Posts

ಗುಡುಗು ಮುಂಚಿನ ಅಕಾಲಿಕ ಮಳೆ : ಹಳ್ಳಕೊಳ್ಳಗಳು ಭರ್ತಿ

Image
ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ೩.೩೦ರ ಸಮಯದಲ್ಲಿ ಏಕಾಏಕಿ ನಗರದ ಕೆಲವೆಡೆ ಗುಡುಗು ಮಿಂಚಿನ ಜೊತೆಗೆ ಧಾರಕಾರವಾಗಿ ಗಾಳಿ ಮಳೆಯಾಗಿದೆ.       ಭದ್ರಾವತಿ : ನಗರದಲ್ಲಿ ಅಕಾಲಿಕ ಮಳೆ ಆರ್ಭಟ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದೆ. ಇದರಿಂದಾಗಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ.       ಸೋಮವಾರ ಮಧ್ಯಾಹ್ನ ೩.೩೦ರ ಸಮಯದಲ್ಲಿ ಏಕಾಏಕಿ ನಗರದ ಕೆಲವೆಡೆ ಗುಡುಗು ಮಿಂಚಿನ ಜೊತೆಗೆ ಧಾರಕಾರವಾಗಿ ಗಾಳಿ ಮಳೆಯಾಗಿದ್ದು, ಗಾಳಿಯ ಆರ್ಭಟಕ್ಕೆ ಕೆಲವೆಡೆ ರಸ್ತೆಗಳಲ್ಲಿ ಮರಗಳು ಧರೆಗುರುಳಿವೆ. ಇನ್ನೂ ಕೆಲವೆಡೆ ಮರಗಳಲ್ಲಿ ಒಣಗಿದ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ಕೆಲವೆಡೆ ಮನೆಯ ತಗಡಿನ ಮೇಲ್ಚಾವಣಿ ಗಾಳಿ ಮಳೆಗೆ ಹಾರಿ ಹೋಗಿರುವ ಘಟನೆ ನಡೆದಿವೆ.       ಸುಮಾರು ೩ ಗಂಟೆಗಳ ಸಮಯ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿಕೊಂಡು ರಸ್ತೆಗಳ ಮೇಲೆ ನೀರು ಹರಿಯುತ್ತಿರುವುದು ಕಂಡು ಬಂದಿತು. ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಬೆಳಿಗಳಿಗೆ ಹಾನಿಯಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಈ ಸಂಬಂಧ ಗಮನ ಹರಿಸಬೇಕಾಗಿದೆ. ಬೆಳೆ ಹಾನಿ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಿ ಬಡ ರೈತರ ಹಿತ ಕಾಪಾಡಬೇಕಾಗಿದೆ.       ರಸ್ತೆ ಮಧ್ಯೆ ಕೆಟ್ಟುನಿಂತ ಬಸ್:       ಗುಡುಗು ಮಿಂಚಿನ ಧಾರಾಕಾರ ಮಳೆ...

ಸೇತುವೆಯಲ್ಲಿ ಸ್ವಲ್ಪ ಪ್ರಮಾಣದ ನೀರು : ತಡೆಗೋಡೆಗೆ ಸಿಲುಕಿದ ಬಸ್ಸಿನ ಹಿಂಬದಿ ಚಕ್ರ

Image
ತಪ್ಪಿದ ಹೆಚ್ಚಿನ ಅನಾಹುತ : ವೇಗ ನಿಯಂತ್ರಣ ಅಳವಡಿಕೆಗೆ ಕ್ರಮ ಕೈಗೊಳ್ಳಲಿ  ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಗೇಹಳ್ಳ ಸೇತುವೆಗೆ ಬಸ್ ಡಿಕ್ಕಿ ಹೊಡೆದು ಉರುಳಿ ಬಿದ್ದ ಸಂದರ್ಭದಲ್ಲಿ ಸೇತುವೆಯಲ್ಲಿ ನೀರು ಸ್ವಲ್ಪ ಪ್ರಮಾಣದಲ್ಲಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.       ಭದ್ರಾವತಿ : ಚಾಲಕನ ನಿಯಂತ್ರಣ ಕಳೆದುಕೊಂಡು ಕಾಗೇಹಳ್ಳ ಸೇತುವೆಗೆ ಬಸ್ ಡಿಕ್ಕಿ ಹೊಡೆದು ಉರುಳಿ ಬಿದ್ದ ಸಂದರ್ಭದಲ್ಲಿ ಸೇತುವೆಯಲ್ಲಿ ನೀರು ಸ್ವಲ್ಪ ಪ್ರಮಾಣದಲ್ಲಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.       ಈ ಸೇತುವೆಯಲ್ಲಿ ಬೆಟ್ಟ-ಗುಡ್ಡ, ಹಳ್ಳ-ಕೊಳ್ಳಗಳಿಂದ ಹಾಗು ಜಮೀನಿನ ನೀರು ಹರಿಯುತ್ತದೆ. ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಮಾತ್ರ ಸೇತುವೆಯ ಅರ್ಧದಷ್ಟು ವನೀರು ಹರಿಯುತ್ತದೆ. ಇಂತಹ ಸಂದರ್ಭದಲ್ಲಿ ಬಸ್ ಸಂಪೂರ್ಣವಾಗಿ ಸೇತುವೆ ಕೆಳಗೆ ಬಿದ್ದಿದ್ದರೆ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು. ಆದರೆ ಈ ದುರ್ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಕೆಳಗೆ ಬಿದ್ದಿಲ್ಲ. ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಹಿಂಬದಿ ಚಕ್ರ ತಡೆಗೋಡೆಗೆ ಸಿಲುಕಿಕೊಂಡಿದೆ. ಈ ಹಿನ್ನಲೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗಿದೆ.       ಬಸ್ಸಿನ ಚಾಲಕ ಪ್ರಸಾದ್ ಗಾಯಗೊಂಡಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ...

ಮಾ. 31 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Image
     ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ಸಹ ಹಳೇ ನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.31ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ.    ಸಂಜೆ 5.30ಕ್ಕೆ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸುವರು.  ಭಾರ ಎತ್ತುವ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಚಿನ್ನದ ಪದಕ ಪ್ರಶಸ್ತಿ ವಿಜೇತೆ ದೇವಿಕ ಅವರಿಗೆ ಸನ್ಮಾನ ನಡೆಯಲಿದೆ. ಮಹಿಳಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.      ನ್ಯಾಯವಾದಿ ರೂಪರಾವ್, ಸಮಾಜದ ಹಿರಿಯ ಸದಸ್ಯೆ ನಗರತ್ನ ಮಲ್ಲಿಕಾರ್ಜುನ, ಗೌರವ ಅಧ್ಯಕ್ಷೆ ಗೌರಮ್ಮ ಶಂಕರಯ್ಯ, ಪ್ರಧಾನ ಕಾರ್ಯದರ್ಶಿ ಶೋಭಾ ಗಂಗರಾಜ್ ಮತ್ತು ಖಜಾಂಚಿ ಜಯಂತಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿರುವರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ  ಸಮಾಜದ ಅಧ್ಯಕ್ಷೆ  ಹೇಮಾವತಿ ವಿಶ್ವನಾಥ್ ಕೋರಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಜೋಳ ತುಂಬಿದ ಲಾರಿ ಹರಿದು ದಂಪತಿ ಸಾವು

Image
ಭದ್ರಾವತಿ ತಾಲೂಕಿನ ಬಿ.ಆರ್.ಪಿ ಶಂಕರಘಟ್ಟದ ಹುಣಸೆಕಟ್ಟೆ ಜಂಕ್ಷನ್ ಸಮೀಪ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ದಂಪತಿ ಸಾವು ಕಂಡಿರುವ ಘಟನೆ ನಡೆದಿದೆ.      ಭದ್ರಾವತಿ: ತಾಲೂಕಿನ ಬಿ.ಆರ್.ಪಿ ಶಂಕರಘಟ್ಟದ ಹುಣಸೆಕಟ್ಟೆ ಜಂಕ್ಷನ್ ಸಮೀಪ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ದಂಪತಿ ಸಾವು ಕಂಡಿರುವ ಘಟನೆ ನಡೆದಿದೆ.     ತರೀಕೆರೆ ತಾಲೂಕಿನ ನಿವಾಸಿಗಳಾದ ಶಿವಮೊಗ್ಗದ ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿರುವ ಬಾಬು(೩೧) ಮತ್ತು ಸಾವಿತ್ರಿ (೨೫) ದಂಪತಿ ಅಪಘಾತದಲ್ಲಿ ಸಾವು ಕಂಡಿದ್ದಾರೆ.       ಶಿವಮೊಗ್ಗದಿಂದ ತರೀಕೆರೆಯ ತಮ್ಮ ಮನೆಗೆ ತೆರಳುತ್ತಿದ್ದ ದಂಪತಿಯ ದ್ವಿಚಕ್ರ ವಾಹನದ ಮೇಲೆ ಜೋಳ ತುಂಬಿದ ಲಾರಿ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.      ಶಿವಮೊಗ್ಗದಿಂದ ಜೋಳ ತುಂಬಿದ ಲಾರಿ ಹುಣಸೆಕಟ್ಟೆ ಜಂಕ್ಷನ್ ಸಮೀಪ ಎತ್ತರದ ರಸ್ತೆಯಲ್ಲಿ ಮುಂದೆ ಚಲಿಸಲು ಸಾಧ್ಯವಾಗದೆ ಏಕಾಏಕಿ ಹಿಂದಕ್ಕೆ ಬಂದಿದ್ದು, ಈ ಹಿನ್ನಲೆಯಲ್ಲಿ ಹಿಂಬದಿಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಹರಿದಿದೆ.       ಸುಮಾರು ಒಂದೂವರೆ ವರ್ಷದ ಹಿಂದೆ ಬಾಬು ಮತ್ತು ಸಾವಿತ್ರಿ ಪ್ರೀತಿಸಿ ವಿವಾಹವಾಗಿದ್ದರು. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.   

ಕಾಗೇಹಳ್ಳ ಗ್ರಾಮದ ಸೇತುವೆಗೆ ಉರುಳಿ ಬಿದ್ದ ಖಾಸಗಿ ಬಸ್ : ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Image
ಭದ್ರಾವತಿ ತಾಲೂಕಿನ ಕಾಗೇಹಳ್ಳ ಗ್ರಾಮದ ಸೇತುವೆಗೆ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.             ಭದ್ರಾವತಿ : ತಾಲೂಕಿನ ಕಾಗೇಹಳ್ಳ ಗ್ರಾಮದ ಸೇತುವೆಗೆ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.       ಶ್ರೀ ರೇಣುಕಾಂಬ ಟ್ರಾವೆಲ್ಸ್ ಮಾಲೀಕತ್ವದ ಖಾಸಗಿ ಬಸ್ ದಾವಣಗೆರೆಯಿಂದ ಭದ್ರಾವತಿ ನಗರಕ್ಕೆ ಆಗಮಿಸುತ್ತಿದ್ದಾಗ ಕಾಗೇಹಳ್ಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಮಧ್ಯಾಹ್ನ ಸುಮಾರು ೧.೩೦ರ ಸಮಯದಲ್ಲಿ ಸೇತುವೆಗೆ ಉರುಳಿ ಬಿದ್ದಿದೆ. ಅಪಘಾತ ಸಂದರ್ಭದಲ್ಲಿ ಬಸ್ಸಿನಲ್ಲಿ ಒಟ್ಟು ೩೫ ಪ್ರಯಾಣಿಕರಿದ್ದರು ಎಂದು ಎನ್ನಲಾಗಿದೆ.        ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ  ಗಂಭೀರವಾಗಿ ಗಾಯಗೊಂಡಿರುವ ಸುಮಾರು ೧೭ಕ್ಕೂ ಹೆಚ್ಚು ಪ್ರಯಾಣಿಕರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಾಹಿತಿ ತಿಳಿದ ತಕ್ಷಣ ಗ್ರಾಮಾಂತರ ಠಾಣೆ ಪೊಲೀಸರು ಹಾಗು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾ...

ಮಿತ್ರ ಕಲಾಮಂಡಳಿಯಿಂದ `ವಿಶ್ವ ರಂಗಭೂಮಿ ದಿನ' : ಹೊಸ ಪ್ರತಿಭೆಗಳಿಗೆ ಮಾರ್ಗದರ್ಶನ

Image
ಭದ್ರಾವತಿ ನಗರದ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ 'ಮಿತ್ರ ಕಲಾಮಂಡಳಿ' ವತಿಯಿಂದ ಕಲೆ ಮತ್ತು ಕಲಾವಿದರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಆಶಯದೊಂದಿಗೆ ಈ ಬಾರಿ ವಿಶ್ವ ರಂಗಭೂಮಿ ದಿನ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.       ಭದ್ರಾವತಿ : ನಗರದ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಯಾದ 'ಮಿತ್ರ ಕಲಾಮಂಡಳಿ' ವತಿಯಿಂದ ಕಲೆ ಮತ್ತು ಕಲಾವಿದರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಆಶಯದೊಂದಿಗೆ ಈ ಬಾರಿ ವಿಶ್ವ ರಂಗಭೂಮಿ ದಿನ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.       ಕಾರ್ಯಕ್ರಮದ ಅಧ್ಯಕ್ಷತೆ ಬಸವರಾಜ್ ವಹಿಸಿದ್ದರು. ಉಪಾಧ್ಯಕ್ಷರಾದ ಪರಮೇಶ್ವರಪ್ಪ, ಫ್ರಾನ್ಸಿಸ್, ಪ್ರಸನ್ನ ಕುಮಾರ್ ಹಾಗೂ ಸರೋಜಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.       ಈ ವರ್ಷ ಕಲಾಮಂಡಳಿಗೆ ಸೇರ್ಪಡೆಯಾದ ಹೊಸ ಪ್ರತಿಭೆಗಳನ್ನು ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಹಿರಿಯ ಕಲಾವಿದರು ಹೊಸ ಪ್ರತಿಭೆಗಳಿಗೆ ರಂಗಭೂಮಿಯ ಶಿಸ್ತು ಮತ್ತು ಕಲೆಯ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ "ರಂಗಭೂಮಿ ಕೇವಲ ಮನರಂಜನೆಯ ಸಾಧನವಲ್ಲ, ಅದು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪ್ರತಿಬಿಂಬ" ಎಂದರು.        ಸ್ಥಳೀಯ ರಂಗಕರ್ಮಿಗಳು ಹಾಗು ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಂಬ ಆಶಯ ಗೋಷ್ಠಿಯಲ್ಲಿ ವ್ಯಕ್ತವಾಯಿತು. ಗಾಯಕರಾದ ಡಿ.ಆರ್ ಹರೀಶ್ ಮತ್ತು ಜಿ. ದಿವಾಕ...

ಹೆಡ್‌ಕಾನ್‌ಸ್ಟೇಬಲ್ ಜಿ. ರಾಘವೇಂದ್ರರಿಗೆ ಮುಖ್ಯಮಂತ್ರಿ ಪದಕ : ಉಪವಿಭಾಗದಲ್ಲಿ ಸಂತಸ

Image
ಭದ್ರಾವತಿ : ಹಳೇನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಿ. ರಾಘವೇಂದ್ರ ಅವರಿಗೆ ಈ ಬಾರಿ ಮುಖ್ಯಮಂತ್ರಿಗಳ ಪದಕ ಲಭಿಸಿದ್ದು, ಪೊಲೀಸ್ ಉಪವಿಭಾಗದಲ್ಲಿ ಸಂತಸ ಮನೆ ಮಾಡಿದೆ.  ೨೦೦೭ರಲ್ಲಿ ಕಾನ್‌ಸ್ಟೇಬಲ್ ಹುದ್ದೆಯಲ್ಲಿ ಕರ್ತವ್ಯ ಆರಂಭಿಸಿದ ರಾಘವೇಂದ್ರ ಅವರು ಸಾಗರ ಗ್ರಾಮಾಂತರ, ನಂತರ ೨೦೧೪ರಿಂದ ಭದ್ರಾವತಿ ಗ್ರಾಮಾಂತರ ಮತ್ತು ನ್ಯೂಟೌನ್ ಠಾಣೆ, ಪ್ರಸ್ತುತ ಹಳೇನಗರ ಪೊಲೀಸ್‌ಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.  ೨೦೨೦ರಲ್ಲಿ ಕಾನ್‌ಸ್ಟೇಬಲ್ ಹುದ್ದೆಯಿಂದ ಹೆಡ್ ಕಾನ್‌ಸ್ಟೇಬಲ್ ಹುದ್ದೆಗೆ ಮುಂಬಡ್ತಿ ಪಡೆದುಕೊಂಡಿದ್ದಾರೆ. ೧೯ ವರ್ಷಗಳ ವೃತ್ತಿ ಅವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಇವರಿಗೆ ಈ ಹಿಂದೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಹ ಸನ್ಮಾನಿಸಿ ಗೌರವಿಸಲಾಗಿತ್ತು.  ಮುಖ್ಯಮಂತ್ರಿ ಪದಕ ಪುರಸ್ಕೃತರಾದ ರಾಘವೇಂದ್ರ ಅವರಿಗೆ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಎ.ಜಿ ಕಾರಿಯಪ್ಪ, ಎಸ್. ರಮೇಶ್ ಕುಮಾರ್ ಮತ್ತು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅಭಿನಂದಿಸಿದ್ದಾರೆ.    ಡಿ೨೯-ಬಿಡಿವಿಟಿ೧ ಜಿ. ರಾಘವೇಂದ್ರ  Ananthakumara, Reporter, Kannadaprabha, NDK/31A, Near, Sri Satyasayi Baba school, Newt...

ಮಹಿಳೆ ಅಬಲೆ ಅಲ್ಲ, ಸಬಲೆ : ಸಾಧನೆ ದಾರಿಯಲ್ಲಿ ಪಯಣ

Image
`ಕ್ಷಮೆಯಾಧರಿತ್ರಿ' ನಾಟಕ ಪ್ರದರ್ಶನದಲ್ಲಿ ಪ್ರಸೂತಿ ತಜ್ಞೆ ಡಾ. ವರ್ಷ  ಭದ್ರಾವತಿ ಜನ್ನಾಪುರ, ಅಪರಂಜಿ ಅಭಿನಯ ಶಾಲೆ ಹಾಗು ಕಡದಕಟ್ಟೆ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟದಕ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಲೋಯರ್ ಹುತ್ತಾಕಾಲೋನಿ ಶ್ರೀ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ  ಅಪರಂಜಿ ಶಿವರಾಜ್ ರಚನೆ ಹಾಗು ಸಿ.ಎಚ್ ಪುಷ್ಪಲತಾ ವಿನ್ಯಾಸ ಮತ್ತು ನಿರ್ದೇಶನದ `ಕ್ಷಮೆಯಾಧರಿತ್ರಿ' ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.       ಭದ್ರಾವತಿ: ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ.  ಆಕೆ ಅಬಲೆ ಅಲ್ಲ, ಸಬಲೆಯಾಗಿದ್ದು, ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಸಾಧನೆಗಳನ್ನು ಮಾಡುವ ವಿಶ್ವಾಸವಿದೆ ಎಂದು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ವರ್ಷ ಹೇಳಿದರು.       ಅವರು ಜನ್ನಾಪುರ, ಅಪರಂಜಿ ಅಭಿನಯ ಶಾಲೆ ಹಾಗು ಕಡದಕಟ್ಟೆ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟದಕ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಲೋಯರ್ ಹುತ್ತಾಕಾಲೋನಿ ಶ್ರೀ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಅಪರಂಜಿ ಶಿವರಾಜ್ ರಚನೆ ಹಾಗು ಸಿ.ಎಚ್ ಪುಷ್ಪಲತಾ ವಿನ್ಯಾಸ ಮತ್ತು ನಿರ್ದೇಶನದ `ಕ್ಷಮೆಯಾಧರಿತ್ರಿ' ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ...

ವೇತನವಿಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ಕುವೆಂಪು ವಿ.ವಿ ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರು

Image
ವೇತನ ನೀಡಲು ೩.೮೧ ಕೋ.ರು. ಬೇಕಿದೆ, ಆರ್ಥಿಕ ನೆರವಿಗಾಗಿ ಸರ್ಕಾರದ ಮೊರೆಹೋದ ವಿ.ವಿ ಕುವೆಂಪು ವಿ.ವಿ       ಭದ್ರಾವತಿ: ಬಹುಪಾಲು ಅತಿಥಿ ಉಪನ್ಯಾಸಕರನ್ನು ಅವಲಂಬಿಸಿರುವ ಕುವೆಂಪು ವಿಶ್ವವಿದ್ಯಾಲಯ ಇದೀಗ ಅವರಿಗೆ ವೇತನ ನೀಡಲು ಸಾಧ್ಯವಾಗದೆ ಸರ್ಕಾರದಿಂದ ಆರ್ಥಿಕ ನೆರವು ಎದುರು ನೋಡುತ್ತಿದೆ. ಮಾರ್ಚ್ ತಿಂಗಳು ಮುಕ್ತಾಯಗೊಳ್ಳಲು ಇನ್ನೇನು ಎರಡು ದಿನಗಳು ಬಾಕಿ ಉಳಿದಿವೆ. ಜನವರಿಯಿಂದ ವೇತನವಿಲ್ಲದೆ ಖಾಲಿ ಜೇಬಿನಲ್ಲಿ ಉಪನ್ಯಾಸಕರು ತಮ್ಮ ವೃತ್ತಿ ಮುಂದುವರೆಸುತ್ತಿದ್ದಾರೆ.       ಅತಿಥಿ ಉಪನ್ಯಾಸಕರಿಗೆ ಮತ್ತು ಏಜೆನ್ಸಿ ನೌಕರರಿಗೆ ಕುವೆಂಪು ವಿಶ್ವವಿದ್ಯಾಲಯ ವೇತನ ಪಾವತಿಸುತ್ತಿದ್ದು, ಡಿಸೆಂಬರ್-೨೦೨೫ ಅಂತ್ಯದಿಂದ ಆರ್ಥಿಕ ಸ್ಥಿತಿ ತುಂಬಾ ಹದಗೆಟ್ಟಿದೆ. ಇದರಿಂದಾಗಿ ಇದುವರೆಗೂ ವೇತನ ನೀಡಲು ಸಾಧ್ಯವಾಗಿಲ್ಲ. ಕುವೆಂಪು ವಿಶ್ವವಿದ್ಯಾಲಯ, ಸ್ನಾತಕೋತ್ತರ ಕೇಂದ್ರ ಮತ್ತು ಪದವಿ ಕಾಲೇಜುಗಳಲ್ಲಿ ಒಟ್ಟು ೩೭೭ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗಾಗಿ ಪ್ರತಿ ತಿಂಗಳು ಒಟ್ಟು ೧.೨೭ ಕೋ.ರು. ವೇತನ ಪಾವತಿಸಬೇಕಾಗಿದೆ. ಮಾರ್ಚ್ ತಿಂಗಳು ಸೇರಿ ಒಟ್ಟು ೩.೮೧ ಕೋ.ರು ವೇತನ ಬಾಕಿ ಉಳಿದಿದ್ದು, ಈ ಸಂಬಂಧ ವಿಶ್ವ ವಿದ್ಯಾಲಯ ಸರ್ಕಾರಕ್ಕೆ ಆರ್ಥಿಕ ನೆರವು ನೀಡುವಂತೆ ಪತ್ರ ಬರೆದು ಮನವಿ ಮಾಡಿದೆ. ಆದರೆ ಸರ್ಕಾರ ಇದುವರೆಗೂ ಯಾವುದೇ ಆರ್ಥಿಕ ನೆರವು ನೀಡಿಲ್ಲ. ಅಲ್ಲದೆ ಸಂಶೋಧನಾ ...

ಭಾಷಾವಾರು ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿರುವ ತಿಗಳ ಸಮಾಜ ಒಗ್ಗೂಡಲಿ : ಆರ್. ಮಧುಸೂಧನ್

Image
ಭದ್ರಾವತಿ ತಾಲೂಕು ಪಂಚಾಯಿತಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷ, ಸಹಕಾರಿ ಧುರೀಣ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು.       ಭದ್ರಾವತಿ : ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜ ದೇಶದ ಹಲವು ಭಾಷಾವಾರು ಪ್ರಾಂತ್ಯಗಳಲ್ಲಿ ಅರಿತು ಹಂಚಿ ಹೊಂಗಿದ್ದು, ಇದೀಗ ಈ ಸಮಾಜ ತನ್ನ ಪರಂಪರೆ ಅರಿತುಕೊಳ್ಳುವ ಮೂಲಕ ಸಂಘಟಿತರಾಗಬೇಕಾಗಿದೆ ಎಂದು ಬೆಂಗಳೂರು ಬನ್ನೇರುಘಟ್ಟ, ಸಿ.ಕೆ ಪಾಳ್ಯ ವಿದ್ಯಾಸಂಸ್ಥೆ ವ್ಯವಸ್ಥಾಪಕ ಆರ್. ಮಧುಸೂದನ್ ಹೇಳಿದರು.       ಅವರು ಶನಿವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗು ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.       ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಮಹತ್ವದ ಜೊತೆಗೆ ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜ ಇದೀಗ ತನ್ನ ಪರಂಪರೆ ಅರ್ಥ ಮಾಡಿಕೊಳ್ಳುವ ಸಮಯ ಬಂದಿದೆ. ದೇಶದ ಬಹುದೊಡ್ಡ ಸಮಾಜಗಳಲ್ಲಿ ಇದು ಸಹ ಒಂದಾಗಿದ್ದು, ಈ ಸಮಾಜ ಬೇರೆ ಬೇರೆ ಹೆಸರುಗಳಲ್ಲಿ ಭಾಷಾವಾರು ಪ್ರ...

ಕೆ. ಗೋವಿಂದರಾಜು ನಿಧನ

Image
ಕೆ. ಗೋವಿಂದರಾಜು    ಭದ್ರಾವತಿ: ತಾಲೂಕಿನ ಗುಂಡಪ್ಪ ಕ್ಯಾಂಪ್ (ರಂಗನಾಥಪುರ ) ನಿವಾಸಿ, ಅಲೆಮನೆ ಮಾಲೀಕರು ಹಾಗೂ ಜಮೀನ್ದಾರರು ಕೆ. ಗೋವಿಂದರಾಜು(೭೦) ಶನಿವಾರ ಬೆಳಗಿನ ಜಾವ ನಿಧನ ಹೊಂದಿದರು.    ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಇವರು ಲಯನ್ಸ್ ಕ್ಲಬ್ ಜಿಲ್ಲಾ ಕೋಂ ಆರ್ಡಿನೇಟರ್ ಎನ್. ಶ್ರೀನಿವಾಸನ್‌ರವರ ಮಾವ. ಇವರ ಅಂತ್ಯಕ್ರಿಯೆ ಮಾ.೨೯ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.     ಗೋವಿಂದರಾಜುರವರ ನಿಧನಕ್‌ಕೆ  ಅಲೆಮನೆ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  

ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವ

Image
ಭದ್ರಾವತಿ : ಕ್ಷೇತ್ರಪಾಲಕ, ಪುರಾಣ ಪ್ರಸಿದ್ಧ ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶುಕ್ರವಾರ ರಾಮೋತ್ಸವ ವಿಜೃಂಭಣೆಯಿಂದ ಜರುಗಿತು.  ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಿಂದ ಆರಂಭಗೊಂಡ ರಾಜಬೀದಿ ಉತ್ಸವ ಮೆರವಣಿಗೆ ಹಳೇನಗರ ಭಾಗದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪುನಃ ದೇವಸ್ಥಾನಕ್ಕೆ ಬಂದು ತಲುಪಿತು. ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ರಂಗನಾಥ ಶರ್ಮ ಹಾಗು ಸಹಾಯಕ ಅರ್ಚಕ ಶ್ರೀನಿವಾಸ್ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.  ಮುಜರಾಯಿ ಅಧಿಕಾರಿ ಪ್ರದೀಪ್ ಕುಮಾರ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಆಡಳಿತ ಅಧಿಕಾರಿ ಪ್ರಶಾಂತ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಅಧ್ಯಕ್ಷ ಜಿ. ರಮಾಕಾಂತ್, ಮಂಜುನಾಥ್, ಬಿ.ಆರ್ ಮಹೇಶ್, ಸತೀಶ ಅಯ್ಯರ್, ನಾಗೇಶ್, ಹಾಲಮ್ಮ, ಪರಶುರಾಮ್, ಶೋಭಾ, ಶಿವಾನಂದ, ರಂಗನಾಥ್ ಉಪಸ್ಥಿತರಿದ್ದರು.    ಡಿ೨೭-ಬಿಡಿವಿಟಿ೧ ಕ್ಷೇತ್ರಪಾಲಕ, ಪುರಾಣ ಪ್ರಸಿದ್ಧ ಭದ್ರಾವತಿ ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶುಕ್ರವಾರ ರಾಮೋತ್ಸವ ವಿಜೃಂಭಣೆಯಿಂದ ಜರುಗಿತು.      Ananthakumara, Reporter, Kannadaprabha, NDK/31A, Near, Sri Satyasayi Baba school, Newtown, Bhadravathi:-577301(Tq) Shimoga(...

ರಂಗ ಕಲಾವಿದರು ಬದಲಾವಣೆಗಳಿಗೆ ಹೊಂದಿಕೊಳ್ಳಬೇಕಾಗಿದೆ : ಗಂಗಾನಾಯ್ಕ ಗೊಂದಿ

Image
ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಶುಕ್ರವಾರ ರಂಗ ಕಲಾವಿದರು ತಂಡದಿಂದ ಕಾಗದನಗರದ ವಿಕಸಂ, ಲಲಿತ ಕಲಾ ಸಂಘ, ಶಾಂತಲಾ ಕಲಾ ವೇದಿಕೆ, ಮಿತ್ರ ಕಲಾ ಮಂಡಳಿ ಮತ್ತು ಅಪರಂಜಿ ಅಭಿನಯ ಶಾಲೆ ಹಾಗು ನವೋದಯ ಕಲಾ ಸಂಘದ ಸಹಕಾರದೊಂದಿಗೆ ಆಯೋಜಿಸಲಾಗಿದ್ದ `ವಿಶ್ವ ರಂಗಭೂಮಿ ದಿನಾಚರಣೆ' ಕಾರ್ಯಕ್ರಮದಲ್ಲಿ  ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ನೌಕರ, ವಿಕಸಂ ಹಿರಿಯ ರಂಗಭೂಮಿ ಕಲಾವಿದರಾದ ಡಿ. ರುದ್ರಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ : ಪ್ರಸ್ತುತ ರಂಗ ಚಟುವಟಿಕೆಗಳು ಕ್ಷೀಣಿಸುತ್ತಿದ್ದು, ಇಂತಹ ಕಾಲಘಟ್ಟದಲ್ಲಿ ರಂಗ ಕಲಾವಿದರು ಬದಲಾವಣೆಗಳಿಗೆ ಹೊಂದಿಕೊಳ್ಳಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಹೇಳಿದರು.       ಅವರು ಶುಕ್ರವಾರ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ರಂಗ ಕಲಾವಿದರು ತಂಡದಿಂದ ಕಾಗದನಗರದ ವಿಕಸಂ, ಲಲಿತ ಕಲಾ ಸಂಘ, ಶಾಂತಲಾ ಕಲಾ ವೇದಿಕೆ, ಮಿತ್ರ ಕಲಾ ಮಂಡಳಿ ಮತ್ತು ಅಪರಂಜಿ ಅಭಿನಯ ಶಾಲೆ ಹಾಗು ನವೋದಯ ಕಲಾ ಸಂಘದ ಸಹಕಾರದೊಂದಿಗೆ ಆಯೋಜಿಸಲಾಗಿದ್ದ `ವಿಶ್ವ ರಂಗಭೂಮಿ ದಿನಾಚರಣೆ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ಎಲ್ಲಾ ಕ್ಷೇತ್ರಗಳಲ್ಲೂ ಇಂದು ಬದಲಾವಣೆಗಳಾಗುತ್ತಿವೆ. ಅಭಿನಯದ ಮೂಲ ನೆಲೆ ರಂಗಭೂಮಿಯಾಗಿದ್ದು, ಈ ಮೂಲಕ ಗುರುತ...

ಸಮಾಜ ಸೇವಕ, ಕನ್ನಡ ಅಭಿಮಾನಿ ಮುನೀರ್ ಅಹಮದ್ ಕುಂಸಿ ನಿಧನ

Image
ಮುನೀರ್ ಅಹಮದ್ ಕುಂಸಿ       ಭದ್ರಾವತಿ : ನಗರದ ಅನ್ವರ್ ಕಾಲೋನಿ ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ, ಸಮಾಜ ಸೇವಕರು, ಅಪ್ಪಟ ಕನ್ನಡ ಅಭಿಮಾನಿ ಮುನೀರ್ ಅಹಮದ್ ಕುಂಸಿ(೭೪) ಗುರುವಾರ ನಿಧನ ಹೊಂದಿದರು.       ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ಕುಂಸಿಯಲ್ಲಿ ನಡೆಯಲಿದ್ದು, ನಗರದ ಅನ್ವರ್ ಕಾಲೋನಿಯಲ್ಲಿ ವಾಸವಿದ್ದ ಮುನೀರ್ ಅವರು ಕೆಲವು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.  ಪ್ರಗತಿಪರ ಸಂಘಟನೆಗಳ ಒಕ್ಕೂಟದಲ್ಲಿ ಗುರುತಿಸಿಕೊಂಡು ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು.       ಗಣ್ಯರಿಂದ ಸಂತಾಪ:       ಒಬ್ಬ ಅಪ್ಪಟ ಕನ್ನಡ ಅಭಿಮಾನಿಯಾಗಿ, ಕವಿಯಾಗಿ ಮತ್ತು ಸಾಹಿತಿಯಾಗಿ ಕನ್ನಡ ಭಾಷೆ ಹಾಗೂ ಸಾಹಿತ್ಯಕ್ಕೆ  ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಭದ್ರಾವತಿ ಮತ್ತು ಶಿವಮೊಗ್ಗ ಭಾಗದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಲೋಕದ ಕೊಂಡಿಯಾಗಿದ್ದರು. ನಗರದಲ್ಲಿ ಉಸ್ಮಾನಿಯಾ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿಯಾಗಿ ನೂರಾರು ಜನೋಪಕಾರಿ ಕೆಲಸಗಳಿಗೆ ಅವರು ಭದ್ರಾ ಬುನಾದಿ ಹಾಕಿಕೊಟ್ಟಿದ್ದರು. ಇವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಮತ್ತು ಸಮಾಜಸೇವೆಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ...

ಮಾ.೨೭ರಂದು ವಿಶ್ವ ರಂಗಭೂಮಿ ದಿನಾಚರಣೆ : ಹಿರಿಯ ರಂಗ ಕಲಾವಿದ ಡಿ. ರುದ್ರಯ್ಯರಿಗೆ ಆಹ್ವಾನ

Image
ಭದ್ರಾವತಿಯಲ್ಲಿ ಕಲಾವಿದರು ತಂಡದಿಂದ ಮಾ.೨೭ರ ಶುಕ್ರವಾರ ಆಯೋಜಿಸಲಾಗಿರುವ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಲು ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ನೌಕರ, ವಿಕಸಂ ಹಿರಿಯ ರಂಗಭೂಮಿ ಕಲಾವಿದರಾದ ಡಿ. ರುದ್ರಯ್ಯ ಅವರನ್ನು ಆಹ್ವಾನಿಸಲಾಯಿತು. ಹಿರಿಯ ರಂಗಭೂಮಿ ಕಲಾವಿದರಾದ ಕೆ.ಎಸ್ ರವಿಕುಮಾರ್, ಕಮಲಕರ್, ಬಿ. ಚಿದಾನಂದ ಮತ್ತು ತಮಟೆ ಜಗದೀಶ್ ಉಪಸ್ಥಿತರಿದ್ದರು.       ಭದ್ರಾವತಿ : ನಗರದಲ್ಲಿ ಸುಸ್ಸಜ್ಜಿತ ರಂಗಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಸಲು ಎಲ್ಲಾ ಪ್ರಕಾರದ ಕಲಾವಿದರನ್ನು ಒಗ್ಗೂಡಿಸಿ ಕಳೆದ ಕೆಲವು ತಿಂಗಳುಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ರಂಗ ಕಲಾವಿದರು ತಂಡ ಈ ಬಾರಿ ವಿಶೇಷವಾಗಿ ಮಾ.೨೭ರ ಶುಕ್ರವಾರ ಬೆಳಿಗ್ಗೆ ೧೦.೩೦ಕ್ಕೆ ವಿಶ್ವ ರಂಗಭೂಮಿ ದಿನಾಚರಣೆ ಹಮ್ಮಿಕೊಂಡಿದೆ.       ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಕಾಗದನಗರದ ವಿಕಸಂ, ಲಲಿತ ಕಲಾ ಸಂಘ, ಶಾಂತಲಾ ಕಲಾ ವೇದಿಕೆ, ಮಿತ್ರ ಕಲಾ ಮಂಡಳಿ ಮತ್ತು ಅಪರಂಜಿ ಅಭಿನಯ ಶಾಲೆ ಹಾಗು ನವೋದಯ ಕಲಾ ಸಂಘದ ಸಹಕಾರದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ನೌಕರ, ವಿಕಸಂ ಹಿರಿಯ ರಂಗಭೂಮಿ ಕಲಾವಿದರಾದ ಡಿ. ರುದ್ರಯ್ಯ ಉದ್ಘಾಟಿಸಲಿದ್ದಾರೆ.       ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಮುಖ್ಯ ಅ...

ಗಂಗೂರು ಶ್ರೀ ಉದ್ದಾಮ ಕ್ಷೇತ್ರದಲ್ಲಿ ಮಾ.೨೮ರವರೆಗೆ ೩ ದಿನಗಳ ಕಾಲ ವಾರ್ಷಿಕ ಜಾತ್ರಾ ಮಹೋತ್ಸವ

Image
ಭದ್ರಾವತಿ ತಾಲೂಕಿನ ಗಂಗೂರಿನ ಪುರಾಣ ಪ್ರಸಿದ್ದ ಶ್ರೀ ಉದ್ದಾಮ ಕ್ಷೇತ್ರದ ಶ್ರೀ ಉದ್ದಾಂಜನೇಯ ಸ್ವಾಮಿ       ಭದ್ರಾವತಿ : ತಾಲೂಕಿನ ಗಂಗೂರಿನ ಪುರಾಣ ಪ್ರಸಿದ್ದ ಶ್ರೀ ಉದ್ದಾಮ ಕ್ಷೇತ್ರದ ಶ್ರೀ ಉದ್ದಾಂಜನೇಯ ಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವ ಮಾ.೨೬ ರಿಂದ ೨೮ರವರೆಗೆ ೩ ದಿನಗಳ ಕಾಲ ಜರುಗಲಿದೆ.       ಮಾ.೨೬ರ ಗುರುವಾರ ಬೆಳಗ್ಗೆ ೮-೩೦ಕ್ಕೆ ಕುಡಿಪೂಜೆ, ಧ್ವಜಾರೋಹಣ, ಉದ್ದಾಮನಿಗೆ ಪಂಚಾಮೃತ ರುದ್ರಾಭಿಷೇಕ, ಗಣಪತಿ ಪುಣ್ಯಾಹ ನಾಂದಿ, ಮಹಾಸಂಕಲ್ಪ, ಅಷ್ಟದ್ರವ್ಯ ಮಹಾ ಗಣಪತಿಹೋಮ, ಪುರಸ್ಸರ ರುದ್ರಹೋಮ, ೧೦೮ ದಂಪತಿಗಳಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಕೆಂಚಾಂಬಿಕ ಮೂಲಮಂತ್ರ ಹೋಮ ನಂತರ ಉದ್ದಾಮನಿಗೆ ವಿವಿಧ ಹಣ್ಣುಗಳಿಂದ ಅಲಂಕಾರ ನಡೆಯಲಿದೆ.  ಮಧ್ಯಾಹ್ನ ಮಹಾಮಂಗಳಾರತಿ, ಮಹಾಪ್ರಸಾದ ವಿನಿಯೋಗ ಸಂಜೆ ಮಂಡಲಪೂಜೆ, ವಾಸ್ತುರಾಕ್ಲೋಘ್ನ ಸುದರ್ಶನಹೋಮ, ಲಕ್ಷ್ಮೀನೃಸಿಂಹ ಹೋಮ, ದಿಗ್ಬಲಿ, ಪ್ರಾಕಾರೋತ್ಸವ, ಅಷ್ಟಾವ ಧಾನ ಸೇವೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಜರುಗಲಿವೆ.       ಮಾ.೨೭ರ ಶುಕ್ರವಾರ ಬೆಳಗ್ಗೆ ೬.೩೦ಕ್ಕೆ ಬೆಳಿಗ್ಗೆ ೧೦೦೮ ಕಳಶಗಳ ಗಂಗಾಪೂಜೆ, ಗಂಗಾ ಕಳಶಗಳ ಮೆರವಣಿಗೆ, ಕುಂಭಾಭಿಷೇಕ, ಮೋದಕ ಅಥರ್ವಶೀರ್ಷ ಗಣಪತಿ ಹೋಮ, ರಾಮತಾರಕ ಹೋಮ, ಬನ್ನಿಮಹಾಕಾಳಿ ಹೋಮ, ನಂತರ ಉದ್ದಾಮನಿಗೆ ವಿವಿಧ ಹೂವುಗಳಿಂದ ಅಲಂಕಾರ, ಮಧ್ಯಾಹ್ನ ಮಹಾಮಂ...

ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಎಸ್. ಶ್ವೇತ ಆಯ್ಕೆ

Image
ಸುಮಾರು ೩೦ ವರ್ಷಗಳ ಹಿಂದೆ ಸ್ಥಾಪನೆಯಾದ ನಗರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಥಮ ಮಹಿಳಾ ಅಧ್ಯಕ್ಷರಾಗಿ ನ್ಯಾಯವಾದಿ ಎಸ್. ಶ್ವೇತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಭದ್ರಾವತಿ : ಸುಮಾರು ೩೦ ವರ್ಷಗಳ ಹಿಂದೆ ಸ್ಥಾಪನೆಯಾದ ನಗರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಥಮ ಮಹಿಳಾ ಅಧ್ಯಕ್ಷರಾಗಿ ನ್ಯಾಯವಾದಿ ಎಸ್. ಶ್ವೇತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ಮಂಗಳವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಪುರೋಹಿತರಾದ ಗುರುಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಇಲಾಖೆ ಅಧಿಕಾರಿ ಸುಮ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ನಿರ್ದೇಶಕರಾದ ಜಯತೀರ್ಥ, ಮಧುಕೇಶ, ನಿಖಿಲ್, ಪ್ರಗತಿಪ್ರಸಾದ್, ಸಂತೊಷ್, ಶೇಷಾಚಲ ಮತ್ತು ಸತೀಶ್ ಅಯ್ಯರ್ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಸೊಸೈಟಿ ಕಾರ್ಯದರ್ಶಿಗಳಾದ ಎಂ.ವಿ ಶಶಿಧರ, ವಾಣಿ ಉಪಸ್ಥಿತರಿದ್ದರು.       ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಅಭಿನಂದಿಸಿದ್ದಾರೆ. ನೂತನ ಅಧ್ಯಕ್ಷೆ ಎಸ್. ಶ್ವೇತ ಅವರು ಪ್ರಸ್ತುತ ತಾಲೂಕು ವಕೀಲರ ಸಂಘದ ಖಜಾಂಚಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ವೃತ್ತಿಯ ಜೊತೆಗೆ ಸೇವಾ ಮನೋಭಾವನೆ ಮುಖ್ಯ : ಡಾ. ನರೇಂದ್ರ ಭಟ್

Image
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ಪತ್ರಕರ್ತರು ಹಾಗು ಅವರ ಕುಟುಂಬ ವರ್ಗದವರಿಗೆ ಬುಧವಾರ ಆಯೋಜಿಸಲಾಗಿದ್ದ ಉಚಿತ ನೇತ್ರಾ ತಪಾಸಣೆ ಶಿಬಿರ ನಗರದ ಹಿರಿಯ ವೈದ್ಯ ಡಾ. ನರೇಂದ್ರ ಭಟ್ ಉದ್ಘಾಟಿಸಿದರು.        ಭದ್ರಾವತಿ: ಪತ್ರಕರ್ತರ ಸೇವೆ ಸಮಾಜಕ್ಕೆ ಅಗತ್ಯವಾಗಿದ್ದು, ಅವರು ಸಲ್ಲಿಸುತ್ತಿರುವ ಸೇವೆ ಶಾಶ್ವತವಾಗಿ ಉಳಿಯಲಿದೆ. ಅವರ ಆರೋಗ್ಯ ಕಾಳಜಿಗೆ ನಾವೆಲ್ಲರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ನೇತ್ರಾ ತಪಾಸಣೆ ಶಿಬಿರ ಹೆಚ್ಚು ಸಹಕಾರಿಯಾಗಿದೆ ಎಂದರು ನಗರದ ಹಿರಿಯ ವೈದ್ಯ ಡಾ. ನರೇಂದ್ರ ಭಟ್ ಹೇಳಿದರು.       ಅವರು ಬುಧವಾರ ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಶಂಕರ ಕಣ್ಣಿನ ಆಸ್ಪತ್ರೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ಪತ್ರಕರ್ತರು ಹಾಗು ಅವರ ಕುಟುಂಬ ವರ್ಗದವರಿಗೆ ಆಯೋಜಿಸಲಾಗಿದ್ದ ಉಚಿತ ನೇತ್ರಾ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.       ಸಮಾಜದಲ್ಲಿ ಪತ್ರಕರ್ತರು ಸಹ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರಾಗಿದ್ದು, ಸದಾ ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ವೃತ್ತಿಯ ಜೊತೆಗೆ ಸೇವಾ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕಗೊಳ್ಳುತ್...

