ಹಿಂದೂ ಧರ್ಮಕ್ಕೆ ಮರಳಿದ ಯುವತಿ : ಮೇ.೨೪ರಂದು ವಿವಾಹ
ಹಿಂದೂ ಧರ್ಮದ ಯುವಕನನ್ನು ಮದುವೆಯಾಗುತ್ತಿರುವ ಕ್ರೈಸ್ತ ಧರ್ಮದ ಯುವತಿಯನ್ನು ಗುರುವಾರ ಮರಳಿ ಮಾತೃ ಧರ್ಮಕ್ಕೆ ಕರೆತರುವಲ್ಲಿ ಭದ್ರಾವತಿ ವಿಶ್ವ ಹಿಂದೂ ಪರಿಷತ್ ಯಶಸ್ವಿಯಾಗಿದೆ. ಭದ್ರಾವತಿ: ಹಿಂದೂ ಧರ್ಮದ ಯುವಕನನ್ನು ಮದುವೆಯಾಗುತ್ತಿರುವ ಕ್ರೈಸ್ತ ಧರ್ಮದ ಯುವತಿಯನ್ನು ಗುರುವಾರ ಮರಳಿ ಮಾತೃ ಧರ್ಮಕ್ಕೆ ಕರೆತರುವಲ್ಲಿ ವಿಶ್ವ ಹಿಂದೂ ಪರಿಷತ್ ಯಶಸ್ವಿಯಾಗಿದೆ. ನಗರಸಭೆ ವ್ಯಾಪ್ತಿಯ ಸೀಗೇಬಾಗಿ, ಹನುಮಂತನಗರದ ಬಡ ಕುಟುಂಬದ ನಿವಾಸಿಯಾಗಿರುವ ಯುವತಿ ತಾಲೂಕಿನ ಅಂತರಗಂಗೆ ಕೆ.ಎಚ್ ನಗರ ನಿವಾಸಿ ಎಂ. ಶಿವಕುಮಾರ್ನನ್ನು ಪ್ರೀತಿಸುತ್ತಿದ್ದು, ಇಬ್ಬರು ವಿವಾಹವಾಗಲು ಬಯಸಿ ಉಚಿತ ಸಾಮೂಹಿಕ ವಿವಾಹದಲ್ಲಿ ಅವಕಾಶ ಕಲ್ಪಿಸಿಕೊಡುವಂತೆ ವಿಶ್ವ ಹಿಂದೂ ಪರಿಷತ್ಗೆ ಕೋರಿದ್ದರು. ವಿಶ್ವ ಹಿಂದೂ ಪರಿಷತ್ ವಿವಾಹವನ್ನು ಹಿಂದೂ ಧರ್ಮದ ಸಂಪ್ರದಾಯದಂತೆ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಯುವತಿಗೆ ಹಿಂದೂ ಧರ್ಮ ಸ್ವೀಕರಿಸುವಂತೆ ತಿಳಿಸಿದ್ದರು. ಯುವತಿಯ ಕುಟುಂಬದವರು ಮೂಲತಃ ಹಿಂದೂ ಧರ್ಮದವರಾಗಿದ್ದು, ಯಾವುದೋ ಕಾರಣಕ್ಕೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಯುವತಿಗೆ ತಾಯಿ ಮಾತ್ರ ಇದ್ದು, ಯುವತಿ ಸ್ವಯಂ ಪ್ರೇರಣೆಯಿಂದ ಹಿಂದೂ ಧರ್ಮಕ್ಕೆ ಮರಳುವುದಾಗಿ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಜನ್ನಾಪುರದ ಶ್ರೀ ಮಹಾ...