Posts

ಎತ್ತಿನ ಗಾಡಿಯಿಂದ ಕೆಳಗೆ ಬಿದ್ದು ಕೂಲಿ ಕಾರ್ಮಿಕ ಸಾವು

Image
     ಭದ್ರಾವತಿ: ಅಡಕೆ ಮರ ಕಡಿದುಕೊಂಡು ಎತ್ತಿನ ಗಾಡಿಯಲ್ಲಿ ಕೊಂಡೊಯ್ಯುವಾಗ ಕೂಲಿಕಾರ್ಮಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.       ನಗರದ ಜೇಡಿಕಟ್ಟೆ ಹೊಸೂರಿನಿಂದ ಶರವಣ(೫೩) ಎಂಬ ಕೂಲಿಕಾರ್ಮಿಕ ೨೦ ಅಡಿ ಉದ್ದದ ಅಡಕೆ ಮರ ಕಡಿದು ಎತ್ತಿನಗಾಡಿಯಲ್ಲಿ ಕೊಂಡೊಯ್ಯುವಾಗ ಜೇಡಿಕಟ್ಟೆಯ ವಿನಾಯಕ ಇಂಡಸ್ಟ್ರೀಸ್ ಬಳಿ ಎತ್ತಿನಗಾಡಿಯಿಂದ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ      ಇವರ ಮೃತದೇಹದ ಮರಣೋತ್ತರ ಪರೀಕ್ಷೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ವರದಿ ಬಂದ ನಂತರ ಇವರ ಸಾವಿನ ಕುರಿತು ಖಚಿತ ಮಾಹಿತಿ ಲಭ್ಯವಾಗಲಿದೆ. ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

೧ ಲಕ್ಷ ರು. ಲಂಚ ಪಡೆಯುವಾಗ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ

Image
ಎ.ಕೆ ನಾಗೇಂದ್ರಪ್ಪ      ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ೧ ಲಕ್ಷ ರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತರು ನಡೆಸಿದ ದಾಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹಾಗು ಪತ್ರಕರ್ತ ಮಂಜುನಾಥ್ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಸಂಜೆ ನಡೆದಿದೆ.       ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಿಂಗರಾಜು ಅವರಿಗೆ ೨೦೧೧ನೇ ಸಾಲಿನಿಂದ ೨೦೨೩ನೇ ಸಾಲಿನ ಅವಧಿಯಲ್ಲಿ ಇಲಾಖೆಯಿಂದ ಬರಬೇಕಾದ ವಾರ್ಷಿಕ ವೇತನ ಬಡ್ತಿಗಳು ಮತ್ತು ಇತರೆ ಭತ್ಯೆಗಳು ಸೇರಿ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನೀಡಲು ೪ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಈ ಪೈಕಿ ೧ ಲಕ್ಷ ರು. ಹಣ ಪಡೆಯುವಾಗ ದಾಳಿ ನಡೆಸಲಾಗಿದೆ.      ಲಿಂಗರಾಜು ಅವರು ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗು ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ಮೇಲಾಧಿಕರಿಗಳಿಗೆ ಮನವಿ ಸಲ್ಲಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪತ್ರಕರ್ತ ಮಂಜುನಾಥ್ ನೆರವಿನೊಂದಿಗೆ ಒಟ್ಟು ೪ ಲಕ್ಷ ರು. ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ  ಸಂಜೆ ೭ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕೊಠಡಿಯಲ್ಲಿ ಎ.ಕೆ ನಾಗೇಂದ್ರದಪ್ಪ. ಮತ್ತು...

ಮಾ.೪ರಂದು ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಗುರು ನಿವಾಸ ಉದ್ಘಾಟನೆ

Image
ಕೆ.ಆರ್ ಸುಬ್ಬರಾವ್       ಭದ್ರಾವತಿ : ಭದ್ರಾನದಿ ತೀರದ ನಗರದ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುನಿವಾಸವನ್ನು ಮಾ.೪ರಂದು ಬೆಳಿಗ್ಗೆ ೧೧.೩೦ಕ್ಕೆ ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ವಿಧುಶೇಖರ ಭಾರತೀ ಸನ್ನಿದಾನಂಗಳವರು ಉದ್ಘಾಟಿಸುವರು ಎಂದು ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ತಿಳಿಸಿದರು.       ಅವರು ಸೋಮವಾರ ಈ ಕುರಿತು ಮಾಹಿತಿ ನೀಡಿ, ಶ್ರೀ ಶಾರದಾ ಮಾತೆ,  ಶ್ರೀ ಚಂದ್ರಮೌಳೀಶ್ವರ, ಶ್ರೀ ಗಣೇಶ ದೇವರುಗಳ ಕೃಪೆಯಿಂದ ಹಾಗೂ ಉಭಯ ಜಗದ್ಗುರುಗಳ ಪರಮಾನುಗ್ರಹದಿಂದ ಮತ್ತು ಭಕ್ತರು, ದಾನಿಗಳ ಸಹಕಾರದಿಂದ ನಗರದಲ್ಲಿ ಶ್ರೀ ಶೃಂಗೇರಿ ಶಂಕರ ಮಠದ ಶಾಖೆಯನ್ನು ಹೆಚ್ಚಿನ ಶ್ರಮವಹಿಸಿ ಸ್ಥಾಪಿಸಲಾಯಿತು. ದೇವಸ್ಥಾನ, ಗೋ ಶಾಲೆ, ಸಮುದಾಯ ಭವನ, ಪಾಕಶಾಲೆ, ಉದ್ಯಾನವನ ನಿರ್ಮಿಸಲಾಗಿದ್ದು, ಶ್ರೀ ಮಠವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗಿದೆ. ಇದೀಗ ಗುರುನಿವಾಸ ನಿರ್ಮಿಸಲಾಗಿದೆ ಎಂದರು.       ಮಾ.೪ರ ಬುಧವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ, ಬೆಳಿಗ್ಗೆ ೧೧.೩೦ಕ್ಕೆ ಶ್ರೀ ಜಗದ್ಗುರುಗಳ ಉಪಸ್ಥಿತಿಯಲ್ಲಿ ಪೂರ್ಣಾಹುತಿ, ಶ್ರೀ ಗುರುನಿವಾಸದ ಉದ್ಘಾಟನೆ ನಂತರ ಸನ್ನಿಧಿಯಲ್ಲಿ ಧೂಳಿಪಾದಪೂಜೆ, ಭಿಕ್ಷಾವಂದನೆ, ಗುರುಪಾದುಕಾಪೂಜೆ, ವಿವಿಧ ಸಂಘ ಸಂಸ್ಥೆಗಳಿಂದ ಫಲ ಸಮರ್...

ಸದಸ್ಯತ್ವ ಅಭಿಯಾನಕ್ಕೆ ಕೈಜೋಡಿಸಿ ಸಂಘಟನೆ ಬಲಪಡಿಸಿ : ಬಿ.ಎ ಮಂಜುನಾಥ್

Image
ಭದ್ರಾವತಿಯಲ್ಲಿ ಬಾಪೂಜಿ ಹರಿಜನ ಮಾದರ ಸೇವಾ ಸಂಘದ ವತಿಯಿಂದ ನಗರಸಭೆ ವ್ಯಾಪ್ತಿಯ ಜಿಂಕಲೈನ್ ಮತ್ತು ಹುತ್ತಾಕಾಲೋನಿ ಭಾಗದ ಸರ್ವಸದಸ್ಯರ ಸಭೆ ಏರ್ಪಡಿಸಲಾಗಿತ್ತು.      ಭದ್ರಾವತಿ: ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯ ಪಡೆಯುವ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಕೈಜೋಡಿಸುವ ಮೂಲಕ ಸಂಘಟನೆ ಬಲಗೊಳಿಸಬೇಕೆಂದು ನಗರದ ಬಾಪೂಜಿ ಹರಿಜನ ಮಾದರ ಸೇವಾ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಮನವಿ ಮಾಡಿದರು.       ಅವರು ನಗರಸಭೆ ವ್ಯಾಪ್ತಿಯ ಜಿಂಕಲೈನ್ ಮತ್ತು ಹುತ್ತಾಕಾಲೋನಿ ಭಾಗದ ಸರ್ವಸದಸ್ಯರ ಸಭೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಈಗಾಗಲೇ ಸುಮಾರು ೧೫೬ ಕುಟುಂಬಗಳು ಸಂಘದ ಸದಸ್ಯತ್ವ ಪಡೆದುಕೊಂಡಿವೆ. ಮುಂದಿನ ದಿನಗಳಲ್ಲಿ ಬೊಮ್ಮನಕಟ್ಟೆ, ಸಂಜೀವನಗರ, ಸೀಗೆಬಾಗಿ ಗ್ರಾಮಗಳಲ್ಲೂ ಸಹ ಸದಸ್ಯತ್ವ ಅಭಿಯಾನ ನಡೆಸಲಾಗುವುದು ಎಂದರು.        ಸಂಘದಲ್ಲಿ ಸದಸ್ಯತ್ವ ಹೊಂದಿರುವವರು ಒಂದು ವೇಳೆ ಮೃತಪಟ್ಟಲ್ಲಿ ಅವರ ಕುಟುಂಬಸ್ಥರಿಗೆ ಅಂತ್ಯಸಂಸ್ಕಾರಕ್ಕೆ ೫ ಸಾವಿರ ರು. ಆರ್ಥಿಕ ನೆರವು ನೀಡಲಾಗುವುದು. ಅಲ್ಲದೆ ಸಂಘದಿಂದ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಇವುಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.       ಸಭೆಯಲ್ಲಿ ಹಿರಿಯ ದಲಿತ ನಾಯಕ ಎಚ್.ಎನ್ ಶ್ರೀನಿವಾಸ್ ಮಾತನಾಡಿ, ಸಂಘದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು...

ಮಾ.೩ರಿಂದ ೪೧ನೇ ವರ್ಷದ ಶ್ರೀ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವ

Image
     ಭದ್ರಾವತಿ: ನಗರಸಭೆ ವ್ಯಾಪ್ತಿಯ ಉಜ್ಜನೀಪುರ ಶ್ರೀ ಮದ್ದೂರಮ್ಮ ಟ್ರಸ್ಟ್ ವತಿಯಿಂದ ಮಾ.೩ ಮತ್ತು ೪ರಂದು ೪೧ನೇ ವರ್ಷದ ಶ್ರೀ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವ ಆಯೋಜಿಸಲಾಗಿದೆ.       ಫೆ.೩ರ ಮಂಗಳವಾರ ಸಂಜೆ ೫ ಗಂಟೆಗೆ ಗಂಗೆಪೂಜೆ ಮತ್ತು ರಾತ್ರಿ ೮ ಗಂಟೆಗೆ ಮಹಾಮಂಗಳಾರತಿ, ೮.೩೦ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ೪ರಂದು ಮಧ್ಯಾಹ್ನ ೧೨.೩೦ಕ್ಕೆ ಆರತಿ ತರುವ ಕಾರ್ಯಕ್ರಮ ನಡೆಯಲಿದೆ. ೨ ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಯೋಧರ ಸೇವೆ ಅನನ್ಯ, ಯೋಧರಾಗುವುದು ಯೋಗ : ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ

Image
ಭದ್ರಾವತಿ ತಾಲೂಕಿನ ಬಿಳಿಕಿ ಗ್ರಾಮದಲ್ಲಿ ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾರಥೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಬಿಳಿಕಿ ಹಿರೇಮಠದಲ್ಲಿ ದೇವತಾ ಕಾರ್ಯ, ವೀರ ಯೋಧರಿಗೆ ಗೌರವ ಗುರುರಕ್ಷೆ ಹಾಗು ಧಾರ್ಮಿಕ ಪೂಜಾ ಸಮಾರಂಭ ಆಯೋಜಿಸಲಾಗಿತ್ತು.       ಭದ್ರಾವತಿ :ಎಲ್ಲರೂ ಯೋಧರಾಗಲು ಸಾಧ್ಯವಿಲ್ಲ. ಯೋಧರಾಗುವುದು ಯೋಗವಿದ್ದಂತೆ. ಯೋಧರಿಂದ ನಾವೆಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದು ತಾಲೂಕಿನ ಬಿಳಿಕಿ ಹಿರೇಮಠ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.       ಶ್ರೀಗಳು ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾರಥೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಮಠದಲ್ಲಿ ಆಯೋಜಿಸಲಾಗಿದ್ದ ದೇವತಾ ಕಾರ್ಯ, ವೀರ ಯೋಧರಿಗೆ ಗೌರವ ಗುರುರಕ್ಷೆ ಹಾಗು ಧಾರ್ಮಿಕ ಪೂಜಾ ಸಮಾರಂಭದ ನೇತೃತ್ವವಹಿಸಿ ಮಾತನಾಡಿದರು.       ಮಠದ ಪರಂಪರೆಯಂತೆ ಶ್ರೀ ನವಿಲೆ ಬಸವೇಶ್ವರ ಸ್ವಾಮಿಯ ಮಹಾರಥೋತ್ಸವದ ಅಂಗವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಶ್ರೀ ಮಠದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನೆರವು ಹೆಚ್ಚಿನದ್ದಾಗಿದೆ ಎಂದು ಸ್ಮರಿಸಿದರು.       ಈ ಬಾರಿ ವಿಶೇಷ ಎಂದರೆ ವೀರ ಸೈನಿಕರಿಗೆ ಮಠದಿ...

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ವಿಜಯಲಕ್ಷ್ಮೀ

Image
ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀ ಅವರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ ಆದೇಶ ಹೊರಡಿಸಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ ವಿಜಯಲಕ್ಷ್ಮೀಯವರಿಗೆ ಆದೇಶ ಪತ್ರ ವಿತರಿಸಿದರು.      ಭದ್ರಾವತಿ : ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷರಾಗಿ ನ್ಯೂಕಾಲೋನಿ ನಿವಾಸಿ ವಿಜಯಲಕ್ಷ್ಮೀ ಅವರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ ಆದೇಶ ಹೊರಡಿಸಿದ್ದಾರೆ.      ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್‌ರವರ ನಿರ್ದೇಶನದ  ವಿಜಯಲಕ್ಷ್ಮೀ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ. ಹಲವಾರು ವರ್ಷಗಳಿಂದ ವಿಜಯಲಕ್ಷ್ಮೀಯವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದು, ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.     ಶಾಸಕ ಬಿ.ಕೆ.ಸಂಗಮೇಶ್ವರ್ ವಿಜಯಲಕ್ಷ್ಮೀಯವರನ್ನು ಶನಿವಾರ ತಮ್ಮ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಸದಸ್ಯರಾದ ವಿ. ಕದಿರೇಶ್,  ಬಿ.ಕೆ.ಮೋಹನ್, ಸರ್ವಮಂಗಳ ಭೈರಪ್ಪ, ಅನುಸುಧಾ ಮೋಹನ್ ಪಳನಿ, ಮಾಜಿ ಸದಸ್ಯ ಬದರಿನಾರಾಯಣ, ನರಸಿಂಹಮೂರ್ತಿ, ಕುಮಾರ್(ಮಾಸ್...

ಉಕ್ಕಿನ ನಗರದಲ್ಲಿ ಕಣ್ಮನ ಸೆಳೆದ `ಪ್ರೇಮ ಪ್ರವಾಹಿನಿ ರಥಯಾತ್ರೆ'

Image
ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ `ಪ್ರೇಮ ಪ್ರವಾಹಿನಿ ರಥಯಾತ್ರೆ'ಯು ಶನಿವಾರ ಭದ್ರಾವತಿ ನಗರಕ್ಕೆ ಆಗಮಿಸಿತು. ರಥಯಾತ್ರೆಯಲ್ಲಿ ವಿವಿಧ ಕಲಾತಂಡಗಳು, ಸ್ತಬ್ಧಚಿತ್ರಗಳು, ಶಾಲಾ ಮಕ್ಕಳು, ಭಕ್ತರು ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.       ಭದ್ರಾವತಿ : ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ `ಪ್ರೇಮ ಪ್ರವಾಹಿನಿ ರಥಯಾತ್ರೆ'ಯು ಶನಿವಾರ ನಗರಕ್ಕೆ ಆಗಮಿಸಿತು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಸೇರಿದಂತೆ ಇನ್ನಿತರರು ಅದ್ದೂರಿಯಾಗಿ ಸ್ವಾಗತಿಸಿದರು.      ರಥಯಾತ್ರೆ ಬೆಳಿಗ್ಗೆ ಹಳೇನಗರದ ಕನಕಮಂಟಪದಿಂದ ಪ್ರಾರಂಭಗೊಂಡು ಡಾ. ಪುನೀತ್ ರಾಜಕುಮಾರ್ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಡಾ. ರಾಜಕುಮಾರ್ ರಸ್ತೆ, ಹಾಲಪ್ಪ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ ಮೂಲಕ ವಿಐಎಸ್‌ಎಲ್ ಡಬ್ಬಲ್ ರಸ್ತೆ ಮೂಲಕ ಮಧ್ಯಾಹ್ನ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾಕ್ಷೇತ್ರಕ್ಕೆ ತಲುಪಿತು.            ಬೃಹತ್ ರಥಯಾತ್ರೆಯಲ್ಲಿ ಡೊಳ್ಳು ಮತ್ತು ವೀರಗಾಸೆ ಹ...

ಮಾಜಿ ಮುಖ್ಯಮುಂತ್ರಿ ಬಿ.ಎಸ್ ಯಡಿಯೂರಪ್ಪ ಜನ್ಮದಿನ : ಶುಭ ಹಾರೈಸಿ ಆಶೀರ್ವದಿಸಿದ ಬಿಳಿಕಿ ಶ್ರೀ

Image
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಶುಕ್ರವಾರ ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠ ಪೀಠಾಧ್ಯಕ್ಷರು, ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಸಹ ಕಾರ್ಯದರ್ಶಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಜನ್ಮ ದಿನದ ಶುಭ ಕೋರುವ ಮೂಲಕ ಆಶೀರ್ವದಿಸಿದರು.       ಭದ್ರಾವತಿ : ದೀನ ದಲಿತರ, ಬಡವರ ಬಂಧು, ರೈತ ನಾಯಕ, ಹೋರಾಟಗಾರ, ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಶುಕ್ರವಾರ ತಾಲೂಕಿನ ಬಿಳಿಕಿ ಹಿರೇಮಠ ಪೀಠಾಧ್ಯಕ್ಷರು, ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಸಹ ಕಾರ್ಯದರ್ಶಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಜನ್ಮ ದಿನದ ಶುಭ ಕೋರುವ ಮೂಲಕ ಆಶೀರ್ವದಿಸಿದರು.       ಶಿಕಾರಿಪುರಕ್ಕೆ ತೆರಳಿದ ಶ್ರೀಗಳು ಜನ್ಮದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಯಡಿಯೂರಪ್ಪನವರಿಗೆ ಭಗವಂತ ದೀರ್ಘಾಯುಷ್ಯ, ಆರೋಗ್ಯವನ್ನು ಕರುಣಿಸಲೆಂದು ಪ್ರಾರ್ಥಿಸಿದರು.      ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯಸ್ವಾಮೀಜಿ,  ಹಾರನಹಳ್ಳಿ ರಾಮಲಿಂಗೇಶ್ವರ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ಪಕ್ಷದ ಮುಖಂಡರು, ಗಣ್ಯರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಬಿಪಿಎಲ್ ಕಾರ್ಡ್ ರದ್ದು : ಬಡ ವರ್ಗದವರು ಬೀದಿಪಾಲು

Image
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ, ಪ್ರತಿಭಟನೆ  ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವುದನ್ನು ವಿರೋಧಿಸಿ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಶುಕ್ರವಾರ ಬಿಜೆಪಿ ಪಕ್ಷದ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ರಾಜ್ಯ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ. ಬಡ ವರ್ಗದವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ. ಬಡವರು ತಿನ್ನುವ ಅನ್ನವನ್ನು ಕಸಿಯುತ್ತಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಆರೋಪಿಸಿದರು.       ಅವರು ಶುಕ್ರವಾರ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವುದನ್ನು ವಿರೋಧಿಸಿ ತಾಲೂಕು ಕಛೇರಿ ಮುಂಭಾಗ ಪಕ್ಷದ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದರು.       ಬಡ ವರ್ಗದವರಿಗೆ ರಾಜ್ಯ ಸರ್ಕಾರ ವಿನಾಕಾರಣ ಕಿರುಕುಳ ನೀಡುತ್ತಿದ್ದು, ಅಸಂಬದ್ಧ, ಅವೈಜ್ಞಾನಿಕ ಮಾನದಂಡದ ಮೂಲಕ ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವುದು ಖಂಡನೀಯ. ಬಡ ವರ್ಗದವರಿಗೆ ಪ್ರತಿಯೊಂದಕ್ಕೂ ಬಿಪಿಎಲ್ ಕಾರ್ಡ್ ಅತಿ ಅವಶ್ಯಕವಾಗಿದೆ. ಏಕಾಏಕಿ ಕಾರ್ಡ್‌ಗಳನ್ನು ರದ್ದುಪಡಿಸಿರುವುದರಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಕ್ಷಣ ಅಸಂಬದ್ಧ, ಅವೈಜ್ಞಾನಿಕ ಮಾನದಂಡಗಳನ್ನು ಕೈಬಿಟ್ಟು ನಿಜವ...

