿಗೆ ಮಂಗಳವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ದೂರು ನೀಡಿದ್ದಾರೆ.       ಭದ್ರಾವತಿ : ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಪವಿತ್ರವಾದ ಭದ್ರಾ ನದಿಗೆ ತ್ಯಾಜ್ಯ ಎಸೆಯಲಾಗುತ್ತಿದ್ದು, ಇದು ಜಲಚರಗಳು ಹಾಗು ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿಗೆ ತ್ಯಾಜ್ಯ ಎಸೆಯುವುದು ಶಿಕ್ಷೆ ವಿಧಿಸಬಹುದಾದ ಅಪರಾಧವಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಭದ್ರಾ ನದಿ ಸಂರಕ್ಷಣಾ ಪಡೆ ಮುಖಂಡ, ಸಾಮಾಜಿಕ ಹೋರಾಟಗಾರ ಸಿ. ತೀರ್ಥೇಶ್ ಪೌರಾಯುಕ್ತ ಕೆ.ಎನ್ ಹೇಮಂತ್ ಅವರಿಗೆ ಮಂಗಳವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ದೂರು ನೀಡಿದ್ದಾರೆ.       ನಗರದ ಹೊಸ ಸೇತುವೆ ಹಾಗು ಹಳೇ ಸೇತುವೆ ಇಕ್ಕೆಲಗಳಲ್ಲಿ ರಾಶಿ ರಾಶಿ ತ್ಯಾಜ್ಯವಿದ್ದು, ಇದರಿಂದಾಗಿ ಪವಿತ್ರವಾದ ಭದ್ರಾ ನದಿ ಮಾಲಿನ್...

ಪರಿಶುದ್ಧವಾದ ಕುಡಿಯುವ ನೀರು ಸರಬರಾಜು : ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ

Image
 ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿಗೆ ಸಂಸದರ ಸ್ಪಂದನೆ  ಸಂಸದ ಬಿ.ವೈ ರಾಘವೇಂದ್ರ       ಭದ್ರಾವತಿ : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಣಬಘಟ್ಟ ಮತ್ತು ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಲು ಭದ್ರಾ ನದಿಯಿಂದ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಬಿ.ವೈ ರಾಘವೇಂದ್ರರವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.       ಈ ಸಂಬಂಧ ಸಂಸದರಿಗೆ ಜನ್ನಾಪುರ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ ಸಲ್ಲಿಸಿದ್ದರು.   ಕಳೆದ ಸುಮಾರು ೫೦ ವರ್ಷಗಳಿಂದ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಹೋರಾಟದ ಸ್ಮರಣೆಗಾಗಿ ಗ್ರಾಮೀಣೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಇದಕ್ಕೆ ಪೂರಕವಾಗಿ  ವಿಧಾನಸಭಾ ಕ್ಷೇತ್ರದ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದು.       ಪ್ರಸ್ತುತ ದೊಣಬಘಟ್ಟ ಮತ್ತು ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್...