ಮಹಿಳೆಯರು ತಮ್ಮ ರಕ್ಷಣೆಯೊಂದಿಗೆ ಪ್ರಗತಿ, ಸುರಕ್ಷತೆ ಮತ್ತು ಹಕ್ಕುಗಳಿಗಾಗಿ ಒಟ್ಟಾಗಿ ಕೆಲಸ ಮಾಡಿ : ಅನನ್ಯ ಶಾಸ್ತ್ರಿ

Image
ಭದ್ರಾವತಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಪ್ರದಾನ ಸಮಾರಂಭ ನೂತನವಾಗಿ ನ್ಯಾಯಧೀಶರಾಗಿ ಆಯ್ಕೆಯಾಗಿರುವ ಅನನ್ಯ ಶಾಸ್ತ್ರಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಪ್ರಸ್ತುತ ಮಹಿಳೆ ಇಂದು ತನ್ನನ್ನು ರಕ್ಷಿಸಿಕೊಳ್ಳುವ ಜೊತೆಗೆ ಸಮಾನತೆಯೊಂದಿಗೆ ಪ್ರಗತಿ ಸಾಧಿಸಬೇಕಾಗಿದೆ ಎಂದು ನೂತನವಾಗಿ ನ್ಯಾಯಧೀಶರಾಗಿ ಆಯ್ಕೆಯಾಗಿರುವ ಅನನ್ಯ ಶಾಸ್ತ್ರಿ ಹೇಳಿದರು.       ಅವರು ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.       ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಲಿಂಗ ಸಮಾನತೆಗಾಗಿ ಉದಾರತೆ, ಸಹಯೋಗ ಮತ್ತು ಜ್ಞಾನ ಹಂಚಿಕೆಗೆ ಒತ್ತು ನೀಡುತ್ತದೆ. ಮಹಿಳೆಯರ ಪ್ರಗತಿ, ಸುರಕ್ಷತೆ ಮತ್ತು ಹಕ್ಕುಗಳಿಗಾಗಿ ಒಟ್ಟಾಗಿ ಕೆಲಸ ಮಾಡುವ ಸಂದೇಶ ಸಾರುತ್ತದೆ. ಇದನ್ನು ನಾವುಗಳು ಅರ್ಥ ಮಾಡಿಕೊಳ್ಳಬೇಕಾಗಿದೆ. ಪ್ರತಿಯೊಬ್ಬರು ತಮ್ಮ ಕುಟುಂಬಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ...

ತನ್ನದೇ ಆದ ಸಮಾಜ ರೂಪಿಸಿಕೊಳ್ಳುವ ದಾರಿಯಲ್ಲಿ ಮಹಿಳೆ ಯಶಸ್ವಿ ಪಯಣ : ಬಿ.ಕೆ ಮೋಹನ್

Image
ಭದ್ರಾವತಿ ನಗರಸಭೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾನೆ ಉಪನಿರ್ದೇಶಕಿ ಸಾವಿತ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ: ಮಹಿಳೆಯರು ಇಂದು ಸಮಾಜದ ಬಹುತೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಪುರುಷರನ್ನು ಮೀರಿಸುವ ಮೂಲಕ ತನ್ನದೇ ಆದ ಸಮಾಜ ರೂಪಿಸಿಕೊಳ್ಳುವ ದಾರಿಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾಳೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ಅವರು ಮಂಗಳವಾರ ನಗರಸಭೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.       ಪ್ರಸ್ತುತ ಮಹಿಳೆಯರು ಸಮಾಜದಲ್ಲಿ ಇನ್ನೂ ಹೆಚ್ಚು ಸಂಘಟಿತಗೊಳ್ಳುವ ಅಗತ್ಯವಿದೆ. ಮಹಿಳೆಯರು ಸಂಘಟಿತರಾಗಿ ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಚಿಂತಿಸಬೇಕಾಗಿದೆ. ಈ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.  ಜಿಲ್ಲಾ ಖಜಾನೆ ಉಪನಿರ್ದೇಶಕಿ ಸಾವಿತ್ರಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮಹಿಳೆಯರನ್ನು ನೋಡುವ ದೃಷ್ಟಿಕೋನ ಯಾವುದೇ ರೀತಿ ಇರಲಿ. ನಾವು ನಮ್ಮ ಗುರಿ ತಲುಪುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಸರ್ಕಾರ ಮಹಿಳೆಗಾಗಿ ರೂಪಿಸಿರುವ ಯೋಜನೆಗಳ...

ಅಭ್ಯುದಯ ಸೇವಾ ಟ್ರಸ್ಟ್ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಮುಂಚೂಣಿಗೆ ಬರಲಿ : ಬಿ.ವೈ ರಾಘವೇಂದ್ರ

Image
ಭದ್ರಾವತಿ ತಾಲೂಕಿನ ಗೊಂದಿ ಆಶ್ರಮದಲ್ಲಿ  ವಿವಿಧ ಮಠ-ಮಂದಿರಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ಸೋಮವಾರ ಸಂಸದ ಬಿ.ವೈ ರಾಘವೇಂದ್ರ, ಕಜಂಪಾಡಿ ಸುಬ್ರಮಣ್ಯ ಭಟ್ ಸೇರಿದಂತೆ ಇನ್ನಿತರರು ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆಗೊಳಿಸಿದರು.        ಭದ್ರಾವತಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ `ಅಭ್ಯುದಯ ಸೇವಾ ಟ್ರಸ್ಟ್' ಶಿಕ್ಷಣ, ಸಂಸ್ಕೃತಿ ಮತ್ತು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.       ಅವರು ಸೋಮವಾರ ತಾಲೂಕಿನ ಗೊಂದಿ ಆಶ್ರಮದಲ್ಲಿ  ವಿವಿಧ ಮಠ-ಮಂದಿರಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುವಂತಾಗಲಿ. ಈ ಮೂಲಕ ಟ್ರಸ್ಟ್ ಸ್ಥಾಪನೆ ಸಾರ್ಥಕತೆಯಾಗಲಿ ಎಂದು ಆಶಿಸಿದರು.       ಚಿತ್ರದುರ್ಗ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ ಮತ್ತು ಶ್ರೀ ಸರ್ದಾರ್ ಸೇವಾಲಾಲ್ ಮಠದ ಪೀಠಾಧ್ಯಕ್ಷರಾದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮತ್ತು ತಾಯಿ ಮುಕ್ತಾನಂದಮಯಿ ಮಾತಾಜಿ ಹಾಗು ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಸಂಸ್ಥಾನ ಶಿವಮೊಗ್ಗ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜ...

ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಮಾಗದರ್ಶನ ನೀಡಿ ಜಾಗೃತಿಗೊಳಿಸುವ ಅಗತ್ಯವಿದೆ : ಕುಪೆಂದ್ರ ಆಯನೂರು

Image
ಏ.5ರಂದು ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮ, ಸಂಸದ ಬಿ.ವೈ ರಾಘವೇಂದ್ರ ಉದ್ಘಾಟನೆ  ಭದ್ರಾವತಿ ಪತ್ರಿಕಾಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಕುಪೇಂದ್ರ ಆಯನೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.       ಭದ್ರಾವತಿ: ರಾಜ್ಯದಲ್ಲಿ ಹಲವಾರು ಕಾರ್ಮಿಕ ಸಂಘಟನೆಗಳಿದ್ದರೂ ಸಹ ಅಸಂಘಟಿತ ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಈ ಹಿನ್ನಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಜಾಗೃತಿಗೊಳಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ, ಹಿರಿಯ ಕಾರ್ಮಿಕ ಮುಖಂಡ ಕುಪೇಂದ್ರ ಆಯನೂರು ಹೇಳಿದರು.  ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ಲಭಿಸುತ್ತಿಲ್ಲ.  ಅಲ್ಲದೆ ಅಸಂಘಟಿತ ಕಾರ್ಮಿಕರು ಬಹಳಷ್ಟು ಶೋಷಣೆಗೆ ಒಳಗಾಗುತ್ತಿದ್ದಾರೆ. ಇವರ ಪರವಾಗಿ ಹೋರಾಡಲು ಬಲಿಷ್ಠವಾದ ಸಂಘಟನೆ ಅಗತ್ಯವಿದೆ. ಇದನ್ನು ಮನಗಂಡು ಈ ಸಂಘಟನೆಯನ್ನು ಹುಟ್ಟು ಹಾಕಲಾಗಿದೆ. ಈ ಸಂಘಟನೆ ಮೂಲಕ ರಾಜ್ಯಾದ್ಯಂತ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು.  ಸಂಘದ ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ ಮಾತನಾಡಿ, ಜಿಲ್ಲೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಜಾಗೃತಿ ಮೂ...

ನೂತನ ಜಾಹೀರಾತು ನೀತಿ ತಕ್ಷಣ ಸ್ಥಗಿತಗೊಳಿಸಿ, ಮರುಪರಿಶೀಲಿಸಿ : ಗಂಗಾನಾಯ್ಕ ಗೊಂದಿ

Image
ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆ ಮೇರೆಗೆ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಪಾಲಿಗೆ ಮರಣ ಶಾಸನದಂತಿರುವ ನೂತನ ಜಾಹೀರಾತು ನೀತಿ ೨೦೨೬ರ ಜಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಮರು ಪರಿಶೀಲಿಸುವಂತೆ ಭದ್ರಾವತಿಯಲ್ಲಿ ತಾಲೂಕು ಘಟಕದ ವತಿಯಿಂದ ಸೋಮವಾರ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.     ಭದ್ರಾವತಿ: ಕರ್ನಾಟಕ ರಾಜ್ಯ ಸರಕಾರವು ಇತ್ತೀಚೆಗೆ ತನ್ನ ಸಂಪುಟ ಸಭೆಯಲ್ಲಿ ಅನುಮೋದಿಸಿರುವ ನೂತನ ಜಾಹೀರಾತು ನೀತಿ ೨೦೨೬ ಸಣ್ಣ ಪತ್ರಿಕೆಗಳ ಪಾಲಿಗೆ ಮರಣ ಶಾಸನವಾಗಿದ್ದು, ಇದು ಯಥಾವತ್ತಾಗಿ ಜಾರಿಗೆ ಬಂದಲ್ಲಿ ಸ್ಥಳೀಯ ಪತ್ರಿಕೆಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುವ ಗಂಭೀರ ಅಪಾಯವನ್ನು ಎದುರಿಸುವಂತಾಗಿದೆ. ಈ ಹಿನ್ನಲೆಯಲ್ಲಿ ನೂತನ ಜಾಹೀರಾತು ನೀತಿ ೨೦೨೬ರ ಜಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಮರು ಪರಿಶೀಲಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಗಂಗಾನಾಯ್ಕ ಗೊಂದಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದರು.       ಅವರು ಸೋಮವಾರ ರಾಜ್ಯ ಸಂಘದ ಸೂಚನೆ ಮೇರೆಗೆ  ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಪಾಲಿಗೆ ಮರಣ ಶಾಸನದಂತಿರುವ ನೂತನ ಜಾಹೀರಾತು ನೀತಿ  ೨೦೨೬ರ ಜಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಮರು ಪರಿ...

