Posts

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು : ೨೩ ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ

Image
ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಚನ್ನಪ್ಪ ಆಗ್ರಹ  ಚನ್ನಪ್ಪ       ಭದ್ರಾವತಿ: ಬಿಜೆ.ಪಿ ಸರ್ಕಾರದ ಅಧಿಕಾರದ ಅವಧಿಯಲ್ಲಿ ಹಲವು ಬಾರಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಹಿಂದೆ ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದೆ. ಆದರೆ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಇದೀಗ ಪುನಃ ಸಿಬಿಐ ತನಿಖೆಗೆ ವಹಿಸಲಾಗಿದ್ದು, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ನಾಟಕವಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ ಆರೋಪಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಇದರ ಹೊಣೆಯನ್ನು ಕೇಂದ್ರ ಸರ್ಕಾರ ಹೊರುವ ಮೂಲಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪಕ್ಷದ ಮೂಲಕ ಆಗ್ರಹಿಸಿದ್ದಾರೆ.       ವೈದ್ಯಕೀಯ ಶಿಕ್ಷಣ ಪ್ರವೇಶಾತಿಗೆ ಮೇ.೩, ೨೦೨೬ರಂದು ನಡೆದ ನೀಟ್ ಪರೀಕ್ಷೆಯನ್ನು ದೇಶದ ೨೩ ಲಕ್ಷ ವಿದ್ಯಾರ್ಥಿಗಳು ಎದುರಿಸಿದ್ದು, ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದೀಗ ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ರದ್ದು ಪಡಿಸುವ ಮೂಲಕ ದೇಶದ ೨೩ ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆಯಲ್ಲಿ ಚಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.       ವಿರ್ದ್ಯಾಥಿಗಳು ಹಗಲು-ರಾತ್ರಿ ...

ಹಿಂದೂ ಧರ್ಮಕ್ಕೆ ಮರಳಿದ ಯುವತಿ : ಮೇ.೨೪ರಂದು ವಿವಾಹ

Image
ಹಿಂದೂ ಧರ್ಮದ ಯುವಕನನ್ನು ಮದುವೆಯಾಗುತ್ತಿರುವ ಕ್ರೈಸ್ತ ಧರ್ಮದ ಯುವತಿಯನ್ನು ಗುರುವಾರ ಮರಳಿ ಮಾತೃ ಧರ್ಮಕ್ಕೆ ಕರೆತರುವಲ್ಲಿ ಭದ್ರಾವತಿ ವಿಶ್ವ ಹಿಂದೂ ಪರಿಷತ್ ಯಶಸ್ವಿಯಾಗಿದೆ.       ಭದ್ರಾವತಿ: ಹಿಂದೂ ಧರ್ಮದ ಯುವಕನನ್ನು ಮದುವೆಯಾಗುತ್ತಿರುವ ಕ್ರೈಸ್ತ ಧರ್ಮದ ಯುವತಿಯನ್ನು ಗುರುವಾರ ಮರಳಿ ಮಾತೃ ಧರ್ಮಕ್ಕೆ ಕರೆತರುವಲ್ಲಿ ವಿಶ್ವ ಹಿಂದೂ ಪರಿಷತ್ ಯಶಸ್ವಿಯಾಗಿದೆ.       ನಗರಸಭೆ ವ್ಯಾಪ್ತಿಯ ಸೀಗೇಬಾಗಿ, ಹನುಮಂತನಗರದ ಬಡ ಕುಟುಂಬದ ನಿವಾಸಿಯಾಗಿರುವ ಯುವತಿ ತಾಲೂಕಿನ ಅಂತರಗಂಗೆ ಕೆ.ಎಚ್ ನಗರ ನಿವಾಸಿ ಎಂ. ಶಿವಕುಮಾರ್‌ನನ್ನು ಪ್ರೀತಿಸುತ್ತಿದ್ದು, ಇಬ್ಬರು ವಿವಾಹವಾಗಲು ಬಯಸಿ ಉಚಿತ ಸಾಮೂಹಿಕ ವಿವಾಹದಲ್ಲಿ ಅವಕಾಶ ಕಲ್ಪಿಸಿಕೊಡುವಂತೆ ವಿಶ್ವ ಹಿಂದೂ ಪರಿಷತ್‌ಗೆ ಕೋರಿದ್ದರು.       ವಿಶ್ವ ಹಿಂದೂ ಪರಿಷತ್ ವಿವಾಹವನ್ನು ಹಿಂದೂ ಧರ್ಮದ ಸಂಪ್ರದಾಯದಂತೆ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಯುವತಿಗೆ ಹಿಂದೂ ಧರ್ಮ ಸ್ವೀಕರಿಸುವಂತೆ ತಿಳಿಸಿದ್ದರು.       ಯುವತಿಯ ಕುಟುಂಬದವರು ಮೂಲತಃ ಹಿಂದೂ ಧರ್ಮದವರಾಗಿದ್ದು, ಯಾವುದೋ ಕಾರಣಕ್ಕೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಯುವತಿಗೆ ತಾಯಿ ಮಾತ್ರ ಇದ್ದು, ಯುವತಿ ಸ್ವಯಂ ಪ್ರೇರಣೆಯಿಂದ ಹಿಂದೂ ಧರ್ಮಕ್ಕೆ ಮರಳುವುದಾಗಿ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಜನ್ನಾಪುರದ ಶ್ರೀ ಮಹಾ...

ಉತ್ತಮ ಮಾರ್ಗದಿಂದ ಮನುಷ್ಯನ ಜೀವನ, ವ್ಯಕ್ತಿತ್ವ ನಿರ್ಮಾಣ : ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ

Image
ಭದ್ರಾವತಿ ಸಿದ್ದಾರೂಢ ನಗರದ ನಿವಾಸಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯನವರ ನಿವಾಸದಲ್ಲಿ ೭೦ನೇ ವರ್ಷದ ಭೀಮರಥ ಶಾಂತಿ ಹಾಗು ಬಿ.ಆರ್ ಸುಮುಖ ಮತ್ತು ಎನ್.ಜಿ ಕುಂದನ್‌ರವರ ಲಿಂಗ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಇಷ್ಟಲಿಂಗ ಪೂಜಾ ಕಾರ್ಯಕ್ರಮದದಲ್ಲಿ ಸಿದ್ದಲಿಂಗಯ್ಯ-ನಾಗರತ್ನ ದಂಪತಿ ಸನ್ಮಾನಿಸಿ ವಿವಿಧ ಮಠಗಳ ಮಠಾಧೀಶರು ಆಶೀರ್ವದಿಸಿದರು.       ಭದ್ರಾವತಿ: ಮನುಷ್ಯನ ಜೀವನ ಮತ್ತು ವ್ಯಕ್ತಿತ್ವ ಆತನ ನಡೆ, ನುಡಿ, ಆಚಾರ-ವಿಚಾರ, ಕರ್ಮ ಕಾರ್ಯಗಳನ್ನು ಬಿಂಬಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಉತ್ತಮ ಮಾರ್ಗದಲ್ಲಿ ಮುನ್ನಡೆಯಬೇಕೆಂದು ಎಡೆಯೂರು ಬಾಳೆಹೊನ್ನೂರು ಶಾಖಾ ಮಠದ ಷ.ಬ್ರ. ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿಯವರು ಕರೆ ನೀಡಿದರು.      ಶ್ರೀಗಳು ಸಿದ್ದಾರೂಢ ನಗರದ ನಿವಾಸಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯನವರ ನಿವಾಸದಲ್ಲಿ ಏರ್ಪಡಿಸಲಾಗಿದ್ದ ೭೦ನೇ ವರ್ಷದ ಭೀಮರಥ ಶಾಂತಿ ಹಾಗು ಬಿ.ಆರ್ ಸುಮುಖ ಮತ್ತು ಎನ್.ಜಿ ಕುಂದನ್‌ರವರ ಲಿಂಗ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಇಷ್ಟಲಿಂಗ ಪೂಜಾ ಕಾರ್ಯಕ್ರಮದದಲ್ಲಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.      ನಾವು ನಮ್ಮ ಜೀವನದಲ್ಲಿ ಧರ್ಮದ ಆಚರಣೆಗಳನ್ನು ಮಾಡಿದಾಗ ಶಾಂತಿ ನೆಮ್ಮದಿಯಿಂದ ಕೂ...

