ಪ್ರಧಾನಿ ನರೇಂದ್ರ ಮೋದಿಯಿಂದ ಪ್ರತಿ ದಿನ ಹೊಸ ಹೊಸ ದಾಖಲೆ
ವಿಶ್ವದ ಗಮನ ಸೆಳೆಯುತ್ತಿರುವ ನಾಯಕ : ಡಿ.ಎಸ್ ಅರುಣ್ ಬಿಜೆಪಿ ನಗರ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ೧೨ ವರ್ಷಗಳ ಯಶಸ್ವಿ ಆಡಳಿತ ಪೂರೈಸಿದ ಹಿನ್ನೆಲೆ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪ್ರಬುದ್ಧರ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭದ್ರಾವತಿ : ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ದಿನ ಹೊಸ ಹೊಸ ದಾಖಲೆಗಳ ಮೂಲಕ ವಿಶ್ವದ ಗಮನ ಸೆಳೆಯುತ್ತಿದ್ದು, ದೇಶದ ೧೨ ವರ್ಷಗಳ ಸುಧೀರ್ಘ ಆಡಳಿತದಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಲ್ಲಿ ಕ್ರಾಂತಿಯನ್ನುಂಟುಮಾಡಿದ್ದಾರೆ. ಈ ಮೂಲಕ ದೇಶದ ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದು, ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆಂದು ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಪ್ರಶಂಸೆ ವ್ಯಕ್ತಪಡಿಸಿದರು. ಅವರು ಬಿಜೆಪಿ ನಗರ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ೧೨ ವರ್ಷಗಳ ಯಶಸ್ವಿ ಆಡಳಿತ ಪೂರೈಸಿದ ಹಿನ್ನೆಲೆ ಹಳೇನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧರ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ, ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಮೂರು ಅವಧಿ ಪೂರ್ಣಗೊಳಿಸಿ, ಇದೀಗ ದೇಶದ ಪ್ರಧಾನಿಯಾಗಿ ೧೨ ವರ್ಷಗಳನ್ನು ಯಶಸ್ವಿಯಾಗಿ ಪೂರ...