ಗುಡುಗು ಮುಂಚಿನ ಅಕಾಲಿಕ ಮಳೆ : ಹಳ್ಳಕೊಳ್ಳಗಳು ಭರ್ತಿ

Image
ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ೩.೩೦ರ ಸಮಯದಲ್ಲಿ ಏಕಾಏಕಿ ನಗರದ ಕೆಲವೆಡೆ ಗುಡುಗು ಮಿಂಚಿನ ಜೊತೆಗೆ ಧಾರಕಾರವಾಗಿ ಗಾಳಿ ಮಳೆಯಾಗಿದೆ.       ಭದ್ರಾವತಿ : ನಗರದಲ್ಲಿ ಅಕಾಲಿಕ ಮಳೆ ಆರ್ಭಟ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದೆ. ಇದರಿಂದಾಗಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ.       ಸೋಮವಾರ ಮಧ್ಯಾಹ್ನ ೩.೩೦ರ ಸಮಯದಲ್ಲಿ ಏಕಾಏಕಿ ನಗರದ ಕೆಲವೆಡೆ ಗುಡುಗು ಮಿಂಚಿನ ಜೊತೆಗೆ ಧಾರಕಾರವಾಗಿ ಗಾಳಿ ಮಳೆಯಾಗಿದ್ದು, ಗಾಳಿಯ ಆರ್ಭಟಕ್ಕೆ ಕೆಲವೆಡೆ ರಸ್ತೆಗಳಲ್ಲಿ ಮರಗಳು ಧರೆಗುರುಳಿವೆ. ಇನ್ನೂ ಕೆಲವೆಡೆ ಮರಗಳಲ್ಲಿ ಒಣಗಿದ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ಕೆಲವೆಡೆ ಮನೆಯ ತಗಡಿನ ಮೇಲ್ಚಾವಣಿ ಗಾಳಿ ಮಳೆಗೆ ಹಾರಿ ಹೋಗಿರುವ ಘಟನೆ ನಡೆದಿವೆ.       ಸುಮಾರು ೩ ಗಂಟೆಗಳ ಸಮಯ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿಕೊಂಡು ರಸ್ತೆಗಳ ಮೇಲೆ ನೀರು ಹರಿಯುತ್ತಿರುವುದು ಕಂಡು ಬಂದಿತು. ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಬೆಳಿಗಳಿಗೆ ಹಾನಿಯಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಈ ಸಂಬಂಧ ಗಮನ ಹರಿಸಬೇಕಾಗಿದೆ. ಬೆಳೆ ಹಾನಿ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಿ ಬಡ ರೈತರ ಹಿತ ಕಾಪಾಡಬೇಕಾಗಿದೆ.       ರಸ್ತೆ ಮಧ್ಯೆ ಕೆಟ್ಟುನಿಂತ ಬಸ್:       ಗುಡುಗು ಮಿಂಚಿನ ಧಾರಾಕಾರ ಮಳೆ...

ಸೇತುವೆಯಲ್ಲಿ ಸ್ವಲ್ಪ ಪ್ರಮಾಣದ ನೀರು : ತಡೆಗೋಡೆಗೆ ಸಿಲುಕಿದ ಬಸ್ಸಿನ ಹಿಂಬದಿ ಚಕ್ರ

Image
ತಪ್ಪಿದ ಹೆಚ್ಚಿನ ಅನಾಹುತ : ವೇಗ ನಿಯಂತ್ರಣ ಅಳವಡಿಕೆಗೆ ಕ್ರಮ ಕೈಗೊಳ್ಳಲಿ  ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಗೇಹಳ್ಳ ಸೇತುವೆಗೆ ಬಸ್ ಡಿಕ್ಕಿ ಹೊಡೆದು ಉರುಳಿ ಬಿದ್ದ ಸಂದರ್ಭದಲ್ಲಿ ಸೇತುವೆಯಲ್ಲಿ ನೀರು ಸ್ವಲ್ಪ ಪ್ರಮಾಣದಲ್ಲಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.       ಭದ್ರಾವತಿ : ಚಾಲಕನ ನಿಯಂತ್ರಣ ಕಳೆದುಕೊಂಡು ಕಾಗೇಹಳ್ಳ ಸೇತುವೆಗೆ ಬಸ್ ಡಿಕ್ಕಿ ಹೊಡೆದು ಉರುಳಿ ಬಿದ್ದ ಸಂದರ್ಭದಲ್ಲಿ ಸೇತುವೆಯಲ್ಲಿ ನೀರು ಸ್ವಲ್ಪ ಪ್ರಮಾಣದಲ್ಲಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.       ಈ ಸೇತುವೆಯಲ್ಲಿ ಬೆಟ್ಟ-ಗುಡ್ಡ, ಹಳ್ಳ-ಕೊಳ್ಳಗಳಿಂದ ಹಾಗು ಜಮೀನಿನ ನೀರು ಹರಿಯುತ್ತದೆ. ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಮಾತ್ರ ಸೇತುವೆಯ ಅರ್ಧದಷ್ಟು ವನೀರು ಹರಿಯುತ್ತದೆ. ಇಂತಹ ಸಂದರ್ಭದಲ್ಲಿ ಬಸ್ ಸಂಪೂರ್ಣವಾಗಿ ಸೇತುವೆ ಕೆಳಗೆ ಬಿದ್ದಿದ್ದರೆ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು. ಆದರೆ ಈ ದುರ್ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಕೆಳಗೆ ಬಿದ್ದಿಲ್ಲ. ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಹಿಂಬದಿ ಚಕ್ರ ತಡೆಗೋಡೆಗೆ ಸಿಲುಕಿಕೊಂಡಿದೆ. ಈ ಹಿನ್ನಲೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗಿದೆ.       ಬಸ್ಸಿನ ಚಾಲಕ ಪ್ರಸಾದ್ ಗಾಯಗೊಂಡಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ...

