ಜೂ.೧೩ರಂದು ಸುಮಾರು ೨೫ ಸಾವಿರ ಉಚಿತ ಬರವಣಿಗೆ ಪುಸ್ತಕ ವಿತರಣೆ
ಕಳೆದ ೯ ವರ್ಷಗಳಿಂದ ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿರುವ ಎ. ಧರ್ಮೇಂದ್ರ ಭದ್ರಾವತಿ : ಕಳೆದ ೯ ವರ್ಷಗಳಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸುವ ಮೂಲಕ ಸಮಾಜ ಸೇವಕ ಎ. ಧಮೇಂದ್ರರವರು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಈ ಬಾರಿ ಸಹ ಜೂ.೧೩ರಂದು ಸುಮಾರು ೨೫ ಸಾವಿರ ಬರವಣಿಗೆ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ. ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಮೂಲಕ ಧಮೇಂದ್ರರವರು ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ೯ ವರ್ಷಗಳ ಹಿಂದೆ ಸರ್ಕಾರಿ ಶಾಲೆಯ ೫೦೦ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯ ಆರಂಭಿಸಿದ್ದು, ಇದೀಗ ೫೦೦೦ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ. ಕಳೆದ ವರ್ಷ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೩, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೨ ಹಾಗು ನಾಗತಿಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೧ ಸರ್ಕಾರಿ ಶಾಲೆಗಳ ಮಕ್ಕಳಿಗೆ ಒಟ್ಟು ಸುಮಾರು ೧೮ ಸಾವಿರ ಪುಸ್ತಕಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆ ಮಕ್ಕಳ ಶಿಕ್ಷಣಕ್ಕೆ ನೆರವಾಗಿದ್ದರು. ಈ ಬಾರಿ ಕುಮಾರಿ ನಾರಾಯಣಪುರ, ತಳ್ಳಿಕಟ್ಟೆ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ತಾಂಡ, ಆಟಿಕೆರೆ ಕ್ಯಾಂಪ್, ಜಯನಗರ, ಅರಳಿಹಳ...