Posts

ವಿಜೃಂಭಣೆಯಿಂದ ಜರುಗಿದ ಶ್ರೀ ಹಳದಮ್ಮ ದೇವಿಯ `ಸಿಡಿ ಉತ್ಸವ'

ಸಂಸದ ರಾಘವೇಂದ್ರ, ಶಾರದ ಅಪ್ಪಾಜಿ ಇನ್ನಿತರರು ಉಪಸ್ಥಿತಿ ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ'ದ ಅಂಗವಾಗಿ ಗುರುವಾರ ಬೆಳಿಗ್ಗೆ `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ವಿಜೃಂಭಣೆಯಿಂದ ನಡೆಯಿತು.  ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಇದು ಪ್ರಮುಖ ಆಕರ್ಷಣೆಯಾಗಿದ್ದು, `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ವೀಕ್ಷಿಸಲು ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.  ಈ ಹಿಂದಿನ ಸಿಡಿ ಮರ ಬದಲಿಸಿ ಇದೀಗ ಹೊಸ ಸಿಡಿ ಮರ ಪ್ರತಿಷ್ಠಾಪಿಸಲಾಗಿದ್ದು, ಯುವ ಮುಖಂಡ ಬಿ.ಎಸ್ ಬಸವೇಶ್ ಹಾಗು ಜಮೀನ್ದಾರ್ ತಾರಾಬಾಯಿ ದಿವಂಗತ ಶಿವಾಜಿರಾವ್ ಪವಾರ್ ಕುಟುಂಬಸ್ಥರು ಹೊಸ ಸಿಡಿ ಮರದ ದಾನಿಗಳಾಗಿದ್ದಾರೆ.  ಬೆಳಿಗ್ಗೆ ಸಂಸದ ಬಿ.ವೈ ರಾಘವೇಂದ್ರ, , ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಸಮಾಜ ಸೇವಕ ಸಿ. ಮಹೇಶ್ ಕುಮಾರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಬಿಜೆಪಿ ಯುವ ಮುಖಂಡರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಶಿವಮೊಗ್ಗ ಮಹಾನಗರ ಪಾಲಿಕೆ ವಲಯ ಆಯುಕ್ತರಾದ ಸುನೀತಾ ಕುಮಾರಿ, ನಗರಸಭೆ ಸದಸ್ಯೆ ಅನುಪಮ ಚನ್ನೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸೂಡಾ ಸದಸ್ಯೆ ಅರುಣ ಕೆ.ಪಿ ಗಿರೀಶ್, ಬಿಜೆಪಿ ಮಂಡಲ ಅಧ್ಯಕ್ಷರಾದ ಜಿ. ಧರ್ಮಪ್ರಸಾದ್, ಕೆ.ಎಚ್ ತೀರ್ಥಯ್ಯ ಹಾ...

ಬೀದಿಬದಿ ವ್ಯಾಪಾರಿಗಳ ಸಂಕಷ್ಟಕ್ಕೆ ಸ್ಪಂದನೆ ಉತ್ತಮ ಕಾರ್ಯ : ಪ್ರಭುಲಿಂಗ ಕವಳಿಕಟ್ಟೆ

Image
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಛತ್ರಿ ವಿತರಣಾ ಸಮಾರಂಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಛತ್ರಿಗಳನ್ನು ವಿತರಿಸಿದರು.       ಭದ್ರಾವತಿ: ಬೇಸಿಗೆಯಲ್ಲಿ ಬೀದಿಬದಿ ವ್ಯಾಪಾರಿಗಳು ಪಡುವ ಕಷ್ಟಗಳಿಗೆ ಪೂರಕವಾಗಿ ಸ್ಪಂದಿಸಿ ಅವರುಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸುತ್ತಿರುವುದು ರೋಟರಿ ಕ್ಲಬ್ ಮಾನವೀಯತೆಗೆ ಹಿಡಿತ ಕನ್ನಡಿಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಪ್ರಶಂಸೆ ವ್ಯಕ್ತಪಡಿಸಿದರು.       ಅವರು ಬುಧವಾರ ಸಂಜೆ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಛತ್ರಿ ವಿತರಣಾ ಸಮಾರಂಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಿ ಮಾತನಾಡಿದರು.       ಕಷ್ಟದಲ್ಲಿರುವವರಿಗೆ ನೆರವಾಗುವುದು ಮಾನವೀಯತೆಯಾಗಿದ್ದು, ಸಮಾಜದಲ್ಲಿ ಆರ್ಥಿಕವಾಗಿ, ದೈಹಿಕವಾಗಿ ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ಒಂದು ಉತ್ತಮ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಹಲವಾರು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಮಾದರಿಯಾಗಿದೆ ಎಂದರು.       ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಚ್ ಶಿವಕುಮಾರ್ ಅಧ್ಯಕ್ಷತೆವಹಿಸಿದ್ದರು. ವಲಯ-೧೦, ರೋಟರಿ ೩೧೮೨ರ ಸಹಾಯಕ ಜಿಲ್ಲಾ ಗೌರ್‍ನರ್ ಕೆ.ಪಿ ಶೆಟ್ಟಿ, ರೋಟರಿ ಫೌಂ...

ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಅಡುಗೆ ಅನಿಲ ನೀಡುವುದಾಗಿ ಹಣ ಪಡೆದು ವಂಚನೆ

Image
     ಭದ್ರಾವತಿ: ನಗರದ ನ್ಯೂ ಟೌನಿನ ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಅಡುಗೆ ಅನಿಲ(ಸಿಲಿಂಡರ್) ಸರಬರಾಜು ಮಾಡುವುದಾಗಿ ಸುಳ್ಳು ಹೇಳಿ ೪,೫೦೦ ರು. ನಗದು ಪಡೆದು ವಂಚಿಸಿರುವ ಘಟನೆ ಬುಧವಾರ ನಡೆದಿದೆ.       ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಅಡುಗೆ ಅನಿಲ ದೊರೆಯುವುದು ತುಂಬಾ ಕಷ್ಟವಾಗಿರುತ್ತದೆ. ಪ್ರಸ್ತುತ ನಮ್ಮಲ್ಲಿ ಸಂಗ್ರಹವಿದ್ದು, ೪-೫ ಸಿಲಿಂಡರ್ ನೀಡುವುದಾಗಿ ನಗರದ ಜಯದೇವ ಗ್ಯಾಸ್ ಏಜೆನ್ಸಿಯ ಹೆಸರು ಹೇಳಿಕೊಂಡು ಮಂಜುನಾಥ್ ಎಂಬಾತ ಆಟೋರಕ್ಷಾದಲ್ಲಿ ಅಂಧರ ಕೇಂದ್ರಕ್ಕೆ ಬಂದಿದ್ದಾನೆ.       ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪರವರು ಮೂಲೆಕಟ್ಟೆಯಲ್ಲಿರುವ ತಮ್ಮ ಮನೆಗೆ ಬರಲು ಹೇಳಿ ಆತನಿಗೆ ೪,೫೦೦ ರು. ನಗದು ನೀಡಿದ್ದಾರೆ. ಹಣ ಪಡೆದ ನಂತರ ಆಟೋದಲ್ಲಿ ಸಿಲಿಂಡರ್ ತರುವುದಾಗಿ ಹೇಳಿ ಪರಾರಿಯಾಗಿದ್ದಾನೆ. ಈ ಸಂಬಂಧ ನ್ಯೂಟೌನ್ ಹಾಗು ಪೇಪರ್ ಟೌನ್ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿರುವುದಾಗಿ ಶಿವಬಸಪ್ಪ ತಿಳಿಸಿದ್ದಾರೆ. 