ಮಾ.೨೩ರಂದು ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆ

Image
     ಭದ್ರಾವತಿ: ತಾಲೂಕಿನ ಗೊಂದಿ ಆಶ್ರಮದ ಅಭ್ಯುದಯ ಸೇವಾ ಟ್ರಸ್ಟ್ ಲೋಕಾರ್ಪಣೆ ಮಾ.೨೩ರ ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ವಿವಿಧ ಮಠ-ಮಂದಿರಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ನಡೆಯಲಿದೆ.       ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಚಿತ್ರದುರ್ಗ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿ, ಕ್ಷೇತ್ರದ ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗ ಶ್ರೀ ಸರ್ದಾರ್ ಸೇವಾಲಾಲ್ ಮಠ ಪೀಠಾಧ್ಯಕ್ಷರಾದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮತ್ತು ತಾಯಿ ಮುಕ್ತಾನಂದಮಯಿ ಮಾತಾಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.       ಸಂಸದ ಬಿ.ವೈ ರಾಘವೇಂದ್ರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ಕಜಂಪಾಡಿ ಸುಬ್ರಮಣ್ಯ ಭಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಅಭ್ಯುದಯ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. 

ಮಾ.೨೪ರಂದು ಮಹಿಳಾ ದಿನಾಚರಣೆ

Image
     ಭದ್ರಾವತಿ: ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ಮಾ.೨೪ರ ಮಂಗಳವಾರ ಬೆಳಿಗ್ಗೆ ೧೧.೩೦ಕ್ಕೆ ನಗರದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಹಿಳಾ ದಿನಾಚರಣೆ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಅಧ್ಯಕ್ಷತೆವಹಿಸಲಿದ್ದಾರೆ.       ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ನಗರದ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ. 

``ಉದ್ದಾಂಜನೇಯ'' ಆಲ್ಬಂ ಸಾಂಗ್ ಶೀರ್ಷಿಕೆ ಅನಾವರಣ

Image
ಗೀರಿಶ್ ಮಲ್ನಾಡ್‌ರವರ ಸಾರಥ್ಯದಲ್ಲಿ ನಿತ್ಯೋತ್ಸವ ಮೂವೀಸ್‌ರವರ ಮೂರನೇ ಕಾಣಿಕೆಯಾಗಿ ಉದ್ದಾಂಜನೇಯ ಸ್ವಾಮಿಯನ್ನು ಕುರಿತು ಸಾಹಿತ್ಯ ಮತ್ತು ರಾಗ ಸಂಯೋಜನೆ ಮಾಡಿರುವ ಹಾಗು ಶ್ರೀ ಕ್ಷೇತ್ರದ ಪರಿಸರದಲ್ಲಿ ಚಿತ್ರೀಕರಣಗೊಳಿಸಲಾಗಿರುವ `ಉದ್ದಾಂಜನೇಯ' ಹೆಸರಿನಲ್ಲಿ ಯೂಟ್ಯೂಬ್ ಚಾನಲ್‌ಗಾಗಿ ನಿರ್ಮಿಸಿರುವ ಆಲ್ಬಂ ಸಾಂಗ್ ಮಾ.೨೬ರಂದು ಬಿಡುಗಡೆಗೊಳಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆಲ್ಬಂ ಸಾಂಗ್ ಶೀರ್ಷಿಕೆಯನ್ನು ಭದ್ರಾವತಿ ಹಳೇನಗರದ ಡಾ. ಪುನೀತ್ ರಾಜಕುಮಾರ್ ರಸ್ತೆಯ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅನಾವರಣಗೊಳಿಸಲಾಯಿತು.       ಭದ್ರಾವತಿ: ಕ್ಷೇತ್ರದ ಪುರಾಣ ಪ್ರಸಿದ್ದ ಗಂಗೂರಿನ ಉದ್ದಾಂಜನೇಯ ಸ್ವಾಮಿ ಕುರಿತ ಇತಿಹಾಸ ಬಹುತೇಕ ಮಂದಿಗೆ ತಿಳಿದಿದ್ದು, ಈ ಬಾರಿ ಶ್ರೀ ಕ್ಷೇತ್ರದ ವಾರ್ಷಿಕೋತ್ಸವ ಮಹೋತ್ಸವದ ಹಿನ್ನಲೆಯಲ್ಲಿ ನಿತ್ಯೋತ್ಸವ ಮೂವೀಸ್‌ರವರ ಯೂಟ್ಯೂಬ್ ಚಾನಲ್‌ಗಾಗಿ ``ಉದ್ದಾಂಜನೇಯ'' ಹೆಸರಿನಲ್ಲಿ ನಿರ್ಮಿಸಿರುವ ಆಲ್ಬಂ ಸಾಂಗ್ ಬಿಡುಗಡೆಗೊಳಿಸಲಾಗುತ್ತಿದೆ.       ಗೀರಿಶ್ ಮಲ್ನಾಡ್‌ರವರ ಸಾರಥ್ಯದಲ್ಲಿ ನಿತ್ಯೋತ್ಸವ ಮೂವೀಸ್‌ರವರ ಮೂರನೇ ಕಾಣಿಕೆಯಾಗಿ ಉದ್ದಾಂಜನೇಯ ಸ್ವಾಮಿಯನ್ನು ಕುರಿತು ಸಾಹಿತ್ಯ ಮತ್ತು ರಾಗ ಸಂಯೋಜನೆ ಮಾಡಿರುವ ಹಾಗು ಶ್ರೀ ಕ್ಷೇತ್ರದ ಪರಿಸರದಲ್ಲಿ ಚಿತ್ರೀಕರಣಗೊಳಿಸಲಾಗಿರುವ `ಉದ್ದಾಂಜನೇಯ' ಹೆಸರಿನಲ್ಲಿ ಯೂಟ್ಯೂಬ್ ಚಾನಲ್‌ಗಾಗಿ ನಿರ್ಮಿಸಿರ...

ವಿಜೃಂಭಣೆಯಿಂದ ಜರುಗಿದ `ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟ ಮಹೋತ್ಸವ'

Image
ಭದ್ರಾವತಿ ತಾಲೂಕಿನ ಮಾವಿನಕೆರೆ ಸಂತ ಕಿರಿಯ ಪುಷ್ಪ ತೆರೇಸಾ ದೇವಾಲಯದ ವತಿಯಿಂದ ಶನಿವಾರ ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟದ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.       ಭದ್ರಾವತಿ : ತಾಲೂಕಿನ ಮಾವಿನಕೆರೆ ಸಂತ ಕಿರಿಯ ಪುಷ್ಪ ತೆರೇಸಾ ದೇವಾಲಯದ ವತಿಯಿಂದ ಶನಿವಾರ ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟದ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.       ಬೆಳಗ್ಗೆ ೧೦ ಗಂಟೆಗೆ ಜೀವಂತ ಶಿಲುಬೆ ಹಾದಿಯ ಮೂಲಕ ಯೇಸುಕ್ರಿಸ್ತರನ್ನು ಶಿಲುಬೆಗೇರಿಸಿದ ಐತಿಹಾಸಿಕ ದೃಶ್ಯವನ್ನು ಮರು ಸೃಷ್ಟಿಸಲಾಯಿತು. ಈ ಮೂಲಕ ಧಾರ್ಮಿಕತೆಯ ಮಹತ್ವ ಭಕ್ತರಿಗೆ ತಿಳಿಸಲಾಯಿತು.       ಯೇಸು ಕ್ರಿಸ್ತರನ್ನು ಶಿಲುಬೆಗೇರಿಸುವ ಮತ್ತು ಗೋಲ್ಗತ್ತ ಬೆಟ್ಟವನ್ನು ಪ್ರವೇಶಿಸುವ ಮೊದಲು ಚಿತ್ರಹಿಂಸೆ ನೀಡುತ್ತಾ ಎಳೆದೊಯ್ಯುವ ಪಾಡು, ಮರಣದ ದೃಶ್ಯವನ್ನು ಮಾವಿನ ಕೆರೆಯ ಬೀದಿಗಳಲ್ಲಿ ಪಾತ್ರಧಾರಿಗಳಿಂದ ಮರು ಸೃಷ್ಟಿ ಮಾಡಲಾಯಿತು. ಪಯಣದ ಉದ್ದಕ್ಕೂ ರಸ್ತೆಯ ಅಕ್ಕ-ಪಕ್ಕದಲ್ಲಿ ಏಸುಕ್ರಿಸ್ತರಿಗೆ ನೀಡಿದ ಚಿತ್ರಹಿಂಸೆ ನೆನಪಿಸುವ ವಿವಿಧ ದೃಶ್ಯಗಳ ಫ್ಲೆಕ್ಸ್ ಹಾಕಲಾಗಿತ್ತು. ಕಬಳೆ ಧರ್ಮ ಕೇಂದ್ರದ ಧರ್ಮ ಗುರುಗಳಾದ ಫಾದರ್ ರೋಮನ್ ಪಿಂಟೋರವರಿಂದ ಮಾವಿನಕೆರೆಯ ಬೆಟ್ಟದ ಮೇಲೆ ೧೪ ಸ್ಥಳದ ಶಿಲುಬೆ ಹಾದಿ ಪೂಜಾ ವಿಧಿ-ವಿಧಾನ ಮತ್ತು ಶಿಲುಬೆಗೆ ಗೌರವ ಸನ್ಮಾನ ನೆರವೇರಿಸಲಾಯಿತು. ನಂತರ ಅನ್ನ ಸಂರ್ಪಣೆ ನೆರವೇರಿಸಲ...

ಗೀತಾ ಸತೀಶ್ ಗೆ ಶಿವಮೊಗ್ಗ ಜಿಲ್ಲಾ ಕ್ಷತ್ರೀಯ ಮರಾಠ ಸಮಾಜದಿಂದ ಸನ್ಮಾನ

Image
ಭದ್ರಾವತಿ: ಜಾತ್ಯಾತೀತ ಜನತಾದಳ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾಗಿರುವ ಕ್ಷೇತ್ರದ ನಿವಾಸಿ ಗೀತಾ ಸತೀಶ್ ಅವರನ್ನು ಶಿವಮೊಗ್ಗ ಜಿಲ್ಲಾ ಕ್ಷತ್ರೀಯ ಮರಾಠ ಸಮಾಜದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.   ಭದ್ರಾವತಿ: ಜಾತ್ಯಾತೀತ ಜನತಾದಳ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾಗಿರುವ ಕ್ಷೇತ್ರದ ನಿವಾಸಿ ಗೀತಾ ಸತೀಶ್ ಅವರನ್ನು ಶಿವಮೊಗ್ಗ ಜಿಲ್ಲಾ ಕ್ಷತ್ರೀಯ ಮರಾಠ ಸಮಾಜದಿಂದ ಸನ್ಮಾನಿಸಿ ಅಭಿನಂದಿಸಲಾಯಿತು.       ಗೀತಾ ಅವರು ಜಿಲ್ಲೆಯಲ್ಲಿ ನಿರಂತರವಾಗಿ ಮಹಿಳೆಯರನ್ನು ಸಂಘಟಿಸುವ ಮೂಲಕ ಪಕ್ಷ ಬಲವರ್ಧನೆಗೆ ಶ್ರಮಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ೩ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.     ಅಲ್ಲದೆ ಸಂಘ-ಸಂಸ್ಥೆಗಳು ಗೀತಾ ಅವರು ಕೇವಲ ಪಕ್ಷ ಬಲವರ್ಧನೆಗೆ ಮಾತ್ರವಲ್ಲದೆ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇವರಿಗೆ 2026ನೇ ಸಾಲಿನ 'ರಾಷ್ಟ್ರೀಯ ವೀರ ವನಿತೆ' ಪ್ರಶಸ್ತಿಯನ್ನು ಸಂಸ್ಥೆಯೊಂದು ನೀಡಿ ಗೌರವಿಸಿದೆ.      ಇದೀಗ ಶಿವಮೊಗ್ಗ ಜಿಲ್ಲಾ ಕ್ಷತ್ರೀಯ ಮರಾಠ ಸಮಾಜ ಸಹ ಗೀತಾ ಅವರನ್ನು ಸನ್ಮಾನಿಸಿ ಅಭಿನಂದಿಸಿದೆ. ಸಮಾಜದ ಅಧ್ಯಕ್ಷ ಸಚಿನ್ ಸಿಂಧ್ಯಾ, ಸಮಾಜದ ಮುಖಂಡರಾದ ಯಶವಂತ್ ರಾವ್ ಘೋರ್ಪಡೆ, ರಾಮಚಂದ್ರರಾವ್, ಕವಿತಾ ತೋರತ್, ...