ಮಾ. 31 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Image
     ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ಸಹ ಹಳೇ ನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.31ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ.    ಸಂಜೆ 5.30ಕ್ಕೆ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸುವರು.  ಭಾರ ಎತ್ತುವ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಚಿನ್ನದ ಪದಕ ಪ್ರಶಸ್ತಿ ವಿಜೇತೆ ದೇವಿಕ ಅವರಿಗೆ ಸನ್ಮಾನ ನಡೆಯಲಿದೆ. ಮಹಿಳಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.      ನ್ಯಾಯವಾದಿ ರೂಪರಾವ್, ಸಮಾಜದ ಹಿರಿಯ ಸದಸ್ಯೆ ನಗರತ್ನ ಮಲ್ಲಿಕಾರ್ಜುನ, ಗೌರವ ಅಧ್ಯಕ್ಷೆ ಗೌರಮ್ಮ ಶಂಕರಯ್ಯ, ಪ್ರಧಾನ ಕಾರ್ಯದರ್ಶಿ ಶೋಭಾ ಗಂಗರಾಜ್ ಮತ್ತು ಖಜಾಂಚಿ ಜಯಂತಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿರುವರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ  ಸಮಾಜದ ಅಧ್ಯಕ್ಷೆ  ಹೇಮಾವತಿ ವಿಶ್ವನಾಥ್ ಕೋರಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಜೋಳ ತುಂಬಿದ ಲಾರಿ ಹರಿದು ದಂಪತಿ ಸಾವು

Image
ಭದ್ರಾವತಿ ತಾಲೂಕಿನ ಬಿ.ಆರ್.ಪಿ ಶಂಕರಘಟ್ಟದ ಹುಣಸೆಕಟ್ಟೆ ಜಂಕ್ಷನ್ ಸಮೀಪ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ದಂಪತಿ ಸಾವು ಕಂಡಿರುವ ಘಟನೆ ನಡೆದಿದೆ.      ಭದ್ರಾವತಿ: ತಾಲೂಕಿನ ಬಿ.ಆರ್.ಪಿ ಶಂಕರಘಟ್ಟದ ಹುಣಸೆಕಟ್ಟೆ ಜಂಕ್ಷನ್ ಸಮೀಪ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ದಂಪತಿ ಸಾವು ಕಂಡಿರುವ ಘಟನೆ ನಡೆದಿದೆ.     ತರೀಕೆರೆ ತಾಲೂಕಿನ ನಿವಾಸಿಗಳಾದ ಶಿವಮೊಗ್ಗದ ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿರುವ ಬಾಬು(೩೧) ಮತ್ತು ಸಾವಿತ್ರಿ (೨೫) ದಂಪತಿ ಅಪಘಾತದಲ್ಲಿ ಸಾವು ಕಂಡಿದ್ದಾರೆ.       ಶಿವಮೊಗ್ಗದಿಂದ ತರೀಕೆರೆಯ ತಮ್ಮ ಮನೆಗೆ ತೆರಳುತ್ತಿದ್ದ ದಂಪತಿಯ ದ್ವಿಚಕ್ರ ವಾಹನದ ಮೇಲೆ ಜೋಳ ತುಂಬಿದ ಲಾರಿ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.      ಶಿವಮೊಗ್ಗದಿಂದ ಜೋಳ ತುಂಬಿದ ಲಾರಿ ಹುಣಸೆಕಟ್ಟೆ ಜಂಕ್ಷನ್ ಸಮೀಪ ಎತ್ತರದ ರಸ್ತೆಯಲ್ಲಿ ಮುಂದೆ ಚಲಿಸಲು ಸಾಧ್ಯವಾಗದೆ ಏಕಾಏಕಿ ಹಿಂದಕ್ಕೆ ಬಂದಿದ್ದು, ಈ ಹಿನ್ನಲೆಯಲ್ಲಿ ಹಿಂಬದಿಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಹರಿದಿದೆ.       ಸುಮಾರು ಒಂದೂವರೆ ವರ್ಷದ ಹಿಂದೆ ಬಾಬು ಮತ್ತು ಸಾವಿತ್ರಿ ಪ್ರೀತಿಸಿ ವಿವಾಹವಾಗಿದ್ದರು. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.   

ಕಾಗೇಹಳ್ಳ ಗ್ರಾಮದ ಸೇತುವೆಗೆ ಉರುಳಿ ಬಿದ್ದ ಖಾಸಗಿ ಬಸ್ : ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Image
ಭದ್ರಾವತಿ ತಾಲೂಕಿನ ಕಾಗೇಹಳ್ಳ ಗ್ರಾಮದ ಸೇತುವೆಗೆ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.             ಭದ್ರಾವತಿ : ತಾಲೂಕಿನ ಕಾಗೇಹಳ್ಳ ಗ್ರಾಮದ ಸೇತುವೆಗೆ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.       ಶ್ರೀ ರೇಣುಕಾಂಬ ಟ್ರಾವೆಲ್ಸ್ ಮಾಲೀಕತ್ವದ ಖಾಸಗಿ ಬಸ್ ದಾವಣಗೆರೆಯಿಂದ ಭದ್ರಾವತಿ ನಗರಕ್ಕೆ ಆಗಮಿಸುತ್ತಿದ್ದಾಗ ಕಾಗೇಹಳ್ಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಮಧ್ಯಾಹ್ನ ಸುಮಾರು ೧.೩೦ರ ಸಮಯದಲ್ಲಿ ಸೇತುವೆಗೆ ಉರುಳಿ ಬಿದ್ದಿದೆ. ಅಪಘಾತ ಸಂದರ್ಭದಲ್ಲಿ ಬಸ್ಸಿನಲ್ಲಿ ಒಟ್ಟು ೩೫ ಪ್ರಯಾಣಿಕರಿದ್ದರು ಎಂದು ಎನ್ನಲಾಗಿದೆ.        ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ  ಗಂಭೀರವಾಗಿ ಗಾಯಗೊಂಡಿರುವ ಸುಮಾರು ೧೭ಕ್ಕೂ ಹೆಚ್ಚು ಪ್ರಯಾಣಿಕರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಾಹಿತಿ ತಿಳಿದ ತಕ್ಷಣ ಗ್ರಾಮಾಂತರ ಠಾಣೆ ಪೊಲೀಸರು ಹಾಗು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾ...

ಮಿತ್ರ ಕಲಾಮಂಡಳಿಯಿಂದ `ವಿಶ್ವ ರಂಗಭೂಮಿ ದಿನ' : ಹೊಸ ಪ್ರತಿಭೆಗಳಿಗೆ ಮಾರ್ಗದರ್ಶನ

Image
ಭದ್ರಾವತಿ ನಗರದ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ 'ಮಿತ್ರ ಕಲಾಮಂಡಳಿ' ವತಿಯಿಂದ ಕಲೆ ಮತ್ತು ಕಲಾವಿದರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಆಶಯದೊಂದಿಗೆ ಈ ಬಾರಿ ವಿಶ್ವ ರಂಗಭೂಮಿ ದಿನ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.       ಭದ್ರಾವತಿ : ನಗರದ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ 'ಮಿತ್ರ ಕಲಾಮಂಡಳಿ' ವತಿಯಿಂದ ಕಲೆ ಮತ್ತು ಕಲಾವಿದರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಆಶಯದೊಂದಿಗೆ ಈ ಬಾರಿ ವಿಶ್ವ ರಂಗಭೂಮಿ ದಿನ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.       ಕಾರ್ಯಕ್ರಮದ ಅಧ್ಯಕ್ಷತೆ ಬಸವರಾಜ್ ವಹಿಸಿದ್ದರು. ಉಪಾಧ್ಯಕ್ಷರಾದ ಪರಮೇಶ್ವರಪ್ಪ, ಫ್ರಾನ್ಸಿಸ್, ಪ್ರಸನ್ನ ಕುಮಾರ್ ಹಾಗೂ ಸರೋಜಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.       ಈ ವರ್ಷ ಕಲಾಮಂಡಳಿಗೆ ಸೇರ್ಪಡೆಯಾದ ಹೊಸ ಪ್ರತಿಭೆಗಳನ್ನು ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಹಿರಿಯ ಕಲಾವಿದರು ಹೊಸ ಪ್ರತಿಭೆಗಳಿಗೆ ರಂಗಭೂಮಿಯ ಶಿಸ್ತು ಮತ್ತು ಕಲೆಯ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ "ರಂಗಭೂಮಿ ಕೇವಲ ಮನರಂಜನೆಯ ಸಾಧನವಲ್ಲ, ಅದು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪ್ರತಿಬಿಂಬ" ಎಂದರು.        ಸ್ಥಳೀಯ ರಂಗಕರ್ಮಿಗಳು ಹಾಗು ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಂಬ ಆಶಯ ಗೋಷ್ಠಿಯಲ್ಲಿ ವ್ಯಕ್ತವಾಯಿತು. ಗಾಯಕರಾದ ಡಿ.ಆರ್ ಹರೀಶ್ ಮತ್ತು ಜಿ. ದಿವಾಕ...