ಹುಣಸೇಕಟ್ಟೆ ಗ್ರಾಮದಲ್ಲಿ ವಿದ್ಯುತ್ ಉಪ ಘಟಕ ಸ್ಥಾಪನೆಗೆ ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸಿ

Image
ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ  ಕೆ.ಜೆ ಜಾರ್ಜ್       ಭದ್ರಾವತಿ : ತಾಲೂಕಿನ ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಸ್ಥರ ಬಹುವರ್ಷಗಳ ಬೇಡಿಕೆಯಾದ ಹುಣಸೇಕಟ್ಟೆ ಗ್ರಾಮದಲ್ಲಿ 2x20 M.V.A 66/11 K.V   ವಿದ್ಯುತ್ ಉಪ ಘಟಕ (ಸಬ್‌ಸ್ಟೇಷನ್) ಸ್ಥಾಪಿಸಲು ಇಂಧನ ಇಲಾಖೆ ಮುಂದಾಗಿರುವುದಕ್ಕೆ ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಗ್ರಾಮಸ್ಥರ ಪರವಾಗಿ ಇಂದನ ಸಚಿವ ಕೆ.ಜೆ ಜಾರ್ಜ್‌ರವರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ತಕ್ಷಣ ಟೆಂಡರ್ ಪ್ರಕ್ತಿಯೆ ಆರಂಭಿಸುವಂತೆ ಮನವಿ ಮಾಡಿದೆ.         ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯೂರು, ಅರಳಿಕೊಪ್ಪ, ಕಂಬದಾಳ್ ಹೊಸೂರು, ತ್ಯಾವರಘಟ್ಟ, ಸಿಂಗನಮನೆ, ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಗ್ರಾಮಸ್ಥರಿಗೆ, ರೈತರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದ್ದು, ಅಲ್ಲದೆ ಕುಡಿಯುವ ನೀರಿನ ಸರಬರಾಜಿನಲ್ಲಿಯೂ ಸಮಸ್ಯೆ ಎದುರಾಗುತ್ತಿತ್ತು. 2x20 M.V.A 66/11 K.V     ವಿದ್ಯುತ್ ಉಪ ಘಟಕ (ಸಬ್‌ಸ್ಟೇಷನ್) ಸ್ಥಾಪಿಸಲು ಟೆಂಡರ್ ಪ್ರಕ್ರಿಯೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಅಧೀಕ್ಷಕ ಇಂಜಿನಿಯರ್ ಕೆ.ಪಿ.ಟಿ.ಸಿಎಲ್ ಕಛೇರಿ ಶಿವಮ...

ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

Image
ಭದ್ರಾವತಿ ತಾಲೂಕಿನ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್‌ರವರಿಗೆ ಸಾಮಾಜಿಕ ಹೋರಾಟಗಾರ ಪಿ. ತೀರ್ಥೇಶ್ ಮನವಿ ಸಲ್ಲಿಸಿದ್ದಾರೆ.       ಭದ್ರಾವತಿ : ತಾಲೂಕಿನ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್‌ರವರಿಗೆ ಸಾಮಾಜಿಕ ಹೋರಾಟಗಾರ ಪಿ. ತೀರ್ಥೇಶ್ ಮನವಿ ಸಲ್ಲಿಸಿದ್ದಾರೆ.       ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿಂಗನಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟದ ಮಳಿಗೆಯ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲು ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡುತ್ತಿರುವ ಪರವಾನಗಿ ಪಡೆದ ಮದ್ಯದಂಗಡಿ ಮಾಲೀಕರನ್ನು ಪತ್ತೆಹಚ್ಚುವ ಮೂಲಕ ಅವರ ವಿರುದ್ಧ ಸಹ ಪ್ರಕರಣ ದಾಖಲಿಸುವುದು. ಅಲ್ಲದೆ ಅಬಕಾರಿ ಇಲಾಖೆಗೆ ಈ ಕುರಿತು ಸಮಗ್ರ ಮಾಹಿತಿ ನೀಡಿ ಮದ್ಯದಂಗಡಿ ಮುಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.       ತಾಲೂಕಿನ ಎಲ್ಲಾ ದಲಿತ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಇಲಾಖೆಯ ಸಿಬ್ಬಂದಿಗಳಿಂದ ಹಾಗು ಸ್ಥಳೀಯ ನಿವಾಸಿಗಳಿಂದ ಮಾಹಿತಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು....

ಶ್ರೀ ಮುತ್ತು ಮಾರಿಯಮ್ಮ ೪೧ನೇ ವರ್ಷದ ಕರಗ ಮಹೋತ್ಸವ

Image
ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ, ಹನುಮಂತನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ೪೧ನೇ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಮಂಗಳವಾರ ಕರಗದೊಂದಿಗೆ ಕಾವಡಿ ಹರಕೆಯೊತ್ತ ಭಕ್ತರು ಬಾಯಿಗೆ ಕಬ್ಬಿಣದ ತ್ರಿಶೂಲ ಚುಚ್ಚಿಕೊಂಡು ಸಾಗಿದರೇ, ಮತ್ತೊಬ್ಬ ಭಕ್ತ ಬೆನ್ನಿಗೆ ಕಬ್ಬಿಣದ ಕೊಕ್ಕೆಗಳನ್ನು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡುವ ಮೂಲಕ ಅಮ್ಮನವರಿಗೆ ಭಕ್ತಿ ಸಮರ್ಪಣೆ ಮಾಡುವ ದೃಶ್ಯ ರೋಮಾಂಚನಕಾರಿ ಕಂಡು ಬಂದಿತು.       ಭದ್ರಾವತಿ : ನಗರಸಭೆ ವ್ಯಾಪ್ತಿಯ ಹೊಸಮನೆ, ಹನುಮಂತನಗರ ಸರ್ಕಾರಿ ಕನ್ನಡ ಶಾಲೆ ಎದುರಿನ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ೪೧ನೇ ವರ್ಷದ ಕರಗ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.       ಈಗಾಗಲೇ ದುರ್ಗಾಹೋಮ, ಅಮ್ಮನವರಿಗೆ ಕಂಕಣ ಕಟ್ಟುವುದು, ಗಂಗೆಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದ್ದು, ಮಂಗಳವಾರ ಬೆಳಿಗ್ಗೆ ಅಮ್ಮನವರಿಗೆ ಅಭಿಷೇಕ ಮತ್ತು ವಿಶೇಷ ಪೂಜೆ, ಮಂಗಳಾರತಿ, ನಂತರ ಹೊಸಮನೆ ಗೊಂದಿ ಚಾನಲ್ ಹತ್ತಿರ ಕರಗ ಜೋಡಿಸಿ ರಾಜಬೀದಿ ಮೂಲಕ ಉತ್ಸವ ಮೆರವಣಿಗೆ ನಡೆಸಿ ದೇವಸ್ಥಾನಕ್ಕೆ ತರಲಾಯಿತು.       ಮೆರವಣಿಗೆಯಲ್ಲಿ ಕರಗದೊಂದಿಗೆ ಕಾವಡಿ ಹರಕೆಯೊತ್ತ ಭಕ್ತರು ಬಾಯಿಗೆ ಕಬ್ಬಿಣದ ತ್ರಿಶೂಲ ಚುಚ್ಚಿಕೊಂಡು ಸಾಗಿದರೇ, ಮತ್ತೊಬ್ಬ ಭಕ್ತ ಬೆನ್ನು ಹಾಗು ಕಾಲುಗಳಿಗೆ ಕ...

ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜಯಂತಿ ಅಂಗವಾಗಿ ಉತ್ಸವ ಮೆರವಣಿಗೆ

Image
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.       ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹೊಸಸೇತುವೆ ರಸ್ತೆಯ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.       ಶ್ರೀ ಮಠದಲ್ಲಿ ಬೆಳಿಗ್ಗೆ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಶ್ರೀ ಶಂಕರಚಾರ್ಯರ ಭಾವಚಿತ್ರದೊಂದಿಗೆ ಉತ್ಸವ ಮೆರವಣಿಗೆ ನಂತರ ಶ್ರೀ ರುದ್ರ ಹೋಮ, ಹೋಮದ ಪೂರ್ಣಾಹುತಿ, ಬ್ರಹ್ಮಚಾರಿ ಪೂಜೆ, ಅನ್ನಪೂರ್ಣೇಶ್ವರಿ ಪೂಜೆ, ಗೋಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು. ಮಠದ ಭಕ್ತರು, ಸೇವಾಕರ್ತರು, ಸ್ಥಳೀಯ ನಿವಾಸಿಗಳು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. 

ಮೈಕಲ್ ಅಗಸ್ಟಿನ್ ನಿಧನ

Image
ಮೈಕಲ್ ಅಗಸ್ಟಿನ್       ಭದ್ರಾವತಿ : ತಾಲೂಕಿನ ಕಾರೇಹಳ್ಳಿ ನಿವಾಸಿ ಮೈಕಲ್ ಅಗಸ್ಟಿನ್(41) ಇವರು ಸೋಮವಾರ ರಾತ್ರಿ ನಿಧನ ಹೊಂದಿದರು.        ತಾಯಿ, ಪತ್ನಿ, ಪುತ್ರ, ಸಹೋದರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಮಂಗಳವಾರ ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರಕ್ಕೆ ಸೇರಿದ ಕ್ರೈಸ್ತ ಸಮಾಧಿಯಲ್ಲಿ ನೆರೆವೇರಿತು. ಇವರ ನಿಧನಕ್ಕೆ ನಗರದ ಕ್ರೈಸ್ತ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಆದಿ ಗುರು ಶಂಕರಾಚಾರ್ಯರ ಜಯಂತಿ

Image
ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಶಂಕರ ಸೇವಾ ಸಮಿತಿಯಿಂದ ಮಂಗಳವಾರ ಆದಿ ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಆಚರಿಸಲಾಯಿತು.       ಭದ್ರಾವತಿ : ಹಳೇನಗರದ ಶ್ರೀ ರಾಮೇಶ್ವರ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಶಂಕರ ಸೇವಾ ಸಮಿತಿಯಿಂದ ಮಂಗಳವಾರ ಆದಿ ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಆಚರಿಸಲಾಯಿತು.       ದೇವಸ್ಥಾನದಲ್ಲಿ ಬೆಳಿಗ್ಗೆ ನಿರ್ಮಾಲ್ಯ, ರುದ್ರಾಭಿಷೇಕ ಜರುಗಿತು. ನಂತರ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ರಾಜಬೀದಿ ಉತ್ಸವ ಮೆರವಣಿಗೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ನೆರವೇರಿದವು.       ಶಂಕರ್ ಸೇವಾ ಸಮಿತಿ ಅಧ್ಯಕ್ಷ ಸಿ.ಕೆ ರಾಮರಾವ್, ಕಾರ್ಯದರ್ಶಿ ಜೆ.ಎನ್ ಆನಂದರಾವ್, ಮುದುಕೇಶ್, ಶೇಷಾಚಲ, ನಿಖಿಲ್, ರಮಾಕಾಂತ, ಮುರಳಿ, ಮೋಹನ್, ಪಿ.ಕೆ ಮಂಜುನಾಥ್, ಶ್ರೀಧರ, ಶ್ರೀವತ್ಸ ಮತ್ತು ವಿವಿಧ ಭಜನಾ ಮಂಡಳಿಗಳು ಹಾಗು ಭಕ್ತರು ಪಾಲ್ಗೊಂಡಿದ್ದರು.

ತಾರತಮ್ಯವಿಲ್ಲದ ಕಾಯಕ ಸಮಾಜ ನಿರ್ಮಾಣ ಮಾಡಿದ ಮಹಾನ್ ನಾಯಕ ಬಸವಣ್ಣ : ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ

Image
  ಭದ್ರಾವತಿಯಲ್ಲಿ ಸೋಮವಾರ ಸಂಜೆ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನೂತನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ: ಪ್ರತಿಯೊಬ್ಬರು ಯಾವುದೇ ತಾರತಮ್ಯವಿಲ್ಲದೆ ಕಾಯಕದಿಂದ ಬದುಕಬೇಕೆಂಬುದನ್ನು ತಿಳಿಸಿಕೊಡುವ ಜೊತೆಗೆ ೧೨ನೇ ಶತಮಾನದಲ್ಲಿಯೇ ಕಾಯಕ ಸಮಾಜ ನಿರ್ಮಾಣ ಮಾಡಿದ ಮಹಾನ್ ನಾಯಕ ಬಸವಣ್ಣನವರು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕೆಂದು ಚನ್ನಗಿರಿ ಪಾಂಡೋಮಟ್ಟಿ, ವಿರಕ್ತಮಠದ ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ ಹೇಳಿದರು.       ಶ್ರೀಗಳು ಸೋಮವಾರ ಸಂಜೆ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನೂತನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.       ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶೋಷಣೆಗಳಿಂದ ಕೂಡಿದ ಮೂಡನಂಬಿಕೆ, ಕಂದಾಚಾರಗಳಿಂದ ತುಂಬಿದ ಅಂದಿನ ಸಮಾಜದಲ್ಲಿ ಬಸವಣ್ಣನವರು ಮಾಡಿದ ಕ್ರಾಂತಿ ನಿಜಕ್ಕೂ ಅವಿಸ್ಮರಣೀಯವಾಗಿದೆ. ಎಲ್ಲಾ ಶೋಷಣೆಗಳಿಂದ ಮುಕ್ತಿಗೊಳಿಸಿ ಜ್ಞಾನದ ...

ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಹೊಸ ಸಿಡಿ ಮರ ಪ್ರತಿಷ್ಠಾಪನೆ

Image
ಭದ್ರಾವತಿ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ದೇವಸ್ಥಾನದ ಆವರಣದಲ್ಲಿ ಹೊಸ ಸಿಡಿ ಮರ ಸೋಮವಾರ ಪ್ರತಿಷ್ಠಾಪಿಸಲಾಯಿತು.       ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ'ಕ್ಕೆ ಸೋಮವಾರ ಬೆಳಿಗ್ಗೆ ದ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.       ದೇವಸ್ಥಾನ ಮುಂಭಾಗ ಹೊಸ ಸಿಡಿಮರ ಪ್ರತಿಷ್ಠಾಪಿಸಲಾಗಿದ್ದು, ೨೩ರ ಗುರುವಾರ ಬೆಳಿಗ್ಗೆ ೬ ಗಂಟೆಗೆ `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ನಡೆಯಲಿದೆ. ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಇದು ಪ್ರಮುಖ ಆಕರ್ಷಣೆಯಾಗಿದ್ದು, `ದೇವರ ಸಿಡಿ ಉತ್ಸವ ಹಾಗು ಮಕ್ಕಳ ತೊಟ್ಟಿಲು ಸಿಡಿ ಉತ್ಸವ' ವೀಕ್ಷಿಸಲು ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸುತ್ತಾರೆ.       ಈ ಹಿಂದಿನ ಸಿಡಿ ಮರ ಬದಲಿಸಿ ಇದೀಗ ಹೊಸ ಸಿಡಿ ಮರ ಪ್ರತಿಷ್ಠಾಪಿಸಲಾಗಿದ್ದು, ಈ ಹಿನ್ನಲೆಯಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು. ಯುವ ಮುಖಂಡ ಬಿ.ಎಸ್ ಬಸವೇಶ್ ಹಾಗು ಜಮೀನ್ದಾರ್ ತಾರಾಬಾಯಿ ದಿವಂಗತ ಶಿವಾಜಿರಾವ್ ಪವಾರ್ ಕುಟುಂಬಸ್ಥರು ಹೊಸ ಸಿಡಿ ಮರದ ದಾನಿಗಳಾಗಿದ್ದು, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ನಿರ್ದೇಶಕರು ಸೇರಿದಂತೆ ಭಕ್ತರು ಉಪಸ್ಥಿತರಿದ್ದರು. 