ನೆಕ್ಸ್ಟ್ ಜೆನ್ ಇಂಡೋರ್ ಕ್ರಿಕೆಟ್ ಅಕಾಡೆಮಿಗೆ ಚಾಲನೆ

Image
ಕ್ರಿಕೆಟ್ ಆಸಕ್ತ ಮುಂದಿನ ಯುವ ಪೀಳಿಗೆಯ ಕ್ರೀಡಾಪಟುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ತರಬೇತಿ ನೀಡಲು ಭದ್ರಾವತಿಯಲ್ಲಿ ಸುಸಜ್ಜಿತವಾದ ನೆಕ್ಸ್ಟ್ ಜೆನ್ ಇಂಡೋರ್ ಕ್ರಿಕೆಟ್ ಅಕಾಡೆಮಿಗೆ ಗುರುವಾರ ಚಾಲನೆ ನೀಡಲಾಯಿತು.       ಭದ್ರಾವತಿ : ಕ್ರಿಕೆಟ್ ಆಸಕ್ತ ಮುಂದಿನ ಯುವ ಪೀಳಿಗೆಯ ಕ್ರೀಡಾಪಟುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ತರಬೇತಿ ನೀಡಲು ಸುಸಜ್ಜಿತವಾದ ನೆಕ್ಸ್ಟ್ ಜೆನ್ ಇಂಡೋರ್ ಕ್ರಿಕೆಟ್ ಅಕಾಡೆಮಿಗೆ ಗುರುವಾರ ಚಾಲನೆ ನೀಡಲಾಯಿತು.       ನಗರದ ಸಿ.ಎನ್ ರಸ್ತೆ, ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ಬ್ಲಾಕ್-೧೧ರಲ್ಲಿ ಅಕಾಡೆಮಿ ಆರಂಭಗೊಂಡಿದ್ದು, ಅಕಾಡೆಮಿ ವರ್ಷ ಪೂರ್ತಿ ಕಾರ್ಯ ನಿರ್ವಹಿಸಲಿದ್ದು, ೫ ವರ್ಷ ಮೇಲ್ಪಟ್ಟ ಬಾಲಕ ಹಾಗು ಬಾಲಕಿಯರು ಸೇರಿದಂತೆ ಎಲ್ಲಾ ವಯೋಮಾನದವರಿಗೂ ತರಬೇತಿ ನೀಡಲಾಗುತ್ತದೆ. ವೃತಿಪರ ತರಬೇತಿದಾರರಿಂದ ತರಬೇತಿ, ಬೋಲಿಂಗ್ ಮೆಷಿನ್, ಗುಂಪು ತರಬೇತಿ, ಒನ್ ಟು ಒನ್ ತರಬೇತಿ, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.       ತರಬೇತಿ ಬೆಳಿಗ್ಗೆ ೭ ಗಂಟೆಯಿಂದ ೮.೩೦ರ ವರೆಗೆ ಹಾಗು ಸಂಜೆ ೪ ರಿಂದ ೬ ಗಂಟೆವರೆಗೆ ನಡೆಯಲಿದೆ. ಕ್ರಿಕೆಟ್ ಆಸಕ್ತರು ಇದರ ಸದುಪಯೋಗಪಡೆದುಕೊಳ್ಳುವಂತೆ ಆಕಾಡೆಮಿ ಮಾಲೀಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ: ೮೧೪೭೧೬೩೫೦೯ ಅಥವಾ ೯೦೧೯೭೯೩೯೨೫ ಸಂಖ್ಯೆಗೆ ಕರೆ ಮಾಡಬಹುದಾಗಿದೆ....

11,429.10 ಲಕ್ಷ ರು. ವೆಚ್ಚದ ಆಯ-ವ್ಯಯ ರೂಪಿಸಲು ಪೂರ್ವಭಾವಿ ಸಭೆ

Image
 

ಗೃಹ ರಕ್ಷಕ ದಳ ಘಟಕಾಧಿಕಾರಿ ಜಗದೀಶ್‌ಗೆ ಮುಖ್ಯಮಂತ್ರಿಯವರ ಚಿನ್ನದ ಪದಕ

Image
ಗೃಹ ರಕ್ಷಕ ದಳ ಭದ್ರಾವತಿ ತಾಲೂಕು ಘಟಕದಲ್ಲಿ ಸುಮಾರು ೨೬ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸ್ತುತ ಘಟಕಾಧಿಕಾರಿಯಾಗಿರುವ ಪ್ಲಟೂನ್ ಕಮಾಂಡರ್ ಜಗದೀಶ್ ಅವರಿಗೆ ಈ ಬಾರಿ ಮುಖ್ಯಮಂತ್ರಿಯವರ ಚಿನ್ನದ ಪದಕ ಲಭಿಸಿದೆ.       ಭದ್ರಾವತಿ : ಗೃಹ ರಕ್ಷಕ ದಳ ತಾಲೂಕು ಘಟಕದಲ್ಲಿ ಸುಮಾರು ೨೬ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸ್ತುತ ಘಟಕಾಧಿಕಾರಿಯಾಗಿರುವ ಪ್ಲಟೂನ್ ಕಮಾಂಡರ್ ಜಗದೀಶ್ ಅವರಿಗೆ ಈ ಬಾರಿ ಮುಖ್ಯಮಂತ್ರಿಯವರ ಚಿನ್ನದ ಪದಕ ಲಭಿಸಿದೆ.       ಜಗದೀಶ್‌ರವರು ಗೃಹ ರಕ್ಷಕ ದಳದಲ್ಲಿ ಅತ್ಯತ್ತಮವಾಗಿ ಕರ್ತವ್ಯ ನಿರ್ವಹಿಸಿರುವುದನ್ನು ಪರಿಗಣಿಸಿ ಪ್ರಸಕ್ತ ಸಾಲಿನ ಮುಖ್ಯಮಂತ್ರಿಯವರ ಚಿನ್ನದ ಪದಕ ನೀಡಲಾಗಿದೆ. ಈ ಸಂಬಂಧ ಫೆ.೨೪ರಂದು ಆರಕ್ಷಕ ಮಹಾನಿರ್ದೇಶಕರು, ಗೃಹ ರಕ್ಷಕ ದಳ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು, ಪೌರರಕ್ಷಣೆ ಆದೇಶ ಹೊರಡಿಸಿದ್ದು, ಪ್ರಶಸ್ತಿಯು ಪದಕ ಹಾಗು ೫ ಸಾವಿರ ರು. ನಗದು ಒಳಗೊಂಡಿದೆ.       ಜಿಲ್ಲಾ ಸಮಾದೇಷ್ಟ ಡಾ. ಚೇತನ್ ಕುಮಾರ್, ಜಿಲ್ಲಾ ಉಪ ಸಮಾದೇಷ್ಟ ಹಾಲಪ್ಪ ಷಾ ಡಾವಣಗೇರಿ, ಕಛೇರಿ ಅಧಿಕಾರಿ ಹರೀಶ್ ಪಾಟೀಲ್ ಹಾಗು ಜಿಲ್ಲಾ ಕಚೇರಿಯ ಸಿಬ್ಬಂದಿ ವರ್ಗದವರು,  ಜಿಲ್ಲೆಯ ಎಲ್ಲಾ ಎನ್‌ಸಿಓ ಅಧಿಕಾರಿಯವರು, ಮಹಿಳಾ ಸದಸ್ಯರನ್ನೊಳಗೊಂಡಂತೆ ಎಲ್ಲಾ ಸದಸ್ಯರು ಮುಖ್ಯಮಂತ್ರಿಯವರ ಚಿನ್ನದ ಪದಕ ಪಡೆದುಕೊಂಡಿರುವ ಜಗದ...

ನೂತನ ರಂಗಮಂದಿರಕ್ಕೆ ನಿವೇಶನ, ಆರ್ಥಿಕ ನೆರವು ನೀಡಿ : ಕಲಾವಿದರಿಂದ ಶಾಸಕರಿಗೆ ಮನವಿ

Image
ಭದ್ರಾವತಿ ನಗರದಲ್ಲಿ ರಂಗಮಂದಿರ ಪರಿಕಲ್ಪನೆಯಂತೆ ಯಾವುದೇ ಕಟ್ಟಡಗಳು ಇಲ್ಲದಿರುವುದರಿಂದ ಹೊಸ ರಂಗಮಂದಿರ ನಿರ್ಮಿಸುವುದು ಅನಿವಾರ್ಯವಾಗಿದ್ದು, ಈ ಹಿನ್ನಲೆಯಲ್ಲಿ ಅಗತ್ಯವಿರುವ ನಿವೇಶನ ಹಾಗು ಆರ್ಥಿಕ ನೆರವು ಕಲ್ಪಿಸಿಕೊಡುವಂತೆ ಕಲಾವಿದರು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಿದರು.       ಭದ್ರಾವತಿ : ನಗರದಲ್ಲಿ ರಂಗಮಂದಿರ ಪರಿಕಲ್ಪನೆಯಂತೆ ಯಾವುದೇ ಕಟ್ಟಡಗಳು ಇಲ್ಲದಿರುವುದರಿಂದ ಹೊಸ ರಂಗಮಂದಿರ ನಿರ್ಮಿಸುವುದು ಅನಿವಾರ್ಯವಾಗಿದ್ದು, ಈ ಹಿನ್ನಲೆಯಲ್ಲಿ ಅಗತ್ಯವಿರುವ ನಿವೇಶನ ಹಾಗು ಆರ್ಥಿಕ ನೆರವು ಕಲ್ಪಿಸಿಕೊಡುವಂತೆ ಕಲಾವಿದರು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಿದರು.       ಕಳೆದ ಕೆಲವು ದಿನಗಳ ಹಿಂದೆ ರಂಗ ಕಲಾವಿದರು ಸೇರಿದಂತೆ ನಗರದ ಎಲ್ಲಾ ಪ್ರಕಾರಗಳ ಕಲಾವಿದರು ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಸಭೆ ನಡೆಸಿ ಸುಸಜ್ಜಿತವಾದ ರಂಗ ಮಂದಿರದ ಅಗತ್ಯತೆ ಕುರಿತು ಚರ್ಚೆ ನಡೆಸಿದ್ದರು. ಅಂತಿಮವಾಗಿ ಶಾಸಕರಿಗೆ ಮನವಿ ಸಲ್ಲಿಸುವ ತೀರ್ಮಾನ ಕೈಗೊಂಡಿದ್ದರು. ಅದರಂತೆ ಶಾಸಕರ ಗೃಹ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರು.       ಕಲಾವಿದರಾದ ತಮಟೆ ಜಗದೀಶ್, ಬಿ. ಕಮಲಾಕರ, ಜಿ. ದಿವಾಕರ, ಕೆ.ಎಸ್ ರವಿಕುಮಾ...