ಕ್ರೈಸ್ತ ಮುಖಂಡ ಶಾಜಿ ನಿಧನ

Image
ಶಾಜಿ       ಭದ್ರಾವತಿ: ನಗರದ ದೊಣಬಘಟ್ಟ ರಸ್ತೆ, ಕವಲಗುಂದಿ ನಿವಾಸಿ, ಕ್ಯಾಥೋಲಿಕ್ ಕ್ರೈಸ್ತ ಸಮಾಜದ ಮುಖಂಡ ಶಾಜಿ(೫೪) ಮಂಗಳವಾರ ನಿಧನ ಹೊಂದಿದರು.       ಪತ್ನಿ, ಪುತ್ರ ಇದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ನ್ಯೂಟೌನ್ ಬೈಪಾಸ್ ರಸ್ತೆ ಕ್ಯಾಥೋಲಿಕ್ ಕ್ರೈಸ್ತರ ಸಮಾಧಿಯಲ್ಲಿ ನೆರವೇರಿಸಲಾಯಿತು. ಮೂಲತಃ ಕೇರಳದವರಾದ ಶಾಜಿ ನಗರಸಭೆ ೩ನೇ ವಾರ್ಡ್ ಸದಸ್ಯ ಎ. ಜಾರ್ಜ್‌ರವರ ಸಹೋದರಿಯನ್ನು ಮದುವೆಯಾಗಿದ್ದರು. ತಾಲೂಕು ಪಂಚಾಯಿತಿ ಸಮೀಪದ ನಿರ್ಮಲ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.       ಶಾಜಿಯವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಪರವಾನಗಿ ಭೂಮಾಪಕರು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ

Image
ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ       ಭದ್ರಾವತಿ:  ಒಂದು ಬಾರಿ ವಿಶೇಷ ನೇಮಕಾತಿ ಉಪಕ್ರಮದಲ್ಲಿ ಸಕ್ರಮಗೊಳಿಸುವ ಸಂಬಂಧ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರದಲ್ಲಿ ಭಾಗವಹಿಸಿರುವ ಪರವಾನಗಿ ಭೂಮಾಪಕರುಗಳು ತಕ್ಷಣ ಕರ್ತವ್ಯಕ್ಕೆ ಹಾಜರುವಂತೆ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು ಸೂಚಿಸಿದ್ದಾರೆ.       ಪರವಾನಗಿ ಭೂಮಾಪಕರು ಕಳೆದ ಕೆಲವು ತಿಂಗಳಿನಿಂದ ಮುಷ್ಕರದಲ್ಲಿ ತೊಡಗಿಸಿಕೊಂಡು ಕರ್ತವ್ಯಕ್ಕೆ ಹಾಜರಾಗದಿರುವುದನ್ನು ಖಂಡಿಸಿ ಹಾಗು ಭೂ ದಾಖಲೆಗಳ ಸಂಬಂಧ ಉಂಟಾಗಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಒಂದೆಡೆ ಹೋರಾಟ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಒಂದೆಡೆ ಹೋರಾಟಕ್ಕೆ ಸ್ಪಂದನೆ ವ್ಯಕ್ತವಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ, ಬೆಂಗಳೂರು, ಆಯುಕ್ತರು ಈ ಸಂಬಂಧ ಮೇ.೧೧ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.    ಕರ್ತವ್ಯಕ್ಕೆ ಹಾಜರಾಗದೇ ಅಳತೆ ಕೆಲಸ ನಿರ್ವಹಿಸದೇ ಪರವಾನಗಿ ಭೂ. ಮಾಪಕರು ಸರ್ಕಾರದ ವಿರುದ್ಧ ಫೆ.೨೭ರಿಂದ ಈವರೆಗೂ ಮುಷ್ಕರ ಕೈಗೊಂಡಿರುವುದರಿಂದ ರೈತರಿಗೆ ಹಾಗೂ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗಿದೆ....

ತಳ್ಳಿಕಟ್ಟೆ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ : ಲಕ್ಷಾಂತರ ರು. ಹಾನಿ

Image
ಸ್ಥಳಕ್ಕೆ ಶಾಸಕ ಸಂಗಮೇಶ್ವರ್ ಭೇಟಿ, ಸ್ಥಳದಲ್ಲಿಯೇ ೫೦ ಸಾವಿರ ರು. ನೆರವು  ಭದ್ರಾವತಿ ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ.       ಭದ್ರಾವತಿ : ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ.       ಗ್ರಾಮದ ನಿವಾಸಿ ಹಾಲಪ್ಪರವರ ಶ್ರೀ ಏಳು ಕೋಟಿ ನಿಲಯದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದ ಮೆನೆಯ ಮೇಲ್ಛಾವಣಿ ಹಾಗು ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.       ಭದ್ರಾವತಿ  ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರ...

ಖಾಸಗಿ ಸರ್ವೆಯರ್‌ಗಳಿಂದ ನಿರ್ಲಕ್ಷ್ಯತನ : ರೈತರ ಸಾವಿರಾರು ಅರ್ಜಿಗಳು ಬಾಕಿ

Image
ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನಾ ಧರಣಿ ಸತ್ಯಾಗ್ರಹ, ಮನವಿ  ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಮಂಗಳವಾರ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಂಡು ಸರ್ಕಾರಕ್ಕೆ ಉಪತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.        ಭದ್ರಾವತಿ: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು.       ಮಂಗಳವಾರ ತಾಲೂಕು ಕಛೇರಿ ಮುಂಭಾಗ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹದ ನೇತೃತ್ವವಹಿಸಿ ಮಾತನಾಡಿದರು. ತಿಂಗಳುಗಟ್ಟಲೆ ಕೆಲಸಕ್ಕೆ ಹಾಜರಾಗದೆ ರೈತರ ಜಮೀನುಗಳನ್ನು ಸರ್ವೆ ಮಾಡದೆ ನಿರ್ಲಕ್ಷ್ಯವಹಿಸಿರುವ ಕಾರಣ ಸರ್ವೆ ಮಾಡಿಕೊಡಲು ಸಲ್ಲಿ...

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ : ಮೇ.೧೫ರವರೆಗೆ ಪ್ರವೇಶ ವಿಸ್ತರಣೆ

Image
     ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ  2026-27   ನೇ ಸಾಲಿನ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ ಯೋಜನೆ ಅಡಿಯಲ್ಲಿ)  On line  ಮುಖಾಂತರ ಅರ್ಜಿ ಸಲ್ಲಿಸಲು ಮೇ. 15 ರವರೆಗೆ ವಿಸ್ತರಿಸಲಾಗಿದೆ.      ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗೆ ಪ್ರವೇಶ ಪಡೆಯಲು ಮೇ.೧೫ರವರೆಗೆ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗು ಅನುತ್ತೀರ್ಣ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರವೇಶ ಬಯಸುವಂತಹ ವಿದ್ಯಾರ್ಥಿಗಳು  Web:www.cite.karnataka.gov.in  ವೆಬ್ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರನ್ನು ಸಂಪರ್ಕಿಸುವುದು. ದೂರವಾಣಿ ಸಂಖ್ಯೆ:  08282-200080, 9980129595, 9880085914 ಕ್ಕೆ ಕರೆ ಮಾಡಬಹುದಾಗಿದೆ.

ಜನಪದ ಹುಟ್ಟಿದ್ದು ಹೆಣ್ಣಿಂದ : ಡಾ. ಸಾಸ್ವೆಹಳ್ಳಿ ಸತೀಶ್

Image
ಎರಡು ದಿನಗಳ ಜನಪದ ಗೀತೆಗಳ ಕಲಿಕಾ ಶಿಬಿರ ಭದ್ರಾವತಿ ತಾಲೂಕಿನ ಅಂತರಗಂಗೆ ಸಮುದಾಯ ಭವನದಲ್ಲಿ ಗ್ರಾಮೀಣ ಮಹಿಳೆಯರಿಗಾಗಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ  ಎರಡು ದಿನಗಳ ಜನಪದ ಗೀತೆಗಳ ಕಲಿಕಾ ಶಿಬಿರ  ಆಯೋಜಿಸಲಾಗಿತ್ತು.      ಭದ್ರಾವತಿ :  ಜನಪದ ಹುಟ್ಟಿದ್ದೇ ಹೆಣ್ಣು ಮಕ್ಕಳಿಂದ. ಜನಪದ ನಮ್ಮ ಬದುಕು, ನಮ್ಮ ಸಂಪ್ರದಾಯ, ನಮ್ಮ ಸಂಸ್ಕಾರ, ನಮ್ಮ ಸಂಸ್ಕೃತಿಯಾಗಿದೆ ಎಂದು ತಾಲೂಕಿನ ಅಂತರಗಂಗೆ ಕೆಪಿಎಸ್ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ. ಸಾಸ್ವೆಹಳ್ಳಿ ಸತೀಶ್ ಹೇಳಿದರು.        ಅವರು ಅಂತರಗಂಗೆ ಸಮುದಾಯ ಭವನದಲ್ಲಿ ಗ್ರಾಮೀಣ ಮಹಿಳೆಯರಿಗಾಗಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ ಆಯೋಜಿಸಲಾಗಿದ್ದ ಎರಡು ದಿನ ಜನಪದ ಗೀತೆಗಳ ಕಲಿಕಾ ಶಿಬಿರ ಉದ್ಘಾಟಿಸಿ ಮಾತನಾಡಿದರು.  .  ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ತನ್ನ ನೋವಿಗಾಗಿ ಹಾಡಿದ ಪದಗಳು, ತನ್ನ ಸಂತೋಷಕ್ಕಾಗಿ ಹಾಡಿದ ಪದಗಳು, ವ್ಯವಸಾಯ ಹಾಗೂ ಗದ್ದೆ ಕೆಲಸ ಮಾಡುವಾಗ ಹಾಡಿದ ಹಾಡುಗಳೇ ಜನಪದ ಹಾಡುಗಳು. ಈ ಹಿನ್ನಲೆಯಲ್ಲಿ ಜನಪದ ಹುಟ್...

ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳು : ಜೆಡಿಎಸ್‌ನಿಂದ ನಗರಸಭೆ ಮುಂಭಾಗ ಪ್ರತಿಭಟನೆ

Image
ತಕ್ಷಣ ಕ್ರಮ ಕೈಗೊಳ್ಳಲು ಪೌರಾಯುಕ್ತ ಕೆ.ಎನ್ ಹೇಮಂತ್‌ಗೆ ಮನವಿ  ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು, ತಕ್ಷಣ ಸಮಸ್ಯೆಗಳನ್ನು ಪರಿಹರಿಸಿ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಆಗ್ರಹಿಸಿ ಸೋಮವಾರ ಜಾತ್ಯಾತೀತ ಜನತಾದಳ ತಾಲೂಕು ಘಟಕದಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತ ಕೆ.ಎನ್ ಹೇಮಂತ್‌ರವರಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ :  ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು, ತಕ್ಷಣ ಸಮಸ್ಯೆಗಳನ್ನು ಪರಿಹರಿಸಿ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಆಗ್ರಹಿಸಿ ಸೋಮವಾರ ಜಾತ್ಯಾತೀತ ಜನತಾದಳ ತಾಲೂಕು ಘಟಕದಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತ ಕೆ.ಎನ್ ಹೇಮಂತ್‌ರವರಿಗೆ ಮನವಿ ಸಲ್ಲಿಸಲಾಯಿತು.    ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಹುತ್ತಾವರೆಗೆ ರಸ್ತೆ ಮಧ್ಯೆ ಹೊಸದಾಗಿ ವಿಭಜಕ ಗೋಡೆಯನ್ನು (ಡಿವೈಡರ್ ವಾಲ್) ನಿರ್ಮಾಣ ಮಾಡಿದ್ದು, ಅದು ವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವುದಿಲ್ಲ. ಅಷ್ಟೇ ಅಲ್ಲದೇ ಇತ್ತೀಚೆಗೆ ವಿಭಜಕ ಮಾರ್ಗದಲ್ಲಿ ಬೀದಿದೀಪ ಆಳವಡಿಸಲು ಕಾಂಕ್ರೀಟ್ ಬೆಡ್ ಹಾಕಲಾಗಿದ್ದು, ಅದು ಎರಡೂ ಬದಿಯಲ್ಲಿ ಡಿವೈಡರ್ ಅಳತೆ ಮೀರಿ ಚಾಚಿರುತ್ತದೆ ಇದರಿಂದಾಗಿ ಅಪಘಾತಗಳಾಗುತ್ತಿದ್ದು, ತಕ್ಷಣ ಸರಿಪಡಿಸುವುದು.  ನೀರಿನ ತೆರಿಗೆ ಮಾದರಿಯಲ್ಲಿ ಆಸ್ತಿತೆರಿಗೆ ಪಾವ...

ಅಂಬೇಡ್ಕರ್‌ರವರು ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನ ರಕ್ಷಿಸಿ ಬಿ.ಕೆ ಮೋಹನ್

Image
ಭದ್ರಾವತಿ ಹುತ್ತಾ ಕಾಲೋನಿ ಚಂದ್ರಾಲಯದಲ್ಲಿ ಬಾಪೂಜಿ ಹರಿಜನ (ಮಾದರ) ಸೇವಾ ಸಂಘದಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನೋತ್ಸವ ಮತ್ತು ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ೧೧೯ನೇ ಜನ್ಮದಿನೋತ್ಸವ ಕಾರ್ಯಕ್ರಮ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.      ಭದ್ರಾವತಿ : ಭಾರತರತ್ನ, ಶ್ರೇಷ್ಠ ಮಾನವತಾವಾದಿ ಡಾ. ಬಿ.ಆರ್ ಅಂಬೇಡ್ಕರ್‌ರವರು ಈ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನ ರಕ್ಷಸಿ ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ಅವರು ನಗರದ ಹುತ್ತಾ ಕಾಲೋನಿ ಚಂದ್ರಾಲಯದಲ್ಲಿ ಬಾಪೂಜಿ ಹರಿಜನ (ಮಾದರ) ಸೇವಾ ಸಂಘದಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನೋತ್ಸವ ಮತ್ತು ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ೧೧೯ನೇ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.       ಅಂಬೇಡ್ಕರ್‌ರವರು ಈ ದೇಶಕ್ಕೆ ನೀಡಿರುವ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಸಂವಿಧಾನದಿಂದಾಗಿ ನಾವೆಲ್ಲರೂ ಇಂದು ನೆಮ್ಮದಿಯಾಗಿ ಬದುಕಲು ಸಾಧ್ಯವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅ...

ನಿರ್ವಹಣೆ ಇಲ್ಲದೆ ಹಾಳಾಗುತ್ತಿದೆ ಸುಸ್ಸಜ್ಜಿತ ಕಾರ್ಮಿಕರ ಸಮುದಾಯ ಭವನ

Image
* ಅನಂತಕುಮಾರ್  ಭದ್ರಾವತಿ ಕಸಬಾ ಹೋಬಳಿ, ಉಜ್ಜಯಿನಿಪುರ ಗ್ರಾಮದ ಸರ್ವೇ ನಂ. ೨೦ರಲ್ಲಿ ನಿರ್ಮಿಸಲಾಗಿರುವ ಸುಸ್ಸಜಿತ ಕಾರ್ಮಿಕ ಸಮುದಾಯ ಭವನ.  ಮುಖ್ಯಾಂಶಗಳು:  - ಸುಮಾರು ೯.೫ ಕೋ.ರು. ವೆಚ್ಚದ ಸಮುದಾಯ ಭವನ.  - ೧ ವರ್ಷದ ಹಿಂದೆ ಉದ್ಘಾಟನೆ. ಬಹುಬೇಡಿಕೆಯ ಸಮುದಾಯ ಭವನ - ಸಾಮಾನ್ಯ ಹಾಗು ಬಡ ಕಾರ್ಮಿಕರು ಸೇರಿದಂತೆ ಮಧ್ಯಮ ವರ್ಗಕ್ಕೆ ಹೆಚ್ಚಿನ ಅನುಕೂಲ. - ಎಲ್ಲಾ ಮೂಲ ಸೌಲಭ್ಯಗಳನ್ನು ಒಳಗೊಂಡಿರುವ ವಿಶಾಲ ಕಟ್ಟಡ  - ಸೂಕ್ತ ನಿರ್ವಹಣೆ ಹಲವು ಸಮಸ್ಯೆಗಳು ಉಲ್ಬಣ.       ಭದ್ರಾವತಿ : ಕಾರ್ಮಿಕರು ಹೆಚ್ಚಾಗಿರುವ ಕ್ಷೇತ್ರದಲ್ಲಿ ಬಹಳ ವರ್ಷಗಳ ಬೇಡಿಕೆಯಾಗಿದ್ದ ಕಾರ್ಮಿಕರ ಸಮುದಾಯ ಭವನ ನಿರ್ಮಾಣಗೊಂಡು ಕಳೆದ ೧ ವರ್ಷದ ಹಿಂದೆ ಉದ್ಘಾಟನೆಗೊಂಡಿದೆ. ಸುಮಾರು ೯.೫ ಕೋ.ರು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಸಮುದಾಯ ಭವನ ಎಲ್ಲಾ ವರ್ಗದ ಕಾರ್ಮಿಕರು, ಮಧ್ಯಮ ಹಾಗು ಬಡ ವರ್ಗದವರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಈ ನಡುವೆ ಸಮರ್ಪಕವಾದ ನಿರ್ವಹಣೆ ಇಲ್ಲದೆ ಸಮುದಾಯ ಭವನ ಹಾಳಾಗುತ್ತಿದ್ದು, ತಕ್ಷಣ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.       ಕ್ಷೇತ್ರಕ್ಕೆ ಬೇರೆಡೆಯಿಂದ ಬರುವ ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಿಕೊಡಲು, ಕಾರ್ಮಿಕ ವರ್ಗದವರು ಮತ್ತು ಸರ್ಕಾರದ ವಿವಿಧ ಇಲಾಖೆಗಳು, ಶಾಲಾ-ಕಾಲೇಜುಗಳು, ಸಭ...

ಮೇ. ೧೩ರಂದು ಉಚಿತ ಶ್ರವಣ ತಪಾಸಣೆ

Image
     ಭದ್ರಾವತಿ: ಲಯನ್ಸ್ ಇಂಟರ್‌ನ್ಯಾಷನಲ್ ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ ಆಶ್ರಯದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗು ವಿತರಣೆ ಮೇ.೧೩ರ ಬುಧವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ನ್ಯೂಟೌನ್ ಲಯನ್ಸ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.       ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಇದೀಗ ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರ ಆಯೋಜಿಸಿದ್ದು, ಈ ಶಿಬಿರದಲ್ಲಿ ಶ್ರವಣ ಯಂತ್ರಕ್ಕೆ ತಗಲು ವೆಚ್ಚದ ಶೇ.೪೦ರಷ್ಟು ಮೊತ್ತ ಭರಿಸುತ್ತಿದ್ದಾರೆ. ಈ ಶಿಬಿರ ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ೮೯೫೧೮೦೪೩೯೯ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ಮೇ.೧೦ರಂದು ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜಯಂತಿ

Image
     ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜಯಂತಿ ಮೇ.೧೦ರ ಭಾನುವಾರ ಬೆಳಿಗ್ಗೆ ೯.೩೦ಕ್ಕೆ ತಾಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಪರುಸಪ್ಪ ಕೆ. ಕುರುಬರ ಕೋರಿದ್ದಾರೆ. 