ಹೆಡ್‌ಕಾನ್‌ಸ್ಟೇಬಲ್ ಜಿ. ರಾಘವೇಂದ್ರರಿಗೆ ಮುಖ್ಯಮಂತ್ರಿ ಪದಕ : ಉಪವಿಭಾಗದಲ್ಲಿ ಸಂತಸ

Image
ಭದ್ರಾವತಿ : ಹಳೇನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಿ. ರಾಘವೇಂದ್ರ ಅವರಿಗೆ ಈ ಬಾರಿ ಮುಖ್ಯಮಂತ್ರಿಗಳ ಪದಕ ಲಭಿಸಿದ್ದು, ಪೊಲೀಸ್ ಉಪವಿಭಾಗದಲ್ಲಿ ಸಂತಸ ಮನೆ ಮಾಡಿದೆ.  ೨೦೦೭ರಲ್ಲಿ ಕಾನ್‌ಸ್ಟೇಬಲ್ ಹುದ್ದೆಯಲ್ಲಿ ಕರ್ತವ್ಯ ಆರಂಭಿಸಿದ ರಾಘವೇಂದ್ರ ಅವರು ಸಾಗರ ಗ್ರಾಮಾಂತರ, ನಂತರ ೨೦೧೪ರಿಂದ ಭದ್ರಾವತಿ ಗ್ರಾಮಾಂತರ ಮತ್ತು ನ್ಯೂಟೌನ್ ಠಾಣೆ, ಪ್ರಸ್ತುತ ಹಳೇನಗರ ಪೊಲೀಸ್‌ಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.  ೨೦೨೦ರಲ್ಲಿ ಕಾನ್‌ಸ್ಟೇಬಲ್ ಹುದ್ದೆಯಿಂದ ಹೆಡ್ ಕಾನ್‌ಸ್ಟೇಬಲ್ ಹುದ್ದೆಗೆ ಮುಂಬಡ್ತಿ ಪಡೆದುಕೊಂಡಿದ್ದಾರೆ. ೧೯ ವರ್ಷಗಳ ವೃತ್ತಿ ಅವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಇವರಿಗೆ ಈ ಹಿಂದೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಹ ಸನ್ಮಾನಿಸಿ ಗೌರವಿಸಲಾಗಿತ್ತು.  ಮುಖ್ಯಮಂತ್ರಿ ಪದಕ ಪುರಸ್ಕೃತರಾದ ರಾಘವೇಂದ್ರ ಅವರಿಗೆ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಎ.ಜಿ ಕಾರಿಯಪ್ಪ, ಎಸ್. ರಮೇಶ್ ಕುಮಾರ್ ಮತ್ತು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅಭಿನಂದಿಸಿದ್ದಾರೆ.    ಡಿ೨೯-ಬಿಡಿವಿಟಿ೧ ಜಿ. ರಾಘವೇಂದ್ರ  Ananthakumara, Reporter, Kannadaprabha, NDK/31A, Near, Sri Satyasayi Baba school, Newt...