ಜೆಡಿಎಸ್ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ರಾಜಕಾರಣಿ ಎನ್. ರಾಮಕೃಷ್ಣ ನೇಮಕ

Image
ಭದ್ರಾವತಿ ತಾಲೂಕು ಜನತಾದಳ(ಜಾತ್ಯಾತೀತ) ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ರಾಜಕಾರಣಿ ಎನ್. ರಾಮಕೃಷ್ಣಪ್ಪ ನೇಮಕಗೊಂಡಿದ್ದಾರೆ.  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.       ಭದ್ರಾವತಿ: ತಾಲೂಕು ಜನತಾದಳ(ಜಾತ್ಯಾತೀತ) ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ರಾಜಕಾರಣಿ ಎನ್. ರಾಮಕೃಷ್ಣಪ್ಪ ನೇಮಕಗೊಂಡಿದ್ದಾರೆ.       ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ನಿರ್ದೇಶಿಸುವ ಮೂಲಕ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ.       ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.       ಪಕ್ಷದ ರಾಜ್ಯ ವಕ್ತಾರ ರಾಜುಗೌಡ, ರಾಜ್ಯ ಪ್ರಧಾನ ಕಾರ್ಯದರ್...

ನ್ಯಾಯವಾದಿ ಮಗೇಶ್ ಬಾಬು ನಿಧನ

Image
ಮಗೇಶ್ ಬಾಬು      ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ನಿವಾಸಿ, ನ್ಯಾಯವಾದಿ ಮಗೇಶ್ ಬಾಬು(೫೪) ಶನಿವಾರ ನಿಧನ ಹೊಂದಿದರು.  ಇಬ್ಬರು ಸಹೋದರರು, ಓರ್ವ ಸಹೋದರಿ ಇದ್ದಾರೆ. ಇವರ ಅಂತ್ಯಕ್ರಿಯೆ ಭಾನುವಾರ ಲೋಯರ್ ಹುತ್ತಾ, ದೊಣಬಘಟ್ಟ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮಗೇಶ್ ಬಾಬು ಈ ಹಿಂದೆ ತಾಲೂಕು ವಕೀಲರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.  ಇವರ ನಿಧನಕ್ಕೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಸಿ ಕೇಶವಮೂರ್ತಿ ಹಾಗು ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎ.ಎನ್ ಕಾರ್ತಿಕ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.  

ಏ.೨೬ರವರೆಗೆ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ

Image
ಭದ್ರಾವತಿ ಹಳೇನಗರದ ಗ್ರಾಮ ದೇವತ ಶ್ರೀ ಹಳದಮ್ಮ ದೇವಿ ದೇವಸ್ಥಾನ       ಭದ್ರಾವತಿ : ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ' ಏ.೨೦ ರಿಂದ ೨೬ರವರೆಗೆ ನಡೆಯಲಿದ್ದು, ಧಾರ್ಮಿಕ ಕಾರ್ಯಗಳ ಜೊತೆಗೆ ಹಲವು ಸಾಂಸ್ಕೃತಿಕ ಹಾಗು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಕೆ ಲಕ್ಷ್ಮಣ್ ಕೋರಿದರು.       ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಎರಡು ವರ್ಷಕ್ಕೆ ಒಮ್ಮೆ ನಡೆಯುವ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ಜಾತ್ರಾ ಮಹೋತ್ಸವದ ವಿಶೇಷ ಎಂದರೆ ಎಲ್ಲಾ ಜಾತಿ, ಧರ್ಮದವರು ಸೇರಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.       ಏ.೨೦ರ ಸೋಮವಾರ ಬೆಳಿಗ್ಗೆ ೮ ಗಂಟೆಗೆ ಹೊಸ ಸಿಡಿ ಮರ ಪ್ರತಿಷ್ಠಾಪನೆ ಹಾಗು ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ೨೧ರ ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ದೇವರುಗಳಿಗೆ ಅಭಿಷೇಕ, ಮಧ್ಯಾಹ್ನ ೧೧ ಗಂಟೆಗೆ ಮಹಾಮಂಗಳಾರತಿ, ನಂತರ ಅನ್ನದಾನ ನಡೆಯಲಿದೆ ಎಂದರು.       ರಾತ್ರಿ ೮ ಗಂಟೆಗೆ ವಿಶೇಷ ಆಕರ್ಷಕ ಜಾನಪದ ಕಲಾ ತಂಡಗಳೊಂದಿಗೆ `ಶ್ರೀ ದೇವರುಗಳ ರಾಜಬೀದಿ ಉತ್ಸವ' ನಡೆಯಲಿದೆ. ನಂತರ ಆಯೋಜಿಸ...

ನಗರಸಭೆ ಸಾಮಾನ್ಯ ಸಭೆ : ಹಲವು ಪ್ರಸಾವನೆಗಳ ಕುರಿತು ಚರ್ಚೆ

Image
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಹಲವು ಪ್ರಸ್ತಾವನೆಗಳ ಕುರಿತು ಚರ್ಚಿಸಲಾಯಿತು.       ಭದ್ರಾವತಿ : ಹಳೇನಗರದ ಗ್ರಾಮ ದೇವತೆ, ಆದಿ ದೇವತೆ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ ಪ್ರಯುಕ್ತ  ಹಮ್ಮಿಕೊಳ್ಳಲಾಗುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯ ವಿಜೇತರಿಗೆ ಬೆಳ್ಳಿಗದೆ ಬಹುಮಾನ ನೀಡುವುದು, ಎಲ್‌ಇಡಿ ಟಿವಿ ಪರದೆ ಅಳವಡಿಸುವುದು, ಕೆರೆ ಪುನಶ್ಚೇತನಗೊಳಿಸುವುದು, ಡಾ. ಬಾಬು ಜಗಜೀವನ್ ರಾಮ್‌ರವರ ಭವನ ನಿರ್ಮಿಸುವುದು, ನೀರಿನ ಕಂದಾಯ ಹೆಚ್ಚಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಶನಿವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು.       ನಗರಸಭೆಯಲ್ಲಿ ಈಗಾಗಲೇ ಮುಕ್ತಾಯಗೊಂಡಿರುವ ವಾಹನ ಗುತ್ತಿಗೆಗಳನ್ನು ಮರುವಿಸ್ತರಿಸುವುದು, ವಿಡಿಯೋ ಕವರೇಜ್ ಮತ್ತು ಪೋಟೋ ಚಿತ್ರೀಕರಣ ಹಾಗು ಪೋಸ್ಟ್ ಕಾರ್ಡ್ ಅಳತೆಯ ಪೋಟೋ ಮುದ್ರಿಸಿ ಕೊಡುವುದು, ಬೀದಿ ದೀಪಗಳ ವಾರ್ಷಿಕ ನಿರ್ವಹಣೆ ಸೇರಿದಂತೆ ಹಲವಾರು ಗುತ್ತಿಗೆಗಳನ್ನು ಮುಂದುವರೆಸುವುದು, ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಪಾವತಿಸುವುದು, ನಗರಸಭೆ ನೌಕರರಿಗೆ ವೈದ್ಯಕೀಯ ಚಿಕಿತ್ಸೆ ಭತ್ಯೆ ನೀಡುವುದು, ನಗರಸಭೆ ವ್ಯಾಪ್ತಿಯಲ್ಲಿರುವ ನಗರಸಭೆಗೆ ಹಸ್ತಾಂತರಗೊಂಡಿರುವ ಕೆರೆಗಳನ್ನು ಪುನಶ್ಚೇತನಗೊಳಿಸಿವುದು, ತ್ಯಾಜ್ಯ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇ...