ವಿಜೃಂಭಣೆಯಿಂದ ಜರುಗಿದ ಶ್ರೀ ಕೋಟೆ ಆಂಜನೇಯ ಸ್ವಾಮಿ ಮಹಾರಥೋತ್ಸವ

Image
ಭದ್ರಾವತಿ ಹಳೇನಗರದ ಡಾ. ಪುನೀತ್ ರಾಜಕುಮಾರ್ ರಸ್ತೆ(ತಾಲೂಕು ಕಛೇರಿ ರಸ್ತೆ)ಯ ಕಂಚಿನ ಬಾಗಿಲು ಶ್ರೀ ಕೋಟೆ ಆಂಜನೇಯ ಸ್ವಾಮಿ ಮಹಾ ರಥೋತ್ಸವ ಶನಿವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.      ಭದ್ರಾವತಿ: ಹಳೇನಗರದ ಡಾ. ಪುನೀತ್ ರಾಜಕುಮಾರ್ ರಸ್ತೆ(ತಾಲೂಕು ಕಛೇರಿ ರಸ್ತೆ)ಯ ಕಂಚಿನ ಬಾಗಿಲು ಶ್ರೀ ಕೋಟೆ ಆಂಜನೇಯ ಸ್ವಾಮಿ ಮಹಾ ರಥೋತ್ಸವ ಶನಿವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.       ಪ್ರತಿ ವರ್ಷದಂತೆ ಈ ಬಾರಿ ಸಹ ಮಧ್ಯಾಹ್ನ ೧೨.೩೦ ಸಮಯಕ್ಕೆ ಮಹಾ ರಥೋತ್ಸವದ ಧಾರ್ಮಿಕ ಆಚರಣೆಗಳು ಆರಂಭಗೊಂಡು ೧.೩೦ರ ಸುಮಾರಿಗೆ ಅಲಂಕೃತಗೊಂಡ ತೇರಿನಲ್ಲಿ ಶ್ರೀ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿ ತೇರು ಎಳೆಯುವ ಮೂಲಕ ಭಕ್ತಿ ಮೆರೆದರು. ತೇರು ರಂಗಪ್ಪ ವೃತ್ತ ವರೆಗೆ ಸಾಗಿ ಪುನಃ ಹಿಂದಿರುಗಿ ಕಂಚಿನಬಾಗಿಲುವರೆಗೂ ಸಾಗಿ ಪುನಃ ದೇವಸ್ಥಾನಕ್ಕೆ ಹಿಂದಿರುಗಿತು.     ದೇವಸ್ಥಾನದ ಪ್ರಧಾನ ಅರ್ಚಕರಾದ ಪವನ್ ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. ಹಳೇನಗರದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಿ. ರಮಾಕಾಂತ ಹಾಗೂ ಹಾಗೂ ಇನ್ನಿತರ ದೇವಸ್ಥಾನಗಳ ಅರ್ಚಕರು ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದರ...

ಅನೈತಿಕ ಸಂಬಂಧ : ಗಂಡನನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

Image
೧೪ ಲಕ್ಷ ರು. ದಂಡ, ದೂರುದಾರರಿಗೆ ೫ ಲಕ್ಷ ಪರಿಹಾರ ನೀಡಲು ಆದೇಶ  ಗಂಡನನ್ನು ಕೊಲೆ ಮಾಡಿರುವ ಪತ್ನಿ ಪ್ಲೋರಾ ನ್ಯಾನ್ಸಿ      ಭದ್ರಾವತಿ: ಪ್ರಿಯಕರನೊಂದಿಗೆ ಸೇರಿ ಗಂಡನಿಗೆ ಮತ್ತು ಬರುವ ಔಷಧಿ ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪತ್ನಿ ಹಾಗು ಪ್ರಿಯಕರನಿಗೆ ಗಲ್ಲು ಶಿಕ್ಷೆ ಹಾಗು ೧೪ ಲಕ್ಷ ರು. ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.       ಸುಮಾರು ೬ ವರ್ಷಗಳ ಹಿಂದೆ ಜ.೧೫, ೨೦೨೦ರಂದು ನಗರಸಭೆ ವ್ಯಾಪ್ತಿಯ ವಾರ್ಡ್. ೨೦ರ ಸುರಗಿತೋಪಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ ಫ್ಲೋರಾ ನ್ಯಾನ್ಸಿ ಎಂಬ ಮಹಿಳೆಯು ರಾಜಶೇಖರಯ್ಯ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಳು. ಈಕೆಯ ಗಂಡ ಪ್ರಕಾಶ್ ಬಾಬುವಿಗೆ ಇವರಿಬ್ಬರ ಅನೈತಿಕ ಸಂಬಂಧ ಗೊತ್ತಾಗಿದ್ದು, ಈ ಹಿನ್ನಲೆಯಲ್ಲಿ ಸಂಬಂಧಕ್ಕೆ ಅಡ್ಡಿ ಬರುತ್ತಾನೆಂದು ಇಬ್ಬರು ಸೇರಿ ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.  ಪ್ರಿಯಕರ ರಾಜಶೇಖರಯ್ಯ       ಪ್ರಕರಣದ ಆಗಿನ ತನಿಖಾಧಿಕಾರಿ ಪೊಲೀಸ್ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್‌ರವರು ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರ...

ಪವರ್ ಲಿಫ್ಟಿಂಗ್ ಸ್ಪರ್ಧೆ : ಕಾರ್ತಿಕ್‌ಗೆ ಕಂಚು

Image
ಮಂಗಳೂರಿನ ಕಿನ್ನಗೊಳದಲ್ಲಿ ಜರುಗಿದ  ಕರ್ನಾಟಕ ರಾಜ್ಯ ಪವರ್‌ಲಿಪ್ಪಿಂಗ್ ಪಂದ್ಯಾವಳಿಯಲ್ಲಿ ಭದ್ರಾವತಿ ಕ್ರೀಡಾಪಟು ಕಾರ್ತಿಕ್ ಭಾಗವಹಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.       ಭದ್ರಾವತಿ: ಮಂಗಳೂರಿನ ಕಿನ್ನಗೊಳದಲ್ಲಿ ಜರುಗಿದ  ಕರ್ನಾಟಕ ರಾಜ್ಯ ಪವರ್‌ಲಿಪ್ಪಿಂಗ್ ಪಂದ್ಯಾವಳಿಯಲ್ಲಿ ಕ್ರೀಡಾಪಟು ಕಾರ್ತಿಕ್ ಭಾಗವಹಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.        ೮೩ ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿ ಸ್ಕ್ವಾಟ್ ನಲ್ಲಿ ೨೫೫ ಕೆ.ಜಿ,  ಬೆಂಚ್ ಪ್ರೆಸ್‌ನಲ್ಲಿ ೧೫೦ ಕೆ.ಜಿ ಮತ್ತು ಡೆಡ್ ಲಿಫ್ಟ್  ನಲ್ಲಿ ೨೪೫ ಕೆ.ಜಿ ಸೇರಿ ಒಟ್ಟು ೬೫೦ ಕೆ.ಜಿ ಭಾರ ಎತ್ತುವ ಮೂಲಕ  ಉತ್ತಮ ಸಾಧನೆ ಮಾಡಿದ್ದಾರೆ. ಕಂಚಿನ ಪದಕ ಗೆಲ್ಲುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.        ಇವರು ತರಬೇತುದಾರರಾದ ರಾಕೇಶ್ ಉಪಾಧ್ಯಾಯ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದು, ಕುವೆಂಪು ವಿಶ್ವವಿದ್ಯಾಲಯದ  ಲೀಲಾವತಿ ರಮೇಶ್ ರವರು ಪುತ್ರರಾಗಿದ್ದಾರೆ. ಕಾರ್ತಿಕ್ ನಗರದ ಗಣ್ಯರು, ಕ್ರೀಡಾಪಟುಗಳು ಕ್ರೀಡಾ ಅಭಿಮಾನಿಗಳು ಅಭಿನಂದಿಸಿದ್ದಾರೆ.

ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ 

Image
ಭದ್ರಾವತಿ : ತಾಲೂಕಿನ ಕೊಮಾರನಹಳ್ಳಿ ತಾಂಡದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ೫ ವರ್ಷಗಳ ಹಿಂದೆ ನಡೆದಿದ್ದ ಇಬ್ಬರಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗು ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.     ಆರೋಪಿಗಳಾಗಿರುವ ಕೊಮಾರನಹಳ್ಳಿ ತಾಂಡ ನಿವಾಸಿಗಳಾದ ರವಿನಾಯ್ಕ(೩೨), ದಿವಂಗತ ರಾಜನಾಯ್ಕ (೫೮) ಮತ್ತು ಲಕ್ಷ್ಮಿಬಾಯಿ(೪೦) ರವರು ಆಸ್ತಿಯ ಭಾಗದ ವಿಚಾರವಾಗಿ  ೩ ಜೂನ್ ೨೦೨೧ರಂದು ರಾತ್ರಿ ಶರತ್(೨೪), ಸುರೇಂದ್ರ(೪೫), ವಿನಯ್ ಕುಮಾರ್(೨೧), ಜಯಬಾಯಿ(೫೫) ಮತ್ತು ಸರೋಜಾ ಬಾಯಿ(೪೧) ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾಕುವಿನಿಂದ ಶರತ್‌ರವರ ಹೊಟ್ಟೆಗೆ ೨-೩ ಬಾರಿ ಇರಿದು ತೀವ್ರ ಸ್ವರೂಪದ ಗಾಯಪಡಿಸಿ ಕೊಲೆ ಮಾಡಲು ಯತ್ನಿಸಲಾಗಿತ್ತು. ಈ ಘಟನೆಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಎಎಸ್‌ಐ(ನಿವೃತ್ತ) ಕೆ.ಕೆ ತ್ಯಾಗರಾಜ್ ರವರು ಪ್ರಕರಣದ ತನಿಖೆ ಪೂರೈಸಿ, ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.        ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ಪಿ. ವಾದ ಮಂಡಿಸಿದ್ದು, ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ...

ಮೇ.10ರಂದು ಡಾ. ಬಿ.ಆರ್. ಅಂಬೇಡ್ಕರ್, ಡಾ. ಬಾಬು ಜಗಜೀವನ್ ರಾಮ್‌ರವರ ಜನ್ಮದಿನೋತ್ಸವ

Image
ಬಾಪೂಜಿ ಹರಿಜನ (ಮಾದರ) ಸೇವಾ ಸಂಘದಿಂದ ಆಯೋಜನೆ, ವಿವಿಧ ಯೋಜನೆಗಳಿಗೆ ಚಾಲನೆ ಭದ್ರಾವತಿ ಗುರುವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಬಾಪೂಜಿ ಹರಿಜನ (ಮಾದರ) ಸೇವಾ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಮಾಹತಿ ನೀಡಿದರು. ಭದ್ರಾವತಿ : ಬಾಪೂಜಿ ಹರಿಜನ (ಮಾದರ) ಸೇವಾ ಸಂಘದಿಂದ ಮೇ.10ರ ಭಾನುವಾರ ಬೆಳಗ್ಗೆ 10.30ಕ್ಕೆ ಹುತ್ತಾಕಾಲೋನಿಯ ಚಂದ್ರಾಲಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ರವರ 135ನೇ ಜನ್ಮದಿನೋತ್ಸವ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ರವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ತಿಳಿಸಿದರು.      ಅವರು ಗುರುವಾರ ಪತ್ರಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರಸಭೆ ಸದಸ್ಯರಾದ ಬಿ.ಕೆ. ಮೋಹನ್, ಲತಾ ಚಂದ್ರಶೇಖರ್, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ, ನ್ಯಾಯವಾದಿಗಳಾದ ಎಂ. ಶಿವಕುಮಾರ್, ನಾರಾಯಣಸ್ವಾಮಿ, ಶಿಕ್ಷಕ ಬಿ.ಎಚ್ ಪ್ರಸಾದ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.        ಮುಖ್ಯ ಭಾಷಣಕಾರರಾಗಿ ಸರ್ಕಾರಿ ಪ್ರಥಮ ಕಾಲ...

ಮೇ.೧೦ರಂದು `ಆರೋಗ್ಯ ಭೂಮಿಕಾ' ಸಮಗ್ರ ಆರೋಗ್ಯ ಚಿಂತನ ಕಾರ್ಯಕ್ರಮ 

Image
     ಭದ್ರಾವತಿ : ಕನ್ನಡ ನಾಡು ನಡೆ-ನುಡಿ ಬಿಂಬಿಸುವ ವೇದಿಕೆ ನಗರದ ಭೂಮಿಕಾ ತನ್ನ ೨೫ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ಮೇ. ೧೦ರ ಭಾನುವಾರ ಸಂಜೆ ೫.೩೦ಕ್ಕೆ ಆರೋಗ್ಯ ಭೂಮಿಕಾ ಸಮಗ್ರ ಆರೋಗ್ಯ ಚಿಂತನ ಕಾರ್ಯಕ್ರಮ ಆಯೋಜಿಸಲಾಗಿದೆ.      ಶಿವಮೊಗ್ಗ ಪಾಸಿಟಿವ್ ಮೈಂಡ್ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ, ಮನಶಾಸ್ತ್ರಜ್ಞರಾದ ಡಾ. ವಿ.ಎಚ್ ಐಶ್ವರ್ಯ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದು, ನಗರದ ಸ್ತ್ರೀ ರೋಗ ತಜ್ಞೆ ಡಾ. ವೀಣಾ ಭಟ್ ಉಪಸ್ಥಿತರಿರುವರು. ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್ ಭಟ್, ಅಧ್ಯಕ್ಷತೆ ವಹಿಸಲಿದ್ದಾರೆ. ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್, ಕೋಶಾಧ್ಯಕ್ಷ ಸಿ.ಎಲ್ ಮುನಿರಾಜ್ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದ್ದಾರೆ. 

ವಿದ್ಯಾರ್ಥಿ ನಿಲಯದಲ್ಲಿ ಉತ್ತಮ ಕರ್ತವ್ಯ : ಸ್ವಂತ ಹಣ, ದಾನಿಗಳ ನೆರವಿನಿಂದ ಅಭಿವೃದ್ಧಿ ಕಾರ್ಯ

Image
ದೇವರಾಜ ಅರಸು ವಿದ್ಯಾರ್ಥಿ ನಿಲಯದ ನಿವೃತ್ತ ಮೇಲ್ವಿಚಾರಕ ಸಿ.ಎಂ ರಮೇಶ್‌ಗೆ ಸನ್ಮಾನ   ಕರ್ತವ್ಯದ ಸಂದರ್ಭದಲ್ಲಿ ಸ್ವಂತ ಕೆಜೆಡಿ ಹಣ ಹಾಗು ದಾನಿಗಳ ನೆರವಿನೊಂದಿಗೆ ವಿದ್ಯಾರ್ಥಿ ನಿಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದ ಭದ್ರಾವತಿ ಜಟ್‌ಪಟ್ ನಗರದ ದೇವರಾಜ ಅರಸು ವಿದ್ಯಾರ್ಥಿ ನಿಲಯದ ನಿವೃತ್ತ ಮೇಲ್ವಿಚಾರಕ ಸಿ.ಎಂ ರಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  ಭದ್ರಾವತಿ : ಕರ್ತವ್ಯದ ಸಂದರ್ಭದಲ್ಲಿ ಸ್ವಂತ ಕೆಜೆಡಿ ಹಣ ಹಾಗು ದಾನಿಗಳ ನೆರವಿನೊಂದಿಗೆ ವಿದ್ಯಾರ್ಥಿ ನಿಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದ ದೇವರಾಜ ಅರಸು ವಿದ್ಯಾರ್ಥಿ ನಿಲಯದ ನಿವೃತ್ತ ಮೇಲ್ವಿಚಾರಕ ಸಿ.ಎಂ ರಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.      ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದ ಹಿಂದುಳಿದ ವರ್ಗಗಳ ಇಲಾಖೆ ದೇವರಾಜ ಅರಸು ವಸತಿ ನಿಲಯದ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್‌ರವರು  ಇತ್ತೀಚೆಗೆ ನಿವೃತ್ತಿ ಹೊಂದಿದ್ದು, ಇವರ ಕರ್ತವ್ಯದಲ್ಲಿನ ಬದ್ದತೆ ಹಾಗು ಸ್ವಂತ ಹಣ ಹಾಗು ದಾನಿಗಳ ನೆರವಿನಿಂದ ಕೈಗೊಂಡಿರುವ ಕಾರ್ಯಗಳು ಇತರರಿಗೆ ಮಾದರಿಯಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸುವ ಮೂಲಕ ನಗರದ ನ್ಯೂಟೌನ್ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ...

ಮೇ.೧೦ರಿಂದ ಎರಡನೇ ಹಂತದ `ರಜಾ-ಮಜಾ' ಬೇಸಿಗೆ ಶಿಬಿರ 

Image
ಭದ್ರಾವತಿ : ನಗರದ ಜನ್ನಾಪುರ ಅಪರಂಜಿ ಅಭಿನಯ ಶಾಲೆಯಿಂದ ಪ್ರತಿ ವರ್ಷದಂತೆ ಈ ಬಾರಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಎರಡನೇ ಹಂತದ ರಜಾ-ಮಜಾ ಬೇಸಿಗೆ ಶಿಬಿರ ಮೇ.೧೦ ರಿಂದ ೧೭ರವರೆಗೆ ಆಯೋಜಿಸಲಾಗಿದೆ.      ಉಂಬ್ಳೆಬೈಲು ರಸ್ತೆ, ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ರಿಂದ ಮಧ್ಯಾಹ್ನ ೧.೩೦ರವರೆಗೆ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ೬ ರಿಂದ ೧೬ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ.      ಡ್ರಾಮಾ ಜ್ಯೂನಿಯರ್, ಅಭಿನಯ, ಗೀತಗಾಯನ, ಅಭಿನಯ ನೃತ್ಯ, ಡ್ರಾಯಿಂಗ್, ವ್ಯಕ್ತಿ ವಿಕಸನ, ಕ್ರಾಫ್ಟ್ ವರ್ಕ್ ಮತ್ತು ಯೋಗ ಕುರಿತು ಸಂಪನ್ಮೂಲ ವ್ಯಕ್ತಿ, ರಂಗಕರ್ಮಿ, ಕಿರುತೆರೆ-ಚಲನಚಿತ್ರ ನಟ ಅಪರಂಜಿ ಶಿವರಾಜ್ ಮತ್ತು ತಂಡದವರಿಂದ ತರಬೇತಿ ನೀಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಲು ಹಾಗು ಹೆಚ್ಚಿನ ಮಾಹಿತಿಗಾಗಿ ೯೯೮೦೫೩೪೪೦೬ ಮೊಬೈಲ್ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ವಿದ್ಯಾರ್ಥಿನಿಗೆ ಸನ್ಮಾಸ