ಅಮಲೋಧ್ಭವಿ ಮಾತೆ ದೇವಾಲಯದಲ್ಲಿ ಉಚಿತ ರಕ್ತದಾನ, ಕಣ್ಣಿನ ತಪಾಸಣಾ ಶಿಬಿರ

Image
ಭದ್ರಾವತಿ ನ್ಯೂಟೌನ್ ಅಮಲೋಧ್ಭವಿ ಮಾತೆ ದೇವಾಲಯದಲ್ಲಿ ಸಮಾಜದ ಅಂಚಿಗೆ ತಳ್ಳಲ್ಪಟ್ಟವರ(ನಿರ್ಗತಿಕರ) ವರ್ಷದ ಅಂಗವಾಗಿ ಶಿವಮೊಗ್ಗ ಆಶಾ ಜ್ಯೋತಿ ರಕ್ತ ನಿಧಿ ಹಾಗೂ ವಾಸನ್ ಐ ಕೇರ್ ಸಂಸ್ಥೆ ಸಹಯೋಗದೊಂದಿಗೆ ಉಚಿತ ರಕ್ತದಾನ, ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.       ಭದ್ರಾವತಿ : ನಗರದ ನ್ಯೂಟೌನ್ ಅಮಲೋಧ್ಭವಿ ಮಾತೆ ದೇವಾಲಯದಲ್ಲಿ ಸಮಾಜದ ಅಂಚಿಗೆ ತಳ್ಳಲ್ಪಟ್ಟವರ(ನಿರ್ಗತಿಕರ) ವರ್ಷದ ಅಂಗವಾಗಿ ಶಿವಮೊಗ್ಗ ಆಶಾ ಜ್ಯೋತಿ ರಕ್ತ ನಿಧಿ ಹಾಗೂ ವಾಸನ್ ಐ ಕೇರ್ ಸಂಸ್ಥೆ ಸಹಯೋಗದೊಂದಿಗೆ ಉಚಿತ ರಕ್ತದಾನ, ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.       ಸಮಾಜದಲ್ಲಿ ಪ್ರತಿಯೊಬ್ಬರು ದೀನ-ದಲಿತರು, ನಿರ್ಗತಿಕರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಹೊಂದಬೇಕೆಂಬ ಆಶಯದೊಂದಿಗೆ ಈ ಬಾರಿ ಸಮಾಜದ ಅಂಚಿಗೆ ತಳ್ಳಲ್ಪಟ್ಟವರ ವರ್ಷವೆಂಬ ಧ್ಯೇಯ ವಾಕ್ಯದೊಂದಿಗೆ ವಿಭಿನ್ನ ರೀತಿಯ ಸೇವಾ ಕಾರ್ಯಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಪೈಕಿ ಉಚಿತ ರಕ್ತದಾನ, ಕಣ್ಣಿ ತಪಾಸಣಾ ಶಿಬಿರ ಸಹ ಒಂದಾಗಿದೆ. ಸುಮಾರು ನೂರಕ್ಕೂ ಜನರು ಶಿಬಿರದಲ್ಲಿ ಪಾಲ್ಗೊಂಡಿದ್ದರು.       ಅಮಲೋದ್ಭವಿ ಮಾತೆ ದೇವಾಲಯದ ಧರ್ಮ ಗುರುಗಳಾದ ಫಾದರ್ ಲ್ಯಾನ್ಸಿ ಡಿಸೋಜಾ, ಕಾರ್ಯದರ್ಶಿ ವಿಲ್ಸನ್, ಆಲ್ಬರ್ಟ್, ಅರುಣ್, ಪೌಲಸ್, ಪಚ್ಛು, ಬಾಬು, ಅಂತೋಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 

ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ರಾಯರ ವರ್ಧಂತಿ ಉತ್ಸವ

Image
ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಮಂಗಳವಾರ ರಾಯರ ವರ್ಧಂತಿ ಉತ್ಸವ ಜರುಗಿತು.       ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಮಂಗಳವಾರ ರಾಯರ ವರ್ಧಂತಿ ಉತ್ಸವ ಜರುಗಿತು.       ಬೆಳಗ್ಗೆ ನಿರ್ಮಾಲ್ಯ, ಪಂಚಾಮೃತ ಅಭಿಷೇಕ ಹಾಗೂ ಪ್ರಕಾರದಲ್ಲಿ ರಥೋತ್ಸವ ಹಾಗೂ ಕನಕ ಅಭಿಷೇಕ ಮತ್ತು ಪಾದಪೂಜೆ ನೆರವೇರಿತು. ಶ್ರೀ ಗೋಪಾಲ ಆಚಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.       ಕೊಟ್ಟೂರು ಸತ್ಯನಾರಾಯಣಚಾರ್, ಶ್ರೀನಿವಾಸ, ಸುಧೀಂದ್ರ, ಮಾಧುರಾವ್, ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ರಮಾಕಾಂತ, ಖಜಾಂಚಿ ನಿರಂಜನಚಾರ್ ಹಾಗೂ ಶುಭ ಗುರುರಾಜ್ ಮತ್ತು ಎಲ್ಲಾ ಭಜನಾ ಮಂಡಳಿಗಳು ಪಾಲ್ಗೊಂಡಿದ್ದವು.  

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಸ್ತೆ ದಾಟಲು ಮೇಲ್ಸೇತುವೆ ನಿರ್ಮಿಸಿ

Image
ಜೇಡಿಕಟ್ಟೆ-ಹೊಸೂರು ಗ್ರಾಮಸ್ಥರಿಂದ ಭೂಸ್ವಾಧೀನಾಧಿಕಾರಿಗೆ ಮನವಿ  ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ-೨೦೬ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿ ಜೇಡಿಕಟ್ಟೆ ಮತ್ತು ಹೊಸೂರು ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ವಿಶೇಷ ಭೂಸ್ವಾಧೀನಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.       ಭದ್ರಾವತಿ : ತಾಲೂಕಿನ ಜೇಡಿಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ-೨೦೬ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿ ಜೇಡಿಕಟ್ಟೆ ಮತ್ತು ಹೊಸೂರು ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ವಿಶೇಷ ಭೂಸ್ವಾಧೀನಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.       ಈ ಭಾಗದಲ್ಲಿ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಮಹಿಳೆಯರು, ವಯೋವೃದ್ಧರು, ಕಾರ್ಮಿಕರು ಹಾಗು ಗ್ರಾಮಸ್ಥರು ಸಂಚರಿಸುತ್ತಾರೆ. ರಸ್ತೆ ದಾಟಲು ತುಂಬಾ ತೊಂದರೆಯಾಗುತ್ತಿದೆ.  ಈ ಹಿನ್ನಲೆಯಲ್ಲಿ ಮೇಲ್ಸೇತುವೆ ನಿರ್ಮಿಸಿಕೊಡುವುದು. ಅಲ್ಲದೆ ರಸ್ತೆ ಎರಡು ಬದಿಯಲ್ಲಿ ಚರಂಡಿ ನಿರ್ಮಾಣ ಮಾಡದಿರುವುದು ಕಂಡು ಬಂದಿದ್ದು, ನೀರು ರಸ್ತೆ ಮೇಲೆ ಹಾಗು ಸಮೀಪದ ಮನೆಗಳಿಗೆ ನುಗ್ಗುವ ಭೀತಿ ಎದುರಾಗಿದೆ. ರಸ್ತೆ ಕಾಮಗಾರಿ ಪ್ರಾರಂಭಿಸುವ ಮೊದಲು ಎರಡು ಬದಿ ಚರಂಡಿ ನಿರ್ಮಾಣ ಮಾಡುವಂತೆ ಕೋರಲಾಗಿದೆ....

ಆದರ್ಶ, ತತ್ವ, ಮೌಲ್ಯಗಳ ಆಚರಣೆ ಕೇವಲ ಮಾತಿಗೆ ಸೀಮಿತ : ಶ್ರೀ. ಷ.ಬ್ರ ಡಾ. ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ

Image
ಭದ್ರಾವತಿ ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ೬೭೪ನೇ ವಚನ ಮಂಟಪದ ಬಿ.ಎಚ್ ಮಹಾದೇವಪ್ಪ ಮತ್ತು ಸಹೋದರರು ಹಾಗು ಮಕ್ಕಳು ಕುಟುಂಬದ ದತ್ತಿ ಮಾದಮ್ಮ ಮತ್ತು ಲಿಂ.ಬನ್ನಿಹಟ್ಟಿ ಹಾಲಪ್ಪ ಮಹಾದೇವಪ್ಪ ದತ್ತಿ ಕಾರ್ಯಕ್ರಮ ಹಿರಿಯ ಸಮಾಜ ಸೇವಕ ಹೆಬ್ಬಂಡಿ ಶಿವರುದ್ರಪ್ಪ, ಚನ್ನಗಿರಿ ಶ್ರೀ ಕೇದಾರ ಶಾಖಾ ಹಿರೇಮಠದ ಶ್ರೀ ಷ.ಬ್ರ. ಡಾ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮಿಗಳವರು ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.       ಭದ್ರಾವತಿ : ಆದರ್ಶ, ತತ್ವ, ಮೌಲ್ಯಗಳ ಆಚರಣೆಗಳ ಬಗ್ಗೆ ನಾವುಗಳು ಇಂದು ಕೇವಲ ಮಾತನಾಡುವುದು ಜೀವನವನ್ನಾಗಿಸಿದ್ದೇವೆ ಹೊರತು ನುಡಿದಂತೆ ನಡೆಯುತ್ತಿಲ್ಲ. ಇದರಿಂದಾಗಿ ಸಮಾಜದಲ್ಲಿ ಆಶಾಂತಿ ನಿರ್ಮಾಣವಾಗುತ್ತಿದೆ ಎಂದು ಚನ್ನಗಿರಿ ಶ್ರೀ ಕೇದಾರ ಶಾಖಾ ಹಿರೇಮಠದ ಶ್ರೀ ಷ.ಬ್ರ. ಡಾ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮಿಗಳವರು ಹೇಳಿದರು.       ಶ್ರೀಗಳು ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ೬೭೪ನೇ ವಚನ ಮಂಟಪದ ಬಿ.ಎಚ್ ಮಹಾದೇವಪ್ಪ ಮತ್ತು ಸಹೋದರರು ಹಾಗು ಮಕ್ಕಳು ಕುಟುಂಬದ ದತ್ತಿ ಮಾದಮ್ಮ ಮತ್ತು ಲಿಂ.ಬನ್ನಿಹಟ್ಟಿ ಹಾಲಪ್ಪ ಮಹಾದೇವಪ್ಪ ದತ್ತಿ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. ನಾವುಗಳು ಬಸವಾದಿ ...

ನ್ಯೂಟೌನ್ ಪೊಲೀಸರಿಂದ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಣೆ

Image
ಭದ್ರಾವತಿ ಹುತ್ತಾ ರೈಲ್ವೆ ಹಳಿ ಮೇಲೆ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಆತನನ್ನು ನ್ಯೂಟೌನ್ ಠಾಣೆ ಪೊಲೀಸರು ರಕ್ಷಿಸಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ.       ಭದ್ರಾವತಿ : ಇತ್ತೀಚಿನ ವರ್ಷಗಳಲ್ಲಿ ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಗುರುತಿಸಿಕೊಳ್ಳುತ್ತಿದ್ದು, ಸಮುದಾಯದ ಜೊತೆ ಭಾವನಾತ್ಮಕ ಒಡನಾಟ ಹೊಂದಿದೆ. ಕೇವಲ ಅಪರಾಧ ಪ್ರಕರಣಗಳಲ್ಲಿ ನೊಂದವರಿಗೆ ಧ್ವನಿಯಾಗಿರದೆ ನೈಸರ್ಗಿಕ ಅವಘಡಗಳು, ರಸ್ತೆ ಅಪಘಾತಗಳಲ್ಲಿ ಸಿಲುಕಿದವರನ್ನು, ಅನಾಥರು, ನಿರ್ಗತಿಕರ ರಕ್ಷಣೆ, ಮಕ್ಕಳು ಮತ್ತು ಮಹಿಳೆಯರ ರಕ್ಷಣೆ ಹಾಗು ವಿಭಿನ್ನ ರೀತಿಯ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಧಾವಿಸುತ್ತಿರುವುದು ವಿಶೇಷವಾಗಿದೆ. ಇಲ್ಲೊಂದು ಘಟನೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿ ಆತನ ಪೋಷಕರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.        ಫೆ. ೨೨ರ ರಾತ್ರಿ ಹುತ್ತಾ ರೈಲ್ವೆ ಹಳಿ ಮೇಲೆ ೧೮ ವರ್ಷದ ಯುವಕನೊಬ್ಬನು ಮಲಗಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳಾದ ನಾಗರಾಜ ಹಾಗೂ ಸಲೀಂರವರು ಸ್ಥಳಕ್ಕೆ ತೆರಳಿ  ಸಾರ್ವಜನಿಕರ ಸಹಾಯದಿಂದ ಯುವಕನನ್ನು ರಕ್ಷಿಸಿ ಠಾಣೆಗೆ ಕರೆತಂದಿದ್ದಾರೆ. ವಿಚಾರಿಸಿದಾಗ ಯ...

ಪ್ರಪಂಚದ ಪ್ರಪ್ರಥಮ ಮಹಿಳಾ ವಚನಕಾರ್ತಿ ಶ್ರೀ ಅಕ್ಕಮಹಾದೇವಿ ಜಯಂತಿ ತಾಲೂಕು ಮಟ್ಟದಲ್ಲಿ ಆಚರಿಸಿ

Image
ಶ್ರೀ ಅಕ್ಕಮಹಾದೇವಿ ಬಳಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ  ಪ್ರಪಂಚದ ಪ್ರಪ್ರಥಮ ಮಹಿಳಾ ವಚನಕಾರ್ತಿ, ವೀರವಿರಾಗಿಣಿ ಮಹಾನ್ ಶಿವಶರಣೆ ಶ್ರೀ ಅಕ್ಕಮಹಾದೇವಿಯವರ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಸರ್ಕಾರಿ ಗೌರವಗಳೊಂದಿಗೆ ಆಚರಿಸಲು ಆದೇಶಿಸುವಂತೆ ಭದ್ರಾವತಿ ಹಳೇನಗರ ಶ್ರೀ ಬಸವೇಶ್ವರ ವೃತ್ತದ ಶ್ರೀ ಅಕ್ಕಮಹಾದೇವಿ ಬಳಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ಪ್ರಪಂಚದ ಪ್ರಪ್ರಥಮ ಮಹಿಳಾ ವಚನಕಾರ್ತಿ, ವೀರವಿರಾಗಿಣಿ ಮಹಾನ್ ಶಿವಶರಣೆ ಶ್ರೀ ಅಕ್ಕಮಹಾದೇವಿಯವರ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಸರ್ಕಾರಿ ಗೌರವಗಳೊಂದಿಗೆ ಆಚರಿಸಲು ಆದೇಶಿಸುವಂತೆ ಹಳೇನಗರ ಶ್ರೀ ಬಸವೇಶ್ವರ ವೃತ್ತದ ಶ್ರೀ ಅಕ್ಕಮಹಾದೇವಿ ಬಳಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.       ಭಾರತ ದೇಶದ ಆಧ್ಯಾತ್ಮಿಕ ಲೋಕದಲ್ಲಿ ಹನ್ನೆರಡನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರಾದಿಯಾಗಿ ಎಲ್ಲಾ ಶರಣರ, ಶರಣೆಯರ ಅಕ್ಕನಾಗಿ ಸ್ಥುತಿಸಲ್ಪಟ್ಟ ವೀರ ವೈರಾಗ್ಯನಿಧಿ ಶ್ರೀ ಅಕ್ಕಮಹಾದೇವಿಯವರ ಜಯಂತಿಯನ್ನು ರಾಜ್ಯ ಸರ್ಕಾರ ರಾಜ್ಯಮಟ್ಟ ಮತ್ತು ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ಗೌರವಗಳೊಂದಿಗೆ ಆಚರಿಸುತ್ತಿರುವುದು ಈ ನಾಡಿನ ಎಲ್ಲರಿಗೂ ಸಂತಸದ ವಿಷಯವೇ ಆಗಿದೆ. ಬಸವಾಭಿಮಾನಿಗಳಾದ, ಬಸವಣ್ಣನವರನ್ನು ಕರ್ನಾಟಕದ ಸಾಂಸ...

ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಿ : ಶ್ರೀ ಯಾದವಾನಂದ ಮಹಾಸ್ವಾಮಿ

Image
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ತಾಲೂಕು ಗೊಲ್ಲ-ಯಾದವ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನದ ೨ನೇ ವರ್ಷದ ವಾರ್ಷಿಕೋತ್ಸವ, ರಥೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ : ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಶಿಕ್ಷಣವಂತರನ್ನಾಗಿಸಿ ಎಂದು ಚಿತ್ರದುರ್ಗ, ಗೊಲ್ಲಗಿರಿ, ಅಖಿಲ ಭಾರತ ಯಾದವ ಮಹಾಸಂಸ್ಥಾನದ ಶ್ರೀ ಯಾದವಾನಂದ ಮಹಾಸ್ವಾಮಿಗಳು ಕರೆ ನೀಡಿದರು.       ಶ್ರೀಗಳು ಭಾನುವಾರ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ತಾಲೂಕು ಗೊಲ್ಲ-ಯಾದವ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನದ ೨ನೇ ವರ್ಷದ ವಾರ್ಷಿಕೋತ್ಸವ, ರಥೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.       ಪ್ರಸ್ತುತ ಸಮಾಜದಲ್ಲಿ ಮಾನವೀಯ ಗುಣಗಳು ಕಣ್ಮರೆಯಾಗುತ್ತಿವೆ. ಮಕ್ಕಳು ಮೊದಲು ಮಾನವ ಧರ್ಮ ಪ್ರೀತಿಸುವಂತವರಾಗಬೇಕು. ಉತ್ತಮ ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಎಲ್ಲರೊಂದಿಗೆ ಸೌಹಾರ್ದತೆಯಿಂದ ಬದುಕಲು ಸಾಧ್ಯ. ಸಮಾಜವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಜಗತ್ತಿಗೆ ಶ್ರೀ ಕೃಷ್ಣನ ...