ನೂತನ ಡಾ.ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸದೆ ಅವಮಾನ

Image
ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಖಂಡನೆ  ಭದ್ರಾವತಿಯಲ್ಲಿ ಶನಿವಾರ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.       ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟನೆಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು.       ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಲ್ಲದೆ ಬಾಳೆಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿಸದೆ ಅಂಬೇಡ್ಕರ್‌ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಮೈಸೂರು ಕಾಗದ ಕಾರ್ಖಾನೆ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದ ಸಿದ್ದರಾಮಯ್ಯರವರು ಇದ...

ನೀರಿನ ಕಂದಾಯ ಕಡಿಮೆಗೊಳಿಸಿ, ಖಾಲಿ ನಿವೇಶನಗಳಿಗೆ ತ್ಯಾಜ್ಯ ಶುಲ್ಕ ವಿಧಿಸದಿರಿ

Image
ಮನೆ ಮಾಲೀಕರ ಸಂಘದಿಂದ ನಗರಸಭೆ ಅಧ್ಯಕ್ಷರಿಗೆ ಮನವ ಭದ್ರಾವತಿ ನಗರಸಭೆ ಆಡಳಿತ ಅವೈಜ್ಞಾನಿಕವಾಗಿ ನೀರಿನ ಕಂದಾಯ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು, ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ಶುಲ್ಕ ವಿಧಿಸುವುದನ್ನು ಕೈಬಿಡಬೇಕು ಹಾಗು ಆಸ್ತಿ ತೆರಿಗೆಯಲ್ಲಿ ಉಂಟಾಗುತ್ತಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಶನಿವಾರ ನಗರಸಭೆ ಸಾಮಾನ್ಯಸಭೆಯಲ್ಲಿ ಅಧ್ಯಕ್ಷರಿಗೆ ಮನೆ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ನಗರಸಭೆ ಆಡಳಿತ ಅವೈಜ್ಞಾನಿಕವಾಗಿ ನೀರಿನ ಕಂದಾಯ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು, ಖಾಲಿ ನಿವೇಶನಗಳಿಗೆ ಘನ ತ್ಯಾಜ್ಯ ಶುಲ್ಕ ವಿಧಿಸುವುದನ್ನು ಕೈಬಿಡಬೇಕು ಹಾಗು ಆಸ್ತಿ ತೆರಿಗೆಯಲ್ಲಿ ಉಂಟಾಗುತ್ತಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಶನಿವಾರ ನಗರಸಭೆ ಸಾಮಾನ್ಯಸಭೆಯಲ್ಲಿ ಅಧ್ಯಕ್ಷರಿಗೆ ಮನೆ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಯಿತು.       ನಗರಸಭೆ ಆಡಳಿತ ಏ.೧ರಿಂದ ಯಾವುದೇ ಮುನ್ಸೂಚನೆ ನೀಡದೆ ಅವೈಜ್ಞಾನಿಕವಾಗಿ ನೀರಿನ ಕಂದಾಯ ಶೇ.೫೦ರಷ್ಟು ಹೆಚ್ಚಳ ಮಾಡಿರುವುದು ಖಂಡನೀಯ. ಈ ಸಂಬಂಧ ಈಗಾಗಲೇ ತಮಗೂ ಹಾಗು ಶಾಸಕರಿಗೂ ಮನವಿ ಮಾಡಲಾಗಿದ್ದು, ಸಾಮಾನ್ಯಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ನಾಗರೀಕರಿಗೆ ಹೊರೆಯಾಗದಂತೆ ನೀರಿನ ಶುಲ್ಕ ಹೆಚ್ಚಳ ಮಾಡಿರುವುದನ್...

ಏ.೧೮ರಂದು ನಗರಸಭೆ ಸಾಮಾನ್ಯ ಸಭೆ

Image
     ಭದ್ರಾವತಿ : ನಗರಸಭೆ ಸಾಮಾನ್ಯ ಸಭೆ ಏ.೧೮ರ ಶನಿವಾರ ಮಧ್ಯಾಹ್ನ ೩ ಗಂಟೆಗೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.       ಈ ಬಾರಿ ಸಾಮಾನ್ಯಸಭೆ ಹೆಚ್ಚು ಗಮನ ಸೆಳೆಯುತ್ತಿದ್ದು, ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ನಂತರ ನಡೆಯುತ್ತಿರುವ ಸಭೆ ಇದಾಗಿದೆ. ಈ ನಡುವೆ ನೀರಿನ ಶುಲ್ಕ ತೆರಿಗೆ, ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ನಗರಸಭೆ ವ್ಯಾಪ್ತಿಯ ನಿವಾಸಿಗಳ ಆಕ್ರೋಶಕ್ಕೆ ತುತ್ತಾಗುವಂತಾಗಿದೆ. ಬೇಸಿಗೆ ಹಿನ್ನಲೆಯಲ್ಲಿ ಬಹುತೇಕ ವಾರ್ಡ್‌ಗಳಲ್ಲಿ ಹಲವಾರು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ನಡುವೆ ಹಲವು ಪ್ರಮುಖ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಯಲಿದೆ. ಇದರಿಂದಾಗಿ ಈ ಬಾರಿ ಸಭೆ ಹೆಚ್ಚು ಗಮನ ಸೆಳೆಯುತ್ತಿದೆ.       ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗು ಸಿಬ್ಬಂದಿಗಳು ತಪ್ಪದೇ ಸಭೆಗೆ ಹಾಜರಾಗಿ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ.

ಸಾಮಾಜಿಕ ಸುಧಾರಣೆಗಳಿಗೆ ಅದ್ಯತೆ ನೀಡುವ, ಜೀವನ ಮೌಲ್ಯಗಳನ್ನು ತಿಳಿಸುವ ಕಲೆಗಳು ವಿರಳ : ಉಮೇಶ್ ಹಾಲಾಡಿ

Image
ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ನಯನ ಆಸ್ಪತ್ರೆ ಸಭಾಂಗಣದಲ್ಲಿ ಜನ್ನಾಪುರ ಡಾ. ಬಿ.ಆರ್.ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ  ಗಾಯಕ ನಾದ ಮಣಿನಾಲ್ಕೂರುರವರ ಕತ್ತಲಹಾಡು ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.      ಭದ್ರಾವತಿ: ಸಾಮಾಜಿಕ ಸುಧಾರಣೆಗಳಿಗೆ ಹೆಚ್ಚಿನ ಅದ್ಯತೆ ನೀಡುವ, ಜೀವನ ಮೌಲ್ಯಗಳನ್ನು ತಿಳಿಸುವ ಅರ್ಥಗರ್ಭಿತವಾದ ಹಾಡುಗಳ ಮೂಲಕ ಜನರನ್ನು ರಂಜಿಸುವ ಕಲೆಗಳು ತುಂಬಾ ವಿರಳವಾಗಿದ್ದು, ಇಂತಹ ಕಲೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಚ್ಚಿನ ಸಹಕಾರ ನೀಡಲಿದೆ ಎಂದು ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ತಿಳಿಸಿದರು.        ಅವರು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ) ನಯನ ಆಸ್ಪತ್ರೆ ಸಭಾಂಗಣದಲ್ಲಿ ಜನ್ನಾಪುರ ಡಾ. ಬಿ.ಆರ್.ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ ಆಯೋಜಿಸಲಾಗಿದ್ದ ಗಾಯಕ ನಾದ ಮಣಿನಾಲ್ಕೂರುರವರ ಕತ್ತಲಹಾಡು ಗಾಯನ ಕಾರ್ಯಕ್ರಮ ಏಕತಾರಿ ವಾದ್ಯ ನುಡಿಸುವಿದರ ಮೂಲಕ ಉದ್ಘಾಟಿಸಿ ಮಾತನಾಡಿದರು.       ವಿಶಿಷ್ಟ ಕಲೆಯನ್ನು ಹೊಂದಿರುವ ನಾದ ಮಣಿನಾಲ್ಕೂರುರವರು ಹಾಡುಗಳ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗ...