Image
ಪ್ರಗತಿಪರ ಕೃಷಿಕ ಶ್ರೀಧರ್ ರೂಢಿಸಿಕೊಂಡು ಬಂದಿರುವ ವಿಶಿಷ್ಟ ಕಾರ್ಯ ಭದ್ರಾವತಿ ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಎಲ್ ರಮ್ಯಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಯನ್ನು ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್ ರವರು ಸನ್ಮಾನಿಸಿ ಅಭಿನಂದಿಸಿದರು.      ಭದ್ರಾವತಿ: ತಾಲೂಕಿನ ಸರ್ಕಾರಿ ಶಾಲೆಗಳ ಪೈಕಿ ಅತಿ ದೊಡ್ಡ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಮೀಣ ಭಾಗದ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಎಲ್ ರಮ್ಯಾ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಯನ್ನು ಭಂಡಾರಹಳ್ಳಿ ಗ್ರಾಮದ ಪ್ರಗತಿಪರ ಕೃಷಿಕ ಶ್ರೀಧರ್ ರವರು ಸನ್ಮಾನಿಸಿ ಅಭಿನಂದಿಸಿದರು.       ರಮ್ಯಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 608 ಹಾಗು ಇದೆ ಶಾಲೆಯ ವಿದ್ಯಾರ್ಥಿನಿ ಡಿ. ಕೀರ್ತನ 605 ಅಂಕಗಳನ್ನು ಪಡೆದು ಅತ್ಯನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಗೆ ಹಾಗು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಪ್ರಗತಿಪರ ಕೃಷಿಕರಾದ ಶ್ರೀಧರ್ ರವರು ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್...

ಮಾರಾಕಾಸ್ತ್ರಗಳಿಂದ ಹಲ್ಲೆ ಪ್ರಕರಣ : ೬ ಮಂದಿಗೆ ಜೈಲು ಶಿಕ್ಷೆ, ದಂಡ 

Image
ಭದ್ರಾವತಿ ತಾಲೂಕಿನ ಜಿಂಕಲೈನ್ ವೀರಾಪುರ ರಸ್ತೆಯಲ್ಲಿರುವ ಬಾಬುರವರ ಮನೆ ಹಿಂಭಾಗದ ತೆಂಗಿನ ತೋಟದಲ್ಲಿ ಸುಮಾರು ೬ ವರ್ಷಗಳ ಹಿಂದೆ ಯುವಕನೊಬ್ಬನ ಮೇಲೆ ಮಾರಾಕಾಸ್ತ್ರಗಳಿಂದ ನಡೆಸಲಾಗಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಮಂದಿ ಯುವಕರಿಗೆ ೩ ವರ್ಷ ಜೈಲು ಶಿಕ್ಷೆ ಹಾಗು ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ೬ ಮಂದಿ ಯುವಕರು.       ಭದ್ರಾವತಿ:  ಸುಮಾರು ೬ ವರ್ಷಗಳ ಹಿಂದೆ ತೆಂಗಿನ ತೋಟವೊಂದರಲ್ಲಿ ಯುವಕನೊಬ್ಬನ ಮೇಲೆ ಮಾರಾಕಾಸ್ತ್ರಗಳಿಂದ ನಡೆಸಲಾಗಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಮಂದಿ ಯುವಕರಿಗೆ ೩ ವರ್ಷ ಜೈಲು ಶಿಕ್ಷೆ ಹಾಗು ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.      ತಾಲೂಕಿನ ಜಿಂಕಲೈನ್ ವೀರಾಪುರ ರಸ್ತೆಯಲ್ಲಿರುವ ಬಾಬುರವರ ಮನೆ ಹಿಂಭಾಗದ ತೆಂಗಿನ ತೋಟದಲ್ಲಿ ಮೇ.೧೦, ೨೦೨೦ರಂದು ಕಿರಣ್(೨೯), ಮಂಜುನಾಥ್ (೨೫) ಮತ್ತು ಅರುಣ (೨೪) ರವರು ನಿಂತಿದ್ದಾಗ,   ಅಜೇಯ ಅಲಿಯಾಸ್ ಅಜ್ಜಿ(೨೪ ), ತೇಜು ಅಲಿಯಾಸ್ ತೇಜಸ್ವಿ ಅಲಿಯಾಸ್ ಟೀಕು(೨೨), ಮನು ಅಲಿಯಾಸ್ ಗೊಣ್ಣೆ ಮಧು ಅಲಿಯಾಸ್ ಮನೋಜ್(೨೨), ಆದರ್ಶ ಅಲಿಯಾಸ್ ಆದು(೨೫), ಅರುಣ(೨೦) ಪಾನಿಪುರಿ ರಂಗ ಅಲಿಯಾಸ್ ರಂಗ ಅಲಿಯಾಸ್ ಪಾನಿಪುರಿ(೨೫)ರವರು ಮಂಜುನಾಥ್ ರವರ ಮೇಲಿನ ಹಳೆಯ ದ್ವೇಷದ ಹಿನ್ನಲೆಯಲ್ಲಿ ಮಾರಕಾಸ್ತ್ರಗ...

ನಗರಸಭೆ ಮಾಜಿ ಸದಸ್ಯ ಕೆ.ಬಿ ಗಂಗಾಧರ ನಿಧನ 

Image
ಕೆ.ಬಿ ಗಂಗಾಧರ        ಭದ್ರಾವತಿ : ತಾಲೂಕಿನ ಮಂಡಲ ಪಂಚಾಯಿತಿ ಹಾಗು ನಗರಸಭೆ ಮಾಜಿ ಸದಸ್ಯ, ಭಂಡಾರಹಳ್ಳಿ ನಿವಾಸಿ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ ಗಂಗಾಧರ(೭೫) ಮಂಗಳವಾರ ಬೆಳಗಿನ ಜಾವ ನಿಧನ ಹೊಂದಿದರು.      ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು ಹಾಗು ಮೊಮ್ಮಕ್ಕಳು ಇದ್ದಾರೆ. ಗಂಗಾಧರ್‌ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಲೋಯರ್ ಹುತ್ತಾ ಕವಲಗುಂದಿ ದೊಣಬಘಟ್ಟ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.      ಪ್ರಸ್ತುತ ಗಂಗಾಧರ್‌ರವರ ಸೊಸೆ ಶೃತಿ ವಸಂತಕುಮಾರ್ ನಗರಸಭೆ ಸದಸ್ಯೆಯಾಗಿದ್ದು, ಗಂಗಾಧರ್‌ರವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗು ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಲ್ಯಾಬೋರೇಟರಿಯಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ : ಪೌರ ಕಾರ್ಮಿಕರಿಗೆ ಸನ್ಮಾನ

Image
ಪ್ರತಿವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ರಂಗಪ್ಪ ವೃತ್ತ, ಮಧು ಲ್ಯಾಬೋರೇಟರಿ ವತಿಯಿಂದ `ವಿಶ್ವ ಕಾರ್ಮಿಕರ ದಿನಾಚರಣೆ' ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು.       ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ಸಹ ನಗರದ ರಂಗಪ್ಪ ವೃತ್ತ, ಮಧು ಲ್ಯಾಬೋರೇಟರಿ ವತಿಯಿಂದ `ವಿಶ್ವ ಕಾರ್ಮಿಕರ ದಿನಾಚರಣೆ' ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು.      ರಂಗಪ್ಪ ವೃತ್ತ ಮತ್ತು ಕೇಶವಪುರ ಬಡಾವಣೆಯಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಾದ ಎಸ್. ಶರವಣ, ಲಿಂಗಮ್ಮ, ತಿರುಮಲ, ಲಕ್ಷ್ಮಮ್ಮ, ಲತೇಶ್ ಮತ್ತು ತುಳಸಿ ಸೇರಿದಂತೆ ೬ ಜನರನ್ನು  ಗೌರವಿಸಿ ಸನ್ಮಾನಿಸಲಾಯಿತು. ಮಧು ಲ್ಯಾಬ್ ಮಾಲೀಕ, ಸಮಾಜ ಸೇವಕ ಎಸ್.ಆರ್. ಜಗದೀಶ್ ಮಾತನಾಡಿ, ಜಗತ್ತು ಸುಖ ನಿದ್ರೆಯಲ್ಲಿದ್ದಾಗ ಎದ್ದು ತಮ್ಮ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರ ಕಾರ್ಯ ಅಭಿನಂದನೀಯ. ಸಮಾಜದ ಸ್ವಚ್ಚತೆಯನ್ನು, ಆರೋಗ್ಯವನ್ನು ಕಾಪಾಡುವ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗ ಉತ್ತಮ ಗುಣಮಟ್ಟದ ಜೀವನ ನಡೆಸಬೇಕು. ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಒತ್ತು ನೀಡಬೇಕು. ದುಶ್ಚಟಗಳಿಗೆ ಬಲಿಯಾಗಬಾರದೆಂದರು. ಸಮಾಜ ಕೂಡ ಎಲ್ಲಾ ಕಾರ್ಮಿಕರನ್ನು ಗೌರವದಿಂದ ಕಾಣಬೇಕು. ಅವರ ಕಾನೂನುಬದ್ದ ಬೇಡಿಕೆಗೆ ಆದ್ಯತೆ ನೀಡಬೇಕೆಂದರು.      ಲೀಲಾವತಿ ಜಗದೀಶ್ ಮತ್ತು ಲ್ಯಾಬ್ ಸಿಬ್ಬಂದಿ...

ಯಡಿಯೂರಪ್ಪ `ಅಭಿಮಾನೋತ್ಸವ' ಕಾರ್ಯಕ್ರಮ ಪೂರ್ವಭಾವಿ ಸಭೆ 

Image
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ : ವಿಜಯೋತ್ಸವ, ಸಂಭ್ರಮಾಚರಣೆ  ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ವಿಜಯೋತ್ಸವದೊಂದಿಗೆ ಸಂಭ್ರಮಾಚರಣೆ ನಡೆಸಲಾಯಿತು.       ಭದ್ರಾವತಿ : ರೈತ ನಾಯಕ, ಜನ ನಾಯಕ, ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಭೆ ಸೋಮವಾರ ನಗರದ ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾಗಿತ್ತು.      ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗು ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಸ್ ತೀರ್ಥಯ್ಯ ಸಭೆಯ ನೇತೃತ್ವವಹಿಸಿ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಗಳ ಕುರಿತು ಚರ್ಚಿಸಲಾಯಿತು. ಅಲ್ಲದೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ವೀಕ್ಷಣೆ ಮಾಡಲಾಯಿತು.      ಬಿಜೆಪಿ ಗೆಲವು : ವಿಜಯೋತ್ಸವ      ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಯವರ ನೇತೃತ್ವದಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ನಡೆಸಿದರು.  ...

ಶಾಸಕ ಸಂಗಮೇಶ್ವರ್ ಗೆ ಅಭಿಮಾನಿಯಿಂದ ಬುದ್ಧ ಪೂರ್ಣಿಮೆಯಂದು ಕಾಣಿಕೆ ಭದ್ರಾವತಿ: ಬುದ್ಧ ಪೂರ್ಣಿಮೆಯಂದು

Image
  ಭದ್ರಾವತಿಯಲ್ಲಿ ಬುದ್ಧ ಪೂರ್ಣಿಮೆಯಂದು ಅಭಿಮಾನಿಯೊಬ್ಬರು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಭಗವಾನ್ ಬುದ್ಧ ಅವರೊಂದಿಗೆ ಅಂಬೇಡ್ಕರ್ ಮತ್ತು ಬಸವಣ್ಣನವರ ಭಾವಚಿತ್ರವಿರುವ ಕಾಣಿಕೆ ನೀಡಿ ಗಮನ ಸೆಳೆದಿದ್ದಾರೆ. ಭದ್ರಾವತಿ: ಅಭಿಮಾನಿಯೊಬ್ಬರು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರಿಗೆ ಭಗವಾನ್ ಬುದ್ಧ ಅವರೊಂದಿಗೆ ಅಂಬೇಡ್ಕರ್ ಮತ್ತು ಬಸವಣ್ಣನವರ ಭಾವಚಿತ್ರವಿರುವ ಕಾಣಿಕೆ ನೀಡಿ ಗಮನ ಸೆಳೆದಿದ್ದಾರೆ.        ಜಗತ್ತಿಗೆ ಸತ್ಯ, ಅಹಿಂಸೆ, ಶಾಂತಿ, ಸೌಹಾರ್ದತೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಭಗವಾನ್ ಬುದ್ಧ, ಜಗಜ್ಯೋತಿ ಬಸವಣ್ಣ ಮತ್ತು ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಆದರ್ಶಗಳು ಪ್ರತಿ ದಿನ ನಮ್ಮದಾಗಬೇಕೆಂಬ ಆಶಯ ಸಂಗಮೇಶ್ವರ್ ಅಭಿಮಾನಿ, ಯುವ ಮುಖಂಡ ವೈ. ನಟರಾಜ್ ಹೊಂದಿದ್ದಾರೆ.   ವೈ. ನಟರಾಜ್ ಶಾಸಕರ ಗೃಹ ಕಚೇರಿಗೆ ತೆರಳಿ ಸನ್ಮಾನಿಸುವ ಮೂಲಕ ಕಾಣಿಕೆ ನೀಡಿ ಬುದ್ದ ಪೂರ್ಣೀಮೆ ಶುಭ ಕೋರಿದ್ದಾರೆ.

ಗೌರಮ್ಮ ನಿಧನ

Image
  ಗೌರಮ್ಮ ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಉಂಳ್ಳೆಬೈಲು ಸಮೀಪದ ಆಲ್ದಾರ ಗ್ರಾಮದ ಹಿರಿಯ ನಿವಾಸಿ ಗೌರಮ್ಮ(85) ಶನಿವಾರ ರಾತ್ರಿ ನಿಧನ ಹೊಂದಿದರು.      ಇವರಿಗೆ ಪತ್ರಕರ್ತ ಶಿವಶಂಕರ್ ಸೇರಿದಂತೆ  ಮೂವರು ಪುತ್ರರು, ಐವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಇದ್ದಾರೆ, ಇವರು ಗ್ರಾಮದ ಹಿರಿಯ ನಿವಾಸಿ ದಿವಂಗತ ಕೃಷ್ಣಮೂರ್ತಿಯವರ ಧರ್ಮಪತ್ನಿಯಾಗಿದ್ದಾರೆ. ಗ್ರಾಮದ ಇವರ ಜಮೀನಿನಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ. ಇವರ ನಿಧನಕ್ಕೆ ಜನಪ್ರತಿನಿಧಿಗಳು ಗಣ್ಯರು ಸಂತಾಪ ಸೂಚಿಸಿದ್ದಾರೆ.     

ಮೇ.೩ರಂದು ಛಲವಾದಿ ಸಮಾಜದ ವಾರ್ಷಿಕೋತ್ಸವ, ಅಂಬೇಡ್ಕರ್ ಜಯಂತಿ 

Image
ಛಲವಾದಿ ಸಮಾಜದವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಭದ್ರಾವತಿ ನಗರದ ನ್ಯೂಟೌನ್ ವಿಐಎಸ್‌ಎಲ್ ನಗರಾಡಳಿತ ಕಛೇರಿ ಸಮೀಪದ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರ ಭಾನುವಾರ ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಯೋಜಿಸಲಾಗಿದೆ. ಈ ಸಂಬಂಧ ಶನಿವಾರ ಸಮಾಜದ ಸದಸ್ಯರು ಹಾಗು ಅವರ ಕುಟುಂಬ ವರ್ಗದವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಿದವು.       ಭದ್ರಾವತಿ : ನಗರದ ನ್ಯೂಟೌನ್ ವಿಐಎಸ್‌ಎಲ್ ನಗರಾಡಳಿತ ಕಛೇರಿ ಸಮೀಪದ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಿಂದ ಮೇ.೩ರ ಭಾನುವಾರ ಸಂವಿಧಾನ ಶಿಲ್ಪಿ, ವಿಶ್ವಮಾನವ, ಭಾರತರತ್ನ ಡಾ. ಭೀಮ್‌ರಾವ್ ರಾಮ್‌ಜೀ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಾಗು ಸಮಾಜದ ವಾರ್ಷಿಕೋತ್ಸವ ಆಯೋಜಿಸಲಾಗಿದೆ. ಈ ಸಂಬಂಧ ಶನಿವಾರ ಸಮಾಜದ ಸದಸ್ಯರು ಹಾಗು ಅವರ ಕುಟುಂಬ ವರ್ಗದವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಿದವು.      ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ನಿಂಬೆಹಣ್ಣು ಮತ್ತು ಚಮಚ ಅಥವಾ ಥ್ರೋ ದ ಬಾಲ್, ಕಪ್ಪೆ ಓಟ ಹಾಗು ೩೦ ಮೀ. ಓಟದ ಸ್ಪರ್ಧೆ ಮತ್ತು ಮೊದಲ ಮತ್ತು ೨ನೇ ಹಂತದಲ್ಲಿ ೪೦ ಮೀ. ಓಟ, ಬುಕ್ ಬ್ಯಾಲೆನ್ಸ್ ಮತ್ತು ಕಪ್ಪೆ ಓಟ, ೩, ೪ ಮತ್ತು ೫ನೇ ಹಂತದಲ್ಲಿ ಒಂಟಿ ಕಾಲಿನ ಜಿಗಿತ, ೫೦ ಮೀ. ಓಟ, ಬಾಲ್ ಇನ್ ದಿ ಬ್ಯಾಸ್ಕೆಟ್ ಹಾಗು ೬ ರಿಂದ ೧೦ನೇ ಹಂತದಲ್ಲಿ ಲಗೋರಿ...