ಕೃಷ್ಣಮ್ಮ ನಿಧನ

Image
ಕೃಷ್ಣಮ್ಮ       ಭದ್ರಾವತಿ : ನಗರದ ಹುತ್ತಾಕಾಲೋನಿ ನಿವಾಸಿ, ಮಡಿವಾಳ ಸಮಾಜದ ಕೃಷ್ಣಮ್ಮ(೮೦) ಶನಿವಾರ ಸಂಜೆ ವಯೋಸಹಜವಾಗಿ ನಿಧನ ಹೊಂದಿದರು.       ಇವರಿಗೆ ಐದು ಜನ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಲಿದೆ. ಇವರ ನಿಧಜ ಮಡಿವಾಳ ಸಮಾಜದ ಪ್ರಮುಖರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಸೈಲ್-ವಿಐಎಸ್‌ಎಲ್ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ

Image
ಅರಬಿಳಚಿ ಕ್ಯಾಂಪ್‌ನಲ್ಲಿ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ, ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ, ಮತ್ತು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಹಾಗು ಇಸ್ಪಾತ್ ಮಹಿಳಾ ಸಮಾಜದ ಸಹಯೋಗದೊಂದಿಗೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್‌ನಲ್ಲಿ ಸಮಗ್ರ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಶನಿವಾರ ಆಯೋಜಿಸಲಾಗಿತ್ತು.      ಭದ್ರಾವತಿ: ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ, ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ, ಮತ್ತು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಹಾಗು ಇಸ್ಪಾತ್ ಮಹಿಳಾ ಸಮಾಜದ ಸಹಯೋಗದೊಂದಿಗೆ ತಾಲೂಕಿನ ಅರಬಿಳಚಿ ಕ್ಯಾಂಪ್‌ನಲ್ಲಿ ಸಮಗ್ರ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಶನಿವಾರ ಆಯೋಜಿಸಲಾಗಿತ್ತು.      ಹೃದಯಶಾಸ್ತ್ರ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತ ವೈದ್ಯಶಾಸ್ತ್ರ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಅಲ್ಲದೆ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕ...

ನೂತನ ರಂಗಮಂದಿರ ನಿರ್ಮಾಣಕ್ಕೆ ಒಮ್ಮತದ ತೀರ್ಮಾನ

Image
ಫೆ.೨೩ರಂದು ಶಾಸಕರ ಗೃಹ ಕಚೇರಿಗೆ ಕಲಾವಿದರಿಗೆ ಆಹ್ವಾನ  ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಶನಿವಾರ ಕಲಾವಿದರಿಂದ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಭೆ ನಡೆಸಲಾಯಿತು.      ಭದ್ರಾವತಿ : ನಗರದಲ್ಲಿ ರಂಗಮಂದಿರ ಪರಿಕಲ್ಪನೆಯಂತೆ ಯಾವುದೇ ಕಟ್ಟಡಗಳು ಇಲ್ಲದಿರುವುದರಿಂದ ಹೊಸ ರಂಗಮಂದಿರ ನಿರ್ಮಿಸುವುದು ಅನಿವಾರ್ಯವಾಗಿದ್ದು, ಈ ಹಿನ್ನಲೆಯಲ್ಲಿ ಅಗತ್ಯವಿರುವ ನಿವೇಶನ ಹಾಗು ಆರ್ಥಿಕ ನೆರವಿಗೆ ಕ್ಷೇತ್ರದ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಮನವಿ ಸಲ್ಲಿಸಲು ಶನಿವಾರ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಬಹುತೇಕ ಕಲಾವಿದರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.       ನಗರದಲ್ಲಿ ಸುಸಜ್ಜಿತ ರಂಗಮಂದಿರದ ಅಗತ್ಯತೆ ಹಾಗು ಈ ಸಂಬಂಧ ಗಮನ ಸೆಳೆಯಲು ಕೈಗೊಂಡಿರುವ ಸಾಂಸ್ಕೃತಿಕ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕಲಾವಿದರು, ಕಳೆದ ಸುಮಾರು ೩೦-೩೫ ವರ್ಷಗಳಿಂದ ರಂಗಮಂದಿರ ಬೇಡಿಕೆ ಉಳಿದುಕೊಂಡು ಬಂದಿದೆ. ನಗರದ ಹೃದಯ ಭಾಗದಲ್ಲಿ ಕೋಟ್ಯಾಂತರ ರು. ವೆಚ್ಚದಲ್ಲಿ ನೂತನವಾಗಿನಿರ್ಮಿಸಲಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ರಂಗಮಂದಿರದ ಕಲ್ಪನೆಯಂತೆ ನಿರ್ಮಾಣಗೊಂಡಿಲ್ಲ. ಈ ಹಿನ್ನಲೆಯಲ್ಲಿ ರಂಗ ಚಟುವಟಿಕೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.      ...

ಮಾತೃಭಾಷೆ ಮಹತ್ವ ಅರಿತುಕೊಳ್ಳಿ, ಅಭಿಮಾನ ಬೆಳೆಸಿಕೊಳ್ಳಿ : ಎ.ಕೆ ನಾಗೇಂದ್ರಪ್ಪ

Image
ಶ್ರೀ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆ  ಭದ್ರಾವತಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜನ್ನಾಪುರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ವಿಶ್ವ ಮಾತೃ ಭಾಷಾ ದಿನಾಚರಣೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉದ್ಘಾಟಿಸಿದರು.      ಭದ್ರಾವತಿ: ಮಕ್ಕಳು ಮಾತೃ ಭಾಷೆ ಮಹತ್ವ ಅರಿತುಕೊಂಡು ಭಾಷೆ ಮೇಲಿನ ಅಭಿಮಾನ ಹೆಚ್ಚಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕರೆ ನೀಡಿದರು.       ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಜನ್ನಾಪುರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ವಿಶ್ವ ಮಾತೃ ಭಾಷಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.       ಮಾತೃ ಭಾಷೆ ಎಂಬುದು ನಮ್ಮ ಮನೆಯ ತಾಯಿ ಭಾಷೆಯಾಗಿದೆ. ಈ ಭಾಷೆಯ ಮೂಲಕ ಪ್ರತಿಯೊಬ್ಬರು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ. ಓದಲು, ಬರೆಯಲು, ಮಾತನಾಡಲು ಹಾಗು ಸಂಹಿಸಲು ಯಾವ ಭಾಷೆ ನೆರವಾಗುತ್ತದೆಯೋ ಆ ಭಾಷೆಯೇ ಮಾತೃ ಭಾಷೆಯಾಗಿದೆ. ನಮ್ಮೆಲ್ಲರಿಗೂ ಕನ್ನಡ ಮಾತೃ ಭಾಷೆಯಾಗಿದ್ದು, ಈ ಮಾತೃ ಭಾಷೆಯನ್ನು ಚನ್ನಾಗಿ ಕಲಿತುಕೊಂಡಲ್ಲಿ ಇತರೆ ಭಾಷೆಗಳನ್ನು ಸಹ ಕಲಿಯಲು ಸಾಧ್ಯವಾಗುತ್ತದೆ. ನಮ್ಮ ಮಾತೃ ಭಾಷೆ ಜೊತೆಗೆ ಸಮಾಜದ ಹ...

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

Image
     ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಫೆ. ೧೨ರಂದು ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕೈಚೀಲದಲ್ಲಿದ್ದ ೨೮ ಗ್ರಾಂ ತೂಕದ ಬಂಗಾರದ ಸರ ಕಳ್ಳತನವಾಗಿರುವ ಘಟನೆ ನಡೆದಿದೆ       ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದ ಶಾಂತಮ್ಮ ಎಂಬುವವರು ತಮ್ಮ ೩,೦೦,೦೦೦ ರು. ಮೌಲ್ಯದ ಸರ ಕಳುವಾಗಿದೆ ಎಂದು ದೂರು ನೀಡಿದ್ದಾರೆ. ಶಾಂತಮ್ಮ ಅವರು ಅಂತರಘಟ್ಟಮ್ಮ ದೇವಸ್ಥಾನದ ಹಬ್ಬದ ಪ್ರಯುಕ್ತ ಭದ್ರಾ ಕಾಲೋನಿಯಲ್ಲಿರುವ ತಮ್ಮ ತಂಗಿಯ ಮಗನ ಮನೆಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಶಿವಮೊಗ್ಗಕ್ಕೆ ಹೋಗುವ ಸರ್ಕಾರಿ ಬಸ್ ಹತ್ತಿದ್ದರು. ಬಸ್ಸು ಹೊರಟು ಜಯಶ್ರೀ ಸರ್ಕಲ್ ಬಳಿ ತಲುಪಿದಾಗ, ಟಿಕೆಟ್ ಪಡೆಯಲು ಆಧಾರ ಕಾರ್ಡ್ ತೆಗೆಯಲೆಂದು ತಮ್ಮ ಕೈಚೀಲದಲ್ಲಿದ್ದ ಪರ್ಸ್ ಅನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪರ್ಸ್‌ನಲ್ಲಿ ಇಟ್ಟಿದ್ದ ೨೮ ಗ್ರಾಂ ತೂಕದ ಬಂಗಾರದ ಸರ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬಸ್ ಹತ್ತುವ ಸಮಯ ಜನಸಂದಣಿ ಹೆಚ್ಚಿತ್ತು. ಈ ವೇಳೆ ಸರವನ್ನು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂ ಸಂಸ್ಕೃತಿ ಪಾಲಿಸಿದರೆ ಜಗತ್ತಿನಲ್ಲಿ ಶಾಂತಿ : ಯದುಕೃಷ್ಣ ಮತ್ತೂರು