ಜೆಡಿಎಸ್‌ನಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ-೨ ಕಾರ್ಯಾಗಾರಕ್ಕೆ ಚಾಲನೆ

Image
ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.       ಭದ್ರಾವತಿ: ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.       ಪಕ್ಷದ ರಾಜ್ಯ ವಕ್ತಾರ ರಾಜುಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗು ಕೋರ್ ಕಮಿಟಿ ಸದಸ್ಯೆ ಶಾರದ ಅಪ್ಪಾಜಿ ಸೇರಿದಂತೆ ಇನ್ನಿತರರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜುಗೌಡರವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ನೀಡಿ ಬೂತ್ ಮಟ್ಟದ ಬಿಎಲ್‌ಎ ಅಧಿಕಾರಿಗಳು ಯಾವ ರೀತಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂಬುದನ್ನು ವಿವರಿಸಿದರು.       ಪಕ್ಷದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಗೀತಾ ಸತೀಶ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭೆ  ಸದಸ್ಯೆ ಮಂಜುಳ ಸುಬ್ಬಣ್ಣ, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಮಾಜಿ ಸದಸ್ಯರಾದ ಮೋಹನ್ ರಾವ್, ಎಚ್.ಬಿ...

ಏ.೧೯ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆ : ಒಟ್ಟು ೧೫ ಮಂದಿ ಕಣದಲ್ಲಿ

Image
     ಭದ್ರಾವತಿ : ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯಕಾರಿ ಸಮಿತಿ ಚುನಾವಣೆ ಏ.೧೯ರ ಭಾನುವಾರ ಬೆಳಿಗ್ಗೆ ೮.೩೦ ರಿಂದ ಸಂಜೆ ೪.೩೦ರ ವರೆಗೆ ಹಳೇನಗರದ ಕನಕ ಮಂಟಪ ಮೈದಾನ ಮುಂಭಾಗದ ಪಿ.ಎಂ.ಶ್ರೀ ಶಾಲೆಯಲ್ಲಿ ನಡೆಯಲಿದೆ.       ಕಾರ್ಯಕಾರಿ ಸಮಿತಿಯ ೪ ಮಹಿಳಾ ಮೀಸಲು ವರ್ಗಕ್ಕೆ ದೇವರ ನರಸೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್.ಎಸ್ ಮಾಯಮ್ಮ, ತಿಪ್ಲಾಪುರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಎಸ್. ಚಿತ್ರ, ಗೊಂದಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಆಸ್ಮಾ ಬೇಗಂ, ಹಳೇನಗರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಕೋಕಿಲ ಮತ್ತು ಕಲ್ಲಿಹಾಳ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಿ. ಪಾರ್ವತಮ್ಮ ಸೇರಿದಂತೆ ಒಟ್ಟು ೫ ಅಭ್ಯರ್ಥಿಗಳು ಕಣದಲ್ಲಿದ್ದಾರೆ.      ೯ ಸಾಮಾನ್ಯ ವರ್ಗಕ್ಕೆ ಮೀಸಲಾದ ಸ್ಥಾನಗಳಿಗೆ ಅನವೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್.ಎಂ ಜಗದೀಶ್, ಆಟಗಾರಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಟಿ. ಪೃಥ್ವಿರಾಜ್, ಹಿರಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ.ಎಸ್ ಮಲ್ಲಿಕಾರ್ಜುನ್, ಹೊಳೆಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್. ಹನುಮಂತಪ್ಪ, ಗೌಳಿಗೆರೆ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಚ್. ಭಾರತಿ, ಅಂತರಗಂಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಕೆಪಿಎಸ್)ಯ ಎಂ.ಸಿ ...

ಹೋರಾಟಗಾರ ಐ.ಎಲ್ ಅರುಣ್ ಕುಮಾರ್ ನಿಧನ

Image
ಐ.ಎಲ್ ಅರುಣ್ ಕುಮಾರ್       ಭದ್ರಾವತಿ : ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ನಿವಾಸಿ, ಹಿರಿಯ ಹೋರಾಟಗಾರ ಐ.ಎಲ್ ಅರುಣ್ ಕುಮಾರ್(೭೪) ಬುಧವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.       ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ಪ್ರಗತಿಪರ ಹಾಗು ಕನ್ನಡಪರ ಹೋರಾಟಗಾರರಾಗಿದ್ದರು. ಈ ಹಿಂದೆ ಪತ್ರಿಕಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.       ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಜಟ್‌ಪಟ್ ನಗರದ ಕ್ರೈಸ್ತ ಸಮಾಧಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ಮಾನವ ಹಕ್ಕುಗಳ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ, ಅವಮಾನ, ಜೀವ ಬೆದರಿಕೆ : ೫ ಮಂದಿಗೆ ೨ ಲಕ್ಷ ಜೈಲು ಶಿಕ್ಷೆ

Image
ಭದ್ರಾವತಿ ಅಂತರಗಂಗೆ ಗ್ರಾಮದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ, ಅವಮಾನ, ಜೀವ ಬೆದರಿಕೆ, ೫ ಮಂದಿಗೆ ೨ ಲಕ್ಷ ಜೈಲು ಶಿಕ್ಷೆ       ಭದ್ರಾವತಿ: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಆಕೆಯ ಜಡೆ ಹಾಗು ಸೀರೆ ಎಳೆದು ಅವಮಾನಗೊಳಿ ಕೊಲೆ ಬೆದರಿಕೆ ಹಾಕಿದ್ದ ೫ ಮಂದಿಗೆ ೨ ವರ್ಷ ಜೈಲು ಶಿಕ್ಷೆ ಹಾಗು ಒಟ್ಟು ೧ ಲಕ್ಷ ರು. ದಂಡ ವಿಧಿಸಿ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.       ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ  ೬ ಜೂನ್ ೨೦೨೩ ರಂದು ರಾತ್ರಿ ೧೧.೪೫ ಸಮಯದಲ್ಲಿ ನವೀನ(೨೫), ಮನು(೩೧), ಕೆ. ಸಂತೋಷ(೩೧), ವಿ. ಮಂಜುನಾಥ(೩೩) ಹಾಗೂ ಅಭಿಷೇಕ್(೨೪) ಎಂಬುವರು ಗ್ರಾಮದ ರಾಧಾ(೩೫)ರವರ ಮನೆಗೆ ಅವರ ಪತಿ ವೆಂಕಟೇಶ್‌ರನ್ನ ಹುಡುಕಿಕೊಂಡು ಬಂದಿದ್ದು, ಈ ಸಂದರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ರಾಧಾರಿಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಅವರ ಜಡೆ ಹಾಗು ಸೀರೆ ಎಳೆದು ಅವಮಾನಗೊಳಿ ಕೊಲೆ ಬೆದರಿಕೆ ಹಾಕಿದ್ದರು. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.       ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಐಪಿಎಸ್ ಅಧಿಕಾರಿ  ಜಿತೇಂದ್ರ ಕುಮಾರ ದಯಾಮರವರು ಪ್ರಕರಣದ ದೋಷಾರೋಪಣಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ...

