ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ಕಲಿಸುವುದು ಪೋಷಕರ ಕರ್ತವ್ಯ : ನಾಗರತ್ನ ವಾಗೀಶ್ ಕೋಠಿ
ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದಿಂದ ಸರ್ವ ಸದಸ್ಯರ ಸಭೆ ಮತ್ತು ಎಸ್ಎಸ್ಎಲ್ಸಿ ಹಾಗು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭದ್ರಾವತಿ: ಮಕ್ಕಳನ್ನು ವಿದ್ಯಾವಂತರನ್ನಾಗಿಸಿದರೆ ಸಾಲದು ಉತ್ತಮ ಸಂಸ್ಕಾರವಂತರನ್ನಾಗಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ತಮ್ಮ ತಮ್ಮ ಮನೆಗಳಲ್ಲಿಯೇ ಸಂಸ್ಕಾರ ಕಲಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ನಾಗರತ್ನ ವಾಗೀಶ್ ಕೋಠಿ ಕರೆ ನೀಡಿದರು. ಅವರು ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಸರ್ವ ಸದಸ್ಯರ ಸಭೆ ಮತ್ತು ಎಸ್ಎಸ್ಎಲ್ಸಿ ಹಾಗು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಮಾಜದ ಗೌರವಾಧ್ಯಕ್ಷೆ ಆರ್.ಎಸ್ ಶೋಭಾ, ಉಪಾಧ್ಯಕ್ಷೆ ಯಶೋಧ ವೀರಭದ್ರಪ್ಪ, ನಿರ್ದೇಶಕಿ ಮಂಜುಳಾ ಆನಂದ ಮೂರ್ತಿ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ಕುಸುಮ ತೀರ್ಥಯ್ಯ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಪರಿಮಳ ರ...