ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಅಭಿಯಾನಕ್ಕೆ ಚಾಲನೆ
ಶ್ರೀ ಸತ್ಯಸಾಯಿ ಜ್ಞಾನಪೀಠ ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿ ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದು, ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು. ಭದ್ರಾವತಿ: ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಸಂಕಲ್ಪ ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದು, ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶ್ರೀ ಸತ್ಯಸಾಯಿ ಜ್ಞಾನಪೀಠ(ಸಿ.ಬಿ.ಎಸ್.ಇ) ಶಾಲೆಯ ಸುಮಾರು ೨೨೦ ವಿದ್ಯಾರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು. ಕಾರ್ಯಕ್ರಮ ಆರಂಭಕ್ಕೂ ಮೊದಲು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಸಿ. ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಮಾದಕವಸ್ತು ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಪ್ರೌಢಶಾಲೆ ಹಾಗು ಕಾಲೇಜು ಅಧ್ಯಯನದ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟವಾದ ಗುರಿಗಳನ್ನು ಹಾಕಿಕೊಂಡು ಆ ನಿಟ್ಟಿನಲ್ಲಿ ಪ್ರಯತ್ನಗಳನ್...