ಶ್ರಮ ಜೀವಿಗಳಾದ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಮೋಹನ್

Image
ಭದ್ರಾವತಿ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.        ಭದ್ರಾವತಿ: ಶ್ರಮ ಜೀವಿಗಳಾದ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಪ್ರಾಮಾಣಿಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಕಾಳಜಿವಹಿಸಿದ್ದು, ಎಲ್ಲಾ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುತ್ತಿದ್ದಾರೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.       ಅವರು ಗುರುವಾರ ನಗರದ ಬೈಪಾಸ್ ರಸ್ತೆ ಕಾರ್ಮಿಕರ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ವೃತ್ತಿಗಳ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ(ಆರ್‌ಪಿಎಲ್), ಸುರಕ್ಷತಾ ಕಿಟ್‌ಗಳ ವಿತರಣೆ ಮತ್ತು ಸೇತುಬಂಧ ತರಬೇತಿ ಮುಕ್ತಾಯಗೊಳಿಸಿರುವ ಕಾರ್ಮಿಕರಿಗೆ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  ...

ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷೆ ಗಂಗಮ್ಮ ನಿಧನ

Image
ಗಂಗಮ್ಮ       ಭದ್ರಾವತಿ : ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಮಾಜಿ ಅಧ್ಯಕ್ಷ ದಿವಂಗತ ಕೆ.ಟಿ ಗಿರಿಯಪ್ಪನವರ ಪತ್ನಿ, ಹಳೇ ಸೀಗೇಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷೆ ಗಂಗಮ್ಮ(೭೬) ಬುಧವಾರ ಸಂಜೆ ನಿಧನ ಹೊಂದಿದರು.       ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಮಹಿಳಾ ಘಟಕದ ಅಧ್ಯಕ್ಷೆ ವಾಣಿ ಸೇರಿದಂತೆ ನಾಲ್ವರು ಪುತ್ರಿಯರಿದ್ದಾರೆ. ಗಂಗಮ್ಮ ಕೆ.ಟಿ ಗಿರಿಯಪ್ಪನವರ ನಿಧನದ ನಂತರ ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಹಾಗು ರಾಜೀವ್ ಗಾಂಧಿ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.       ಗಂಗಮ್ಮನವರ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಡಾ. ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಹಾಗು ರಾಜೀವ್ ಗಾಂಧಿ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ. 

ಸಿಬಿಎಸ್‌ಇ ಪರೀಕ್ಷೆ : ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆಗೆ ಶೇ.೧೦೦ರಷ್ಟು ಫಲಿತಾಂಶ

Image
ಎಸ್. ವೈಭವಿ (ಶೇ.೯೪.೨)      ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದ್ದು, ೧೦ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.       ಒಟ್ಟು ೩೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ಪ್ರಥಮ ದರ್ಜೆಯಲ್ಲಿ ೨೫ ಹಾಗು ದ್ವಿತೀಯ ದರ್ಜೆಯಲ್ಲಿ ೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಾಮಾಜಿಕ ವಿಜ್ಞಾನದಲ್ಲಿ ೯ ವಿದ್ಯಾರ್ಥಿಗಳು ೯೦ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರುವುದು ವಿಶೇಷವಾಗಿದೆ.  ಎ.ವಿ ಚಿರಾಂತ್ ಗೌಡ (ಶೇ.೯೨.೨)      ಎಸ್. ವೈಭವಿ ಶೇ.೯೪.೨, ಎ.ವಿ ಚಿರಾಂತ್ ಗೌಡ ಶೇ.೯೨.೨, ಎಂ.ಪಿ ಹನಿ ಶೇ.೯೧.೬, ತಸ್ಮಿಯಾ ಶೇ.೯೦.೬ ಹಾಗು ವಿ.ಆರ್ ಕಾರುಣ್ಯ ಶೇ.೯೦.೨ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾಗಿದ್ದಾರೆ.       ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಲಭಿಸಲು ಕಾರಣಕರ್ತರಾಗಿರುವ ವಿದ್ಯಾರ್ಥಿಗಳು ಹಾಗು ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗು ಪೋಷಕರಿಗೆ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಮತ್ತು ಶ್ರೀ ಸತ್ಯಸಾಯಿ ಜ್ಞಾನಪೀಠ ಅಭಿನಂದನೆ ಸಲ್ಲಿಸಿವೆ.  ಎಂ.ಪಿ ಹನಿ (ಶೇ.೯೧.೬)

ದಲಿತ ಮುಖಂಡ ವಿ. ವಿನೋದ್‌ಗೆ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ

Image
ಭದ್ರಾವತಿ ನಗರದ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದಲಿತ ಮುಖಂಡ ವಿ. ವಿನೋದ್‌ರವರಿಗೆ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.       ಭದ್ರಾವತಿ: ನಗರದ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದಲಿತ ಮುಖಂಡ ವಿ. ವಿನೋದ್‌ರವರಿಗೆ ತಾಲೂಕು ಮಟ್ಟದ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ  ಆಯೋಜಿಸಲಾಗಿದ್ದ ವಿಶ್ವಜ್ಞಾನಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ೧೩೫ನೇ ಜನ್ಮ ದಿನಾಚರಣೆ ಹಾಗು ನೂತನವಾಗಿ ನಿರ್ಮಾಣಗೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ  ಪ್ರಶಸ್ತಿ ನೀಡಿ ಗೌರವಿಸಲಾಯಿತು.       ವಿನೋದ್‌ರವರು ಹಲವಾರು ವರ್ಷಗಳಿಂದ ದಲಿತಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅಲ್ಲದೆ ಕಟ್ಟಡ ಹಾಗು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಪರವಾಗಿ ಸಹ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ...

ಅಂಬೇಡ್ಕರ್, ವಿಶ್ವೇಶ್ವರಾಯ ಇಬ್ಬರು ಮಹನೀಯರ ಬದುಕು ಪ್ರತಿಯೊಬ್ಬರಿಗೂ ಆದರ್ಶ : ಬಿ. ವಿಶ್ವನಾಥ್

Image
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮ ದಿನ ಆಚರಿಸಲಾಯಿತು.        ಭದ್ರಾವತಿ : ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಮತ್ತು  ಸರ್.ಎಂ ವಿಶ್ವೇಶ್ವರಾಯ ಈ ಇಬ್ಬರು ಮಹನೀಯರ ಬದುಕು ಪ್ರತಿಯೊಬ್ಬರಿಗೂ ದಾರಿ ದೀಪವಾಗಿದೆ ಎಂದು ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಖ್ಯ ಮಹಾಪ್ರಬಂಧಕ(ಎಚ್.ಆರ್), ಪ್ರಭಾರಿ ಕಾರ್ಯಪಾಲಕ ನಿರ್ದೇಶಕ ಬಿ. ವಿಶ್ವನಾಥ್ ಹೇಳಿದರು.        ಅವರು ಕಾರ್ಖಾನೆಯಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅಂಬೇಡ್ಕರ್ ಮತ್ತು ವಿಶ್ವೇಶ್ವರಾಯರವರ ಬಾಲ್ಯ ಜೀವನ, ವಿದ್ಯಾಭ್ಯಾಸ, ಅವರು ಅನುಭವಿಸಿದ ನೋವು, ಅವಮಾನ ಹಾಗು ಸಾಧನೆ ಕುರಿತು ವಿವರಿಸಿ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡುವಂತೆ ಕರೆ ನೀಡಿದರು.       ಪ್ರಭಾರಿ ಮಹಾಪ್ರಬಂಧಕರು(ಸ್ಥಾವರ) ಟಿ. ರವಿಚಂದ್ರನ್, ಮಹಾಪ್ರಬಂಧಕರು (ಪರಿಸರ ನಿರ್ವಹಣಾ ಇಲಾಖೆ) ಎಂ. ಸುಬ್ಬರಾವ್,  ಮಹಾಪ್ರಬಂಧಕರು (ನಿರ್ವಹಣೆ ಮತ್ತು ಐಇಡಿ) ಮತ್ತು ಎಸ್.ಸಿ/ಎಸ್.ಟಿ ಕಾರ್ಮಿಕರ ಸಮನ್ವಯಾಧಿಕಾರಿ ಎಲ್. ಸುಂದರ ವಡಿವೇಲು, ಸಹಾಯಕ ...