ಖಾಸಗಿ ಸರ್ವೆಯರ್‌ಗಳ ಬೇಡಿಕೆ ಈಡೇರಿಸಿ, ಇಲ್ಲಾ ಕೆಲಸದಿಂದ ವಜಾ ಮಾಡಿ 

Image
ಮೇ.೧೨ರಂದು ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ  ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.       ಭದ್ರಾವತಿ: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು.      ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಿಂಗಳು ಗಟ್ಟಲೆ ಕೆಲಸಕ್ಕೆ ಹಾಜರಾಗದೆ ರೈತರ ಜಮೀನುಗಳನ್ನು ಸರ್ವೆ ಮಾಡದೆ ನಿರ್ಲಕ್ಷ್ಯವಹಿಸಿರುವ ಕಾರಣ ಸರ್ವೆ ಮಾಡಿಕೊಡಲು ಸಲ್ಲಿಸಿರುವ ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಇದರಿಂದಾಗಿ ರೈತರು ಸಾಕಷ್ಟು ತೊಂದರೆ ಎದುರಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.      ಸರ್ಕಾರ ತಕ್ಷಣ ಖಾಸಗಿ ಸರ್ವೆಯರ್‌ಗಳ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವೇ ತಿಂಗಳು ಗಟ್ಟಲೆ ಕೆಲಸಕ್ಕೆ ಹಾಜರಾಗದೆ ಸರ್ವೆ ಮಾಡದೆ ಇರುವ ಸರ್ವೆಯರ್‌ಗಳನ್ನು  ಕೆಲಸದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.      ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡರವರು ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬದಲಾವ...

ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ, ಕಾರ್ಮಿಕರ ದಿನ ರಾಷ್ಟ್ರೀಯ ಹಬ್ಬವನ್ನಾಗಿಸಿ : ವಿ. ವಿನೋದ್ 

Image
ಭದ್ರಾವತಿಯಲ್ಲಿ ಶುಕ್ರವಾರ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್  ಮಾಲಾರ್ಪಣೆ ಮಾಡಿ ಮಾತನಾಡಿದರು.       ಭದ್ರಾವತಿ: ಪ್ರತಿಯೊಬ್ಬ ಕಾರ್ಮಿಕರಿಗೂ ಗೌರವ ಲಭಿಸಬೇಕು. ಆಳುವ ಸರ್ಕಾರಗಳು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಅಲ್ಲದೆ ಅಂತರಾಷ್ಟ್ರೀಯ ಕಾರ್ಮಿಕರ ದಿನ ಸರ್ಕಾರಿ ಕಾರ್ಯಕ್ರಮವನ್ನಾಗಿಸಬೇಕೆಂದು ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.      ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.      ಸಮಾಜದಲ್ಲಿ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದ್ದು, ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರು, ಇತರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಸಂಘಟಿತ ಹಾಗು ಅಸಂಘಟಿತ ಕಾರ್ಮಿಕರು, ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಮಹಿಳಾ ಕಾರ್ಮಿಕರು, ಕಟ್ಟಡ ಹಾಗು ಇತರೆ ನಿರ್ಮಾಣ ಕಾರ...

ಬಿ.ಎಸ್.ವೈ `ಅಭಿಮಾನೋತ್ಸವ' ಲಾಂಛನ ಬಿಡುಗಡೆ : ಸಂಭ್ರಮಾಚರಣೆ 

Image
ಮಾಜಿ ಮುಖ್ಯಮಂತ್ರಿ, ರೈತ ನಾಯಕ, ಹೋರಾಟಗಾರ ಬಿ.ಎಸ್ ಯಡಿಯೂರಪ್ಪನವರ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಲಾಂಛನ(ಲೋಗೋ) ಶುಕ್ರವಾರ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಭದ್ರಾವತಿ ರಂಗಪ್ಪ ವೃತ್ತದಲ್ಲಿ ವಾಹನಗಳಿಗೆ ಅಂಟಿಸುವ ಮೂಲಕ ಬಿಡುಗಡೆಗೊಳಿಸಿದರು.       ಭದ್ರಾವತಿ : ಮಾಜಿ ಮುಖ್ಯಮಂತ್ರಿ, ರೈತ ನಾಯಕ, ಹೋರಾಟಗಾರ ಬಿ.ಎಸ್ ಯಡಿಯೂರಪ್ಪನವರ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಲಾಂಛನ(ಲೋಗೋ) ಶುಕ್ರವಾರ ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ವಾಹನಗಳಿಗೆ ಅಂಟಿಸುವ ಮೂಲಕ ಬಿಡುಗಡೆಗೊಳಿಸಿದರು.      ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿ ನಂತರ ರಂಗಪ್ಪ ವೃತ್ತದಲ್ಲಿ `ಅಭಿಮಾನೋತ್ಸವ' ಕಾರ್ಯಕ್ರಮದ ಲಾಂಛನ ವಾಹನಗಳಿಗೆ ಅಂಟಿಸಿ ಕಾರ್ಯಕರ್ತರಿಗೆ, ಯಡಿಯೂರಪ್ಪ ಅವರ ಅಭಿಮಾನಿಗಳಿಗೆ ಹಾಗೂ  ಸಾರ್ವಜನಿಕರಿಗೆ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆತ್ಮೀಯ ಆಮಂತ್ರಣ ನೀಡಿ ಸಂಭ್ರಮಿಸಲಾಯಿತು.      ಪಕ್ಷದ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಪ್ರಮುಖರಾದ ಮಂಗೋಟೆ ರುದ್ರೇಶ್,...

ಭಗವಾನ್ ಗೌತಮ ಬುದ್ಧ ಜಯಂತಿ ಆಚರಿಸದೆ ಬೇಜವಾಬ್ದಾರಿತನ : ಖಂಡನೆ 

Image
ತಾಲೂಕು ಆಡಳಿತದ ವಿರುದ್ದ ಡಿಎಸ್‌ಎಸ್ ಮುಖಂಡ ಶಿವಬಸಪ್ಪ ಆಕ್ರೋಶ  ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಭಗವಾನ್ ಗೌತಮ ಬುದ್ಧ ಜಯಂತಿ ಆಚರಿಸದೆ ಬೇಜವಾಬ್ದಾರಿತನದಿಂದ ವರ್ತಿಸುವ ಮೂಲಕ ಸರ್ಕಾರದ ಸುತ್ತೋಲೆ ಕಡೆಗಣಿಸಿದೆ ಎಂದು ನಿವೃತ್ತ ಪ್ರಾಚಾರ್ಯ, ಡಿಎಸ್‌ಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವಬಸಪ್ಪ ಆರೋಪಿಸುವ ಮೂಲಕ ತಾಲೂಕು ಆಡಳಿತದಿಂದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.      ವಿಶ್ವಕ್ಕೆ ಸತ್ಯ, ಅಹಿಂಸೆ ಹಾಗೂ ಶಾಂತಿಯನ್ನು ಬೋಧಿಸಿದ ಗೌತಮ ಬುದ್ಧನ ಜನ್ಮದಿನ ಮೇ.೧ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ರಾಜ್ಯ ಸರ್ಕಾರ ಕೂಡ ಮೇ.೧ ಬುದ್ಧ ಪೂರ್ಣಿಮೆ ಪ್ರಯುಕ್ತ ರಾಜ್ಯದ ಎಲ್ಲಾ ಜಿಲ್ಲಾಡಳಿತ ಮತ್ತು ತಾಲೂಕ್ ಆಡಳಿತ ಮಟ್ಟದಲ್ಲಿ ಬುದ್ಧ ಜಯಂತಿ ಆಚರಿಸಲು ಸುತ್ತೋಲೆ ಹೊರಡಿಸಿದೆ. ಶಿವಮೊಗ್ಗ ಜಿಲ್ಲಾಡಳಿತ ಮತ್ತು ಜಿಲ್ಲೆಯ ಇತರ ತಾಲೂಕು ಆಡಳಿತದ ಆಶ್ರಯದಲ್ಲಿ ಮೇ ೧ರಂದು ಬುದ್ಧ ಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಆದರೆ ಇಲ್ಲಿನ ತಾಲೂಕು ಆಡಳಿತ ಮಾತ್ರ ತನಗೆ ಬುದ್ಧ ಪೂರ್ಣಿಮೆ ಪ್ರಯುಕ್ತ ಬುದ್ಧ ಜಯಂತಿ ಆಚರಣೆ ಬಗ್ಗೆ ಸರ್ಕಾರದಿಂದ ಮಾಹಿತಿಯೇ ಇಲ್ಲವೇನೋ ಎಂಬಂತೆ ಬೇಜವಾಬ್ದಾರಿತನದಿಂದ ವರ್ತಿಸಿರುವುದು ಖಂಡನೀಯ.      ತಾಲೂಕು ಆಡಳಿತದ ಈ ನಡೆ ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತೆಯ ಪಾಠ ಹೇಳಿಕೊಟ್ಟ ವಿಶ್ವಗುರು ಗೌತಮ ಬುದ್ಧನಿಗೆ ಎಸಗಿದ ಅಪಚಾರವಾಗಿದೆ....