ಗುಜರಿ ವಾಹನಗಳಿಗೆ ಬೆಂಕಿ : ಲಕ್ಷಾಂತರ ರು. ನಷ್ಟ
ಭದ್ರಾವತಿ ನಗರದ ತರೀಕೆರೆ ರಸ್ತೆ ಸಾದತ್ ದರ್ಗಾ ಸಮೀಪ ಗುಜರಿಗೆ ಹಾಕಿದ್ದ ಹಳೆಯ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವು ಹಳೆಯ ವಾಹನಗಳು ಸುಟ್ಟು ಕರಕಲಾಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ. ಭದ್ರಾವತಿ: ನಗರದ ತರೀಕೆರೆ ರಸ್ತೆ ಸಾದತ್ ದರ್ಗಾ ಸಮೀಪ ಗುಜರಿಗೆ ಹಾಕಿದ್ದ ಹಳೆಯ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವು ಹಳೆಯ ವಾಹನಗಳು ಸುಟ್ಟು ಕರಕಲಾಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ. ಮುಕ್ರಂ ಖಾನ್ ಎಂಬುವವರು ತರೀಕೆರೆ ರಸ್ತೆಯಲ್ಲಿ ಶೆಡ್ ಕಟ್ಟಿಕೊಂಡು ಗುಜರಿ ವ್ಯಾಪಾರ ನಡೆಸುತ್ತಿದ್ದಾರೆ. ಶೆಡ್ ಪಕ್ಕದಲ್ಲಿನ ಖಾಲಿ ಜಾಗದಲ್ಲಿ ಕೂಡ ಇವರು ಹಲವು ಹಳೆಯ ವಾಹನಗಳನ್ನು ನಿಲ್ಲಿಸುತ್ತಿದ್ದರು. ಗುರುವಾರ ಮಧಾಹ್ನ ೧೨ ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ವಾಹನ ನಿಲ್ಲಿಸಿದ್ದ ಖಾಲಿ ಜಾಗವನ್ನು ಆವರಿಸಿಕೊಂಡಿತು. ಬೆಂಕಿಯ ಜ್ವಾಲೆ ಸುತ್ತಮುತ್ತಲಿನ ಪ್ರದೇಶಕ್ಕೆ ಹಬ್ಬುವ ಆತಂಕ ಮನೆಮಾಡಿತ್ತು. ಘಟನೆಯಲ್ಲಿ ಗುಜರಿಗೆ ಹಾಕಲಾಗಿದ್ದ ೨ ಕಾರ್, ೧ ಆಟೋ ರಿಕ್ಷಾ ಹಾಗು ೨೦ ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ. ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ...