ವಿಶ್ವೇಶ್ವರಾಯ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ
ಭದ್ರಾವತಿ ವಿಶ್ವೇಶ್ವರಾಯ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಭದ್ರಾವತಿ: ವಿಶ್ವೇಶ್ವರಾಯ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲೆಯ ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಎಲ್ಲರ ಗಮನ ಸೆಳೆದರು. ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ ಮಾತನಾಡಿ, ಶ್ರೀಕೃಷ್ಣನ ಜೀವನ ಹಾಗೂ ಬೋಧನೆಗಳು ಇಂದಿನ ಮಕ್ಕಳಿಗೆ ಅತ್ಯಂತ ಪ್ರೇರಣಾದಾಯಕವಾಗಿವೆ ಎಂದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಹೀನ ಬಾನು ಅವರು ಮಾತನಾಡಿ, ಮಕ್ಕಳು ಶ್ರೀಕೃಷ್ಣನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹಾಗೂ ಶಾಲೆಯ ಎಲ್ಲಾ ವಿಭಾಗಗಳ ಮುಖ್ಯ ಶಿಕ್ಷಕರು ಹಾಗು ಸಿಬ್ಬಂದಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಎಲ್ಕೆಜಿ-ಯುಕೆಜಿ ವಿಭಾಗದ ವಿದ್ಯಾರ್ಥಿನಿಯರಾದ ಮಾಹಿ...