Image
ಭದ್ರಾವತಿ ಹಳೇನಗರದ ಭೂತನಗುಡಿ ಶ್ರೀ ಕೃಷ್ಣರುಕ್ಮಿಣಿ ದೇವಸ್ಥಾನ ಮುಂಭಾಗ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಆರ್‌ಎಸ್‌ಎಸ್ ಪ್ರಾಂತ ಸಹ ಸಂಪರ್ಕ ಪ್ರಮುಖ್ ಯದುಕೃಷ್ಣ ಮತ್ತೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.      ಭದ್ರಾವತಿ: ಭಾರತದ ಸನಾತನ ಹಿಂದೂ ಸಂಸ್ಕೃತಿ ಜಗತ್ತಿನ ಎಲ್ಲಾ ಸಂಸ್ಕೃತಿಗಳ ತಾಯಿಯಾಗಿದೆ. ಈ ಸಂಸ್ಕೃತಿಯನ್ನು ಪಾಲಿಸಿದರೆ ಜಗತ್ತಿನಲ್ಲಿ ಶಾಂತಿ ನೆಲೆಸುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಆರ್‌ಎಸ್‌ಎಸ್ ಪ್ರಾಂತ ಸಹ ಸಂಪರ್ಕ ಪ್ರಮುಖ್ ಯದುಕೃಷ್ಣ ಮತ್ತೂರು ತಿಳಿಸಿದರು.      ಅವರು ಹಳೇನಗರದ ಭೂತನಗುಡಿ ಶ್ರೀ ಕೃಷ್ಣರುಕ್ಮಿಣಿ ದೇವಸ್ಥಾನ ಮುಂಭಾಗ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು.      ಹಿಂದೂ ಧರ್ಮದ ಆಚರಣೆ ಫಲವಾಗಿ ಇಂದು ಕೇವಲ ಭಾರತ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿನ ೧೨ ದೇಶಗಳಲ್ಲಿ ದೀಪಾವಳಿ ಹಬ್ಬ ಆಚರಣೆ ಮಾಡಲಾಗುತ್ತಿದೆ. ಅಲ್ಲದೆ ಪ್ರಪಂಚದ ಇತರೆ ದೇಶಗಳಲ್ಲಿ ದೊಡ್ಡ ದೊಡ್ಡ ದೇವಾಲಯಗಳನ್ನು ನಿರ್ಮಾಣ ಮಾಡುವ ಮೂಲಕ ಹಿಂದೂ ಧರ್ಮದ ಆಚರಣೆಗಳನ್ನು ಪಾಲಿಸಲಾಗುತ್ತಿದೆ. ಇದು ೪೦೦ ವರ್ಷಗಳ ಹಿಂದೆ ಹಿಂದುತ್ವದ ನೆಲೆಯಲ್ಲಿ ಗುರುತಿಸಿಕೊಳ್ಳುವಂತಹ ವಾತಾವರಣ ನಿರ್ಮಾಣದ ಫಲವಾಗಿದೆ ಎಂದರು.      ...

ದಂಪತಿ ಆತ್ಮಹತ್ಯೆ ಪ್ರಕರಣ : ಅನಾಥರಾದ ಇಬ್ಬರು ಹೆಣ್ಣು ಮಕ್ಕಳು

Image
ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಅಪಪ್ರಚಾರ ಆರೋಪ  ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭದ್ರಾವತಿ ಹೊಸಸಿದ್ದಾಪುರ ನಿವಾಸಿ ಸ್ವಾತಿ.       ಭದ್ರಾವತಿ : ದಂಪತಿ ಆತ್ಮಹತ್ಯೆಯಿಂದಾಗಿ ಮಕ್ಕಳು ಅನಾಥರಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಅಲ್ಲದೆ ಆತ್ಮಹತ್ಯೆ ಪ್ರಕರಣ ರೋಚಕ ತಿರುವುಗಳನ್ನು ಪಡೆದುಕೊಂಡಿದೆ.       ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರದಲ್ಲಿ ಶಿವರಾತ್ರಿ ಹಬ್ಬದ ದಿನದದಂದು ಕೆಎಸ್‌ಐಎಫ್‌ಎಸ್ ಡಿ' ದರ್ಜೆ  ನೌಕರ ಜಗದೀಶ್ ಮನೆಯಲ್ಲೇ ನೇಣು ಬಿಗಿದು ಸಾವನ್ನಪ್ಪಿದ್ದರು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ದೂರು ದಾಖಲಾಗಿತ್ತು.  ಈ ನಡುವೆ ಇವರ ಪತ್ನಿ ಸ್ವಾತಿ(೨೬) ಸಹ ಅವರ ಮನೆಯಲ್ಲೇ ಶುಕ್ರವಾರ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.       ನೇಣು ಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸ್ವಾತಿ, ಘಟನೆಗೂ ಮೊದಲು ತನ್ನ ತಾಯಿಗೆ ಕಳುಹಿಸಿದ ವಾಟ್ಸಪ್‌ನಲ್ಲಿ ಮೆಸೇಜ್ ಕಳುಹಿಸಿರುವುದು ಪ್ರಕರಣಕ್ಕೆ ತಿರುವು ನೀಡಿದೆ. ಮೆಸೇಜ್‌ನಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದರು ಎಂದು ಸ್ವಾತಿ ಆರೋಪಿಸಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ.  ದಂಪತಿ ಆತ್ಮಹತ್ಯೆಯಿಂದಾಗಿ ಇಬ್ಬರು ಚಿಕ್ಕ ಹೆಣ...

ಮೇಲ್ವರ್ಗದ ಜಾತಿಯವರಿಂದ ದಲಿತರ ಜಮೀನು ಕಬಳಿಕೆ ಆರೋಪ : ತಹಸೀಲ್ದಾರ್ ಕಛೇರಿ ಮುಂಭಾಗ ಪ್ರತಿಭಟನೆ

Image
ತಹಸೀಲ್ದಾರ್‌ರವರ ಆದೇಶ ರದ್ದು ಮಾಡಿ, ಇಲ್ಲವಾದಲ್ಲಿ ಅಹೋ ರಾತ್ರಿ ಧರಣಿ ಹೋರಾಟದ ಎಚ್ಚರಿಕೆ  ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದ ಸರ್ವೆ ನಂ. ೭ರಲ್ಲಿ ೪ ಎಕರೆ ೦೫ ಗುಂಟೆ ಜಮೀನು ಪರಿಶಿಷ್ಟ ಪಂಗಡ(ಎಸ್.ಟಿ) ದಲಿತ ಸಮುದಾಯಕ್ಕೆ ಸೇರಿದ ನಾಗಪ್ಪ ಬಿನ್ ಮರಿಯಣ್ಣನವರ ಹೆಸರಿಗೆ ಪ್ರಸ್ತುತ ಖಾತೆ ಪಹಣಿ ದಾಖಲಾತಿಗಳಿದ್ದು, ಅವರ ಮರಣ ನಂತರ ಕುಟುಂಬಸ್ಥರಿಗೆ ಪೌತಿ ಖಾತೆ ಮಾಡಲು ಕಾನೂನು ಬದ್ದವಾಗಿ ಅರ್ಜಿ ಸಲ್ಲಿಸಿದ್ದರೂ ಸಹ ತಹಸೀಲ್ದಾರ್‌ರವರು ದಲಿತ ವಿರೋಧಿ ನೀತಿ ಅನುಸರಿಸಿ ನ್ಯಾಯಲಯದ ಮೂಲಕ ಮೇಲ್ವರ್ಗದ ಜಾತಿಯವರಾದ ಪಾಲಾಕ್ಷಪ್ಪ ಗೌಡ ಜಿ.ಎಸ್ ಬಿನ್ ಸಂಗಪ್ಪಗೌಡರಿಗೆ ೨ ಎಕರೆ ೦.೩೯ ಗುಂಟೆ ಜಮೀನನ್ನು ಕಾನೂನು ಬಾಹಿರವಾಗಿ ಖಾತೆ ಪಹಣಿ ಮಾಡಲು ಆದೇಶ ಮಾಡಿರುವುದನ್ನು ರದ್ದು ಪಡಿಸಬೇಕೆಂದು. ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಮನವಿ ಸಲ್ಲಿಸಲಾಯತು.       ಭದ್ರಾವತಿ:  ತಾಲೂಕಿನ ಅರಹತೊಳಲು ಗ್ರಾಮದ ಸರ್ವೆ ನಂ. ೭ರಲ್ಲಿ ೪ ಎಕರೆ ೦೫ ಗುಂಟೆ ಜಮೀನು ಪರಿಶಿಷ್ಟ ಪಂಗಡ(ಎಸ್.ಟಿ) ದಲಿತ ಸಮುದಾಯಕ್ಕೆ ಸೇರಿದ ನಾಗಪ್ಪ ಬಿನ್ ಮರಿಯಣ್ಣನವರ ಹೆಸರಿಗೆ ಪ್ರಸ್ತುತ ಖಾತೆ ಪಹಣಿ ದಾಖಲಾತಿಗಳಿದ್ದು, ಅವರ ಮರಣ ನಂತರ ಕುಟುಂಬಸ್ಥರಿಗೆ ಪೌತಿ ಖಾತೆ ಮಾಡಲು ಕಾನೂನು ಬದ್ದವಾಗಿ ಅರ್ಜಿ ಸಲ...

ಉಕ್ಕಿನ ನಗರಕ್ಕೆ ರಂಗಮಂದಿರ : ಫೆ.೨೧ರಂದು ಕಲಾವಿದರ ಸಭೆ

Image
     ಭದ್ರಾವತಿ: ಒಂದು ಕಾಲದಲ್ಲಿ ರಂಗಭೂಮಿ ಕಲಾವಿದರ ನೆಲೆಯಾಗಿದ್ದ, ಸಾವಿರಾರು ಕಲಾವಿದರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾರಣವಾಗಿರುವ ಉಕ್ಕಿನ ನಗರದಲ್ಲಿ ಇದುವರೆಗೂ ರಂಗಕಲಾವಿದರು ತಮ್ಮ ಚಟುವಟಿಕೆಗಳನ್ನು ನಡೆಸಲು ತಮ್ಮದೇ ಆದ ಸೂಕ್ತ ಸ್ಥಳವಾಗಲಿ, ರಂಗಮಂದಿರವಾಗಲಿ ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಇದೀಗ ರಂಗಮಂದಿರ ನಿರ್ಮಿಸುವಂತೆ ಒತ್ತಾಯಿಸುವ ಉದ್ದೇಶದಿಂದ ಸಮಾನ ಮನಸ್ಸಿನ ರಂಗಭೂಮಿ ಹಾಗು ಎಲ್ಲಾ ಪ್ರಕಾರಗಳ ಕಲಾವಿದರು ಒಗ್ಗಟ್ಟಾಗಿ ಅಭಿಯಾನ ನಡೆಸಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಯಾನದ ಮೊದಲ ಸಭೆ ಫೆ.೨೧ರ ಶನಿವಾರ ಬೆಳಿಗ್ಗೆ ೧೦.೩೦ಕ್ಕೆ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಸಭೆ ಕರೆಯಲಾಗಿದೆ.      ಈ ಹಿಂದೆ ಸುಮಾರು ೫೦ ರಿಂದ ೬೦ ರಂಗ ತಂಡಗಳು ಹಾಗು ೫೦ಕ್ಕೂ ಹೆಚ್ಚು ಜಾನಪದ ಕಲಾ ತಂಡಗಳು ಸಕ್ರಿಯವಾಗಿದ್ದವು. ಆದರೆ ಕಾಲಾನಂತರದಲ್ಲಿ ಒಂದೊಂದೇ ಕಲಾ ತಂಡಗಳು ಕಣ್ಮರೆಯಾಗಿವೆ. ಇದಕ್ಕೆ ಪೂರಕವೆಂಬಂತೆ ರಂಗಮಂದಿರ ಇಲ್ಲದಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಜನರಲ್ಲಿ ಕಲೆಯಲ್ಲಿ ಆಸಕ್ತಿ ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಈ ನಡುವೆ ಇದೀಗ ಇಂದಿನ ತಲೆಮಾರಿಗೆ ರಂಗ ಚಟುವಟಿಕೆಗಳನ್ನು ಪರಿಚಯಿಸುವ ಹಾಗು ರಂಗಭೂಮಿ ತನ್ನ ಹಳೆಯ ವೈಭವ ಮರಳಿ ಪಡೆಯುವ ಉದ್ದೇಶದಿಂದ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಅಭಿಯಾನ ಆರಂಭಿಸಲಾಗಿದೆ.    ...

ಶಿವಾಜಿ ಮಹಾರಾಜರ ಕುರಿತ ಪುಸ್ತಕಗಳನ್ನು ಮಕ್ಕಳಿಗೆ ನೀಡಿ : ಬಿ.ಕೆ ಮೋಹನ್

Image
ಭದ್ರಾವತಿಯಲ್ಲಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ೩೯೬ನೇ ಜಯಂತಿ ಕಾರ್ಯಕ್ರಮ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿ ಮಾತನಾಡಿದರು.      ಭದ್ರಾವತಿ : ಶಿವಾಜಿ ಮಹಾರಾಜರ ತತ್ವ, ಚಿಂತನೆಗಳು ಹಾಗೂ ಅವರ ಪ್ರತಿ ಹೆಜ್ಜೆಯನ್ನು ಮುಂದಿನ ಪೀಳಿಗೆಗೆ ನಾವು ತಿಳಿಸಬೇಕಿದೆ. ಶಿವಾಜಿ ಮಹಾರಾಜರ ಕುರಿತ ಪುಸ್ತಕಗಳನ್ನು ಮಕ್ಕಳಿಗೆ ನೀಡಬೇಕೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಕರೆ ನೀಡಿದರು.      ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ೩೯೬ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.      ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಮರಾಠ ಸಮಾಜದ ಪ್ರಮುಖರಾದ ರೈತ ಮುಖಂಡ ಯಶವಂತರಾವ್ ಘೋರ್ಪಡೆ, ಮೈದೊಳಲು ಹಾಲೇಶ್ ರಾವ್, ಎಚ್.ಆರ್ ಲೋಕೇಶ್ವರ್ ರಾವ್, ಪ್ರಕಾಶ್‌ರಾವ್, ಕವಿತಾ ರಾವ್, ಸಚಿನ್ ಸಿಂಧ್ಯಾ ಸೇರಿದಂತೆ ಇನ್ನಿತರರು ಮಾತನಾಡಿ, ಭಾರತ ದೇಶದ ಅತ್ಯಂತ ಪ್ರಮುಖ ರಾಜರಲ್ಲಿ ಶಿವಾಜಿ ಮಹಾರಾಜರು ಒಬ್ಬರಾಗಿದ್ದು ಧೈರ್ಯ, ಶೌರ್ಯಕ್ಕೆ ಅವರು ಮಾದರಿಯಾಗಿದ್ದಾರೆ. ...

ಕೆ.ಎಚ್ ನಗರದಲ್ಲಿ ವಿಬಿ-ಜಿ ರಾಮ್ ಜಿ ಕುರಿತು ಜಾಗೃತಿ ಸಭೆ

Image
ಭದ್ರಾವತಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಕೇಂದ್ರ ಸರ್ಕಾರದ ಯೋಜನೆ ವಿಬಿ-ಜಿ ರಾಮ್ ಜಿ ಕುರಿತು ಜಾಗೃತಿ ಸಭೆ ತಾಲೂಕಿನ ಹಿರಿಯೂರು ಮಹಾ ಶಕ್ತಿ ಕೇಂದ್ರದ ಅಂತರಗಂಗೆ ಮತ್ತು ಎರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದಲ್ಲಿ ಆಯೋಜಿಸಲಾಗಿತ್ತು.      ಭದ್ರಾವತಿ: ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಕೇಂದ್ರ ಸರ್ಕಾರದ ಯೋಜನೆ ವಿಬಿ-ಜಿ ರಾಮ್ ಜಿ ಕುರಿತು ಜಾಗೃತಿ ಸಭೆ ತಾಲೂಕಿನ ಹಿರಿಯೂರು ಮಹಾ ಶಕ್ತಿ ಕೇಂದ್ರದ ಅಂತರಗಂಗೆ ಮತ್ತು ಎರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದಲ್ಲಿ ಆಯೋಜಿಸಲಾಗಿತ್ತು.      ಸಭೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ ಹರಿಕೃಷ್ಣ  ಮಾತನಾಡಿ, ಗಾಂಧೀಜಿಯವರ ಗ್ರಾಮಾಭ್ಯುಯದ ಕನಸನ್ನು ನನಸು ಮಾಡಲು ಈ ಯೋಜನೆಯು ಸಹಕಾರಿಯಾಗಿದೆ.  ಈ ಮೊದಲು ಗ್ರಾಮದ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತಿಯಲ್ಲಿ  ನಿರ್ಧರಿಸಲಾಗುತ್ತಿತ್ತು.  ಆದರೆ ಈಗ ನಮ್ಮೂರಿನ ಕೆಲಸವನ್ನು ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ನಾವೇ ಗ್ರಾಮ ಪಂಚಾಯಿತಿಯಲ್ಲಿ ನಿರ್ಧರಿಸುವ ಅಧಿಕಾರವನ್ನು ನೀಡಲಾಗಿದೆ. ಆದರೆ ಈಗ ನಮ್ಮೂರಿನ ಕೆಲಸವನ್ನು ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ  ನಾವೇ ಗ್ರಾಮ ಪಂಚಾಯಿತಿಯಲ್ಲಿ ನಿರ್ಧರಿಸುವ ಅಧಿಕಾರವನ್ನು ನೀಡಿದೆ, ಮೊದಲು ೧೦೦ ದಿನ ಇದ್ದಂತಹ ಕೆಲಸ ಈಗ ೧೨೫ ದಿನಗಳಿಗೆ ವಿಸ್ತರಿಸಲಾ...

ಎ.ಎನ್ ನಾಗಭೂಷಣರಿಗೆ `ಸಾಧಕ ರತ್ನ' ಪ್ರಶಸ್ತಿ

Image
ಎ.ಎನ್ ನಾಗಭೂಷಣ       ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಅಧಿಕಾರಿ, ಸಮಾಜ ಸೇವಕ ಎ.ಎನ್ ನಾಗಭೂಷಣ(ಅಂಬಳೆ ನರಸಿಂಹಯ್ಯ ನಾಗಭೂಷಣ)ರಿಗೆ ಬೆಂಗಳೂರಿನ ಬಬ್ಬೂರು ಕಮ್ಮೆ ಸೇವಾ ಸಮಿತಿ ಇತ್ತೀಚೆಗೆ `ಸಾಧಕ ರತ್ನ' ಪ್ರಶಸ್ತಿ ನೀಡಿ ಗೌರವಿಸಿದೆ.       ನಾಗಭೂಷಣರವರು ೩೦ ಜನವರಿ .೧೯೪೪ರಲ್ಲಿ ಇಲ್ಲಿಯೇ ಜನಿಸಿದ್ದು, ಬಿ.ಎಸ್ಸಿ ಪದವಿಧರರಾಗಿದ್ದಾರೆ. ೧೯೬೯ ರಿಂದ ೨೦೦೧ರ ವಿಐಎಸ್‌ಎಲ್ ಕಾರ್ಖಾನೆಯ ಗುಣಮಟ್ಟ ನಿಯಂತ್ರಣ ವಿಭಾಗದಲ್ಲಿ ರಸಾಯನಶಾಸ್ತ್ರಜ್ಞ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.       ನಗರದಲ್ಲಿ ೧೯೯೧-೯೨ರ ಅವಧಿಯಲ್ಲಿ  ಬಟ್ಟೂರು ಕಮ್ಮೆ ಸೇವಾ ಸಂಘ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಳೇನಗರದ ಮಾಡಲ್ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದಲ್ಲಿ ಸುಮಾರು ೧೨ ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಮತ್ತು ೨೦ ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರತಿಷ್ಠಿತ ಬಡಾವಣೆಗಳನ್ನು ನಿರ್ಮಾಣ ಮಾಡಿದ್ದು, ರಾಜ್ಯದಲ್ಲಿ ಇಂದಿಗೂ ಪ್ರತಿಷ್ಠಿತ  ಗೃಹ ನಿರ್ಮಾಣ ಸಂಘಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಅಲ್ಲದೆ ೧೯೯೫-೯೬ರಲ್ಲಿ ಗಾಯತ್ರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ೧೯೯೩-೯೪ರಲ್ಲಿ ಶ್ರೀ ವಿದ್ಯಾಶಂಕರ ಟ್ರಸ್ಟ್ ಪ್ರಾರಂಭಿಸಿ ಅದರ...

ಫೆ.೧೯ರಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

Image
     ಭದ್ರಾವತಿ : ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಫೆ.೧೯ರ ಗುರುವಾರ ಬೆಳಿಗ್ಗೆ ೧೦.೩೦ಕ್ಕೆ ಶ್ರೀ ಛತ್ರಪತಿ ಶಿವಾಜಿ ಜಯಂತಿ ಹಮ್ಮಿಕೊಳ್ಳಲಾಗಿದೆ.       ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಉದ್ಘಾಟಿಸಲಿದ್ದಾರೆ.       ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಈ ವ್ಯಾಪ್ತಿಯ ವಿಧಾನ ಪರಿಷತ್ ಸದಸ್ಯರು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಮರಾಠ ಸಮಾಜದ ಅಧ್ಯಕ್ಷ ಎಚ್.ಎಲ್ ರಂಗನಾಥರಾವ್ ಚೌವ್ಹಾಣ್, ತಹಸೀಲ್ದಾರ್ ಪರುಸಪ್ಪ ಕುರುಬರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.