ಅಬಕಾರಿ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ

Image
ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಭದ್ರಾವತಿ ಹಳೇನಗರದ ಪತ್ರಿಕಾ ಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಕಛೇರಿಯಲ್ಲಿ ಮಂಗಳವಾರ ಆಚರಿಸಲಾಯಿತು.       ಭದ್ರಾವತಿ: ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಹಳೇನಗರದ ಪತ್ರಿಕಾ ಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಕಛೇರಿಯಲ್ಲಿ ಆಚರಿಸಲಾಯಿತು.       ಕಳೆದ ಹಲವಾರು ವರ್ಷಗಳಿಂದ ನಗರದ ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬಕಾರಿ ಕಛೇರಿಗೆ ಕೆಲವು ತಿಂಗಳ ಹಿಂದೆ ಪತ್ರಿಕಾಭವನ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಹ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜನ್ಮದಿನ ಆಚರಿಸಲಾಯಿತು. ಅಬಕಾರಿ ನಿರೀಕ್ಷಕ ಹಾಲನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬಕಾರಿ ಉಪ ನಿರೀಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಬಿಜೆಪಿ ಪಕ್ಷದಿಂದ ಡಾ. ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಜನ್ಮದಿನ ಆಚರಣೆ

Image
ಸಂವಿಧಾನ ಶಿಲ್ಪಿ, ಭಾರತ ರತ್ನ,  ಡಾ.   ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದಿಂದ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.        ಭದ್ರಾವತಿ: ಸಂವಿಧಾನ ಶಿಲ್ಪಿ, ಭಾರತ ರತ್ನ,  ಡಾ.   ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್‌ರವರ ೧೩೫ನೇ ಜನ್ಮದಿನ ಭಾರತೀಯ ಜನತಾ ಪಕ್ಷದಿಂದ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.        ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ಬೆಳಿಗ್ಗೆ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.       ನಂತರ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್‌ವರು ಮುಂಬೈ, ಅಮೇರಿಕ ಮತ್ತು ಲಂಡನ್ ವಿಶ್ವವಿದ್ಯಾಲಯಗಳಿಂದ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಕಾನೂನು ಶಾಸ್ತ್ರಗಳಲ್ಲಿ ಉನ್ನತ ಪದವಿಯನ್ನು ಪಡೆದಿದ್ದಾರೆ.  ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷತೆ ವಹಿಸಿದ್ದರು. ಇಡೀ ವಿಶ್ವದಲ್ಲಿ ಶ್ರೇಷ್ಠವಾದ ಸಂವಿಧಾನ ನೀಡಿದ ಮಹನೀಯರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದರು.   ...

ಡಾ. ಬಿ.ಆರ್ ಅಂಬೇಡ್ಕರ್ ಚಿಂತನೆ, ಆದರ್ಶತನ ಅಳವಡಿಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್

Image
೪.೬೨ ಕೋ. ರು. ವೆಚ್ಚದ ನೂತನ ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮ  ಭದ್ರಾವತಿಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಜ ಕಲ್ಯಾಣ ಇಲಾಖೆ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೫ನೇ ಜಯಂತಿ ಕಾರ್ಯಕ್ರಮ ಹಾಗು ನೂತನವಾಗಿ ಸುಮಾರು ೪.೬೨ ಕೋ. ರು. ವೆಚ್ಚದಲ್ಲಿ ನಗರದ ಹೃದಯ ಭಾಗ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನಿರ್ಮಿಸಲಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.       ಭದ್ರಾವತಿ : ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಚಿಂತನೆ, ಆದರ್ಶತನ ಈ ದೇಶದ ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.       ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಜ ಕಲ್ಯಾಣ ಇಲಾಖೆ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾ...

ಏ.೧೫ರಂದು ನಾದ ಮಣಿನಾಲ್ಕೂರು ಹಾಡುಗಾರಿಕೆ

Image
ನಾದ ಮಣಿನಾಲ್ಕೂರು      ಭದ್ರಾವತಿ: ನಗರದ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ವಿಶೇಷ ಘಟಕ ಧನ ಸಹಾಯ ಯೋಜನೆಯಡಿ ಏ.೧೫ರಂದು ಸಂಜೆ ೬.೩೦ಕ್ಕೆ ವಿಶೇಷ ಹಾಡುಗಾರಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.       ನಾದ ಮಣಿನಾಲ್ಕೂರು ಇವರಿಂದ ಕತ್ತಲ ಹಾಡು ಬೆಳಕಿನೆಡೆಗೆ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಲಾಸಕ್ತರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ತಮಟೆ ಜಗದೀಶ್ ಕೋರಿದ್ದಾರೆ. 

ಕೊನೆಗೂ ಜನ್ಮದಿನದಂದೇ ಉದ್ಘಾಟನೆಗೊಳ್ಳುತ್ತಿದೆ ಡಾ. ಬಿ.ಆರ್ ಅಂಬೇಡ್ಕರ್ ಭವನ

Image
ಭದ್ರಾವತಿಯಲ್ಲಿ ನಿರ್ಮಾಣಗೊಂಡಿರುವ ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ.         * ಅನಂತಕುಮಾರ್          ಮುಖ್ಯಾಂಶಗಳು :-      - ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ೨೦೧೭ರಲ್ಲಿ ಶಂಕುಸ್ಥಾಪನೆ.       - ಒಟ್ಟು ೪.೬೨ ಕೋ. ರು. ವೆಚ್ಚದ ಸುಸ್ಸಜಿತ ಭವನ       - ವಿಳಂಬ ಕಾಮಕಾರಿ, ೯ ವರ್ಷಗಳ ನಂತರ ಪೂರ್ಣ      - ಎಸ್. ಮಧು ಬಂಗಾರಪ್ಪ ಉದ್ಘಾಟನೆ, ಸಚಿವ ಡಾ. ಎಚ್.ಸಿ ಮಹಾದೇವಪ್ಪ ಉಪಸ್ಥಿತಿ      ಭದ್ರಾವತಿ: ಕ್ಷೇತ್ರದಲ್ಲಿ ಸುಮಾರು ೪ ದಶಕಗಳ ಹೋರಾಟಕ್ಕೆ ಇದೀಗ ಫಲ ಲಭಿಸಿದ್ದು, ವಿಶ್ವಜ್ಞಾನಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಇಂದು ಉದ್ಘಾಟನೆಗೊಳ್ಳುತ್ತಿದೆ.       ದಲಿತ ಚಳುವಳಿ ಹುಟ್ಟಿದ ನೆಲದಲ್ಲಿ ಅದರ ಮೂಲ ಪ್ರೇರಕ ಶಕ್ತಿ, ಜಗತ್ತಿನ ಶ್ರೇಷ್ಠ ಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ. ಬಿ.ಆರ್ ಅಂಬೇಡ್ಕರ್‌ರವರ ಭವನದ ಕನಸು ಇದೀಗ ನನಸಾಗುತ್ತಿದೆ. ಕ್ಷೇತ್ರದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು ವಿವಿಧ ದಲಿತಪರ ಸಂಘಟನೆಗಳು ಸುಮಾರು ೪ ದಶಕಗಳ ಹಿಂದೆ ಆರಂಭಿಸಿದ ಹೋರಾಟ ಇದೀಗ ಅಂತ್ಯಗೊಳ್ಳುವಂತಾಗಿದೆ.     ಆರಂಭದ ಹೋರಾಟದಲ್ಲಿ ಜ...