ಮಂಗಳೂರು ಬಿ.ಸಿ ರೋಡ್ ಯುವತಿ ಹತ್ಯೆ ಪ್ರಕರಣ :
ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದಿರುವ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಖಂಡಿಸಿ ಆರೋಪಿ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಮಹಿಳೆಯರ ಸುರಕ್ಷತೆ ಬಲಪಡಿಸುವಂತೆ ಆಗ್ರಹಿಸಿ ಭದ್ರಾವತಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಮಹಿಳಾ ಘಟಕದಿಂದ ಶನಿವಾರ ತಹಸೀಲ್ದಾರ್ ಪ್ರದೀಪ್ ದೇವಗಿರಿರವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಭದ್ರಾವತಿ : ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದಿರುವ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಖಂಡಿಸಿ ಆರೋಪಿ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಮಹಿಳೆಯರ ಸುರಕ್ಷತೆ ಬಲಪಡಿಸುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ವಿಭಾಗದ ಮಹಿಳಾ ಘಟಕದಿಂದ ಶನಿವಾರ ತಹಸೀಲ್ದಾರ್ ಪ್ರದೀಪ್ ದೇವಗಿರಿರವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಯಿತು. ಮಂಗಳೂರಿನ ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ನಡೆದ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣ ಅತ್ಯಂತ ದುಃಖಕರ ಹಾಗೂ ಖಂಡನೀಯವಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ಆತಂಕವನ್ನುಂಟುಮಾಡುತ್ತಿದ್ದು, ಅಲ್ಲದೆ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಹಿಳೆಯರ...