ಅಪರಾಧ ಪ್ರಕರಣಗಳು ಹೆಚ್ಚಳ : ಪೊಲೀಸ್ ಉಪಾಧೀಕ್ಷಕರ ಕಛೇರಿಗೆ ಮುತ್ತಿಗೆ ಹಾಕಿ ಬಿಜೆಪಿ ಪ್ರತಿಭಟನೆ
ಮಕ್ಕಳು, ಮಹಿಳೆಯರು ಸೇರಿದಂತೆ ನಾಗರೀಕರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಬೆಳಿಗ್ಗೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು. ಭದ್ರಾವತಿ : ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ಬೆಳಿಗ್ಗೆ ಮಿಲ್ಟ್ರಿಕ್ಯಾಂಪ್ ಪೊಲೀಸ್ ಉಪಾಧೀಕ್ಷಕರ ಕಛೇರಿ ಬಳಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ಪ್ರತಿಭಟನೆ ನಡೆಸಲಾಯಿತು. ಕೊಲೆ, ಸುಲಿಗೆ ಅಪರಾಧ ಪ್ರಕರಣಗಳು, ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗು ಓ.ಸಿ ಮಟ್ಕಾ, ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟ ಕ್ಷೇತ್ರದಲ್ಲಿ ಮಿತಿಮೀರಿದ್ದು, ಸಾರ್ವಜನಿಕರು ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ಇಲ್ಲಿನ ಪೊಲೀಸ್ ಇಲಾಖೆ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನೆಯಲ್ಲಿ ಆರೋಪಿಸಲಾಯಿತು. ಭದ್ರಾವತಿ ಕ್ಷೇತ್ರದಲ್ಲಿ ಹೆ...