ಕೇರಳ ಸಮಾಜಂ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Image
ಭದ್ರಾವತಿ ನಗರದ ನ್ಯೂಟೌನ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಸಭಾಭವನದಲ್ಲಿ ಕೇರಳ ಸಮಾಜಂ ಮಹಿಳಾ ಘಟಕದಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕೇರಳ ಸಮಾಜದ ಅಧ್ಯಕ್ಷ ಗಂಗಾಧರನ್ ಉದ್ಘಾಟಿಸಿದರು.      ಭದ್ರಾವತಿ : ನಗರದ ಕೇರಳ ಸಮಾಜಂ ಮಹಿಳಾ ಘಟಕದಿಂದ ನ್ಯೂಟೌನ್ ಶ್ರೀ ಅಯ್ಯಪ್ಪ ಸೇವಾ ಸಮಿತಿ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು.      ಸಮಾಜದ ಅಧ್ಯಕ್ಷೆ ಶೋಭಾ ಬಾಲಚಂದ್ರನ್ ಅಧ್ಯಕ್ಷತೆ ವಹಿಸಿದ್ದರು. ಸುರಭಿ ವ್ಯಸನ ಮುಕ್ತ ಕೇಂದ್ರದ ನಿರ್ದೇಶಕಿ ವಿ.ವಿ.ಲತಾ, ಹಿರಿಯ ಪೌರ ಕಾರ್ಮಿಕರಾದ ಸುಶೀಲಮ್ಮ, ಸಮಾಜದ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ಪಿ.ಸಿ.ಕುಮಾರ್, ಪದಾಧಿಕಾರಿಗಳಾದ ವಾಸಂತಿ, ಕಲ್ಯಾಣಿ ಶಶಿಧರನ್, ಯಶೋಧ, ಎಸ್.ವಿಜಯಲಕ್ಷ್ಮಿ, ಸೀತಾಲಕ್ಷ್ಮಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.       ಕೇರಳ ಸಮಾಜಂ ಅಧ್ಯಕ್ಷ ಗಂಗಾಧರನ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಮತದಾರರ ಪಟ್ಟಿಯ (ಎಸ್‌ಐಆರ್) ವಿಶೇಷ ಸಮಗ್ರ ಪರಿಷ್ಕರಣೆ

Image
ಭದ್ರಾವತಿ ತಾಲೂಕು ಕಚೇರಿಯಲ್ಲಿ ಸಭಾಂಗಣದಲ್ಲಿ ವಿಧಾನಸಭಾ ಕ್ಷೇತ್ರ-೧೧೨ ಮತದಾರರು ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ತಹಸೀಲ್ದಾರ್ ಪರುಸಪ್ಪ ಕುರುಬರ ಸಭೆ ನಡೆಸಿ ಮಾಹಿತಿ ನೀಡಿದರು.        ಭದ್ರಾವತಿ: ವಿಧಾನಸಭಾ ಕ್ಷೇತ್ರ-೧೧೨ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯ ಏಪ್ರಿಲ್-೨೦೨೬ರಿಂದ ಆರಂಭಗೊಳ್ಳಲಿದೆ. ಮತದಾರರು ೨೦೦೨ ಮತ್ತು ೨೦೨೫ ರ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ಪ್ರೋಜಿನಿ ಮಾಡಿಸಿಕೊಳ್ಳಬೇಕಾಗಿದೆ ಎಂದು ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ತಹಸೀಲ್ದಾರ್ ಪರುಸಪ್ಪ ಕುರುಬರ ತಿಳಿಸಿದರು.      ಅವರು ತಮ್ಮ ಕಛೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಮಾಹಿತಿ ನೀಡಿದರು. ಈ ವಿಶೇಷ ಪರಿಷ್ಕರಣೆಯು ೨೦೦೨ ಮತದಾರ ಪಟ್ಟಿಯಲ್ಲಿರುವ ಮತದಾರರನ್ನು ೨೦೨೫ರ ಮತದಾರರ ಪಟ್ಟಿಯಲ್ಲಿರುವಂತೆ ಗುರುತಿಸಿಕೊಳ್ಳಲು ಮ್ಯಾಪಿಂಗ್ ಮತ್ತು ಪ್ರೋಜಿನಿ ಕಾರ್ಯ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮತದಾರರು ತಾವು ಮತದಾನ ಮಾಡುವ ಕೇಂದ್ರದಲ್ಲಿ ಬಿಎಲ್‌ಓ ಅವರನ್ನು ಸಂಪರ್ಕಿಸಿ ೨೦೦೨ರಲ್ಲಿ ಮತದಾನ ಮಾಡಿದವರು ೨೦೨೫ ಮತಪಟ್ಟಿಯಲ್ಲಿ ಹೆಸರುಗಳು ಇರುವಂತೆ ನೋಡಿಕೊಳ್ಳಬೇಕು. ಅದರಲ್ಲಿ ಸಂತತಿ ಸೇರ್ಪಡೆ-೧೮ ವರ್ಷ ಮೇಲ್ಪಟ್ಟ ೪೦ ವರ್ಷದೊಳಗಿ...

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಘಟನಾ ಸ್ಥಳಕ್ಕೆ ಎಎಸ್‌ಪಿ ಭೇಟಿ : ಪರಿಶೀಲನೆ

Image
ಕಳೆದ ೪ ದಿನಗಳ ಹಿಂದೆ ಭದ್ರಾವತಿ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಬಿಳಿಕಿ ತಿರುವಿನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ನಡೆದಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಎ.ಜಿ ಕಾರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಉಪವಿಭಾಗದ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.        ಭದ್ರಾವತಿ: ಕಳೆದ ೪ ದಿನಗಳ ಹಿಂದೆ ನಗರದ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆ ಬಿಳಿಕಿ ತಿರುವಿನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅವರಿಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷ ಎ.ಜಿ ಕಾರಿಯಪ್ಪ ಸೂಚಿಸಿದ್ದಾರೆ.        ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡಿಪಡಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎ.ಜಿ ಕಾರಿಯಪ್ಪರವರು ಘಟನೆ ಸಂಬಂಧ ದಾಖಲಾಗಿರುವ ದೂರನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ತಕ್ಷಣ ಪತ್ತೆ ಮಾಡುವ ಕುರಿತಂತೆ ನ್ಯೂಟೌನ್ ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ಮಾರ್ಗದರ್ಶನ ನೀಡಿದರು.       ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸುವಂತೆ ಹಾಗು ನಗರದ ಅತಿಸೂಕ್ಷ್ಮ ಸ್ಥಳಗಳಲ್...

ಮಾ.೨೩ರಿಂದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಕಳಸಾರೋಹಣ, ಚಂಡಿಕಾ ಹೋಮ

Image
     ಭದ್ರಾವತಿ: ಹಳೇನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನ ಸ್ವಾಮಿಗಳವರು ಹಾಗು ವಡ್ಡನಹಾಳ್ ಶ್ರೀಮದ್ ಜಗದ್ಗುರು ಮಹಾಸಂಸ್ಥಾನ ಸಾವಿತ್ರಿ ಪೀಠದ ಶ್ರೀ ಶಂಕರಾತ್ಮಾನಂದ ಸರಸ್ವತಿ ಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಮಾ. ೨೩ ರಿಂದ ೨೫ರವರೆಗೆ ಕಳಸಾರೋಹಣ ಮತ್ತು ಚಂಡಿಕಾ ಹೋಮ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ.    ಶ್ರೀ ಕಾಳಿಕಾಂಬ ಸೇವಾ ಸಮಿತಿಯಿಂದ ೨೩ರ ಸೋಮವಾರ ಸಂಜೆ ವಾಸ್ತು, ನವಗ್ರಹ, ರಾಕ್ಷೆಘ್ನ, ಅಘೋರ, ಸುದರ್ಶನ ಹೋಮ, ಬಲಿಪೂಜೆ ಮತ್ತು ಕಲಶ ಪ್ರತಿಷ್ಠಾಪನೆ ಮತ್ತು ೨೪ರ ಮಂಗಳವಾರ ಬೆಳಿಗ್ಗೆ ಶ್ರೀ ಕಾಳಿಕಾದೇವಿ ವಿಗ್ರಹಕ್ಕೆ ಅಷ್ಟಬಂಧ ಹಾಕುವುದು, ಪ್ರಾಣ ಷ್ಠಾಪನೆ, ದೇವಿಯ ಶ್ರೀ ಪಾದುಕ ಪ್ರತಿಷ್ಠಾಪನೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಹಾಗು ೨೫ರ ಬುಧವಾರ ಬೆಳಿಗ್ಗೆ ಶ್ರೀ ಕಾಳಿಕಾದೇವಿ ವಿಮಾನ ಗೋಪುರಕ್ಕೆ ಕಳಸಾರೋಹಣ, ಶ್ರೀ ಚಂಡಿಕಾ ಹೋಮ ಆಯೋಜಿಸಲಾಗಿದೆ.   ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಧಾರ್ಮಿಕ ಆಚರಣೆಗಳಿಗೆ ಚಾಲನೆ ನೀಡಲಿದ್ದು, ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ರಾಜ್ಯ ವಿಶ್ವಕರ್ಮ ಅಭಿವೃಧ್ಧಿ ನಿಗಮದ...

ಮೇ.24ರಂದು ಉಚಿತ ಸಾಮೂಹಿಕ ವಿವಾಹ ಮಹೋತ್ಸವ

Image
ಭದ್ರಾವತಿ : ನಗರದ ವಿಶ್ವ ಹಿಂದೂ ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ಮತ್ತು ಧರ್ಮಶ್ರೀ ಸಭಾ ಭವನ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ 42ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಮೇ. 24ರ ಭಾನುವಾರ ಹಮ್ಮಿಕೊಳ್ಳಲಾಗಿದೆ.      ಸಿದ್ದಾರೂಢ ನಗರದ ಕಾಳಿದಾಸ ಬಡಾವಣೆ, ಧರ್ಮಶ್ರೀ ಸಭಾಭವನದಲ್ಲಿ ಅಂದು ಮಧ್ಯಾಹ್ನ 12 ರಿಂದ 1 ಗಂಟೆವರೆಗಿನ ಶುಭ ಮುಹೂರ್ತದಲ್ಲಿ ಮಹೋತ್ಸವ ಜರುಗಲಿದೆ. ಇದುವರೆಗೂ 776 ಜೊತೆ ವಿವಾಹಗಳನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಸಾರ್ವಜನಿಕರು ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.      ವರನಿಗೆ 21 ವರ್ಷ, ವಧುವಿಗೆ 18 ವರ್ಷ ತುಂಬಿರಬೇಕು. ಈ ಸಂಬಂಧ ವಯಸ್ಸಿನ ದೃಢೀಕರಣ ಪತ್ರ ಸಲ್ಲಿಸುವುದು ಹಾಗು ಇತ್ತಿಚಿನ 2 ಭಾವಚಿತ್ರ ಮತ್ತು ಆಧಾರ್ ಗುರುತಿನ ಚೀಟಿ ಕಡ್ಡಾಯವಾಗಿ ಕೋರಿಕೆ ಅರ್ಜಿ ಜೊತೆಯಲ್ಲಿ ಸಲ್ಲಿಸತಕ್ಕದ್ದಾಗಿದೆ. ಮೇ. 1ರೊಳಗೆ ಕೆ. ನಿರಂಜನ, ವ್ಯವಸ್ಥಾಪಕರು, ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪ, ಬಿ.ಎಚ್ ರಸ್ತೆ, ಭದ್ರಾವತಿ ಈ ವಿಳಾಸದಲ್ಲಿ ಕೋರಿಕೆ ಅರ್ಜಿ ಸಲ್ಲಿಸಬೇಕು. 2 ನೇ ಮದುವೆಗೆ ಅವಕಾಶ ಇರುವುದಿಲ್ಲ.       ವಿವಾಹ ಮಹೋತ್ಸವದಲ್ಲಿ ಅನೇಕ ಪರಮ ಪೂಜ್ಯರು ಸಾನಿಥ್ಯವಹಿಸುವರು. ಹೆಚ್ಚಿನ ಮಾಹಿತಿಗೆ ಡಿ.ಆರ್ ಶಿವಕುಮಾರ್ ಮೊ : 9964237078, ಹಾ. ರಾಮಪ್ಪ ಮೊ: 9880779293 ಸಂಪರ್ಕಿಸಬಹುದ...

ಮಾ.೨೧ರಂದು ಬಂಜೆತನ ಉಚಿತ ಶಿಬಿರ

Image
     ಭದ್ರಾವತಿ : ನಗರದ ಉಂಬ್ಳೇಬೈಲ್ ರಸ್ತೆಯಲ್ಲಿರುವ ರೋಟರಿ ಕ್ಲಬ್ ಸಭಾಂಗಣದಲ್ಲಿ ಮಾ. ೨೧ರಂದು ಶನಿವಾರ ಬೆಳಗ್ಗೆ ೧೦ ರಿಂದ ಮದ್ಯಾಹ್ನ ೩ ಗಂಟೆವರೆಗೆ ಬೆಂಗಳೂರಿನ ಮಿಲನ್ ಫರ್ಟಿಲಿಟಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ ಉಚಿತ ಬಂಜೆತನ ಶಿಬಿರ ಮತ್ತು ತಜ್ಞ ವೈದ್ಯೆ ಡಾ: ಕಾವ್ಯ ಡಿ.ಶರ್ಮಾ ಅವರಿಂದ ಉಚಿತ ಸಮಾಲೋಚನೆ ನಡೆಯಲಿದೆ.      ಅತ್ಯಂತ ವಿಶ್ವಾಸಾರ್ಹ ಬಂಜೆತನ ನಿವಾರಣಾ ಮಿಲನ್ ಫರ್ಟಿಲಿಟಿ ಸ್ಪೆಷಲಿಸ್ಟ್ ಸಂಸ್ಥೆಯಲ್ಲಿ ಫರ್ಟಿಲಿಟಿ ಮತ್ತು ಐವಿಎಫ್, ಪುರುಷರ ಆರೋಗ್ಯ, ಸ್ತ್ರೀರೋಗ ಶಾಸ್ತ್ರ, ಸರೊಗಸಿ ಇತರ ಸೌಲಭ್ಯ ಲಭ್ಯವಿದ್ದು ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಿಲನ್ ಸಂಸ್ಥೆಯ ಪ್ರಾಡಕ್ಟ್ ಸ್ಪೆಷಲಿಸ್ಟ್ (ಹೆಚ್.ಸಿ.ಜಿ) ಬಿ.ಆರ್ ವೆಂಕಟೇಶ್ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: ೯೬೨೦೨ ೧೩೦೪೬ ಸಂಪರ್ಕಿಸಬಹುದಾಗಿದೆ.

ಜಮೀನಿಗೆ ನುಗ್ಗಿ ಜಾತಿ ನಿಂದನೆ, ಹಲ್ಲೆ, ಜೀವ ಬೆದರಿಕೆ ಪ್ರಕರಣ

Image
6 ಮಂದಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, 1.74 ಲಕ್ಷ ರು. ದಂಡ       ಭದ್ರಾವತಿ : ಸುಮಾರು 6 ವರ್ಷಗಳ ಹಿಂದಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಮಂದಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗು 1,74 ಲಕ್ಷ ರು. ದಂಡ ವಿಧಿಸಿ ನಗರದ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.       ತಾಲೂಕಿನ ಲಕ್ಷ್ಮೀಪುರ ಗ್ರಾಮದ ಭೋವಿ ಜಾತಿಯ ಸೀನಪ್ಪ ಎಂಬುವರಿಗೆ ಸೇರಿದ ಸರ್ವೆ ನಂ.37/1 ಮತ್ತು 37/6ರ ಜಮೀನಿನಲ್ಲಿ ೨೮ ಜುಲೈ ೨೦೨೦ರಂದು ಇದೆ ಗ್ರಾಮದ ಒಕ್ಕಲಿಗ ಜಾತಿಗೆ ಸೇರಿದ ಕೆಂಪಮ್ಮ, ಗೌತಮಿ, ನಾಗರಾಜ, ರಾಘವೇಂದ್ರ, ಬೇಬಿಯಮ್ಮ, ಲಕ್ಷ್ಮಮ್ಮ ಮತ್ತು ದೇವೇಂದ್ರರವರು ಏಕಾಏಕಿ ನುಗ್ಗಿ ಸೀನಪ್ಪ ಹಾಗು ಇವರ ಕುಟುಂಬಸ್ಥರು ಮತ್ತು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕೆಲಸಗಾರರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು.       ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯ್ಕರವರು ಪ್ರಕಣದ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸಿದ್ದರು.       ವಿಚಾರಣೆ ನಡೆಸಿದ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ...

ಸಂಭಾವ್ಯ ಅಪರಾಧ, ಕಾನೂನು ಉಲ್ಲಂಘನೆಗಳಿಗೆ ಕಡಿವಾಣ ಹಾಕಲು ಆಟೋಗಳಿಗೆ ವಿಶಿಷ್ಟ ಸಂಖ್ಯೆ

Image
ಶಿವಮೊಗ್ಗ ಜಿಲ್ಲಾ ಪೊಲೀಸ್ ಕೈಗೊಂಡಿರುವ ಅಭಿಯಾನಕ್ಕೆ ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಚಾಲನೆ  ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಉಪವಿಭಾಗದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಗೆ ಪೂರಕ ದಾಖಲೆಗಳನ್ನು ಒದಗಿಸಿರುವ ಆಟೋ ರಿಕ್ಷಾಗಳಿಗೆ ವಿಶಿಷ್ಟ ಸಂಖ್ಯೆಯ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಹೆಚ್ಚುವರಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಚಾಲನೆ ನೀಡಿದರು.       ಭದ್ರಾವತಿ:  ಆಟೋ ರಿಕ್ಷಾಗಳ ದಾಖಲೆಗಳನ್ನು ಪರಿಶೀಲಿಸಿ ಅವುಗಳಿಗೆ ವಿಶಿಷ್ಠ ಸಂಖ್ಯೆ ನೀಡುವ ಅಭಿಯಾನ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆರಂಭಿಸಲಾಗಿದ್ದು, ಇದರಿಂದ ಆಟೋ ರಿಕ್ಷಾ ಪ್ರಯಾಣದ ವೇಳೆ ನಡೆಯಬಹುದಾದ ಸಂಭಾವ್ಯ ಅಪರಾಧಗಳಿಗೆ ಹಾಗು ಕಾನೂನು ಉಲ್ಲಂಘನೆಗಳಿಗೆ ಕಡಿವಾಣ ಹಾಕಬಹುದಾಗಿದೆ ಎಂದು  ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹೇಳಿದರು.       ಅವರು ಬುಧವಾರ ನಗರದ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಉಪವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಗೆ ಪೂರಕ ದಾಖಲೆಗಳನ್ನು ಒದಗಿಸಿರುವ ಆಟೋ ರಿಕ್ಷಾಗಳಿಗೆ ವಿಶಿಷ್ಟ ಸಂಖ್ಯೆಯ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನ...

ಯುಗಾದಿ ಹಬ್ಬ ಆಚರಣೆ : ಜೂಜಾಟಕ್ಕೆ ಕಡಿವಾಣ ಹಾಕಿ

Image
ಪೊಲೀಸ್ ಇಲಾಖೆಗೆ ಬಿಎನ್ ರಾಜು ಆಗ್ರಹ  ಬಿ.ಎನ್ ರಾಜು      ಭದ್ರಾವತಿ: ಯುಗಾದಿ ಹಬ್ಬಕ್ಕೆ ತನ್ನದೇ ಆದ ಪರಂಪರೆ ಇದ್ದು, ಧಾರ್ಮಿಕ ಶ್ರೇಷ್ಠತೆ ಹೊಂದಿದೆ. ದೇಶದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಈ ಹಬ್ಬವನ್ನು ಬೇವು-ಬೆಲ್ಲ ಸವಿಯುವ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತದೆ. ಕ್ಷೇತ್ರದಲ್ಲಿ ಈ ಪವಿತ್ರ ಹಬ್ಬವನ್ನು ಜೂಜಾಟಕ್ಕೆ ಬಳಸಿಕೊಳ್ಳುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಪೊಲೀಸ್ ಇಲಾಖೆ ತಕ್ಷಣ ಜೂಜಾಟಕ್ಕೆ ಕಡಿವಾಣ ಹಾಕಲು ಮುಂದಾಗಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದ್ದಾರೆ.       ಭಾರತ ದೇಶ ಬಹುಸಂಸ್ಕೃತಿಯ ಜಾತ್ಯಾತೀತಿ ದೇಶವಾಗಿದ್ದು, ಯುಗಾದಿ ಹಬ್ಬ ಅತ್ಯಂತ ಶ್ರೇಷ್ಠತೆಯನ್ನು ಹೊಂದಿದೆ. ಅಲ್ಲದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬ ಇದಾಗಿದೆ. ಸೌಹಾರ್ದತೆ, ಸಮಾನತೆಯಿಂದ ದೇಶದ ಎಲ್ಲಾ ವರ್ಗದ ಜನರು ಆಚರಿಸುತ್ತಾರೆ. ಇಂತಹ ಹಬ್ಬದ ಸಂದರ್ಭದಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ, ವಾರ್ಡ್‌ಗಳಲ್ಲಿ ಅನೇಕ ವರ್ಷಗಳಿಂದಲೂ ಸುಮಾರು ವಾರಗಟ್ಟಲೆ ಶಾಮಿಯಾನ ಹಾಕಿಕೊಂಡು ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟಗಳಲ್ಲಿ ತೊಡಗುತ್ತಿರುವುದು ಪವಿತ್ರವಾದ ಹಬ್ಬದ ಆಚರಣೆಗೆ ಮಾಡುತ್ತಿರುವ ಅಪಚಾರವಾಗಿದೆ. ಅಲ್ಲದೆ ಅನೇಕ ಜನಪ್ರತಿನಿಧಿಗಳು, ಊರಿನ ಮುಖಂಡರು ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟದಲ್ಲಿ ಮುಂಚೂಣಿಯಲ್ಲಿದ್ದು, ಯುಗಾದಿ ಹಬ್ಬ ಜೂಜಾ...